ಸುದ್ದಿ

ಆರ್ಥಿಕ ಕುಸಿತ ಎದುರಿಸುವುದು ಹೇಗೆ ಎಂದು ಮೋದಿಗೆ ಆರು ಸಲಹೆ ನೀಡಿದ ಮನಮೋಹನ್ ಸಿಂಗ್,.!

41

ನವದೆಹಲಿ, ಆರ್ಥಿಕತೆಯು ಸಹಜ ಸ್ಥಿತಿಗೆ ಬರಲು ಸರ್ಕಾರವು ಮೊದಲು ಜಿಎಸ್‌ಟಿಯನ್ನು ಸರಳ ಹಾಗೂ ಸುಧಾರಣೆ ಮಾಡಬೇಕು. ಗ್ರಾಮೀಣ ಬಳಕೆಯನ್ನು ಹೆಚ್ಚಿಸಬೇಕು ಮತ್ತು ಬಂಡವಾಳ ಸೃಷ್ಟಿಯ ಸಾಲದ ಕೊರತೆಯ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ. ಭಾರತವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂಬ ಸತ್ಯವನ್ನು ನಿರಾಕರಿಸಲು ಸಾಧ್ಯವಿಲ್ಲ. ಈಗಾಗಲೇ ಸಾಕಷ್ಟು ಸಮಯ ಕಳೆದುಹೋಗಿದೆ. ವಲಯವಾರು ಚೂರು ಚೂರು ಗಮನ ನೀಡುವಂತಹ ರಾಜಕೀಯ ಬಂಡವಾಳವನ್ನು ವ್ಯರ್ಥ ಮಾಡುವ ಬದಲು ಅಥವಾ ಅಪನಗದೀಕರಣದಂತಹ ಶಾಶ್ವತ ಬ್ಲಂಡರ್‌ಗಳನ್ನು ಎಸಗುವ ಬದಲು ಈಗ ರಚನಾತ್ಮಕ ಸುಧಾರಣೆಯ ಮುಂದಿನ ಪೀಳಿಗೆಯನ್ನು ನಡೆಸಬೇಕಾದ ಹೊಣೆ ಸರ್ಕಾರದ ಮೇಲಿದೆ ಎಂದು ಮನಮೋಹನ್ ಸಿಂಗ್ ಹೇಳಿದ್ದಾರೆ.

ನಾನು ಹಣಕಾಸು ಸಚಿವನಾಗಿದ್ದಾಗ ಮತ್ತು ಪ್ರಧಾನಿಯಾಗಿದ್ದಾಗ ನಮಗೆ ಸಂಪೂರ್ಣ ಬಹುಮತ ಸಿಕ್ಕಿರಲಿಲ್ಲ. ಈಗ ಮೋದಿ ಸರ್ಕಾರ ಸತತ ಎರಡು ಬಾರಿ ಬೃಹತ್ ಬಹುಮತದೊಂದಿಗೆ ಆಯ್ಕೆಯಾಗಿದೆ. ಹೀಗಿದ್ದರೂ ನಾವು 1991 ಮತ್ತು 2008ರಲ್ಲಿ ಜಾಗತಿಕ ಹಣಕಾಸು ಬಿಕ್ಕಟ್ಟನ್ನು ಸಮರ್ಥವಾಗಿ ಎದುರಿಸಿದ್ದೆವು’ ಎಂದು ಅವರು ತಿಳಿಸಿದ್ದಾರೆ. ‘ದಿ ಬಿಜಿನೆಸ್ ಲೈನ್’ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಮನಮೋಹನ್ ಸಿಂಗ್ ಅವರು ಮೋದಿ ಸರ್ಕಾರದ ಆರ್ಥಿಕ ನೀತಿಗಳನ್ನು ಟೀಕಿಸಿದ್ದಾರೆ.

