News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಆರ್ಥಿಕ ಕುಸಿತ ಎದುರಿಸುವುದು ಹೇಗೆ ಎಂದು ಮೋದಿಗೆ ಆರು ಸಲಹೆ ನೀಡಿದ ಮನಮೋಹನ್ ಸಿಂಗ್,.!

47

ನವದೆಹಲಿ, ಆರ್ಥಿಕತೆಯು ಸಹಜ ಸ್ಥಿತಿಗೆ ಬರಲು ಸರ್ಕಾರವು ಮೊದಲು ಜಿಎಸ್‌ಟಿಯನ್ನು ಸರಳ ಹಾಗೂ ಸುಧಾರಣೆ ಮಾಡಬೇಕು. ಗ್ರಾಮೀಣ ಬಳಕೆಯನ್ನು ಹೆಚ್ಚಿಸಬೇಕು ಮತ್ತು ಬಂಡವಾಳ ಸೃಷ್ಟಿಯ ಸಾಲದ ಕೊರತೆಯ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ. ಭಾರತವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂಬ ಸತ್ಯವನ್ನು ನಿರಾಕರಿಸಲು ಸಾಧ್ಯವಿಲ್ಲ. ಈಗಾಗಲೇ ಸಾಕಷ್ಟು ಸಮಯ ಕಳೆದುಹೋಗಿದೆ. ವಲಯವಾರು ಚೂರು ಚೂರು ಗಮನ ನೀಡುವಂತಹ ರಾಜಕೀಯ ಬಂಡವಾಳವನ್ನು ವ್ಯರ್ಥ ಮಾಡುವ ಬದಲು ಅಥವಾ ಅಪನಗದೀಕರಣದಂತಹ ಶಾಶ್ವತ ಬ್ಲಂಡರ್‌ಗಳನ್ನು ಎಸಗುವ ಬದಲು ಈಗ ರಚನಾತ್ಮಕ ಸುಧಾರಣೆಯ ಮುಂದಿನ ಪೀಳಿಗೆಯನ್ನು ನಡೆಸಬೇಕಾದ ಹೊಣೆ ಸರ್ಕಾರದ ಮೇಲಿದೆ ಎಂದು ಮನಮೋಹನ್ ಸಿಂಗ್ ಹೇಳಿದ್ದಾರೆ.

ನಾನು ಹಣಕಾಸು ಸಚಿವನಾಗಿದ್ದಾಗ ಮತ್ತು ಪ್ರಧಾನಿಯಾಗಿದ್ದಾಗ ನಮಗೆ ಸಂಪೂರ್ಣ ಬಹುಮತ ಸಿಕ್ಕಿರಲಿಲ್ಲ. ಈಗ ಮೋದಿ ಸರ್ಕಾರ ಸತತ ಎರಡು ಬಾರಿ ಬೃಹತ್ ಬಹುಮತದೊಂದಿಗೆ ಆಯ್ಕೆಯಾಗಿದೆ. ಹೀಗಿದ್ದರೂ ನಾವು 1991 ಮತ್ತು 2008ರಲ್ಲಿ ಜಾಗತಿಕ ಹಣಕಾಸು ಬಿಕ್ಕಟ್ಟನ್ನು ಸಮರ್ಥವಾಗಿ ಎದುರಿಸಿದ್ದೆವು’ ಎಂದು ಅವರು ತಿಳಿಸಿದ್ದಾರೆ. ‘ದಿ ಬಿಜಿನೆಸ್ ಲೈನ್’ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಮನಮೋಹನ್ ಸಿಂಗ್ ಅವರು ಮೋದಿ ಸರ್ಕಾರದ ಆರ್ಥಿಕ ನೀತಿಗಳನ್ನು ಟೀಕಿಸಿದ್ದಾರೆ.

