ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು, ಸುನಿತಾ ಮಂಜುನಾಥ್ ರವರ ನೂತನ ಪ್ರಯತ್ನದ ಫಲವಾಗಿ ರಾಧಾಕೃಷ್ಣ ಪಬ್ಲಿಕ್ ಶಾಲೆಯ ತುಂಬಾ ಹಳ್ಳಿಯ ವಾತಾವರಣ ನಿರ್ಮಾಣವಾಗಿತ್ತು..
ಆಧುನಿಕ ಜೀವನ ಶೈಲಿಯಲ್ಲಿ ಸಂಸ್ಕೃತಿ ಮರೆತು ಹೋಗಿರುವ ಸಂದರ್ಭವಿದು.. ಆದರೆ ತಮ್ಮ ಶಾಲೆಯ ಮಕ್ಕಳಿಗೆ ಹಳ್ಳಿಯ ಜೀವನ.. ಅಲ್ಲಿನ ರೈತರು.. ಗೋಮಾತೆ, ಹಳ್ಳಿಗಳಲ್ಲಿ ಆಚರಿಸುವ ಹಬ್ಬದ ರೀತಿ ನೀತಿಗಳ ಪರಿಚಯ ಮಾಡಲು ನಾಗಶೆಟ್ಟಿಹಳ್ಳಿಯ ತಮ್ಮ ಶಾಲೆಯಲ್ಲಿ ಅದ್ಭುತವಾಗಿ ಹಳ್ಳಿಯನ್ನೇ ಮರುನಿರ್ಮಾಣ ಮಾಡಿದ್ದರು..

ಶಾಲೆಯ ತುಂಬೆಲ್ಲಾ ಸಾಂಸ್ಕೃತಿಕ ಉಡುಗೆ ತೊಡುಗೆಯಲ್ಲಿ ಮಿಂಚಿದ ಮಕ್ಕಳು.. ಅಲ್ಲಲ್ಲಿ ಕಬ್ಬಿನ ರಾಶಿ.. ತರಕಾರಿ ಅಂಗಡಿಗಳ ಅಣುಕುಗಳು… ಭಕ್ತಿಯಿಂದ ನಡೆದ ಗೋಪೂಜೆ.. ಅಂಗಳ ತುಂಬೆಲ್ಲಾ ಸಗಣಿಯಿಂದ ತಾರಸಿ ಬಿಟ್ಟ ರಂಗೋಲಿಗಳು.. ಮಡಿಕೆಯಲ್ಲಿ ಅಲ್ಲೇ ತಯಾರು ಮಾಡಿದ ಪೊಂಗಲ್.. ನಿಜವಾಗಿಯೂ ನೋಡಲೆರೆಡು ಕಣ್ಣು ಸಾಲದು..

ಶಿಕ್ಷಕರ ಸಹಕಾರದಿಂದ ಶಾಲೆಯನ್ನು ಹಳ್ಳಿಯ ರೀತಿ ಸಿಂಗರಿಸಿ ಸಗಣಿಯಿಂದ ಸಾರಸಿ, ರಂಗೋಲಿಯನ್ನು ಹಾಕಿ, ಮಾವಿನ ತೋರಣ, ಬಾಳೆಕಂದುಗಳನ್ನು ಕಟ್ಟಿ, ಕೃತಕ ಸಂತೆಯನ್ನು ಸೃಷ್ಟಿಸಿದ್ದು ನೋಡುಗರ ಮನ ತಣಿಸುವುದರ ಜೊತೆಗೆ ನಮ್ಮ ಹಳ್ಳಿಯ ಸಂಸ್ಕೃತಿಯ ಬಗ್ಗೆ ಹೆಮ್ಮೆ ಪಡುವಂತಿತ್ತು..

ರೈತರು, ದೇವರೆಂದು ಪೂಜಿಸುವ ಸುಗ್ಗಿ ರಾಶಿಯನ್ನು ನಿರ್ಮಾಣ ಮಾಡಿ ಅದಕ್ಕೆ ಪೂಜೆ ಮಾಡಿದ್ದು ವಿಶೇಷವಾಗಿತ್ತು..