ಕಳವಳಕಾರಿಆರ್ಥಿಕ ಕುಸಿತ : ಭಾರತವು ಅತ್ಯಂತಕಳವಳಕಾರಿಯಾಗಿ ಆರ್ಥಿಕ ಕುಸಿತ ಅನುಭವಿಸುತ್ತಿದೆ.ಈ ಕುಸಿತ ಆರ್ಥಿಕತೆಯಪ್ರಮುಖ ವಲಯಗಳಿಗೆ ಭಾರಿ ಹೊಡೆತ ನೀಡಿದೆ.ಈ ಸಮಸ್ಯೆಗಳಿಗೆ ಸರ್ಕಾರವುಪಾರದರ್ಶಕ ರೀತಿಯಲ್ಲಿ ಪರಿಹಾರ ಹುಡುಕಲು ಮುಂದಾಗಬೇಕು.ಪರಿಣತರ ಸಲಹೆ ಪಡೆದುಕೊಳ್ಳಬೇಕು. ಮುಖ್ಯವಾಗಿಸರ್ಕಾರವು ಜನರಲ್ಲಿ ಆತ್ಮವಿಶ್ವಾಸ ಮೂಡಿಸಬೇಕು.ಜತೆಗೆ ಜಗತ್ತಿಗೆ ಸ್ಪಷ್ಟ ಸಂದೇಶ ರವಾನಿಸಬೇಕು.ದುರದೃಷ್ಟವಶಾತ್ ಮೋದಿ ಸರ್ಕಾರದಿಂದ ಅಂತಹಯಾವುದೇ ಪ್ರಯತ್ನ ಇದುವರೆಗೂ ನಡೆದಿರುವುದುಕಂಡಿಲ್ಲ ಎಂದು ಸಿಂಗ್ ಟೀಕಿಸಿದರು.

ಕೃಷಿಗೆ ಹೊಡೆತ ನೀಡಿದ ನೋಟ್ ರದ್ದತಿ : ಆರ್ಥಿಕತೆಯ ಪ್ರಮುಖ ಭಾಗಗಳು ಆರ್ಥಿಕಸಮಸ್ಯೆಗೆ ಸಿಲುಕಿವೆ. ಉದಾಹರಣೆಗೆ ಕೃಷಿ ವಲಯವು ಜಿಡಿಪಿಯ ಶೇ 15ರಷ್ಟು ಕೊಡುಗೆ ನೀಡುತ್ತದೆ. ಅದುಮುಖ್ಯವಾಗಿ ನಡೆಯುವುದು ನಗದು ರೂಪದಲ್ಲಿ. ಮುಖ್ಯವಾಗಿ ಅದು ತೆರಿಗೆ ರಹಿತವಾದದ್ದು. ಆದರೆ ಅಪಗನಗದೀಕರಣದಸಮಯದಲ್ಲಿ ನಗದು ಹಣವನ್ನು ಹಠಾತ್ತಾಗಿ ಹಿಂದಕ್ಕೆ ಪಡೆದುಕೊಂಡ ಪರಿಣಾಮ ಕೃಷಿ ಆರ್ಥಿಕತೆಗೆ ಹೊಡೆತಬಿದ್ದಿತು ಎಂದು ಸಿಂಗ್ ಅರೋಪಿಸಿದ್ದಾರೆ.

ಅಪನಗದೀಕರಣದ ಆತಂಕ ನಿಜವಾಗಿದೆ : ಅಪನಗದೀಕರಣದನಂತರದ ವರ್ಷದಲ್ಲಿ ಜಿಡಿಪಿಯಲ್ಲಿ ಕಾರ್ಪೊರೇಟ್ ಹೂಡಿಕೆಯ ಪ್ರಮಾಣ ಶೇ7.5ರಿಂದ ಶೇ 2.7ಕ್ಕೆ ಕುಸಿದಿದೆ.ಇದು 2010-11ರಲ್ಲಿ ಜಿಡಿಪಿಯ ಶೇ15ರಷ್ಟಿತ್ತು. ಇದರ ಅರ್ಥ, ಕೃಷಿಯಂತಹಅಸಂಘಟಿತ ವಲಯ ಮಾತ್ರವಲ್ಲ, ಸಂಘಟಿತವಲಯ ಕೂಡ ಅಪನಗದೀಕರಣದಿಂದ ಸಂಕಷ್ಟಕ್ಕೆಸಿಲುಕಿದೆ. ಸಣ್ಣ ಮತ್ತು ಮಧ್ಯಮಉದ್ದಿಮೆಗಳು ಅತ್ಯಂತ ಕೆಟ್ಟ ಹೊಡೆತತಿಂದಿವೆ. ಅಪನಗದೀಕರಣದ ನಿರ್ಧಾರದಿಂದ ಉಂಟಾಗುವ ಪರಿಣಾಮವು ದೀರ್ಘಾವಧಿಮತ್ತು ತೀವ್ರವಾಗಿರಲಿದೆ ಎಂಬ ನಮ್ಮ ಕಳವಳಸತ್ಯವಾಗಿದೆ.

