ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆಗಳಲ್ಲಿ ಹಲವಾರು ವಿಚಿತ್ರ ಸನ್ನಿವೇಶಗಳು ನಡೆಯುವುದನ್ನ ಕೇಳಿರುತ್ತೇವೆ, ನೋಡಿರುತ್ತೇವೆ.ಅದರಲ್ಲಿ ಕೆಲವೊಂದು ಇನ್ನೇನು ತಾಳಿ ಕಟ್ಟುವ ಸಮಯಕ್ಕೆ ಹುಡುಗಿ ಕಾಣೆಯಾಗುವುದು, ಇಲ್ಲವಾದ್ರೆ ಹುಡುಗನೇ ಇಲ್ಲದಿರುವುದು. ಅಣ್ಣನ ಮದುವೆಯಲ್ಲಿ ತಮ್ಮ ಅಣ್ಣನ ಕೈಯಿಂದ ತಾಳಿ ಕಿತ್ತುಕೊಂಡು ವಧುವಿಗೆ ಕಟ್ಟುವುದು ಇಂತಹ ಹಲವಾರು ಸನ್ನಿವೇಶಗಳನ್ನು ಎಲ್ಲರೂ ನೋಡಿಯೇ ಇರುತ್ತೇವೆ.

ಇದೇ ರೀತಿ ಇಲ್ಲಿ ವರ ಮಹಾಶಯನೊಬ್ಬ ವಧುವಿಗೆ ತಾಳಿ ತಾಳಿ ಕಟ್ಟುವ ವೇಳೆ ಎಡವಟ್ಟು ಮಾಡಿಕೊಂಡು ಬಿಟ್ಟಿದ್ದಾನೆ.ಇದನ್ನು ತಿಳಿದೇ ಮಾಡಿದ್ದಾನೋ, ತಿಳಿಯದೇ ಮಾಡಿದ್ದಾನೋ ಗೊತ್ತಿಲ್ಲ ಆ ವಿಡಿಯೋ ಮಾತ್ರ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ವರ ಮಹಾಶಯ ತಾನು ವಧುವಿಗೆ ಹಾರ ಹಾಕುವದನ್ನು ಬಿಟ್ಟು, ಪಕ್ಕದಲ್ಲಿದ್ದ ವಧು ಸ್ನೇಹಿತೆಗೆ ಹಾರ ಹಾಕಿಬಿಟ್ಟು, ತನಗೆ ಏನೂ ತಿಳಿಯವದನಂತೆ ಹಾರ ಹಾಕಿ ಬಿಟ್ಟು ಎಡವಟ್ಟು ಮಾಡಿದ್ದಾನೆ.
ಆ ವಿಡಿಯೋದಲ್ಲಿ ಇರುವ ಪ್ರಖಾರ ಮೊದಲಿಗೆ ವಧು ವರನಿಗೆ ಮಾಲೆ ಹಾಕಿದ್ದಾಳೆ.ವಧು ವರರಿಬ್ಬರು ಹಾರ ಬದಲಾಯಿಸುವ ಶಾಸ್ತ್ರಕ್ಕಾಗಿ ಮದುವೆಯ ಮಂಟಪದಲಿರುತ್ತಾರೆ. ಮೊದಲಿಗೆ ವಧು ವರನಿಗೆ ಮಾಲೆ ಹಾಕುತ್ತಾಳೆ.ನಂತರ ವರ ವಧುವಿಗೆ ಹಾರ ಹಾಕಬೇಕಿತ್ತು ಆಲ್ವಾ…
ಆದ್ರೆ ಈ ವರ ಮಹಾಶಯ ಹಾಗೆ ಮಾಡದೆ ವಧುವಿನ ಪಕ್ಕದಲ್ಲಿದ್ದ ವಧುವಿನ ಸ್ನೇಹಿತೆಗೆ ಹಾರ ಹಾಕಿಬಿಟ್ಟಿದ್ದಾನೆ. ಆದರೆ ಮಾಲೆ ಹಾಕಿದ ನಂತರ ತನಗೆ ಏನೂ ತಿಳಿಯದವನಂತೆ, ಅಮಾಯಕನಂತೆ ಸುಮ್ಮನೆ ನೋಡುತ್ತಾ ನಿಂತಿದ್ದಾನೆ.

