ಭವಿಷ್ಯ

ಮಂಗಳವಾರದ ನಿಮ್ಮ ರಾಶಿ ಭವಿಷ್ಯ, ನಿಮಗೆ ಮಂಗಳವಾಗಲಿದೆಯೇ ನೋಡಿ…

221

ಇಂದು ಮಂಗಳವಾರ, 27/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಇಂದು ನಿಮ್ಮ ವರ್ತನೆ ನಿಮ್ಮ ಕುಟುಂಬದವರಿಗೆ ಅಸಮಧಾನ ತರಬಹುದು. ಮದುವೆ ವಿಚಾರದಲ್ಲಿ ಅನುಕೂಲ. ಆಸ್ತಿಯ ಖರೀದಿಯ ಬಗ್ಗೆ ಮಾತುಕತೆ ಉಂಟಾಗುವುದು. ನಿಮ್ಮ ಪ್ರಯಾಣದ ಯೋಜನೆಗಳ ವೆಳಾಪಟ್ಟಿ ಕೊನೆಗಳಿಗೆಯಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ, ಹಣಕಾಸಿನ ಅನುಕೂಲತೆ ಕೂಡಿಬರಲಿದೆ.

ವೃಷಭ:-

ಆರ್ಥಿಕ ಸ್ಥಿತಿ ಉತ್ತಮವಾಗಿರುವುದು. ಕೆಲಸಕಾರ್ಯಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ನಿಮ್ಮ ವೆಚ್ಚಗಳನ್ನು ನಿಯಂತ್ರಿಸಲು ಪ್ರಯತ್ನಿಸಿ ಮತ್ತು ಇಂದು ತುಂಬಾ ಖರ್ಚು ಮಾಡಬೇಡಿ. ವ್ಯವಹಾರಸ್ಥರಿಗೆ ಸಾಧಾರಣ ಫಲ ಕಂಡುಬರುವುದು.  ಅನೇಕ ದಿನಗಳಿಂದ ಬಾಕಿ ಇರುವ ಕಾರ್ಯಗಳು ಪೂರ್ಣಗೊಳ್ಳುವವು.

ಮಿಥುನ:

ನಿಮ್ಮ ತಪ್ಪುಗಳನ್ನು ಎತ್ತಿ ತೋರಿಸಿ,ನಿಮ್ಮ ಬಾಯಿಂದಲೇ ನೀವು ಸತ್ಯವನ್ನು ಹೇಳಿ ಪೇಚಿಗೆ ಸಿಲುಕುವಂತೆ ಮಾಡುವರು. ಒದಗಿಬರುವ ಅವಕಾಶಗಳನ್ನು ಕೈ ಚೆಲ್ಲದೇ ಬಳಸಿಕೊಳ್ಳಿ. ಪ್ರಯಾಣ ಮಾಡುವಾಗ ವಾಹನಗಳ ಬಗ್ಗೆ ಎಚ್ಚರಿಕೆ ಅಗತ್ಯ.

ಕಟಕ :-

ದೂರದ ಪ್ರಯಾಣ ಹೋಗಬೇಕಾಗಿ ಬರಲಿದೆ. ಬಂಧುಗಳೊಂದಿಗೆ ಕಲಹ ಸಾಧ್ಯತೆ. ನೀವು ಯಾರಾದ್ದಾದರೂ ಜೊತೆಗಿದ್ದಾಗ, ಜಗಳಗಳು ಅನಿವಾರ್ಯ. ಮೂರ್ಖರ ಜತೆ ವಾದ ಮಾಡಿ ಪ್ರಯೋಜನವಿಲ್ಲ. ನೀವು ನಿಮ್ಮ ಸಂಗಾತಿಯ ಜೊತೆ ವಾದಕ್ಕೆ ಬೀಳಬಹುದು.