ಜಿಎಸ್‌ಟಿಯ ಕಳಪೆ ಅನುಷ್ಠಾನ : ಅಪನಗದೀಕರಣದ ಆಘಾತದ ಬಳಿಕವೂ ಸರ್ಕಾರತರಾತುರಿಯಲ್ಲಿ ಜಿಎಸ್‌ಟಿ ಜಾರಿಮಾಡಿತ್ತು ಆರ್ಥಿಕತೆಗೆ ನೀಡಿದ ಮತ್ತೊಂದು ದೊಡ್ಡಪೆಟ್ಟು. ಜಿಎಸ್‌ಟಿ ಒಂದುರಚನಾತ್ಮಕ ಸುಧಾರಣೆ. ಯುಪಿಎ ಸರ್ಕಾರದ ಅವಧಿಯಲ್ಲಿಯೇಅದನ್ನು ಜಾರಿಗೆ ತರಲು ಪ್ರಯತ್ನಿಸಿದ್ದೆವು.ನಾವು ಸುಧಾರಣೆಯ ಬೆಂಬಲಿಗರು. ಆದರೆ, ಅದನ್ನು ತುಂಬಾಕೆಟ್ಟದಾಗಿ ಅಳವಡಿಸಲಾಯಿತು. ದೊಡ್ಡ ಕಂಪೆನಿಗಳು ಜಿಎಸ್‌ಟಿ ರಸೀದಿ ನೀಡಬಲ್ಲಪೂರೈಕೆದಾರರಿಂದ ಖರೀದಿ ಮಾಡಲು ಆದ್ಯತೆನೀಡಿದ್ದರಿಂದ ಸಣ್ಣ, ಅತಿ ಸಣ್ಣಮತ್ತು ಮಧ್ಯಮ ಉದ್ಯಮಗಳು ಸಂಕಷ್ಟಕ್ಕೆಸಿಲುಕಿದವು.

ಸಣ್ಣ ಮತ್ತು ಮಧ್ಯಮ ಉದ್ಯಮ ತತ್ತರ : ಜಿಎಸ್‌ಟಿ ಅಡಿಯಲ್ಲಿತೀರಾ ಕಡಿಮೆ ಪ್ರಮಾಣದಲ್ಲಿ ಅರ್ಹತೆಗಿಟ್ಟಿಸಿಕೊಳ್ಳುವ ಭಾರತದ ಸಣ್ಣ ಕಂಪೆನಿಗಳಿಗೆಹೂಡುವ ಬದಲು ಆಮದಿಗೆ ಆದ್ಯತೆನೀಡಲಾಯಿತು. ಇಡೀ ಪೂರೈಕೆಯ ಸರಪಳಿಯನ್ನೇತುಂಡರಿಸಲಾಯಿತು. ಈಗ ನಮ್ಮ ಮಾರುಕಟ್ಟೆಗಳಲ್ಲಿಚೀನಾದ ಆಮದು ವಸ್ತುಗಳೇ ತುಂಬಿವೆಎನ್ನುವುದು ನಮಗೆ ತಿಳಿದಿದೆ. ಇಷ್ಟಲ್ಲದೆತೆರಿಗೆ ಅಧಿಕಾರಿಗಳು ತೆರಿಗೆದಾರರಿಗೆ ಕಿರುಕುಳ ನೀಡುತ್ತಿರುವ ವರದಿಗಳೂಬಂದಿವೆ. ಜಿಎಸ್‌ಟಿಯ ಸಂಕೀರ್ಣ,ಬಹುಬಗೆಯ ತೆರಿಗೆಗಳು, ನಿರಂತರ ಬದಲಾಗುವ ಮತ್ತುಸೃಷ್ಟಿಯಾಗುವ ನಿಯಮಗಳು ಮುಂತಾದವು ಸಣ್ಣಮತ್ತು ಮಧ್ಯಮ ಗಾತ್ರದ ಉದ್ಯಮಗಳಿಗೆಗಾಸಿಯುಂಟು ಮಾಡಿವೆ.