ಕಳವಳಕಾರಿಆರ್ಥಿಕ ಕುಸಿತ : ಭಾರತವು ಅತ್ಯಂತಕಳವಳಕಾರಿಯಾಗಿ ಆರ್ಥಿಕ ಕುಸಿತ ಅನುಭವಿಸುತ್ತಿದೆ.ಈ ಕುಸಿತ ಆರ್ಥಿಕತೆಯಪ್ರಮುಖ ವಲಯಗಳಿಗೆ ಭಾರಿ ಹೊಡೆತ ನೀಡಿದೆ.ಈ ಸಮಸ್ಯೆಗಳಿಗೆ ಸರ್ಕಾರವುಪಾರದರ್ಶಕ ರೀತಿಯಲ್ಲಿ ಪರಿಹಾರ ಹುಡುಕಲು ಮುಂದಾಗಬೇಕು.ಪರಿಣತರ ಸಲಹೆ ಪಡೆದುಕೊಳ್ಳಬೇಕು. ಮುಖ್ಯವಾಗಿಸರ್ಕಾರವು ಜನರಲ್ಲಿ ಆತ್ಮವಿಶ್ವಾಸ ಮೂಡಿಸಬೇಕು.ಜತೆಗೆ ಜಗತ್ತಿಗೆ ಸ್ಪಷ್ಟ ಸಂದೇಶ ರವಾನಿಸಬೇಕು.ದುರದೃಷ್ಟವಶಾತ್ ಮೋದಿ ಸರ್ಕಾರದಿಂದ ಅಂತಹಯಾವುದೇ ಪ್ರಯತ್ನ ಇದುವರೆಗೂ ನಡೆದಿರುವುದುಕಂಡಿಲ್ಲ ಎಂದು ಸಿಂಗ್ ಟೀಕಿಸಿದರು.

ಕೃಷಿಗೆ ಹೊಡೆತ ನೀಡಿದ ನೋಟ್ ರದ್ದತಿ : ಆರ್ಥಿಕತೆಯ ಪ್ರಮುಖ ಭಾಗಗಳು ಆರ್ಥಿಕಸಮಸ್ಯೆಗೆ ಸಿಲುಕಿವೆ. ಉದಾಹರಣೆಗೆ ಕೃಷಿ ವಲಯವು ಜಿಡಿಪಿಯ ಶೇ 15ರಷ್ಟು ಕೊಡುಗೆ ನೀಡುತ್ತದೆ. ಅದುಮುಖ್ಯವಾಗಿ ನಡೆಯುವುದು ನಗದು ರೂಪದಲ್ಲಿ. ಮುಖ್ಯವಾಗಿ ಅದು ತೆರಿಗೆ ರಹಿತವಾದದ್ದು. ಆದರೆ ಅಪಗನಗದೀಕರಣದಸಮಯದಲ್ಲಿ ನಗದು ಹಣವನ್ನು ಹಠಾತ್ತಾಗಿ ಹಿಂದಕ್ಕೆ ಪಡೆದುಕೊಂಡ ಪರಿಣಾಮ ಕೃಷಿ ಆರ್ಥಿಕತೆಗೆ ಹೊಡೆತಬಿದ್ದಿತು ಎಂದು ಸಿಂಗ್ ಅರೋಪಿಸಿದ್ದಾರೆ.

ಅಪನಗದೀಕರಣದ ಆತಂಕ ನಿಜವಾಗಿದೆ : ಅಪನಗದೀಕರಣದನಂತರದ ವರ್ಷದಲ್ಲಿ ಜಿಡಿಪಿಯಲ್ಲಿ ಕಾರ್ಪೊರೇಟ್ ಹೂಡಿಕೆಯ ಪ್ರಮಾಣ ಶೇ7.5ರಿಂದ ಶೇ 2.7ಕ್ಕೆ ಕುಸಿದಿದೆ.ಇದು 2010-11ರಲ್ಲಿ ಜಿಡಿಪಿಯ ಶೇ15ರಷ್ಟಿತ್ತು. ಇದರ ಅರ್ಥ, ಕೃಷಿಯಂತಹಅಸಂಘಟಿತ ವಲಯ ಮಾತ್ರವಲ್ಲ, ಸಂಘಟಿತವಲಯ ಕೂಡ ಅಪನಗದೀಕರಣದಿಂದ ಸಂಕಷ್ಟಕ್ಕೆಸಿಲುಕಿದೆ. ಸಣ್ಣ ಮತ್ತು ಮಧ್ಯಮಉದ್ದಿಮೆಗಳು ಅತ್ಯಂತ ಕೆಟ್ಟ ಹೊಡೆತತಿಂದಿವೆ. ಅಪನಗದೀಕರಣದ ನಿರ್ಧಾರದಿಂದ ಉಂಟಾಗುವ ಪರಿಣಾಮವು ದೀರ್ಘಾವಧಿಮತ್ತು ತೀವ್ರವಾಗಿರಲಿದೆ ಎಂಬ ನಮ್ಮ ಕಳವಳಸತ್ಯವಾಗಿದೆ.

