ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು, ಸುನಿತಾ ಮಂಜುನಾಥ್ ರವರ ನೂತನ ಪ್ರಯತ್ನದ ಫಲವಾಗಿ ರಾಧಾಕೃಷ್ಣ ಪಬ್ಲಿಕ್ ಶಾಲೆಯ ತುಂಬಾ ಹಳ್ಳಿಯ ವಾತಾವರಣ ನಿರ್ಮಾಣವಾಗಿತ್ತು..
ಆಧುನಿಕ ಜೀವನ ಶೈಲಿಯಲ್ಲಿ ಸಂಸ್ಕೃತಿ ಮರೆತು ಹೋಗಿರುವ ಸಂದರ್ಭವಿದು.. ಆದರೆ ತಮ್ಮ ಶಾಲೆಯ ಮಕ್ಕಳಿಗೆ ಹಳ್ಳಿಯ ಜೀವನ.. ಅಲ್ಲಿನ ರೈತರು.. ಗೋಮಾತೆ, ಹಳ್ಳಿಗಳಲ್ಲಿ ಆಚರಿಸುವ ಹಬ್ಬದ ರೀತಿ ನೀತಿಗಳ ಪರಿಚಯ ಮಾಡಲು ನಾಗಶೆಟ್ಟಿಹಳ್ಳಿಯ ತಮ್ಮ ಶಾಲೆಯಲ್ಲಿ ಅದ್ಭುತವಾಗಿ ಹಳ್ಳಿಯನ್ನೇ ಮರುನಿರ್ಮಾಣ ಮಾಡಿದ್ದರು..

ಶಾಲೆಯ ತುಂಬೆಲ್ಲಾ ಸಾಂಸ್ಕೃತಿಕ ಉಡುಗೆ ತೊಡುಗೆಯಲ್ಲಿ ಮಿಂಚಿದ ಮಕ್ಕಳು.. ಅಲ್ಲಲ್ಲಿ ಕಬ್ಬಿನ ರಾಶಿ.. ತರಕಾರಿ ಅಂಗಡಿಗಳ ಅಣುಕುಗಳು… ಭಕ್ತಿಯಿಂದ ನಡೆದ ಗೋಪೂಜೆ.. ಅಂಗಳ ತುಂಬೆಲ್ಲಾ ಸಗಣಿಯಿಂದ ತಾರಸಿ ಬಿಟ್ಟ ರಂಗೋಲಿಗಳು.. ಮಡಿಕೆಯಲ್ಲಿ ಅಲ್ಲೇ ತಯಾರು ಮಾಡಿದ ಪೊಂಗಲ್.. ನಿಜವಾಗಿಯೂ ನೋಡಲೆರೆಡು ಕಣ್ಣು ಸಾಲದು..

ಶಿಕ್ಷಕರ ಸಹಕಾರದಿಂದ ಶಾಲೆಯನ್ನು ಹಳ್ಳಿಯ ರೀತಿ ಸಿಂಗರಿಸಿ ಸಗಣಿಯಿಂದ ಸಾರಸಿ, ರಂಗೋಲಿಯನ್ನು ಹಾಕಿ, ಮಾವಿನ ತೋರಣ, ಬಾಳೆಕಂದುಗಳನ್ನು ಕಟ್ಟಿ, ಕೃತಕ ಸಂತೆಯನ್ನು ಸೃಷ್ಟಿಸಿದ್ದು ನೋಡುಗರ ಮನ ತಣಿಸುವುದರ ಜೊತೆಗೆ ನಮ್ಮ ಹಳ್ಳಿಯ ಸಂಸ್ಕೃತಿಯ ಬಗ್ಗೆ ಹೆಮ್ಮೆ ಪಡುವಂತಿತ್ತು..

ರೈತರು, ದೇವರೆಂದು ಪೂಜಿಸುವ ಸುಗ್ಗಿ ರಾಶಿಯನ್ನು ನಿರ್ಮಾಣ ಮಾಡಿ ಅದಕ್ಕೆ ಪೂಜೆ ಮಾಡಿದ್ದು ವಿಶೇಷವಾಗಿತ್ತು..

ಇಷ್ಟೇ ಅಲ್ಲದೇ ಸುನಿತಾ ಮಂಜುನಾಥ್ ರವರು ಶಾಲಾ ಶಿಕ್ಷಕರೊಡಗೂಡಿ ಸಾಮೂಹಿಕವಾಗಿ ಶಾಲಾ ಆವರಣದಲ್ಲೇ ಪೊಂಗಲ್ ಅನ್ನು ತಯಾರು ಮಾಡಿ ಮಕ್ಕಳಿಗೆ ಬಡಿಸಿದರು..

