ದಿನಕ್ಕೊಂದು ನೀತಿ ಕಥೆ

ಭೂಮಿ ತಲೆಕೆಳಗಾದರೆ …? ಓದಿ ದಿನಕ್ಕೊಂದು ನೀತಿ ಕಥೆ….

2441

ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತಿದ್ದಾಗ ಬೋದಿಸತ್ವ ಒಂದು ಸಿಂಹದ ಹೊಟ್ಟೆಯಲ್ಲಿ ಹುಟ್ಟಿ ಕಾಡಿನಲ್ಲಿದ್ದ. ಆ ಕಾಡಿನ ಅಂಚಿನ ಸಮುದ್ರತೀರದಲ್ಲಿ ಒಂದು ಬೇಲದ ಮತ್ತು ತಾಳೆಯ ಮರಗಳ ತೋಪಿತ್ತು. ಒಂದು ತಾಳೆಯ ಮರ ಮತ್ತು ಬೇಲದಮರದ ಅಕ್ಕಪಕ್ಕದಲ್ಲಿ ಕಡೆ ಮೊಲವೊಂದು ವಾಸಮಾಡುತ್ತಿತ್ತು.

ಒಂದು ದಿನ ಆ ಮೊಲ ತಾಳೆಯ ಮರದ ನೆರಳಿನಲ್ಲಿ ಮಲಗಿತ್ತು. ಒಂದು ಕ್ಷಣ ಅದಕ್ಕೆ ಅಕಸ್ಮಾತ್ ಈ ಭೂಮಿಯೇ ತಲೆಕೆಳಗಾದರೇನುಗತಿ? ಎಂಬ ಯೋಚನೆ ಬಂತು. ಅದೇ ಸಮಯದಲ್ಲಿ ಒಂದು ಬೇಲದ ಹಣ್ಣು ತೊಟ್ಟು ಕಳಚಿ ತಾಳೆಯ ಗರಿಯ ಮೇಲೆ ಬಿದ್ದು ಶಬ್ದವಾಯಿತು. ಅದನ್ನು ಕೇಳಿ ಮೊಲ ಭೂಮಿ ತಲೆಕೆಳಗಾಗುತ್ತಿದೆ ಎಂದೇ ಬಾವಿಸಿ ಬೀತಿಯಿಂದ ಓಡತೊಡಗಿತು.

ವಿಪರೀತ ಭಯದಿಂದ ಓಡುತ್ತಿರುವ ಅದನ್ನು ದಾರಿಯಲ್ಲಿ ಇನ್ನೊಂದು ಮೊಲ ಕಂಡು, ‘’ಏಕೆ ಹೀಗೆ ಓಡುತ್ತಿರುವೆ? ಏನಾಯಿತು?’’ ಎಂದು ಕೇಳಿತು.

‘’ಅಯ್ಯೋ, ಅದನ್ನು ಏನೆಂದು ಹೇಳಲಿ? ಭೂಮಿ ತಲೆಕೆಳಗಾಗುತ್ತಿದೆ‘’ ಎಂದು ಅದು ಓಡುತ್ತಲೇ ಇತ್ತು. ಆ ಇನ್ನೊಂದು ಮೊಲವು ಭಯಬೀತಿಯಿಂದ ಅದರ ಹಿಂದೆ ಓಡತೊಡಗಿತು. ಅವೆರಡನ್ನೂ ನೋಡಿ ಇನ್ನೊಂದು ಮತ್ತೊಂದು, ಹೀಗೆ ಸಾವಿರ ಮೊಲಗಳ ಹಿಂಡೇ ಓಡತೊಡಗಿತು.

