ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಿಸುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ನಿಮಗೆ ಅರಿವಿದೆಯೇ…
ಪುಟ್ಟ ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿಗಳನ್ನು ವೀಕ್ಷಿಸುವ ಹವ್ಯಾಸ ಬೆಳೆಸಿಕೊಂಡರೆ ಅಂತಹ ಮಕ್ಕಳಲ್ಲಿ ಸಕ್ಕರೆ ಕಾಯಿಲೆ ಏರ್ಪಡುವ ಅಪಾಯ ಹೆಚ್ಚು ಎಂದು ವೈದ್ಯಕೀಯ ತಜ್ಞರು ಹೇಳಿದ್ದಾರೆ.
ಕೇವಲ ಸಕ್ಕರೆ ಕಾಯಿಲೆ ಮಾತ್ರವಷ್ಟೇ ಅಲ್ಲ ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿಗಳನ್ನು ವೀಕ್ಷಿಸುತ್ತಿದ್ದರೆ ಅವರ ಕಣ್ಣಿಗೂ ಗಂಭೀರ ಹಾನಿಯಾಗಲಿದ್ದು, ಮಕ್ಕಳ ಮೆದುಳಿನ ನರಮಂಡಲಕ್ಕೂ ಹಾನಿಯಾಗುತ್ತದೆ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಟಿವಿ ಮತ್ತು ಸ್ಮಾರ್ಟ್ ಫೋನ್ ಗಳಿಂದಾಗಿ ಜನರ ಜೀವನ ಶೈಲಿಯೇ ಬದಲಾಗಿ ಹೋಗಿದ್ದು, ಸ್ಮಾರ್ಟ್ ಫೋನ್ ಗಳು ಜನರ ಜೀವನದಲ್ಲಿ ಬೆರೆತು ಹೋಗಿದೆ.
ಇದಕ್ಕೆ ಪೂರಕ ಎಂಬಂತೆ ರಿಯಾಲಿಟಿ ಷೋಗಳ ಅಬ್ಬರ ಮತ್ತು ಫ್ರೀ ಆ್ಯಪ್ ಗಳ ಆಡಂಬರ ಕೂಡ ಮಕ್ಕಳಲ್ಲಿ ಇಂತಹ ಅಪಾಯಕಾರಿ ಬೆಳವಣಿಗೆ ಹೆಚ್ಚಾಗಲು ಕಾರಣವಾಗುತ್ತಿದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

ಬದಲಾದ ಜೀವನ ಶೈಲಿ ಹಾಗೂ ವಿಭಕ್ತ ಕುಟುಂಬಗಳಲ್ಲಿ ಮಕ್ಕಳ ಪಾಲನೆ ಅಷ್ಟು ಸುಲಭವಲ್ಲ. ಹೀಗಾಗಿ ಇತ್ತೀಚಿನ ಪೋಷಕರು ಮಕ್ಕಳು ಅತ್ತಾಗ, ಮಕ್ಕಳಿಗೆ ಹಸಿವಾದಾಗ ಸ್ಮಾರ್ಟ್ ಫೋನ್ ತೋರಿಸಿ ಸಮಾಧಾನ ಮಾಡುವಂತಹ ಪರಿಪಾಠ ತಾನೇ ತಾನಾಗಿ ಬೆಳೆದಿದೆ. ಇದೂ ಕೂಡ ಅಪಾಯಕಾರಿ ಎಂದು ವೈದ್ಯರು ತಿಳಿಸಿದ್ದಾರೆ. ಇಲ್ಲಿ ಓದಿ :- ನಿಮ್ಮ ಕಣ್ಣುಗಳ ಆರೋಗ್ಯದ ಕಾಳಜಿ ಇದ್ದರೆ ಇದನ್ನು ಓದಿ…..

ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಣೆಯಿಂದಾಗಿ ಮಕ್ಕಳ ಕಣ್ಣಿನ ಮೇಲೆ ಹೆಚ್ಚು ಒತ್ತಡ ಬಿದ್ದು, ಅವುಗಳ ನರಗಳಿಗೆ ಹಾನಿಯಾಗುತ್ತದೆ. ಅಂತೆಯೇ ಮೆದುಳಿನ ನರಮಂಡಲ ವ್ಯವಸ್ಥೆಯ ಕಾರ್ಯದ ಸಾಮರ್ಥ್ಯದ ಮೇಲೂ ಇದು ವ್ಯತಿರಿಕ್ತ ಪರಿಣಾಮ ಬೀರುತ್ತದೆ.
