ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಆರ್ಥಿಕತೆಯು ಸಹಜ ಸ್ಥಿತಿಗೆ ಬರಲು ಸರ್ಕಾರವು ಮೊದಲು ಜಿಎಸ್ಟಿಯನ್ನು ಸರಳ ಹಾಗೂ ಸುಧಾರಣೆ ಮಾಡಬೇಕು. ಗ್ರಾಮೀಣ ಬಳಕೆಯನ್ನು ಹೆಚ್ಚಿಸಬೇಕು ಮತ್ತು ಬಂಡವಾಳ ಸೃಷ್ಟಿಯ ಸಾಲದ ಕೊರತೆಯ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ. ಭಾರತವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂಬ ಸತ್ಯವನ್ನು ನಿರಾಕರಿಸಲು ಸಾಧ್ಯವಿಲ್ಲ. ಈಗಾಗಲೇ ಸಾಕಷ್ಟು ಸಮಯ ಕಳೆದುಹೋಗಿದೆ. ವಲಯವಾರು ಚೂರು ಚೂರು ಗಮನ ನೀಡುವಂತಹ ರಾಜಕೀಯ ಬಂಡವಾಳವನ್ನು ವ್ಯರ್ಥ ಮಾಡುವ ಬದಲು ಅಥವಾ ಅಪನಗದೀಕರಣದಂತಹ ಶಾಶ್ವತ ಬ್ಲಂಡರ್ಗಳನ್ನು ಎಸಗುವ ಬದಲು ಈಗ ರಚನಾತ್ಮಕ ಸುಧಾರಣೆಯ ಮುಂದಿನ ಪೀಳಿಗೆಯನ್ನು ನಡೆಸಬೇಕಾದ ಹೊಣೆ ಸರ್ಕಾರದ ಮೇಲಿದೆ ಎಂದು ಮನಮೋಹನ್ ಸಿಂಗ್ ಹೇಳಿದ್ದಾರೆ.

ನಾನು ಹಣಕಾಸು ಸಚಿವನಾಗಿದ್ದಾಗ ಮತ್ತು ಪ್ರಧಾನಿಯಾಗಿದ್ದಾಗ ನಮಗೆ ಸಂಪೂರ್ಣ ಬಹುಮತ ಸಿಕ್ಕಿರಲಿಲ್ಲ. ಈಗ ಮೋದಿ ಸರ್ಕಾರ ಸತತ ಎರಡು ಬಾರಿ ಬೃಹತ್ ಬಹುಮತದೊಂದಿಗೆ ಆಯ್ಕೆಯಾಗಿದೆ. ಹೀಗಿದ್ದರೂ ನಾವು 1991 ಮತ್ತು 2008ರಲ್ಲಿ ಜಾಗತಿಕ ಹಣಕಾಸು ಬಿಕ್ಕಟ್ಟನ್ನು ಸಮರ್ಥವಾಗಿ ಎದುರಿಸಿದ್ದೆವು’ ಎಂದು ಅವರು ತಿಳಿಸಿದ್ದಾರೆ. ‘ದಿ ಬಿಜಿನೆಸ್ ಲೈನ್’ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಮನಮೋಹನ್ ಸಿಂಗ್ ಅವರು ಮೋದಿ ಸರ್ಕಾರದ ಆರ್ಥಿಕ ನೀತಿಗಳನ್ನು ಟೀಕಿಸಿದ್ದಾರೆ.