ಆದ್ರೆ ಹಾರ ಹಾಕಿಸಿಕೊಂಡ ಹುಡುಗಿ ಇದಕ್ಕೆ ಏನೂ ವಿರೋಧ ಮಾಡದೆ, ತನ್ನ ಸ್ನೇಹಿತೆ ವಧುವನ್ನು ಸಮಾಧಾನ ಮಾಡುತ್ತಿರುವುದು ಕಂಡುಬಂದಿದೆ.
ಇದನ್ನು ನೋಡಿದ ವಧು ಸೇರಿದಂತೆ ಸಂಭಂದಿಕರು, ಮದುವೆಗೆ ಬಂದಿದ್ದವರೆಲ್ಲಾ ದಂಗಾಗಿಹೋಗಿದ್ದಾರೆ.ವಿಡಿಯೋದಲ್ಲಿ ಅಲ್ಲಿದ್ದ ನೆರೆದಿದ್ದ ಜನರೆಲ್ಲಾ ವರನನ್ನೇ ನೋಡುತ್ತಿದ್ದಾರೆ. ಅಲ್ಲಿದ್ದವರೆಲ್ಲಾ ವರನಿಗೆ ಆ ವಧು ಸ್ನೇಹಿತೆಗೆ ಮೊದಲೇ ಪ್ರೀತಿ ಮಾಡುತಿದ್ದರು ಅನ್ನಿಸುತ್ತೆ ಅದಕ್ಕೆ ಹೀಗೆ ವರ ಮಾಡಿದ್ದಾನೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ.

ಇದೆಲ್ಲಾ ನಡೆಯುತ್ತಿದ್ದರೂ ಮಾಲೆ ಹಾಕಿದ ವರ ಮಹಾಶಯ ಮಾತ್ರ ತನಗೆ ಏನೂ ತಿಳಿಯದವನಂತೆ ತಪ್ಪೇ ಮಾಡಿಲ್ಲ ಎಂಬಂತೆ ನೋಡುತ್ತಾ ನಗುತ್ತಾ ನಿಂತಿದ್ದಾನೆ.ಇದರ ಅಸಲಿ ಸತ್ಯಾ ಸತ್ಯತೆ ಏನೂ ಅಂತ ಗೊತ್ತಿಲ್ಲ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶರಣ್ ಮತ್ತು ಕೋಮಲ್ ನಂತರ ಮತ್ತೊಬ್ಬ ಹಾಸ್ಯನಟ ಚಿಕ್ಕಣ್ಣ ಹೀರೋ ಆಗಿ ಬದಲಾಗುತ್ತಿದ್ದಾರೆ. ಉಪಮಾತಿ ಬ್ಯಾನರ್ ನಲ್ಲಿ ಚಿಕ್ಕಣ್ಣ ಹೀರೋ ಆಗಿ ನಟಿಸುತ್ತಿದ್ದಾರೆ. ರಾಬರ್ಟ್, ಮದಗಜ ನಿರ್ದೇಶಕ ಮಂಜು ಮಾಂಡವ್ಯ ಚಿಕ್ಕಣ್ಣ ನಟನೆಯ ಇನ್ನೂ ಹೆಸರಿಡದ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ಭರತ ಬಾಹುಬಲಿ ಎಂಬ ಸಿನಿಮಾದಲ್ಲಿ ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಜೊತೆಯಾಗಿ ನಟಿಸುತ್ತಿದ್ದಾರೆ,.ಇದೇ ಸಿನಿಮಾದಲ್ಲಿ ನಿರ್ದೇಶಕರಾಗಿದ್ದ ಮಂಜು ಮಾಂಡವ್ಯ ನಟನಾಗಿ ಪಾದಾರ್ಪಣೆ ಮಾಡಿದ್ದಾರೆ. 9 ವರ್ಷಗಳಿಂದ ಸ್ಯಾಂಡಲ್ ವುಡ್ ನಲ್ಲಿ ಹಲವು ಸಿನಿಮಾಗಳಲ್ಲಿ…
