ಭವಿಷ್ಯ

ಮಂಗಳವಾರದ ನಿಮ್ಮ ರಾಶಿ ಭವಿಷ್ಯ, ನಿಮಗೆ ಮಂಗಳವಾಗಲಿದೆಯೇ ನೋಡಿ…

222

ಇಂದು ಮಂಗಳವಾರ, 27/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಇಂದು ನಿಮ್ಮ ವರ್ತನೆ ನಿಮ್ಮ ಕುಟುಂಬದವರಿಗೆ ಅಸಮಧಾನ ತರಬಹುದು. ಮದುವೆ ವಿಚಾರದಲ್ಲಿ ಅನುಕೂಲ. ಆಸ್ತಿಯ ಖರೀದಿಯ ಬಗ್ಗೆ ಮಾತುಕತೆ ಉಂಟಾಗುವುದು. ನಿಮ್ಮ ಪ್ರಯಾಣದ ಯೋಜನೆಗಳ ವೆಳಾಪಟ್ಟಿ ಕೊನೆಗಳಿಗೆಯಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ, ಹಣಕಾಸಿನ ಅನುಕೂಲತೆ ಕೂಡಿಬರಲಿದೆ.

ವೃಷಭ:-

ಆರ್ಥಿಕ ಸ್ಥಿತಿ ಉತ್ತಮವಾಗಿರುವುದು. ಕೆಲಸಕಾರ್ಯಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ನಿಮ್ಮ ವೆಚ್ಚಗಳನ್ನು ನಿಯಂತ್ರಿಸಲು ಪ್ರಯತ್ನಿಸಿ ಮತ್ತು ಇಂದು ತುಂಬಾ ಖರ್ಚು ಮಾಡಬೇಡಿ. ವ್ಯವಹಾರಸ್ಥರಿಗೆ ಸಾಧಾರಣ ಫಲ ಕಂಡುಬರುವುದು.  ಅನೇಕ ದಿನಗಳಿಂದ ಬಾಕಿ ಇರುವ ಕಾರ್ಯಗಳು ಪೂರ್ಣಗೊಳ್ಳುವವು.

ಮಿಥುನ:

ನಿಮ್ಮ ತಪ್ಪುಗಳನ್ನು ಎತ್ತಿ ತೋರಿಸಿ,ನಿಮ್ಮ ಬಾಯಿಂದಲೇ ನೀವು ಸತ್ಯವನ್ನು ಹೇಳಿ ಪೇಚಿಗೆ ಸಿಲುಕುವಂತೆ ಮಾಡುವರು. ಒದಗಿಬರುವ ಅವಕಾಶಗಳನ್ನು ಕೈ ಚೆಲ್ಲದೇ ಬಳಸಿಕೊಳ್ಳಿ. ಪ್ರಯಾಣ ಮಾಡುವಾಗ ವಾಹನಗಳ ಬಗ್ಗೆ ಎಚ್ಚರಿಕೆ ಅಗತ್ಯ.

ಕಟಕ :-

ದೂರದ ಪ್ರಯಾಣ ಹೋಗಬೇಕಾಗಿ ಬರಲಿದೆ. ಬಂಧುಗಳೊಂದಿಗೆ ಕಲಹ ಸಾಧ್ಯತೆ. ನೀವು ಯಾರಾದ್ದಾದರೂ ಜೊತೆಗಿದ್ದಾಗ, ಜಗಳಗಳು ಅನಿವಾರ್ಯ. ಮೂರ್ಖರ ಜತೆ ವಾದ ಮಾಡಿ ಪ್ರಯೋಜನವಿಲ್ಲ. ನೀವು ನಿಮ್ಮ ಸಂಗಾತಿಯ ಜೊತೆ ವಾದಕ್ಕೆ ಬೀಳಬಹುದು.

 ಸಿಂಹ:

ಮಕ್ಕಳ ವಿಷಯದಲ್ಲಿ ಹರ್ಷದಾಯಕ ವಾರ್ತೆಗಳನ್ನು ಕೇಳುವಿರಿ. ದೂರ ಪ್ರಯಾಣ ಸಾಧ್ಯತೆ. ದೊಡ್ಡವರ ಆಶೀರ್ವಾದದಿಂದ ನಿಮ್ಮ ಕಾರ್ಯಗಳು ಕೈಗೂಡುವವು. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.

