ಸುದ್ದಿ

ಆರ್ಥಿಕ ಕುಸಿತ ಎದುರಿಸುವುದು ಹೇಗೆ ಎಂದು ಮೋದಿಗೆ ಆರು ಸಲಹೆ ನೀಡಿದ ಮನಮೋಹನ್ ಸಿಂಗ್,.!

36

ನವದೆಹಲಿ, ಆರ್ಥಿಕತೆಯು ಸಹಜ ಸ್ಥಿತಿಗೆ ಬರಲು ಸರ್ಕಾರವು ಮೊದಲು ಜಿಎಸ್‌ಟಿಯನ್ನು ಸರಳ ಹಾಗೂ ಸುಧಾರಣೆ ಮಾಡಬೇಕು. ಗ್ರಾಮೀಣ ಬಳಕೆಯನ್ನು ಹೆಚ್ಚಿಸಬೇಕು ಮತ್ತು ಬಂಡವಾಳ ಸೃಷ್ಟಿಯ ಸಾಲದ ಕೊರತೆಯ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ. ಭಾರತವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂಬ ಸತ್ಯವನ್ನು ನಿರಾಕರಿಸಲು ಸಾಧ್ಯವಿಲ್ಲ. ಈಗಾಗಲೇ ಸಾಕಷ್ಟು ಸಮಯ ಕಳೆದುಹೋಗಿದೆ. ವಲಯವಾರು ಚೂರು ಚೂರು ಗಮನ ನೀಡುವಂತಹ ರಾಜಕೀಯ ಬಂಡವಾಳವನ್ನು ವ್ಯರ್ಥ ಮಾಡುವ ಬದಲು ಅಥವಾ ಅಪನಗದೀಕರಣದಂತಹ ಶಾಶ್ವತ ಬ್ಲಂಡರ್‌ಗಳನ್ನು ಎಸಗುವ ಬದಲು ಈಗ ರಚನಾತ್ಮಕ ಸುಧಾರಣೆಯ ಮುಂದಿನ ಪೀಳಿಗೆಯನ್ನು ನಡೆಸಬೇಕಾದ ಹೊಣೆ ಸರ್ಕಾರದ ಮೇಲಿದೆ ಎಂದು ಮನಮೋಹನ್ ಸಿಂಗ್ ಹೇಳಿದ್ದಾರೆ.

ನಾನು ಹಣಕಾಸು ಸಚಿವನಾಗಿದ್ದಾಗ ಮತ್ತು ಪ್ರಧಾನಿಯಾಗಿದ್ದಾಗ ನಮಗೆ ಸಂಪೂರ್ಣ ಬಹುಮತ ಸಿಕ್ಕಿರಲಿಲ್ಲ. ಈಗ ಮೋದಿ ಸರ್ಕಾರ ಸತತ ಎರಡು ಬಾರಿ ಬೃಹತ್ ಬಹುಮತದೊಂದಿಗೆ ಆಯ್ಕೆಯಾಗಿದೆ. ಹೀಗಿದ್ದರೂ ನಾವು 1991 ಮತ್ತು 2008ರಲ್ಲಿ ಜಾಗತಿಕ ಹಣಕಾಸು ಬಿಕ್ಕಟ್ಟನ್ನು ಸಮರ್ಥವಾಗಿ ಎದುರಿಸಿದ್ದೆವು’ ಎಂದು ಅವರು ತಿಳಿಸಿದ್ದಾರೆ. ‘ದಿ ಬಿಜಿನೆಸ್ ಲೈನ್’ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಮನಮೋಹನ್ ಸಿಂಗ್ ಅವರು ಮೋದಿ ಸರ್ಕಾರದ ಆರ್ಥಿಕ ನೀತಿಗಳನ್ನು ಟೀಕಿಸಿದ್ದಾರೆ.