ಜಿಎಸ್‌ಟಿಯ ಕಳಪೆ ಅನುಷ್ಠಾನ : ಅಪನಗದೀಕರಣದ ಆಘಾತದ ಬಳಿಕವೂ ಸರ್ಕಾರತರಾತುರಿಯಲ್ಲಿ ಜಿಎಸ್‌ಟಿ ಜಾರಿಮಾಡಿತ್ತು ಆರ್ಥಿಕತೆಗೆ ನೀಡಿದ ಮತ್ತೊಂದು ದೊಡ್ಡಪೆಟ್ಟು. ಜಿಎಸ್‌ಟಿ ಒಂದುರಚನಾತ್ಮಕ ಸುಧಾರಣೆ. ಯುಪಿಎ ಸರ್ಕಾರದ ಅವಧಿಯಲ್ಲಿಯೇಅದನ್ನು ಜಾರಿಗೆ ತರಲು ಪ್ರಯತ್ನಿಸಿದ್ದೆವು.ನಾವು ಸುಧಾರಣೆಯ ಬೆಂಬಲಿಗರು. ಆದರೆ, ಅದನ್ನು ತುಂಬಾಕೆಟ್ಟದಾಗಿ ಅಳವಡಿಸಲಾಯಿತು. ದೊಡ್ಡ ಕಂಪೆನಿಗಳು ಜಿಎಸ್‌ಟಿ ರಸೀದಿ ನೀಡಬಲ್ಲಪೂರೈಕೆದಾರರಿಂದ ಖರೀದಿ ಮಾಡಲು ಆದ್ಯತೆನೀಡಿದ್ದರಿಂದ ಸಣ್ಣ, ಅತಿ ಸಣ್ಣಮತ್ತು ಮಧ್ಯಮ ಉದ್ಯಮಗಳು ಸಂಕಷ್ಟಕ್ಕೆಸಿಲುಕಿದವು.

ಸಣ್ಣ ಮತ್ತು ಮಧ್ಯಮ ಉದ್ಯಮ ತತ್ತರ : ಜಿಎಸ್‌ಟಿ ಅಡಿಯಲ್ಲಿತೀರಾ ಕಡಿಮೆ ಪ್ರಮಾಣದಲ್ಲಿ ಅರ್ಹತೆಗಿಟ್ಟಿಸಿಕೊಳ್ಳುವ ಭಾರತದ ಸಣ್ಣ ಕಂಪೆನಿಗಳಿಗೆಹೂಡುವ ಬದಲು ಆಮದಿಗೆ ಆದ್ಯತೆನೀಡಲಾಯಿತು. ಇಡೀ ಪೂರೈಕೆಯ ಸರಪಳಿಯನ್ನೇತುಂಡರಿಸಲಾಯಿತು. ಈಗ ನಮ್ಮ ಮಾರುಕಟ್ಟೆಗಳಲ್ಲಿಚೀನಾದ ಆಮದು ವಸ್ತುಗಳೇ ತುಂಬಿವೆಎನ್ನುವುದು ನಮಗೆ ತಿಳಿದಿದೆ. ಇಷ್ಟಲ್ಲದೆತೆರಿಗೆ ಅಧಿಕಾರಿಗಳು ತೆರಿಗೆದಾರರಿಗೆ ಕಿರುಕುಳ ನೀಡುತ್ತಿರುವ ವರದಿಗಳೂಬಂದಿವೆ. ಜಿಎಸ್‌ಟಿಯ ಸಂಕೀರ್ಣ,ಬಹುಬಗೆಯ ತೆರಿಗೆಗಳು, ನಿರಂತರ ಬದಲಾಗುವ ಮತ್ತುಸೃಷ್ಟಿಯಾಗುವ ನಿಯಮಗಳು ಮುಂತಾದವು ಸಣ್ಣಮತ್ತು ಮಧ್ಯಮ ಗಾತ್ರದ ಉದ್ಯಮಗಳಿಗೆಗಾಸಿಯುಂಟು ಮಾಡಿವೆ.