ಕನ್ಯಾ :-

ಗೃಹ ನಿರ್ಮಾಣ ಸಾಮಗ್ರಿಗಳ ವ್ಯಾಪಾರಸ್ಥರಿಗೆ ಲಾಭದ ನಿರೀಕ್ಷೆ. ಕುಟುಂಬ ಕಲಹದಿಂದ ಮನಸ್ಸಿಗೆ ಅಶಾಂತಿಯು ಉಂಟಾಗುವುದು. ಆಸ್ತಿ ವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ. ನೌಕರಸ್ಥರಿಗೆ ನಿರಾಳತೆ ದೊರೆಯಲಿದೆ. ಆತುರದ ನಿರ್ಧಾರಗಳನ್ನು ಕೈಗೊಳ್ಳಬೇಡಿ

ತುಲಾ:

ಹಿರಿಯರೊಂದಿಗೆ ವಾದ ವಿವಾದಗಳಿಗೆ ಮುಂದಾಗದಿರುವುದು ಒಳಿತು. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿರಿ. ಕೆಲಸದಲ್ಲಿನ ಒತ್ತಡಗಳು ಕಡಿಮೆಯಾಗಲಿವೆ. ಪ್ರಯಾಣದಲ್ಲಿ ಹೆಚ್ಚಿನ ಕಾರ್ಯಗಳು ನಡೆದರೂ ಸಮಾಧಾನ ಸಿಗಲಾರದು.

ವೃಶ್ಚಿಕ :-

ವ್ಯವಹಾರದಲ್ಲಿ ಕ್ಷಿಪ್ರ ನಿರ್ಧಾರದಿಂದಾಗಿ ಅಧಿಕ ಪ್ರಯೋಜನ. ನಿಮ್ಮ ಎಲ್ಲಾ ಕಾರ್ಯಗಳು ಸುಗಮವಾಗಿ ಸಾಗುವವು.ನಿಮ್ಮ ನಿಜವಾದ ಪ್ರಯತ್ನವಿದ್ದಲ್ಲಿ ದೇವರು ಒಲಿಯುವನು.

ಧನಸ್ಸು:

ಗುತ್ತಿಗೆ ಕೆಲಸ ನಿರ್ವಹಿಸುವವರಿಗೆ ಹೆಚ್ಚಿನ ಕೆಲಸಗಳು ದೊರೆಯಲಿವೆ. ನ್ಯಾಯಾಲಯದ ಕೆಲಸಗಳು ನಿಮ್ಮ ಪರವಾಗಿ ತಿರುವು ಪಡೆಯಲಿವೆ.ನೀವು ಹಣ ಕೂಡಿಡುವ ಪರಿಪಾಠವನ್ನು ಬೆಳೆಸಿಕೊಳ್ಳಬೇಕು. ಏಕೆಂದರೆ ನಿಮ್ಮ ಆಪತ್‌ ಕಾಲದಲ್ಲಿ ಯಾರೂ ನಿಮಗೆ ಸಹಾಯವನ್ನು ಮಾಡುವುದಿಲ್ಲ. ವಿಶ್ವಾಸದ ದುರುಪಯೋಗಕ್ಕೆ ಕಾರಣರಾಗದಿರಿ.

ಮಕರ :-

ಕೆಲಸ ಕಾರ್ಯಗಳು ಪ್ರಗತಿಪರವಾಗಿರುವುದರಿಂದಾಗಿ ಸಂತಸವನ್ನು ನೀಡುವವು. ಮನೆಯ ಕುಟುಂಬದ ಹಿರಿಯರ ಆರೋಗ್ಯದ ಕಡೆ ಗಮನ ನೀಡಿ.ದಿನಸಿ ವ್ಯಾಪಾರಿಗಳಿಗೆ ಲಾಭ. ವಾಗಿ ಕೂಡಾ ಸಂತಸದ ವಾತಾವರಣ ನೆಮ್ಮದಿ ತರುತ್ತದೆ. ಅವಿವಾಹಿತರಿಗೆ ಸಿಹಿಸುದ್ಧಿ. ವ್ಯಾಪಾರ ವ್ಯವಹಾರಗಳನ್ನು ಜಾಗ್ರತೆಯಿಂದ ನಡೆಸಬೇಕಾಗುತ್ತದೆ.

