ಸುದ್ದಿ

ಮನೆಗೆ ಹೋದ ದಿವಾಕರ್ ಪತ್ನಿಯಿಂದ ಈ ಸುದ್ದಿ ಕೇಳಿ ಶಾಕ್ ಆದ್ರು..!ಏನದು ಸುದ್ದಿ ಗೊತ್ತಾ..?

663

‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ಎಲ್ಲರೂ  ಜಯರಾಂ ಕಾರ್ತಿಕ್(ಜೆಕೆ) ಅವರಿಗೆ ‘ಬಿಗ್ ಬಾಸ್ ಪಟ್ಟ ಸಿಗಬಹುದು, ಎಂದುಕೊಂಡಿದ್ದವರಿಗೆ ಶಾಕ್ ನೀಡಿದ್ದಾನೆ ಬಿಗ್ ಬಾಸ್.ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.

ಸಾಮಾನ್ಯ ಸೇಲ್ಸ್ ಮ್ಯಾನ್ ಆಗಿ ಜೀವನ ನಡೆಸುತ್ತಿದ್ದ ದಿವಾಕರ್ ಬಿಗ್ ಬಾಸ್ ನ ಕೊನೆಯವರೆಗೂ ಉಳಿದು ರನ್ನರ್ ಆಪ್ ಆಗುತ್ತಾರೆ ಎಂದು ಯಾರು ಕೂಡ ಮೊದಲಿಗೆ ಊಹಿಸಿರಲಿಲ್ಲ.

ಇಲ್ಲಿ ಓದಿ :-ದಿವಾಕರ್’ಗೆ ಕೇವಲ ಒಂದು ಲಕ್ಷ ಕೊಟ್ಟಿದ್ದು ಸರಿಯೇ..?ಯಾಕೆ ಹೀಗಾಯ್ತು ಗೊತ್ತಾ..?

ಜೀವನದಲ್ಲಿ ತುಂಬಾ ಕಷ್ಟಪಟ್ಟಿದ್ದಾರಂತೆ ದಿವಾಕರ್…

ಒಂಬತ್ತು ವರ್ಷಗಳಿಂದ ಸೇಲ್ಸ್ ಮ್ಯಾನ್ ಕೆಲಸ ಮಾಡುತ್ತಿದ್ದೇನೆ. ಜೀವನದಲ್ಲಿ ತುಂಬಾ ಕಷ್ಟ ಪಟ್ಟಿದ್ದೇನೆ. ಜೀವನ ನಡೆಸಲು ಏನೇನು ಕೆಲಸ ಮಾಡಬೇಕೋ, ಎಲ್ಲವನ್ನೂ ಮಾಡಿದ್ದೇನೆ. ಎಮ್ಮೆ ಮೇಯಿಸಿದ್ದೇನೆ. ಕೂಲಿ, ಗಾರೆ ಕೆಲಸ ಮಾಡಿದ್ದೇನೆ. ಹೊಟ್ಟೆ ಹಸಿವು ಆದಾಗ ಭಿಕ್ಷೆ ಕೂಡ ಬೇಡಿದ್ದೇನೆ” ಎಂದು ದಿವಾಕರ್ ಹೇಳಿಕೊಂಡಿದ್ದರು.

ಕಾಮಾನ್ ಮ್ಯಾನ್’ನಿಂದ ಸೆಲೆಬ್ರೆಟಿವರೆಗು…

ಆದ್ರೆ, ಬಿಗ್ ಬಾಸ್ ಬರುವುದಕ್ಕೆ ಮುಂಚೆ ಊರೂರು ಸುತ್ತಿ ಸೇಲ್ಸ್ ಮ್ಯಾನ್ ಆಗಿ ತೈಲ ಮಾರಾಟ ಮಾಡುತ್ತಿದ್ದ ದಿವಾಕರ್, ಸದ್ಯ ಇಡೀ ಕರ್ನಾಟಕಕ್ಕೆ ‘ಬಿಗ್ ಬಾಸ್’ ಮೂಲಕ ಚಿರಪರಿಚಿತರಾಗಿಬಿಟ್ಟಿದ್ದಾರೆ.

ಘಟಾನುಘಟಿಗಳನ್ನೇ ಹಿಂದೆ ಹಾಕಿ 106 ದಿನ ‘ಬಿಗ್ ಬಾಸ್’ ಮನೆಯಲ್ಲಿ ಇದ್ದು ಕೊನೆಗೆ ಖ್ಯಾತಿ, ಜನಪ್ರಿಯತೆ ಜೊತೆಗೆ ಒಂದು ಲಕ್ಷ ರೂಪಾಯಿ ಬಹುಮಾನ ಹಣ ಮತ್ತು ರನ್ನರ್-ಅಪ್’ಯೊಂದಿಗೆ ತಮ್ಮ ಕುಟುಂಬವನ್ನು ಸೇರಿಕೊಂಡಿದ್ದಾರೆ.