ಕೃತಕವಾಗಿ ನೆಲ್ಲು ಹುಲ್ಲಿನ ಗುಡಿಸಲನ್ನು ನಿರ್ಮಾಣ ಮಾಡಿ ಅಲ್ಲಿ ಹಬ್ಬದ ಅಂಗವಾಗಿ ಗೋಮಾತೆಗೆ ಭಕ್ತಿಯಿಂದ ಪೂಜೆಯನ್ನು ಮಾಡಿ ಮಕ್ಕಳಿಗೆ ಕಾಮಧೇನು ವಿನ ಮಹತ್ವವನ್ನು ತಿಳಿಸಿಕೊಟ್ಟರು..

ಸಾಮಾಜಿಕ ಕೆಲಸಗಳಲ್ಲಿ ಯಾವತ್ತಿದ್ದರೂ ಮುಂದು ಎನಿಸಿಕೊಳ್ಳುವ ಪ್ರಥಮ್ ರವರು ಸುನಿತಾ ಮಂಜುನಾಥ್ ರವರ ಮಾತಿಗೆ ಓಗೊಟ್ಟು ಸಂಕ್ರಾಂತಿ ಹಬ್ಬದ ಸಂಭ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಮಕ್ಕಳಿಗೆ ಅರಿವು ಮೂಡಿಸುತ್ತಿರುವ ರೀತಿಯನ್ನು ನೋಡಿ ಖುಷಿ ಪಟ್ಟರು..

ಈ ರೀತಿಯಾದ ಒಂದು ಅದ್ಭುತವಾದ ಪರಿಕಲ್ಪನೆಯನ್ನು ವಾಸ್ತವ ರೂಪಕ್ಕೆ ತಂದು ಮಕ್ಕಳಿಗೆ ನಮ್ಮ ರೈತರ ಜೀವನ ಶೈಲಿಯನ್ನು ತೋರಿಸುವುದರ ಜೊತೆಗೆ ಸಂಕ್ರಾಂತಿ ಹಬ್ಬದ ಸುಗ್ಗಿ ಪೂಜೆಯ ಮಹತ್ವವನ್ನು ತಿಳಿಸಿಕೊಟ್ಟ *ಸುನಿತಾ ಮಂಜುನಾಥ್* ರವರಿಗೆ ನಮ್ಮ ಕಡೆಯಿಂದ ಧನ್ಯವಾದಗಳು..

