ಭವಿಷ್ಯ

ಮಂಗಳವಾರದ ನಿಮ್ಮ ರಾಶಿ ಭವಿಷ್ಯ, ನಿಮಗೆ ಮಂಗಳವಾಗಲಿದೆಯೇ ನೋಡಿ…

217

ಇಂದು ಮಂಗಳವಾರ, 27/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಇಂದು ನಿಮ್ಮ ವರ್ತನೆ ನಿಮ್ಮ ಕುಟುಂಬದವರಿಗೆ ಅಸಮಧಾನ ತರಬಹುದು. ಮದುವೆ ವಿಚಾರದಲ್ಲಿ ಅನುಕೂಲ. ಆಸ್ತಿಯ ಖರೀದಿಯ ಬಗ್ಗೆ ಮಾತುಕತೆ ಉಂಟಾಗುವುದು. ನಿಮ್ಮ ಪ್ರಯಾಣದ ಯೋಜನೆಗಳ ವೆಳಾಪಟ್ಟಿ ಕೊನೆಗಳಿಗೆಯಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ, ಹಣಕಾಸಿನ ಅನುಕೂಲತೆ ಕೂಡಿಬರಲಿದೆ.

ವೃಷಭ:-

ಆರ್ಥಿಕ ಸ್ಥಿತಿ ಉತ್ತಮವಾಗಿರುವುದು. ಕೆಲಸಕಾರ್ಯಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ನಿಮ್ಮ ವೆಚ್ಚಗಳನ್ನು ನಿಯಂತ್ರಿಸಲು ಪ್ರಯತ್ನಿಸಿ ಮತ್ತು ಇಂದು ತುಂಬಾ ಖರ್ಚು ಮಾಡಬೇಡಿ. ವ್ಯವಹಾರಸ್ಥರಿಗೆ ಸಾಧಾರಣ ಫಲ ಕಂಡುಬರುವುದು.  ಅನೇಕ ದಿನಗಳಿಂದ ಬಾಕಿ ಇರುವ ಕಾರ್ಯಗಳು ಪೂರ್ಣಗೊಳ್ಳುವವು.

ಮಿಥುನ:

ನಿಮ್ಮ ತಪ್ಪುಗಳನ್ನು ಎತ್ತಿ ತೋರಿಸಿ,ನಿಮ್ಮ ಬಾಯಿಂದಲೇ ನೀವು ಸತ್ಯವನ್ನು ಹೇಳಿ ಪೇಚಿಗೆ ಸಿಲುಕುವಂತೆ ಮಾಡುವರು. ಒದಗಿಬರುವ ಅವಕಾಶಗಳನ್ನು ಕೈ ಚೆಲ್ಲದೇ ಬಳಸಿಕೊಳ್ಳಿ. ಪ್ರಯಾಣ ಮಾಡುವಾಗ ವಾಹನಗಳ ಬಗ್ಗೆ ಎಚ್ಚರಿಕೆ ಅಗತ್ಯ.

ಕಟಕ :-

ದೂರದ ಪ್ರಯಾಣ ಹೋಗಬೇಕಾಗಿ ಬರಲಿದೆ. ಬಂಧುಗಳೊಂದಿಗೆ ಕಲಹ ಸಾಧ್ಯತೆ. ನೀವು ಯಾರಾದ್ದಾದರೂ ಜೊತೆಗಿದ್ದಾಗ, ಜಗಳಗಳು ಅನಿವಾರ್ಯ. ಮೂರ್ಖರ ಜತೆ ವಾದ ಮಾಡಿ ಪ್ರಯೋಜನವಿಲ್ಲ. ನೀವು ನಿಮ್ಮ ಸಂಗಾತಿಯ ಜೊತೆ ವಾದಕ್ಕೆ ಬೀಳಬಹುದು.

 ಸಿಂಹ:

ಮಕ್ಕಳ ವಿಷಯದಲ್ಲಿ ಹರ್ಷದಾಯಕ ವಾರ್ತೆಗಳನ್ನು ಕೇಳುವಿರಿ. ದೂರ ಪ್ರಯಾಣ ಸಾಧ್ಯತೆ. ದೊಡ್ಡವರ ಆಶೀರ್ವಾದದಿಂದ ನಿಮ್ಮ ಕಾರ್ಯಗಳು ಕೈಗೂಡುವವು. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.