ಇಷ್ಟೇ ಅಲ್ಲದೇ ಸುನಿತಾ ಮಂಜುನಾಥ್ ರವರು ಶಾಲಾ ಶಿಕ್ಷಕರೊಡಗೂಡಿ ಸಾಮೂಹಿಕವಾಗಿ ಶಾಲಾ ಆವರಣದಲ್ಲೇ ಪೊಂಗಲ್ ಅನ್ನು ತಯಾರು ಮಾಡಿ ಮಕ್ಕಳಿಗೆ ಬಡಿಸಿದರು..

ಕೃತಕವಾಗಿ ನೆಲ್ಲು ಹುಲ್ಲಿನ ಗುಡಿಸಲನ್ನು ನಿರ್ಮಾಣ ಮಾಡಿ ಅಲ್ಲಿ ಹಬ್ಬದ ಅಂಗವಾಗಿ ಗೋಮಾತೆಗೆ ಭಕ್ತಿಯಿಂದ ಪೂಜೆಯನ್ನು ಮಾಡಿ ಮಕ್ಕಳಿಗೆ ಕಾಮಧೇನು ವಿನ ಮಹತ್ವವನ್ನು ತಿಳಿಸಿಕೊಟ್ಟರು..

ಸಾಮಾಜಿಕ ಕೆಲಸಗಳಲ್ಲಿ ಯಾವತ್ತಿದ್ದರೂ ಮುಂದು ಎನಿಸಿಕೊಳ್ಳುವ ಪ್ರಥಮ್ ರವರು ಸುನಿತಾ ಮಂಜುನಾಥ್ ರವರ ಮಾತಿಗೆ ಓಗೊಟ್ಟು ಸಂಕ್ರಾಂತಿ ಹಬ್ಬದ ಸಂಭ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಮಕ್ಕಳಿಗೆ ಅರಿವು ಮೂಡಿಸುತ್ತಿರುವ ರೀತಿಯನ್ನು ನೋಡಿ ಖುಷಿ ಪಟ್ಟರು..

ಈ ರೀತಿಯಾದ ಒಂದು ಅದ್ಭುತವಾದ ಪರಿಕಲ್ಪನೆಯನ್ನು ವಾಸ್ತವ ರೂಪಕ್ಕೆ ತಂದು ಮಕ್ಕಳಿಗೆ ನಮ್ಮ ರೈತರ ಜೀವನ ಶೈಲಿಯನ್ನು ತೋರಿಸುವುದರ ಜೊತೆಗೆ ಸಂಕ್ರಾಂತಿ ಹಬ್ಬದ ಸುಗ್ಗಿ ಪೂಜೆಯ ಮಹತ್ವವನ್ನು ತಿಳಿಸಿಕೊಟ್ಟ *ಸುನಿತಾ ಮಂಜುನಾಥ್* ರವರಿಗೆ ನಮ್ಮ ಕಡೆಯಿಂದ ಧನ್ಯವಾದಗಳು..

