ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಮೊದಲ ರೋಬೋಟ್ ರೆಸ್ಟೋರೆಂಟ್ ಚೆನ್ನೈನಲ್ಲಿ ಶುರುವಾಗಿದೆ. ಇಲ್ಲಿ ವೇಟರ್ ಬದಲು ರೋಬೋಟ್ ಆಹಾರ ಒದಗಿಸುವ ಕೆಲಸ ಮಾಡುತ್ತದೆ. ಈ ರೆಸ್ಟೋರೆಂಟ್ ಚೆನ್ನೈನ ಮಹಾಬಲಿಪುರಂ ರಸ್ತೆಯಲ್ಲಿದೆ. ಥಾಯ್ ಹಾಗೂ ಚೈನೀಸ್ ಆಹಾರ ಗ್ರಾಹಕರಿಗೆ ಸಿಗಲಿದೆ.

ನೀವ್ ಅಲ್ಲಿಗೆ ಹೋದ್ರೆ ಅಲ್ಲಿನ ಸಿಬ್ಬಂದಿ ಬಂದು ನಿಮಗೆ ಫುಡ್ ಸಪ್ಲೈ ಮಾಡಲ್ಲ. ಬದಲಿಗೆ ನಿಮಗೆ ಬೇಕಾದ ವೆರೈಟಿ ವೆರೈಟಿ ಫುಡ್ ಸಪ್ಲೈ ಮಾಡೋದು ರೋಬೋಗಳು.

ಇದು ದೇಶದ ಮೊದಲ ರೋಬೋಟ್ ರೆಸ್ಟೋರೆಂಟ್ ಎನ್ನಲಾಗ್ತಿದೆ. ವೆಂಕಟೇಶ್ ರಾಜೇಂದ್ರನ್ ಹಾಗೂ ಕಾರ್ತಿಕ್ ಕನ್ನನ್ ಸೇರಿ ಈ ರೆಸ್ಟೋರೆಂಟ್ ತೆರೆದಿದ್ದಾರೆ. ಪ್ರತಿ ಟೇಬಲ್ ಗೂ ಟ್ಯಾಬ್ ಇದೆ. ಈ ಟ್ಯಾಬ್ ಮೂಲಕ ಗ್ರಾಹಕರು ಆಹಾರವನ್ನು ಆರ್ಡರ್ ಮಾಡಬೇಕು. ಅದು ನೇರವಾಗಿ ಕಿಚನ್ ತಲುಪುತ್ತದೆ.

ತಕ್ಷಣ ನೀಮಗೆ ಬೇಕಾದ ಫುಡ್ ನಿಮ್ಮ ಟೇಬಲ್ ಬಳಿ ಬರುತ್ತೆ.ವಿದೇಶಗಳಲ್ಲಿ ಮನುಷ್ಯರ ತರ ರೋಬೋಗಳು ಹೋಟೆಲ್ನಲ್ಲಿ ಕೆಲಸ ಮಾಡೋದನ್ನು ಕೇಳಿದ್ದೀವಿ..ಆದ್ರೆ ನಮ್ಮ ಚೆನ್ನೈಗೂ ಇಂತಹ ರೋಬೋಟ್ಗಳು ಎಂಟ್ರಿಕೊಟ್ಟಿವೆ. ಸೆನ್ಸಾರ್ ಮೂಲಕ ಕೆಲಸ ಮಾಡುವ ಈ ರೋಬೋಗಳು ಪ್ರತೀ ಗ್ರಾಹಕರ ಬಳಿ ಹೋಗಿ ಫುಡ್ ಸಪ್ಲೈ ಮಾಡುತ್ತವೆ.. ಹಸಿದಿದ್ದ ಗ್ರಾಹಕರಿಗೆ ಆತ್ಮೀಯವಾಗಿ ಆಹಾರ ನೀಡುತ್ತವೆ.