ಕಳವಳಕಾರಿಆರ್ಥಿಕ ಕುಸಿತ : ಭಾರತವು ಅತ್ಯಂತಕಳವಳಕಾರಿಯಾಗಿ ಆರ್ಥಿಕ ಕುಸಿತ ಅನುಭವಿಸುತ್ತಿದೆ.ಈ ಕುಸಿತ ಆರ್ಥಿಕತೆಯಪ್ರಮುಖ ವಲಯಗಳಿಗೆ ಭಾರಿ ಹೊಡೆತ ನೀಡಿದೆ.ಈ ಸಮಸ್ಯೆಗಳಿಗೆ ಸರ್ಕಾರವುಪಾರದರ್ಶಕ ರೀತಿಯಲ್ಲಿ ಪರಿಹಾರ ಹುಡುಕಲು ಮುಂದಾಗಬೇಕು.ಪರಿಣತರ ಸಲಹೆ ಪಡೆದುಕೊಳ್ಳಬೇಕು. ಮುಖ್ಯವಾಗಿಸರ್ಕಾರವು ಜನರಲ್ಲಿ ಆತ್ಮವಿಶ್ವಾಸ ಮೂಡಿಸಬೇಕು.ಜತೆಗೆ ಜಗತ್ತಿಗೆ ಸ್ಪಷ್ಟ ಸಂದೇಶ ರವಾನಿಸಬೇಕು.ದುರದೃಷ್ಟವಶಾತ್ ಮೋದಿ ಸರ್ಕಾರದಿಂದ ಅಂತಹಯಾವುದೇ ಪ್ರಯತ್ನ ಇದುವರೆಗೂ ನಡೆದಿರುವುದುಕಂಡಿಲ್ಲ ಎಂದು ಸಿಂಗ್ ಟೀಕಿಸಿದರು.

ಕೃಷಿಗೆ ಹೊಡೆತ ನೀಡಿದ ನೋಟ್ ರದ್ದತಿ : ಆರ್ಥಿಕತೆಯ ಪ್ರಮುಖ ಭಾಗಗಳು ಆರ್ಥಿಕಸಮಸ್ಯೆಗೆ ಸಿಲುಕಿವೆ. ಉದಾಹರಣೆಗೆ ಕೃಷಿ ವಲಯವು ಜಿಡಿಪಿಯ ಶೇ 15ರಷ್ಟು ಕೊಡುಗೆ ನೀಡುತ್ತದೆ. ಅದುಮುಖ್ಯವಾಗಿ ನಡೆಯುವುದು ನಗದು ರೂಪದಲ್ಲಿ. ಮುಖ್ಯವಾಗಿ ಅದು ತೆರಿಗೆ ರಹಿತವಾದದ್ದು. ಆದರೆ ಅಪಗನಗದೀಕರಣದಸಮಯದಲ್ಲಿ ನಗದು ಹಣವನ್ನು ಹಠಾತ್ತಾಗಿ ಹಿಂದಕ್ಕೆ ಪಡೆದುಕೊಂಡ ಪರಿಣಾಮ ಕೃಷಿ ಆರ್ಥಿಕತೆಗೆ ಹೊಡೆತಬಿದ್ದಿತು ಎಂದು ಸಿಂಗ್ ಅರೋಪಿಸಿದ್ದಾರೆ.
ಅಪನಗದೀಕರಣದ ಆತಂಕ ನಿಜವಾಗಿದೆ : ಅಪನಗದೀಕರಣದನಂತರದ ವರ್ಷದಲ್ಲಿ ಜಿಡಿಪಿಯಲ್ಲಿ ಕಾರ್ಪೊರೇಟ್ ಹೂಡಿಕೆಯ ಪ್ರಮಾಣ ಶೇ7.5ರಿಂದ ಶೇ 2.7ಕ್ಕೆ ಕುಸಿದಿದೆ.ಇದು 2010-11ರಲ್ಲಿ ಜಿಡಿಪಿಯ ಶೇ15ರಷ್ಟಿತ್ತು. ಇದರ ಅರ್ಥ, ಕೃಷಿಯಂತಹಅಸಂಘಟಿತ ವಲಯ ಮಾತ್ರವಲ್ಲ, ಸಂಘಟಿತವಲಯ ಕೂಡ ಅಪನಗದೀಕರಣದಿಂದ ಸಂಕಷ್ಟಕ್ಕೆಸಿಲುಕಿದೆ. ಸಣ್ಣ ಮತ್ತು ಮಧ್ಯಮಉದ್ದಿಮೆಗಳು ಅತ್ಯಂತ ಕೆಟ್ಟ ಹೊಡೆತತಿಂದಿವೆ. ಅಪನಗದೀಕರಣದ ನಿರ್ಧಾರದಿಂದ ಉಂಟಾಗುವ ಪರಿಣಾಮವು ದೀರ್ಘಾವಧಿಮತ್ತು ತೀವ್ರವಾಗಿರಲಿದೆ ಎಂಬ ನಮ್ಮ ಕಳವಳಸತ್ಯವಾಗಿದೆ.