ಮನೆಗೆ ಹೋದ ದಿವಾಕರ್’ಗೆ ಹೆಂಡತಿಯಿಂದ…

ಖುಷಿಯ ಅಲೆಯಲ್ಲಿ, ರನ್ನರ್ ಆಪ್ ಟ್ರೋಪಿ ಹಿಡಿದು ಮನೆಗೆ ಹೋದ ದಿವಾಕರ್’ಗೆ ಅವರ ಪತ್ನಿ ಮಮತಾ ಅವರ ಕಡೆಯಿಂದ ಶಾಕಿಂಗ್ ನ್ಯೂಸ್ ಕಾಡಿತ್ತು. ಒಂದು ಕಡೆ ವಿನ್ನರ್ ಆಗಬೇಕಿದ್ದ ದಿವಾಕರ್ ರನ್ನರ್ ಆಪ್ ಆಗಿದ್ದು ಬೇಸರ ತಂದಿದ್ದರೂ, ಅವರಿಗೆ ಬೇರೆಯದೇ ವಿಷಯದಲ್ಲಿ ತುಂಬಾ ಬೇಸರವಾಗಿತ್ತು.

ದಿವಾಕರ್ ರವರಿಗೆ ಈಗಾಗಲೇ ಒಬ್ಬ ಗಂಡು ಮಗು ಇದ್ದಾನೆ.ಆದ್ರೆ ದಿವಾಕರ್ ರವರಿಗೆ ಹೆಣ್ಣು ಮಕ್ಕಳೆಂದರೆ ಪಂಚಪ್ರಾಣ.ಈ ವಿಚಾರವಾಗಿಯೇ ಬೇರೆಯದೇ ಸುದ್ದಿ ನಿರೀಕ್ಷೆ ಮಾಡಿದ್ದ ದಿವಾಕರ್’ಗೆ ಅಲ್ಲಿ ಕಹಿ ಸುದ್ದಿ ಕಾಡಿತ್ತು..!ಅದು ಏನು ಗೊತ್ತಾ…

ಈ ಸುದ್ದಿ ಕೇಳಿ ಶಾಕ್ ಆದ್ರು ದಿವಾಕರ್..!

ದಿವಾಕರ್ ಬಿಗ್ ಬಾಸ್ ಮನೆಯೊಳಗೆ ಹೋಗುವ ಮುನ್ನ ಅವರ ಹೆಂಡತಿ ಮಮತಾ ಎರಡನೇ ಮಗುವಿಗಾಗಿ ಗರ್ಭಿಣಿ ಯಾಗಿದ್ದರು.ಆದರೆ ದಿವಾಕರ್ ಬಿಗ್ ಬಾಸ್ ಮನೆಯಲ್ಲಿದ್ದಾಗ , ಪತ್ನಿ ಮಮತಾರವರಿಗೆ ಅನಾರೋಗ್ಯ ಉಂಟಾಗಿ ಗರ್ಭಪಾತವಾಗಿತ್ತು.ಆದ್ರೆ ಈ ವಿಷಯ ದಿವಾಕರ್’ಗೆ ತಿಳಿಸಿರಲಿಲ್ಲ.ಪತ್ನಿ ಮಮತಾ ಬಿಗ್ ಬಾಸ್ ಮನೆಯೊಳಗೆ ಹೋಗಿದ್ದಾಗ ಕೂಡ ಈ ವಿಷಯದ ಬಗ್ಗೆ ತಿಳಿಸಿರಲಿಲ್ಲ.

ಪತ್ನಿ ಹೇಳಿದ ಸತ್ಯ…

ಹೌದು,ದಿವಾಕರ್ ಬಿಗ್ ಬಾಸ್ ಮನೆಯಿಂದ ಬಂದಮೇಲೆ ಎರಡನೇ ಮಗುವಿನ ಕುರಿತಾಗಿ ಚರ್ಚೆ ನಡೆದಿದ್ದು, ಕೊನೆಗೂ ಮಮತಾರವರು ನಿಜ ವಿಷಯವನ್ನು ದಿವಾಕರ್’ಗೆ ಹೇಳಿದ್ದಾರೆ.ಎರಡನೇ ಮಗುವಿನ ಆಗಮನದ ಖುಷಿಯಲ್ಲಿದ್ದ ದಿವಾಕರ್’ಗೆ ಈ ಪತ್ನಿ ಮಮತಾಗೆ ಗರ್ಭಪಾತ ಆಗಿರುವ ವಿಷಯ ಕೇಳಿ ತುಂಬಾ ಬೇಸರವಾಗಿದೆಯಂತೆ.ಎರಡನೇ ಮಗುವಾಗಿ ಹೆಣ್ಣು ಮಗು ಹುಟ್ಟಲಿ ಎಂದು ಅಂದುಕೊಂಡಿದ್ದ ದಿವಾಕರ್ ರವರಿಗೆ ತುಂಬಾ ಬೇಜಾರಗಿದೆಯಂತೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅನಾಥ ಯುವತಿಯರನ್ನು ಮದುವೆಯಾದ ಅಂಕೋಲದ ಯುವಕರು ವಿಜೃಂಭಣೆಯಿಂದ, ಶಾಸ್ತ್ರೋಕ್ತವಾಗಿ ಧಾರೆಯೆರೆದು ಕೊಟ್ಟ ಮಾತೃಛಾಯಾ ಟ್ರಸ್ಟ್…!