ಜಿಎಸ್‌ಟಿಯನ್ನು ಸರಳಗೊಳಿಸಿ: ಪ್ರಧಾನಿಮೋದಿ ಮತ್ತು ಅವರ ಸರ್ಕಾರವುತಮ್ಮ ‘ಶೀರ್ಷಿಕೆ ನಿರ್ವಹಣೆ’ಯ ಹವ್ಯಾಸದಿಂದ ಹೊರಬರಬೇಕು.ತನ್ನ ಆದ್ಯತೆಗಳಲ್ಲಿ ಮೊದಲನೆಯದಾಗಿ ಜಿಎಸ್‌ಟಿಯನ್ನು ಸರಳಮತ್ತು ಸುಧಾರಣೆ ಮಾಡಬೇಕಿದೆ. ಇದರಿಂದಆದಾಯ ಅಲ್ಪಾವಧಿಗೆ ನಷ್ಟವಾದರೂ ತೊಂದರೆಯಿಲ್ಲ. ಎರಡನೆಯದಾಗಿ ಗ್ರಾಮೀಣ ಬಳಕೆಯನ್ನು ವೃದ್ಧಿಸಲುಮತ್ತು ಕೃಷಿಯನ್ನು ಪುನರುಜ್ಜೀವನಗೊಳಿಸಲು ಸೂಕ್ತ ಮಾರ್ಗಗಳನ್ನು ಹುಡುಕಬೇಕು.ಮೂರನೆಯದಾಗಿ, ಬಂಡವಾಳ ಸೃಷ್ಟಿಗೆ ಎದುರಾಗಿರುವಸಾಲದ ಕೊರತೆಯನ್ನು ಬಗೆಹರಿಸಬೇಕು. ಇದು ಸಾರ್ವಜನಿಕವಲಯದ ಬ್ಯಾಂಕುಗಳುಮಾತ್ರವಲ್ಲ, ಎನ್‌ಬಿಎಫ್‌ಸಿಗಳನ್ನೂಉಳಿಸಬೇಕಿದೆ.

ರಫ್ತು ಮಾರುಕಟ್ಟೆ ಪ್ರಯೋಜನ ಬಳಸಿಕೊಳ್ಳಿ : ನಾಲ್ಕನೆಯದಾಗಿಜವಳಿ, ಆಟೋ, ಎಲೆಕ್ಟ್ರಾನಿಕ್ಸ್ ಮತ್ತುದುಬಾರಿಯಲ್ಲದ ಮನೆ ನಿರ್ಮಾಣದಂತಹ ಮುಖ್ಯಉದ್ಯೋಗ ಸೃಷ್ಟಿಯ ವಲಯಗಳನ್ನು ಸುಧಾರಣೆಮಾಡಬೇಕು. ಮುಖ್ಯವಾಗಿ ಎಂಎಸ್‌ಎಂಇಗಳಿಗೆ ಆದ್ಯತೆನೀಡಬೇಕು. ಐದನೆಯದಾಗಿ, ಅಮೆರಿಕ ಮತ್ತು ಚೀನಾನಡುವಿನ ವ್ಯಾಪಾರ ಸಮರದಿಂದಾಗಿ ತೆರೆದುಕೊಂಡಿರುವರಫ್ತು ಮಾರುಕಟ್ಟೆಯನ್ನು ಬಳಸಿಕೊಳ್ಳಲು ಸೂಕ್ತ ಮಾರ್ಗೋಪಾಯಗಳನ್ನು ಕಂಡುಕೊಳ್ಳಬೇಕು.ಕೊನೆಯದಾಗಿ, ಬೃಹತ್ ಮಟ್ಟದ ಸಾರ್ವಜನಿಕಮೂಲಸೌಕರ್ಯದ ಅಭಿವೃದ್ಧಿಗೆ ವಿಶ್ವಾಸಾರ್ಹ ಮಾರ್ಗಸೂಚಿಯನ್ನು ರೂಪಿಸಬೇಕು. ಇದರಲ್ಲಿ ಖಾಸಗಿ ಹೂಡಿಕೆಗೂಗಮನ ಹರಿಸಬೇಕು. ಇವುಗಳು ರಚನಾತ್ಮಕವಾಗಿ ಸುಧಾರಣೆಯಾಗಬೇಕು.ಇವೆಲ್ಲವನ್ನೂ ಸರಿಯಾದ ರೀತಿಯಲ್ಲಿ ನಿಭಾಯಿಸಿದರೆಮುಂದಿನ ಮೂರು ನಾಲ್ಕು ವರ್ಷಗಳಲ್ಲಿಯೇನಾವು ಅತ್ಯುತ್ತಮ ಬೆಳವಣಿಗೆಗೆ ಮರಳಬಹುದು ಎಂದು ಸಿಂಗ್ ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನೆ

    ಮನೆಯ ವಾಸ್ತು ಖರ್ಚಿಲ್ಲದೇ ಅಳವಡಿಸಿಕೊಳ್ಳಿ. ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.

  • ಸರ್ಕಾರದ ಯೋಜನೆಗಳು

    ರಾಜಕಾರಣಿಗಳ ಮತ್ತು ಸರಕಾರಿ ಅಧಿಕಾರಿಗಳ ಮಕ್ಕಳು ಸರಕಾರಿ ಶಾಲೆಗೆ..! ತಿಳಿಯಲು ಈ ಲೇಖನ ಓದಿ ..

    ಖಾಸಗಿ ಶಾಲೆಗಳು ಇದೀಗ ಎಲ್ಲೆಂದರೆಲ್ಲಿ ತಲೆಯೆತ್ತುತ್ತಿವೆ. ಗಲ್ಲಿಗೊಂದರಂತೆ ಶಾಲೆಗಳು ನಮಗೆ ಕಾಣಸಿಗುತ್ತವೆ. ಶಿಕ್ಷಣವು ಮೂಲಭೂತ ಹಕ್ಕಾಗಿರದೇ, ಇದೀಗ ವ್ಯಾಪಾರದ ಸರಕಾಗಿ ಮಾರ್ಪಟ್ಟಿದೆ.

  • Uncategorized, ಕರ್ನಾಟಕ

    ಕನ್ನಡ ಒಂದು ಅದ್ಭುತ ಭಾಷೆ ಎಂಬುದಕ್ಕೆ ಇಲ್ಲಿವೆ ನೋಡಿ 07 ಸಾಕ್ಷಿ..!ತಿಳಿಯಲು ಈ ಲೇಖನ ಓದಿ..

    ನವೆಂಬರ್ 1 ಬಂದರೆ ಮತ್ತೊಮ್ಮೆ ಶಿಕ್ಷಕರ ದಿನಾಚರಣೆ ಬಂದಷ್ಟೇ ಖುಷಿಯಾಗುತ್ತದೆ. ಕನ್ನಡ ಹೇಳಿಕೊಟ್ಟ ಮೇಷ್ಟ್ರುಗಳು, ಅವರು ಪಾಠ ಮಾಡುತ್ತಿದ್ದ ರೀತಿ ನೆನಪಾಗುತ್ತದೆ..

  • ಸುದ್ದಿ

    ಶಬರಿಮಲೆಗೆ ಮಹಿಳೆಯರಿಬ್ಬರ ಪ್ರವೇಶ ಮಾಡಿದ್ದರ ಬಗ್ಗೆ ವೀರೇಂದ್ರ ಹೆಗ್ಗಡೆರವರು ಹೇಳಿದ್ದೇನು ಗೊತ್ತಾ?