ಜಿಎಸ್‌ಟಿಯನ್ನು ಸರಳಗೊಳಿಸಿ: ಪ್ರಧಾನಿಮೋದಿ ಮತ್ತು ಅವರ ಸರ್ಕಾರವುತಮ್ಮ ‘ಶೀರ್ಷಿಕೆ ನಿರ್ವಹಣೆ’ಯ ಹವ್ಯಾಸದಿಂದ ಹೊರಬರಬೇಕು.ತನ್ನ ಆದ್ಯತೆಗಳಲ್ಲಿ ಮೊದಲನೆಯದಾಗಿ ಜಿಎಸ್‌ಟಿಯನ್ನು ಸರಳಮತ್ತು ಸುಧಾರಣೆ ಮಾಡಬೇಕಿದೆ. ಇದರಿಂದಆದಾಯ ಅಲ್ಪಾವಧಿಗೆ ನಷ್ಟವಾದರೂ ತೊಂದರೆಯಿಲ್ಲ. ಎರಡನೆಯದಾಗಿ ಗ್ರಾಮೀಣ ಬಳಕೆಯನ್ನು ವೃದ್ಧಿಸಲುಮತ್ತು ಕೃಷಿಯನ್ನು ಪುನರುಜ್ಜೀವನಗೊಳಿಸಲು ಸೂಕ್ತ ಮಾರ್ಗಗಳನ್ನು ಹುಡುಕಬೇಕು.ಮೂರನೆಯದಾಗಿ, ಬಂಡವಾಳ ಸೃಷ್ಟಿಗೆ ಎದುರಾಗಿರುವಸಾಲದ ಕೊರತೆಯನ್ನು ಬಗೆಹರಿಸಬೇಕು. ಇದು ಸಾರ್ವಜನಿಕವಲಯದ ಬ್ಯಾಂಕುಗಳುಮಾತ್ರವಲ್ಲ, ಎನ್‌ಬಿಎಫ್‌ಸಿಗಳನ್ನೂಉಳಿಸಬೇಕಿದೆ.