ಇನ್ನು ಪ್ರತಿನಿತ್ಯ ಮಕ್ಕಳು ಒಂದು ಗಂಟೆಗೂ ಅಧಿಕ ಸಮಯ ಸ್ಮಾರ್ಟ್ ಫೋನ್ ಮತ್ತು ಟಿವಿ ನೋಡುತ್ತ ಮಗ್ನರಾಗಿದ್ದರೆ ಅಂತಹ ಮಕ್ಕಳಲ್ಲಿ ಖಂಡಿತಾ ಸಕ್ಕರೆ ಕಾಯಿಲೆ ಅಪಾಯ ಹೆಚ್ಚು.
ಸತತವಾಗಿ ಟಿವಿ ಮತ್ತು ಸ್ಮಾರ್ಟ್ ಫೋನ್ ನೋಡುವುದರಿಂದ ಮಕ್ಕಳ ವಯಸ್ಸಿಗೆ ಸಂಬಂಧಿಸಿದ ನೋವುಗಳು ಆರಂಭವಾಗುತ್ತವೆ.
ಇದೇ ಮುಂದುವರೆದರೆ ಮಕ್ಕಳು ಯುವ ಹಂತಕ್ಕೆ ಬರುವ ವೇಳೆಗೆ ಸಕ್ಕರೆ ಕಾಯಿಲೆಗೆ ತುತ್ತಾಗಿರುತ್ತಾರೆ. ಇಂತಹ ಸಾವಿರಾರು ಪ್ರಕರಣಗಳು ವಿಶ್ವಾದ್ಯಂತ ವರದಿಯಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಈವರೆಗೂ ಮಕ್ಕಳ ದೈಹಿಕ ಚಟುವಟಿಕೆ, ಆಹಾರ ವ್ಯವಸ್ಥೆ ಮತ್ತು ಕುಟುಂಬದ ಆರೋಗ್ಯ ಇತಿಹಾಸದಿಂದ ಮಧುಮೇಹ ಖಾಯಿಲೆಯನ್ನು ಪರಿಗಣಿಸಲಾಗುತ್ತಿತ್ತು. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಸ್ಮಾರ್ಟ್ ಗ್ಯಾಜೆಟ್ ಗಳು ಕೂಡ ಪರಿಣಾಮ ಬೀರುತ್ತಿವೆ.
ಈ ಬಗ್ಗೆ ತಜ್ಞರು ಸುಮಾರು 4500 ಮಕ್ಕಳ ಜೀವನ ಶೈಲಿಯನ್ನು ಅಧ್ಯಯನ ಮಾಡಿದ್ದು, ಈ ಪೈಕಿ ಹೆಚ್ಚು ಹೊತ್ತು ಸ್ಮಾರ್ಟ್ ಗ್ಯಾಜೆಟ್ ಗಳಾದ ಸ್ಮಾರ್ಟ್ ಫೋನ್, ಟಿವಿ, ಕಂಪ್ಯೂಟರ್, ಗೇಮರ್ ಗಳಲ್ಲಿ ಹೆಚ್ಚು ಹೊತ್ತು ಕಳೆಯುವ ಮಕ್ಕಳಲ್ಲಿ ರೋಗದ ಅಪಾಯ ಹೆಚ್ಚಾಗಿತ್ತು.
ಇನ್ನು ಈ ಪೈಕಿ ಶೇ.37ರಷ್ಟು ಮಕ್ಕಳು ಮಾತ್ರ ಒಂದು ಗಂಟೆಗೂ ಕಡಿಮೆ ಅವಧಿಯಲ್ಲಿ ಸ್ಮಾರ್ಟ್ ಗ್ಯಾಜೆಟ್ ಬಳಕೆ ಮಾಡುತ್ತಿದ್ದು, ಇಂತಹ ಮಕ್ಕಳಲ್ಲಿ ರೋಗದ ಅಪಾಯ ಕಡಿಮೆ ಕಂಡುಬಂದಿದೆ.

