News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ನಿಮ್ಮ ಮಕ್ಕಳ ಬಗ್ಗೆ ಕಾಳಜಿ ಇದ್ದರೆ ಇದನ್ನು ಓದಿ..ಮರೆಯದೇ ಶೇರ್ ಮಾಡಿ..

827

ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಿಸುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ನಿಮಗೆ ಅರಿವಿದೆಯೇ…

ಪುಟ್ಟ ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿಗಳನ್ನು ವೀಕ್ಷಿಸುವ ಹವ್ಯಾಸ ಬೆಳೆಸಿಕೊಂಡರೆ ಅಂತಹ ಮಕ್ಕಳಲ್ಲಿ ಸಕ್ಕರೆ ಕಾಯಿಲೆ ಏರ್ಪಡುವ ಅಪಾಯ ಹೆಚ್ಚು ಎಂದು ವೈದ್ಯಕೀಯ ತಜ್ಞರು ಹೇಳಿದ್ದಾರೆ.

ಕೇವಲ ಸಕ್ಕರೆ ಕಾಯಿಲೆ ಮಾತ್ರವಷ್ಟೇ ಅಲ್ಲ ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿಗಳನ್ನು ವೀಕ್ಷಿಸುತ್ತಿದ್ದರೆ ಅವರ ಕಣ್ಣಿಗೂ ಗಂಭೀರ ಹಾನಿಯಾಗಲಿದ್ದು, ಮಕ್ಕಳ ಮೆದುಳಿನ ನರಮಂಡಲಕ್ಕೂ ಹಾನಿಯಾಗುತ್ತದೆ ಎಂದು  ವೈದ್ಯರು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಟಿವಿ ಮತ್ತು ಸ್ಮಾರ್ಟ್ ಫೋನ್ ಗಳಿಂದಾಗಿ ಜನರ ಜೀವನ ಶೈಲಿಯೇ ಬದಲಾಗಿ ಹೋಗಿದ್ದು, ಸ್ಮಾರ್ಟ್ ಫೋನ್ ಗಳು ಜನರ ಜೀವನದಲ್ಲಿ ಬೆರೆತು ಹೋಗಿದೆ.

ಇದಕ್ಕೆ ಪೂರಕ  ಎಂಬಂತೆ ರಿಯಾಲಿಟಿ ಷೋಗಳ ಅಬ್ಬರ ಮತ್ತು ಫ್ರೀ ಆ್ಯಪ್ ಗಳ ಆಡಂಬರ ಕೂಡ ಮಕ್ಕಳಲ್ಲಿ ಇಂತಹ ಅಪಾಯಕಾರಿ ಬೆಳವಣಿಗೆ ಹೆಚ್ಚಾಗಲು ಕಾರಣವಾಗುತ್ತಿದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

ಬದಲಾದ ಜೀವನ ಶೈಲಿ ಹಾಗೂ ವಿಭಕ್ತ ಕುಟುಂಬಗಳಲ್ಲಿ ಮಕ್ಕಳ ಪಾಲನೆ ಅಷ್ಟು ಸುಲಭವಲ್ಲ. ಹೀಗಾಗಿ ಇತ್ತೀಚಿನ ಪೋಷಕರು ಮಕ್ಕಳು ಅತ್ತಾಗ, ಮಕ್ಕಳಿಗೆ ಹಸಿವಾದಾಗ ಸ್ಮಾರ್ಟ್ ಫೋನ್ ತೋರಿಸಿ ಸಮಾಧಾನ ಮಾಡುವಂತಹ  ಪರಿಪಾಠ ತಾನೇ ತಾನಾಗಿ ಬೆಳೆದಿದೆ. ಇದೂ ಕೂಡ ಅಪಾಯಕಾರಿ ಎಂದು ವೈದ್ಯರು ತಿಳಿಸಿದ್ದಾರೆ. ಇಲ್ಲಿ ಓದಿ :- ನಿಮ್ಮ ಕಣ್ಣುಗಳ ಆರೋಗ್ಯದ ಕಾಳಜಿ ಇದ್ದರೆ ಇದನ್ನು ಓದಿ…..

ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಣೆಯಿಂದಾಗಿ ಮಕ್ಕಳ ಕಣ್ಣಿನ ಮೇಲೆ ಹೆಚ್ಚು ಒತ್ತಡ ಬಿದ್ದು, ಅವುಗಳ ನರಗಳಿಗೆ  ಹಾನಿಯಾಗುತ್ತದೆ. ಅಂತೆಯೇ ಮೆದುಳಿನ ನರಮಂಡಲ ವ್ಯವಸ್ಥೆಯ ಕಾರ್ಯದ ಸಾಮರ್ಥ್ಯದ ಮೇಲೂ ಇದು ವ್ಯತಿರಿಕ್ತ ಪರಿಣಾಮ ಬೀರುತ್ತದೆ.

ಒಂದು ಗಂಟೆಗೂ ಅಧಿಕ ಸಮಯ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಿಸಿದರೆ ಸಕ್ಕರೆ ಕಾಯಿಲೆ ಖಂಡಿತಾ :-

ಇನ್ನು ಪ್ರತಿನಿತ್ಯ ಮಕ್ಕಳು ಒಂದು ಗಂಟೆಗೂ ಅಧಿಕ ಸಮಯ ಸ್ಮಾರ್ಟ್ ಫೋನ್ ಮತ್ತು ಟಿವಿ ನೋಡುತ್ತ ಮಗ್ನರಾಗಿದ್ದರೆ ಅಂತಹ ಮಕ್ಕಳಲ್ಲಿ ಖಂಡಿತಾ ಸಕ್ಕರೆ ಕಾಯಿಲೆ ಅಪಾಯ ಹೆಚ್ಚು.

ಸತತವಾಗಿ ಟಿವಿ ಮತ್ತು ಸ್ಮಾರ್ಟ್ ಫೋನ್  ನೋಡುವುದರಿಂದ ಮಕ್ಕಳ ವಯಸ್ಸಿಗೆ ಸಂಬಂಧಿಸಿದ ನೋವುಗಳು ಆರಂಭವಾಗುತ್ತವೆ.

ಇದೇ ಮುಂದುವರೆದರೆ ಮಕ್ಕಳು ಯುವ ಹಂತಕ್ಕೆ ಬರುವ ವೇಳೆಗೆ ಸಕ್ಕರೆ ಕಾಯಿಲೆಗೆ ತುತ್ತಾಗಿರುತ್ತಾರೆ. ಇಂತಹ ಸಾವಿರಾರು ಪ್ರಕರಣಗಳು  ವಿಶ್ವಾದ್ಯಂತ ವರದಿಯಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಈವರೆಗೂ ಮಕ್ಕಳ ದೈಹಿಕ ಚಟುವಟಿಕೆ, ಆಹಾರ ವ್ಯವಸ್ಥೆ ಮತ್ತು ಕುಟುಂಬದ ಆರೋಗ್ಯ ಇತಿಹಾಸದಿಂದ ಮಧುಮೇಹ ಖಾಯಿಲೆಯನ್ನು ಪರಿಗಣಿಸಲಾಗುತ್ತಿತ್ತು. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಸ್ಮಾರ್ಟ್ ಗ್ಯಾಜೆಟ್ ಗಳು  ಕೂಡ ಪರಿಣಾಮ ಬೀರುತ್ತಿವೆ.

