ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಿಸುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ನಿಮಗೆ ಅರಿವಿದೆಯೇ…
ಪುಟ್ಟ ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿಗಳನ್ನು ವೀಕ್ಷಿಸುವ ಹವ್ಯಾಸ ಬೆಳೆಸಿಕೊಂಡರೆ ಅಂತಹ ಮಕ್ಕಳಲ್ಲಿ ಸಕ್ಕರೆ ಕಾಯಿಲೆ ಏರ್ಪಡುವ ಅಪಾಯ ಹೆಚ್ಚು ಎಂದು ವೈದ್ಯಕೀಯ ತಜ್ಞರು ಹೇಳಿದ್ದಾರೆ.
ಕೇವಲ ಸಕ್ಕರೆ ಕಾಯಿಲೆ ಮಾತ್ರವಷ್ಟೇ ಅಲ್ಲ ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿಗಳನ್ನು ವೀಕ್ಷಿಸುತ್ತಿದ್ದರೆ ಅವರ ಕಣ್ಣಿಗೂ ಗಂಭೀರ ಹಾನಿಯಾಗಲಿದ್ದು, ಮಕ್ಕಳ ಮೆದುಳಿನ ನರಮಂಡಲಕ್ಕೂ ಹಾನಿಯಾಗುತ್ತದೆ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಟಿವಿ ಮತ್ತು ಸ್ಮಾರ್ಟ್ ಫೋನ್ ಗಳಿಂದಾಗಿ ಜನರ ಜೀವನ ಶೈಲಿಯೇ ಬದಲಾಗಿ ಹೋಗಿದ್ದು, ಸ್ಮಾರ್ಟ್ ಫೋನ್ ಗಳು ಜನರ ಜೀವನದಲ್ಲಿ ಬೆರೆತು ಹೋಗಿದೆ.
ಇದಕ್ಕೆ ಪೂರಕ ಎಂಬಂತೆ ರಿಯಾಲಿಟಿ ಷೋಗಳ ಅಬ್ಬರ ಮತ್ತು ಫ್ರೀ ಆ್ಯಪ್ ಗಳ ಆಡಂಬರ ಕೂಡ ಮಕ್ಕಳಲ್ಲಿ ಇಂತಹ ಅಪಾಯಕಾರಿ ಬೆಳವಣಿಗೆ ಹೆಚ್ಚಾಗಲು ಕಾರಣವಾಗುತ್ತಿದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

ಬದಲಾದ ಜೀವನ ಶೈಲಿ ಹಾಗೂ ವಿಭಕ್ತ ಕುಟುಂಬಗಳಲ್ಲಿ ಮಕ್ಕಳ ಪಾಲನೆ ಅಷ್ಟು ಸುಲಭವಲ್ಲ. ಹೀಗಾಗಿ ಇತ್ತೀಚಿನ ಪೋಷಕರು ಮಕ್ಕಳು ಅತ್ತಾಗ, ಮಕ್ಕಳಿಗೆ ಹಸಿವಾದಾಗ ಸ್ಮಾರ್ಟ್ ಫೋನ್ ತೋರಿಸಿ ಸಮಾಧಾನ ಮಾಡುವಂತಹ ಪರಿಪಾಠ ತಾನೇ ತಾನಾಗಿ ಬೆಳೆದಿದೆ. ಇದೂ ಕೂಡ ಅಪಾಯಕಾರಿ ಎಂದು ವೈದ್ಯರು ತಿಳಿಸಿದ್ದಾರೆ. ಇಲ್ಲಿ ಓದಿ :- ನಿಮ್ಮ ಕಣ್ಣುಗಳ ಆರೋಗ್ಯದ ಕಾಳಜಿ ಇದ್ದರೆ ಇದನ್ನು ಓದಿ…..

ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಣೆಯಿಂದಾಗಿ ಮಕ್ಕಳ ಕಣ್ಣಿನ ಮೇಲೆ ಹೆಚ್ಚು ಒತ್ತಡ ಬಿದ್ದು, ಅವುಗಳ ನರಗಳಿಗೆ ಹಾನಿಯಾಗುತ್ತದೆ. ಅಂತೆಯೇ ಮೆದುಳಿನ ನರಮಂಡಲ ವ್ಯವಸ್ಥೆಯ ಕಾರ್ಯದ ಸಾಮರ್ಥ್ಯದ ಮೇಲೂ ಇದು ವ್ಯತಿರಿಕ್ತ ಪರಿಣಾಮ ಬೀರುತ್ತದೆ.
ಇನ್ನು ಪ್ರತಿನಿತ್ಯ ಮಕ್ಕಳು ಒಂದು ಗಂಟೆಗೂ ಅಧಿಕ ಸಮಯ ಸ್ಮಾರ್ಟ್ ಫೋನ್ ಮತ್ತು ಟಿವಿ ನೋಡುತ್ತ ಮಗ್ನರಾಗಿದ್ದರೆ ಅಂತಹ ಮಕ್ಕಳಲ್ಲಿ ಖಂಡಿತಾ ಸಕ್ಕರೆ ಕಾಯಿಲೆ ಅಪಾಯ ಹೆಚ್ಚು.
ಸತತವಾಗಿ ಟಿವಿ ಮತ್ತು ಸ್ಮಾರ್ಟ್ ಫೋನ್ ನೋಡುವುದರಿಂದ ಮಕ್ಕಳ ವಯಸ್ಸಿಗೆ ಸಂಬಂಧಿಸಿದ ನೋವುಗಳು ಆರಂಭವಾಗುತ್ತವೆ.
ಇದೇ ಮುಂದುವರೆದರೆ ಮಕ್ಕಳು ಯುವ ಹಂತಕ್ಕೆ ಬರುವ ವೇಳೆಗೆ ಸಕ್ಕರೆ ಕಾಯಿಲೆಗೆ ತುತ್ತಾಗಿರುತ್ತಾರೆ. ಇಂತಹ ಸಾವಿರಾರು ಪ್ರಕರಣಗಳು ವಿಶ್ವಾದ್ಯಂತ ವರದಿಯಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಈವರೆಗೂ ಮಕ್ಕಳ ದೈಹಿಕ ಚಟುವಟಿಕೆ, ಆಹಾರ ವ್ಯವಸ್ಥೆ ಮತ್ತು ಕುಟುಂಬದ ಆರೋಗ್ಯ ಇತಿಹಾಸದಿಂದ ಮಧುಮೇಹ ಖಾಯಿಲೆಯನ್ನು ಪರಿಗಣಿಸಲಾಗುತ್ತಿತ್ತು. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಸ್ಮಾರ್ಟ್ ಗ್ಯಾಜೆಟ್ ಗಳು ಕೂಡ ಪರಿಣಾಮ ಬೀರುತ್ತಿವೆ.
ಈ ಬಗ್ಗೆ ತಜ್ಞರು ಸುಮಾರು 4500 ಮಕ್ಕಳ ಜೀವನ ಶೈಲಿಯನ್ನು ಅಧ್ಯಯನ ಮಾಡಿದ್ದು, ಈ ಪೈಕಿ ಹೆಚ್ಚು ಹೊತ್ತು ಸ್ಮಾರ್ಟ್ ಗ್ಯಾಜೆಟ್ ಗಳಾದ ಸ್ಮಾರ್ಟ್ ಫೋನ್, ಟಿವಿ, ಕಂಪ್ಯೂಟರ್, ಗೇಮರ್ ಗಳಲ್ಲಿ ಹೆಚ್ಚು ಹೊತ್ತು ಕಳೆಯುವ ಮಕ್ಕಳಲ್ಲಿ ರೋಗದ ಅಪಾಯ ಹೆಚ್ಚಾಗಿತ್ತು.
ಇನ್ನು ಈ ಪೈಕಿ ಶೇ.37ರಷ್ಟು ಮಕ್ಕಳು ಮಾತ್ರ ಒಂದು ಗಂಟೆಗೂ ಕಡಿಮೆ ಅವಧಿಯಲ್ಲಿ ಸ್ಮಾರ್ಟ್ ಗ್ಯಾಜೆಟ್ ಬಳಕೆ ಮಾಡುತ್ತಿದ್ದು, ಇಂತಹ ಮಕ್ಕಳಲ್ಲಿ ರೋಗದ ಅಪಾಯ ಕಡಿಮೆ ಕಂಡುಬಂದಿದೆ.

ಇನ್ನು ಶೇ.28ರಷ್ಟು ಮಕ್ಕಳು 1-2 ಗಂಟೆ ಅವಧಿ ಸ್ಮಾರ್ಟ್ ಗ್ಯಾಜೆಟ್ ಬಳಕೆ ಮಾಡಿದರೆ, ಶೇ.13 ರಷ್ಟು ಮಕ್ಕಳು 2-3 ಗಂಟೆ ಅವಧಿಯವರೆಗೆ ಮತ್ತು ಶೇ.18ರಷ್ಟು ಮಕ್ಕಳು 3-4 ಗಂಟೆ ಹೊತ್ತು ಸ್ಮಾರ್ಟ್ ಗ್ಯಾಜೆಟ್ ಬಳಕೆ ಮಾಡುತ್ತಿದ್ದರು ಎಂದು ತಜ್ಞರು ಹೇಳಿದ್ದಾರೆ.
ಈ ಪೈಕಿ 3-4 ಗಂಟೆ ಹೊತ್ತು ಸ್ಮಾರ್ಟ್ ಗ್ಯಾಜೆಟ್ ಬಳಕೆ ಮಾಡುವ ಮಕ್ಕಳಲ್ಲಿ ಟೈಪ್-2 ಸಕ್ಕರೆ ಕಾಯಿಲೆ ಅಪಾಯ ಹೆಚ್ಚಿತ್ತು ಎಂದು ವೈದ್ಯರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೊಲೀಸ್ ಮಹಿಳಾ ಸಿಬ್ಬಂದಿಯ ಮಾನಸಿಕ ಒತ್ತಡ ಕಡಿಮೆ ಮಾಡಲು ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಗರ್ಭಿಣಿಯರಿಗೆ ಪೊಲೀಸ್ ಠಾಣೆಯಲ್ಲಿ ಸೀಮಂತ ಮಾಡಿದ್ದಾರೆ. ಪೊಲೀಸರು ಗರ್ಭಿಣಿ ಸಿಬ್ಬಂದಿಗೆ ಆರೋಗ್ಯಕರ ವಾತಾವರಣ ನಿರ್ಮಾಣ ಮಾಡುವ ಪ್ರಯತ್ನ ಮಾಡಿದ್ದು, ಠಾಣೆಯ ಎಲ್ಲಾ ಸಿಬ್ಬಂದಿ ಸೇರಿ ಶಾಸ್ತ್ರೋಕ್ತವಾಗಿ ಸೀಮಂತ ನೆರವೇರಿಸಿದ್ದಾರೆ. ಠಾಣೆಯ ಮಹಿಳಾ ಪೊಲೀಸ್ ಪೇದೆಯಾಗಿದ್ದ ಲಕ್ಷ್ಮೀ ಹಾಗೂ ಮತ್ತೊಬ್ಬ ಮಹಿಳಾ ಪೇದೆ ವೀರಮ್ಮ ಅವರಿಗೆ ಸೀಮಂತ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಕೆಲಸದ ಒತ್ತಡ, ಮಾನಸಿಕ…
ಗೌರಿಯನ್ನ ಅತಿ ಎತ್ತರದ ಬೆಟ್ಟದಿಂದ ತಳ್ಳಲಾಗಿದೆ. ಹೀಗೆ, ಬೆಟ್ಟದಿಂದ ಬಿದ್ದ ಗೌರಿ ಸಾಯಲೇ ಇಲ್ಲ. ಅಲ್ಲಿಂದ ಆದ ಅದ್ಭುತಗಳು ಒಂದೆರಡಲ್ಲ. ಇದನ್ನ ಕಂಡು ಟ್ರೋಲ್ ಪೇಜ್ ಗಳು ಪುಟ್ಟಗೌರಿಯನ್ನ ಟ್ರೋಲ್ ಮಾಡಿದ್ದಾರೆ.
ಮತದಾನ ಪ್ರತಿಯೊಬ್ಬರ ಹಕ್ಕು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವಾದರೂ , ಮತದಾನದ ದಿನ ಎಷ್ಟೋ ಮಂದಿ ಮನೆಯಿಂದ ಹೊರಬರುವುದಿಲ್ಲ.. ಅದರಲ್ಲಿ ಕೆಲವರು ಯುವ ಜನತೆಯೂ ಕೂಡ ಸೇರಿರುತ್ತಾರೆ..
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(5 ಡಿಸೆಂಬರ್, 2018) ನಿಮ್ಮ ಮನದನ್ನೆಯ ವಿಚಿತ್ರ ನಡವಳಿಕೆ ಇಂದು ನಿಮ್ಮ ಪ್ರೇಮವನ್ನು ಘಾಸಿಗೊಳಿಸುತ್ತದೆ. ಹೊಸ ಪ್ರಸ್ತಾಪಗಳ ಅಕರ್ಷಕವಾಗಿದ್ದರೂ ಯಾವುದೇ ಆತುರದ…
ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ.
ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು. ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು,…