ಅಷ್ಟೇ ಅಲ್ಲದೆ ಅಷ್ಟು ಮೊಲಗಳ ಗಾಬರಿಯಿಂದ ಹಾಗೆ ಓಡುತ್ತಿರುವುದನ್ನು ಕಂಡು ಭೂಮಿ ತಲೆಕೆಳಗಾಗುವ ಆಪತ್ತು ಬಂದಿದೆಯೆಂದು ತಿಳಿದು ಭಯದಿಂದ ಒಂದು ಹಂದಿ, ಹಸು, ಎಮ್ಮೆ ಮತ್ತು ಹುಲಿ, ಸಿಂಹ, ಆನೆ ಇತ್ಯಾದಿ ಪ್ರಾಣಿಗಳೂ ಓಡತೊಡಗಿದವು ಹಲವು ಪ್ರಾಣಿಗಳ ಸಾಲುಗಳ ಸೇರಿ ಒಂದು ಯೋಜನದಷ್ಟು ಉದ್ದವಾಯಿತು.

ದಾರಿಯಲ್ಲಿ ಸಿಂಹವಾಗಿದ್ದ ಬೋದಿಸುತ್ತ ಈ ಮೆರವಣಿಗೆಯನ್ನು ಕಂಡು ‘’ಎಲ್ಲ ಏಕೆ ಹೀಗೆ ಓಡುತ್ತಿರುವಿರಿ?’’ ಎಂದು ಕೇಳಿದ. ಅವೆಲ್ಲ ‘ಭೂಮಿ ತಲೆಕೆಳಗಾಗುವುದು ಎಂದಾದರೂ ಸಾದ್ಯವೇ? ಇವು ಬೇರೆ ಏನನ್ನೋ ಕಂಡು ತಪ್ಪು ತಿಳಿದು ಹೀಗೆ ಓಡುತ್ತಿರಬೇಕು. ಹೀಗೆ ಬಿಟ್ಟರೆ ಎಲ್ಲ ಪ್ರಾಣಿಗಳು ಅನ್ಯಾಯವಾಗಿ ನಾಶವಾಗಿಬಿಡುತ್ತವೆ. ಅದನ್ನು ತಪ್ಪಿಸಬೇಕು’ ಎಂದು ಬೋದಿಸತ್ವ ಯೋಚಿಸಿದ.

ಕೂಡಲೇ ಸಿಂಹ ವೇಗವಾಗಿ ಓಡಿ ಬಂದು ಎಲ್ಲ ಪ್ರಾಣಿಗಳು ಅಡ್ಡವಾಗಿ ನಿಂತು ಮೂರೂ ಸಲ ಸಿಂಹನಾದ ಮಾಡಿತು. ಹೆದರಿದ ಪ್ರಾಣಿಗಳೆಲ್ಲ ನಿಂತವು. ‘’ಏಕೆ ಓಡುತ್ತಿರುವೆ?’’ಎಂದು ಅವನು ಕೇಳಿದ.

‘’ಭೂಮಿ ತಲೆಕೆಳಗಾಗುತ್ತಿದೆ.’’

‘’ಅದನ್ನು ನೋಡಿದವರಾರು?’’

‘’ಆನೆ’’

ಆನೆ ತನಗೆ ಗೊತ್ತಿಲ್ಲ, ಸಿಂಹಕ್ಕೆ ಗೊತ್ತು ಎಂದು ಹೇಳಿತು. ಸಿಂಹ ಹುಲಿಯನ್ನು ತೋರಿಸಿತು. ಹುಲಿ ಇನ್ನೊಂದು ಪ್ರಾಣಿಯನ್ನು ತೋರಿಸಿತು. ಹುಲಿ ಇನ್ನೊಂದು ಪ್ರಾಣಿಯನ್ನು ತೋರಿಸಿತು.  ಕಡೆಗೆ ಮೊಲಗಳ ಸರದಿ ಬಂತು. ಮೊಲಗಳು ತಮ್ಮ ಮುಂದೆ ಓಡಾಡುತಿದ್ದ ಮೊಲವನ್ನು ತೋರಿಸಿದೆವು.

‘’ಭೂಮಿ ತಲೆಕೆಳಗಾಗಿರುವದನ್ನು ನೋಡಿದೆಯಾ?’’ ಎಂದು ಸಿಂಹ ಮೊಲವನ್ನು ಕೇಳಿತು.