ಕಳವಳಕಾರಿಆರ್ಥಿಕ ಕುಸಿತ : ಭಾರತವು ಅತ್ಯಂತಕಳವಳಕಾರಿಯಾಗಿ ಆರ್ಥಿಕ ಕುಸಿತ ಅನುಭವಿಸುತ್ತಿದೆ.ಈ ಕುಸಿತ ಆರ್ಥಿಕತೆಯಪ್ರಮುಖ ವಲಯಗಳಿಗೆ ಭಾರಿ ಹೊಡೆತ ನೀಡಿದೆ.ಈ ಸಮಸ್ಯೆಗಳಿಗೆ ಸರ್ಕಾರವುಪಾರದರ್ಶಕ ರೀತಿಯಲ್ಲಿ ಪರಿಹಾರ ಹುಡುಕಲು ಮುಂದಾಗಬೇಕು.ಪರಿಣತರ ಸಲಹೆ ಪಡೆದುಕೊಳ್ಳಬೇಕು. ಮುಖ್ಯವಾಗಿಸರ್ಕಾರವು ಜನರಲ್ಲಿ ಆತ್ಮವಿಶ್ವಾಸ ಮೂಡಿಸಬೇಕು.ಜತೆಗೆ ಜಗತ್ತಿಗೆ ಸ್ಪಷ್ಟ ಸಂದೇಶ ರವಾನಿಸಬೇಕು.ದುರದೃಷ್ಟವಶಾತ್ ಮೋದಿ ಸರ್ಕಾರದಿಂದ ಅಂತಹಯಾವುದೇ ಪ್ರಯತ್ನ ಇದುವರೆಗೂ ನಡೆದಿರುವುದುಕಂಡಿಲ್ಲ ಎಂದು ಸಿಂಗ್ ಟೀಕಿಸಿದರು.

ಕೃಷಿಗೆ ಹೊಡೆತ ನೀಡಿದ ನೋಟ್ ರದ್ದತಿ : ಆರ್ಥಿಕತೆಯ ಪ್ರಮುಖ ಭಾಗಗಳು ಆರ್ಥಿಕಸಮಸ್ಯೆಗೆ ಸಿಲುಕಿವೆ. ಉದಾಹರಣೆಗೆ ಕೃಷಿ ವಲಯವು ಜಿಡಿಪಿಯ ಶೇ 15ರಷ್ಟು ಕೊಡುಗೆ ನೀಡುತ್ತದೆ. ಅದುಮುಖ್ಯವಾಗಿ ನಡೆಯುವುದು ನಗದು ರೂಪದಲ್ಲಿ. ಮುಖ್ಯವಾಗಿ ಅದು ತೆರಿಗೆ ರಹಿತವಾದದ್ದು. ಆದರೆ ಅಪಗನಗದೀಕರಣದಸಮಯದಲ್ಲಿ ನಗದು ಹಣವನ್ನು ಹಠಾತ್ತಾಗಿ ಹಿಂದಕ್ಕೆ ಪಡೆದುಕೊಂಡ ಪರಿಣಾಮ ಕೃಷಿ ಆರ್ಥಿಕತೆಗೆ ಹೊಡೆತಬಿದ್ದಿತು ಎಂದು ಸಿಂಗ್ ಅರೋಪಿಸಿದ್ದಾರೆ.

ಅಪನಗದೀಕರಣದ ಆತಂಕ ನಿಜವಾಗಿದೆ : ಅಪನಗದೀಕರಣದನಂತರದ ವರ್ಷದಲ್ಲಿ ಜಿಡಿಪಿಯಲ್ಲಿ ಕಾರ್ಪೊರೇಟ್ ಹೂಡಿಕೆಯ ಪ್ರಮಾಣ ಶೇ7.5ರಿಂದ ಶೇ 2.7ಕ್ಕೆ ಕುಸಿದಿದೆ.ಇದು 2010-11ರಲ್ಲಿ ಜಿಡಿಪಿಯ ಶೇ15ರಷ್ಟಿತ್ತು. ಇದರ ಅರ್ಥ, ಕೃಷಿಯಂತಹಅಸಂಘಟಿತ ವಲಯ ಮಾತ್ರವಲ್ಲ, ಸಂಘಟಿತವಲಯ ಕೂಡ ಅಪನಗದೀಕರಣದಿಂದ ಸಂಕಷ್ಟಕ್ಕೆಸಿಲುಕಿದೆ. ಸಣ್ಣ ಮತ್ತು ಮಧ್ಯಮಉದ್ದಿಮೆಗಳು ಅತ್ಯಂತ ಕೆಟ್ಟ ಹೊಡೆತತಿಂದಿವೆ. ಅಪನಗದೀಕರಣದ ನಿರ್ಧಾರದಿಂದ ಉಂಟಾಗುವ ಪರಿಣಾಮವು ದೀರ್ಘಾವಧಿಮತ್ತು ತೀವ್ರವಾಗಿರಲಿದೆ ಎಂಬ ನಮ್ಮ ಕಳವಳಸತ್ಯವಾಗಿದೆ.

