ಸ್ಪೂರ್ತಿ

ಮಕ್ಕಳಿಗೆ ಹಳ್ಳಿ ಸೊಗಡಿನ ಅರಿವು ಮೂಡಿಸಲು ಸುನಿತಾ ಮಂಜುನಾಥ್ ರವರು ತಮ್ಮ ಶಾಲೆಯಲ್ಲಿ ಮಾಡಿದ ಪ್ರಯತ್ನಕ್ಕೆ ಹ್ಯಾಟ್ಸ್ ಆಫ್…

1172

ಹೌದು, ಸುನಿತಾ ಮಂಜುನಾಥ್ ರವರ ನೂತನ ಪ್ರಯತ್ನದ ಫಲವಾಗಿ ರಾಧಾಕೃಷ್ಣ ಪಬ್ಲಿಕ್ ಶಾಲೆಯ ತುಂಬಾ ಹಳ್ಳಿಯ ವಾತಾವರಣ ನಿರ್ಮಾಣವಾಗಿತ್ತು..

ಆಧುನಿಕ ಜೀವನ ಶೈಲಿಯಲ್ಲಿ ಸಂಸ್ಕೃತಿ ಮರೆತು ಹೋಗಿರುವ ಸಂದರ್ಭವಿದು.. ಆದರೆ ತಮ್ಮ ಶಾಲೆಯ ಮಕ್ಕಳಿಗೆ ಹಳ್ಳಿಯ ಜೀವನ.. ಅಲ್ಲಿನ ರೈತರು.. ಗೋಮಾತೆ, ಹಳ್ಳಿಗಳಲ್ಲಿ ಆಚರಿಸುವ ಹಬ್ಬದ ರೀತಿ ನೀತಿಗಳ ಪರಿಚಯ ಮಾಡಲು ನಾಗಶೆಟ್ಟಿಹಳ್ಳಿಯ ತಮ್ಮ ಶಾಲೆಯಲ್ಲಿ ಅದ್ಭುತವಾಗಿ ಹಳ್ಳಿಯನ್ನೇ ಮರುನಿರ್ಮಾಣ ಮಾಡಿದ್ದರು..

ಶಾಲೆಯ ತುಂಬೆಲ್ಲಾ ಸಾಂಸ್ಕೃತಿಕ ಉಡುಗೆ ತೊಡುಗೆಯಲ್ಲಿ ಮಿಂಚಿದ ಮಕ್ಕಳು.. ಅಲ್ಲಲ್ಲಿ ಕಬ್ಬಿನ ರಾಶಿ.. ತರಕಾರಿ ಅಂಗಡಿಗಳ ಅಣುಕುಗಳು‌… ಭಕ್ತಿಯಿಂದ ನಡೆದ ಗೋಪೂಜೆ.. ಅಂಗಳ ತುಂಬೆಲ್ಲಾ ಸಗಣಿಯಿಂದ ತಾರಸಿ ಬಿಟ್ಟ ರಂಗೋಲಿಗಳು.. ಮಡಿಕೆಯಲ್ಲಿ ಅಲ್ಲೇ ತಯಾರು ಮಾಡಿದ ಪೊಂಗಲ್.. ನಿಜವಾಗಿಯೂ ನೋಡಲೆರೆಡು ಕಣ್ಣು ಸಾಲದು..

ಶಿಕ್ಷಕರ ಸಹಕಾರದಿಂದ ಶಾಲೆಯನ್ನು ಹಳ್ಳಿಯ ರೀತಿ ಸಿಂಗರಿಸಿ ಸಗಣಿಯಿಂದ ಸಾರಸಿ, ರಂಗೋಲಿಯನ್ನು ಹಾಕಿ, ಮಾವಿನ ತೋರಣ, ಬಾಳೆಕಂದುಗಳನ್ನು ಕಟ್ಟಿ, ಕೃತಕ ಸಂತೆಯನ್ನು ಸೃಷ್ಟಿಸಿದ್ದು ನೋಡುಗರ ಮನ ತಣಿಸುವುದರ ಜೊತೆಗೆ ನಮ್ಮ ಹಳ್ಳಿಯ ಸಂಸ್ಕೃತಿಯ ಬಗ್ಗೆ ಹೆಮ್ಮೆ ಪಡುವಂತಿತ್ತು..

*ಸುಗ್ಗಿ ಕಣದ ನಿರ್ಮಾಣ*

ರೈತರು, ದೇವರೆಂದು ಪೂಜಿಸುವ ಸುಗ್ಗಿ ರಾಶಿಯನ್ನು ನಿರ್ಮಾಣ ಮಾಡಿ ಅದಕ್ಕೆ ಪೂಜೆ ಮಾಡಿದ್ದು ವಿಶೇಷವಾಗಿತ್ತು..

