ಸ್ಪೂರ್ತಿ

ಮಗಳ ಜನ್ಮದಿನಕ್ಕೆ ಬೆಂಗಳೂರು ದಂಪತಿಯಿಂದ ಕ್ಯಾನ್ಸರ್ ಆಸ್ಪತ್ರೆ ಗಿಫ್ಟ್..! ತಿಳಿಯಲು ಈ ಲೇಖನ ಓದಿ..

6833

ನ್ಯೂ ಇಂಡಿಯಾ ಎ ಚಾರಿಟಬಲ್ ಟ್ರಸ್ಟ್ ಉದ್ಘಾಟಿಸಿದ ನಟ ಇಮ್ರಾನ್ ಹಶ್ಮಿ.ಬೆಂಗಳೂರು ಮೂಲದ ಉದ್ಯಮಿ ದಂಪತಿ ವಿಜಯ್ ಟಾಟಾ ಮತ್ತು ಅಮೃತಾ ಟಾಟಾ ದಂಪತಿ ನ್ಯೂ ಇಂಡಿಯಾ ಎ ಚಾರಿಟೆಬಲ್ ಟ್ರಸ್ಟ್ ಗೆ 200 ಕೋಟಿ ರು ಹಣ ನೀಡಿದ್ದಾರೆ.ಬೆಂಗಳೂರಿನಲ್ಲಿ ಉಚಿತ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕಾಗಿ ಈ ದಂಪತಿ ಹಣ ನೀಡಿದ್ದು ಬಾಲಿವುಡ್ ನಟ ಇಮ್ರಾನ್ ಹಸ್ಮಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇಮ್ರಾನ್ ಹಸ್ಮಿ ಮಗಳ ಹುಟ್ಟುಹಬ್ಬದ ನಿಮಿತ್ತ ಆಸ್ಪತ್ರೆ ನಿರ್ಮಿಸಲು ಹಣ ನೀಡಲು ನಿರ್ಧರಿಸಿದ್ದರು.

 

ನೂರಾರು ಕೋಟಿ ಆಸ್ತಿ, ಒಬ್ಬಳು ರಾಜಕುಮಾರಿಯಂಥ ಮಗಳು… ಆಕೆಯ ಹುಟ್ಟುಹಬ್ಬವನ್ನು ಕೇರಿಗೆಲ್ಲ ಊಟ ಹಾಕಿಸಿ ಆಚರಿಸುವುದಕ್ಕೂ ಕೊರತೆಯಿಲ್ಲದ ಸಿರಿವಂತಿಕೆ… ಇಷ್ಟೆಲ್ಲ ಇದ್ದರೂ ಈ ದಂಪತಿ ಮಾತ್ರ ತಮ್ಮ ಮುದ್ದು ಮಗಳ ಹುಟ್ಟುಹಬ್ಬವನ್ನು ಆಚರಿಸಿದ್ದು ಅನುಕರಣೀಯವಾಗಿ! ಬೆಂಗಳೂರು ಮೂಲದ ಉದ್ಯಮಿ ದಂಪತಿ ವಿಜಯ್ ಟಾಟಾ ಮತ್ತು ಅವರ ಪತ್ನಿ ಅಮೃತಾ ಟಾಟಾ ತಮ್ಮ ಮಗಳ ಹುಟ್ಟು ಹಬ್ಬದ ಸವಿನೆನಪಿಗಾಗಿ ನ್ಯೂ ಇಂಡಿಯಾ ಎಂಬ ಹೆಸರಿನ ಎನ್ ಜಿಒ ವೊಂದನ್ನು ಆರಂಭಿಸಿ, ಆ ಮೂಲಕ 200 ಕೋಟಿ ರೂ. ವೆಚ್ಚದಲ್ಲಿ ಕ್ಯಾನ್ಸರ್ ಆಸ್ಪತ್ರೆಯೊಂದನ್ನು ನಿರ್ಮಿಸಲು ಮುಂದಾಗಿದ್ದಾರೆ!