 ಸಿಂಹ:

ಮಕ್ಕಳ ವಿಷಯದಲ್ಲಿ ಹರ್ಷದಾಯಕ ವಾರ್ತೆಗಳನ್ನು ಕೇಳುವಿರಿ. ದೂರ ಪ್ರಯಾಣ ಸಾಧ್ಯತೆ. ದೊಡ್ಡವರ ಆಶೀರ್ವಾದದಿಂದ ನಿಮ್ಮ ಕಾರ್ಯಗಳು ಕೈಗೂಡುವವು. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.

ಕನ್ಯಾ :-

ಗೃಹ ನಿರ್ಮಾಣ ಸಾಮಗ್ರಿಗಳ ವ್ಯಾಪಾರಸ್ಥರಿಗೆ ಲಾಭದ ನಿರೀಕ್ಷೆ. ಕುಟುಂಬ ಕಲಹದಿಂದ ಮನಸ್ಸಿಗೆ ಅಶಾಂತಿಯು ಉಂಟಾಗುವುದು. ಆಸ್ತಿ ವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ. ನೌಕರಸ್ಥರಿಗೆ ನಿರಾಳತೆ ದೊರೆಯಲಿದೆ. ಆತುರದ ನಿರ್ಧಾರಗಳನ್ನು ಕೈಗೊಳ್ಳಬೇಡಿ

ತುಲಾ:

ಹಿರಿಯರೊಂದಿಗೆ ವಾದ ವಿವಾದಗಳಿಗೆ ಮುಂದಾಗದಿರುವುದು ಒಳಿತು. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿರಿ. ಕೆಲಸದಲ್ಲಿನ ಒತ್ತಡಗಳು ಕಡಿಮೆಯಾಗಲಿವೆ. ಪ್ರಯಾಣದಲ್ಲಿ ಹೆಚ್ಚಿನ ಕಾರ್ಯಗಳು ನಡೆದರೂ ಸಮಾಧಾನ ಸಿಗಲಾರದು.

ವೃಶ್ಚಿಕ :-

ವ್ಯವಹಾರದಲ್ಲಿ ಕ್ಷಿಪ್ರ ನಿರ್ಧಾರದಿಂದಾಗಿ ಅಧಿಕ ಪ್ರಯೋಜನ. ನಿಮ್ಮ ಎಲ್ಲಾ ಕಾರ್ಯಗಳು ಸುಗಮವಾಗಿ ಸಾಗುವವು.ನಿಮ್ಮ ನಿಜವಾದ ಪ್ರಯತ್ನವಿದ್ದಲ್ಲಿ ದೇವರು ಒಲಿಯುವನು.

ಧನಸ್ಸು:

ಗುತ್ತಿಗೆ ಕೆಲಸ ನಿರ್ವಹಿಸುವವರಿಗೆ ಹೆಚ್ಚಿನ ಕೆಲಸಗಳು ದೊರೆಯಲಿವೆ. ನ್ಯಾಯಾಲಯದ ಕೆಲಸಗಳು ನಿಮ್ಮ ಪರವಾಗಿ ತಿರುವು ಪಡೆಯಲಿವೆ.ನೀವು ಹಣ ಕೂಡಿಡುವ ಪರಿಪಾಠವನ್ನು ಬೆಳೆಸಿಕೊಳ್ಳಬೇಕು. ಏಕೆಂದರೆ ನಿಮ್ಮ ಆಪತ್‌ ಕಾಲದಲ್ಲಿ ಯಾರೂ ನಿಮಗೆ ಸಹಾಯವನ್ನು ಮಾಡುವುದಿಲ್ಲ. ವಿಶ್ವಾಸದ ದುರುಪಯೋಗಕ್ಕೆ ಕಾರಣರಾಗದಿರಿ.

