ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ಪೇಮೆಂಟ್ ಮೊಬೈಲ್ ಆ್ಯಪ್ ಆಗಿರುವ ಭೀಮ್ ಅನ್ನು ಪ್ರಚಾರ ಪಡಿಸುವ ಸಲುವಾಗಿ ಕೇಂದ್ರ ಸರಕಾರ ಏ.14ರಿಂದ ನಾನಾ ಬಗೆಯ ಕ್ಯಾಶ್ ಬ್ಯಾಕ್ ಮತ್ತು ಇನ್ಸೆಂಟಿವ್ಗಳನ್ನು ನೀಡಲಿದೆ.
ಭೀಮ್ ಆ್ಯಪ್’ನ್ನು ಪ್ರಧಾನಿ ನರೇಂದ್ರ ಮೋದಿಯವರು 30 ಡಿಸೆಂಬರ್ 2016ರಂದು ಬಿಡುಗಡೆ ಮಾಡಿದ್ದರು. ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್) ಮೂಲಕ ಹಣ ಪಾವತಿ ಮಾಡಲು ಬಳಸುವ ಆ್ಯಪ್ ಇದಾಗಿದೆ.

ಈಗಾಗಲೇ ಒಂದು ವರ್ಷ ಪೂರೈಸಿರುವ ಈ ಭೀಮ್ ಆ್ಯಪ್,ಮೊನ್ನೆ ತಾನೇ ನಡೆದ ಅಂಬೇಡ್ಕರ್ ಜಯಂತಿಯಂದು ಅಪ್ಡೇಟ್ ಆಗಿದೆ.ಈಗಾಗಿ ಕೇಂದ್ರ ಸರ್ಕಾರ ಏಪ್ರಿಲ್ 14 2018 ರಿಂದ ಬಂಪರ್ ಭೀಮ್ ಆ್ಯಪ್ ನೀಡುತ್ತಿದೆ.

ಈಗ ಭೀಮ್ ಆ್ಯಪ್ ಬಳಕೆದಾರರು ಪ್ರತಿ ತಿಂಗಳು ಸುಮಾರು 750 ರೂಪಾಯಿ ಕ್ಯಾಶ್ಬ್ಯಾಕ್ ಪಡೆಯಬಹುದಾಗಿದೆ.ಹೆಚ್ಚಿನ ಬಳಕೆದಾರರನ್ನು ಸೆಳೆಯಲು ಕೇಂದ್ರ ಸರ್ಕಾರ ಈ ಕ್ಯಾಶ್ಬ್ಯಾಕ್ ಆಫರ್ ನೀಡುತ್ತಿದೆ.ಈಗಾಗಲೇ ಪೇಟಿಎಮ್, ಗೂಗಲ್ ಟೆಜ್,ಮತ್ತು ಫೋನ್ ಪೇ ಹಾಗೂ ಇನ್ನೂ ಹಲವಾರು ಆ್ಯಪ್’ಗಳು ಕ್ಯಾಶ್ಬ್ಯಾಕ್ ಆಫರ್’ಗಳನ್ನೂ ತನ್ನ ಬಳಕೆದಾರರಿಗೆ ನೀಡಿವೆ.
ಮೊದಲನೆಯದಾಗಿ ಹೊಸ ಬಳಕೆದಾರು ತಮ್ಮ ಭೀಮ್ ಆ್ಯಪ್ ಮೂಲಕ ಬೇರೆಯವರ ಭೀಮ್ ಆ್ಯಪ್’ಗೆ 1 ರೂ ಕಳುಹಿಸಿದರೂ ಸಹ ಅವರು 51ರೂ ಕ್ಯಾಶ್ಬ್ಯಾಕ್ ಆಫರ್ ಪಡೆಯುತ್ತಾರೆ.

