ಭವಿಷ್ಯ

ಮಂಗಳವಾರದ ನಿಮ್ಮ ರಾಶಿ ಭವಿಷ್ಯ, ನಿಮಗೆ ಮಂಗಳವಾಗಲಿದೆಯೇ ನೋಡಿ…

222

ಇಂದು ಮಂಗಳವಾರ, 27/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಇಂದು ನಿಮ್ಮ ವರ್ತನೆ ನಿಮ್ಮ ಕುಟುಂಬದವರಿಗೆ ಅಸಮಧಾನ ತರಬಹುದು. ಮದುವೆ ವಿಚಾರದಲ್ಲಿ ಅನುಕೂಲ. ಆಸ್ತಿಯ ಖರೀದಿಯ ಬಗ್ಗೆ ಮಾತುಕತೆ ಉಂಟಾಗುವುದು. ನಿಮ್ಮ ಪ್ರಯಾಣದ ಯೋಜನೆಗಳ ವೆಳಾಪಟ್ಟಿ ಕೊನೆಗಳಿಗೆಯಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ, ಹಣಕಾಸಿನ ಅನುಕೂಲತೆ ಕೂಡಿಬರಲಿದೆ.

ವೃಷಭ:-

ಆರ್ಥಿಕ ಸ್ಥಿತಿ ಉತ್ತಮವಾಗಿರುವುದು. ಕೆಲಸಕಾರ್ಯಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ನಿಮ್ಮ ವೆಚ್ಚಗಳನ್ನು ನಿಯಂತ್ರಿಸಲು ಪ್ರಯತ್ನಿಸಿ ಮತ್ತು ಇಂದು ತುಂಬಾ ಖರ್ಚು ಮಾಡಬೇಡಿ. ವ್ಯವಹಾರಸ್ಥರಿಗೆ ಸಾಧಾರಣ ಫಲ ಕಂಡುಬರುವುದು.  ಅನೇಕ ದಿನಗಳಿಂದ ಬಾಕಿ ಇರುವ ಕಾರ್ಯಗಳು ಪೂರ್ಣಗೊಳ್ಳುವವು.

ಮಿಥುನ:

ನಿಮ್ಮ ತಪ್ಪುಗಳನ್ನು ಎತ್ತಿ ತೋರಿಸಿ,ನಿಮ್ಮ ಬಾಯಿಂದಲೇ ನೀವು ಸತ್ಯವನ್ನು ಹೇಳಿ ಪೇಚಿಗೆ ಸಿಲುಕುವಂತೆ ಮಾಡುವರು. ಒದಗಿಬರುವ ಅವಕಾಶಗಳನ್ನು ಕೈ ಚೆಲ್ಲದೇ ಬಳಸಿಕೊಳ್ಳಿ. ಪ್ರಯಾಣ ಮಾಡುವಾಗ ವಾಹನಗಳ ಬಗ್ಗೆ ಎಚ್ಚರಿಕೆ ಅಗತ್ಯ.

ಕಟಕ :-

ದೂರದ ಪ್ರಯಾಣ ಹೋಗಬೇಕಾಗಿ ಬರಲಿದೆ. ಬಂಧುಗಳೊಂದಿಗೆ ಕಲಹ ಸಾಧ್ಯತೆ. ನೀವು ಯಾರಾದ್ದಾದರೂ ಜೊತೆಗಿದ್ದಾಗ, ಜಗಳಗಳು ಅನಿವಾರ್ಯ. ಮೂರ್ಖರ ಜತೆ ವಾದ ಮಾಡಿ ಪ್ರಯೋಜನವಿಲ್ಲ. ನೀವು ನಿಮ್ಮ ಸಂಗಾತಿಯ ಜೊತೆ ವಾದಕ್ಕೆ ಬೀಳಬಹುದು.

 ಸಿಂಹ:

ಮಕ್ಕಳ ವಿಷಯದಲ್ಲಿ ಹರ್ಷದಾಯಕ ವಾರ್ತೆಗಳನ್ನು ಕೇಳುವಿರಿ. ದೂರ ಪ್ರಯಾಣ ಸಾಧ್ಯತೆ. ದೊಡ್ಡವರ ಆಶೀರ್ವಾದದಿಂದ ನಿಮ್ಮ ಕಾರ್ಯಗಳು ಕೈಗೂಡುವವು. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.