ಆಹಾರ ಸಿದ್ಧವಾದ ಮೇಲೆ ರೋಬೋಟ್ ಗ್ರಾಹಕರಿಗೆ ಆಹಾರವನ್ನು ಸರ್ವ್ ಮಾಡುತ್ತದೆ. ಇಲ್ಲಿರುವ ಎಲ್ಲ ರೋಬೋಟ್ ಗಳು ಬ್ಯಾಟರಿ ಮೂಲಕ ಕೆಲಸ ಮಾಡುತ್ತವೆ. ಯಾರಾದ್ರೂ ರೋಬೋಟ್ ದಾರಿಗೆ ಅಡ್ಡ ಬಂದ್ರೆ ಅದು ಅಲ್ಲೇ ನಿಲ್ಲುತ್ತದೆ. ದೇಶದಾದ್ಯಂತ ಈ ರೆಸ್ಟೋರೆಂಟ್ ಬಗ್ಗೆ ಚರ್ಚೆಯಾಗ್ತಿದೆ. ಹಾಗಾಗಿ ಮಾಲೀಕರು ಇನ್ನೂ ಅನೇಕ ಕಡೆ ಶಾಖೆ ತೆರೆಯುವ ತಯಾರಿಯಲ್ಲಿದ್ದಾರೆ.