ಅನಂತರ ಭೀಮ್ ಆ್ಯಪ್ ಹೊಸ ಗ್ರಾಹಕರಾಗಲಿ,ಈಗಾಗಲೇ ಬಳಸುತ್ತಿರುವ ಹಳೇ ಗ್ರಾಹಕರೇ ಆಗಲಿ 100ರುಪಾಯಿಗಿಂತ ಹೆಚ್ಚು ಮೊತ್ತವನ್ನು ಯಾವುದೇ ಆನ್ಲೈನ್ ಆ್ಯಪ್ ಹಾಗಿರಲಿ, ಬ್ಯಾಂಕ್ ಖಾತೆಗೆ ಹಾಗಿರಲಿ ಅಥವಾ ಮೊಬೈಲ್ ನಂಬರ್’ಗೆ ಹಾಗಿರಲಿ ಕಳುಹಿಸಿದ್ದಲ್ಲಿ ಅವರು 25ರೂ ಗಳ ಕ್ಯಾಶ್ಬ್ಯಾಕ್ ಆಫರ್ ಪಡೆಯಲಿದ್ದಾರೆ.
ಇದರ ಮಿತಿಯು ತಿಂಗಳಿಗೆ 500ರೂಗಳ ಮಿತಿಯಿದೆ.ಅಂದ್ರೆ ನೀವೂ 30 ದಿನಗಳಲ್ಲಿ 500 ರೂ ಗಳವರೆಗೆ ಎಷ್ಟು ಕಳುಹಿಸಿದರೂ ಸಹ ನಿಮಗೆ ಕ್ಯಾಶ್ಬ್ಯಾಕ್ ಆಫರ್ ಸಿಗಲಿದೆ.
ಭೀಮ್ ಆ್ಯಪ್ ಬಳಕೆದಾರು ಒಂದು ತಿಂಗಳಿಗಿಂತ ಹೆಚ್ಚು, ಅಂದ್ರೆ ಅನಿಯಮಿತವಾಗಿ ಭೀಮ್ ಆ್ಯಪ್’ನಲ್ಲಿಯೇ ಹಣ ಕಳುಹಿಸುವುದನ್ನು ಮಾಡುತ್ತಿದ್ದರೆ ಅಂತಹ ಬಳಕೆದಾರರು ಹತ್ತು ಹಲವಾರು ಕ್ಯಾಶ್ಬ್ಯಾಕ್ ಆಫರ್’ಗಳನ್ನೂ ಪಡೆಯಲಿದ್ದಾರೆ.

ಉದಾಹರಣೆಗೆ ಭೀಮ್ ಆ್ಯಪ್ ಬಳಕೆದಾರು 25 ರಿಂದ 50 ಟ್ರಾನ್ಸಾಕ್ಷನ್ಸ್ ಗಳನ್ನು ಮಾಡಿದ್ರೆ ಅವರು 100ರೂ ಗಳ ಕ್ಯಾಶ್ಬ್ಯಾಕ್ ಪಡೆಯುತ್ತಾರೆ.ಬಳಕೆದಾರು ಒಂದೇ ತಿಂಗಳಿನಲ್ಲಿ 50ಕ್ಕಿಂತ ಹೆಚ್ಚು ಟ್ರಾನ್ಸಾಕ್ಷನ್ಸ್ ಮಾಡಿದ್ರೆ ಅವರು 200ರೂ ಗಳ ಕ್ಯಾಶ್ಬ್ಯಾಕ್ ಪಡೆಯುತ್ತಾರೆ.ಹಾಗೂ 50 ರಿಂದ 100ರ ಒಳಗೆ ಟ್ರಾನ್ಸಾಕ್ಷನ್ಸ್ ಮಾಡಿದ್ರೆ ಅವರ ಬ್ಯಾಂಕ್ ಖಾತೆಗೆ 250ರೂ ಕ್ಯಾಶ್ಬ್ಯಾಕ್ ಕ್ರೆಡಿಟ್ ಆಗುತ್ತೆ.


ವ್ಯಾಪಾರಿಗಳಿಗೆ ಒಂದು ತಿಂಗಳಿಗೆ ಸುಮಾರು 1 ಸಾವಿರ ರೂಪಾಯಿಯವರೆಗೆ ಕ್ಯಾಶ್ಬ್ಯಾಕ್ ಸಿಗಲಿದೆ. ಹೊಸ ಬಳಕೆದಾರರಿಗೆ ಕೂಡ ಮೊದಲ ವಹಿವಾಟಿನಲ್ಲಿಯೇ 51 ರೂಪಾಯಿ ಕ್ಯಾಶ್ಬ್ಯಾಕ್ ಸಿಗಲಿದೆ. ನೀವು ಎಷ್ಟು ಮೊತ್ತದ ವಹಿವಾಟು ನಡೆಸಿದ್ದೀರಿ ಎಂಬುದು ಇದ್ರಲ್ಲಿ ಮಹತ್ವ ಪಡೆಯುವುದಿಲ್ಲ.