ಇನ್ನು ಶೇ.28ರಷ್ಟು ಮಕ್ಕಳು 1-2 ಗಂಟೆ ಅವಧಿ ಸ್ಮಾರ್ಟ್ ಗ್ಯಾಜೆಟ್ ಬಳಕೆ ಮಾಡಿದರೆ, ಶೇ.13 ರಷ್ಟು ಮಕ್ಕಳು 2-3 ಗಂಟೆ ಅವಧಿಯವರೆಗೆ ಮತ್ತು ಶೇ.18ರಷ್ಟು ಮಕ್ಕಳು 3-4 ಗಂಟೆ ಹೊತ್ತು ಸ್ಮಾರ್ಟ್ ಗ್ಯಾಜೆಟ್ ಬಳಕೆ ಮಾಡುತ್ತಿದ್ದರು ಎಂದು ತಜ್ಞರು ಹೇಳಿದ್ದಾರೆ.
ಈ ಪೈಕಿ 3-4 ಗಂಟೆ ಹೊತ್ತು ಸ್ಮಾರ್ಟ್ ಗ್ಯಾಜೆಟ್ ಬಳಕೆ ಮಾಡುವ ಮಕ್ಕಳಲ್ಲಿ ಟೈಪ್-2 ಸಕ್ಕರೆ ಕಾಯಿಲೆ ಅಪಾಯ ಹೆಚ್ಚಿತ್ತು ಎಂದು ವೈದ್ಯರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿನಿಮಾ ರಂಗದಲ್ಲಿ ‘ನವರಸನಾಯಕ’ ಜಗ್ಗೇಶ್ ಅವರಿಗೆ 40 ವರ್ಷಗಳ ಅನುಭವ ಇದೆ. ಅವರಿಗೆ ಸಿನಿಮಾ ಬಗ್ಗೆ ಸಾಕಷ್ಟು ಅನುಭವವಿದೆ. ಸೋಲು-ಗೆಲುವು ಕಂಡ ಅವರು 75 ಲಕ್ಷ ರೂಪಾಯಿ ನಷ್ಟ ಮಾಡಿಕೊಂಡಿದ್ದರು. ಈ ಸಾಲ ತೀರಿಸಲು ಮನೆ ಮಾರಿದ್ದರಂತೆ. ಇದರ ಬಗ್ಗೆ ಜಗ್ಗೇಶ್ ಹೇಳಿದ್ದೇನು? ‘ನವರಸನಾಯಕ’ ಜಗ್ಗೇಶ್ ನಟನೆ, ಮಿಮಿಕ್ರಿ, ಹಾಡುಗಾರಿಕೆಯಲ್ಲಿ ತೊಡಗಿಕೊಂಡವರು. ಬಹುತೇಕ ಎಲ್ಲ ವಿಚಾರಗಳ ಬಗ್ಗೆಯೂ ಅವರು ಮಾತನಾಡುತ್ತಾರೆ, ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುವ ಅವರು ಸಿನಿಮಾ ಮಾಡಲು ಹೋಗಿ 70 ಲಕ್ಷ ರೂಪಾಯಿ ಕಳೆದುಕೊಂಡ…
ನಿಂಬೆ ಹಣ್ಣಿನ ರಸಕ್ಕೆ ಬಿಸಿ ನೀರು ಸೇರಿಸಿ ಕುಡಿಯುವುದರಿಂದ ನಿರ್ಜಲೀಕರಣ ಸಮಸ್ಯೆ ಕಾಡುವುದಿಲ್ಲ. ಇದು ನಮ್ಮ ದೇಹದಲ್ಲಿರುವ ವಿಷಯುಕ್ತ ಪದಾರ್ಥವನ್ನು ಹೊರಹಾಕುತ್ತದೆ. ಈ ನಿಂಬೆ ನೀರಿಗೆ ಒಂದು ಚಿಟಕಿ ಅರಿಶಿನ ಬೆರೆಸಿ ಕುಡಿಯುವುದರಿಂದ ದುಪ್ಪಟ್ಟು ಲಾಭವಾಗುತ್ತದೆ. ನಿಂಬೆ ಹಣ್ಣಿನಲ್ಲಿ ಸಿಟ್ರಿಕ್ ಆಮ್ಲವಿದ್ದರೆ ಅರಿಶಿನದಲ್ಲಿ ಕರ್ಕ್ಯುಮಿನ್ ಅಂಶವಿರುತ್ತದೆ. ಇವೆರಡೂ ನಮ್ಮ ದೇಹ ಸೇರುವುದರಿಂದ ಸಾಕಷ್ಟು ಲಾಭವಾಗುತ್ತದೆ. 