ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಸಿ ತರಕಾರಿಗಳ ಸೇವನೆಯಿಂದ ನಿಮ್ಮ ದೇಹಕ್ಕೆ ಬೇಕಾದ ಆರೋಗ್ಯ ಶಕ್ತಿ ದೊರೆಯುತ್ತದೆ ಎಂಬುದು ವೈದ್ಯಲೋಕ ತಿಳಿಸಿರುವ ಮಾಹಿತಿಯಾಗಿದೆ. ತರಕಾರಿಗಳನ್ನು ಬೇಯಿಸಿದಾಗ ಅದಲ್ಲಿರುವ ಪೋಷಕಾಂಶಗಳು ನಷ್ಟವಾಗುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದ್ದು ಆದಷ್ಟು ತರಕಾರಿಗಳನ್ನು ಹಸಿಹಸಿಯಾಗಿಯೇ ನಿಮ್ಮ ನಿತ್ಯದ ಆಹಾರ ಕ್ರಮದಲ್ಲಿ ಬಳಸುವುದರಿಂದ ಲಾಭ ನಿಮಗೇ ಉಂಟಾಗಲಿದೆ.
ಇಂದಿನ ಲೇಖನದಲ್ಲಿ ದಿನಕ್ಕೊಂದು ಹಸಿ ಈರುಳ್ಳಿಯನ್ನು ನಿತ್ಯ ಸೇವಿಸುವುದರಿಂದ ಉಂಟಾಗುವ ಪ್ರಯೋಜನಗಳನ್ನು ಅರಿತುಕೊಳ್ಳಲಿದ್ದೇವೆ. ಈರುಳ್ಳಿಯಲ್ಲಿ ಹೆಚ್ಚು ಪ್ರಮಾಣದ ಸಲ್ಫರ್ ಅಂಶಗಳಿದ್ದು ಇದರಿಂದಲೇ ಇದರ ವಾಸನೆ ಮತ್ತು ನಿಗ್ರಹಿಸುವ ಗುಣಗಳಲ್ಲಿದೆ. ವಿಟಮಿನ್ ಸಿ, ವಿಟಮಿನ್ ಬಿ6, ಬಯೋಟಿನ್, ಫೋಲಿಕ್ ಆಸಿಡ್, ಕ್ರೋಮಿಯಂ, ಕ್ಯಾಲ್ಶಿಯಂ ಮತ್ತು ಫೈಬರ್ ಅನ್ನು ಇದು ಒಳಗೊಂಡಿದೆ. ಆದ್ದರಿಂದಲೇ ಈರುಳ್ಳಿಯನ್ನು ಹಸಿಯಾಗಿ ಸೇವಿಸಲು ವೈದ್ಯರ ಸಲಹೆ ನೀಡುತ್ತಿದ್ದು ಇದರಿಂದ ಕೂಡ ಹೆಚ್ಚುವರಿ ಆರೋಗ್ಯ ಪ್ರಯೋಜನಗಳನ್ನು ನಿಮಗೆ ಪಡೆದುಕೊಳ್ಳಬಹುದಾಗಿದೆ….
ಕೊಲೆಸ್ಟ್ರಾಲ್ ಮಟ್ಟವನ್ನು ತಗ್ಗಿಸಲಿರುವ ಈರುಳ್ಳಿ ಅದರಲ್ಲಿರುವ ಸಲ್ಫರ್ ಅಂಶಗಳಿಂದ ನೈಸರ್ಗಿಕ ರಕ್ತ ತೆಳುಮಾಡುವ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದರಿಂದ ಹೃದಯಾಘಾತದಂತಹ ಅಪಘಾತಗಳು ಉಂಟಾಗುವುದಿಲ್ಲ. ಪ್ಲೇಟ್ಲೇಟ್ ಸಮೂಹವನ್ನು ಇದು ತಡೆಗಟ್ಟುವುದರಿಂದ ಅಪಧಮನಿಗಳು ಗಟ್ಟಿಯಾಗುವುದನ್ನು ಇವುಗಳು ನಿರ್ಬಂಧಿಸುತ್ತವೆ.
ಈರುಳ್ಳಿಯಲ್ಲಿರುವ ಉರಿಯೂತದ ಕ್ರಿಯೆಯು ಶ್ವಾಸನಾಳ ಸ್ನಾಯುಗಳನ್ನು ಸಡಿಲಗೊಳಿಸುತ್ತದೆ ಮತ್ತು ಅಸ್ತಮಾ ಹಾಗೂ ಬ್ರಾಂಕೈಟಿಸ್ ಅನ್ನು ಬಿಡುಗಡೆ ಮಾಡುತ್ತದೆ. ಕೆಮ್ಮು, ಶೀತ, ಜ್ವರ, ಸೀನುವಿಕೆ, ಮೂಗು ಕಟ್ಟುವಿಕೆಯನ್ನು ತಡೆಯುತ್ತದೆ.