ಕನ್ಯಾ :-

ಗೃಹ ನಿರ್ಮಾಣ ಸಾಮಗ್ರಿಗಳ ವ್ಯಾಪಾರಸ್ಥರಿಗೆ ಲಾಭದ ನಿರೀಕ್ಷೆ. ಕುಟುಂಬ ಕಲಹದಿಂದ ಮನಸ್ಸಿಗೆ ಅಶಾಂತಿಯು ಉಂಟಾಗುವುದು. ಆಸ್ತಿ ವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ. ನೌಕರಸ್ಥರಿಗೆ ನಿರಾಳತೆ ದೊರೆಯಲಿದೆ. ಆತುರದ ನಿರ್ಧಾರಗಳನ್ನು ಕೈಗೊಳ್ಳಬೇಡಿ

ತುಲಾ:

ಹಿರಿಯರೊಂದಿಗೆ ವಾದ ವಿವಾದಗಳಿಗೆ ಮುಂದಾಗದಿರುವುದು ಒಳಿತು. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿರಿ. ಕೆಲಸದಲ್ಲಿನ ಒತ್ತಡಗಳು ಕಡಿಮೆಯಾಗಲಿವೆ. ಪ್ರಯಾಣದಲ್ಲಿ ಹೆಚ್ಚಿನ ಕಾರ್ಯಗಳು ನಡೆದರೂ ಸಮಾಧಾನ ಸಿಗಲಾರದು.

ವೃಶ್ಚಿಕ :-

ವ್ಯವಹಾರದಲ್ಲಿ ಕ್ಷಿಪ್ರ ನಿರ್ಧಾರದಿಂದಾಗಿ ಅಧಿಕ ಪ್ರಯೋಜನ. ನಿಮ್ಮ ಎಲ್ಲಾ ಕಾರ್ಯಗಳು ಸುಗಮವಾಗಿ ಸಾಗುವವು.ನಿಮ್ಮ ನಿಜವಾದ ಪ್ರಯತ್ನವಿದ್ದಲ್ಲಿ ದೇವರು ಒಲಿಯುವನು.

ಧನಸ್ಸು:

ಗುತ್ತಿಗೆ ಕೆಲಸ ನಿರ್ವಹಿಸುವವರಿಗೆ ಹೆಚ್ಚಿನ ಕೆಲಸಗಳು ದೊರೆಯಲಿವೆ. ನ್ಯಾಯಾಲಯದ ಕೆಲಸಗಳು ನಿಮ್ಮ ಪರವಾಗಿ ತಿರುವು ಪಡೆಯಲಿವೆ.ನೀವು ಹಣ ಕೂಡಿಡುವ ಪರಿಪಾಠವನ್ನು ಬೆಳೆಸಿಕೊಳ್ಳಬೇಕು. ಏಕೆಂದರೆ ನಿಮ್ಮ ಆಪತ್‌ ಕಾಲದಲ್ಲಿ ಯಾರೂ ನಿಮಗೆ ಸಹಾಯವನ್ನು ಮಾಡುವುದಿಲ್ಲ. ವಿಶ್ವಾಸದ ದುರುಪಯೋಗಕ್ಕೆ ಕಾರಣರಾಗದಿರಿ.

ಮಕರ :-

ಕೆಲಸ ಕಾರ್ಯಗಳು ಪ್ರಗತಿಪರವಾಗಿರುವುದರಿಂದಾಗಿ ಸಂತಸವನ್ನು ನೀಡುವವು. ಮನೆಯ ಕುಟುಂಬದ ಹಿರಿಯರ ಆರೋಗ್ಯದ ಕಡೆ ಗಮನ ನೀಡಿ.ದಿನಸಿ ವ್ಯಾಪಾರಿಗಳಿಗೆ ಲಾಭ. ವಾಗಿ ಕೂಡಾ ಸಂತಸದ ವಾತಾವರಣ ನೆಮ್ಮದಿ ತರುತ್ತದೆ. ಅವಿವಾಹಿತರಿಗೆ ಸಿಹಿಸುದ್ಧಿ. ವ್ಯಾಪಾರ ವ್ಯವಹಾರಗಳನ್ನು ಜಾಗ್ರತೆಯಿಂದ ನಡೆಸಬೇಕಾಗುತ್ತದೆ.

ಕುಂಭ:-

ಚಿನ್ನಾಭರಣಗಳ ಖರೀದಿಗೆ ಉತ್ತಮ ದಿನ. ಮನೆಯಲ್ಲಿ ಪರಿಸ್ಥಿತಿ ಉತ್ತಮ ಗೊಂಡು ಸಂತೋಷದ ವಾತಾವರಣ ಮೂಡಲಿದೆ. ಮಾತಿನಿಂದ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇರುವುದು. ಸಾಂಸಾರಿಕವಾಗಿ ಧರ್ಮಪತ್ನಿಯ ಸಹಕಾರದಿಂದ ಹಾಗೂ ಸೂಕ್ತ ಸಲಹೆಗಳಿಂದ ಮುನ್ನಡೆ ತರುತ್ತದೆ.ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ.