ಜಿಎಸ್ಟಿಯ ಕಳಪೆ ಅನುಷ್ಠಾನ : ಅಪನಗದೀಕರಣದ ಆಘಾತದ ಬಳಿಕವೂ ಸರ್ಕಾರತರಾತುರಿಯಲ್ಲಿ ಜಿಎಸ್ಟಿ ಜಾರಿಮಾಡಿತ್ತು ಆರ್ಥಿಕತೆಗೆ ನೀಡಿದ ಮತ್ತೊಂದು ದೊಡ್ಡಪೆಟ್ಟು. ಜಿಎಸ್ಟಿ ಒಂದುರಚನಾತ್ಮಕ ಸುಧಾರಣೆ. ಯುಪಿಎ ಸರ್ಕಾರದ ಅವಧಿಯಲ್ಲಿಯೇಅದನ್ನು ಜಾರಿಗೆ ತರಲು ಪ್ರಯತ್ನಿಸಿದ್ದೆವು.ನಾವು ಸುಧಾರಣೆಯ ಬೆಂಬಲಿಗರು. ಆದರೆ, ಅದನ್ನು ತುಂಬಾಕೆಟ್ಟದಾಗಿ ಅಳವಡಿಸಲಾಯಿತು. ದೊಡ್ಡ ಕಂಪೆನಿಗಳು ಜಿಎಸ್ಟಿ ರಸೀದಿ ನೀಡಬಲ್ಲಪೂರೈಕೆದಾರರಿಂದ ಖರೀದಿ ಮಾಡಲು ಆದ್ಯತೆನೀಡಿದ್ದರಿಂದ ಸಣ್ಣ, ಅತಿ ಸಣ್ಣಮತ್ತು ಮಧ್ಯಮ ಉದ್ಯಮಗಳು ಸಂಕಷ್ಟಕ್ಕೆಸಿಲುಕಿದವು.

ಸಣ್ಣ ಮತ್ತು ಮಧ್ಯಮ ಉದ್ಯಮ ತತ್ತರ : ಜಿಎಸ್ಟಿ ಅಡಿಯಲ್ಲಿತೀರಾ ಕಡಿಮೆ ಪ್ರಮಾಣದಲ್ಲಿ ಅರ್ಹತೆಗಿಟ್ಟಿಸಿಕೊಳ್ಳುವ ಭಾರತದ ಸಣ್ಣ ಕಂಪೆನಿಗಳಿಗೆಹೂಡುವ ಬದಲು ಆಮದಿಗೆ ಆದ್ಯತೆನೀಡಲಾಯಿತು. ಇಡೀ ಪೂರೈಕೆಯ ಸರಪಳಿಯನ್ನೇತುಂಡರಿಸಲಾಯಿತು. ಈಗ ನಮ್ಮ ಮಾರುಕಟ್ಟೆಗಳಲ್ಲಿಚೀನಾದ ಆಮದು ವಸ್ತುಗಳೇ ತುಂಬಿವೆಎನ್ನುವುದು ನಮಗೆ ತಿಳಿದಿದೆ. ಇಷ್ಟಲ್ಲದೆತೆರಿಗೆ ಅಧಿಕಾರಿಗಳು ತೆರಿಗೆದಾರರಿಗೆ ಕಿರುಕುಳ ನೀಡುತ್ತಿರುವ ವರದಿಗಳೂಬಂದಿವೆ. ಜಿಎಸ್ಟಿಯ ಸಂಕೀರ್ಣ,ಬಹುಬಗೆಯ ತೆರಿಗೆಗಳು, ನಿರಂತರ ಬದಲಾಗುವ ಮತ್ತುಸೃಷ್ಟಿಯಾಗುವ ನಿಯಮಗಳು ಮುಂತಾದವು ಸಣ್ಣಮತ್ತು ಮಧ್ಯಮ ಗಾತ್ರದ ಉದ್ಯಮಗಳಿಗೆಗಾಸಿಯುಂಟು ಮಾಡಿವೆ.
