ಸುದ್ದಿ

ಮದ್ಯ ಪ್ರಿಯರಿಗೊಂದು ಶಾಕಿಂಗ್ ಸುದ್ದಿ : ಆನ್ ಲೈನ್ ಮದ್ಯ ಮಾರಾಟಕ್ಕೆ ಹೈಕೋರ್ಟ್ ಬ್ರೇಕ್…!

24

ಆನ್ ಲೈನ್ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಮುಂದಾಗಿತ್ತಾದರೂ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರಿಂದ ಹಿಂದೆ ಸರಿದಿತ್ತು.

ಇದರ ಮಧ್ಯೆ ಚೆನ್ನೈ ಮೂಲದ ಹಿಪ್ ಬಾರ್ ಪ್ರೈವೇಟ್ ಲಿಮಿಟೆಡ್, ಡಿಜಿಟಲ್ ವಾಲೆಟ್ ಮೂಲಕ ಆನ್ ಲೈನ್ ಲಿಕ್ಕರ್ ವೆಡಿಂಗ್ ಗೆ ಅನುಮತಿ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು.

ಇದೀಗ ಈ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಸ್. ಸುಜಾತ ಅವರಿದ್ದ ಏಕಸದಸ್ಯ ಪೀಠ, ಆನ್ ಲೈನ್ ಮೂಲಕ ಮದ್ಯ ಸರಬರಾಜು ಮಾಡುವುದು ಅಕ್ರಮ ಹಾಗೂ ಅಬಕಾರಿ ನಿಯಮಗಳಡಿ ಅದಕ್ಕೆ ಅವಕಾಶವೂ ಇಲ್ಲ ಎಂದು ತೀರ್ಪು ನೀಡಿದೆ.

ಕರ್ನಾಟಕ ಅಬಕಾರಿ ಕಾಯ್ದೆ ಪ್ರಕಾರ ಲೈಸೆನ್ಸ್ ಹೊಂದಿರುವವರು ಮಾತ್ರ ನಿಗದಿಪಡಿಸಿದ ಸಮಯದಲ್ಲಿ ಮದ್ಯವನ್ನು ಮಾರಾಟ ಮಾಡಬಹುದಾಗಿದ್ದು, ಆದರೆ ಆನ್ ಲೈನ್ ಮದ್ಯ ಮಾರಾಟಕ್ಕೆ ಅವಕಾಶ ನೀಡಿದರೆ ದಿನದ 24 ಗಂಟೆಯೂ ವಹಿವಾಟು ನಡೆಸಬಹುದಾಗಿದೆ. ಹಾಗಾಗಿ ಇದಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲವೆಂದು ನ್ಯಾಯಮೂರ್ತಿಗಳು ಸ್ಪಷ್ಟಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಈ ಜ್ಯೂಸ್‌ ಅನ್ನು ಕುಡಿದರೆ ಸಾಕು ಕೆಮ್ಮು ಮಂಗಮಾಯ! ಈ ಉಪಯುಕ್ತ ಮಾಹಿತಿ ನೋಡಿ.