ವಿಡಿಯೋ ನೋಡಲು ಕ್ಲಿಕ್ ಮಾಡಿ:-https://youtu.be/7_zOtVrMejg
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಳೆ ಹಣ್ಣು ಯಾರು ತಾನೇ ತಿನ್ನಲ್ಲ ಹೇಳಿ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ವರೆಗೂ ಬಾಳೆ ಹಣ್ಣನ್ನ ತಿನ್ನುತ್ತಾರೆ, ಬಾಳೆ ಹಣ್ಣಿನಲ್ಲಿ ಸುಕ್ರೋಸ್, ಫ್ರಕ್ಟೋಸ್ ಮತ್ತು ಗ್ಲೋಕೋಸ್ ಎಂಬ ಮೂರು ರೀತಿಯ ಸಕ್ಕರೆ ಅಂಶಗಳನ್ನು ಒಳಗೊಂಡ ಪೈಬರ್ ಇವೆ, ಬಾಳೆಹಣ್ಣು ತ್ವರಿತ ನಿರಂತರ ಮತ್ತು ಗಮನಾರ್ಹ ಶಕ್ತಿ ನೀಡುತ್ತದೆ. ಎರಡು ಬಾಳೆಹಣ್ಣು ತಿಂದರೆ 90 ನಿಮಿಷ ಶ್ರಮದಾಯಕ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಅಧ್ಯನದಿಂದ ತಿಳಿದು ಬಂದಿದೆ, ವಿಶ್ವದ ಪ್ರಮುಖ ಕ್ರೀಡಾ ಪಟುಗಳು ಸೇವಿಸುವ ಹಣ್ಣುಗಳ ಪೈಕಿ…
ಮಹಾಭಾರತದ ಒಂದು ಯುದ್ದದ ಸನ್ನಿವೇಶದಲ್ಲಿ ಅರ್ಜುನನು, ನಾನು ಯುದ್ಧ ಮಾಡೋದಿಲ್ಲ ಎಂದಾಗ ಭಗವಾನ್ ಶ್ರೀ ಕೃಷ್ಣನು, ಅರ್ಜುನನಿಗೆ ಭಗವದ್ಗೀತೆಯನ್ನು ಭೋದಿಸುತ್ತಾನೆ.
ಪಣಜಿ, ದೇಶದ ಜನರ ಆರೋಗ್ಯ ರಕ್ಷಣೆಗೆ ಒತ್ತು ನೀಡಿರುವ ಜಿಎಸ್ಟಿ ಮಂಡಳಿ ಕೆಫೀನ್ ಆಧಾರಿತ ಪೇಯಗಳ ಮೇಲಿನ ತೆರಿಗೆಯನ್ನು ಹೆಚ್ಚಿಸಿದೆ. ಇದೇ ವೇಳೆ ಪ್ರವಾಸೋದ್ಯಮಕ್ಕೆ ಒತ್ತು ಕೊಡಲು ಹೋಟೆಲ್ ಕೋಣೆಗಳ ಬಾಡಿಗೆ ಮೇಲಿನ ತೆರಿಗೆಯನ್ನು ಇಳಿಸಿದೆ. ಜಿಎಸ್ಟಿ ಮಂಡಳಿ ಸಭೆಯ ಬಳಿಕ ಶುಕ್ರವಾರ ರಾತ್ರಿ ಸುದ್ದಿಗಾರರ ಜತೆ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಒಂದು ರಾತ್ರಿ ತಂಗಲು 1 ಸಾವಿರ ರೂ.ವರೆಗಿನ ಹೋಟೆಲ್ ಕೋಣೆಗಳ ಬಾಡಿಗೆ ಮೇಲೆ ವಿಧಿಸಲಾಗುತ್ತಿದ್ದ ತೆರಿಗೆಯನ್ನು ಸಂಪೂರ್ಣ ರದ್ದುಗೊಳಿಸಲಾಗಿದೆ. ಒಂದು…
ಅಸ್ಸಾಂ ಸರ್ಕಾರ ಶನಿವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಪೌರತ್ವ ನೋಂದಣಿಯ (ಎನ್ಆರ್ಸಿ) ಅಂತಿಮ ಪಟ್ಟಿಯ ಪ್ರಕಾರ 19.06 ಲಕ್ಷ ಜನರು ಭಾರತೀಯ ಪೌರರಲ್ಲ ಎಂದು ಹೇಳಲಾಗಿದೆ. ಹಾಗೆಂದು ತಕ್ಷಣವೇ ಇವರನ್ನು ಬಂಧಿಸದಿರಲು ಹಾಗೂ ಅಕ್ರಮ ನಿವಾಸಿಗಳು ಎಂದು ಘೋಷಿಸದಿರಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಇದೇ ವೇಳೆ ತಾವು ಭಾರತೀಯ ಪೌರರು ಎಂಬುದನ್ನು ಸಾಬೀತುಪಡಿಸಲು ತಮ್ಮ ಬಳಿ ದಾಖಲೆಗಳಿದ್ದರೆ, ಅವುಗಳನ್ನು ಒದಗಿಸಿ ತಮ್ಮ ಪೌರತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಲು ಇವರೆಲ್ಲರಿಗೂ ಅವಕಾಶ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನ ನೀಡಿದೆ….
ಒಂದು ಕಾಲಕ್ಕೆ ಜನಮನ ಗೆದ್ದ ನಟ, ಯಾವುದೇ ಗಾಡ್ ಫಾದರ್ ಇಲ್ಲದೆ ಕನ್ನಡ ಚಿತ್ರರಂಗದಲ್ಲಿ ಸ್ಟಂಟ್ ಮಾಸ್ಟರ್ ಆಗಿ, ಖಳನಟನಾಗಿ, ನಾಯಕನಾಗಿ, ಛಾಯಾಗ್ರಾಹಕನಾಗಿ, ನಿರ್ಮಾಪಕ, ನಿರ್ದೇಶಕನಾಗುವ ಮೂಲಕ ಆಲ್ ರೌಂಡರ್ ಆಗಿದ್ದವರು. ಫ್ರೇಜರ್ ಟೌನ್ ನ ಆ್ಯಂಥೋನಿ ಎಂಬ ಕಟ್ಟುಮಸ್ತಾದ ಯುವಕ ಕನ್ನಡ ಚಿತ್ರರಂಗದಲ್ಲಿ ಟೈಗರ್ ಪ್ರಭಾಕರ್ ಆಗಿದ್ದರ ಹಿಂದೆ ಅಗಾದ ನೋವು, ನಲಿವು, ಸೋಲು, ಗೆಲುವು ಎಲ್ಲವೂ ಇದೆ. ಪ್ರಭಾಕರ್ ಹುಟ್ಟು ಫೈಟರ್ ಆಗಿಯೇ ಬೆಳೆದವರು..ಸ್ಟಂಟ್ ಮ್ಯಾನ್ ಆಗಿದ್ದ ಪ್ರಭಾಕರ್ ಹೀರೋ ಆಗಲು ದೀರ್ಘಕಾಲದ ಶ್ರಮ…
ಚೀನಾ ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್ಫೋನ್ನಲ್ಲಿ ಇರುವ ಚೀನಾ ಮೂಲದ ಆ್ಯಪ್ಗಳನ್ನು…