‘’ಹೌದು, ನಾನು ನೋಡಿದೆ’’ ಎಂದಿತು ಮೊಲ.

‘’ಎಲ್ಲಿ?’’

‘’ಸಮುದ್ರದಲ್ಲಿ ಹತ್ತಿರ ಬೇಲ ಮತ್ತು ತಾಳೆಯ ಮರಗಳ ತೋಪಿನಲ್ಲಿ. ಅಲ್ಲಿ ನಾನು ಬೇಲದ ಮರದ ಬುಡದಲ್ಲಿ ಮಲಗಿದ್ದೆ. ಒಂದು ವೇಳೆ ಭೂಮಿ ತಲೆಕೆಳಗಾದರೆ ಎಲ್ಲಿ ಹೋಗಲಿ? ಎಂದು ನಾನು ಯೋಚಿಸಿದ್ದೆ. ಆಗ ಭೂಮಿ ತಲೆಕೆಳಗಾಗುವ ಸದ್ದು ಕೇಳಿ ಬಂತು. ನಾನು ಓಡಿ ಬಂದೆ.’’

ನಿಜ ಸಂಗತಿಯನ್ನು ತಿಳಿಯಬೇಕೆಂದು ಸಿಂಹ ಇತರ ಪ್ರಾಣಿಗಳನ್ನು ಕುರಿತು ‘’ಈ ಮೊಲ ಹೇಳಿದ ಮಾತು ನಿಜವೇ ಎಂಬುದನ್ನು ನಾನು ತಿಳಿದು ಬರುವವರೆಗೆ ನೀವೆಲ್ಲ ಇಲ್ಲಿಯೇ ಇರಿ‘’ ಎಂದು ಹೇಳಿ ಮೊಲವನ್ನು ಕರೆದು ತನ್ನ ಬೆನ್ನ ಮೇಲೆ ಕೂಡಿಸಿಕೊಂಡು ಹೊರಟಿತು.

ಅವೆರೆಡೂ ಬಹುಬೇಗ ಆ ತೋಪಿನ ಬಳಿಗೆ ಬಂದವು. ಮೊಲವನ್ನು ಇಳಿಸಿ ‘’ಆ ಸ್ಥಳವನ್ನು ತೋರಿಸಿ’’ ಎಂದು ಸಿಂಹ ಹೇಳಿತು. ಅದು ಹೆದುರುತ್ತಲೇ ಹೋಗಿ, ‘’ಇದೇ ಶಬ್ದವಾದ ಸ್ಥಳ’’  ಎಂದು ತೋರಿಸಿತು.

ಸಿಂಹ ಆ ಸ್ಥಳಕ್ಕೆ ಹೋಗಿ ಪರಿಶೀಲಿಸಿತು. ಅಲ್ಲೇ ತಾಳೆಗರಿಯ ಮೇಲೆ ಬಿದ್ದಿದ್ದ ಬೇಲದ ಹಣ್ಣನ್ನು ನೋಡಿ, ಇದು ಭೂಮಿ ತಲೆಕೆಳಗಾಗುತ್ತಿರುವ ಶಬ್ದವಲ್ಲ. ಬೇಲದ ಹಣ್ಣು ತಾಳೆಯ ಗರಿಯ ಮೇಲೆ ಬಿದ್ದ ಶಬ್ದವನ್ನು ಕೇಳಿ ತಪ್ಪು ತಿಳಿದುಕೊಂಡಿದೆಯೆಂದು ಅರ್ಥಮಾಡಿಕೊಂಡಿತು.