ಕನ್ಯಾ :-

ಗೃಹ ನಿರ್ಮಾಣ ಸಾಮಗ್ರಿಗಳ ವ್ಯಾಪಾರಸ್ಥರಿಗೆ ಲಾಭದ ನಿರೀಕ್ಷೆ. ಕುಟುಂಬ ಕಲಹದಿಂದ ಮನಸ್ಸಿಗೆ ಅಶಾಂತಿಯು ಉಂಟಾಗುವುದು. ಆಸ್ತಿ ವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ. ನೌಕರಸ್ಥರಿಗೆ ನಿರಾಳತೆ ದೊರೆಯಲಿದೆ. ಆತುರದ ನಿರ್ಧಾರಗಳನ್ನು ಕೈಗೊಳ್ಳಬೇಡಿ

ತುಲಾ:

ಹಿರಿಯರೊಂದಿಗೆ ವಾದ ವಿವಾದಗಳಿಗೆ ಮುಂದಾಗದಿರುವುದು ಒಳಿತು. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿರಿ. ಕೆಲಸದಲ್ಲಿನ ಒತ್ತಡಗಳು ಕಡಿಮೆಯಾಗಲಿವೆ. ಪ್ರಯಾಣದಲ್ಲಿ ಹೆಚ್ಚಿನ ಕಾರ್ಯಗಳು ನಡೆದರೂ ಸಮಾಧಾನ ಸಿಗಲಾರದು.

ವೃಶ್ಚಿಕ :-

ವ್ಯವಹಾರದಲ್ಲಿ ಕ್ಷಿಪ್ರ ನಿರ್ಧಾರದಿಂದಾಗಿ ಅಧಿಕ ಪ್ರಯೋಜನ. ನಿಮ್ಮ ಎಲ್ಲಾ ಕಾರ್ಯಗಳು ಸುಗಮವಾಗಿ ಸಾಗುವವು.ನಿಮ್ಮ ನಿಜವಾದ ಪ್ರಯತ್ನವಿದ್ದಲ್ಲಿ ದೇವರು ಒಲಿಯುವನು.

ಧನಸ್ಸು:

ಗುತ್ತಿಗೆ ಕೆಲಸ ನಿರ್ವಹಿಸುವವರಿಗೆ ಹೆಚ್ಚಿನ ಕೆಲಸಗಳು ದೊರೆಯಲಿವೆ. ನ್ಯಾಯಾಲಯದ ಕೆಲಸಗಳು ನಿಮ್ಮ ಪರವಾಗಿ ತಿರುವು ಪಡೆಯಲಿವೆ.ನೀವು ಹಣ ಕೂಡಿಡುವ ಪರಿಪಾಠವನ್ನು ಬೆಳೆಸಿಕೊಳ್ಳಬೇಕು. ಏಕೆಂದರೆ ನಿಮ್ಮ ಆಪತ್‌ ಕಾಲದಲ್ಲಿ ಯಾರೂ ನಿಮಗೆ ಸಹಾಯವನ್ನು ಮಾಡುವುದಿಲ್ಲ. ವಿಶ್ವಾಸದ ದುರುಪಯೋಗಕ್ಕೆ ಕಾರಣರಾಗದಿರಿ.

ಮಕರ :-

ಕೆಲಸ ಕಾರ್ಯಗಳು ಪ್ರಗತಿಪರವಾಗಿರುವುದರಿಂದಾಗಿ ಸಂತಸವನ್ನು ನೀಡುವವು. ಮನೆಯ ಕುಟುಂಬದ ಹಿರಿಯರ ಆರೋಗ್ಯದ ಕಡೆ ಗಮನ ನೀಡಿ.ದಿನಸಿ ವ್ಯಾಪಾರಿಗಳಿಗೆ ಲಾಭ. ವಾಗಿ ಕೂಡಾ ಸಂತಸದ ವಾತಾವರಣ ನೆಮ್ಮದಿ ತರುತ್ತದೆ. ಅವಿವಾಹಿತರಿಗೆ ಸಿಹಿಸುದ್ಧಿ. ವ್ಯಾಪಾರ ವ್ಯವಹಾರಗಳನ್ನು ಜಾಗ್ರತೆಯಿಂದ ನಡೆಸಬೇಕಾಗುತ್ತದೆ.

ಕುಂಭ:-

ಚಿನ್ನಾಭರಣಗಳ ಖರೀದಿಗೆ ಉತ್ತಮ ದಿನ. ಮನೆಯಲ್ಲಿ ಪರಿಸ್ಥಿತಿ ಉತ್ತಮ ಗೊಂಡು ಸಂತೋಷದ ವಾತಾವರಣ ಮೂಡಲಿದೆ. ಮಾತಿನಿಂದ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇರುವುದು. ಸಾಂಸಾರಿಕವಾಗಿ ಧರ್ಮಪತ್ನಿಯ ಸಹಕಾರದಿಂದ ಹಾಗೂ ಸೂಕ್ತ ಸಲಹೆಗಳಿಂದ ಮುನ್ನಡೆ ತರುತ್ತದೆ.ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ.

