News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ನಿಮ್ಮ ಮಕ್ಕಳ ಬಗ್ಗೆ ಕಾಳಜಿ ಇದ್ದರೆ ಇದನ್ನು ಓದಿ..ಮರೆಯದೇ ಶೇರ್ ಮಾಡಿ..

824

ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಿಸುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ನಿಮಗೆ ಅರಿವಿದೆಯೇ…

ಪುಟ್ಟ ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿಗಳನ್ನು ವೀಕ್ಷಿಸುವ ಹವ್ಯಾಸ ಬೆಳೆಸಿಕೊಂಡರೆ ಅಂತಹ ಮಕ್ಕಳಲ್ಲಿ ಸಕ್ಕರೆ ಕಾಯಿಲೆ ಏರ್ಪಡುವ ಅಪಾಯ ಹೆಚ್ಚು ಎಂದು ವೈದ್ಯಕೀಯ ತಜ್ಞರು ಹೇಳಿದ್ದಾರೆ.

ಕೇವಲ ಸಕ್ಕರೆ ಕಾಯಿಲೆ ಮಾತ್ರವಷ್ಟೇ ಅಲ್ಲ ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿಗಳನ್ನು ವೀಕ್ಷಿಸುತ್ತಿದ್ದರೆ ಅವರ ಕಣ್ಣಿಗೂ ಗಂಭೀರ ಹಾನಿಯಾಗಲಿದ್ದು, ಮಕ್ಕಳ ಮೆದುಳಿನ ನರಮಂಡಲಕ್ಕೂ ಹಾನಿಯಾಗುತ್ತದೆ ಎಂದು  ವೈದ್ಯರು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಟಿವಿ ಮತ್ತು ಸ್ಮಾರ್ಟ್ ಫೋನ್ ಗಳಿಂದಾಗಿ ಜನರ ಜೀವನ ಶೈಲಿಯೇ ಬದಲಾಗಿ ಹೋಗಿದ್ದು, ಸ್ಮಾರ್ಟ್ ಫೋನ್ ಗಳು ಜನರ ಜೀವನದಲ್ಲಿ ಬೆರೆತು ಹೋಗಿದೆ.

ಇದಕ್ಕೆ ಪೂರಕ  ಎಂಬಂತೆ ರಿಯಾಲಿಟಿ ಷೋಗಳ ಅಬ್ಬರ ಮತ್ತು ಫ್ರೀ ಆ್ಯಪ್ ಗಳ ಆಡಂಬರ ಕೂಡ ಮಕ್ಕಳಲ್ಲಿ ಇಂತಹ ಅಪಾಯಕಾರಿ ಬೆಳವಣಿಗೆ ಹೆಚ್ಚಾಗಲು ಕಾರಣವಾಗುತ್ತಿದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

ಬದಲಾದ ಜೀವನ ಶೈಲಿ ಹಾಗೂ ವಿಭಕ್ತ ಕುಟುಂಬಗಳಲ್ಲಿ ಮಕ್ಕಳ ಪಾಲನೆ ಅಷ್ಟು ಸುಲಭವಲ್ಲ. ಹೀಗಾಗಿ ಇತ್ತೀಚಿನ ಪೋಷಕರು ಮಕ್ಕಳು ಅತ್ತಾಗ, ಮಕ್ಕಳಿಗೆ ಹಸಿವಾದಾಗ ಸ್ಮಾರ್ಟ್ ಫೋನ್ ತೋರಿಸಿ ಸಮಾಧಾನ ಮಾಡುವಂತಹ  ಪರಿಪಾಠ ತಾನೇ ತಾನಾಗಿ ಬೆಳೆದಿದೆ. ಇದೂ ಕೂಡ ಅಪಾಯಕಾರಿ ಎಂದು ವೈದ್ಯರು ತಿಳಿಸಿದ್ದಾರೆ. ಇಲ್ಲಿ ಓದಿ :- ನಿಮ್ಮ ಕಣ್ಣುಗಳ ಆರೋಗ್ಯದ ಕಾಳಜಿ ಇದ್ದರೆ ಇದನ್ನು ಓದಿ…..

ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಣೆಯಿಂದಾಗಿ ಮಕ್ಕಳ ಕಣ್ಣಿನ ಮೇಲೆ ಹೆಚ್ಚು ಒತ್ತಡ ಬಿದ್ದು, ಅವುಗಳ ನರಗಳಿಗೆ  ಹಾನಿಯಾಗುತ್ತದೆ. ಅಂತೆಯೇ ಮೆದುಳಿನ ನರಮಂಡಲ ವ್ಯವಸ್ಥೆಯ ಕಾರ್ಯದ ಸಾಮರ್ಥ್ಯದ ಮೇಲೂ ಇದು ವ್ಯತಿರಿಕ್ತ ಪರಿಣಾಮ ಬೀರುತ್ತದೆ.