ಅನಂತರ ಮತ್ತೆ ಮೊಲವನ್ನು ಬೆನ್ನ ಮೇಲೆ ಕೂಡಿಸಿಕೊಂಡು ಸಿಂಹ ಆ ಪ್ರಾಣಿಗಳಿದ್ದ ಸ್ಥಳಕ್ಕೆ ಬಂದು, ನಿಜ ಸಂಗತಿಯನ್ನ್ಜು ತಿಳಿಸಿ ಪ್ರಾಣಿಗಳಿಗೆ ಧೈರ್ಯ ಹೇಳಿತು. ತಮ್ಮ ಪ್ರಾಣವುಳಿಸಿದ ಸಿಂಹವನ್ನು ಎಲ್ಲ ಪ್ರಾಣಿಗಳೂ ಕೊಂಡಾಡಿದವು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಕೂದಲು ಉದುರುತ್ತಿದ್ದರೆ. ಅದನ್ನು ತಡೆಗಟ್ಟಲು ಸುಲಭ ಉಪಾಯ ಇಲ್ಲಿದೆ ನೋಡಿ.!

    ಇಂದಿನ ದಿನದಲ್ಲಿ ಸಾಮಾನ್ಯವಾದ ವಿಚಾರವಾಗಿಬಿಟ್ಟಿದೆ. ಮಾಲಿನ್ಯ, ನೀರಿನಲ್ಲಿ ಬೆರೆಸುವ ರಾಸಾಯನಿಕ ಸೇರಿ, ನಗರಗಳಲ್ಲಿಪುರುಷರು ಹಾಗೂ ಮಹಿಳೆಯರಿಬ್ಬರಲ್ಲೂ ಕೂದಲು ಉದುರುವಿಕೆ ಸಮಸ್ಯೆ ಹೆಚ್ಚಾಗುತ್ತಿದೆ. ಕೂದಲು ಉದುರುವಿಕೆ ತಡೆಗಟ್ಟಲು ಮನೆಯಲ್ಲೇ ಏನು ಮಾಡಬಹುದು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ ಕೂದಲನ್ನು ಉದ್ದ ಬಿಡದಿರಿ ಪ್ರತಿ 8 ಅಥವಾ 10 ವಾರಗಳಿಗೊಮ್ಮೆ ಕೂದಲನ್ನು ಸಣ್ಣದಾಗಿ ಕಟ್ಟಿಂಗ್‌ ಮಾಡಿಸಿರುವುದರಿಂದ ಕೂದಲು ಉದುರುವಿಕೆ ತಡೆಯಲು ಸಾಧ್ಯ. ಇದರಿಂದ ಕೂದಲಿನ ಬೆಳವಣಿಗೆ ಕೊಂಚ ವೇಗ ಪಡೆದುಕೊಳ್ಳುತ್ತದೆ. ಉದ್ದ ಕೂದಲಿಗೆ ಬೇಗನೆ ನಾಶವಾಗುತ್ತದೆ, ತುಂಡಾಗುತ್ತದೆ. ಇದಕ್ಕಾಗಿ…

  • ಸ್ಪೂರ್ತಿ

    ಈ ಶಾಲೆಯ ಮಕ್ಕಳು ತಮ್ಮ ಎರಡೂ ಕೈಗಳಿಂದಲೂ ಬರೆಯುತ್ತಾರೆ.!ಹೇಗೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವೆಲ್ಲಾ ಸಿನಿಮಾದಲ್ಲಿ ಸಿನಿಮಾ ನಾಯಕರು ತಮ್ಮ ಎರಡೂ ಕೈ ಗಳಲ್ಲಿ ಬರೆಯುವದನ್ನು ನೋಡಿರುತ್ತೇವೆ.ಆದ್ರೆ ನಿಜ ಜೀವನದಲ್ಲಿ ಸಾಧ್ಯವೇ..?ಹೌದು, ಸಾಧ್ಯ ತಿಳಿಯಲು ಮುಂದೆ ಓದಿ… ಸಾಮಾನ್ಯವಾಗಿ ನಾವೆಲ್ಲರೂ ಒಂದು ಕೈನಲ್ಲಿ ಬರೆಯುವುದನ್ನು ರೂಢಿಸಿಕೊಂಡಿರುತ್ತೇವೆ, ಆದರೆ ಈ ಶಾಲೆಯಲ್ಲಿನ ಮಕ್ಕಳು ತಮ್ಮ ಎರಡೂ ಕೈಗಳಲ್ಲಿ ಬರೆಯುವುದನ್ನು ರೂಡಿಸಿಕೊಂಡಿವೆಯಂತೆ! ಈ ವರದಿ ನಿಮಗೆ ಆಶ್ಚರ್ಯ ಉಂಟು ಮಾಡಿದರೂ ಸತ್ಯ..! ಇದು ನಡೆಯುತ್ತಿರುವುದು ಮಹಾರಾಷ್ಟ್ರದ ಸಿಂಗ್ರೌಲಿ ಎಂಬ ಪುಟ್ಟ ಗ್ರಾಮದ ವೀಣಾ ವಂದಿನಿ ಶಾಲೆ. ಈ ಶಾಲೆಯ…