    ಈಗ ಚಳಿಗಾಲ. ಅಂದರೆ ಸಣ್ಣ ಪುಟ್ಟ ಕಾಯಿಲೆಗಳಿಗೆ ಆಹ್ವಾನ ಕೊಡುವ ಕಾಲ. ನೀವು ಬೇಡ ಎಂದರೂ ಅವುಗಳು ಮಾತ್ರ ನಿಮ್ಮನ್ನು ಬಿಡುವುದಿಲ್ಲ. ವರ್ಷ ಪೂರ್ತಿ ಈ ಸಮಯಕ್ಕಾಗಿಯೇ ಹೊಂಚು ಹಾಕಿ ಕಾದು ಕುಳಿತಿರುತ್ತವೆ. ಅಕ್ಟೋಬರ್, ನವೆಂಬರ್ ತಿಂಗಳು ಪ್ರಾರಂಭವಾಗುತ್ತಿದ್ದ ಹಾಗೆ ಮೈಯಲ್ಲಿ ಬೆವರು ಕಡಿಮೆಯಾಗಿ ಮೂಗಿನಲ್ಲಿ ಶೀತ ದ್ರವ ಹರಿಯಲು ಪ್ರಾರಂಭವಾಗುತ್ತದೆ. ಇದನ್ನು ಹಾಗೇ ಬಿಟ್ಟರೆ ಒಂದರ ಹಿಂದೆ ಒಂದು ಕೊಂಡಿಯಂತೆ ಶೀತ, ಕೆಮ್ಮು, ಜ್ವರ ಹೀಗೆ ಒಂದೊಂದಾಗಿ ಬಂದು ಅಂಟಿಕೊಳ್ಳುತ್ತವೆ. ಅಷ್ಟು ದಿನಗಳವರೆಗೆ ಬೆಳಗ್ಗೆ ಎದ್ದು…

  • ಸಿನಿಮಾ

    ಕನ್ನಡಕ್ಕೆ ಬಾಹುಬಲಿಯ “ಬಲ್ಲಾಳದೇವ”

    ಜಗತ್ತಿನಾದ್ಯಂತ ದಾಖಲೆ ಕಲೆಕ್ಷನ್ ಮಾಡುತ್ತಿರುವ ಬಾಹುಬಲಿ ಚಿತ್ರದ ಖಳನಟ ಬಲ್ಲಾಳದೇವ ಪಾತ್ರದಲ್ಲಿ ಮಿಂಚಿದ ರಾಣಾ ದಗ್ಗುಬಾಟಿ ಕನ್ನಡ ಚಿತ್ರದಲ್ಲಿ ಅಭಿನಯಿಸಲಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

  • ಉಪಯುಕ್ತ ಮಾಹಿತಿ, ದೇಶ-ವಿದೇಶ

    ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಬಗ್ಗೆ ನಿಮಗೆ ಗೊತ್ತಾ..? ತಿಳಿಯಲು ಈ ಲೇಕನ ಓದಿ…

    ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಯೋಜನೆಗೆ ಗುರುವಾರ ಶಂಕುಸ್ಥಾಪನೆ ನಡೆಯಲಿದೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಮತ್ತು ಮೋದಿ ಅವರು ಅಹಮದಾಬಾದ್‍ನಲ್ಲಿ ಅಡಿಗಲ್ಲು ಹಾಕುವ ಮೂಲಕ ಯೋಜನೆಗೆ ಚಾಲನೆ ಸಿಗಲಿದೆ.ಇದರ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ.

  • ಉಪಯುಕ್ತ ಮಾಹಿತಿ

    ಕಡಿಮೆ ಖರ್ಚಿನಲ್ಲಿ ನಟಿ ಮತ್ತು ಟರ್ಕಿ ಕೋಳಿಯನ್ನು ಸಾಕಿ ಹೆಚ್ಚು ಹಣ ಗಳಿಸಿ!ತಿಳಿಯಲು ಈ ಮಾಹಿತಿ ನೋಡಿ…

    ಮಾಂಸಪ್ರಿಯರಿಗೆ ನಾಟಿ ಕೋಳಿ ಮಾಂಸ ಎಂದರೆ ಬಾಯಿಯಲ್ಲಿ ನೀರು ಬರುವುದಂತು ಗ್ಯಾರಂಟಿ ಏಕೆಂದರೆ ಇದರ ಮಾಂಸದ ರುಚಿ ಅಂತಹುದು. ನಗರೀಕರಣ ಮತ್ತು ಮಾಂಸದ ಬೇಡಿಕೆಯ ಕಾರಣದಿಂದ ಫಾರಂ ಮತ್ತು ಬ್ರಾಯ್ಲರ್​ ಕೋಳಿಗಳ ಸಾಕಾಣಿಕೆಯ ಕೇಂದ್ರಗಳು ತಲೆ ಎತ್ತಿವೆ. ಆದರೆ ಈ ಕೋಳಿಗಳ ಮಾಂಸ ನಾಟಿ ಕೋಳಿಯ ಮಾಂಸದ ರುಚಿಯಷ್ಟಿರುವುದಿಲ್ಲ. ನಗರಗಳಲ್ಲಿ ಜನರು ಇಂದು ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದು ಹಣ ಖರ್ಚಾದರೂ ಕೂಡ ನಾಟಿ ಕೋಳಿಯನ್ನು ಕೊಳ್ಳುತ್ತಾರೆ. ಟರ್ಕಿ ಕೋಳಿಯನ್ನು ಕರ್ನಾಟಕದಲ್ಲಿ ತಿನ್ನುವುದು ಕಡಿಮೆ, ಆದರೆ…