ಒಂದು ಗಂಟೆಗೂ ಅಧಿಕ ಸಮಯ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಿಸಿದರೆ ಸಕ್ಕರೆ ಕಾಯಿಲೆ ಖಂಡಿತಾ :-

ಇನ್ನು ಪ್ರತಿನಿತ್ಯ ಮಕ್ಕಳು ಒಂದು ಗಂಟೆಗೂ ಅಧಿಕ ಸಮಯ ಸ್ಮಾರ್ಟ್ ಫೋನ್ ಮತ್ತು ಟಿವಿ ನೋಡುತ್ತ ಮಗ್ನರಾಗಿದ್ದರೆ ಅಂತಹ ಮಕ್ಕಳಲ್ಲಿ ಖಂಡಿತಾ ಸಕ್ಕರೆ ಕಾಯಿಲೆ ಅಪಾಯ ಹೆಚ್ಚು.

ಸತತವಾಗಿ ಟಿವಿ ಮತ್ತು ಸ್ಮಾರ್ಟ್ ಫೋನ್  ನೋಡುವುದರಿಂದ ಮಕ್ಕಳ ವಯಸ್ಸಿಗೆ ಸಂಬಂಧಿಸಿದ ನೋವುಗಳು ಆರಂಭವಾಗುತ್ತವೆ.

ಇದೇ ಮುಂದುವರೆದರೆ ಮಕ್ಕಳು ಯುವ ಹಂತಕ್ಕೆ ಬರುವ ವೇಳೆಗೆ ಸಕ್ಕರೆ ಕಾಯಿಲೆಗೆ ತುತ್ತಾಗಿರುತ್ತಾರೆ. ಇಂತಹ ಸಾವಿರಾರು ಪ್ರಕರಣಗಳು  ವಿಶ್ವಾದ್ಯಂತ ವರದಿಯಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಈವರೆಗೂ ಮಕ್ಕಳ ದೈಹಿಕ ಚಟುವಟಿಕೆ, ಆಹಾರ ವ್ಯವಸ್ಥೆ ಮತ್ತು ಕುಟುಂಬದ ಆರೋಗ್ಯ ಇತಿಹಾಸದಿಂದ ಮಧುಮೇಹ ಖಾಯಿಲೆಯನ್ನು ಪರಿಗಣಿಸಲಾಗುತ್ತಿತ್ತು. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಸ್ಮಾರ್ಟ್ ಗ್ಯಾಜೆಟ್ ಗಳು  ಕೂಡ ಪರಿಣಾಮ ಬೀರುತ್ತಿವೆ.

ಈ ಬಗ್ಗೆ ತಜ್ಞರು ಸುಮಾರು 4500 ಮಕ್ಕಳ ಜೀವನ ಶೈಲಿಯನ್ನು ಅಧ್ಯಯನ ಮಾಡಿದ್ದು, ಈ ಪೈಕಿ ಹೆಚ್ಚು ಹೊತ್ತು ಸ್ಮಾರ್ಟ್ ಗ್ಯಾಜೆಟ್ ಗಳಾದ ಸ್ಮಾರ್ಟ್ ಫೋನ್, ಟಿವಿ, ಕಂಪ್ಯೂಟರ್, ಗೇಮರ್ ಗಳಲ್ಲಿ ಹೆಚ್ಚು ಹೊತ್ತು ಕಳೆಯುವ  ಮಕ್ಕಳಲ್ಲಿ ರೋಗದ ಅಪಾಯ ಹೆಚ್ಚಾಗಿತ್ತು.

ಇನ್ನು ಈ ಪೈಕಿ ಶೇ.37ರಷ್ಟು ಮಕ್ಕಳು ಮಾತ್ರ ಒಂದು ಗಂಟೆಗೂ ಕಡಿಮೆ ಅವಧಿಯಲ್ಲಿ ಸ್ಮಾರ್ಟ್ ಗ್ಯಾಜೆಟ್ ಬಳಕೆ ಮಾಡುತ್ತಿದ್ದು, ಇಂತಹ ಮಕ್ಕಳಲ್ಲಿ ರೋಗದ ಅಪಾಯ ಕಡಿಮೆ  ಕಂಡುಬಂದಿದೆ.

