ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸ್ತುಶಾಸ್ತ್ರವೆನ್ನುವುದು ಶತಮಾನಕ್ಕಿಂತಲೂ ಹಿಂದಿನಿಂದಲೂ ಇತ್ತು. ಆಗಿನ ಕಾಲದಲ್ಲಿ ಕಟ್ಟಡ, ಮನೆ ಹಾಗೂ ಯಾವುದೇ ರೀತಿಯ ನಿರ್ಮಾಣ ಮಾಡಬೇಕಿದ್ದರೂ ವಾಸ್ತು ಪ್ರಕಾರವೇ ಅದನ್ನು ಮಾಡಿಕೊಂಡು ಬರಲಾಗುತ್ತಿತ್ತು. ಇಂದಿನ ದಿನಗಳಲ್ಲಿ ಪ್ರತಿಯೊಂದು ವಿಚಾರವೂ ವಾಣಿಜ್ಯೀಕರಣವಾಗಿರುವ ಹಿನ್ನೆಲೆಯಲ್ಲಿ ವಾಸ್ತು ಶಾಸ್ತ್ರವು ಹಾಗೆ ಆಗಿದೆ. ವಾಸ್ತುಶಾಸ್ತ್ರವು ಅತಿಯಾಗಿ ಜನಪ್ರಿಯತೆ ಪಡೆದುಕೊಂಡಿದೆ. ಇದರಿಂದ ಇಂದು ಯಾವುದೇ ಮನೆ ಅಥವಾ ವಾಣಿಜ್ಯ ಕಟ್ಟಡವನ್ನು ನಿರ್ಮಾಣ ಮಾಡಬೇಕಿದ್ದರೂ ಅಲಂಕಾರ ಅಥವಾ ಯಾವುದೇ ಪೀಠೋಪಕರಣ ಇಡಬೇಕಿದ್ದರೂ ಅದನ್ನು ವಾಸ್ತುಶಾಸ್ತ್ರದ ಪ್ರಕಾರ ಮಾಡಲಾಗುತ್ತದೆ.
ಮನೆ ಅಥವಾ ಕಟ್ಟಡದಲ್ಲಿ ಸುಖ, ಸಮೃದ್ಧಿ ನೆಲೆಸಬೇಕಿದ್ದರೆ ಕೆಲವೊಂದು ವಾಸ್ತು ಸೂತ್ರಗಳನ್ನು ಪಾಲಿಸಿಕೊಂಡು ಹೋಗಬೇಕು. ಇದರಿಂದ ಸಮಸ್ಯೆಗಳು ಪರಿಹಾರವಾಗುವುದು. ಹಣಕ್ಕಾಗಿ ಇರುವಂತಹ ಕೆಲವೊಂದು ವಾಸ್ತು ಸಸ್ಯಗಳು ಯಾವುದೆಂದರೆ ಮನಿ ಪ್ಲ್ಯಾಂಟ್, ಅದೃಷ್ಟದ ಬಿದಿರು, ಪೀಸ್ ಲಿಲಿ, ಸಿಂಗೊನಿಯಮ್ ಗಳು, ಅಥುರಿಯಮ್ ಗಳು ಮತ್ತು ಜೇಡ್ ಗಳು ಇದರಲ್ಲಿದೆ. ಹಣವನ್ನು ಆಹ್ವಾನಿಸಲು ಅದೃಷ್ಟದ ಬಿದಿರು ಮತ್ತು ಮನಿ ಪ್ಲ್ಯಾಂಟ್ ನ್ನು ಮನೆಯಲ್ಲಿ ಇಡುವುದು ಸಾಮಾನ್ಯ.