*ಸಾಮೂಹಿಕ ಪೊಂಗಲ್*

ಇಷ್ಟೇ ಅಲ್ಲದೇ ಸುನಿತಾ ಮಂಜುನಾಥ್ ರವರು ಶಾಲಾ ಶಿಕ್ಷಕರೊಡಗೂಡಿ ಸಾಮೂಹಿಕವಾಗಿ ಶಾಲಾ ಆವರಣದಲ್ಲೇ ಪೊಂಗಲ್ ಅನ್ನು ತಯಾರು ಮಾಡಿ ಮಕ್ಕಳಿಗೆ ಬಡಿಸಿದರು..

 

*ಗೋ ಪೂಜೆಯ ಮಹತ್ವ*

ಕೃತಕವಾಗಿ ನೆಲ್ಲು ಹುಲ್ಲಿನ ಗುಡಿಸಲನ್ನು ನಿರ್ಮಾಣ ಮಾಡಿ ಅಲ್ಲಿ ಹಬ್ಬದ ಅಂಗವಾಗಿ ಗೋಮಾತೆಗೆ ಭಕ್ತಿಯಿಂದ ಪೂಜೆಯನ್ನು ಮಾಡಿ ಮಕ್ಕಳಿಗೆ ಕಾಮಧೇನು ವಿನ ಮಹತ್ವವನ್ನು ತಿಳಿಸಿಕೊಟ್ಟರು..

*ಮುಖ್ಯ ಅತಿಥಿಯಾಗಿ ಪ್ರಥಮ್*

ಸಾಮಾಜಿಕ ಕೆಲಸಗಳಲ್ಲಿ ಯಾವತ್ತಿದ್ದರೂ ಮುಂದು ಎನಿಸಿಕೊಳ್ಳುವ ಪ್ರಥಮ್ ರವರು ಸುನಿತಾ ಮಂಜುನಾಥ್ ರವರ ಮಾತಿಗೆ ಓಗೊಟ್ಟು ಸಂಕ್ರಾಂತಿ ಹಬ್ಬದ ಸಂಭ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಮಕ್ಕಳಿಗೆ ಅರಿವು ಮೂಡಿಸುತ್ತಿರುವ ರೀತಿಯನ್ನು ನೋಡಿ ಖುಷಿ ಪಟ್ಟರು..

*ವಿಭಿನ್ನ ಪ್ರಯತ್ನಕ್ಕೆ ನಮ್ಮದೊಂದು ಸಲಾಮ್*

ಈ ರೀತಿಯಾದ ಒಂದು ಅದ್ಭುತವಾದ ಪರಿಕಲ್ಪನೆಯನ್ನು ವಾಸ್ತವ ರೂಪಕ್ಕೆ ತಂದು ಮಕ್ಕಳಿಗೆ ನಮ್ಮ ರೈತರ ಜೀವನ ಶೈಲಿಯನ್ನು ತೋರಿಸುವುದರ ಜೊತೆಗೆ ಸಂಕ್ರಾಂತಿ ಹಬ್ಬದ ಸುಗ್ಗಿ ಪೂಜೆಯ ಮಹತ್ವವನ್ನು ತಿಳಿಸಿಕೊಟ್ಟ *ಸುನಿತಾ ಮಂಜುನಾಥ್* ರವರಿಗೆ ನಮ್ಮ ಕಡೆಯಿಂದ ಧನ್ಯವಾದಗಳು..

*ಶೇರ್ ಮಾಡಿ ಇವರು ಮಾಡುತ್ತಿರುವ ಕಾರ್ಯ ಇನ್ನಷ್ಟು ಜನರಿಗೆ ಸ್ಪೂರ್ತಿಯಾಗಲಿ..*

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರೆಸಿಪಿ

    15 ನಿಮಿಷಗಳಲ್ಲಿ ಫಟಾಫಟ್ ‘ಎಗ್ ಪಲಾವ್’ ಮಾಡೋದು ಹೇಗೆ ಗೊತ್ತಾ..?

    ಬಾಯಲ್ಲಿ ನೀರೂರಿಸುವ ಖಾದ್ಯವೆಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಅದರಲ್ಲೂ ಫಟಾಫಟ್ ಎಂದು ತಯಾರಿಸಲಾಗುವ ಖಾದ್ಯಗಳು ನಮ್ಮ ಜಂಜಾಟಗಳಿಂದ ಕೂಡಿದ ಜೀವನ ಶೈಲಿಗೆ ಅತ್ಯಂತ ಸಹಕಾರಿ.ಅದರಲ್ಲೂ ಎಗ್ ಪಲಾವ್ ಎಂದರೆ ಯಾರಿಗೆ ತಾನೇ ಇಷ್ಟ ಇಲ್ಲ. ಕೇವಲ 15 ನಿಮಿಷಗಳಲ್ಲಿ ಎಗ್ ಪಲಾವ್ ಮಾಡಿ…

  • ಆರೋಗ್ಯ

    ಕಂಕುಳ ದುರ್ವಾಸನೆಯಿಂದ ಮುಕ್ತರಾಗಲು ಈ ವಿಧಾನಗಳನ್ನು ಅನುಸರಿಸಿ…….