ರಫ್ತು ಮಾರುಕಟ್ಟೆ ಪ್ರಯೋಜನ ಬಳಸಿಕೊಳ್ಳಿ : ನಾಲ್ಕನೆಯದಾಗಿಜವಳಿ, ಆಟೋ, ಎಲೆಕ್ಟ್ರಾನಿಕ್ಸ್ ಮತ್ತುದುಬಾರಿಯಲ್ಲದ ಮನೆ ನಿರ್ಮಾಣದಂತಹ ಮುಖ್ಯಉದ್ಯೋಗ ಸೃಷ್ಟಿಯ ವಲಯಗಳನ್ನು ಸುಧಾರಣೆಮಾಡಬೇಕು. ಮುಖ್ಯವಾಗಿ ಎಂಎಸ್‌ಎಂಇಗಳಿಗೆ ಆದ್ಯತೆನೀಡಬೇಕು. ಐದನೆಯದಾಗಿ, ಅಮೆರಿಕ ಮತ್ತು ಚೀನಾನಡುವಿನ ವ್ಯಾಪಾರ ಸಮರದಿಂದಾಗಿ ತೆರೆದುಕೊಂಡಿರುವರಫ್ತು ಮಾರುಕಟ್ಟೆಯನ್ನು ಬಳಸಿಕೊಳ್ಳಲು ಸೂಕ್ತ ಮಾರ್ಗೋಪಾಯಗಳನ್ನು ಕಂಡುಕೊಳ್ಳಬೇಕು.ಕೊನೆಯದಾಗಿ, ಬೃಹತ್ ಮಟ್ಟದ ಸಾರ್ವಜನಿಕಮೂಲಸೌಕರ್ಯದ ಅಭಿವೃದ್ಧಿಗೆ ವಿಶ್ವಾಸಾರ್ಹ ಮಾರ್ಗಸೂಚಿಯನ್ನು ರೂಪಿಸಬೇಕು. ಇದರಲ್ಲಿ ಖಾಸಗಿ ಹೂಡಿಕೆಗೂಗಮನ ಹರಿಸಬೇಕು. ಇವುಗಳು ರಚನಾತ್ಮಕವಾಗಿ ಸುಧಾರಣೆಯಾಗಬೇಕು.ಇವೆಲ್ಲವನ್ನೂ ಸರಿಯಾದ ರೀತಿಯಲ್ಲಿ ನಿಭಾಯಿಸಿದರೆಮುಂದಿನ ಮೂರು ನಾಲ್ಕು ವರ್ಷಗಳಲ್ಲಿಯೇನಾವು ಅತ್ಯುತ್ತಮ ಬೆಳವಣಿಗೆಗೆ ಮರಳಬಹುದು ಎಂದು ಸಿಂಗ್ ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಬಾಂಬ್ ಬ್ಲಾಸ್ಟ್‌ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಕೆ ಪಿಎಚ್‍ಡಿ ಮಾಡಿದ್ದಾರೆ..!ತಿಳಿಯಲು ಇದನ್ನು ಓದಿ..

    ಜೀವನದಲ್ಲಿ ಎಷ್ಟೇ ಕಷ್ಟಗಳು ಎದುರಾದರೂ ಮುಂದೆ ಸಾಗಬೇಕೆ ಹೊರತು ಹಿಂದಡಿ ಇಡಬಾರದು. ಅಂಗವೈಕಲ್ಯ ಇದೆ ಎಂದು ನೋವನುಭವಿಸಬಾರುದು. ಅದನ್ನು ಜಯಿಸಬೇಕು. ಯಶಸ್ಸಿನಿಂದ ಮುಂದೆ ಸಾಗಬೇಕು. ಮಾಳವಿಕಾ ಅಯ್ಯರ್‌ ಯುವತಿ ತನ್ನ 13ನೇ ವರ್ಷ ಬಾಂಬ್ ಬ್ಲಾಸ್ಟ್‌ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಗ ಪಿಎಚ್‍ಡಿ ಮಾಡಿದ್ದಾರೆ. ತನ್ನಂತಹ ಅದೆಷ್ಟೋ ಮಂದಿಗೆ ಪ್ರೇರಣೆಯಾಗಿದ್ದಾರೆ. ಆಕೆ ಬಿಕನೀರ್ ಮೂಲದವರು. ಮಾಳವಿಕಾ ಅಯ್ಯರ್‌ದು ತಮಿಳುನಾಡಿನ ಕುಂಭಕೋಣ ಪ್ರದೇಶ. ಅಲ್ಲೇ ಬೆಳದಳು. ಆದರೆ ತಂದೆಗೆ ಬಿಕನೀರ್‌ಗೆ ಟ್ರಾನ್ಸ್‌ಫರ್ ಆಯಿತು. ಆತ ವಾಟರ್ ವರ್ಕ್ಸ್ ಇಲಾಖೆಯಲ್ಲಿ…

  • Uncategorized

    ಖಾಲಿ ಹೊಟ್ಟೆಯಲ್ಲಿ ಈ ಹಣ್ಣು ತಿಂದರೆ ಏನಾಗುತ್ತೆ ಗೊತ್ತಾ!

