ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ಪೇಮೆಂಟ್ ಮೊಬೈಲ್ ಆ್ಯಪ್ ಆಗಿರುವ ಭೀಮ್ ಅನ್ನು ಪ್ರಚಾರ ಪಡಿಸುವ ಸಲುವಾಗಿ ಕೇಂದ್ರ ಸರಕಾರ ಏ.14ರಿಂದ ನಾನಾ ಬಗೆಯ ಕ್ಯಾಶ್ ಬ್ಯಾಕ್ ಮತ್ತು ಇನ್ಸೆಂಟಿವ್ಗಳನ್ನು ನೀಡಲಿದೆ.
ಭೀಮ್ ಆ್ಯಪ್’ನ್ನು ಪ್ರಧಾನಿ ನರೇಂದ್ರ ಮೋದಿಯವರು 30 ಡಿಸೆಂಬರ್ 2016ರಂದು ಬಿಡುಗಡೆ ಮಾಡಿದ್ದರು. ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್) ಮೂಲಕ ಹಣ ಪಾವತಿ ಮಾಡಲು ಬಳಸುವ ಆ್ಯಪ್ ಇದಾಗಿದೆ.

ಈಗಾಗಲೇ ಒಂದು ವರ್ಷ ಪೂರೈಸಿರುವ ಈ ಭೀಮ್ ಆ್ಯಪ್,ಮೊನ್ನೆ ತಾನೇ ನಡೆದ ಅಂಬೇಡ್ಕರ್ ಜಯಂತಿಯಂದು ಅಪ್ಡೇಟ್ ಆಗಿದೆ.ಈಗಾಗಿ ಕೇಂದ್ರ ಸರ್ಕಾರ ಏಪ್ರಿಲ್ 14 2018 ರಿಂದ ಬಂಪರ್ ಭೀಮ್ ಆ್ಯಪ್ ನೀಡುತ್ತಿದೆ.

ಈಗ ಭೀಮ್ ಆ್ಯಪ್ ಬಳಕೆದಾರರು ಪ್ರತಿ ತಿಂಗಳು ಸುಮಾರು 750 ರೂಪಾಯಿ ಕ್ಯಾಶ್ಬ್ಯಾಕ್ ಪಡೆಯಬಹುದಾಗಿದೆ.ಹೆಚ್ಚಿನ ಬಳಕೆದಾರರನ್ನು ಸೆಳೆಯಲು ಕೇಂದ್ರ ಸರ್ಕಾರ ಈ ಕ್ಯಾಶ್ಬ್ಯಾಕ್ ಆಫರ್ ನೀಡುತ್ತಿದೆ.ಈಗಾಗಲೇ ಪೇಟಿಎಮ್, ಗೂಗಲ್ ಟೆಜ್,ಮತ್ತು ಫೋನ್ ಪೇ ಹಾಗೂ ಇನ್ನೂ ಹಲವಾರು ಆ್ಯಪ್’ಗಳು ಕ್ಯಾಶ್ಬ್ಯಾಕ್ ಆಫರ್’ಗಳನ್ನೂ ತನ್ನ ಬಳಕೆದಾರರಿಗೆ ನೀಡಿವೆ.
ಮೊದಲನೆಯದಾಗಿ ಹೊಸ ಬಳಕೆದಾರು ತಮ್ಮ ಭೀಮ್ ಆ್ಯಪ್ ಮೂಲಕ ಬೇರೆಯವರ ಭೀಮ್ ಆ್ಯಪ್’ಗೆ 1 ರೂ ಕಳುಹಿಸಿದರೂ ಸಹ ಅವರು 51ರೂ ಕ್ಯಾಶ್ಬ್ಯಾಕ್ ಆಫರ್ ಪಡೆಯುತ್ತಾರೆ.

ಅನಂತರ ಭೀಮ್ ಆ್ಯಪ್ ಹೊಸ ಗ್ರಾಹಕರಾಗಲಿ,ಈಗಾಗಲೇ ಬಳಸುತ್ತಿರುವ ಹಳೇ ಗ್ರಾಹಕರೇ ಆಗಲಿ 100ರುಪಾಯಿಗಿಂತ ಹೆಚ್ಚು ಮೊತ್ತವನ್ನು ಯಾವುದೇ ಆನ್ಲೈನ್ ಆ್ಯಪ್ ಹಾಗಿರಲಿ, ಬ್ಯಾಂಕ್ ಖಾತೆಗೆ ಹಾಗಿರಲಿ ಅಥವಾ ಮೊಬೈಲ್ ನಂಬರ್’ಗೆ ಹಾಗಿರಲಿ ಕಳುಹಿಸಿದ್ದಲ್ಲಿ ಅವರು 25ರೂ ಗಳ ಕ್ಯಾಶ್ಬ್ಯಾಕ್ ಆಫರ್ ಪಡೆಯಲಿದ್ದಾರೆ.