ಇದು ಪಚನಗೊಳ್ಳುವಂತಹ ನಾರಿನಂಶವನ್ನು ಒಳಗೊಂಡಿರುವುದರಿಂದ ನಿಮ್ಮ ಕರುಳಿನಲ್ಲಿ ಒಳ್ಳೆಯ ಬ್ಯಾಕ್ಟೀರಿಯಾವನ್ನು ಬೆಳೆಸುತ್ತದೆ. ಹಸಿ ಈರುಳ್ಳಿಯನ್ನು ದಿನಕ್ಕೊಂದರಂತೆ ಸೇವಿಸುವುದರಿಂದ ಮಲಬದ್ಧತೆ ದೂರಾಗುತ್ತದೆ. ಆದ್ದರಿಂದ ಪ್ರತಿನಿತ್ಯ ಈರುಳ್ಳಿ ಸೇವನೆಯಿಂದ ಉಂಟಾಗುವ ಪ್ರಯೋಜನಗಳಲ್ಲಿ ಇದೂ ಒಂದಾಗಿದೆ.

ಇದು ನಂಜುನಿರೋಧಕ ಮತ್ತು ಆಂಟಿಮೈಕ್ರೊಬಿಯಲ್ ಗುಣಗಳನ್ನು ಹೊಂದಿದೆ. ಕ್ಷಯರೋಗಕ್ಕೆ ಕಾರಣವಾಗಿರುವ ಮೈಕೊಬ್ಯಾಕ್ಟೀರಿಯಾವನ್ನು ಇದು ನಿಷ್ಕ್ರಿಯಗೊಳಿಸುತ್ತದೆ ಮತ್ತು ನಿರೋಧಕ ಪರಿಣಾಮವನ್ನು ಬೀರುತ್ತದೆ. ಹಸಿ ಈರುಳ್ಳಿಯನ್ನು ನಿತ್ಯವೂ ಸೇವಿಸುವುದು ಒಳ್ಳೆಯದು.
ಹಾಲುಣಿಸುತ್ತಿರುವ ತಾಯಂದಿರ ಸ್ತನದಲ್ಲಿ ಹಾಲಿನ ಉತ್ಪತ್ತಿಯನ್ನು ಹಸಿ ಈರುಳ್ಳಿ ಹೆಚ್ಚಿಸಲಿದೆ. ಊಟದಲ್ಲಿ ಸಲಾಡ್ ಅಥವಾ ಸ್ಯಾಂಡ್ವಿಚ್ ರೂಪದಲ್ಲಿ ಕೂಡ ಹಸಿ ಈರುಳ್ಳಿಯನ್ನು ನಿಮಗೆ ಸೇವಿಸಬಹುದಾಗಿದೆ.
ಕ್ಯಾಲೋರಿ ಪ್ರಮಾಣವು ಈರುಳ್ಳಿಯಲ್ಲಿ ಕಡಿಮೆ ಇರುವುದರಿಂದ ಕೊಬ್ಬು ಇಲ್ಲ. ಅಧಿಕ ರಕ್ತದೊತ್ತಡವನ್ನು ಇದು ನಿರ್ವಹಿಸುತ್ತದೆ. ಪ್ರತಿ ನಿತ್ಯವೂ ಹಸಿ ಈರುಳ್ಳಿಯನ್ನು ಸೇವಿಸುವುದರಿಂದ ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬರಲಿದೆ.

ವಿಷಕಾರಿ ಅಂಶಗಳಿಂದ ನಿಮ್ಮ ದೇಹವನ್ನು ಸಂರಕ್ಷಿಸುವ ಕೆಲಸವನ್ನು ಹಸಿ ಈರುಳ್ಳಿ ಮಾಡಲಿದೆ. ನಿಮ್ಮ ರಕ್ತವನ್ನು ಶುದ್ಧೀಕರಿಸಿ ನಿಮ್ಮನ್ನು ಆರೋಗ್ಯಕಾರಿಯಾಗಿ ಇದು ಇರಿಸುತ್ತದೆ. ಹಸಿಯಾಗಿ ಈರುಳ್ಳಿಯನ್ನು ಸೇವಿಸುವುದರಿಂದ ಇನ್ನಷ್ಟು ಪ್ರಯೋಜನಗಳು ನಿಮಗೆ ದೊರೆಯಲಿದೆ.
ಈರುಳ್ಳಿಯಲ್ಲಿರುವ ಫೈಟೊಕೆಮಿಕಲ್ಸ್ ಡಿಲ್ಫೈಡ್ಸ್, ಟ್ರೈಸುಲ್ಫೈಡ್ಸ್, ಸೆಪೇನ್ ಮತ್ತು ಕ್ವೆರ್ಸಟಿನ್ ನಿಮ್ಮ ರಕ್ತದ ತೆಳುಗೊಳಿಸುವಿಕೆಗೆ ಸಹಾಯ ಮಾಡುತ್ತದೆ. ಇದರಿಂದ ಉರಿಯೂತ ಕಡಿಮೆಯಾಗಿ ಇದು ಕ್ಯಾನ್ಸರ್ ತಡೆಗಟ್ಟುವ ದಿವ್ಯೌಷಧಿಯಾಗಿ ಸಹಾಯ ಮಾಡಲಿದೆ.
ಹಸಿ ಈರುಳ್ಳಿಯನ್ನು ಸೇವಿಸುವುದು ಹೊಟ್ಟೆಗೆ ಸಂಬಂಧಿತವಾಗಿರುವ ಸರ್ವ ರೋಗವನ್ನು ಪರಿಹರಿಸುತ್ತದೆ. ಗಾಳಿ ಗುಳ್ಳೆಯ ಅಸ್ವಸ್ಥತೆ, ಜೀರ್ಣಕಾರಿ ಸಮಸ್ಯೆಗಳನ್ನು ಇದು ದೂರಮಾಡುತ್ತದೆ.
ಈರುಳ್ಳಿಯಲ್ಲಿರುವ ಹೆಚ್ಚು ಪ್ರಮಾಣದ ಕಬ್ಬಿಣದ ಅಂಶವು ಅನೀಮಿಯಾವನ್ನು ಉಪಚರಿಸುತ್ತದೆ. ಮಧ್ಯಮ ಗಾತ್ರದ ಈರುಳ್ಳಿಯನ್ನು ಸೇವಿಸುವುದು ಉತ್ತಮವಾಗಿದೆ.
ರಕ್ತದಲ್ಲಿರುವ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸುವಲ್ಲಿ ಈರುಳ್ಳಿ ಸಹಕಾರಿ ಎಂದೆನಿಸಲಿದೆ. ನಿಮ್ಮ ಸಕ್ಕರೆ ಸೇವನೆಯನ್ನು ಮಿತದಲ್ಲಿಟ್ಟುಕೊಳ್ಳುವುದರ ಜೊತೆಗೆ ಈರುಳ್ಳಿ ಸೇವಿಸುವುದರಿಂದ ಸಕ್ಕರೆಯ ದುಷ್ಪರಿಣಾಮವನ್ನು ಇದು ನಿವಾರಿಸಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಟೀ ಕುಡಿಯುತ್ತೀರಾ…? ಹಾಗಿದ್ದರೆ ನಿಮ್ಮ ಬುದ್ಧಿಮತ್ತೆ ಭಾರಿ ಚುರುಕಾಗಿರುತ್ತೆ. ನಾವು ಇದನ್ನು ಹೇಳುತ್ತಿಲ್ಲ. ಅಧ್ಯಯನ ಒಂದು ಹೇಳುತ್ತಿದೆ. ಚಹಾ ಕುಡಿಯುವವರು ಮತ್ತು ಕುಡಿಯದವರನ್ನು ಅಧ್ಯಯನಕ್ಕೆ ಒಳಪಡಿಸಿದಾಗ, ಚಹಾ ಕುಡಿಯುವವರ ಮೆದುಳಿನ ಬೆಳವಣಿಗೆ ಚೆನ್ನಾಗಿರುವುದಲ್ಲದೆ, ಅವರ ಬುದ್ಧಿ ಮತ್ತೆ ಸಹ ಚುರುಕಾಗಿರುತ್ತದೆ ಎನ್ನುವ ಅಂಶ ತಿಳಿದು ಬಂದಿದೆ. ‘ನಮ್ಮ ಸಂಶೋಧನೆಯಲ್ಲಿ ತಿಳಿದು ಬಂದ ಮೊದಲ ಸಕಾರಾತ್ಮಕ ಅಂಶವೆಂದರೆ ನಿತ್ಯವೂ ಚಹಾ ಸೇವಿಸುವವರ ಮೆದುಳು ಚುರುಕಾಗಿರುವುದಲ್ಲದೆ, ವಯಸ್ಸಾದ ಬಳಿಕ ಕುಂಠಿತವಾಗುವ ಸಾಮರ್ಥ್ಯವನ್ನು ರಕ್ಷಣೆ ಮಾಡುವಲ್ಲಿ ಸಹಕರಿಸುತ್ತದೆ’ ಎಂದು ಸಿಂಗಾಪುರದ…
ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಶಿಶು ಮರಣ ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಮಾತೃಪೂರ್ಣ ಯೋಜನೆಯು ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ. ಮಾತೃಪೂರ್ಣ ಯೋಜನೆಯ ಪ್ರಮುಖ ಅಂಶಗಳು :- ತಾಯಿ ಮತ್ತು ಮಗುವಿನ ಅಪೌಷ್ಟಿಕತೆ ನಿವಾರಿಸಿ, ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜಾರಿಗೆ ತರಲಾಗುತ್ತಿರುವ…
ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 2,000 ರೂಪಾಯಿಗಳನ್ನು ಕೇಂದ್ರ ಸರ್ಕಾರ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯನ್ನು ಮೋದಿ ಸರ್ಕಾರವು ಫೆಬ್ರವರಿ 24, 2019 ರಂದು ಪ್ರಾರಂಭಿಸಿತು. ಈ ಯೋಜನೆಯಡಿ ಸರ್ಕಾರ ಪ್ರತಿ ವರ್ಷ 3 ಕಂತುಗಳಲ್ಲಿ 6000 ರುಪಾಯಿ ಮೊದಲ ಕಂತು ಡಿಸೆಂಬರ್ 1 ರಿಂದ ಮಾರ್ಚ್ 31 ರವರೆಗೆ ನೀಡಲಾಗುತ್ತದೆ. ಅದೇ ಸಮಯದಲ್ಲಿ, ಎರಡನೇ ಕಂತನ್ನು ನೇರವಾಗಿ ಏಪ್ರಿಲ್ 1 ರಿಂದ ಜುಲೈ…
ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನುಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ ಇದನ್ನು ತಲುಪಿಸುವ ಉದ್ದೇಶವನ್ನು…
ಅನಾಥಶ್ರಮಗಳಲ್ಲಿ ಆಗುತ್ತಿರುವ ಅನಾಚಾರವನ್ನು ಬಯಲಿಗೆಳೆದ ಹಾಗೂ ಭಾರಿ ಹೋರಾಟದ ಬಳಿಕ ಡೌನ್ ಸಿಂಡ್ರೋಮ್ ಇರುವ ಬಾಲಕನನ್ನು ದತ್ತು ಪಡೆದ ಯುವಕನ ಕಥೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹೌದು, ಹ್ಯೂಮನ್ಸ್ ಆಫ್ ಮುಂಬೈ 26 ವರ್ಷದ ಆದಿತ್ಯ ತಿವಾರಿ ಅವರ ಬಗ್ಗೆ ಪೋಸ್ಟ್ ಮಾಡಿದೆ. 2016ರಲ್ಲಿ ತಿವಾರಿ 26ನೇ ವಯಸ್ಸಿಗೆ ಮಗುವನ್ನು ದತ್ತು ಪಡೆಯುವ ಮೂಲಕ ಅತಿ ಚಿಕ್ಕ ವಯಸ್ಸಿನಲ್ಲಿ ಭಾರತದಲ್ಲಿ ದತ್ತು ಪಡೆದ ವ್ಯಕ್ತಿಯಾಗಿ ದಾಖಲೆ ನಿರ್ಮಿಸಿದರು. ಅಷ್ಟಕ್ಕೂ ಆದಿತ್ಯ ದತ್ತು ಪಡೆದ ಬಾಲಕ…
‘ತಿಥಿ’ ಸ್ಟಾರ್ ಗಡ್ಡಪ್ಪ ಹಾಗೂ ಸೆಂಚುರಿಗೌಡ ಸದ್ಯ ಸ್ಯಾಂಡಲ್ ವುಡ್ ನ ‘ಟಾಕ್ ಆಫ್ ದಿ ಟೌನ್’ ಆಗಿದ್ದಾರೆ. ಬಿಗ್ ಸ್ಟಾರ್ ಗಳಂತೆ ಬ್ಯುಸಿಯಾಗಿರುವ ಇವರಿಬ್ಬರು ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.