News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ನಿಮ್ಮ ಮಕ್ಕಳ ಬಗ್ಗೆ ಕಾಳಜಿ ಇದ್ದರೆ ಇದನ್ನು ಓದಿ..ಮರೆಯದೇ ಶೇರ್ ಮಾಡಿ..

827

ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಿಸುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ನಿಮಗೆ ಅರಿವಿದೆಯೇ…

ಪುಟ್ಟ ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿಗಳನ್ನು ವೀಕ್ಷಿಸುವ ಹವ್ಯಾಸ ಬೆಳೆಸಿಕೊಂಡರೆ ಅಂತಹ ಮಕ್ಕಳಲ್ಲಿ ಸಕ್ಕರೆ ಕಾಯಿಲೆ ಏರ್ಪಡುವ ಅಪಾಯ ಹೆಚ್ಚು ಎಂದು ವೈದ್ಯಕೀಯ ತಜ್ಞರು ಹೇಳಿದ್ದಾರೆ.

ಕೇವಲ ಸಕ್ಕರೆ ಕಾಯಿಲೆ ಮಾತ್ರವಷ್ಟೇ ಅಲ್ಲ ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿಗಳನ್ನು ವೀಕ್ಷಿಸುತ್ತಿದ್ದರೆ ಅವರ ಕಣ್ಣಿಗೂ ಗಂಭೀರ ಹಾನಿಯಾಗಲಿದ್ದು, ಮಕ್ಕಳ ಮೆದುಳಿನ ನರಮಂಡಲಕ್ಕೂ ಹಾನಿಯಾಗುತ್ತದೆ ಎಂದು  ವೈದ್ಯರು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಟಿವಿ ಮತ್ತು ಸ್ಮಾರ್ಟ್ ಫೋನ್ ಗಳಿಂದಾಗಿ ಜನರ ಜೀವನ ಶೈಲಿಯೇ ಬದಲಾಗಿ ಹೋಗಿದ್ದು, ಸ್ಮಾರ್ಟ್ ಫೋನ್ ಗಳು ಜನರ ಜೀವನದಲ್ಲಿ ಬೆರೆತು ಹೋಗಿದೆ.

ಇದಕ್ಕೆ ಪೂರಕ  ಎಂಬಂತೆ ರಿಯಾಲಿಟಿ ಷೋಗಳ ಅಬ್ಬರ ಮತ್ತು ಫ್ರೀ ಆ್ಯಪ್ ಗಳ ಆಡಂಬರ ಕೂಡ ಮಕ್ಕಳಲ್ಲಿ ಇಂತಹ ಅಪಾಯಕಾರಿ ಬೆಳವಣಿಗೆ ಹೆಚ್ಚಾಗಲು ಕಾರಣವಾಗುತ್ತಿದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

ಬದಲಾದ ಜೀವನ ಶೈಲಿ ಹಾಗೂ ವಿಭಕ್ತ ಕುಟುಂಬಗಳಲ್ಲಿ ಮಕ್ಕಳ ಪಾಲನೆ ಅಷ್ಟು ಸುಲಭವಲ್ಲ. ಹೀಗಾಗಿ ಇತ್ತೀಚಿನ ಪೋಷಕರು ಮಕ್ಕಳು ಅತ್ತಾಗ, ಮಕ್ಕಳಿಗೆ ಹಸಿವಾದಾಗ ಸ್ಮಾರ್ಟ್ ಫೋನ್ ತೋರಿಸಿ ಸಮಾಧಾನ ಮಾಡುವಂತಹ  ಪರಿಪಾಠ ತಾನೇ ತಾನಾಗಿ ಬೆಳೆದಿದೆ. ಇದೂ ಕೂಡ ಅಪಾಯಕಾರಿ ಎಂದು ವೈದ್ಯರು ತಿಳಿಸಿದ್ದಾರೆ. ಇಲ್ಲಿ ಓದಿ :- ನಿಮ್ಮ ಕಣ್ಣುಗಳ ಆರೋಗ್ಯದ ಕಾಳಜಿ ಇದ್ದರೆ ಇದನ್ನು ಓದಿ…..

ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಣೆಯಿಂದಾಗಿ ಮಕ್ಕಳ ಕಣ್ಣಿನ ಮೇಲೆ ಹೆಚ್ಚು ಒತ್ತಡ ಬಿದ್ದು, ಅವುಗಳ ನರಗಳಿಗೆ  ಹಾನಿಯಾಗುತ್ತದೆ. ಅಂತೆಯೇ ಮೆದುಳಿನ ನರಮಂಡಲ ವ್ಯವಸ್ಥೆಯ ಕಾರ್ಯದ ಸಾಮರ್ಥ್ಯದ ಮೇಲೂ ಇದು ವ್ಯತಿರಿಕ್ತ ಪರಿಣಾಮ ಬೀರುತ್ತದೆ.

ಒಂದು ಗಂಟೆಗೂ ಅಧಿಕ ಸಮಯ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಿಸಿದರೆ ಸಕ್ಕರೆ ಕಾಯಿಲೆ ಖಂಡಿತಾ :-

ಇನ್ನು ಪ್ರತಿನಿತ್ಯ ಮಕ್ಕಳು ಒಂದು ಗಂಟೆಗೂ ಅಧಿಕ ಸಮಯ ಸ್ಮಾರ್ಟ್ ಫೋನ್ ಮತ್ತು ಟಿವಿ ನೋಡುತ್ತ ಮಗ್ನರಾಗಿದ್ದರೆ ಅಂತಹ ಮಕ್ಕಳಲ್ಲಿ ಖಂಡಿತಾ ಸಕ್ಕರೆ ಕಾಯಿಲೆ ಅಪಾಯ ಹೆಚ್ಚು.

ಸತತವಾಗಿ ಟಿವಿ ಮತ್ತು ಸ್ಮಾರ್ಟ್ ಫೋನ್  ನೋಡುವುದರಿಂದ ಮಕ್ಕಳ ವಯಸ್ಸಿಗೆ ಸಂಬಂಧಿಸಿದ ನೋವುಗಳು ಆರಂಭವಾಗುತ್ತವೆ.

ಇದೇ ಮುಂದುವರೆದರೆ ಮಕ್ಕಳು ಯುವ ಹಂತಕ್ಕೆ ಬರುವ ವೇಳೆಗೆ ಸಕ್ಕರೆ ಕಾಯಿಲೆಗೆ ತುತ್ತಾಗಿರುತ್ತಾರೆ. ಇಂತಹ ಸಾವಿರಾರು ಪ್ರಕರಣಗಳು  ವಿಶ್ವಾದ್ಯಂತ ವರದಿಯಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಈವರೆಗೂ ಮಕ್ಕಳ ದೈಹಿಕ ಚಟುವಟಿಕೆ, ಆಹಾರ ವ್ಯವಸ್ಥೆ ಮತ್ತು ಕುಟುಂಬದ ಆರೋಗ್ಯ ಇತಿಹಾಸದಿಂದ ಮಧುಮೇಹ ಖಾಯಿಲೆಯನ್ನು ಪರಿಗಣಿಸಲಾಗುತ್ತಿತ್ತು. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಸ್ಮಾರ್ಟ್ ಗ್ಯಾಜೆಟ್ ಗಳು  ಕೂಡ ಪರಿಣಾಮ ಬೀರುತ್ತಿವೆ.

ಈ ಬಗ್ಗೆ ತಜ್ಞರು ಸುಮಾರು 4500 ಮಕ್ಕಳ ಜೀವನ ಶೈಲಿಯನ್ನು ಅಧ್ಯಯನ ಮಾಡಿದ್ದು, ಈ ಪೈಕಿ ಹೆಚ್ಚು ಹೊತ್ತು ಸ್ಮಾರ್ಟ್ ಗ್ಯಾಜೆಟ್ ಗಳಾದ ಸ್ಮಾರ್ಟ್ ಫೋನ್, ಟಿವಿ, ಕಂಪ್ಯೂಟರ್, ಗೇಮರ್ ಗಳಲ್ಲಿ ಹೆಚ್ಚು ಹೊತ್ತು ಕಳೆಯುವ  ಮಕ್ಕಳಲ್ಲಿ ರೋಗದ ಅಪಾಯ ಹೆಚ್ಚಾಗಿತ್ತು.