  • ಸುದ್ದಿ

    70 ವರ್ಷದ ಈ ವೃದ್ದನ ಬಯಕೆ ಕೇಳಿದ್ರೆ ಅಚ್ಚ್ಚರಿಯಂತು ಗ್ಯಾರಂಟಿ..ಅಷ್ಟಕ್ಕೂ ಆ ವಿಷಯವಾದ್ರು ಏನು?

    ಯಾರ್ಯಾರಿಗೋ ಏನೋ ಆಸೆಯಾದರೆ, ಈ ವೃದ್ಧನದ್ದು ಬಲು ವಿಚಿತ್ರ ಹಾಗೂ ವಿಲಕ್ಷಣ ಆಸೆ…! ತಮಿಳುನಾಡಿನ ರಾಮನಾಥಪುರ ಜಿಲ್ಲೆಯ ಮಲೈಸ್ವಾಮಿ ಎಂಬ 70 ವರ್ಷದ ಈ ವೃದ್ಧನಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ 24 ವರ್ಷದ ಪಿ.ವಿ. ಸಿಂಧುವನ್ನು ಮದುವೆಯಾಗಬೇಕಂತೆ..! ಒಂದು ವೇಳೆ ಸಿಂಧು ಮದುವೆಯಾಗಲು ಒಪ್ಪದಿದ್ದರೆ ಆಕೆಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿ ಮದುವೆಯಾಗುತ್ತಾನಂತೆ. ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆಂದು ಜಿಲ್ಲಾಧಿಕಾರಿಗಳು ನಡೆಸುವ ವಾರದ ಜನತಾದರ್ಶನದಲ್ಲಿ ಸಿಂಧು ಫೋಟೋ ಸಹಿತ ಪತ್ರವೊಂದನ್ನು ಜಿಲ್ಲಾಧಿಕಾರಿಗಳ ಕೈಗಿತ್ತು, ನನ್ನನ್ನು ಮದುವೆಯಾಗುವಂತೆ ಸಿಂಧು ಅವರಿಗೆ ಸೂಚಿಸಬೇಕೆಂದು…

  • ವಿಸ್ಮಯ ಜಗತ್ತು

    ಈ ಬೆಕ್ಕು ಮಗುವನ್ನು ಪ್ರಾಣಪಾಯದಿಂದ ಕಾಪಾಡಿದೆ!ಹೇಗೆ ಅಂತೀರಾ?ಈ ಲೇಖನಿ ಓದಿ…

    ಸಾಕುಪ್ರಾಣಿಗಳು ತಮ್ಮ ಯಜಮಾನನ ಮತ್ತು ಅವರ ಮನೆಯವರನ್ನು ತಮ್ಮ ಪ್ರಾಣ ಒತ್ತೆ ಇಟ್ಟು ರಕ್ಷಣೆ ಮಾಡಿದ ಎಸ್ಟೋ ವಿಚಾರಗಳನ್ನು ನಾವು ಆಗಾಗ್ಗೆ ಕೇಳುತ್ತಿರುತ್ತೇವೆ. ಹಾಗಯೇ ಇಲ್ಲೊಂದು ಬೆಕ್ಕು ಮಗುವನ್ನು ರಕ್ಷಣೆ ಮಾಡಿ ಗಮನಸೆಳೆದಿದೆ.