    ಕಾಲ ಕಾಲಕ್ಕೆ ಬದಲಾಗುವ ವಾತಾವರಣದ ಜೊತೆಗೆ ಆರೋಗ್ಯದ ಹೊಂದಾಣಿಕೆ ಮಾಡಿಕೊಳ್ಳುವುದು ಸಾಹಸವೇ ಸರಿ. ಬೇಸಿಗೆ ಕಾಲದಲ್ಲಿ ಬಿಸಿಲಿನ ಬೇಗೆಯಿಂದ ಶರೀರದಿಂದ ಒಸರುವ ಬೆವರು ನೀಡುವ ಬಾಧೆಯಂತು ಹೇಳತೀರದು.

  • ಆರೋಗ್ಯ

    ಈ ಜ್ಯೂಸ್‌ ಅನ್ನು ಕುಡಿದರೆ ಸಾಕು ಕೆಮ್ಮು ಮಂಗಮಾಯ! ಈ ಉಪಯುಕ್ತ ಮಾಹಿತಿ ನೋಡಿ.

    ಈಗ ಚಳಿಗಾಲ. ಅಂದರೆ ಸಣ್ಣ ಪುಟ್ಟ ಕಾಯಿಲೆಗಳಿಗೆ ಆಹ್ವಾನ ಕೊಡುವ ಕಾಲ. ನೀವು ಬೇಡ ಎಂದರೂ ಅವುಗಳು ಮಾತ್ರ ನಿಮ್ಮನ್ನು ಬಿಡುವುದಿಲ್ಲ. ವರ್ಷ ಪೂರ್ತಿ ಈ ಸಮಯಕ್ಕಾಗಿಯೇ ಹೊಂಚು ಹಾಕಿ ಕಾದು ಕುಳಿತಿರುತ್ತವೆ. ಅಕ್ಟೋಬರ್, ನವೆಂಬರ್ ತಿಂಗಳು ಪ್ರಾರಂಭವಾಗುತ್ತಿದ್ದ ಹಾಗೆ ಮೈಯಲ್ಲಿ ಬೆವರು ಕಡಿಮೆಯಾಗಿ ಮೂಗಿನಲ್ಲಿ ಶೀತ ದ್ರವ ಹರಿಯಲು ಪ್ರಾರಂಭವಾಗುತ್ತದೆ. ಇದನ್ನು ಹಾಗೇ ಬಿಟ್ಟರೆ ಒಂದರ ಹಿಂದೆ ಒಂದು ಕೊಂಡಿಯಂತೆ ಶೀತ, ಕೆಮ್ಮು, ಜ್ವರ ಹೀಗೆ ಒಂದೊಂದಾಗಿ ಬಂದು ಅಂಟಿಕೊಳ್ಳುತ್ತವೆ. ಅಷ್ಟು ದಿನಗಳವರೆಗೆ ಬೆಳಗ್ಗೆ ಎದ್ದು…

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ನಿಮ್ಮ ರಾಶಿ ಫಲಗಳು ಹೇಗಿವೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಮಾರ್ಚ್, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಬಾಕಿಯಿರುವ ಮನೆಕೆಲಸಗಳು ನಿಮ್ಮ ಸ್ವಲ್ಪ ಸಮಯ ತೆಗೆದುಕೊಳ್ಳುತ್ತವೆ….

  • ಸುದ್ದಿ

    ಡಾಕ್ಟರೇಟ್ ಪಡೆದ ರವಿಮಾಮ : ತಪ್ಪಿರುವ ದಾರಿಯನ್ನ ಸರಿ ಮಾಡಿಕೊಳ್ಳುತ್ತೇನೆ ಎಂದ ಕ್ರೇಜಿ ಸ್ಟಾರ್…!

    ಕನಸುಗಾರ ರವಿಚಂದ್ರನ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಇವರು ಮಾಡಿದ ಕೆಲಸ ಗುರುತಿಸಿ ಈಗ ವಿಶ್ವವಿದ್ಯಾಲಯವೊಂದು ಗೌರವ ಡಾಕ್ಟರೇಟ್ ಪದವಿ ನೀಡಲು ಮುಂದಾಗಿದೆ. ನಟ ವಿ.ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಬೆಂಗಳೂರಿನ ಸಿಎಂಆರ್‌ ಕಾಲೇಜು ಆವರಣದಲ್ಲಿ ಸಂಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರಿಗೆ ಡಾಕ್ಟರೇಟ್  ಗೌರವ ನೀಡಲಾಗಿದೆ. ಅಕ್ಟೋಬರ್ 18 ರವಿಚಂದ್ರನ್ ಮಗಳು ಗೀತಾಂಜಲಿ ಹುಟ್ಟಿದ ದಿನ. ಆ ದಿನವೇ ಅವರಿಗೆ ಗೌರವ ಡಾಕ್ಟರೇಟ್ ನೀಡಲಿದ್ದೇವೆ ಎಂದು ಯುನಿವರ್ಸಿಟಿಯಿಂದ ಕಾಲ್ಬಂದಿತ್ತಂತೆ. ಅಷ್ಟೇ ಅಲ್ಲದೆ ಅವರ 35ವರ್ಷಗಳ…