ಜಿಎಸ್‌ಟಿಯ ಕಳಪೆ ಅನುಷ್ಠಾನ : ಅಪನಗದೀಕರಣದ ಆಘಾತದ ಬಳಿಕವೂ ಸರ್ಕಾರತರಾತುರಿಯಲ್ಲಿ ಜಿಎಸ್‌ಟಿ ಜಾರಿಮಾಡಿತ್ತು ಆರ್ಥಿಕತೆಗೆ ನೀಡಿದ ಮತ್ತೊಂದು ದೊಡ್ಡಪೆಟ್ಟು. ಜಿಎಸ್‌ಟಿ ಒಂದುರಚನಾತ್ಮಕ ಸುಧಾರಣೆ. ಯುಪಿಎ ಸರ್ಕಾರದ ಅವಧಿಯಲ್ಲಿಯೇಅದನ್ನು ಜಾರಿಗೆ ತರಲು ಪ್ರಯತ್ನಿಸಿದ್ದೆವು.ನಾವು ಸುಧಾರಣೆಯ ಬೆಂಬಲಿಗರು. ಆದರೆ, ಅದನ್ನು ತುಂಬಾಕೆಟ್ಟದಾಗಿ ಅಳವಡಿಸಲಾಯಿತು. ದೊಡ್ಡ ಕಂಪೆನಿಗಳು ಜಿಎಸ್‌ಟಿ ರಸೀದಿ ನೀಡಬಲ್ಲಪೂರೈಕೆದಾರರಿಂದ ಖರೀದಿ ಮಾಡಲು ಆದ್ಯತೆನೀಡಿದ್ದರಿಂದ ಸಣ್ಣ, ಅತಿ ಸಣ್ಣಮತ್ತು ಮಧ್ಯಮ ಉದ್ಯಮಗಳು ಸಂಕಷ್ಟಕ್ಕೆಸಿಲುಕಿದವು.

ಸಣ್ಣ ಮತ್ತು ಮಧ್ಯಮ ಉದ್ಯಮ ತತ್ತರ : ಜಿಎಸ್‌ಟಿ ಅಡಿಯಲ್ಲಿತೀರಾ ಕಡಿಮೆ ಪ್ರಮಾಣದಲ್ಲಿ ಅರ್ಹತೆಗಿಟ್ಟಿಸಿಕೊಳ್ಳುವ ಭಾರತದ ಸಣ್ಣ ಕಂಪೆನಿಗಳಿಗೆಹೂಡುವ ಬದಲು ಆಮದಿಗೆ ಆದ್ಯತೆನೀಡಲಾಯಿತು. ಇಡೀ ಪೂರೈಕೆಯ ಸರಪಳಿಯನ್ನೇತುಂಡರಿಸಲಾಯಿತು. ಈಗ ನಮ್ಮ ಮಾರುಕಟ್ಟೆಗಳಲ್ಲಿಚೀನಾದ ಆಮದು ವಸ್ತುಗಳೇ ತುಂಬಿವೆಎನ್ನುವುದು ನಮಗೆ ತಿಳಿದಿದೆ. ಇಷ್ಟಲ್ಲದೆತೆರಿಗೆ ಅಧಿಕಾರಿಗಳು ತೆರಿಗೆದಾರರಿಗೆ ಕಿರುಕುಳ ನೀಡುತ್ತಿರುವ ವರದಿಗಳೂಬಂದಿವೆ. ಜಿಎಸ್‌ಟಿಯ ಸಂಕೀರ್ಣ,ಬಹುಬಗೆಯ ತೆರಿಗೆಗಳು, ನಿರಂತರ ಬದಲಾಗುವ ಮತ್ತುಸೃಷ್ಟಿಯಾಗುವ ನಿಯಮಗಳು ಮುಂತಾದವು ಸಣ್ಣಮತ್ತು ಮಧ್ಯಮ ಗಾತ್ರದ ಉದ್ಯಮಗಳಿಗೆಗಾಸಿಯುಂಟು ಮಾಡಿವೆ.