ಇನ್ನು ಈ ಪೈಕಿ ಶೇ.37ರಷ್ಟು ಮಕ್ಕಳು ಮಾತ್ರ ಒಂದು ಗಂಟೆಗೂ ಕಡಿಮೆ ಅವಧಿಯಲ್ಲಿ ಸ್ಮಾರ್ಟ್ ಗ್ಯಾಜೆಟ್ ಬಳಕೆ ಮಾಡುತ್ತಿದ್ದು, ಇಂತಹ ಮಕ್ಕಳಲ್ಲಿ ರೋಗದ ಅಪಾಯ ಕಡಿಮೆ  ಕಂಡುಬಂದಿದೆ.

ಇನ್ನು ಶೇ.28ರಷ್ಟು ಮಕ್ಕಳು 1-2 ಗಂಟೆ ಅವಧಿ ಸ್ಮಾರ್ಟ್ ಗ್ಯಾಜೆಟ್ ಬಳಕೆ ಮಾಡಿದರೆ, ಶೇ.13 ರಷ್ಟು ಮಕ್ಕಳು 2-3 ಗಂಟೆ ಅವಧಿಯವರೆಗೆ ಮತ್ತು ಶೇ.18ರಷ್ಟು ಮಕ್ಕಳು 3-4 ಗಂಟೆ ಹೊತ್ತು ಸ್ಮಾರ್ಟ್ ಗ್ಯಾಜೆಟ್ ಬಳಕೆ  ಮಾಡುತ್ತಿದ್ದರು ಎಂದು ತಜ್ಞರು ಹೇಳಿದ್ದಾರೆ.

ಈ ಪೈಕಿ 3-4 ಗಂಟೆ ಹೊತ್ತು ಸ್ಮಾರ್ಟ್ ಗ್ಯಾಜೆಟ್ ಬಳಕೆ ಮಾಡುವ ಮಕ್ಕಳಲ್ಲಿ ಟೈಪ್-2 ಸಕ್ಕರೆ ಕಾಯಿಲೆ ಅಪಾಯ ಹೆಚ್ಚಿತ್ತು ಎಂದು ವೈದ್ಯರು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಈ ಆ್ಯಪ್’ನಲ್ಲಿ ಕೆಟ್ಟದಾಗಿ ಮೆಸೇಜ್ ಕಳುಹಿಸುತ್ತಿರಾ,ಎಚ್ಚರ..!ಬಯಲಾಗಲಿದೆ ರಹಸ್ಯ!ಹೇಗೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

    ಸರಹ  ಆ್ಯಪ್ ಎಂಬ ಹೆಸರಿನ ಈ ಅಪ್ಲಿಕೇಷನ್ ಈಗಂತೂ ತುಂಬಾ ಟ್ರೆಂಡ್ ಕ್ರಿಯೇಟ್ ಮಾಡಿದೆ. ಇದರ ಮೂಲಕ ಯಾರಿಗೂ ನೀವು ರಹಸ್ಯ ಮೆಸೇಜ್ ಕಳುಹಿಸಬಹುದು ಅಗಿದೆ. ಜೈನ್ ಅಲಾಬ್ದೀನ್ ತೌಫಿಕ್ ಎಂಬ ಸೌದಿಅರೇಬಿಯಾದ ವ್ಯಕ್ತಿ ತಯಾರಿಸಿರುವ ಅಪ್ಲಿಕೇಷನ್ ಇದಾಗಿದೆ .

  • ಸುದ್ದಿ

    ಆನೆಮರಿ ಮಗುವಿನಂತೆ ಬಾಟಲಿ ಹಿಡಿದು ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್.