ಸದ್ಯ ಅಂಡ್ರಾಯ್ಡ್ನಲ್ಲಿ ಮಾತ್ರ ಈ ಆ್ಯಪ್ ಲಭ್ಯವಿದೆ. ಈ ಆ್ಯಪ್ ಮೂಲಕ ಹಣ ವರ್ಗಾವಣೆ ಮಾಡುವಾಗ ಯಾವುದೇ ರೀತಿಯ ಪ್ರೊಸೆಸಿಂಗ್ ಶುಲ್ಕ ಇರುವುದಿಲ್ಲ.
ಎಸ್ಬಿಐ, ಹೆಚ್ಡಿಎಫ್ಸಿ, ಐಸಿಐಸಿಐ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಸೌತ್ ಇಂಡಿಯಾ ಬ್ಯಾಂಕ್, ಕರ್ನಾಟಕ ಬ್ಯಾಂಕ್, ಸ್ಟಾಂಡರ್ಡ್ ಚಾರ್ಟೆಡ್ ಬ್ಯಾಂಕ್ ಮೊದಲಾದ 30 ಬ್ಯಾಂಕ್ಗಳ ಗ್ರಾಹಕರು ಈ ಆ್ಯಪ್ ಮೂಲಕ ವಹಿವಾಟು ನಡೆಸಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಪ್ರಿಂ ಕೋರ್ಟ್ ಮಹಿಳೆಯರಿಗೆ ಶಬರಿಮಲೆ ಆಯ್ಯಪ ಸ್ವಾಮಿ ದರ್ಶನಕ್ಕೆ ಮಹಿಳೆಯರಿಗೆ ಅವಕಾಶ ಮಾಡಿಕೊಟ್ಟ ಮೇಲೆ ಶಬರಿಮಲೈ ಕುರಿತಂತೆ ದಿನಕ್ಕೊಂದು ಸುದ್ದಿಗಳು ಕೇಳಿ ಬರುತ್ತಲೇ ಇವೆ.ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿರುವ ಬಹುಭಾಷ ನಟ ಪ್ರಕಾಶ್ ರಾಯ್ ಮತ್ತೊಂದು ಹೇಳಿಕೆಯಿಂದ ಈಗ ಸುದ್ದಿಯಲ್ಲಿದ್ದಾರೆ. ಶಬರಿ ಮಲೈ ಗೆ ಮಹಿಳೆಯರ ಪ್ರವೇಶ ಕುರಿತು ಸುಪ್ರಿಂ ಕೋರ್ಟ್ ಪ್ರವೇಶ ನೀಡಬೇಕೆಂದು ಆದೇಶ ಮಾಡಿದ್ದರೂ ಅಲ್ಲಿ ಮಹಿಳೆಯರಿಗೆ ಅವಕಾಶ ನೀಡುತ್ತಿಲ್ಲ. ಈ ಬಗ್ಗೆ ಮಾತನಡಿರುವ ಪ್ರಕಾಶ್ ರೈ ಹೆಣ್ಣು ಅಂದ್ರೆ ತಾಯಿ, ಭೂಮಿಯನ್ನು…
ಮೈಸೂರು ಮಹಾರಾಜ ಯದುವೀರ ಪತ್ನಿ, ರಾಣಿ ತ್ರಿಷಿಕಾರವರಿಗೆ ಜನಿಸಿದ ಪುಟ್ಟ ರಾಜಕುಮಾರನಿಗೆ ಈಗ ನಾಮಕರಣದ ಸಂಭ್ರಮ.