ನ್ಯೂ ಇಂಡಿಯಾ ಎ ಚಾರಿಟಬಲ್ ಟ್ರಸ್ಟ್ ಉದ್ಘಾಟಿಸಿದ ನಟ ಇಮ್ರಾನ್ ಹಶ್ಮಿ.ಬೆಂಗಳೂರು ಮೂಲದ ಉದ್ಯಮಿ ದಂಪತಿ ವಿಜಯ್ ಟಾಟಾ ಮತ್ತು ಅಮೃತಾ ಟಾಟಾ ದಂಪತಿ ನ್ಯೂ ಇಂಡಿಯಾ ಎ ಚಾರಿಟೆಬಲ್ ಟ್ರಸ್ಟ್ ಗೆ 200 ಕೋಟಿ ರು ಹಣ ನೀಡಿದ್ದಾರೆ.ಬೆಂಗಳೂರಿನಲ್ಲಿ ಉಚಿತ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕಾಗಿ ಈ ದಂಪತಿ ಹಣ ನೀಡಿದ್ದು ಬಾಲಿವುಡ್ ನಟ ಇಮ್ರಾನ್ ಹಸ್ಮಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಐಸಿಐಸಿಐ ಬ್ಯಾಂಕ್’ಶೂನ್ಯ ಬ್ಯಾಲೆನ್ಸ್’ ಖಾತೆದಾರರು ತಮ್ಮ ಶಾಖೆಗಳಲ್ಲಿ ಮಾಡುವ ಪ್ರತಿ ನಗದು ವಿತ್ ಡ್ರಾವಲ್ ಮೇಲೆರೂ. 100 ರಿಂದ 125 ವರೆಗೆ ಶುಲ್ಕವನ್ನು ಭರಿಸಬೇಕಾಗುತ್ತದೆ. ಜಿರೋ ಬ್ಯಾಲೆನ್ಸ್ ಖಾತೆದಾರರು ಮಾಡುವ ಪ್ರತಿ ನಗದು ಹಿಂಪಡೆಯುವಿಕೆ ಮೇಲೆ ರೂ. 100-125 ಶುಲ್ಕ ವಿಧಿಸುವ ಜೊತೆಗೆ ಕರೆನ್ಸಿ ಮರುಬಳಕೆ ಮೇಲೆಮಾಡುವ ನಗದು ಠೇವಣಿ ಮೇಲೂ ಶುಲ್ಕ ವಿಧಿಸಲು ಐಸಿಐಸಿಐ ಬ್ಯಾಂಕ್ ನಿರ್ಧರಿಸಿದೆ. ಇದೇ ಸಂದರ್ಭ, ಎಲ್ಲಆನ್ಲೈನ್ ವ್ಯವಹಾರ ಸೇವೆಗಳ ಮೇಲೆ ಶುಲ್ಕ ತೆಗೆದಿರುವ ಐಸಿಐಸಿಐ ಬ್ಯಾಂಕ್, ಡಿಜಿಟಲ್ ವ್ಯವಹಾರವನ್ನುಉತ್ತೇಜಿಸಲು ಮುಂದಾಗಿರುವುದಾಗಿ…
ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ…
7 ವರ್ಷದ ಬಾಲಕಿಯಬ್ಬಳು 14 ವಾಹನಗಳನ್ನು ಚಾಲನೆ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ದಾಖಲೆ ನಿರ್ಮಿಸಿದ್ದಾಳೆ. ಮೈಸೂರಿನ 2ನೇ ತರಗತಿ ವಿದ್ಯಾರ್ಥಿ ಈ ಸಾಹಸ ಮಾಡಿದ್ದಾಳೆ. 2ನೇ ತರಗತಿ ಓದುತ್ತಿರುವ ರಿಫಾ ತಸ್ಕೀನ್ ದಾಖಲೆ ನಿರ್ಮಿಸಿರುವ ಪುಟ್ಟ ಬಾಲಕಿಯಾಗಿದ್ದಾಳೆ. ದ್ವಿಚಕ್ರ ವಾಹನದಿಂದ ಬಹುಚತ್ರದ ಲಾರಿಯ ಸ್ವೀ ರಿಂಗ್ ಹಿಡಿದು ಕು ಳಿತ ಬಾಲಕಿ ದೂಳೆಬ್ಬಿಸುವ ವೇಗದಲ್ಲಿ ಮೈಸೂರಿನ ಈದ್ಗಾ ಮೈದಾನದಲ್ಲಿ ಹಲವು ಸುತ್ತುಗಳನ್ನು ಹಾಕುವ ಮೂಲಕ ನೆರೆದಿದ್ದ ಜನರಲ್ಲಿ ಅಚ್ಚರಿಯನ್ನುಂಟು ಮಾಡಿದಳು. ಬಳಿಕ ಬನ್ನಿಮಂಟಪದ ಸಂತ ಸೋಸೆಫ್…
ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ. ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ,…