ಈ ಬಗ್ಗೆ ತಜ್ಞರು ಸುಮಾರು 4500 ಮಕ್ಕಳ ಜೀವನ ಶೈಲಿಯನ್ನು ಅಧ್ಯಯನ ಮಾಡಿದ್ದು, ಈ ಪೈಕಿ ಹೆಚ್ಚು ಹೊತ್ತು ಸ್ಮಾರ್ಟ್ ಗ್ಯಾಜೆಟ್ ಗಳಾದ ಸ್ಮಾರ್ಟ್ ಫೋನ್, ಟಿವಿ, ಕಂಪ್ಯೂಟರ್, ಗೇಮರ್ ಗಳಲ್ಲಿ ಹೆಚ್ಚು ಹೊತ್ತು ಕಳೆಯುವ  ಮಕ್ಕಳಲ್ಲಿ ರೋಗದ ಅಪಾಯ ಹೆಚ್ಚಾಗಿತ್ತು.

ಇನ್ನು ಈ ಪೈಕಿ ಶೇ.37ರಷ್ಟು ಮಕ್ಕಳು ಮಾತ್ರ ಒಂದು ಗಂಟೆಗೂ ಕಡಿಮೆ ಅವಧಿಯಲ್ಲಿ ಸ್ಮಾರ್ಟ್ ಗ್ಯಾಜೆಟ್ ಬಳಕೆ ಮಾಡುತ್ತಿದ್ದು, ಇಂತಹ ಮಕ್ಕಳಲ್ಲಿ ರೋಗದ ಅಪಾಯ ಕಡಿಮೆ  ಕಂಡುಬಂದಿದೆ.

ಇನ್ನು ಶೇ.28ರಷ್ಟು ಮಕ್ಕಳು 1-2 ಗಂಟೆ ಅವಧಿ ಸ್ಮಾರ್ಟ್ ಗ್ಯಾಜೆಟ್ ಬಳಕೆ ಮಾಡಿದರೆ, ಶೇ.13 ರಷ್ಟು ಮಕ್ಕಳು 2-3 ಗಂಟೆ ಅವಧಿಯವರೆಗೆ ಮತ್ತು ಶೇ.18ರಷ್ಟು ಮಕ್ಕಳು 3-4 ಗಂಟೆ ಹೊತ್ತು ಸ್ಮಾರ್ಟ್ ಗ್ಯಾಜೆಟ್ ಬಳಕೆ  ಮಾಡುತ್ತಿದ್ದರು ಎಂದು ತಜ್ಞರು ಹೇಳಿದ್ದಾರೆ.

ಈ ಪೈಕಿ 3-4 ಗಂಟೆ ಹೊತ್ತು ಸ್ಮಾರ್ಟ್ ಗ್ಯಾಜೆಟ್ ಬಳಕೆ ಮಾಡುವ ಮಕ್ಕಳಲ್ಲಿ ಟೈಪ್-2 ಸಕ್ಕರೆ ಕಾಯಿಲೆ ಅಪಾಯ ಹೆಚ್ಚಿತ್ತು ಎಂದು ವೈದ್ಯರು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ನೆಹರೂ, ಇಂದಿರಾಗಾಂಧಿ ನಂತರ ಸ್ಪಷ್ಟ ಬಹುಮತ ಪಡೆದ ಮೊದಲ ಪ್ರಧಾನಿ ನರೇಂದ್ರ ಮೋದಿ…!

    ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 302 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಮತ್ತೆ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮಾಜಿ ಪ್ರಧಾನಿಗಳಾದ ದಿವಂಗತ ಜವಹರ್ ಲಾಲ್ ನೆಹರೂ ಹಾಗೂ ಇಂದಿರಾ ಗಾಂಧಿ ಬಳಿಕ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಪಡೆಯುತ್ತಿರುವ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಅವರು ಪಾತ್ರರಾಗಿದ್ದಾರೆ. ಹೌದು. 48 ವರ್ಷಗಳ ಬಳಿಕ ಸ್ಪಷ್ಟ ಬಹುಮತದ ಬಳಿಕ ಮೋದಿ ಅವರು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ದೇಶದೆಲ್ಲೆಡೆ ಎದ್ದಿದ್ದ ಮೋದಿ ಸುನಾಮಿಗೆ…

  • ಸುದ್ದಿ

    ಬೆಂಗಳೂರು ಅಲ್ಲ ರಾಜ್ಯವ್ಯಾಪಿ ಐ ಎಂ ಎ ಇಂದ ಮೋಸ ಹೋದಂತಹ ಪ್ರಜೆಗಳು…!