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ರಾಜ್ಯದಲ್ಲಿ ಕೊರೋನ ಹೆಚ್ಚಳವಾಗಿದೆ.ಕಳೆದ 4 ವಾರಗಳಲ್ಲಿ ವೈರಸ್ ಉತ್ತುಂಗಕ್ಕೆ ತಲುಪಿದೆ.ದೇಶದಲ್ಲಿ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ತಾಸಿನ ಅವಧಿಯಲ್ಲಿ ಮಂಗಳವಾರ ಕ್ಕಿಂತ ಶೇ.55% ಹೆಚ್ಚಳಗೊಂಡಿದೆ. ದೇಶದಲ್ಲಿ ಸುಮಾರು 90ಸಾವಿರ ಪ್ರಕರಣ ದಾಖಲಾಗಿದೆ.ರಾಜ್ಯದಲ್ಲೂ ಶೇ.3.33ರಷ್ಟು ಪ್ರಕರಣ ದಾಖಲಾಗಿದೆ.ಈ ರೀತಿಯ ಹೆಚ್ಚಳದಿಂದಾಗಿ 3ನೇ ಅಲೆ ಖಚಿತವಾದಂತೆ ಆಗಿದೆ. ದೇಶದಲ್ಲಿ ಒಟ್ಟಾರೆ ಕೋವಿಡ್ ಪ್ರಕರಣಗಳು 3,50,18,358ಕ್ಕೆ ಏರಿದೆ.ಮರಣ ಪ್ರಮಾಣ 4,82,551ಕ್ಕೆ ಮುಟ್ಟಿದೆ.8 ದಿನಗಳಿಂದ ಶೇ.6.3ಪಟ್ಟು ಏರಿದೆ.ಡಿ. 29ರಂದು 0.79 ಇದ್ದ ಪಾಸಿಟಿವಿಟಿ ದರ ಜ.5ಕ್ಕೆ ಶೇ.5.03ಕ್ಕೆ ಹೆಚ್ಚಳವಾಗಿದೆ.ಒಟ್ಟು 3,43,21,803ಮಂದಿ…
![]()
ಈಗ ಹಳ್ಳಿಯಿಂದ ಹಿಡಿದು ದಿಲ್ಲಿಯವರೆಗೂ ಗಲ್ಲಿ ಗಲ್ಲಿಗಳಲ್ಲಿ ಲೋಕಸಭಾ ಚುನಾವಣೆಯದ್ದೇ ಮಾತುಕತೆ. ಅಷ್ಟೇ ಅಲ್ಲದೇ ಯಾವ ಪಕ್ಷ ಗೆಲ್ಲುತ್ತೆ? ಯಾರು ಈ ದೇಶದ ಚುಕ್ಕಾಣಿ ಹಿಡಿಯುತ್ತಾರೆ?ಯಾರಿಗೆ ಒಲಿಯಲಿದೆ ಪ್ರಧಾನಿ ಪಟ್ಟ ಎಂಬ ವಾದ ವಿವಾದಗಳು ಜೋರಾಗಿಯೇ ನಡೆಯುತ್ತಿವೆ. ಈಗ ಹಾಲಿ ಪ್ರಧಾನ ಮಂತ್ರಿ ಆಗಿರುವ ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿ ಆಗ್ತಾರಾ ಅಥವಾ ಪ್ರಧಾನಿ ರೇಸ್ ನಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧೀ ಪ್ರಧಾನಿ ಆಗ್ತಾರ ಎಂಬುದರ ಬಗ್ಗೆ ಸಿ ವೋಟರ್–ಐ.ಎ.ಎನ್.ಎಸ್. ಸಮೀಕ್ಷೆ ನಡೆಸಿದ್ದು ಮತದಾರ ಪ್ರಭು ಏನು…
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ‘ಗೀತಾ’ ಚಿತ್ರದ ಟೀಸರ್ ಬಿಡುಗಡೆ ಆಗಿದೆ.ಗಣೇಶ್ ಅವರು ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿಲ್ಲ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರಿನಲ್ಲಿ ಸ್ಪಷ್ಟನೆ ಕೂಡ ನೀಡಿದ್ದರು. ಇಂದು ಗಣೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತವಾಗಿ ಅವರು ಅಭಿನಯದ ‘ಗೀತಾ’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಗೀತಾ ಚಿತ್ರದ ಟೀಸರ್ ನಲ್ಲಿ ಗಣೇಶ್ ಕನ್ನಡ ಭಾಷೆಗಾಗಿ ಹೋರಾಟ ನಡೆಸಿದ್ದಾರೆ. ಅಲ್ಲದೆ ಗಣೇಶ್ ‘ಕರ್ನಾಟಕದಲ್ಲಿ ಕನ್ನಡಿಗನೇ…
ಕನ್ನಡ ಚಿತ್ರರಂಗದ ನಟರು ಗೌರವದಿಂದ ಮನೆಯಲ್ಲಿ ಇರಬೇಕು. ಪ್ರಚಾರಕ್ಕೆ ಬಂದು ಜೆಡಿಎಸ್ ಪಕ್ಷ ಹಾಗೂ ನಾಯಕರ ವಿರುದ್ಧ ಬಾಯಿಬಿಟ್ಟರೆ ಪರಿಣಾಮ ಸರಿ ಇರುವುದಿಲ್ಲ ಎಂದು ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಕೆ.ಆರ್ ಪೇಟೆ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಅವರು ಅಂಬರೀಶ್ ಬಗ್ಗೆ ನಮಗೆ ಈಗಲೂ, ಮುಂದೆಯೂ ಗೌರವವಿದೆ. ಆದರೆ ಇತರ ಚಲನಚಿತ್ರ ಕಲಾವಿದರ ಬಗ್ಗೆ ನನಗೆ ಅಸಮಾಧಾನವಿದೆ. ದರ್ಶನ್ ಮತ್ತು ಯಶ್ ಅವರು…
ಪ್ರಸ್ತುತ ದಿನಗಳಲ್ಲಿ ಕೃಷಿ ಕ್ಷೇತ್ರದ ಕಡೆ ಮುಖ ಮಾಡಿ ನೋಡದ ಜನರನಡುವೆ ಹಾಗು ಸರ್ಕಾರೀ ಕೆಲಸ ಬೇಕು, ಎಂಬುದಾಗಿ ಬಯಸೋ ಜನರು ಇದ್ದಾರೆ ಆದರೆ. ಅವೆಲ್ಲವನ್ನು ಬಿಟ್ಟು ನಾನು ಕೃಷಿ ಕ್ಷೇತ್ರದಲ್ಲಿ ಏನೋ ಒಂದು ಸಾಧನೆ ಮಾಡಬೇಕು ಅಂದುಕೊಂಡು ತಾನು ಮಾಡುತ್ತಿದ್ದ ಚಾರ್ಟೆಡ್ ಅಕೌಂಟೆಡ್ ಕೆಲಸವನ್ನು ಬಿಟ್ಟು ಕೃಷಿ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿ ಕೊಂಡಿದ್ದಕ್ಕೆ ಇಂದು 40 -45 ಲಕ್ಷ ಅಧಾಯವನ್ನು ಪಡೆಯುತ್ತಿದಾರೆ. ರಾಂಚಿ ಮೂಲದ ರಾಜೀವ್ ಎನ್ನುವವರು 10 ಎಕರೆ ಭೂಮಿಯನ್ನು ಗುತ್ತಿಗೆಗೆ ಪಡೆದು…
ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು. ಕನ್ನಡದ ದಿಗ್ಗಜ ನಟರಾದ ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ,…