    ಶಬರಿಮಲೆ ಸನ್ನಿಧಾನಕ್ಕೆ ಮಹಿಳೆಯರು ಪ್ರವೇಶಿಸಿದ್ದು, ಇದರಿಂದ ಒಳ್ಳೆದಾಯ್ತಲ್ಲ, ಹಠ ತೊಟ್ಟವರಿಗೆ ಸಮಾಧಾನ ಆಯ್ತಲ್ಲವೇ ಎಂದು ಪರೋಕ್ಷವಾಗಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅಸಮಾಧಾನವನ್ನು ಹೊರಹಾಕಿದ್ದಾರೆ. ಕ್ಷೇತ್ರದ ಆಚಾರ, ಸಂಪ್ರದಾಯ ಪಾಲಿಸುವುದು ಮುಖ್ಯ. ಬ್ರಹ್ಮಚರ್ಯ, ಸಂಯಮ ಸಾಧಿಸಿ ವ್ರತಾಚರಣೆ ಮಾಡಿ ಕ್ಷೇತ್ರಕ್ಕೆ ತೆರಳುತ್ತಾರೆ. ಈಗೆಲ್ಲ ಬೆಳಗ್ಗೆ ಮಾಲೆ ಹಾಕಿ ಮಧ್ಯಾಹ್ನ ಸನ್ನಿಧಾನಕ್ಕೆ ಹೋಗುವ ಆಚಾರ ಇದೆ. ಹೀಗಾಗಿ ಇಂತಹ ಅಪಚಾರಗಳಾಗುತ್ತಿದೆಎಂದು ಡಾ. ವೀರೇಂದ್ರ ಹೆಗ್ಗಡೆ ಬೇಸರ ವ್ಯಕ್ತಪಡಿಸಿದ್ದಾರೆ. ಮಹಿಳೆಯರಾದ ಬಿಂದು ಮತ್ತು ಕನಕ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ ಬುಧವಾರ…

  • inspirational

    ರೋಗ ನಿರೋಧಕ ಶಕ್ತಿ ಹೆಚ್ಚಳ ಹೇಗೆ? ಚರಕ ಸಂಹಿತೆಯ ಉತ್ತರ..

    ಚರಕ ಸಂಹಿತೆ ಇಂದಿಗೂ ವೈದ್ಯಕೀಯ ಕ್ಷೇತ್ರದ ಅತ್ಯುನ್ನತ ಗ್ರಂಥ ಎಂದು ಎಲ್ಲ ವೈದ್ಯರು ಒಕ್ಕೊರಲಿನಿಂದ ಒಪ್ಪುತ್ತಾರೆ , ಹೊಸ ಆರೋಗ್ಯ ಸಮಸ್ಯೆಗಳು , ಜಟಿಲ ಕಾಯಿಲೆಗಳು ಉತ್ಪತ್ತಿ ಆದಾಗ ವೈಜ್ಞಾನಿಕ ಪ್ರಪಂಚ ಆಸೆ ಭರವಸೆಗಳಿಂದ  ನೋಡುವುದು ಈ 2ನೇ ಶತಮಾನದ ಗ್ರಂಥದೆಡೆಗೆ , ಚರಕ ಸಂಹಿತೆಯಲ್ಲಿ ಅಗ್ನಿವೇಶ ಎಂಬ ವಿದ್ಯಾರ್ಥಿಯು ಗುರುವಾದ ಅತ್ರೇಯರಲ್ಲಿ ನಮ್ಮ ಮನಸ್ಸಿನಲ್ಲಿರುವ ಪ್ರಶ್ನೆಯನ್ನೇ ಕೇಳಿದ್ದಾನೆ -ಹಿತಕರವಾದ ಅಥವಾ ಅಹಿತಕರವಾದ ಆಹಾರ ಸೇವಿಸುವ ಎರಡು ತರಹದ ಜನರಲ್ಲಿ ಕೂಡ ಕೆಲವರು ಆರೋಗ್ಯದಿಂದ ಇರುತ್ತಾರೆ ,ಕೆಲವರು…

  • ಉಪಯುಕ್ತ ಮಾಹಿತಿ

    ಬೆಳ್ಳುಳ್ಳಿ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ

    ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ. 1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ. 2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ. 3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು. 4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು…