ಸ್ಪೂರ್ತಿ

ಮಕ್ಕಳಿಗೆ ಹಳ್ಳಿ ಸೊಗಡಿನ ಅರಿವು ಮೂಡಿಸಲು ಸುನಿತಾ ಮಂಜುನಾಥ್ ರವರು ತಮ್ಮ ಶಾಲೆಯಲ್ಲಿ ಮಾಡಿದ ಪ್ರಯತ್ನಕ್ಕೆ ಹ್ಯಾಟ್ಸ್ ಆಫ್…

1284

ಹೌದು, ಸುನಿತಾ ಮಂಜುನಾಥ್ ರವರ ನೂತನ ಪ್ರಯತ್ನದ ಫಲವಾಗಿ ರಾಧಾಕೃಷ್ಣ ಪಬ್ಲಿಕ್ ಶಾಲೆಯ ತುಂಬಾ ಹಳ್ಳಿಯ ವಾತಾವರಣ ನಿರ್ಮಾಣವಾಗಿತ್ತು..

ಆಧುನಿಕ ಜೀವನ ಶೈಲಿಯಲ್ಲಿ ಸಂಸ್ಕೃತಿ ಮರೆತು ಹೋಗಿರುವ ಸಂದರ್ಭವಿದು.. ಆದರೆ ತಮ್ಮ ಶಾಲೆಯ ಮಕ್ಕಳಿಗೆ ಹಳ್ಳಿಯ ಜೀವನ.. ಅಲ್ಲಿನ ರೈತರು.. ಗೋಮಾತೆ, ಹಳ್ಳಿಗಳಲ್ಲಿ ಆಚರಿಸುವ ಹಬ್ಬದ ರೀತಿ ನೀತಿಗಳ ಪರಿಚಯ ಮಾಡಲು ನಾಗಶೆಟ್ಟಿಹಳ್ಳಿಯ ತಮ್ಮ ಶಾಲೆಯಲ್ಲಿ ಅದ್ಭುತವಾಗಿ ಹಳ್ಳಿಯನ್ನೇ ಮರುನಿರ್ಮಾಣ ಮಾಡಿದ್ದರು..

ಶಾಲೆಯ ತುಂಬೆಲ್ಲಾ ಸಾಂಸ್ಕೃತಿಕ ಉಡುಗೆ ತೊಡುಗೆಯಲ್ಲಿ ಮಿಂಚಿದ ಮಕ್ಕಳು.. ಅಲ್ಲಲ್ಲಿ ಕಬ್ಬಿನ ರಾಶಿ.. ತರಕಾರಿ ಅಂಗಡಿಗಳ ಅಣುಕುಗಳು‌… ಭಕ್ತಿಯಿಂದ ನಡೆದ ಗೋಪೂಜೆ.. ಅಂಗಳ ತುಂಬೆಲ್ಲಾ ಸಗಣಿಯಿಂದ ತಾರಸಿ ಬಿಟ್ಟ ರಂಗೋಲಿಗಳು.. ಮಡಿಕೆಯಲ್ಲಿ ಅಲ್ಲೇ ತಯಾರು ಮಾಡಿದ ಪೊಂಗಲ್.. ನಿಜವಾಗಿಯೂ ನೋಡಲೆರೆಡು ಕಣ್ಣು ಸಾಲದು..

ಶಿಕ್ಷಕರ ಸಹಕಾರದಿಂದ ಶಾಲೆಯನ್ನು ಹಳ್ಳಿಯ ರೀತಿ ಸಿಂಗರಿಸಿ ಸಗಣಿಯಿಂದ ಸಾರಸಿ, ರಂಗೋಲಿಯನ್ನು ಹಾಕಿ, ಮಾವಿನ ತೋರಣ, ಬಾಳೆಕಂದುಗಳನ್ನು ಕಟ್ಟಿ, ಕೃತಕ ಸಂತೆಯನ್ನು ಸೃಷ್ಟಿಸಿದ್ದು ನೋಡುಗರ ಮನ ತಣಿಸುವುದರ ಜೊತೆಗೆ ನಮ್ಮ ಹಳ್ಳಿಯ ಸಂಸ್ಕೃತಿಯ ಬಗ್ಗೆ ಹೆಮ್ಮೆ ಪಡುವಂತಿತ್ತು..

*ಸುಗ್ಗಿ ಕಣದ ನಿರ್ಮಾಣ*

ರೈತರು, ದೇವರೆಂದು ಪೂಜಿಸುವ ಸುಗ್ಗಿ ರಾಶಿಯನ್ನು ನಿರ್ಮಾಣ ಮಾಡಿ ಅದಕ್ಕೆ ಪೂಜೆ ಮಾಡಿದ್ದು ವಿಶೇಷವಾಗಿತ್ತು..

*ಸಾಮೂಹಿಕ ಪೊಂಗಲ್*

ಇಷ್ಟೇ ಅಲ್ಲದೇ ಸುನಿತಾ ಮಂಜುನಾಥ್ ರವರು ಶಾಲಾ ಶಿಕ್ಷಕರೊಡಗೂಡಿ ಸಾಮೂಹಿಕವಾಗಿ ಶಾಲಾ ಆವರಣದಲ್ಲೇ ಪೊಂಗಲ್ ಅನ್ನು ತಯಾರು ಮಾಡಿ ಮಕ್ಕಳಿಗೆ ಬಡಿಸಿದರು..

 

*ಗೋ ಪೂಜೆಯ ಮಹತ್ವ*

ಕೃತಕವಾಗಿ ನೆಲ್ಲು ಹುಲ್ಲಿನ ಗುಡಿಸಲನ್ನು ನಿರ್ಮಾಣ ಮಾಡಿ ಅಲ್ಲಿ ಹಬ್ಬದ ಅಂಗವಾಗಿ ಗೋಮಾತೆಗೆ ಭಕ್ತಿಯಿಂದ ಪೂಜೆಯನ್ನು ಮಾಡಿ ಮಕ್ಕಳಿಗೆ ಕಾಮಧೇನು ವಿನ ಮಹತ್ವವನ್ನು ತಿಳಿಸಿಕೊಟ್ಟರು..

*ಮುಖ್ಯ ಅತಿಥಿಯಾಗಿ ಪ್ರಥಮ್*

ಸಾಮಾಜಿಕ ಕೆಲಸಗಳಲ್ಲಿ ಯಾವತ್ತಿದ್ದರೂ ಮುಂದು ಎನಿಸಿಕೊಳ್ಳುವ ಪ್ರಥಮ್ ರವರು ಸುನಿತಾ ಮಂಜುನಾಥ್ ರವರ ಮಾತಿಗೆ ಓಗೊಟ್ಟು ಸಂಕ್ರಾಂತಿ ಹಬ್ಬದ ಸಂಭ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಮಕ್ಕಳಿಗೆ ಅರಿವು ಮೂಡಿಸುತ್ತಿರುವ ರೀತಿಯನ್ನು ನೋಡಿ ಖುಷಿ ಪಟ್ಟರು..

*ವಿಭಿನ್ನ ಪ್ರಯತ್ನಕ್ಕೆ ನಮ್ಮದೊಂದು ಸಲಾಮ್*

ಈ ರೀತಿಯಾದ ಒಂದು ಅದ್ಭುತವಾದ ಪರಿಕಲ್ಪನೆಯನ್ನು ವಾಸ್ತವ ರೂಪಕ್ಕೆ ತಂದು ಮಕ್ಕಳಿಗೆ ನಮ್ಮ ರೈತರ ಜೀವನ ಶೈಲಿಯನ್ನು ತೋರಿಸುವುದರ ಜೊತೆಗೆ ಸಂಕ್ರಾಂತಿ ಹಬ್ಬದ ಸುಗ್ಗಿ ಪೂಜೆಯ ಮಹತ್ವವನ್ನು ತಿಳಿಸಿಕೊಟ್ಟ *ಸುನಿತಾ ಮಂಜುನಾಥ್* ರವರಿಗೆ ನಮ್ಮ ಕಡೆಯಿಂದ ಧನ್ಯವಾದಗಳು..

*ಶೇರ್ ಮಾಡಿ ಇವರು ಮಾಡುತ್ತಿರುವ ಕಾರ್ಯ ಇನ್ನಷ್ಟು ಜನರಿಗೆ ಸ್ಪೂರ್ತಿಯಾಗಲಿ..*

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ಬರಲಿದೆ ಎಂದ ವಿಜ್ಞಾನಿಗಳು..!ತಿಳಿಯಲು ಈ ಲೇಖನ ಓದಿ..

    ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ನಮ್ಮನ್ನು ಆವರಿಸುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. ಯಾಕೆಂದರೆ ಮುಂದಿನ 30 ವರ್ಷಗಳಲ್ಲಿ ಭೂಮಿ ಮೇಲೆ ಮಂಜು ಯುಗ ಎಂಬುದು ಬರಲಿದೆ. ಮಂಜಿನ ಯುಗ ಇದು ಇತಿಹಾಸ

  • ವೀಡಿಯೊ ಗ್ಯಾಲರಿ

    ಕಾಲೇಜು ದಾರಿಯಲ್ಲಿ ಆ ಹುಡುಗ ಹುಡುಗಿ ಮಾಡಿದ್ದೇನು..?ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…

    ಅದು ಕಾಲೇಜಿಗೆ ಹೋಗುವ ರಸ್ತೆ.ಆ ರಸ್ತೆಯ ತುಂಬಾ ಕಾಲೇಜು ಹುಡುಗ ಹುಡುಗಿಯರೇ ಓಡಾಡುತ್ತಿರುತ್ತಾರೆ.ಇದ್ದಕ್ಕಿದ್ದಂತೆ ಯುವಕನೋರ್ವ ಬಂದು ಕಾಲೇಜು ಯುವತಿಗೆ ತಾಳಿ ಕಟ್ಟುತ್ತಾನೆ.ಆ ರಸ್ತೆಯಲ್ಲಿ ಓಡಾಡುತ್ತಿರುವ ಎಲ್ಲ್ಲಾ ಕಾಲೇಜು ಹುಡುಗ ಹುಡುಗಿಯರು ನೋಡುತ್ತಿರುವನ್ತಯೇ ತಾಳಿ ಕಟ್ಟುತ್ತಾನೆ. ಆದರೆ ಅಚ್ಚರಿ ಏನಂದ್ರೆ ಆ ಹುಡುಗಿ ಇದಕ್ಕೆ ಯಾವುದೇ ಪ್ರತಿರೋದ ಮಾಡೋದಿಲ್ಲ. ಹೀಗಾಗಿ ಅವರಿಬ್ಬರೂ ಪ್ರೇಮಿಗಳೇ ಆಗಿರಬಹುದು ಎಂದು ಹೇಳಲಾಗಿದೆ.ಈ ವಿಡಿಯೋದಲ್ಲಿ ತಮಿಳು ಭಾಷೆ ಕೇಳುತ್ತಿರುವ ಕಾರಣ ಇದು ತಮಿಳುನಾಡಿನಲ್ಲಿ ನಡೆದಿದೆ ಎಂದು ಹೇಳಬಹುದು.. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಏಪ್ರಿಲ್, 2019) ಇಂದು ನೀವು ನಿಮ್ಮ ಆರೋಗ್ಯ ಮತ್ತು ನೋಟವನ್ನು ಸುಧಾರಿಸಲು ಕೆಲಸ ಮಾಡಲು ಸಾಕಷ್ಟು ಸಮಯ…

  • ವ್ಯಕ್ತಿ ವಿಶೇಷಣ

    10ನೇ ತರಗತಿ ಬಾಲಕನ, ಈ ಸಾಧನೆ ಬಗ್ಗೆ ಕೇಳಿದ್ರೆ ನೀವು ಖಂಡಿತಾ ಶಾಕ್ ಆಗ್ತೀರಾ! ತಿಳಿಯಲು ಈ ಲೇಖನಿ ಓದಿ…

    ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ. ಆದ್ರೆ ಈ ಹಾರ್ಟ್ ಅಟ್ಯಾಕ್ ಬರೋ ಮುನ್ಸೂಚನೆ ಮೊದ್ಲೇ ನಮ್ಗೆ ಗೊತ್ತಾದ್ರೆ ಹೇಗಿರುತ್ತೆ ಗೊತ್ತಾ?