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
KOLAR NEWS PAPER 27-12-2022
ದಕ್ಷಿಣ ಭಾರತದ ಪ್ರಮುಖ ಬ್ರೇಕ್ಫಾಸ್ಟ್ಗಳಲ್ಲಿ ಇಡ್ಲಿ ಕೂಡಾ ಒಂದು. ಪ್ರತಿಯೊಬ್ಬರ ಫೇವರಿಟ್ ತಿಂಡಿಯಾಗಿರುವ ಬಿಸಿ ಬಿಸಿ ಇಡ್ಲಿಗಳು ಆರೋಗ್ಯಕ್ಕೂ ಉತ್ತಮ. ಇದರಲ್ಲಿ ಕೊಬ್ಬು, ಕೊಲೆಸ್ಟ್ರಾಲ್ ಇಲ್ಲ. ಕ್ಯಾಲೊರಿ ಅಂಶವೂ ಅತ್ಯಂತ ಕಡಿಮೆ ಇದೆ. ಹೊಟ್ಟೆಗೂ ಹಿತವಾಗಿರುವ ಈ ಆಹಾರದಲ್ಲಿ ಹಲವಾರು ವೆರೈಟಿಗಳಿವೆ.
ಚೆನ್ನೈನ 65 ವರ್ಷದ ವೃದ್ಧೆಯೊಬ್ಬರು ಕಳೆದ 19 ವರ್ಷಗಳಿಂದ ಸಾರ್ವಜನಿಕ ಶೌಚಾಲಯದಲ್ಲೇ ಜೀವನ ನಡೆಸುತ್ತಿರುವ ಮನಕಲಕುವ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ವಾಸಿಸಲು ಮನೆ ಇಲ್ಲದ ಕಾರಣದಿಂದಾಗಿ ಕರುಪ್ಪಾಯಿ ಅವರು ಶೌಚಾಲಯದ ಕೋಣೆಯಲ್ಲೇ ವಾಸವಾಗಿದ್ದಾರೆ. ವೃದ್ಧೆ ಕರುಪ್ಪಾಯಿ ಸಾರ್ವಜನಿಕ ಶೌಚಾಲಯ ಸ್ವಚ್ಛಗೊಳಿಸಿ ಅದರಿಂದ ಬರುವ ಹಣದಿಂದಲೇ ಜೀವನ ನಡೆಸುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ವೃದ್ಧೆ, ಹಿರಿಯ ನಾಗರಿಕ ಪಿಂಚಣಿಗಾಗಿ ನಾನು ಅನೇಕ ಬಾರಿ ಅರ್ಜಿ ಸಲ್ಲಿಸಿದ್ದೇನೆ. ಅದು ಆಗದಿದ್ದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಯನ್ನು ಭೇಟಿಯಾಗಿದ್ದೇನೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(5 ಡಿಸೆಂಬರ್, 2018) ನಿಮ್ಮ ಮನದನ್ನೆಯ ವಿಚಿತ್ರ ನಡವಳಿಕೆ ಇಂದು ನಿಮ್ಮ ಪ್ರೇಮವನ್ನು ಘಾಸಿಗೊಳಿಸುತ್ತದೆ. ಹೊಸ ಪ್ರಸ್ತಾಪಗಳ ಅಕರ್ಷಕವಾಗಿದ್ದರೂ ಯಾವುದೇ ಆತುರದ…
ನನ್ನ ಹೆಸರು ಮಂಜುನಾಥ್ ನನ್ನ ಮೊಬೈಲ್ ನಂಬರ್ 9740093720,ನಮ್ಮದು ಶಿಡ್ಲಘಟ್ಟ ಬಳಿ ಯಣ್ಣಂಗುರೂ,ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುವುದು,ನಮ್ಮ ತಾಯಿಯವರಿಗೆ ಸುಮಾರು ವರ್ಷಗಳಿಂದ ಮಂಡಿ ನೋವು ಇತ್ತು,ಆರು ತಿಂಗಳ ಹಿಂದೆ ನೋವು ಹೆಚ್ಚಾಗಿ
9 ವರ್ಷದ ಅಪ್ರಾಪ್ತೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದು, ಆತನನ್ನು ಸ್ಥಳೀಯರು ಹಿಡಿದು ಥಳಿಸಿ ಹತ್ಯೆಗೈದ ಘಟನೆ ಪಂಜಾಬ್ನ ಜಲಂಧರ್ ನಲ್ಲಿ ನಡೆದಿದೆ. ಜಲಂಧರ್ ನ ರಾಮ ಮಂಡಿ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಅಲೆಮಾರಿ ಕೂಲಿಕಾರನಾಗಿದ್ದ ಪಪ್ಪು ಕುಮಾರ್(39) 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಾಲಕಿಯ ಪೋಷಕರು ಕೂಡ ಅಲೆಮಾರಿ ಕೂಲಿಕಾರಾಗಿದ್ದು, ಬಾಲಕಿ ಹಾಗೂ ಆರೋಪಿ ನೆರೆಹೊರೆಯ ಮನೆಗಳಲ್ಲಿ ವಾಸವಾಗಿದ್ದರು. ಭಾನುವಾರ ಆರೋಪಿ ತನ್ನ ಮನೆಗೆ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ ಮಾಡಿದ್ದಾನೆ. ಈ…