ಮೀನ:-

ಕ್ರೀಡಾಪಟುಗಳಿಗೆ ಹೆಸರು ಗಳಿಸುವ ಅವಕಾಶ. ಕೌಟುಂಬಿಕ ವಲಯದಲ್ಲಿ ಮುನ್ನಡೆ ಇರುತ್ತದೆ.ವಿದ್ಯಾರ್ಥಿಗಳು ಆಟಪಾಠಗಳಲ್ಲಿ ಪ್ರಗತಿ ಹೊಂದುವರು. ಆರ್ಥಿಕವಾಗಿ ತುಸು ಸಮಾಧಾನ ಸಿಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತಾಮ್ರ ಬಳಸುವುದರಿಂದ ಆಗುವ ಉಪಯೋಗಗಳೇನು ಗೊತ್ತಾ? ತಾಮ್ರದಲ್ಲಿದೆ ರೋಗಮುಕ್ತ ಗುಣಗಳು..!

    ಇದು ಪ್ಲಾಸ್ಟಿಕ್ ಯುಗ ಮನುಷ್ಯ ಪ್ರತಿಯೊಂದಕ್ಕೂ ಪ್ಲಾಸ್ಟಿಕ್ ಮೇಲೆ ಅವಲಂಬಿತವಾಗಿದ್ದಾರೆ. ತಾನು ಬಳಸುವ ದಿನನಿತ್ಯದ ಹಲವು ವಸ್ತುಗಳು ಅಷ್ಟಲ್ಲದೆ ತಿನ್ನಲು, ಕುಡಿಯಲು ಬಳಸುವ ವಸ್ತು ಸಹ ಪ್ಲಾಸ್ಟಿಕ್ ನಿಂದಲೇ ಕೂಡಿರುತ್ತದೆ. ಆದರೆ ಈ ಪ್ಲಾಸ್ಟಿಕ್ ಮನುಷ್ಯನ ಜೀವಕ್ಕೆ ಮುಂದೊಂದು ದಿನ ಕುತ್ತು ತರುತ್ತದೆ ಎಂದು ತಿಳಿದು ಎಚ್ಚೆತ್ತುಕೊಳ್ಳುವುದು ಬಹಳ ಮುಖ್ಯ. ಮನುಷ್ಯನ ಆರೋಗ್ಯ ಹದಗೆಡದಂತೆ ಕಾಪಾಡಿಕೊಳ್ಳಬೇಕಾದ ಸಣ್ಣದೊಂದು ಈ ಸಲಹೆಯನ್ನು ಅನುಸರಿಸಿ. ಏನಾದು ಅಂತೀರಾ? ಹೌದು ನಾವು ದಿನನಿತ್ಯ ಬಳಸುವ ಕೆಲವು ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ,…

  • ಆರೋಗ್ಯ

    ಕೋಳಿಯನ್ನು ತಿನ್ನುವುದರಿಂದ ಆಗುವ ಪರಿಣಾಮಗಳ ಬಗ್ಗೆ ನಿಮಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ …

    ದೇಹವು ಹೊಸ ಪ್ರೋಟೀನ್‌ನ್ನು ಉತ್ಪತ್ತಿ ಮಾಡಲು(ಪ್ರೋಟೀನ್ ಪ್ರತಿಧಾರಣ) ಮತ್ತು ಹಾನಿಗೊಂಡ ಪ್ರೋಟೀನ್‌ಗಳನ್ನು ಮರುಪೂರಣ ಮಾಡಲು(ನಿರ್ವಹಣೆ) ಅಮೈನೋ ಆಮ್ಲದ ಅಗತ್ಯವಿದೆv ಆಹಾರದಲ್ಲಿನ ಪ್ರೋಟೀನ್ ಮೂಲಗಳೆಂದರೆ ಮಾಂಸ, ತೋಫು ಮತ್ತು ಇತರ ಸೋಯಾ ಪದಾರ್ಥಗಳು

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 29 ಜನವರಿ, 2019 ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆ ನೀವು ನಿಮ್ಮ ಭಾವನೆಗಳನ್ನು ಪರಿಣಾಮಕಾರಿಯಾಗಿ…

  • ಸುದ್ದಿ

    ಅಸ್ಸಾಂನ 700 ಹಳ್ಳಿ ಜಲಾವೃತ-ಅಪಾಯದ ತುದಿ ಮೀರಿ ಹರಿಯುತ್ತಿರೋ ಬ್ರಹ್ಮಪುತ್ರ…..ಜನ ಜೀವನ ಅಸ್ತ ವ್ಯಸ್ತ….!