ಮಕರ :-

ಕೆಲಸ ಕಾರ್ಯಗಳು ಪ್ರಗತಿಪರವಾಗಿರುವುದರಿಂದಾಗಿ ಸಂತಸವನ್ನು ನೀಡುವವು. ಮನೆಯ ಕುಟುಂಬದ ಹಿರಿಯರ ಆರೋಗ್ಯದ ಕಡೆ ಗಮನ ನೀಡಿ.ದಿನಸಿ ವ್ಯಾಪಾರಿಗಳಿಗೆ ಲಾಭ. ವಾಗಿ ಕೂಡಾ ಸಂತಸದ ವಾತಾವರಣ ನೆಮ್ಮದಿ ತರುತ್ತದೆ. ಅವಿವಾಹಿತರಿಗೆ ಸಿಹಿಸುದ್ಧಿ. ವ್ಯಾಪಾರ ವ್ಯವಹಾರಗಳನ್ನು ಜಾಗ್ರತೆಯಿಂದ ನಡೆಸಬೇಕಾಗುತ್ತದೆ.

ಕುಂಭ:-

ಚಿನ್ನಾಭರಣಗಳ ಖರೀದಿಗೆ ಉತ್ತಮ ದಿನ. ಮನೆಯಲ್ಲಿ ಪರಿಸ್ಥಿತಿ ಉತ್ತಮ ಗೊಂಡು ಸಂತೋಷದ ವಾತಾವರಣ ಮೂಡಲಿದೆ. ಮಾತಿನಿಂದ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇರುವುದು. ಸಾಂಸಾರಿಕವಾಗಿ ಧರ್ಮಪತ್ನಿಯ ಸಹಕಾರದಿಂದ ಹಾಗೂ ಸೂಕ್ತ ಸಲಹೆಗಳಿಂದ ಮುನ್ನಡೆ ತರುತ್ತದೆ.ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ.

ಮೀನ:-

ಕ್ರೀಡಾಪಟುಗಳಿಗೆ ಹೆಸರು ಗಳಿಸುವ ಅವಕಾಶ. ಕೌಟುಂಬಿಕ ವಲಯದಲ್ಲಿ ಮುನ್ನಡೆ ಇರುತ್ತದೆ.ವಿದ್ಯಾರ್ಥಿಗಳು ಆಟಪಾಠಗಳಲ್ಲಿ ಪ್ರಗತಿ ಹೊಂದುವರು. ಆರ್ಥಿಕವಾಗಿ ತುಸು ಸಮಾಧಾನ ಸಿಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ‘ಉಪ್ಪಿನ ಕಾಯಿ’ ಪ್ರಿಯರೇ ಜಾಸ್ತಿ ಉಪ್ಪಿನ ಕಾಯಿ ತಿಂದ್ರೆ, ಏನಾಗುತ್ತೆ ಗೊತ್ತಾ..?

    ಉಪ್ಪಿನ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರಿ ಬಿಡುತ್ತೆ ,ಅದರಲ್ಲೂ ಉಟಕ್ಕೆ ಉಪ್ಪಿನ ಕಾಯಿ ಬೇಕೆ ಬೇಕು , ಊಟಕ್ಕೆ ತಕ್ಕ ಉಪ್ಪಿನಕಾಯಿ ಇದ್ದರೆ ಊಟ ರುಚಿಕರವಾಗಿರುತ್ತದೆ. ಯಾವುದೇ ಸಮಾರಂಭ ಔತಣಕೂಟದ ಎಲೆಯಲ್ಲಿ ಊಟಕ್ಕೆ ಉಪ್ಪಿನ ಕಾಯಿ ಇಲ್ಲ ಅಂದ್ರೆ ಅ ಭೋಜನ ಅಸಂಪೂರ್ಣ ಎನ್ನಿಸುತ್ತದೆ.

  • ರಾಜಕೀಯ

    ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ…..!

    ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಗ್ದಾಳಿ ಪ್ರತಿದಾಳಿ ಮತ್ತಷ್ಟು ತೀವ್ರಗೊಂಡಿದೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ ಇವು ಹೊಟ್ಟೆಕಿಚ್ಚಿನಿಂದ ಕೂಡಿದ ಕಿಡಿಗೇಡಿತನದ ಹೇಳಿಕೆಗಳು ಎಂದು ಖಾರವಾಗಿಯೇ ಸಾಮಾಜಿಕ ಜಾಲ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿಯನ್ನು ಕಟ್ಟಿಹಾಕಿದೆ ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳ ಬಗ್ಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಂದಲೇ ಕುಖ್ಯಾತರು. ದೇವರು ಅವರಿಗೆ ಒಳ್ಳೆಯ…

  • ಸುದ್ದಿ

    ಭರ್ಜರಿ ಶಾಪಿಂಗ್ ಸ್ಟಾರ್ಟ್ ಮಾಡಿದ ಯಶ್ ಮತ್ತು ರಾಧಿಕಾ ಪಂಡಿತ್ ಇದಕ್ಕೆ ಕಾರಣ? ಇಲ್ಲಿದೆ ನೋಡಿ,.!

    ರಾಧಿಕಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು . ಅಕ್ಟೋಬರ್ ಮೊದಲ ವಾರದಲ್ಲಿ ಅವರ ಮನೆಗೆ ತುಂಟ ಕೃಷ್ಣನೋ ಅಥವಾ ಮಹಾಲಕ್ಷ್ಮೀಯೋ ಬರುತ್ತಾರೆ. ಇತ್ತೀಚೆಗಷ್ಟೇ ಯಶ್ ಮಗಳ ಜೊತೆಗಿನ ವಿಡಿಯೋ ಶೇರ್ ಮಾಡಿದ್ದರು. ಆ ವಿಡಿಯೋದಲ್ಲಿ ಆಯ್ರಾ ಕ್ಯಾಮೆರಾ ನೋಡಿ, ತಂದೆ ಯಶ್ ಹೇಳಿಕೊಟ್ಟಂತೆ ಟಾಟಾ ಮಾಡುತ್ತಿದ್ದಳು. ಇವಳ ಚೂಟಿತನ ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದರು.  ಸ್ಯಾಂಡಲ್‌ವುಡ್‌ನ ಬೆಸ್ಟ್ಬ್ಯೂಟಿಫುಲ್ ದಂಪತಿ ಯಶ್ ಹಾಗೂರಾಧಿಕಾ ಪಂಡಿತ್. ಮದುವೆಯ ನಂತರದಲ್ಲಿರಾಧಿಕಾ ಸದ್ಯ ಸಿನಿಮಾಗಳಿಂದ ದೂರವಿದ್ದಾರೆ.ಯಶ್ ‘ಕೆಜಿಎಫ್ 2’ ಸಿನೆಮಾದಲ್ಲಿ ಬಿಜಿಯಿದ್ದಾರೆ. ಇವರಿಬ್ಬರಿಗೂ ಮುದ್ದಾದ ಆಯ್ರಾ ಎಂಬಮಗಳಿರೋದು ಗೊತ್ತೇ ಇದೆ. ಆಗಾಗದಂಪತಿ…

  • ಸಿನಿಮಾ

    ಅಭಿಮಾನಿಗಳು ಕೊಟ್ಟ ಹೆಸರನ್ನೇ ತಮ್ಮ ಮಗಳಿಗೆ ಇಡಲಿದ್ದಾರೆ ದಂಪತಿ ಯಶ್ ಹಾಗೂ ರಾಧಿಕಾ ಪಂಡಿತ್!ಆ ಹೆಸರೇನು ಗೊತ್ತಾ?