ಇದರ ಮಿತಿಯು ತಿಂಗಳಿಗೆ 500ರೂಗಳ ಮಿತಿಯಿದೆ.ಅಂದ್ರೆ ನೀವೂ 30 ದಿನಗಳಲ್ಲಿ 500 ರೂ ಗಳವರೆಗೆ ಎಷ್ಟು ಕಳುಹಿಸಿದರೂ ಸಹ ನಿಮಗೆ ಕ್ಯಾಶ್ಬ್ಯಾಕ್ ಆಫರ್ ಸಿಗಲಿದೆ.
ಭೀಮ್ ಆ್ಯಪ್ ಬಳಕೆದಾರು ಒಂದು ತಿಂಗಳಿಗಿಂತ ಹೆಚ್ಚು, ಅಂದ್ರೆ ಅನಿಯಮಿತವಾಗಿ ಭೀಮ್ ಆ್ಯಪ್’ನಲ್ಲಿಯೇ ಹಣ ಕಳುಹಿಸುವುದನ್ನು ಮಾಡುತ್ತಿದ್ದರೆ ಅಂತಹ ಬಳಕೆದಾರರು ಹತ್ತು ಹಲವಾರು ಕ್ಯಾಶ್ಬ್ಯಾಕ್ ಆಫರ್’ಗಳನ್ನೂ ಪಡೆಯಲಿದ್ದಾರೆ.

ಉದಾಹರಣೆಗೆ ಭೀಮ್ ಆ್ಯಪ್ ಬಳಕೆದಾರು 25 ರಿಂದ 50 ಟ್ರಾನ್ಸಾಕ್ಷನ್ಸ್ ಗಳನ್ನು ಮಾಡಿದ್ರೆ ಅವರು 100ರೂ ಗಳ ಕ್ಯಾಶ್ಬ್ಯಾಕ್ ಪಡೆಯುತ್ತಾರೆ.ಬಳಕೆದಾರು ಒಂದೇ ತಿಂಗಳಿನಲ್ಲಿ 50ಕ್ಕಿಂತ ಹೆಚ್ಚು ಟ್ರಾನ್ಸಾಕ್ಷನ್ಸ್ ಮಾಡಿದ್ರೆ ಅವರು 200ರೂ ಗಳ ಕ್ಯಾಶ್ಬ್ಯಾಕ್ ಪಡೆಯುತ್ತಾರೆ.ಹಾಗೂ 50 ರಿಂದ 100ರ ಒಳಗೆ ಟ್ರಾನ್ಸಾಕ್ಷನ್ಸ್ ಮಾಡಿದ್ರೆ ಅವರ ಬ್ಯಾಂಕ್ ಖಾತೆಗೆ 250ರೂ ಕ್ಯಾಶ್ಬ್ಯಾಕ್ ಕ್ರೆಡಿಟ್ ಆಗುತ್ತೆ.


ವ್ಯಾಪಾರಿಗಳಿಗೆ ಒಂದು ತಿಂಗಳಿಗೆ ಸುಮಾರು 1 ಸಾವಿರ ರೂಪಾಯಿಯವರೆಗೆ ಕ್ಯಾಶ್ಬ್ಯಾಕ್ ಸಿಗಲಿದೆ. ಹೊಸ ಬಳಕೆದಾರರಿಗೆ ಕೂಡ ಮೊದಲ ವಹಿವಾಟಿನಲ್ಲಿಯೇ 51 ರೂಪಾಯಿ ಕ್ಯಾಶ್ಬ್ಯಾಕ್ ಸಿಗಲಿದೆ. ನೀವು ಎಷ್ಟು ಮೊತ್ತದ ವಹಿವಾಟು ನಡೆಸಿದ್ದೀರಿ ಎಂಬುದು ಇದ್ರಲ್ಲಿ ಮಹತ್ವ ಪಡೆಯುವುದಿಲ್ಲ.

ಸದ್ಯ ಅಂಡ್ರಾಯ್ಡ್ನಲ್ಲಿ ಮಾತ್ರ ಈ ಆ್ಯಪ್ ಲಭ್ಯವಿದೆ. ಈ ಆ್ಯಪ್ ಮೂಲಕ ಹಣ ವರ್ಗಾವಣೆ ಮಾಡುವಾಗ ಯಾವುದೇ ರೀತಿಯ ಪ್ರೊಸೆಸಿಂಗ್ ಶುಲ್ಕ ಇರುವುದಿಲ್ಲ.