    ಮಳೆರಾಯನ ಆರ್ಭಟಕ್ಕೆ ಬ್ರಹ್ಮಪುತ್ರ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಅಸ್ಸಾಂನಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 17 ಜಿಲ್ಲೆಗಳ 700 ಹಳ್ಳಿಗಳು ಜಲಾವೃತವಾಗಿದ್ದು, ಸುಮಾರು 4 ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಭಾರೀ ಭೂಕುಸಿತ ಮುಂದುವರಿದಿದ್ದು, ಮೂರು ಜನರು ಸಾವನ್ನಪ್ಪಿದ್ದಾರೆ. ಧೆಮಾಜಿ, ಲಖಿಂಪುರ್, ಬಿಸ್ವಾನಾಥ್, ಜೋರ್ಹತ್, ದಾರಂಗ್, ಬಾರ್ಪೆಟಾ, ನಲ್ಬಾರಿ, ಮಜುಲಿ, ಚಿರಾಂಗ್, ದಿಬ್ರುಗರ್ಹ್ ಮತ್ತು ಗೋಲಘಾಟ್ ಸೇರಿದಂತೆ ಒಟ್ಟು 17 ಜಿಲ್ಲೆಗಳ 700 ಹಳ್ಳಿಗಳಲ್ಲಿ ಪ್ರವಾಹ ಉಂಟಾಗಿದೆ. ಸುಮಾರು ನಾಲ್ಕು ಲಕ್ಷ…

  • ಸುದ್ದಿ

    ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಒಂದೇ ವರ್ಷದೊಳಗೆ ಕಳೆದುಕೊಂಡ ದೆಹಲಿ……!

    ಸುಶ್ಮಾ ಸ್ವರಾಜ್ ಮಂಗಳವಾರ ರಾತ್ರಿ ನಿಧನರಾಗುವುದರೊಂದಿಗೆ ರಾಷ್ಟ್ರೀಯ ರಾಜಧಾನಿ ದಿಲ್ಲಿ ಒಂದು ವರ್ಷದೊಳಗೆ ತನ್ನ ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಕಳೆದುಕೊಂಡಂತಾಗಿದೆ. 1998ರ ಅಕ್ಟೋಬರ್-ಡಿಸೆಂಬರ್‌ನಲ್ಲಿ ಅಲ್ಪ ಅವಧಿಗೆ ದಿಲ್ಲಿಯ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಸುಶ್ಮಾ ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ಮೃತಪಟ್ಟರು.  ಮೂರು ಬಾರಿ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ, ಕಾಂಗ್ರೆಸ್‌ನ ಹಿರಿಯ ನಾಯಕಿ ಶೀಲಾ ದೀಕ್ಷಿತ್ ಈ ವರ್ಷದ ಜುಲೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ದೀಕ್ಷಿತ್ ಹಾಗೂ ಸುಶ್ಮಾ ಸ್ವರಾಜ್ ಒಂದು ತಿಂಗಳ ಅಂತರದಲ್ಲಿ ವಿಧಿವಶರಾಗಿದ್ದಾರೆ. 1993ರಿಂದ 96ರ ತನಕ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ…

  • ಸುದ್ದಿ

    ಶ್ರೀಗಳು ಸಾಯುವ ಮುನ್ನ ಕೇಳಿದ ಕೊನೆಯ ಆಸೆ ಏನು ಗೊತ್ತಾ..?ಈ ಕಣ್ಣೀರಿನ ಸುದ್ದಿ ನೋಡಿ…

    ತ್ರೀವಿಧ ದಾಸೋಹದ ಮೂಲಕ ಸಾಮಾಜಿಕ ಕಳಕಳಿ ಮೆರೆದಿದ್ದ ಸಿದ್ದಗಂಗಾ ಶ್ರೀಗಳು ಶಿವೈಕ್ಯದಲ್ಲಿಯೂ ಮಾನವೀಯತೆ ಮೆರೆದಿದ್ದಾರೆ. ಪರಮಪೂಜ್ಯ ಶ್ರೀ ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ಕಾರಣ ಇಡೀ ನಡೇ ಕಣ್ಣೀರಿನಲ್ಲಿ ಮುಳುಗಿದೆ.. ಬಡವರ ಬಂಧು.. ಜಾತಿ ಧರ್ಮ ಮತ ಬೇದ ಮಾಡದೇ ಕಾಯಕ ಯೋಗಿ ಪವಾಡ ಪುರುಷ ಶಿವಯೋಗಿ.. ಸಿದ್ದ ಪುರುಷ ಮಹಾಸ್ವಾಮಿಗಳು ಇಂದು ಬೆಳಿಗ್ಗೆ 11.44 ರಲ್ಲಿ ಭಕ್ತ ಕೋಟಿ ಸಾಗರವನ್ನು ಅಗಲಿದ್ದಾರೆ.. ಶಿವಕುಮಾರ ಸ್ವಾಮೀಜಿಗಳಿಗೆ ಮಕ್ಕಳೆಂದರೇ ಜಾಸ್ತಿ ಮಮತೆ. ಬದುಕಿನ ಹೆಚ್ಚಿನ ಕ್ಷಣಗಳನ್ನು ಶ್ರೀಗಳು ಮಕ್ಕಳ ಜೊತೆ…