ವಾಸ್ತು ಪ್ರಕಾರ ಅದೃಷ್ಟದ ಬಿದಿರು : ಫೆಂಗ್ ಶೂಯಿ ಅದೃಷ್ಟದ ಬಿದಿರನ್ನು ಮನೆಯಲ್ಲಿ ಇಡಬೇಕು ಎಂದು ಸಲಹೆ ನೀಡುತ್ತದೆ. ಇದು ವಿಶ್ವದೆಲ್ಲೆಡೆಯಲ್ಲಿ ಜನಪ್ರಿಯವಾಗಿದೆ. ಇದನ್ನು ನೀವು ಖರೀದಿ ಮಾಡುವುದು ತುಂಬಾ ಒಳ್ಳೆಯದು. ಇದು ಆನ್ ಲೈನ್ ಮತ್ತು ಅಂಗಡಿಯಲ್ಲೂ ಸಿಗುವುದು. ಇದು ನೀರು ಮತ್ತು ಮಣ್ಣಿನಲ್ಲಿ ಎರಡರಲ್ಲೂ ಬೆಳೆಯುವುದು. ಇದು ಚಿಕಣಿ ಬಿದಿರಿಗೆ ಕಂಡುಬಂದರೂ ಅದು ಡ್ರಯಕೆನಾ ಕುಲಕ್ಕೆ ಸೇರಿರುವಂತದ್ದಾಗಿದೆ. ಆಫ್ರಿಕಾ ಮೂಲದಿಂದ ಬಂದಿರುವಂತಹ ಇದರ ಎರಡು ವೈಜ್ಞಾನಿಕವಾದ ಹೆಸರುಗಳೆಂದರೆ ಡ್ರಾಕನೆ ಬ್ರಾಯುನಿ ಅಥವಾ ಡ್ರಾಕನೆ ಸ್ಯಾಂಡೇರಿಯಾನಾ. ಇದು ಮನೆಯ ಒಳಗಡೆ ಸುಮಾರು ಮೂರು ಅಡಿಯಷ್ಟು ಎತ್ತರಕ್ಕೆ ಬೆಳೆಯುವುದು. ಆದರೆ ಇದರ ನಿರ್ವಹಣೆ ಮತ್ತು ಆರೈಕೆಯು ತುಂಬಾ ಸುಲಭ.
ಹಣಕ್ಕಾಗಿ ಅದೃಷ್ಟದ ಬಿದಿರನ್ನು ಇಡಲು ಕೆಲವು ಸಲಹೆಗಳು •ಅದೃಷ್ಟದ ಬಿದಿರಿನಲ್ಲಿ ಎಲ್ಲಾ ಐದು ಅಂಶಗಳಾಗಿರುವಂತಹ ಭೂಮಿ, ನೀರು, ಅಗ್ನಿ, ವಾಯು ಮತ್ತು ಆಕಾಶವು ಪ್ರತಿನಿಧಿಸುವ ಕಾರಣದಿಂದಾಗಿ ಇದು ಮನೆಯ ಒಳಗೆ ಸಮೃದ್ಧಿ ಹಾಗೂ ಅದೃಷ್ಟವನ್ನು ತರುವುದು. •ಮನೆಯಲ್ಲಿ ಲಕ್ಷ್ಮೀಯು ಬರಬೇಕೆಂದಿದ್ದರೆ ಆಗ ನೀವು ಈ ಅದೃಷ್ಟದ ಬಿದಿರನ್ನು ಮನೆಯ ಆಗ್ನೇಯ ಭಾಗದಲ್ಲಿ ಇಡಬೇಕು. •ಉಡುಗೊರೆಯಾಗಿ ಇದನ್ನು ಪಡೆದಾಗ ಅದು ನಿಜವಾಗಿಯೂ ದೊಡ್ಡ ಮಟ್ಟದಲ್ಲಿ ಅದೃಷ್ಟ ತರುವುದು. •ಅದೃಷ್ಟದ ಬಿದಿರನ್ನು ಇಡುವ ವೇಳೆ ಇದರ ಸುತ್ತಲು ನಕಾರಾತ್ಮಕವಾದ ವಸ್ತುಗಳನ್ನು ಇಡಬೇಡಿ. ಅದೇನೆಂದರೆ ತುಂಡಾಗಿರುವ ಅಥವಾ ಕೆಲಸಕ್ಕೆ ಬಾರದ ವಸ್ತುಗಳನ್ನು ಇಡಬೇಡಿ.