    ಕನಸನ್ನು ಹೊತ್ತಿರುವ ಅನಾಥರ ಬಾಳಲ್ಲಿ ಬೆಳಗುವ ದೀಪದಂತೆ ಅವರ ಜೀವನ ಸಾಕಾರಗೊಳಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯ ಸೇವಾಭಾರತಿ ಟ್ರಸ್ಟ್​ನಿಂದ ಕಳೆದ 25 ವರ್ಷಗಳಿಂದ ಆರಂಭಿಸಿರುವ ಮಾತೃಛಾಯಾ ಬಾಲ ಕಲ್ಯಾಣ ಕೇಂದ್ರದ ಆಶ್ರಯದಲ್ಲಿ ಬೆಳೆದ ಇಬ್ಬರು ಹೆಣ್ಣು ಮಕ್ಕಳ ಬಾಳಿಗೆ ಇಂದು ಹೊಸ ಜೀವನ ನೀಡಲಾಯಿತು. ಚಿಕ್ಕಂದಿನಿಂದಲೂ ಮನೆಯ ಮಕ್ಕಳಂತೆ ಮಾತೃಛಾಯಾ ಟ್ರಸ್ಟ್ ಆಶ್ರಮದಲ್ಲಿ ಬೆಳೆದ ಜಾಹ್ನವಿ ಹಾಗೂ ಸಂಜನಾ ಎಂಬ ಯುವತಿಯರು ಇವತ್ತು ಅಂಕೋಲಾ ಮೂಲದ ಹುಡುಗರನ್ನು ವರಿಸಿದರು. ಮನೆಯ ಮಕ್ಕಳಂತೆ ಪೋಷಣೆ ಮಾಡಿದ್ದ ಟ್ರಸ್ಟ್ ಇಂದು ಅತ್ಯಂತ…

  • ಉಪಯುಕ್ತ ಮಾಹಿತಿ

    1 ಕಿಲೋ ಮೀಟರ್ ರೈಲು ಹಳಿಯನ್ನ ಜೋಡಿಸಲು ಬೇಕಾಗುವ ಹಣ ಎಷ್ಟು. ನೋಡಿ ರೈಲು ಹಳಿಯ ಸೀಕ್ರೆಟ್.

    ನಮ್ಮ ದೇಶದಲ್ಲಿ ತುಂಬಾ ಜನರು ರೈಲು ಪ್ರಯಾಣವನ್ನ ಮಾಡೇ ಇರುತ್ತಾರೆ, ರೈಲು ಪ್ರಯಾಣ ಕೆಲವರಿಗೆ ಕಡಿಮೆ ಖರ್ಚಿನದ್ದು ಆಗಿದ್ದರೆ ಇನ್ನು ಕೆಲವರಿಗೆ ಅದೂ ಅವಿಸ್ಮರಣೀಯ ಅನುಭವವನ್ನ ಕೊಡುತ್ತದೆ. ಇನ್ನು ಕೆಲವರು ರೈಲಿನಲ್ಲಿ ಪ್ರಯಾಣ ಮಾಡದೇ ಇದ್ದರೂ ಕೂಡ ರೈಲನ್ನಾದರೂ ನೋಡಿರುತ್ತಾರೆ. ಇನ್ನು ಜನರಿಗೆ ರೈಲುಗಳ ಬಗ್ಗೆ ಮತ್ತು ರೈಲು ಚಾಲಕರ ಬಗ್ಗೆ ಮಾಹಿತಿ ಎಲ್ಲರಿಗೂ ತಿಳಿದಿರುತ್ತದೆ ಆದರೆ ರೈಲು ಹಳಿಗಳ ಬಗ್ಗೆ ಮತ್ತು ಅದನ್ನ ಮಾಡಲು ತಗುಲುವ ಖರ್ಚಿನ ಮತ್ತು ಒಂದು ಕಿಲೋ ಮೀಟರ್ ರೈಲು ಹಳಿಯನ್ನ…