    ಹೌದು. ಆನೆಮರಿಯೊಂದು ಓಡಿ ಬಂದು ಪುಟ್ಟ ಮಗುವಿನಂತೆ ಬಾಟಲಿಯಲ್ಲಿ ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗಿದೆ. ಈ ವಿಡಿಯೋ 39 ಸೆಕೆಂಡ್ ಇದ್ದು ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಲಾಗಿದೆ, ಇದುವರೆಗೂ ಈ ವಿಡಿಯೋವನ್ನು ಸಾವಿರಾರು ಬಾರಿ ನೋಡಿದ್ದಾರೆ. ತಾಯಿಯನ್ನು ಕಳೆದುಕೊಂಡಿರುವ ಈ ಪುಟ್ಟ ಆನೆಯನ್ನು ಶೆಲ್ಡ್ರಿಕ್ ವೈಲ್ಡ್ ಲೈಫ್ ಸಂಸ್ಥೆ ಸಿಬ್ಬಂದಿ ನೋಡಿಕೊಳ್ಳುತ್ತಿದೆ ಈ ಆನೆಮರಿಗೆ ದಿನನಿತ್ಯ ಹಾಲಿನ ಬಾಟಲಿನಲ್ಲಿ ಹಾಲನ್ನು ನೀಡುತ್ತಿದ್ದಾರೆ. ಈ ಆನೆಮರಿ ಹಾಲಿನ ಬಾಟಲ್ ಅನ್ನು ನೋಡಿದರೆ ಸಾಕು ತನ್ನ…

  • ಕ್ರೀಡೆ

    ಧೋನಿಯಂತೆ ರಾಹುಲ್‍ಗೆ ಹೆಚ್ಚು ಅವಕಾಶ ಸಿಗಲಿ, ಕನ್ನಡಿಗನ ಬೆಂಬಲಕ್ಕೆ ನಿಂತ ವೀರೇಂದ್ರ ಸೆಹ್ವಾಗ್.

    ಕನ್ನಡಿಗ ಕೆ.ಎಲ್.ರಾಹುಲ್ ಟೀಂ ಇಂಡಿಯಾ ಪರ ಬ್ಯಾಟಿಂಗ್ ಮಾತ್ರವಲ್ಲದೆ, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ವಿಕೆಟ್ ಕೀಪರ್ ಆಗಿ ಉತ್ತಮ ಪ್ರದರ್ಶನ ನೀಡಿದರು. ಇದರಿಂದ ಆಕರ್ಷಿತರಾದ ಭಾರತದ ಮಾಜಿ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ ಸೋಮವಾರ ರಾಹುಲ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಕೆ.ಎಲ್.ರಾಹುಲ್ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ಅವರಂತೆ ಹೆಚ್ಚಿನ ಅವಕಾಶಗಳನ್ನು ಪಡೆಯಬೇಕು. 5ನೇ ಕ್ರಮಾಂಕದಲ್ಲಿ ರಾಹುಲ್ ಬ್ಯಾಟಿಂಗ್ ಮಾಡಿ ತಂಡಕ್ಕೆ ಅತ್ಯುತ್ತಮ ಫಿನಿಶರ್ ಪಾತ್ರವನ್ನು ವಹಿಸಬಹುದು. ಅಷ್ಟೇ ಅಲ್ಲದೆ ತಂಡಕ್ಕೆ ಉತ್ತಮ ವಿಕೆಟ್ ಕೀಪರ್…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 2 ಫೆಬ್ರವರಿ, 2019 ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆಭಂಗ ತರುತ್ತದೆ. ನೀವು…

  • ಆರೋಗ್ಯ, ಉಪಯುಕ್ತ ಮಾಹಿತಿ

    ನೆನಸಿದ ಕಡಲೆಕಾಳು ತಿನ್ನೋದ್ರಿಂದ ಆಗೋ ಪ್ರಯೋಜನಗಳನ್ನ ಕೇಳಿದ್ರೆ, ಈಗ್ಲೇ ತಿನ್ನೋಕೆ ಸ್ಟಾರ್ಟ್ ಮಾಡ್ತೀರಾ..!