ಜಿಎಸ್‌ಟಿಯನ್ನು ಸರಳಗೊಳಿಸಿ: ಪ್ರಧಾನಿಮೋದಿ ಮತ್ತು ಅವರ ಸರ್ಕಾರವುತಮ್ಮ ‘ಶೀರ್ಷಿಕೆ ನಿರ್ವಹಣೆ’ಯ ಹವ್ಯಾಸದಿಂದ ಹೊರಬರಬೇಕು.ತನ್ನ ಆದ್ಯತೆಗಳಲ್ಲಿ ಮೊದಲನೆಯದಾಗಿ ಜಿಎಸ್‌ಟಿಯನ್ನು ಸರಳಮತ್ತು ಸುಧಾರಣೆ ಮಾಡಬೇಕಿದೆ. ಇದರಿಂದಆದಾಯ ಅಲ್ಪಾವಧಿಗೆ ನಷ್ಟವಾದರೂ ತೊಂದರೆಯಿಲ್ಲ. ಎರಡನೆಯದಾಗಿ ಗ್ರಾಮೀಣ ಬಳಕೆಯನ್ನು ವೃದ್ಧಿಸಲುಮತ್ತು ಕೃಷಿಯನ್ನು ಪುನರುಜ್ಜೀವನಗೊಳಿಸಲು ಸೂಕ್ತ ಮಾರ್ಗಗಳನ್ನು ಹುಡುಕಬೇಕು.ಮೂರನೆಯದಾಗಿ, ಬಂಡವಾಳ ಸೃಷ್ಟಿಗೆ ಎದುರಾಗಿರುವಸಾಲದ ಕೊರತೆಯನ್ನು ಬಗೆಹರಿಸಬೇಕು. ಇದು ಸಾರ್ವಜನಿಕವಲಯದ ಬ್ಯಾಂಕುಗಳುಮಾತ್ರವಲ್ಲ, ಎನ್‌ಬಿಎಫ್‌ಸಿಗಳನ್ನೂಉಳಿಸಬೇಕಿದೆ.

ರಫ್ತು ಮಾರುಕಟ್ಟೆ ಪ್ರಯೋಜನ ಬಳಸಿಕೊಳ್ಳಿ : ನಾಲ್ಕನೆಯದಾಗಿಜವಳಿ, ಆಟೋ, ಎಲೆಕ್ಟ್ರಾನಿಕ್ಸ್ ಮತ್ತುದುಬಾರಿಯಲ್ಲದ ಮನೆ ನಿರ್ಮಾಣದಂತಹ ಮುಖ್ಯಉದ್ಯೋಗ ಸೃಷ್ಟಿಯ ವಲಯಗಳನ್ನು ಸುಧಾರಣೆಮಾಡಬೇಕು. ಮುಖ್ಯವಾಗಿ ಎಂಎಸ್‌ಎಂಇಗಳಿಗೆ ಆದ್ಯತೆನೀಡಬೇಕು. ಐದನೆಯದಾಗಿ, ಅಮೆರಿಕ ಮತ್ತು ಚೀನಾನಡುವಿನ ವ್ಯಾಪಾರ ಸಮರದಿಂದಾಗಿ ತೆರೆದುಕೊಂಡಿರುವರಫ್ತು ಮಾರುಕಟ್ಟೆಯನ್ನು ಬಳಸಿಕೊಳ್ಳಲು ಸೂಕ್ತ ಮಾರ್ಗೋಪಾಯಗಳನ್ನು ಕಂಡುಕೊಳ್ಳಬೇಕು.ಕೊನೆಯದಾಗಿ, ಬೃಹತ್ ಮಟ್ಟದ ಸಾರ್ವಜನಿಕಮೂಲಸೌಕರ್ಯದ ಅಭಿವೃದ್ಧಿಗೆ ವಿಶ್ವಾಸಾರ್ಹ ಮಾರ್ಗಸೂಚಿಯನ್ನು ರೂಪಿಸಬೇಕು. ಇದರಲ್ಲಿ ಖಾಸಗಿ ಹೂಡಿಕೆಗೂಗಮನ ಹರಿಸಬೇಕು. ಇವುಗಳು ರಚನಾತ್ಮಕವಾಗಿ ಸುಧಾರಣೆಯಾಗಬೇಕು.ಇವೆಲ್ಲವನ್ನೂ ಸರಿಯಾದ ರೀತಿಯಲ್ಲಿ ನಿಭಾಯಿಸಿದರೆಮುಂದಿನ ಮೂರು ನಾಲ್ಕು ವರ್ಷಗಳಲ್ಲಿಯೇನಾವು ಅತ್ಯುತ್ತಮ ಬೆಳವಣಿಗೆಗೆ ಮರಳಬಹುದು ಎಂದು ಸಿಂಗ್ ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಧ್ಯಪ್ರದೇಶದಲ್ಲಿ ಬಿಜೆಪಿ ಪಕ್ಷದವರಿಂದ ಕುದುರೆ ವ್ಯಾಪಾರ: ಸಿಎಂ ಕಮಲ್‍ನಾಥ್ ಹೇಳಿಕೆ….!