    ಬೆಂಗಳೂರು: ಐಎಂಎ ಜ್ಯುವೆಲ್ಲರಿಯಲ್ಲಿ ಹಣ ಹೂಡಿ ವಂಚನೆಗೆ ಒಳಗಾದವರು ಒಬ್ಬೊಬ್ಬರೇ ತಮ್ಮ ಸಂಕಟ ತೋಡಿಕೊಳ್ಳುತ್ತಿದ್ದಾರೆ. ಕಂಪನಿ ಮಾಲೀಕ ಮನ್ಸೂರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೆಂಗಳೂರಿನ ಶಿವಾಜಿನಗರದ ಐಎಂಎ ಜ್ಯುವೆಲ್ಲರಿ ಮಳಿಗೆ ಎದುರು ಮೋಸ ಹೋಗಿರುವ ಜನ ಎದುರು ಅಹೋರಾತ್ರಿ ಧರಣಿ ನಡೆಸಿದರು. ಬೆಳಗ್ಗೆ 11 ಗಂಟಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ, ಪ್ರಕರಣದ ತೀವ್ರತೆಯನ್ನು ಸರ್ಕಾರಕ್ಕೆ ಮುಟ್ಟಿಸುತ್ತೇವೆ ಎಂದು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಐಎಂಎ ಮಾಲೀಕನನ್ನು ಬಂಧಿಸಿ ಹಣ ಕಳೆದುಕೊಂಡಿರುವ ಅಮಾಯಕರಿಗೆ ಹಣ ಕೊಡಿಸುವಂತೆ ಗೃಹಸಚಿವರಲ್ಲಿ ಮನವಿ ಮಾಡಿಕೊಳ್ಳಲಿದ್ದಾರೆ. ಇದನ್ನೂ…

  • ಆರೋಗ್ಯ

    ದಾಳಿಂಬೆ ಹಣ್ಣಿನಲ್ಲಿರುವ ಆರೋಗ್ಯಕಾರಿ ಗುಣಗಳು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..

  • ಸುದ್ದಿ

    ಗ್ರಾಹಕರಿಗೆ ಶಾಕ್ ನೀಡಿದ ಏರ್‌ಟೆಲ್, ವೊಡಾಫೋನ್; ಡಿಸೆಂಬರ್‌ 1ರಿಂದ ಕರೆ ದುಬಾರಿ!