ಇನ್ನು ಶೇ.28ರಷ್ಟು ಮಕ್ಕಳು 1-2 ಗಂಟೆ ಅವಧಿ ಸ್ಮಾರ್ಟ್ ಗ್ಯಾಜೆಟ್ ಬಳಕೆ ಮಾಡಿದರೆ, ಶೇ.13 ರಷ್ಟು ಮಕ್ಕಳು 2-3 ಗಂಟೆ ಅವಧಿಯವರೆಗೆ ಮತ್ತು ಶೇ.18ರಷ್ಟು ಮಕ್ಕಳು 3-4 ಗಂಟೆ ಹೊತ್ತು ಸ್ಮಾರ್ಟ್ ಗ್ಯಾಜೆಟ್ ಬಳಕೆ  ಮಾಡುತ್ತಿದ್ದರು ಎಂದು ತಜ್ಞರು ಹೇಳಿದ್ದಾರೆ.

ಈ ಪೈಕಿ 3-4 ಗಂಟೆ ಹೊತ್ತು ಸ್ಮಾರ್ಟ್ ಗ್ಯಾಜೆಟ್ ಬಳಕೆ ಮಾಡುವ ಮಕ್ಕಳಲ್ಲಿ ಟೈಪ್-2 ಸಕ್ಕರೆ ಕಾಯಿಲೆ ಅಪಾಯ ಹೆಚ್ಚಿತ್ತು ಎಂದು ವೈದ್ಯರು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    FlipCart Big Billion Days Offer; 50,000 ಕ್ಕೂ ಹೆಚ್ಚು ನೇರ ಉದ್ಯೋಗಗಳನ್ನು ಸೃಷ್ಟಿಸಿದೆ,.!

    ಸಾಲು ಸಾಲು ಹಬ್ಬಗಳು ಬರುತ್ತಿರುವುದು ಮತ್ತು ಬಿಗ್ ಬಿಲಿಯನ್ ಡೇಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತದ ಅತಿ ದೊಡ್ಡ ಇ-ಕಾಮರ್ಸ್ ಮಾರ್ಕೆಟ್‍ಪ್ಲೇಸ್ ಆಗಿರುವ ಫ್ಲಿಪ್‍ಕಾರ್ಟ್ 50,000 ಕ್ಕೂ ಅಧಿಕ ನೇರ ಉದ್ಯೋಗಗಳನ್ನು ಸೃಷ್ಟಿಸಿದೆ. ಫ್ಲಿಪ್‍ಕಾರ್ಟ್‍ನ ಸಪ್ಲೈ ಚೇನ್, ಲಾಜಿಸ್ಟಿಕ್ ಮತ್ತು ಗ್ರಾಹಕ ಬೆಂಬಲ ವಿಭಾಗಗಳಲ್ಲಿ ಈ ಉದ್ಯೋಗಗಳನ್ನು ಸೃಜಿಸಿದೆ. ಇದಲ್ಲದೇ, ಬಿಬಿಡಿ ಅಂದರೆ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಮಾರಾಟ ಜಾಲದಲ್ಲಿ ಶೇ.30 ರಷ್ಟು ಹೆಚ್ಚು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ವರ್ಷದ ದೊಡ್ಡ ಕಾರ್ಯಕ್ರಮವಾದ ಬಿಬಿಡಿ ಸೆಪ್ಟಂಬರ್29 ಕ್ಕೆ…

  • ಜ್ಯೋತಿಷ್ಯ

    ಸಿಗಂದೂರು ಚೌಡೇಶ್ವರಿ ದೇವಿಯನ್ನು ಸ್ಮರಿಸಿ, ಈ ದಿನದ ನಿಮ್ಮ ರಾಶಿ ಭವಿಷ್ಯದ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷನಿಮ್ಮ ಆರೋಗ್ಯದ ಬಗ್ಗೆ…

  • ಸುದ್ದಿ

    ವಿಸ್ಮಯಕಾರಿ ಘಟನೆಗಳಿಗೆ ಸಾಕ್ಷಿಯಾಗಿರುವ ದಕ್ಷಿಣ ಕಾಶಿ ಎಂದು ಪ್ರಸಿದ್ಧವಾಗಿರುವ ಬೆಟ್ಟದಲ್ಲಿ ಈ ಬಾರಿ ಮತ್ತೊಂದು ಪವಾಡ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟ, ಸಮುದ್ರ ಮಟ್ಟದಿಂದ ಸರಿಸುಮಾರು 4620 ಅಡಿ ಎತ್ತರವಿದೆ. ಈ ಬೆಟ್ಟದ ಮಧ್ಯದ ಭಾಗದಲ್ಲಿ ಬೆಳ್ಳಿಯ ಹಾಗೂ ಹಾಲಿನ ಲೇಪನ ರೀತಿಯಲ್ಲಿ ಜೋಪು ನೀರು ಹರಿಯುತ್ತಿರುವುದು ಸ್ಥಳೀಯ ಜನರಲ್ಲಿ ಸಂತಸ ಮೂಡಿಸಿದೆ. ಈ ಶಿವಗಂಗೆ ಬೆಟ್ಟ ಸಂಪೂರ್ಣ ಬೃಹತ್ ಆಕಾರದ ಕಲ್ಲು ಬಂಡೆಗಳಿಂದ ಕೂಡಿದ್ದು, ಈ ಬಂಡೆಗಳ ಮಧ್ಯೆ ಹರಿಯುತ್ತಿರುವ ಜೋಪು ನೀರನ್ನು ನೋಡಲು ಸುಂದರವಾಗಿದೆ. ಈ ಶಿವಗಂಗೆ ಬೆಟ್ಟ ಪುರಾತತ್ವ, ಮುಜರಾಯಿ ಇಲಾಖೆ ಹಾಗೂ ಸರ್ಕಾರದ ನಿರ್ಲಕ್ಷ್ಯಕ್ಕೆ ಕಾರಣವಾಗಿದ್ದು,…