    ಲೋಕಸಮರದ ಫಲಿತಾಂಶಕ್ಕೂ ಮುನ್ನ ಮಧ್ಯಪ್ರದೇಶದ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿದೆ. ಈಗಾಗಲೇ ಆಡಳಿತರೂಢ ಸರ್ಕಾರಕ್ಕೆ ಬಹುಮತವಿಲ್ಲ ವಿಶೇಷ ಅಧಿವೇಶನ ಕರೆಯಬೇಕೆಂದು ಬಿಜೆಪಿ ರಾಜ್ಯಪಾಲರಿಗೆ ಪತ್ರ ಬರೆದಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಸಿಎಂ ಕಮಲ್‍ನಾಥ್ ಬಿಜೆಪಿ ರಾಜ್ಯದಲ್ಲಿ ಕುದುರೆ ವ್ಯಾಪಾರಕ್ಕೆ ಮುಂದಾಗಿದೆ ಎಂದು ಆರೋಪಿಸಿದ್ದಾರೆ. ಸುಮಾರು 10 ಕಾಂಗ್ರೆಸ್ ಶಾಸಕರನ್ನು ಆಪರೇಷನ್ ಕಮಲದಡಿಯಲ್ಲಿ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. ನಮ್ಮ ಶಾಸಕರಿಗೆ ಆಫರ್ ಸುರಿಮಳೆಯ ಫೋನ್ ಕರೆಗಳು ಬರುತ್ತಿವೆ. ಬೇಕಾದರೆ ಆ 10 ಶಾಸಕರ ಹೆಸರನ್ನು ಬಹಿರಂಗಗೊಳಿಸಬಲ್ಲೆ ಎಂದು ಕಮಲ್…

  • ಆಧ್ಯಾತ್ಮ

    ಈ 5 ವಸ್ತುಗಳಿಂದ ಭಗವಾನ್ ಶಿವ ಲಿಂಗವನ್ನು ಎಂದಿಗೂ ಪೂಜಿಸಬಾರದು..!

    ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.

  • govt

    ಮೇ 23 ರಂದು ಫಲಿತಾಂಶ, ಮೇ 24 ರಿಂದ ಹೊಸ ಸರ್ಕಾರ…..

    ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.ಪ್ರ ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ…

  • ಜ್ಯೋತಿಷ್ಯ

    ನಿಮ್ಮ ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಲು ಈ ನಿಯಮಗಳನ್ನು ಪಾಲನೆ ಮಾಡಿ..

    ಹಣದ ಯಾರಿಗೆ ತಾನೇ ಬೇಡ ಹೇಳಿ.ಇದರ ಅವಶ್ಯಕತೆ ಪ್ರತಿಯೊಬ್ಬರಿಗೂ ಇದೆ.ಆರ್ಥಿಕವಾಗಿ ಬಲಗೊಳ್ಳಲು ದಿನಪೂರ್ತಿ ದುಡಿಯುವ ಜನರಿದ್ದಾರೆ. ಬರೀ ಕೆಲಸ ಮಾಡಿದ್ರೆ ಸಾಲದು. ದೇವರ ಕೃಪೆ ಕೂಡ ನಮ್ಮ ಮೇಲಿರಬೇಕು. ಹಾಗಾಗಿ ಧನ ಪ್ರಾಪ್ತಿಗಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಪ್ರತಿದಿನ ಅಥವಾ ಪ್ರತಿ ಶುಕ್ರವಾರ ಶ್ರೀಸೂಕ್ತ ಅಥವಾ ಲಕ್ಷ್ಮಿ ಸ್ತೋತ್ರವನ್ನು ಪಠಣ ಮಾಡಿ. ಪ್ರತಿ ವಾರ ಮನೆ ಕ್ಲೀನ್ ಮಾಡುವಾಗ ನೀರಿಗೆ ಉಪ್ಪು ಬೆರೆಸಿ ಮನೆಯನ್ನು ಸ್ವಚ್ಛಗೊಳಿಸಿ. ಇದ್ರಿಂದ ಕೀಟಾಣುಗಳು ನಾಶವಾಗುವ ಜೊತೆಗೆ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಪ್ರತಿ…

  • ಸುದ್ದಿ

    ಹಳಿಗಳಲ್ಲಿ ಇನ್ಮುಂದೆ ಕಂಪನಿ ರೈಲು ಸಂಚಾರ…!