ಜಿಎಸ್ಟಿಯನ್ನು ಸರಳಗೊಳಿಸಿ: ಪ್ರಧಾನಿಮೋದಿ ಮತ್ತು ಅವರ ಸರ್ಕಾರವುತಮ್ಮ ‘ಶೀರ್ಷಿಕೆ ನಿರ್ವಹಣೆ’ಯ ಹವ್ಯಾಸದಿಂದ ಹೊರಬರಬೇಕು.ತನ್ನ ಆದ್ಯತೆಗಳಲ್ಲಿ ಮೊದಲನೆಯದಾಗಿ ಜಿಎಸ್ಟಿಯನ್ನು ಸರಳಮತ್ತು ಸುಧಾರಣೆ ಮಾಡಬೇಕಿದೆ. ಇದರಿಂದಆದಾಯ ಅಲ್ಪಾವಧಿಗೆ ನಷ್ಟವಾದರೂ ತೊಂದರೆಯಿಲ್ಲ. ಎರಡನೆಯದಾಗಿ ಗ್ರಾಮೀಣ ಬಳಕೆಯನ್ನು ವೃದ್ಧಿಸಲುಮತ್ತು ಕೃಷಿಯನ್ನು ಪುನರುಜ್ಜೀವನಗೊಳಿಸಲು ಸೂಕ್ತ ಮಾರ್ಗಗಳನ್ನು ಹುಡುಕಬೇಕು.ಮೂರನೆಯದಾಗಿ, ಬಂಡವಾಳ ಸೃಷ್ಟಿಗೆ ಎದುರಾಗಿರುವಸಾಲದ ಕೊರತೆಯನ್ನು ಬಗೆಹರಿಸಬೇಕು. ಇದು ಸಾರ್ವಜನಿಕವಲಯದ ಬ್ಯಾಂಕುಗಳುಮಾತ್ರವಲ್ಲ, ಎನ್ಬಿಎಫ್ಸಿಗಳನ್ನೂಉಳಿಸಬೇಕಿದೆ.
ರಫ್ತು ಮಾರುಕಟ್ಟೆ ಪ್ರಯೋಜನ ಬಳಸಿಕೊಳ್ಳಿ : ನಾಲ್ಕನೆಯದಾಗಿಜವಳಿ, ಆಟೋ, ಎಲೆಕ್ಟ್ರಾನಿಕ್ಸ್ ಮತ್ತುದುಬಾರಿಯಲ್ಲದ ಮನೆ ನಿರ್ಮಾಣದಂತಹ ಮುಖ್ಯಉದ್ಯೋಗ ಸೃಷ್ಟಿಯ ವಲಯಗಳನ್ನು ಸುಧಾರಣೆಮಾಡಬೇಕು. ಮುಖ್ಯವಾಗಿ ಎಂಎಸ್ಎಂಇಗಳಿಗೆ ಆದ್ಯತೆನೀಡಬೇಕು. ಐದನೆಯದಾಗಿ, ಅಮೆರಿಕ ಮತ್ತು ಚೀನಾನಡುವಿನ ವ್ಯಾಪಾರ ಸಮರದಿಂದಾಗಿ ತೆರೆದುಕೊಂಡಿರುವರಫ್ತು ಮಾರುಕಟ್ಟೆಯನ್ನು ಬಳಸಿಕೊಳ್ಳಲು ಸೂಕ್ತ ಮಾರ್ಗೋಪಾಯಗಳನ್ನು ಕಂಡುಕೊಳ್ಳಬೇಕು.ಕೊನೆಯದಾಗಿ, ಬೃಹತ್ ಮಟ್ಟದ ಸಾರ್ವಜನಿಕಮೂಲಸೌಕರ್ಯದ ಅಭಿವೃದ್ಧಿಗೆ ವಿಶ್ವಾಸಾರ್ಹ ಮಾರ್ಗಸೂಚಿಯನ್ನು ರೂಪಿಸಬೇಕು. ಇದರಲ್ಲಿ ಖಾಸಗಿ ಹೂಡಿಕೆಗೂಗಮನ ಹರಿಸಬೇಕು. ಇವುಗಳು ರಚನಾತ್ಮಕವಾಗಿ ಸುಧಾರಣೆಯಾಗಬೇಕು.ಇವೆಲ್ಲವನ್ನೂ ಸರಿಯಾದ ರೀತಿಯಲ್ಲಿ ನಿಭಾಯಿಸಿದರೆಮುಂದಿನ ಮೂರು ನಾಲ್ಕು ವರ್ಷಗಳಲ್ಲಿಯೇನಾವು ಅತ್ಯುತ್ತಮ ಬೆಳವಣಿಗೆಗೆ ಮರಳಬಹುದು ಎಂದು ಸಿಂಗ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ವರುಣ ದೇವ ವಿಜೃಂಭಿಸಿದ ಕಾರಣ ಆಗ್ರಾದಲ್ಲಿರುವ ಐತಿಹಾಸಿಕ ಕಟ್ಟಡ ತಾಜ್ಮಹಲ್ಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ಕಟ್ಟಡದ ಮುಖ್ಯಗೇಟ್ ಮತ್ತು ಎತ್ತರದ ಗುಮ್ಮಟದ ಕೆಳ ಭಾಗದ ಅಮೃತ ಶಿಲೆಯ ರೇಲಿಂಗ್ಗೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಮಾಧಿಯ ಮೇಲ್ಭಾಗಕ್ಕೆ ಹಾನಿಯಾಗಿದ್ದು, ತಾಜ್ಮಹಲ್ ಆವರಣದಲ್ಲಿದ್ದ ಕೆಲ ಮರಗಳು ಬುಡದ ಸಮೇತ ಕಿತ್ತು ಬಂದಿರುವುದಾಗಿ ಎಎಸ್ಐ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ಬಸಂತ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ…
ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿ ಹಾಗೂ ಪರಿಸರದ ಮೇಲೆ ಇರುವ ಪ್ರೀತಿಯಿಂದ ಅರಣ್ಯ ಇಲಾಖೆ ನೆರವಿಗೆ ಮುಂದಾಗಿರುವುದು ಎಲ್ಲರಿಗೂ ತಿಳಿದಿದೆ. ಸದ್ಯ ದರ್ಶನ್ ಅವರ ಈ ಕಾರ್ಯಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರು ಕೂಡ ಕೈ ಜೋಡಿಸಿದ್ದಾರೆ. ಹೌದು, ದರ್ಶನ್ ಅವರು ತಮ್ಮ ಸಫಾರಿಯ ವೇಳೆ ಸೆರೆ ಹಿಡಿದಿದ್ದ ಫೋಟೋವನ್ನು ನಟ ಚಿಕ್ಕಣ್ಣ 1 ಲಕ್ಷ ರೂ. ನೀಡಿ ಖರೀದಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ದರ್ಶನ್, ‘ನಮ್ಮ…
ಹಿಂದೂ ಸಂಪ್ರದಾಯದಲ್ಲಿ ಹಲವಾರು ಆಚರಣೆಗಳಿವೆ. ಹಲವು ಸಂಪ್ರದಾಯಗಳು ಇವೆ. ಇವುಗಳೆಲ್ಲವೂ ಹಲವಾರು ಕಾಲದಿಂದಲೂ ಬೆಳೆದುಕೊಂಡು ಬಂದಿವೆ. ಹಿಂದೂ ಧರ್ಮದವರು ಮಾಡುವ ಪ್ರತಿಯೊಂದು ಆಚರಣೆಗಳಿಗೂ ಸಹ ಅದರದ್ದೇ ಆದ ಒಂದು ಹಿನ್ನೆಲೆ ಇದೆ, ಹಾಗೆಯೆ ಇವುಗಳಲ್ಲಿ ಒಂದಾದ ಗಂಡಸರು ಕಟ್ಟುವ ಉಡುದಾರವು ಸಹ ಒಂದಾಗಿದೆ. ಈ ಉಡುದಾರಕಟ್ಟುವುದರ ಹಿಂದೆ ಹಲವು ಕಾರಣಗಳಿವೆ ಬನ್ನಿ ಆ ಕಾರಣಗಳೇನು ಎಂದು ತಿಳಿಯೋಣ… ಉಡದಾರ ಧರಿಸುವುದು ಹಿಂದೂ ಸಂಪ್ರದಾಯದಲ್ಲಿ ಒಂದು ಭಾಗ. ಯಾಕೆಂದರೆ ಹಿಂದೂಗಳಲ್ಲಿ ಪ್ರತಿ ಪುರುಷರನೂ ಇದನ್ನು ಧರಿಸಬೇಕು. ಚಿಕ್ಕಮಕ್ಕಳಿಗೆ ಉಡದಾರ…