ಎಸ್ಬಿಐ, ಹೆಚ್ಡಿಎಫ್ಸಿ, ಐಸಿಐಸಿಐ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಸೌತ್ ಇಂಡಿಯಾ ಬ್ಯಾಂಕ್, ಕರ್ನಾಟಕ ಬ್ಯಾಂಕ್, ಸ್ಟಾಂಡರ್ಡ್ ಚಾರ್ಟೆಡ್ ಬ್ಯಾಂಕ್ ಮೊದಲಾದ 30 ಬ್ಯಾಂಕ್ಗಳ ಗ್ರಾಹಕರು ಈ ಆ್ಯಪ್ ಮೂಲಕ ವಹಿವಾಟು ನಡೆಸಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆ ಖರೀದಿದಾರರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೊಸ ಶುಭ ಸಮಾಚಾರವೊಂದನ್ನು ನೀಡಿದ್ದಾರೆ. ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ಯಾಬಿನೆಟ್ ನಿರ್ಧಾರಗಳ ಬಗ್ಗೆ ಮಾದ್ಯಮಗಳಿಗೆ ವಿವರಿಸಿದ ಸೀತಾರಾಮನ್ “ಪ್ರಸ್ತುತ 1600 ಕ್ಕೂ ಹೆಚ್ಚು ವಸತಿಯೋಜನೆಗಳು ಸ್ಥಗಿತಗೊಂಡಿವೆ. ಹಾಗಾಗಿ ಸರ್ಕಾರ , ಕೈಗೆಟುಕುವ ಮತ್ತು ಮಧ್ಯಮ ಪ್ರಮಾಣದ ಪ್ರಸ್ತುತ ಸ್ಥಗಿತಗೊಂಡ ವಸತಿಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆಯ ಸಾಲ, ಹಣಕಾಸು ನೆರವು ನೀಡಲು ‘ವಿಶೇಷ ವಿಭಾಗ’ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದರು. ದೇಶದಲ್ಲಿಸ್ಥ ಗಿತವಾಗಿರುವ ವಸತಿ ಯೋಜನೆಗಳನ್ನು ಪುನಾರಂಭಿಸಿ…
ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ. ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರೋಜಾ ಕಾರ್ಯಕ್ಕೆ ಅವರ ಪತಿಯು ಕೂಡ ಬೆಂಬಲವಾಗಿ ನಿಂತಿದ್ದಾರೆ. ನಿತ್ಯ 500 ಲೀಟರ್ ಹಾಲು ಉತ್ಪಾದಿಸಿ ಶಿಮುಲ್ ಡೈರಿಗೆ ಸರಬರಾಜು ಮಾಡುವ ಮೂಲಕ ಅಧಿಕ…
ಈಗಿನ ಆಧುನಿಕ ಕಾಲದಲ್ಲಿ ಜಾನರು ವಾಸಿಸುತ್ತಿದ್ದಂತೆ ಕಾಡುಗಳು ಮರೆಯಾಗುತ್ತಿವೆ ಕಾರಣ ನಮಗೆಲ್ಲರಿಗೂ ತಿಳಿದಿದೆ, ನಗರಪ್ರದೇಶಗಳಲ್ಲಿ ಕೈ ತೋಟಕ್ಕೂ ಜಾಗಬಿಡದೆ ಕಟ್ಟಡಗಳು ಎದ್ದೇಳುತ್ತಿವೆ. ಇದರ ಪರಿಣಾಮ ಶುದ್ಧಗಾಳಿಗೂ ಪರದಾಡಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ. ದೆಹಲಿ ನಗರದಲ್ಲಿ ವಾಯುಮಾಲಿನ್ಯ ಉಂಟು ಮಾಡಿರುವ ದುಷ್ಪರಿಣಾಮ ಹೇಗಿದೆ ಎಂಬುವುದು ನಿಮಗೆ ಗೊತ್ತಿದೆ. ಇನ್ನು ನಮ್ಮ ಬೆಂಗಳೂರು ನಗರದಲ್ಲಿ ಕೂಡ ವರ್ಷದಿಂದ ವರ್ಷಕ್ಕೆಗಿಡಗಳು ಕಡಿಮೆಯಾಗಿ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ.ಹೊರಗಡೆ ಹೋದರೆ ದೂಳು, ಹೊಗೆ ಹಾಗಂತ ಮನೆಯೊಳಗೆ ಶುದ್ಧ ಗಾಳಿಯೇನು ದೊರಕುತ್ತಿಲ್ಲ.ಮನೆಯ ಒಳಗಡೆಯು ಕಲುಷಿತ ಗಾಳಿಯೆ ಓಡಾಡುತ್ತಿರುತ್ತದೆ….