ಮನಿಪ್ಲ್ಯಾಂಟ್ ನ್ನು ಮನೆಯಲ್ಲಿ ಇಡಲು ಕೆಲವೊಂದು ಸಲಹೆಗಳು •ಮನೆಯ ಹಾಲ್ ಅಥವಾ ವಾಸಿಸುವ ಕೊಠಡಿಯ ಆಗ್ನೇಯ ಭಾಗದಲ್ಲಿ ಮನಿಪ್ಲ್ಯಾಂಟ್ ನ್ನು ಇಡಲು ಸರಿಯಾದ ಜಾಗವಾಗಿದೆ. ಮನೆಯ ಆಗ್ನೇಯ ದಿಕ್ಕಿನ ಯಜಮಾನ ಗಣೇಶನಾಗಿರುವನು. ಈ ಪ್ರದೇಶದ ಆಡಳಿತಾಧಿಕಾರಿ ಶುಕ್ರ. ಗಣೇಶನು ಬರುವಂತಹ ತೊಂದರೆಗಳನ್ನು ನಿವಾರಣೆ ಮಾಡುವನು ಮತ್ತು ಶುಕ್ರನು ಸಂಪತ್ತನ್ನು ತರುವನು. ಇದರಿಂದ ಮನೆಯ ಆಗ್ನೇಯ ಭಾಗದಲ್ಲೇ ಈ ಮನಿಪ್ಲ್ಯಾಂಟ್ ನ್ನು ಇಡಬೇಕು. •ಮನೆಯ ಈಶಾನ್ಯ ಭಾಗದಲ್ಲಿ ಯಾವತ್ತಿಗೂ ಮನಿಪ್ಲ್ಯಾಂಟ್ ನ್ನು ಇಡಬಾರದು. ಈ ಭಾಗದ ಆಡಳಿತಾಧಿಕಾರಿ ಗುರು, ಇದು ಶುಕ್ರ ಗ್ರಹದ ಶತ್ರುವಾಗಿದೆ. ಈ ಜಾಗದಲ್ಲಿ ಮನಿಪ್ಲ್ಯಾಂಟ್ ನ್ನು ಇಟ್ಟರೆ ಅದರಿಂದ ದುರಾದೃಷ್ಟವು ಬರುವುದು. ಮರಗಳನ್ನು ನೆಡುವುದರಿಂದ ಎತ್ತರಕ್ಕೆ ಬೆಳೆಯುವ ಅಶೋಕ, ಬೇವು, ತೆಂಗಿನ ಮರ ಮತ್ತು ಗಿಡಗಳಾದ ತುಳಸಿ ಮತ್ತು ಅರಿಶಿನಗಳು ನಿಮ್ಮ ಮನೆಯೊಳಗೆ ದುಷ್ಟಶಕ್ತಿಗಳು ಪ್ರವೇಶಿಸುವುದನ್ನು ತಡೆಯುತ್ತವೆ ಹಾಗೂ ಇತರ ಸಸ್ಯಗಳಿಂದ ಎದುರಾಗಬಹುದಾಗಿದ್ದ ಕೆಟ್ಟ ಪ್ರಭಾವವನ್ನೂ ಕಡಿಮೆಗೊಳಿಸುತ್ತವೆ. ಹತ್ತಿಗಿಡ, ರೇಷ್ಮೆ ಹತ್ತಿಗಿಡ (Silky cotton plant) ಮತ್ತು ತಾಳೆ ಮರಗಳು ಮನೆಯ ಆವರಣದಲ್ಲಿರುವುದು ದುರಾದೃಷ್ಟವನ್ನು ತರುತ್ತದೆ ಎಂದು ವಾಸ್ತು ತಿಳಿಸುತ್ತದೆ. ವಿಶೇಷ ಟಿಪ್ಪಣಿ: ಮನೆಯ ಅಕ್ಕಪಕ್ಕ ಯಾವುದೇ ಗಿಡ ಅಥವಾ ಮರ ಸಾಯುತ್ತಿದ್ದರೆ ಅದನ್ನು ಆದಷ್ಟು ಬೇಗ ಅಲ್ಲಿಂದ ತೆಗೆಸಿ. ಒಣಗಿದ ಹೂವುಗಳು ಸಹಾ ದುರಾದೃಷ್ಟವನ್ನು ತರಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರಪ್ರದೇಶದ ಡಿಜಿಐಟಿಗಳ ನೆರವಿನೊಡನೆ ದಾಯ ತೆರಿಗೆ – ಕರ್ನಾಟಕ ಮತ್ತು ಗೋವಾದ ಆದಾಯ ತೆರಿಗೆ ನಿರ್ದೇಶನಾಲಯ (ಡಿಜಿಐಟಿ) ದ ತನಿಖಾ ವಿಭಾಗವು ರಾಜ್ಯದಾದ್ಯಂತ ಚಿನ್ನದ ಅಂಗಡಿ ಮೇಲೆ ನಡೆಸಿದ್ದ ದಾಳಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಕಳೆದ ವಾರ ಎರಡು ಪ್ರಸಿದ್ಧ ಆಭರಣ ಶೋ ರೂಂಗಳಾದ ‘ಸುಲ್ತಾನ್’ ಮತ್ತು ‘ಸಿಟಿ ಗೋಲ್ಡ್’ ಮೇಲೆ ಸರಣಿ ದಾಳಿ ನಡೆಸಲಾಗಿತ್ತು.ಎರಡೂ ಆಭರಣ ಮಾರಾಟ ಸಮೂಹವು ಸುಮಾರು 125 ಕೋಟಿ ರೂ.ಗಳ ದಾಖಲೆ ಇಲ್ಲದ ಆದಾಯವನ್ನು…