1.ನಿಂಬೆ ರಸಕ್ಕೆ ಅರಿಶಿನ ಬೆರೆಸಿ ಕುಡಿಯುವುದರಿಂದ ಕಿಡ್ನಿ ಹಾಗೂ ಲಿವರ್ ಸಮಸ್ಯೆ ಕಡಿಮೆಯಾಗುತ್ತದೆ. 2.ಹೃದಯ ಸಂಬಂಧಿ ಖಾಯಿಲೆಗೆ ಇದು ಹೇಳಿ ಮಾಡಿಸಿದ…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ ನೀವು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಿದಲ್ಲಿ ಖಿನ್ನತೆಗೊಳಗಾಗಬೇಡಿ. ಆಹಾರದ ಸ್ವಾದಕ್ಕೆ ಉಪ್ಪು ಬೇಕಾದ ಹಾಗೆ ಅತೃಪ್ತಿಯಿಂದ ಮಾತ್ರ ನೀವು ಸಂತೋಷದ ಮೌಲ್ಯವನ್ನು ಅರ್ಥ ಮಾಡಿಕೊಳ್ಳುತ್ತೀರಿ. ನಿಮ್ಮ ಮನಸ್ಥಿತಿಯನ್ನು ಬದಲಾಯಿಸಲು ಕೆಲವು ಸಾಮಾಜಿಕ ಸಮಾರಂಭಗಳಿಗೆ ಹಾಜರಾಗಿ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಅತಿಥಿಗಳು…
ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ. ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ…
ಈಗಾಗಲೇ ನಮಗೆಲ್ಲರಿಗೂ ತಿಳಿದಿರುವ ವಿಷಯವೂ ಕರಾವಳಿ ಭಾಗದಲ್ಲಿ ಕಾಣಿಸಿಕೊಳ್ಳುತ್ತಿರುವ ಕಾರ್ಗಿಲ್ ಮೀನಿನ ಕಾಟವು ಮುಂದುವರೆದಿದೆ ಇದರಿಂದ ಮಂಗಳೂರಿನ ಕಡಲ ತೀರದಲ್ಲಿ ಕಂಡಿದ್ದ ಕಾರ್ಗಿಲ್ ಮೀನುಗಳು, ಕಳೆದೊಂದು ವಾರದಿಂದ ಗಂಗೊಳ್ಳಿ ಮೀನುಗಾರರಿಗೂ ಬಾಧಿಸಿದ್ದು, ಈ ಭಾಗದ ಮೀನುಗಾರರಲ್ಲಿ ಆತಂಕ ಉಂಟು ಮಾಡಿದೆ. ಗಂಗೊಳ್ಳಿ ಬಂದರಿಗೂ ಕಾರ್ಗಿಲ್ ಮೀನುಗಳು ವ್ಯಾಪಿಸುತ್ತಿವೆ. ಹೀಗಾಗಿ, ಮೀನುಗಾರರು ಕಾರ್ಗಿಲ್ ಮೀನುಗಳನ್ನು ಬೇರ್ಪಡಿಸುವಲ್ಲಿ ತೊಡಗಿಕೊಂಡಿದ್ದು, ಬಂಗುಡೆ, ಬೂತಾಯಿ ಹಾಗೂ ಇತರೆ ಮೀನುಗಳ ಸಂಖ್ಯೆಯಲ್ಲಿ ಭಾರೀ ಪ್ರಮಾಣದ ಇಳಿಕೆ ಕಂಡಿದೆ. ಲಕ್ಷದ್ವೀಪ, ಹವಳದ ದಿಬ್ಬಗಳಲ್ಲಿ ಹೆಚ್ಚು ವಾಸಿಸುವ…
ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