ಒಬ್ಬರಂತೆ ಮತ್ತೊಬ್ಬರು ಇರುತ್ತಾರೆ ಎಂದು ಕೇಳಿರುತ್ತೇವೆ ಅಲ್ಲಲ್ಲಿ ನೋಡಿರುತ್ತೇವೆ.ಆದ್ರೆ ಅಂತಹ ವ್ಯೆಕ್ತಿಗಳನ್ನು ಕಂಡಾಗ ನಮಗೆ ರೋಮಾಂಚನವಾಗುತ್ತದೆ.ಅಂತಹದರಲ್ಲಿ ಕೆಲವು ಪ್ರಸಿದ್ದ ರಾಜಕಾರಣಿಗಳಂತೆ ಕಾಣುವ ಬೇರೆ ವ್ಯೆಕ್ತಿಗಳ ಕೆಲವು ಚಿತ್ರಗಳು ಇಲ್ಲಿವೆ.
ಎರಡನೇ ಬಾರಿಗೆ, ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಇಂದು ವಿದೇಶ ಪ್ರವಾಸ ಆರಂಭಿಸಲಿದ್ದು ದ್ವೀಪರಾಷ್ಟ್ರ ಮಾಲ್ಡೀವ್ಸ್ಗೆ ಭೇಟಿ ನೀಡುತ್ತಿದ್ದಾರೆ.ಮಾಲ್ಡೀವ್ಸ್ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ, ಅಲ್ಲಿನ ರಾಷ್ಟ್ರಾಧ್ಯಕ್ಷ ಇಬ್ರಾಹಿಂ ಸೊಲಿತ್ ಜೊತೆ ಮಾತುಕತೆ ನಡೆಸುತ್ತಾರೆ. ಭಾರತದ ನೆರವಿನಿಂದ ಶುರುವಾಗಿರುವ ಕಾಮಗಾರಿಗಳ ಉದ್ಘಾಟನೆಯ ಜೊತೆಗೆ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೂ ಮೋದಿ ಹಣಕಾಸು ನೆರವು ಘೋಷಿಸುವ ಸಾಧ್ಯತೆ ಇದೆ. ಮಾಲ್ಡೀವ್ಸ್ನಿಂದ ನಾಳೆ ದ್ವೀಪರಾಷ್ಟ್ರ ಶ್ರೀಲಂಕಾಕ್ಕೆ ಭೇಟಿ ನೀಡುತ್ತಾರೆ. ಈಸ್ಟರ್ ಸಂಡೆಯಂದು ನಡೆದಿದ್ದ…
ಅಕ್ಟೋಬರ್ ನಲ್ಲಿ ಹಬ್ಬದ ಕಾರಣ ರಜೆ ಇರುವುದರಿಂದ ಬ್ಯಾಂಕ್ ವಹಿವಾಟುಗಳಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ ತಿಂಗಳಿನಲ್ಲಿ ಬ್ಯಾಂಕ್ ಗಳಿಗೆ ಬರೋಬ್ಬರಿ 11 ದಿನ ರಜೆ ಇದೆ. ದಸರಾ ನಂತರ ದೀಪಾವಳಿ ಇರುವುದರಿಂದ ಬ್ಯಾಂಕ್ 11 ದಿನ ಕೆಲಸ ಮಾಡುವುದಿಲ್ಲ. ಆರ್.ಬಿ.ಐ. ವತಿಯಿಂದ ಬ್ಯಾಂಕ್ ರಜಾ ದಿನದ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ. ಅಕ್ಟೋಬರ್ 6 ಭಾನುವಾರ. ಅಕ್ಟೋಬರ್ 7 ನವಮಿ. ಅಕ್ಟೋಬರ್ 8 ರಂದು ದಶಮಿ. ಹಾಗಾಗಿ 3 ದಿನ…
ಮೊಳಕೆ ಬಂದ ಕಾಳುಗಳು ಆರೋಗ್ಯಕ್ಕೆ ಒಳ್ಳೆಯದು. ಹೆಚ್ಚಾಗಿ ಡಯೆಟ್ ಮಾಡುವವರು ಮೊಳಕೆ ಬಂದ ಕಾಳುಗಳನ್ನು ತಿನ್ನುತ್ತಾರೆ. ಸಾಮಾನ್ಯವಾಗಿ ಹೆಸರು, ಕಡಲೆಯನ್ನು ಮೊಳಕೆ ಬರಿಸಿ ಸೇವಿಸುತ್ತಾರೆ.