    ಈ ಹಣ್ಣಿನಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ

  • ಸುದ್ದಿ

    ‘ವೃಷಭಾವತಿ ಉಳಿಸಿ‌’ ಅಭಿಯಾನಕ್ಕೆ ಮತ್ತು ಮ್ಯಾರಥಾನ್ ನಲ್ಲಿ ಗೋಲ್ಡನ್‌ ಸ್ಟಾರ್ ಗಣೇಶ್ ಸಾಥ್…!

    ಐತಿಹಾಸಿಕ ಬೆಂಗಳೂರು ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿ ಉಳಿಸಿಕೊಳ್ಳುವ ಪ್ರಯತ್ನಗಳು ಇತ್ತೀಚಿಗೆ ಹೆಚ್ಚುತ್ತಿದ್ದು ಇಂತಹುದೇ ಅಭಿಯಾನವೊಂದರ ಭಾಗವಾಗಿ ಯುವಬ್ರಿಗೇಡ್ ಕೆಂಪೇಗೌಡ ನಗರಿಯ ಐತಿಹಾಸಿಕ ವೃಷಭಾವತಿ ನದಿ ಉಳಿಸಲು ವಿಶೇಷ ಕಾರ್ಯಕ್ರಮ‌ ಹಮ್ಮಿಕೊಂಡಿದೆ. ಯುವಬ್ರಿಗೇಡ್ ನ ಈ ಪ್ರಯತ್ನ ಕ್ಕೆ ಗೋಲ್ಡನ್ ಸ್ಟಾರ್ ಗಣೇಶ ಕೈಜೋಡಿಸಿದ್ದು, ಇದೇ ಸಪ್ಟೆಂಬರ್ ೨೨ ರಂದು ಭಾನುವಾರ ನಡೆಯುವ ಮ್ಯಾರಥಾನ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. ಸಪ್ಟೆಂಬರ್ ೨೨ ರಂದು ಭಾನುವಾರ, ವೃಷಭಾವತಿ ಸ್ವಚ್ಛತೆ ಗಾಗಿ ಕೆಂಗೇರಿ ಗಣಪತಿ ದೇವಾಲಯದಿಂದ ಬೆಂಗಳೂರು ವಿವಿವರೆಗೆ ಮ್ಯಾರಥಾನ್ ನಡೆಯಲಿದೆ….

  • ಸ್ಪೂರ್ತಿ

    ರಿಕ್ಷಾ ಚಾಲಕನ ಮಗ ಐಎಎಸ್ ಅಧಿಕಾರಿಯಾಗಿದ್ದು ಹೇಗೆ ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ಜೀವನದ ಪಾಠವನ್ನು ಹಸಿವು ಅನ್ನೊದ್ದು ಅತಿ ಬೇಗನೆ ಕಲಿಸಿ ಕೊಡುತ್ತದೆ ಅನ್ನಬಹುದು. ಬಡತನದಲ್ಲಿ ಬೆಂದು ನೊಂದು ಹಲವರ ಬಾಯಲ್ಲಿ ಬೋಯಿಸಿಕೊಂಡು ಜೀವನವನ್ನು ಸಾಗಿಸುತ್ತ, ಇವುಗಳ ಮದ್ಯೆ ತನ್ನ ಮಗನನ್ನು ಐಎಎಸ್ ಅಧಿಕಾರಿಯನ್ನಾಗಿ ಮಾಡಬೇಕು ಅನ್ನೋ ಕನಸನ್ನು ಹೊತ್ತು ಶ್ರಮ ಪಟ್ಟ ಆ ಶ್ರಮ ಜೀವಿಗೆ ಆ ದೇವರು ಪ್ರತಿ ಫಲವನ್ನು ಕೊಟ್ಟಿದ್ದಾನೆ.

  • ಸ್ಪೂರ್ತಿ

    ಆಟೋದಲ್ಲಿ ಸಿಕ್ಕ 80,000 ರೂಪಾಯಿಗಳನ್ನು ಮರಳಿಸಿದ್ದ ಡ್ರೈವರ್’ಗೆ ಆಕೆ ನೀಡಿದ್ದು ಏನು ಗೊತ್ತಾ..?ತಿಳಿಯಲು ಇದನ್ನು ಓದಿ…

    ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…