    ಜಿಯೋ ಗ್ರಾಹಕರ ಬೆನ್ನಲ್ಲೇ ಏರ್‌ಟೆಲ್‌ ಮತ್ತು ವೊಡಾಫೋನ್‌ ಗ್ರಾಹಕರಿಗೆ ಮುಂದಿನ ತಿಂಗಳಿಂದ ಫೋನ್‌ ಬಿಲ್‌ ಶಾಕ್‌ ತಟ್ಟಲಿದೆ. ವೊಡಾಫೋನ್‌ ಐಡಿಯಾ ಹಾಗೂ ಭಾರ್ತಿ ಏರ್‌ಟೆಲ್‌ ಕಂಪನಿಗಳು ಡಿಸೆಂಬರ್‌ 1ರಿಂದ ತನ್ನ ಸೇವೆಗಳ ದರಗಳನ್ನು ಏರಿಕೆ ಮಾಡುವುದಾಗಿ ಘೋಷಿಸಿವೆ. ಕೆಲವೇ ವರ್ಷಗಳ ಹಿಂದೆ ಹತ್ತಾರು ದೂರ ಸಂಪರ್ಕ ಕಂಪೆನಿಗಳು ಗ್ರಾಹಕರನ್ನು ಸೆಳೆಯಲು ತರಹೇವಾರಿ ಆಫರ್‌ಗಳ ಮೂಲಕ ಕಡಿಮೆ ದರ ಸೇವೆಗಳನ್ನು ಘೋಷಿಸುತ್ತಿದ್ದವು. ಆದರೆ ಈಗ ಬಹುತೇಕ ದೂರಸಂಪರ್ಕ ಕಂಪೆನಿಗಳು ಮುಚ್ಚಿ ಹೋಗಿವೆ ಅಥವಾ ವಿಲೀನಗೊಂಡಿವೆ. ಜಿಯೋ, ಏರ್‌ಟೆಲ್, ವೊಡಾಫೊನ್ ಐಡಿಯಾ ಹಾಗೂ ಸರ್ಕಾರಿ ಸ್ವಾಮ್ಯ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(5 ಡಿಸೆಂಬರ್, 2018) ನಿಮ್ಮ ಮನದನ್ನೆಯ ವಿಚಿತ್ರ ನಡವಳಿಕೆ ಇಂದು ನಿಮ್ಮ ಪ್ರೇಮವನ್ನು ಘಾಸಿಗೊಳಿಸುತ್ತದೆ. ಹೊಸ ಪ್ರಸ್ತಾಪಗಳ ಅಕರ್ಷಕವಾಗಿದ್ದರೂ ಯಾವುದೇ ಆತುರದ…

  • ಸಿನಿಮಾ

    ಭಾರತದ ಸಾವಿರಾರು ತಿಯೇಟರ್ ಗಳಲ್ಲಿ ರಿಲೀಜ್ ಆಗುತ್ತಿರುವ KGF ಚಿತ್ರಕ್ಕೆ, ಚಿತ್ರೀಕರಣ ನಡೆದ KGFನಲ್ಲೇ ಈ ಚಿತ್ರದ ಬಿಡುಗಡೆ ಭಾಗ್ಯವಿಲ್ಲ..!

    ಭಾರತದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರುವ ಯಶ್ ಅಭಿನಯದ ‘ಕೆಜಿಎಫ್’ ಚಿತ್ರ ದೇಶಾದ್ಯಂತ ಪಂಚ ಭಾಷೆಯಲ್ಲಿ ನಾಳೆ ಬಿಡುಗಡೆಯಾಗಲಿದೆ. ಆದರೆ ಚಿತ್ರೀಕರಣ ನಡೆದ ಕೆಜಿಎಫ್ ನಲ್ಲಿ ಈ ಚಿತ್ರದ ಬಿಡುಗಡೆಗೆ ಭಾಗ್ಯವಿಲ್ಲದಂತಾಗಿದೆ. ಕೆಜಿಎಫ್‍ನಲ್ಲಿ ಸಿನಿಮಾ ಚಿತ್ರೀಕರಣಗೊಂಡರೂ ಚಿತ್ರಮಂದಿರದ ಮಾಲೀಕರು ಚಿತ್ರದ ಬಾಕ್ಸ್ ಬಜೆಟ್ ನಿಂದ ದೂರ ಸರಿದಿದ್ದಾರೆ. ಚಿತ್ರಮಂದಿರದಲ್ಲಿ ಚಿತ್ರ ಬಿಡುಗಡೆ ಮಾಡಲು ಮಾಲೀಕ 25 ಲಕ್ಷ ರೂ. ಕೇಳಿದ್ದಾರೆ. ಹಾಗಾಗಿ ಕೆಜಿಎಫ್‍ನ ಲಕ್ಷ್ಮೀ ಮತ್ತು ಒಲಿಂಪಿಯಾ ಚಿತ್ರಮಂದಿರಗಳಲ್ಲಿ ಚಿತ್ರದ ಬಿಡುಗಡೆಯಾಗುತ್ತಿಲ್ಲ. ಈ ಸುದ್ದಿ ಕೇಳಿ ಯಶ್…