ಮೀನ:-

ಕ್ರೀಡಾಪಟುಗಳಿಗೆ ಹೆಸರು ಗಳಿಸುವ ಅವಕಾಶ. ಕೌಟುಂಬಿಕ ವಲಯದಲ್ಲಿ ಮುನ್ನಡೆ ಇರುತ್ತದೆ.ವಿದ್ಯಾರ್ಥಿಗಳು ಆಟಪಾಠಗಳಲ್ಲಿ ಪ್ರಗತಿ ಹೊಂದುವರು. ಆರ್ಥಿಕವಾಗಿ ತುಸು ಸಮಾಧಾನ ಸಿಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬ್ರಹ್ಮಾವರದಲ್ಲಿ ಮಹಾಮಳೆಯ ಅಬ್ಬರ : ಜನಜೀವನ ಅಸ್ತವ್ಯಸ್ತ…..!

    ಬ್ರಹ್ಮಾವರ ತಾಲೂಕಿನೆಲ್ಲೆಡೆ ಕುಂಭ ದ್ರೋಣ ಮಳೆಯ ಅಬ್ಬರ ಜೋರಾಗಿದ್ದು, ಮಂಗಳವಾರ ಬೆಳಗ್ಗಿನಿಂದಲೇ ಸುರಿದ ಮಳೆಯಿಂದಾಗಿ ಹಲವೆಡೆಗಳಲ್ಲಿ ನೆರೆ ಆವರಿಸಿದೆ. ಕೆಲವೆಡೆ ಮನೆಯೊಳಗೆ ನೀರು ನುಗ್ಗಿದ್ದರೆ, ಅನೇಕ ಕಡೆಗಳಲ್ಲಿ ಗದ್ದೆ, ಅಡಿಕೆ, ತೆಂಗಿನ ತೋಟ ಸಹಿತ ಕೃಷಿ ಪ್ರದೇಶಗಳು ಜಲಾವೃತಗೊಂಡಿವೆ. ಬ್ರಹ್ಮಾವರ ಪರಿಸರದ ಮಟಪಾಡಿ, ನೀಲಾವರ, ನಂದನಕುದ್ರು, ರಾಮನಕುದ್ರು, ಬಲ್ಜಿ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು ಇದರಿಂದಾಗಿ ವಾಹನ ಸವಾರರು ಕೂಡ ಸಮಸ್ಯೆಯನ್ನು ಅನುಭವಿಸಿದರು. ಅನೇಕ ಕಡೆಗಳಲ್ಲಿ ಭತ್ತದ ಕೃಷಿ ಬೆಳೆದಿರುವ ಗದ್ದೆ ಜಲಾವೃತಗೊಂಡಿದ್ದರೆ, ಅಡಿಕೆ ತೋಟಗಳಲ್ಲಿ ನೀರು ನಿಂತಿದೆ….

  • ಗ್ಯಾಜೆಟ್

    ಮೊಬೈಲ್ ನಿರ್ಮಾಣ ಕಂಪೆನಿಗಳಲ್ಲಿ ನಡುಕ ಹುಟ್ಟಿಸಿದ ನೂತನ ಈ ಜಿಯೋ ಫೋನ್ ಬೆಲೆ!ಈ ಲೇಖನಿ ಓದಿ ಶಾಕ್ ಆಗ್ತೀರಾ…

    ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಲಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.

  • ಆರೋಗ್ಯ, ತಂತ್ರಜ್ಞಾನ

    ಏನಿದು ಗೋವುಗಳ ಹೊಟ್ಟೆಯ ಮೇಲೆ ದೊಡ್ಡದಾದ ರಂಧ್ರಗಳು..!ನಂಬೋದಿಲ್ಲ ಅಲ್ವಾ?ಈ ಲೇಖನಿ ಓದಿ ತಿಳಿಯುತ್ತೆ…

    ಹೈನುಗಾರಿಕೆಯ ಭಾಗವಾಗಿ, ಹಸುಗಳ ಹೊಟ್ಟೆಯಲ್ಲಿ ದೊಡ್ಡ ಹೋಲ್ಗಳನ್ನು ಮಾಡಿದ್ದಾರೆ.ಸ್ವಿಟ್ಜರ್ಲೆಂಡ್ನಲ್ಲಿರುವ ಕೆಲವು ರೈತರು ಹೀಗೆ ಮಾಡುತ್ತಿರುವುದು ಏಕೆ ಎಂದು ಹಲವು ಜನರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.