ಟ್ರಸ್ಟ್ ಗಾಗಿ ಈ ದಂಪತಿ 100 ಕೋಟಿ ರು. ಬೆಲೆಯ 50 ಎಕರೆ ಭೂಮಿಯನ್ನು ಟ್ರಸ್ಟ್ ಗೆ ನೀಡಿದ್ದು, 100 ಕೋಟಿ ರು ಹಣವನ್ನು ಸೂಪರ್ ಸ್ಪೆಷಾಲಿಟಿ ಕ್ಯಾನ್ಸರ್ ಕೇರ್ ಆಸ್ಪತ್ರೆ ನಿರ್ಮಾಣಕ್ಕೆ ನೀಡಲಾಗುವುದು, ದೇಶಾದ್ಯಂತ ಎಲ್ಲಾ ಕ್ಯಾನ್ಸರ್ ರೋಗಿಗಳು ಬಂದು ಉಚಿತವಾಗಿ ಚಿಕಿತ್ಸೆ ಪಡೆಯಬಹುದಾಗಿದೆ, ಈ ಆಸ್ಪತ್ರೆಯಲ್ಲಿ 150 ಹಾಸಿಗೆಗಳಿರುತ್ತವೆ. ವಿವಿಧ ಹಂತಗಳಲ್ಲಿ ಆಸ್ಪತ್ರೆ ನಿರ್ಮಾಣವಾಗಲಿದ್ದು, ಯುಕೆ ಮೂಲದ ಆರ್ಕಿಟೆಕ್ಟ್ ಮತ್ತು ಎಂಜಿನೀಯರ್ ಗಳು ಈ ಕಟ್ಟಡ ನಿರ್ಮಾಣ ಮಾಡಲಿದ್ದಾರೆ.

ಬಡವರಿಗೆ ಸಂಪೂರ್ಣ ಉಚಿತ ಚಿಕಿತ್ಸೆ:-

ಬಡ ಮತ್ತು ಅಶಕ್ತರಿಗೆ ಸಂಪೂರ್ಣ ಉಚಿತವಾಗಿ ಚಿಕಿತ್ಸೆ ನೀಡುವ ಉದ್ದೇಶ ಈ ಆಸ್ಪತ್ರೆಯದು. ಇದು ಭಾರತದ ಮೊಟ್ಟಮೊದಲ ಕ್ಯಾಶ್ ಲೆಸ್ ಆಸ್ಪತ್ರೆ ಎಂಬ ಹೆಗ್ಗಳಿಕೆ ಪಡೆಯಲಿದೆ. ಈ ಆಸ್ಪತ್ರೆಗೆ ಟಾಟಾ ದಂಪತಿಯೇ ಸ್ವ ಇಚ್ಛೆಯಿಂದ ಹಣ ಹಾಕುತ್ತಿದ್ದು, ಬೇರೆ ಯಾರಿಂದಲೂ ದೇಣಿಗೆ ಪಡೆದಿಲ್ಲ. ಕಿಮೋಥೆರಪಿಯ ಒಂದು ಸಿಟ್ಟಿಂಗ್ ಗೆ ಸುಮಾರು 90,000 ರೂ. ವೆಚ್ಚವಾಗುತ್ತದೆ.

ಇದನ್ನು ಭರಿಸುವುದಕ್ಕೆ ಯಾವ ಬಡವರಿಗೆ ಸಾಧ್ಯ? ಅದಕ್ಕೆಂದೇ ಉಚಿತ ಚಿಕಿತ್ಸೆ ನೀಡುವ ಮಹೋನ್ನತ ಕಾರ್ಯಕ್ಕೆ ಈ ದಂಪತಿ ಕೈಹಾಕಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ನಿಮ್ಗೆ ಸಿಳ್ಳೆ (ವಿಸಿಲ್) ಹೊಡೆಯೋದು ಬರಲ್ವಾ?ಹಾಗಾದ್ರೆ ಈ ಸರಳ ಕ್ರಮಗಳನ್ನು ಅನುಸರಿಸಿ ವಿಸಿಲ್ ಹೊಡೆಯಿರಿ…

    ತುಂಬಾ ಜನ ಸಿಳ್ಳೆ (ವಿಸಿಲ್) ಹೊಡೆಯೋಕೆ ತುಂಬಾ ಇಷ್ಟ ಪಡುತ್ತಾರೆ. ಆದ್ರೆ ಕೆಲವರಿಗೆ ವಿಸಿಲ್ ಹೊಡೆಯೋದು ಹೇಗೆ ಅಂತ ಗೊತ್ತಾಗದೆ ತುಂಬಾ ಕಷ್ಟ ಪಡುತ್ತಾರೆ. ನೀವೇನಾದ್ರೂ ವಿಸಿಲ್ ಹೊಡೆಯೋದು ಹೇಗೆ ಅಂತ ಕಲಿಬೇಕು ಅನ್ಕೊಂಡ್ರೆ ಕೆಳಗೆ ಕೊಟ್ಟಿರುವ ಸರಳ ಕ್ರಮಗಳನ್ನು ಅನುಸರಿಸಿ…

  • ಮನರಂಜನೆ

    ಪ್ರಿಯಾಂಕ, ಕುರಿ ಪ್ರತಾಪ್ ಗೆ ಈಗೆ ಮಾಡಿದಕ್ಕೆ. ಪ್ರತಾಪ್ ಪತ್ನಿ ಪ್ರಿಯಾಂಕಾಗೆ ಹೇಳಿದ್ದೇನು ಗೊತ್ತಾ.

    ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಹಾಗೂ ಮಕ್ಕಳು ಭೇಟಿ ನೀಡಿದರು. ಈ ವೇಳೆ ಪ್ರತಾಪ್ ಅವರ ಪತ್ನಿ ಸರಿತಾ ಸ್ಪರ್ಧಿ ಪ್ರಿಯಾಂಕಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಸೋಮವಾರ ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಸರಿತಾ ಆಗಮಿಸಿದ್ದರು. ಈ ವೇಳೆ ಸರಿತಾ ಅವರು ಮನೆ ಮಂದಿ ಜೊತೆ ಆತ್ಮೀಯವಾಗಿ ಮಾತನಾಡಿಸಿ ತಾವು ತಂದಿದ್ದ ತಿಂಡಿಯನ್ನು ಪ್ರತಾಪ್ ಅವರಿಗೆ ನೀಡದೇ ವಾಸುಕಿ ಅವರಿಗೆ ಕೊಟ್ಟಿದ್ದಾರೆ. ಸರಿತಾ, ಪ್ರತಾಪ್ ಜೊತೆ ಮಾತನಾಡಿದ ಬಳಿಕ…

  • ಆರೋಗ್ಯ

    ಈ ಜ್ಯೂಸ್‌ ಅನ್ನು ಕುಡಿದರೆ ಸಾಕು ಕೆಮ್ಮು ಮಂಗಮಾಯ! ಈ ಉಪಯುಕ್ತ ಮಾಹಿತಿ ನೋಡಿ.

    ಈಗ ಚಳಿಗಾಲ. ಅಂದರೆ ಸಣ್ಣ ಪುಟ್ಟ ಕಾಯಿಲೆಗಳಿಗೆ ಆಹ್ವಾನ ಕೊಡುವ ಕಾಲ. ನೀವು ಬೇಡ ಎಂದರೂ ಅವುಗಳು ಮಾತ್ರ ನಿಮ್ಮನ್ನು ಬಿಡುವುದಿಲ್ಲ. ವರ್ಷ ಪೂರ್ತಿ ಈ ಸಮಯಕ್ಕಾಗಿಯೇ ಹೊಂಚು ಹಾಕಿ ಕಾದು ಕುಳಿತಿರುತ್ತವೆ. ಅಕ್ಟೋಬರ್, ನವೆಂಬರ್ ತಿಂಗಳು ಪ್ರಾರಂಭವಾಗುತ್ತಿದ್ದ ಹಾಗೆ ಮೈಯಲ್ಲಿ ಬೆವರು ಕಡಿಮೆಯಾಗಿ ಮೂಗಿನಲ್ಲಿ ಶೀತ ದ್ರವ ಹರಿಯಲು ಪ್ರಾರಂಭವಾಗುತ್ತದೆ. ಇದನ್ನು ಹಾಗೇ ಬಿಟ್ಟರೆ ಒಂದರ ಹಿಂದೆ ಒಂದು ಕೊಂಡಿಯಂತೆ ಶೀತ, ಕೆಮ್ಮು, ಜ್ವರ ಹೀಗೆ ಒಂದೊಂದಾಗಿ ಬಂದು ಅಂಟಿಕೊಳ್ಳುತ್ತವೆ. ಅಷ್ಟು ದಿನಗಳವರೆಗೆ ಬೆಳಗ್ಗೆ ಎದ್ದು…

  • inspirational

    ಕಾಫಿ ಸೇವನೆಯ ಆರೋಗ್ಯಕರ ಪ್ರಯೋಜನಗಳು

    ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್‌ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ. ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು…

  • corona, Health, karnataka, ಆರೋಗ್ಯ, ಕರ್ನಾಟಕ

    ರಾಜ್ಯದಲ್ಲಿ ಟಫ್ ರೂಲ್ಸ್ ಮತ್ತೆ ಜಾರಿ

    ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ   ಸರ್ಕಾರಿ ಕಚೇರಿಗಳು ಮಾಲ್​ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…

    Loading