ಕುಂಭ:-

ಚಿನ್ನಾಭರಣಗಳ ಖರೀದಿಗೆ ಉತ್ತಮ ದಿನ. ಮನೆಯಲ್ಲಿ ಪರಿಸ್ಥಿತಿ ಉತ್ತಮ ಗೊಂಡು ಸಂತೋಷದ ವಾತಾವರಣ ಮೂಡಲಿದೆ. ಮಾತಿನಿಂದ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇರುವುದು. ಸಾಂಸಾರಿಕವಾಗಿ ಧರ್ಮಪತ್ನಿಯ ಸಹಕಾರದಿಂದ ಹಾಗೂ ಸೂಕ್ತ ಸಲಹೆಗಳಿಂದ ಮುನ್ನಡೆ ತರುತ್ತದೆ.ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ.

ಮೀನ:-

ಕ್ರೀಡಾಪಟುಗಳಿಗೆ ಹೆಸರು ಗಳಿಸುವ ಅವಕಾಶ. ಕೌಟುಂಬಿಕ ವಲಯದಲ್ಲಿ ಮುನ್ನಡೆ ಇರುತ್ತದೆ.ವಿದ್ಯಾರ್ಥಿಗಳು ಆಟಪಾಠಗಳಲ್ಲಿ ಪ್ರಗತಿ ಹೊಂದುವರು. ಆರ್ಥಿಕವಾಗಿ ತುಸು ಸಮಾಧಾನ ಸಿಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ನಿಮ್ಮ ಮಕ್ಕಳಿಗೆ ಕಿವಿ ಚುಚ್ಚುವುದಕ್ಕೆ ಮುಂಚೆ ಏನು ಮಾಡಬೇಕು ಗೊತ್ತಾ? ಈ ಲೇಖನಿ ಓದಿ…

    ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ.

  • ಸುದ್ದಿ

    ರೈಲ್ವೇ ಆಸ್ಪತ್ರೆಯಲ್ಲಿ ಕೇವಲ ಒಂದು ರೂಪಾಯಿಗೆ ಹೆರಿಗೆ ಮಾಡಿದ ವೈದ್ಯರು..ನಿಜಕ್ಕೂ ಅಚ್ಚರಿಯೇ ಹೌದು….!

    ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ನಿಲ್ದಾಣದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಇಂದು ಬೆಳಿಗ್ಗೆ ಮುಂಬೈನಲ್ಲಿ ನಡೆದಿದೆ. ಮುಂಬೈನ 1 ರೂಪಾಯಿ ಕ್ಲಿನಿಕ್ ಮಹಿಳೆಯ ನೆರವಿಗೆ ಬಂದಿದೆ. ಕರ್ಜನತ್ ನಿಂದ ಪರೇಲ್ ಗೆ ಹೊರಟಿದ್ದ ಸುಭಂತಿ ಪಾತ್ರಾ ಅವರಿಗೆ ಥಾಣೆಯ ಬಳಿ ಹೆರಿಗೆ ನೋವು ಕಾಣಿಸಿಕೊಂಡಿತ್ತು ಎಂದು ಒಂದು ರೂಪಾಯಿ ಚಿಕಿತ್ಸಾಲಯದ ಕಾರ್ಯನಿರ್ವಹಣಾಧಿಕಾರಿ  ಡಾ ರಾಹುಲ್ ಗುಳೆ ತಿಳಿಸಿದ್ದಾರೆ. ಸುಮಾರು 35 ಕಿ.ಮೀ. ದೂರದ ಊರಿಗೆ ಪ್ರಯಾಣಿಸುವಷ್ಟರಲ್ಲಿ ಸುಭಂತಿಗೆ ಹೆರಿಗೆ ನೋವು…

  • ಸುದ್ದಿ

    ಇ-ಕೆವೈಸಿ ಮಾಡಿಸದಿದ್ದರೆ ರದ್ದಾಗಲಿದೆ ರೇಷನ್ ಕಾರ್ಡ್: ಆಗಸ್ಟ್ ನಿಂದ ಸಿಗಲ್ಲ ಪಡಿತರ…!

    ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಭರವಸೆಯ ವ್ಯವಹಾರದ ಅವಕಾಶವೊಂದು ನಿಮಗೆ ಸಿಗುವುದು. ಇದರಿಂದ ಉತ್ತೇಜಿತರಾಗಿ ಈ ದಿನವನ್ನು ಬಹು ಖುಷಿಯಿಂದ ಕಳೆಯುವಿರಿ. ಆಹಾರ ವಿಹಾರದಲ್ಲಿ ಸ್ವಲ್ಪ ಎಚ್ಚರ ಇರಲಿ. ಪ್ರಯಾಣದಲ್ಲಿ ಸುಖ ಕಾಣುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಆರೋಗ್ಯ

    ನಿಮ್ಗೆ ಈ 5 ತಿಂಡಿ ತಿನಿಸುಗಳು ಬಹಳ ನಿದ್ದೆ ತರಿಸುತ್ತವೆ..!ತಿಳಿಯಲು ಈ ಲೇಖನ ಓದಿ..

    ನಾವು ಸಿಟಿಯ ಒಂದಿಲ್ಲೊಂದು ರೀತಿಯಾಗಿ ಈ ಡೇರಿ ಪ್ರಾಡಕ್ಟ್ಸ್ ನ ಬಳಸುತ್ತಲೇ ಇರುತ್ತೇವೆ, ಅದು ಹಾಲು ಆಗಿರಲಿ, ಮೊಸರಾಗಿರಲಿ, ಅಥವಾ ಹಾಲಿನ ಉತ್ಪನ್ನವಾದ ಯಾವುದೇ ರೀತಿಯ ಸಿಹಿ ತಿಂಡಿಯಾಗಿರಲಿ ಇವುಗಳು ಖಂಡಿತ ನಿಮಗೆ ನಿದ್ದೆ ತರಿಸುತ್ತವೆ.

  • ಸುದ್ದಿ

    ರಜನಿಕಾಂತ್ ಈ ಮಹಿಳೆಯನ್ನು ಈಗಲೂ ಹುಡುಕುತ್ತಿದ್ದಾರಂತೆ. ಯಾಕೆ ಗೊತ್ತಾ!

    ಮಲಯಾಳಂನ ಖ್ಯಾತ ನಟ ದೇವನ್ ಅವರ ಬಳಿ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ತನ್ನ ಹಳೆ ಪ್ರೇಮವನ್ನು ನೆನೆದು ಕಣ್ಣೀರಿಟ್ಟಿರಿಟ್ಟಿದ್ದಾರಂತೆ. ತೆರೆಯ ಮೇಲೆ ಲವರ್ ಬಾಯ್ ಅಗಿ ಮಿಂಚುತ್ತಿದ್ದ ರಜನಿ ಅವರ ನಿಜ ಜೀವನದಲ್ಲಿ ತನ್ನ ಮೊದಲ ಪ್ರೇಮ ವಿಫಲವಾಗಿತ್ತು. ಬೆಂಗಳೂರು ಟ್ರಾನ್ಸ್‌ಪೋರ್ಟ್ ಸರ್ವಿಸ್ ಬಸ್  ಕಂಡಕ್ಟರ್ ಆಗಿದ್ದ ಸಮಯದಲ್ಲಿ ರಜನಿ, ರೂಟ್ ನಂಬರ್ 10ಎ ಬಸ್ ನಲ್ಕಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ, ಎಂಬಿಬಿಎಸ್ ಓದುತ್ತಿರುವ ನಿರ್ಮಲಾ ಎಂಬುವವರನ್ನು ಪ್ರೀತಿಸುತ್ತಿದ್ದರು. ನಿರ್ಮಲಾ…