  • ಸುದ್ದಿ

    ರಾಜ್ಯ ಸರ್ಕಾರದ ಖಡಕ್ ಎಚ್ಚರಿಕೆ :2ನೇ ತರಗತಿವರೆಗೂ ಹೋಂ ವರ್ಕ್‌ ನೀಡುವಂತಿಲ್ಲ…..!

    ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂವರ್ಕ್‌ ನೀಡುವ ಶಾಲೆಗಳ ಮಾನ್ಯತೆಯನ್ನೇ ರದ್ದುಪಡಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಖಡಕ್‌ ಎಚ್ಚರಿಕೆ ನೀಡಿದೆ.2019-20ನೇ ಸಾಲಿನ ಶೈಕ್ಷಣಿಕ ತರಗತಿಗಳು ಈಗಾಗಲೇ ಆರಂಭವಾಗಿವೆ. ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಒಂದು ಮತ್ತು ಎರಡನೇ ತರಗತಿ ಮಕ್ಕಳಿಗೆ ಹೆಚ್ಚಿನ ಹೋಂವರ್ಕ್‌ ನೀಡಲಾಗುತ್ತಿದೆ. ಇದು ಪಾಲಕ, ಪೋಷಕರಿಗೆ ನೇರ ಹೊರೆಯಾಗಲಿದೆ. ಅಲ್ಲದೆ, ಈ ಮಕ್ಕಳ ಹೋಂ ವರ್ಕ್‌ನ್ನು ಮನೆಯಲ್ಲಿ ಪಾಲಕ, ಪೋಷಕರೇ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂ…

  • ಸುದ್ದಿ

    ಮೋದಿ ಹೆಲಿಕಾಪ್ಟರ್ ಚೆಕ್ ಮಾಡಿ ಅಮಾನತು ಆಗಿದ್ದ ಚುನಾವಣಾ ಅಧಿಕಾರಿ..!ಅಮಾನತು ಆದೇಶ ಏನಾಯ್ತು..?

    ಒರಿಸ್ಸಾದ ಸಂಬಲ್ ಪುರದಲ್ಲಿ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅಮಾನತು ಆದೇಶವನ್ನು ತಡೆ ಹಿಡಿಯಲಾಗಿದೆ.ಏಪ್ರಿಲ್ 18ರಂದು ಮೊಹಮ್ಮದ್ ಮೊಹ್ಸಿನ್ ಒರಿಸ್ಸಾದಲ್ಲಿ ಚುನಾವಣಾ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಚುನಾವಣಾ ಪ್ರಚಾರಕ್ಕೆಂದು ಆಗಮಿಸಿದ್ದ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದರು. ಎಸ್ಪಿಜಿಯಿಂದ ವಿಶೇಷ ರಕ್ಷಣೆ ಪಡೆದಿರುವವರ ವಾಹನಗಳನ್ನು ತಪಾಸಣೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂಬ ಆರೋಪದ ಮೇಲೆ ಚುನಾವಣಾ ಆಯೋಗ ಮೊಹ್ಸಿನ್ ಅವರನ್ನು ಅಮಾನತು ಮಾಡಿತ್ತು.  ಅಮಾನತಿನ…