  • ದೇವರು-ಧರ್ಮ

    ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ!ಈ ಆಚರಣೆ ಮಾಡಿದ್ರೆ ಏನಾಗುತ್ತೆ ಗೊತ್ತಾ..?

    ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.

  • ಉದ್ಯೋಗ, ಉಪಯುಕ್ತ ಮಾಹಿತಿ

    ವಿಮಾನ ಗಗನಸಖಿಯರ ಸಂಬಳ ಎಷ್ಟು ಗೊತ್ತಾ.? ಹಲವರಿಗೆ ತಿಳಿದಿಲ್ಲ ಈ ಮಾಹಿತಿ ನೋಡಿ.

    ಜೀವನದಲ್ಲಿ ಒಮ್ಮೆಯಾದರೂ ವಿಮಾನ ಪಯಣ ಮಾಡಬೇಕೆಂಬ ಅಸೆ ಎಲ್ಲರಿಗೂ ಕೂಡ ಇರುತ್ತದೆ, ಗಗನದಲ್ಲಿ ಒಮ್ಮೆ ಪ್ರಯಾಣ ಬೆಳೆಸಿ ಆ ಮಧುರ ಕ್ಷಣವನ್ನು ಎಲ್ಲರೊಂದಿಗೆ ಹಂಚಿಕೊಳ್ಳಬೇಕೆಂಬ ಆಸೆ ಕೂಡ ಪ್ರತಿಯೊಬ್ಬರಿಗೆ ಇರುತ್ತದೆ. ನಮ್ಮ ದೇಶದ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಸಂಪರ್ಕ ಬೆಳೆಸಲು ಅದು ಕೂಡ ಕಡಿಮೆ ಅವಧಿಯಲ್ಲಿ ಈ ದೂರ ಕ್ರಮಿಸಲು ವಿಮಾನಯಾನ ಬಹು ಲಾಭಕರ. ಕೇವಲ ಪ್ರಯಾಣಿಕರು ಮಾತ್ರವಲ್ಲ ಸರಕುಗಳು ಕೂಡ ಸಾಗುತ್ತವೆ ಈ ಯಾನದಲ್ಲಿ, ಇನ್ನು ವಿಮಾನ ಎಂದಾಗ ನೆನಪಾಗುವುದು ವಿಮಾನ ಪ್ರಯಾಣದಲ್ಲಿ ಪ್ರಯಾಣಿಕರ…

  • ಸುದ್ದಿ

    ವಿರಾಟ್ ಕೊಹ್ಲಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ…!

    ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ  ಅವರ ಆಟೋಗ್ರಾಫ್ ಪಡೆಯಲು ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ ಭಾರತ ತಂಡದ ಅತ್ಯಂತ ಜನಪ್ರಿಯ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ.  ವೆಸ್ಟ್‌ಇಂಡೀಸ್ ಪ್ರವಾಸದ ವೇಳೆಯಲ್ಲಿ ಜಮೈಕಾದಲ್ಲಿ ಪತ್ನಿ ಅನುಷ್ಕಾ ಶರ್ಮಾ ಜತೆಯಲ್ಲಿರುವಾಗ ಅಚಾನಕ್ ಆಗಿ ಬಾಲಕನ ಭೇಟಿಯಾದರು. ಈ ಸಂದರ್ಭದಲ್ಲಿ ಬಾಲಕನೇ ನನ್ನ ಆಟೋಗ್ರಾಫ್ ಪಡೆಯುವೀರಾ ಎಂದು ವಿರಾಟ್ ಕೊಹ್ಲಿರನ್ನು ಪ್ರಶ್ನಿಸಿದರು.  ಬಾಲಕನ ಪ್ರಶ್ನೆಯಿಂದ ಅಚ್ಚರಿಗೊಂಡರೂ ನಗುಮುಖದಿಂದಲೇ ಬಹಳ ತಾಳ್ಮೆಯಿಂದ…