ನಮ್ಮ ದೇಹದ ವಿಸರ್ಜನಾಂಗಗಳಲ್ಲಿ ಕಿಡ್ನಿಯ ಪಾತ್ರ ಅತೀ ಮಹತ್ವವನ್ನು ಪಡೆದಿದೆ. ದೇಹದಲ್ಲಿರುವ ಕಶ್ಮಲ ಮತ್ತು ವಿಷಕಾರಿ ಅಂಶಗಳನ್ನು ದೇಹದಿಂದ ಹೊರದೂಡಿ ದೇಹವನ್ನು ಸದಾ ಕಾಪಾಡುವ ಅಂಗ ಇದಾಗಿದೆ. ದೇಹದ ನೀರಿನಾಂಶದ ಮಟ್ಟವನ್ನು ಸದಾ ನಿಯಂತ್ರಣದಲ್ಲಿ ಇಟ್ಟು ಆರೋಗ್ಯವಾಗಿರುವಂತೆ ನೋಡಿಕೊಳ್ಳುತ್ತದೆ. ದೇಹದ ಈ ಅಂಗವನ್ನು ಉತ್ತಮವಾಗಿಸಿ ಆರೋಗ್ಯವನ್ನು ಸದಾ ಕಾಪಾಡಿಕೊಳ್ಳಲು ನಾವು ತೆಗೆದುಕೊಳ್ಳುವ ಆಹಾರಗಳಿಂದ ಸಾಧ್ಯ. ಕಿಡ್ನಿಯ ರೋಗಗಳನ್ನು ತಡೆಗಟ್ಟಿ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುವಂತೆ ಮಾಡಲು ತೆಗೆದುಕೊಳ್ಳಬಹುದಾದ ಆಹಾರ ಕ್ರಮಗಳ ಬಗ್ಗೆ ಇಲ್ಲಿ ಚರ್ಚಿಸಲಾಗಿದೆ. ಲಿಂಬೆಕಾಯಿ ಲಿಂಬೆಕಾಯಿಯಲ್ಲಿ ಸಿಟ್ರಿಕ್…
ಬಹಳಷ್ಟು ಮಂದಿ ನಿತ್ಯ ದೇವಸ್ಥಾನಕ್ಕೆ ಹೋಗುತ್ತಿರುತ್ತಾರೆ.ದೇವಸ್ಥಾನಕ್ಕೆ ಹೋದಾಗ ದೇವರಿಗೆ ಮಂಗಳಾರತಿ ಮಾಡುವ ಸಮಯದಲ್ಲಿ ಸಾಮಾನ್ಯವಾಗಿ ಎಲ್ಲರೂ ಘಂಟೆ ಬಾರಿಸುತ್ತಾರೆ.ಅದರಲ್ಲೂ ಚಿಕ್ಕಮಕ್ಕಳಿಗಂತೂ ಘಂಟೆ ಬಾರಿಸುವುದರಲ್ಲಿ ಎತ್ತಿದ ಕೈ.ಅದರಲ್ಲಿ ಅವರು ಒಂದು ಕೈ ಮುಂದೆನೇ ಇರ್ತಾರೆ. ಆದರೆ ಗುಡಿಯಲ್ಲಿ ಘಂಟೆ ಯಾಕೆ ಹೊಡೀತಾರೆ ಗೊತ್ತಾ..? ಗುಡಿಗೆ ಹೋದವರು ಕಡ್ಡಾಯವಾಗಿ ಘಂಟೆ ಭಾರಿಸುತ್ತಾರೆ. ಮನೆಯಲ್ಲೂ ಅಷ್ಟೇ ಪೂಜೆ ಮಾಡುತ್ತಿದ್ದಾಗ, ಆರತಿ ಬೆಳಗುತ್ತಿದ್ದಾಗ ಘಂಟೆ ಹೊಡೆಯುತ್ತಾರೆ… ದೇವಾಲಯಕ್ಕೆ ಹೋದಾಗ ಗಂಟೆ ಹೊಡೆದರೆ ಮನಸ್ಸಿಗೆ ಆಧ್ಯಾತ್ಮಿಕ ಆನಂದ ಸಿಗುವುದಷ್ಟೇ ಅಲ್ಲದೆ ಸಕಲ ಶುಭಗಳು ಸಿದ್ಧಿಸುತ್ತವೆ. ಘಂಟೆಯಲ್ಲಿ…
ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ….
ಟಾಲಿವುಡ್ ನಟ ನಾಗಾರ್ಜುನ ಅಕ್ಕಿನೇನಿ ಅವರ ಫಾರ್ಮ್ ಹೌಸ್ನಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿದೆ.ಪಾಪಿರೆಡ್ಡಿಗುಡ್ಡ ಗ್ರಾಮದಲ್ಲಿ ನಾಗಾರ್ಜುನ ಅವರ 40 ಎಕರೆ ಜಮೀನಿದೆ. ಸುಮಾರು ದಿನಗಳಿಂದ ಈ ಜಮೀನ್ ಅನ್ನು ಉಪಯೋಗಿಸುತ್ತಿರಲಿಲ್ಲ. ಆದರೆ ಈಗ ಇದೇ ಜಮೀನಿನಲ್ಲಿ ಸಿಕ್ಕ ಅಜ್ಞಾತ ಶವವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪೊಲೀಸರ ಪ್ರಕಾರ 40 ಎಕರೆ ಜಮೀನಿನಲ್ಲಿ ನಾಗಾರ್ಜುನ ಪತ್ನಿ ಅಮಲಾ ಅವರು ಕೃಷಿ ಮಾಡುವ ಆಸಕ್ತಿ ವಹಿಸಿದ್ದರು. ಹೀಗಾಗಿ ಅವರು ಕೆಲಸಗಾರರನ್ನು ಜಮೀನಿಗೆ ಕಳುಹಿಸಿ ಭೂಮಿ ಸಿದ್ಧಪಡಿಸಲು ಹೇಳಿದ್ದರು. ಕೆಲಸಗಾರರು ಜಮೀನು ಸಿದ್ಧಪಡಿಸಲು…
ದಾಳಿಕೋರರಿಂದ ನೂರಾರು ಕ್ರೈಸ್ತರನ್ನು ರಕ್ಷಿಸಿದ ಮುಸ್ಲಿಂ ಧರ್ಮಗುರುವಿಗೆ ಅತ್ಯುನ್ನತ ಪ್ರಶಸ್ತಿ ನೀಡಿದ ಅಮೆರಿಕಾಲಾಗೊಸ್, ನೈಜೀರಿಯಾ, ಜು.19: ಮಧ್ಯ ನೈಜೀರಿಯಾದಲ್ಲಿ ದಾಳಿಯೊಂದರ ಸಂದರ್ಭ ತನ್ನ ನಿವಾಸ ಹಾಗೂ ಮಸೀದಿಯಲ್ಲಿ 262 ಕ್ರೈಸ್ತರಿಗೆ ಆಶ್ರಯವೊದಗಿಸಿದ 83 ವರ್ಷದ ಮುಸ್ಲಿಂ ಧರ್ಮಗುರು ಇಮಾಮ್ ಅಬೂಬಕರ್ ಅಬ್ದುಲ್ಲಾಹಿ ಎಂಬವರನ್ನು ಅಮೆರಿಕಾ ಸರಕಾರ ಗೌರವಿಸಿದೆ. ಅಬ್ದುಲ್ಲಾಹಿ ಅವರ ಜತೆ ಸುಡಾನ್, ಇರಾಕ್, ಬ್ರೆಝಿಲ್ ಹಾಗೂ ಸೈಪ್ರಸ್ ದೇಶಗಳ ನಾಲ್ಕು ಮಂದಿ ಇತರ ಧಾರ್ಮಿಕ ನಾಯಕರಿಗೆ 2019ನೇ ವರ್ಷದ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಪ್ರಶಸ್ತಿ (ಇಂಟರ್…