    ಕಡಲೆಯಿಂದ ನಾವು ಅನೇಕ ಅಡುಗೆಗಳನ್ನು ಮಾಡುತ್ತೇವೆ. ಇದರಲ್ಲಿ ಪಲ್ಯ ಮಾಡುತ್ತೇವೆ. ಕಾಳಿನಂತೆ ಬೇಯಿಸಿಕೊಂಡು ತಿನ್ನುತ್ತೇವೆ. ಹಲವು ಖಾದ್ಯಗಳನ್ನು ಮಾಡುತ್ತಾರೆ. ಅದೆಷ್ಟೋ ಆಹಾರದಲ್ಲಿ ಕಡಲೆ ಬಳಸುತ್ತಾರೆ. ಕಡಲೆ ಕಾಳಿನಲ್ಲಿ ಸಾಕಷ್ಟು ಪೋಷಕಾಂಶವಿದೆ ಎಂಬುದು ಬೆರಳೆಣಿಕೆಯಷ್ಟು ಮಂದಿಗೆ ಮಾತ್ರ ಗೊತ್ತು. ದುಬಾರಿ ಬೆಲೆಯ ಬಾದಾಮಿ, ಒಣ ಹಣ್ಣುಗಳಿಗಿಂತ ಇದು ಬಹಳ ಒಳ್ಳೆಯದು. ನೆನಸಿದ ಕಡಲೆ ಕಾಳಿನಲ್ಲಿ ಪ್ರೋಟೀನ್, ಫೈಬರ್, ಮಿನರಲ್ ಹಾಗೂ ವಿಟಮಿನ್ ಬಹಳ ಪ್ರಮಾಣದಲ್ಲಿರುತ್ತದೆ. ನೆನಸಿದ ಕಡಲೆಕಾಳು ಸೇವನೆ ಮಾಡುವುದರಿಂದ ಅನೇಕ ರೋಗಗಳು ದೂರವಾಗುವ ಜೊತೆಗೆ ದೇಹಕ್ಕೆ ಹೆಚ್ಚಿನ…

  • Health, ಆರೋಗ್ಯ

    ಕಿಡ್ನಿ ಸಮಸ್ಯೆ ಇರುವವರು ಅವಶ್ಯವಾಗಿ ಈ ಆಹಾರವನ್ನು ಸೇವಿಸಬೇಕು

    ನಮ್ಮ ದೇಹದ ವಿಸರ್ಜನಾಂಗಗಳಲ್ಲಿ ಕಿಡ್ನಿಯ ಪಾತ್ರ ಅತೀ ಮಹತ್ವವನ್ನು ಪಡೆದಿದೆ. ದೇಹದಲ್ಲಿರುವ ಕಶ್ಮಲ ಮತ್ತು ವಿಷಕಾರಿ ಅಂಶಗಳನ್ನು ದೇಹದಿಂದ ಹೊರದೂಡಿ ದೇಹವನ್ನು ಸದಾ ಕಾಪಾಡುವ ಅಂಗ ಇದಾಗಿದೆ. ದೇಹದ ನೀರಿನಾಂಶದ ಮಟ್ಟವನ್ನು ಸದಾ ನಿಯಂತ್ರಣದಲ್ಲಿ ಇಟ್ಟು ಆರೋಗ್ಯವಾಗಿರುವಂತೆ ನೋಡಿಕೊಳ್ಳುತ್ತದೆ. ದೇಹದ ಈ ಅಂಗವನ್ನು ಉತ್ತಮವಾಗಿಸಿ ಆರೋಗ್ಯವನ್ನು ಸದಾ ಕಾಪಾಡಿಕೊಳ್ಳಲು ನಾವು ತೆಗೆದುಕೊಳ್ಳುವ ಆಹಾರಗಳಿಂದ ಸಾಧ್ಯ. ಕಿಡ್ನಿಯ ರೋಗಗಳನ್ನು ತಡೆಗಟ್ಟಿ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುವಂತೆ ಮಾಡಲು ತೆಗೆದುಕೊಳ್ಳಬಹುದಾದ ಆಹಾರ ಕ್ರಮಗಳ ಬಗ್ಗೆ ಇಲ್ಲಿ ಚರ್ಚಿಸಲಾಗಿದೆ. ಲಿಂಬೆಕಾಯಿ ಲಿಂಬೆಕಾಯಿಯಲ್ಲಿ ಸಿಟ್ರಿಕ್…