ಶುಕ್ರವಾರ, 06/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ಇವರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ : 06:16 ಸೂರ್ಯಾಸ್ತ : 18:28 ಪಕ್ಷ : ಕೃಷ್ಣ ಪಕ್ಷ ತಿಥಿ : ಷಷ್ಠೀ ನಕ್ಷತ್ರ : ಜ್ಯೆಷ್ಟ್ಯ ಯೋಗ : ವರಿಯಾನ್ ಪ್ರಥಮ ಕರಣ :…
ಸರ್ಕಾರಿ ಶಾಲೆ ಯೊಂದರಲ್ಲಿ ಮಕ್ಕಳ ಬಿಸಿ ಊಟದಲ್ಲಿ ಹಾವು ಬಿದ್ದಿರುವ ಘಟನೆ ನಡೆದಿದೆ. ಈ ಶಾಲೆಗೆ ಊಟ ಸರಬರಾಜು ಮಾಡುತ್ತಿದ್ದದ್ದು ಒಂದು ಸರ್ಕಾರೇತರ ಖಾಸಗಿ ಸಂಸ್ಥೆ ಯಾಗಿದ್ದು , ಇದು ಶಾಲೆಗೆ ಕಳುಹಿಸಿಕೊಟ್ಟ ಆಹಾರದಲ್ಲಿ ಹಾವು ಇರುವುದು ಪತ್ತೆಯಾಗಿದೆ. ಮಾಧ್ಯಮಗಳಲ್ಲಿ ಈ ಸುದ್ಧಿ ವರದಿಯಾಗಿದ್ದು ಈ ಕುರಿತು ವಿಚಾರಣೆ ನಡೆಸಿ ಆ ಸಂಸ್ಥೆಯ ಮೇಲೆ ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ. ಇನ್ನು ಈ ಘಟನೆ ನಡೆದಿರುವುದು ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ.ಇಲ್ಲಿನ ಗಾರ್ಗವನ್…
ಸಾಮಾನ್ಯವಾಗಿ ಪಪ್ಪಾಯಿ ಹಣ್ಣು ತಿಂದು ಅದರ ಬೀಜಗಳನ್ನು ಎಸೆಯುತ್ತಾರೆ. ಆದರೆ ಸಂಶೋಧನೆಯೊಂದು ಕೇವಲ ಪಪ್ಪಾಯಿ ಹಣ್ಣು ಮಾತ್ರವಲ್ಲ ಅದರ ಬೀಜಗಳು ಕೂಡ ಆರೋಗ್ಯಕರ ಅಂಶವನ್ನು ಹೊಂದಿದೆ. ಅದನ್ನು ಸೇವಿಸಿದರೆ ಆರೋಗ್ಯಕ್ಕೆ ಒಳ್ಳೆದು ಎನ್ನುವುದನ್ನು ತಿಳಿಸಿದೆ. ಪಪ್ಪಾಯಿ ಬೀಜಗಳ ಉಪಯೋಗವೇನು? 1. ಕ್ಯಾನ್ಸರ್ಪಪ್ಪಾಯಿ ಬೀಜಗಳು ಆ್ಯಂಟಿ ಕ್ಯಾನ್ಸರ್ ಅಂಶಗಳನ್ನು ತನ್ನಲ್ಲಿ ಅಡಗಿಸಿಟ್ಟುಕೊಂಡಿದೆ. ಹೀಗಾಗಿ ಪಪ್ಪಾಯಿ ಬೀಜಗಳು ಕ್ಯಾನ್ಸರ್ ಕೋಶಗಳು ಮತ್ತು ಗೆಡ್ಡೆಗಳ ಬೆಳವಣಿಗೆಯನ್ನು ತಡೆಯುವ ಅಂಶವನ್ನು ಹೊಂದಿದೆ. 2. ಹೊಟ್ಟೆನೋವು ಕಡಿಮೆ ಮಾಡುತ್ತದೆಹೊಟ್ಟೆನೋವಿನಿಂದ ಬಳಲುತ್ತಿರುವವರು ದಿನಕ್ಕೆ 3 ಬಾರಿ…