  • ಸಂಬಂಧ

    ಮದುವೆಯಾಗುವ ಹುಡುಗನಿಗೆ ಅಡುಗೆ ಬರುತ್ತಾ???ಶಾಕ್ ಆಗ್ಬೇಡಿ!ಮುಂದೆ ಓದಿ…..

    ತಮ್ಮ ಮಕ್ಕಳನ್ನು ಮದುವೆ ಮಾಡುವ ಸಂದರ್ಭದಲ್ಲಿ, ಸಾಮಾನ್ಯವಾಗಿ ಹುಡುಗನ ಮನೆಯವರು ಹುಡುಗಿಗೆ ಅಡುಗೆ ಮಾಡಲು ಬರುತ್ತಾ ಎಂದು ಪ್ರಶ್ನೆ ಕೇಳುವುದು ಸಾಮಾನ್ಯ

  • ಸುದ್ದಿ

    ಪ್ರತಿಪಕ್ಷದ ನಾಯಕರಾದ ಮೇಲೆ ತಮ್ಮ ವರಸೆಯನ್ನು ಬದಲಾಯಿಸಿಕೊಂಡ ಸಿದ್ದರಾಮಯ್ಯ,.!!

     ಪ್ರತಿಪಕ್ಷದ ನಾಯಕರಾದ ಮೇಲೆ ಸಿದ್ದರಾಮಯ್ಯ ತಮ್ಮ ವರಸೆ ಬದಲಾಯಿಸಿದ್ದಾರೆ. ಎಲ್ಲ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಕಳೆದೆರಡು ದಿನಗಳಲ್ಲಿ ಐದು ಬಾರಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಅಧಿವೇಶನದಲ್ಲಿ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ರಮೇಶ್‍ಕುಮಾರ್ ಹಾಗೂ ಶಾಸಕರ ಸಲಹೆ ಪಡೆದು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಸ್ಥಾನ ಪಡೆಯಲು ಸಿದ್ದರಾಮಯ್ಯನವರು ನಡೆಸಿದ ಪ್ರಯತ್ನದ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಹೈಕಮಾಂಡ್ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಸಿದ್ದು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಇವರ ಆಪ್ತರು ಹಾಗೂ…

  • ಸುದ್ದಿ

    ಎಲ್ಐಸಿ ಪಾಲಿಸಿ ಹೊಂದಿರುವವರಿಗೆ ಇಲ್ಲಿದೆ ಒಂದು ಸಂತಸದ ಸುದ್ದಿ…!ಇದನ್ನೊಮ್ಮೆ ಓದಿ..,

    ಭಾರತೀಯ ಜೀವ ವಿಮಾ ನಿಗಮ ಪಾಲಿಸಿ ಹೂಡಿಕೆದಾರರ  ಹಣ ಭದ್ರವಾಗಿದೆ.ಸುಳ್ಳು ವದಂತಿಗಳನ್ನು  ನಂಬಬೇಡಿ ಎಂದು ನಿಗಮದಿಂದ ಸ್ಪಷ್ಟನೆ ನೀಡಲಾಗಿದೆ. ಭಾರತೀಯ ವಿಜಯ ವಿಮಾ ನಿಗಮ(ಎಲ್ಐಸಿ) ನಷ್ಟದಲ್ಲಿದೆ ನಡೆಯುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ  ಸುಳ್ಳು ಸುದ್ದಿಗಳು ಹರಿದಾಡುತ್ತಿರುವುದರ  ಕುರಿತಾಗಿ ಸ್ಪಷ್ಟನೆ ನೀಡಿರುವ ಎಲ್ಐಸಿ ಇದು ಸಂಪೂರ್ಣ ಸುಳ್ಳು ಎಂದು ಹೇಳಿಕೆ ನೀಡಿದೆ. ಎಲ್ಐಸಿ ಭಾರಿ ನಷ್ಟದಲ್ಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸಂಪೂರ್ಣ ಸುಳ್ಳಾಗಿದೆ.ಪಾಲಿಸಿದಾರರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಸಂಸ್ಥೆಯ ಆರ್ಥಿಕ ಶಕ್ತಿ ಉತ್ತಮವಾಗಿದೆ ಎಂದುಹೇಳಲಾಗಿದೆ,ಸುಳ್ಳು…