  • ವಿಚಿತ್ರ ಆದರೂ ಸತ್ಯ

    ಸಾಮಾನ್ಯವಾಗಿ ಯಾರಿಗೂ ಗೊತ್ತಿಲ್ಲದ, ಹೆಂಗಸರಿಗೂ ಗಂಡಸರಿಗೂ ಇರೋ ಈ ವ್ಯತ್ಯಾಸಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ಕಣ್ಣೀರು ಹೆಣ್ಮಕ್ಕಳ ಅಸ್ತ್ರ ಅಂತಾರಲ್ಲಾ! ವಿಷ್ಯ ಏನಪ್ಪಾ ಅಂದ್ರೆ ಹೆಂಗಸ್ರು ಒಂದ್ ವರ್ಷಕ್ಕೆ ಸರಾಸರಿ 30 ರಿಂದ 64 ಸಲ ಕಣ್ಣೀರಿಡ್ತಾರಂತೆ. ಆದ್ರೆ ಗಂಡಸ್ರು 6 ರಿಂದ 17 ಸಲ ಅತ್ರೆ ಹೆಚ್ಚೆಚ್ಚು.

  • ಸುದ್ದಿ

    ಸಾನಿಯಾ ಮಿರ್ಜಾ ಪತಿಗೆ ಹೈದರಾಬಾದ್ ಪ್ರವೇಶ ಮಾಡಾಬಾರದೆಂದು ಬೆದರಿಕೆಯೊಡ್ಡಿದ ಶಾಸಕ!ಏಕೆ ಗೊತ್ತಾ?

    ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ…

  • ಸುದ್ದಿ

    ಕಾರ್ಖಾನೆಯ ಕ್ಯಾಂಟೀನ್ ಊಟ ತಿಂದು 100ಕ್ಕೂ ಹೆಚ್ಚು ಮಹಿಳಾ ನೌಕರರು ಅಸ್ವಸ್ಥ..!

    ಕಾರ್ಖಾನೆಯ ಕ್ಯಾಂಟೀನ್ ಆಹಾರ ಸೇವಿಸಿದ 100ಕ್ಕೂ ಹೆಚ್ಚು ಮಹಿಳಾ ನೌಕರರು ಹೊಟ್ಟೆ ನೋವು, ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ನಡೆದಿದೆ. ತಾಲ್ಲೂಕಿನ ಕೈಗಾರಿಕಾ ವಸಾಹತು ಪ್ರದೇಶದ ಅಂಚೇಪಾಳ್ಯದ ಬಳಿ ಇರುವ ಇಂಡೋ ಸ್ಪಾನಿಶ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ನೌಕರರಿಗೆ ನಿನ್ನೆ ಮಧ್ಯಾಹ್ನ ಊಟದ ವ್ಯವಸ್ಥೆ ಇದ್ದು ಅನ್ನ ಮತ್ತು ಮೊಳಕೆಕಾಳು ಸಾಂಬಾರ್ ನೀಡಲಾಗಿತ್ತು. ಊಟ ಮುಗಿದ ಕೆಲವು ನಿಮಿಷಗಳ ನಂತರ 40ಕ್ಕೂ ಹೆಚ್ಚು ಮಹಿಳೆಯರು ಹೊಟ್ಟೆ ನೋವೆಂದು ಒದ್ದಾಡಿದ್ದಾರೆ….

  • ಸಿನಿಮಾ

    ಯಾರಿದು ಧ್ರುವ ಸರ್ಜಾ ಮದುವೆಯಾಗುತ್ತಿರುವ ಪ್ರೇರಣಾ!ಯಾವ ಲವ್ ಸ್ಟೋರಿಗೂ ಕಡಿಮೆ ಇಲ್ಲ ಇವರ 16ವರ್ಷದ ಪ್ರೇಮ್ ಕಹಾನಿ..

    ಡಲ್ ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ತಮ್ಮ ಬಹುದಿನದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಇದೇ ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಅವರು ತಮ್ಮ ಬಹುಕಾಲದ ಗೆಳತಿ ಪ್ರೇರಣಾ ಶಂಕರ್ ಜೊತೆ ಮದುವೆಯಾಗಲು ಸಿದ್ಧರಾಗಿದ್ದಾರೆ. ಧ್ರುವ ಸರ್ಜಾ ಹಾಗೂ ಪ್ರೇರಣಾ ಅವರು ಅಕ್ಕಪಕ್ಕದ ಮನೆಯವರಾಗಿದ್ದಾರೆ. ಬನಶಂಕರಿಯ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಿಶ್ಚಿತಾರ್ಥ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಧ್ರುವ ಹುಟ್ಟುಹಬ್ಬದ…