    ನವದೆಹಲಿ: ರೈಲ್ವೆ ಸೇವೆಯನ್ನು ಇನ್ನಷ್ಟು ದಕ್ಷ ಹಾಗೂ ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಹೊಸ ಹೊಸ ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಈಗ ಖಾಸಗಿ ಕಂಪನಿಗಳಿಗೆ ರೈಲು ನಿರ್ವಹಣೆ ಜವಾಬ್ದಾರಿಯನ್ನು ವರ್ಗಾಯಿಸುವ ಬಗ್ಗೆ ಚಿಂತನೆ ನಡೆಸಿದೆ. ಯೋಜನೆಯ ಪ್ರಕಾರ, ಈ ಬಗ್ಗೆ ಮುಂದಿನ 100 ದಿನಗಳಲ್ಲಿ ಟೆಂಡರ್‌ ಆಹ್ವಾನಿಸಲು ನಿರ್ಧರಿಸಲಾಗಿದೆ. ಕಡಿಮೆ ದಟ್ಟಣೆ ಇರುವ ಮತ್ತು ಪ್ರವಾಸಿ ಸ್ಥಳಗಳಿಗೆ ಸಾಗುವ ರೈಲುಗಳನ್ನು ಮಾತ್ರ ಆರಂಭದಲ್ಲಿ ಖಾಸಗಿ ಕಂಪನಿಗಳಿಗೆ ನೀಡಲಾಗುತ್ತದೆ. ಐಆರ್‌ಸಿಟಿಸಿ ಜೊತೆಗೆ ಪ್ರಯೋಗ: ರೈಲುಗಳನ್ನು ಖಾಸಗಿಗೆ ನಿರ್ವಹಣೆಗಾಗಿ ನೀಡುವುದ‌ಕ್ಕೂ ಮುನ್ನ…

  • ಉಪಯುಕ್ತ ಮಾಹಿತಿ

    ಈ ಚಿಕ್ಕ ಕೆಲಸವನ್ನ ಮಾಡಿದರೆ ಸಾಕು ಈ ಜನ್ಮದಲ್ಲಿ ಇಲಿಗಳು ನಿಮ್ಮ ಮನೆಗೆ ಸುಳಿಯುವುದಿಲ್ಲ, ಇಲಿಗಳ ಕಾಟಕ್ಕೆ ಮುಕ್ತಿ ಇಲ್ಲಿದೆ.

    ಯಾರ ಮನೆಯಲ್ಲಿ ಇಲಿಗಳು ಇಲ್ಲ ಹೇಳಿ, ಇನ್ನು ಇಲಿಗಳ ಕಾಟ ಕೇವಲ ಮನೆಯಲ್ಲಿ ಮಾತ್ರವಲ್ಲೇ ಹೊಲ ಗದ್ದೆಗಳಲ್ಲಿ ಕೂಡ ಇರುತ್ತದೆ, ಹೌದು ಹೊಲ ಗದ್ದೆಗಳಲ್ಲಿ ಇಲಿಗಳ ಕಾಟ ಆರಂಭವಾಯಿತು ಅಂದರೆ ರೈತರಿಗೆ ದಿಕ್ಕೇ ತೋಚದಂತೆ ಆಗುತ್ತದೆ. ಇಲಿಗಳು ಇಲ್ಲಿ ಇರುತ್ತದೆಯೋ ಅಲ್ಲಿ ಸರ್ವಶನಾಶ ಆಗುತ್ತದೆ ಎಂದು ಹೇಳಿದರೆ ತಪ್ಪಾಗಲ್ಲ, ಯಾಕೆ ಅಂದರೆ ಇಲಿಗಳು ಕಚ್ಚದ ವಸ್ತುಗಳೇ ಇಲ್ಲ. ಎಷ್ಟೇ ಗಟ್ಟಿ ವಸ್ತುವಾದರೂ ಅದನ್ನ ತೂತು ಮಾಡುವ ಶಕ್ತಿಯನ್ನ ಹೊಂದಿರುತ್ತದೆ ಇಲಿಗಳು, ಮನೆಯ ವಸ್ತುಗಳನ್ನ ಹಾಲು ಮಾಡುತ್ತದೆ ಮತ್ತು…