ಓಂ ಕಾಳು ಅಡುಗೆಗೆ ರುಚಿ ನೀಡುವುದಲ್ಲದೆ ತನ್ನಲ್ಲಿ ಹಲವಾರು ಔಷಧಿ ಗುಣಗಳನ್ನು ಹೊಂದಿದೆ. ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ ಹೋಟೆಲ್ ಗಳಲ್ಲಿ ಹಾಗೇನೇ ರಸ್ತೆ ಬದಿಗಳಲ್ಲಿ ಸಿಗುವಂತಹ ಮತ್ತೆ ಬೇಕರಿ ತಿಂಡಿ ತಿನಿಸುಗಳನ್ನು ಹೆಚ್ಚಾಗಿ ತಿನ್ನುತ್ತಾರೆ ಆದರೆ ಇವುಗಳು ಅವರ ಬಾಯಿಗೆ ರುಚಿಯನ್ನು ನೀಡುತ್ತವೆ ಆದರೆ ಅದರಿಂದ ಆರೋಗ್ಯ ಖಂಡಿತ ಹಾಳಾಗುತ್ತದೆ ಏಕೆಂದರೆ ಹೋಟೆಲ್ ಗಳಲ್ಲಿ ಹೆಚ್ಚಾಗಿ ಹೊರಗಿನ ತಿನಿಸುಗಳಲ್ಲಿ ಸೋಡ ಬಳಸುತ್ತಾರೆ. ಏಕೆಂದರೆ ಈ…
ಎರಡು ದಿನಗಳ ಹಿಂದಷ್ಟೆ ಮುಂಬೈನಲ್ಲಿ ಮೃತಪಟ್ಟ ಭಿಕ್ಷುಕನ ಮನೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಹಣ ಪತ್ತೆಯಾಗಿತ್ತು. ಈಗ ವಿದೇಶದ ಭಿಕ್ಷುಕಿಯೊಬ್ಬರ ಬ್ಯಾಂಕ್ ಅಕೌಂಟ್ ಖಾತೆಯಲ್ಲಿ 5 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದೆ. ಅರಬ್ ದೇಶದ ಲೆಬನನ್ನ ವಾಫಾ ಮಹಮ್ಮದ್ ಎಂಬ ಭಿಕ್ಷುಕಿಯ ಬ್ಯಾಂಕ್ ಅಕೌಂಟಿನಲ್ಲಿ ಬರೋಬ್ಬರಿ 1.33 ಮಿಲಿಯನ್ ಲೆಬನಾನ್ ಪೌಂಡ್(ಭಾರತೀಯ ರೂಗಳಲ್ಲಿ 5.62 ಕೋಟಿ ರೂ.) ಪತ್ತೆಯಾಗಿದೆ. ಲೆಬನನ್ನ ಜಮ್ಮಲ್ ಟ್ರಸ್ಟ್ ಬ್ಯಾಂಕ್ ನಲ್ಲಿ ಹಣವಿಡಲಾಗಿದ್ದು, ತನ್ನ ಖಾತೆಯಲ್ಲಿ ಎಷ್ಟು ಹಣವಿದೆ ಎಂಬ ವಿಷಯ ಸ್ವತಃ…
ಒಂದಿಲ್ಲೊಂದು ಪ್ರಮಾದಕ್ಕ ಕಾರಣವಾಗುತ್ತಿರುವ ಟಿಕ್ ಟಾಕ್ ಮೊಬೈಲ್ app ಅನ್ನು ನಿಷೇಧಿಸಲು ಹಲವು ರಾಜ್ಯಗಳು ಮುಂದಾಗಿರುವ ಹೊತ್ತಲ್ಲೇ ಈ ವಿಡಿಯೋದಿಂದ ಮಹಿಳೆಯೊಬ್ಬರು ನಾಪತ್ತೆಯಾದ ತಮ್ಮ ಪತಿಯನ್ನು ಕಂಡುಕೊಂಡಿದ್ದಾರೆ. ಈ ಮೂಲಕ ವಿರಳಾತಿವಿರಳ ಪ್ರಕರಣದಲ್ಲಿ ಟಿಕ್ ಟಾಕ್ ಉಪಕಾರಕ್ಕೂ ಬಂದಂತಾಗಿದೆ! ತಮಿಳುನಾಡಿನ ವಿಲ್ಲುಪುರಂ ನ ಜಯಪ್ರಧಾ ಎಂಬ ಮಹಿಳೆ ಸುರೇಶ್ ಎಂಬುವವರನ್ನು ಮದುವೆಯಾಗಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದರು. ಆದರೆ 2017 ರ ಆರಂಭದಲ್ಲಿ ಸುರೇಶ್ ಅವರು ತಮ್ಮ ಊರಾದ ಕೃಷ್ಣಗಿರಿಗೆ ತೆರಳುವುದಾಗಿ ಹೇಳಿ ಹೊರಟಿದ್ದರು. ನಂತರ ಅವರು ವಾಪಸ್…