  • ಸುದ್ದಿ

    ‘ಪಿತೃ ಪಕ್ಷ’ಕ್ಕೂ ಮಹಾಭಾರತದ ಕರ್ಣನಿಗೂ ಏನು ಸಂಬಂಧ ಗೊತ್ತ….!

    ಗತಿಸಿದ ಹಿರಿಯರಿಗೆ ನಮನ ಸಲ್ಲಿಸಲು ಕುಟುಂಬ ಸದಸ್ಯರು ಈ ಮಾಸಾಂತ್ಯದವರೆಗೆ ಪಿತೃ ಪಕ್ಷವನ್ನು ಆಚರಿಸುತ್ತಾರೆ. ಸಾವನ್ನಪ್ಪಿದ ಕುಟುಂಬದ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಅವರಿಗಿಷ್ಟವಾದ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸಲಾಗುತ್ತದೆ. ಆದರೆ ಅನಾದಿ ಕಾಲದಿಂದಲೂ ಪಿತೃಪಕ್ಷದ ಪರಂಪರೆ ನಡೆದುಕೊಂಡು ಬಂದಿದೆ. ಮಹಾಭಾರತದಲ್ಲಿ ತನ್ನ ಕರ್ಣಕುಂಡಲವನ್ನು ಕೊಟ್ಟು ಮರಣವನ್ನಪ್ಪಿದ ಕರ್ಣ, ಸ್ವರ್ಗ ಲೋಕಕ್ಕೆ ಹೋದ ವೇಳೆ ಆಹಾರವಾಗಿ ವಜ್ರ, ವೈಢೂರ್ಯಗಳನ್ನು ನೀಡಲಾಗುತ್ತದೆ. ಆಗ ಕರ್ಣ ಈ ಕುರಿತು ಪ್ರಶ್ನಿಸಿದಾಗ, ಹಿರಿಯರಿಗೆ ಶ್ರಾದ್ದ ಮಾಡದ ಹಿನ್ನಲೆಯಲ್ಲಿ ಕರ್ಣ ಮಾಡಿದ ದಾನಕ್ಕೆ ಅನುಸಾರವಾಗಿ ಇದನ್ನು ನೀಡಲಾಗುತ್ತದೆ ಎನ್ನಲಾಗುತ್ತದೆ….

  • ರೆಸಿಪಿ

    ನಿಮ್ಮ ಮನೆಯಲ್ಲೇ ರುಚಿ ರುಚಿಯಾದ “ಪಾನಿ ಪುರಿ” ತಯಾರಿಸಿ…

    ಸಂಜೆ ಆದ್ರೂ ಸಾಕು, ಏನಾದ್ರೂ ಬಿಸಿ ಬಿಸಿ ಚಾಟ್ಸ್ ತಿನ್ನಬೇಕೆಂದು ಎಲ್ಲಾ ರೀತಿಯ ವಯೋಮಾನದವರಿಗೆ ಇಷ್ಟವಾಗುತ್ತದೆ. ಆದ್ರೆ ಹೆಚ್ಚಾಗಿ ತಳ್ಳು ಗಾಡಿಯಲ್ಲಿ ಸಿಗುವ ಪಾನಿ ಪುರಿಯನ್ನು ತಿನ್ನಲು ಕೆಲವರು ಇಷ್ಟ ಪಡುತ್ತಾರೆ, ಕೆಲವರು ಇಷ್ಟ ಪಡುವುದಿಲ್ಲ.ಯಾಕೆಂದ್ರೆ ತಳ್ಳು ಗಾಡಿಯಲ್ಲಿನ ಸ್ವಚ್ಚತೆ ಕುರಿತು ಕೆಲವರಿಗೂ ಅನುಮಾನ. ಆದ್ರೂ ತಿನ್ನದೇ ಸುಮ್ಮನೆ ಇರಲಿಕ್ಕೆ ಆಗೋದಿಲ್ಲ.