    ಸ್ಯಾಂಡಲ್ವುಡ್ ತಾರಾ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಜೀವನದಲ್ಲಿ ಮುದ್ದಾದ ಹೆಣ್ಣು ಮಗು ಎಂಟ್ರಿ ಕೊಟ್ಟು ಮೂರು ತಿಂಗಳಾಗಿದೆ. ಮೂರು ತಿಂಗಳಾದರೂ ಯಶ್ ಹಾಗೂ ರಾಧಿಕಾ ತಮ್ಮ ಮಗಳ ನಾಮಕರಣವನ್ನು ಮಾಡಲಿಲ್ಲ. ಈಗ ಅಭಿಮಾನಿಗಳು ಸೂಚಿಸಿದ ಹೆಸರನ್ನೇ ತಮ್ಮ ಮಗಳಿಗೆ ನಾಮಕರಣ ಮಾಡುತ್ತಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಹೆಣ್ಣು ಮಗುವಿಗೆ ತಂದೆ-ತಾಯಿ ಆಗಿದ್ದಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮಗಳಿಗೆ ಹೆಸರು ಸೂಚಿಸಲು ಪ್ರಾರಂಭಿಸಿದ್ದಾರೆ. ಯಶ್…

  • ಸುದ್ದಿ

    ತನ್ನ ಹೆಂಡತಿಯ ರೂಮಿನಲ್ಲಿ ಆಕೆಯ ಪ್ರಿಯತಮನನ್ನು ನೋಡಿದ ಗಂಡ ಮಾಡಿದ್ದೇನು ಗೊತ್ತಾ?

    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ಪ್ರಿಯತಮನಿಗೆ ಬೆಂಕಿ ಹಚ್ಚಿರುವ ಘಟನೆ ತೆಲಂಗಾಣದ ಚೆವೆಲ್ಲಾದಲ್ಲಿ ನಡೆದಿದೆ.  ಗಂಡ ರವಿ, ಪತ್ನಿ ಭಾಗ್ಯಲಕ್ಷ್ಮಿ ಮತ್ತು ಆಕೆಯ ಪ್ರಿಯತಮನನ್ನು ರೂಮಿನಲ್ಲಿ ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸದ್ಯಕ್ಕೆ ಇಬ್ಬರ ಸ್ಥಿತಿ ಗಂಭೀರಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ವರ್ಷಗಳ ಹಿಂದೆ ಭಾಗ್ಯಲಕ್ಷ್ಮಿ ಮತ್ತು ರವಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇಬ್ಬರ ಸಂಸಾರಿಕ ಜೀವನ ಚೆನ್ನಾಗಿ ನಡೆಯುತ್ತಿತ್ತು. ಆದರೆ ಕೆಲವು ತಿಂಗಳ…

  • ದೇಶ-ವಿದೇಶ

    ಇದು ಜಗತ್ತಿನ ಅತ್ಯಂತ ಸೋಮಾರಿ ರಾಷ್ಟ್ರ..! ಆ ರಾಷ್ಟ್ರ ಯಾವುದು ಗೊತ್ತಾ?

    ನಾವು ಮನೆಗಳಲ್ಲಿ ಕೆಲಸ ಮಾಡದ, ಉದ್ಯೋಗ ಮಾಡದೆ ತಿಂದು ಕೆಲಸವಿಲ್ಲದೇ ತಿರುಗುವವರನ್ನು, ಸೋಮಾರಿ ಎಂದು ಮನೆಗಳಲ್ಲಿ ಹಾಸ್ಯ ಮಾಡುವುದುಂಟು. ಹೀಗೆ ಸೋಮಾರಿತನದಿಂದ ಇರುವವರು ಎಲ್ಲಾ ಕಡೆ ಸಿಗುತ್ತಾರೆ. ಅದಕ್ಕಾಗಿಯೇ ವಿಶ್ವವಿದ್ಯಾನಿಲಯವೊಂದು ವಿಶ್ವದ ಸೋಮಾರಿಗಳ ಬಗ್ಗೆ ಅಧ್ಯಯನ ನಡೆಸಿದ್ದು ಅದರ ವಿವರಣೆಯನ್ನು ಕೊಟ್ಟಿದೆ.