ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ ಈ ಸೊಪ್ಪಲ್ಲಿ ಪ್ರೋಟೀನ್, ಐರನ್, ಕ್ಯಾಲ್ಷಿಯಂ, ಪೊಟ್ಯಾಷಿಯಂ, ಫಾಸ್ಫರಸ್,ಮಗ್ನೀಷಿಯಂ ಅಲ್ಲದೇ ವಿಟಮಿನ್ A ಹಾಗು C ಇರೋದ್ರೀಂದ ಆರೋಗ್ಯಕ್ಕೆ ಬಹಳ ಒಳ್ಳೇದು.
ಪುದಿನ ಮಾರಕ ಕಾಯಿಲೆಯಾದ ಕ್ಯಾನ್ಸರ್ ಸೇರಿದಂತೆ ತುಂಬಾ ಕಾಯಿಲೆಗಳಿಗೆ ಒಳ್ಳೆಯದು:-
ಆಹಾರ ಜೀರ್ಣ ಆಗೋಕೆ, ವಾಂತಿ ತಡಿಯಕ್ಕೆ, ಕ್ಯಾನ್ಸರ್ ಬರದೇ ಇರೋ ಹಾಗೆ ಕಾಪಾಡೋಕೆ, ಅಸ್ತಮಾ, ನೆಗಡಿ, ತಲೆನೋವು, ಕೆಮ್ಮು ಮತ್ತೆ ಬೇಧಿ ಇದೆಲ್ಲಕ್ಕೂ ರಾಮ ಬಾಣ. ಕಟ್ಟಿದ ಮೂಗಿಗೆ, ಗಂಟಲು ಅಥವಾ ಶ್ವಾಸಾಕೋಶದ ತೊಂದರೆಗೆ ಮತ್ತು ಅಲರ್ಜಿ ಆಗದ ಹಾಗೆ ನೋಡಿಕೊಳ್ಳುತ್ತೆ. ಇನ್ನು ಗರ್ಭಿಣಿಯರಲ್ಲಿ ಬೆಳಗಿನ ಹೊತ್ತು ವಾಂತಿ ಆಗದ ಹಾಗೆ ನೋಡಿಕೊಳ್ಳುತ್ತೆ. ಅಲ್ಸರ್ ನಿವಾರಿಸಿ ಲಿವರ್ ನ ಆರೋಗ್ಯ ಕಾಪಾಡುತ್ತೆ.
ನಮ್ಮ ಚರ್ಮದ ಮೇಲೆ ಪುದಿನ ಮೋಡಿ :-
ಚರ್ಮದ ಮೇಲೆ ಹಚ್ಚೋಕೆ ಹಸಿದು, ಒಣಗಿದ್ದು, ರುಬ್ಬಿದ್ದು ಅಥವಾ ಎಣ್ಣೆ ರೂಪದಲ್ಲಿ ಬಳಸಿ ಚರ್ಮದ ಕಾಂತಿ ಹೆಚ್ಚಿಸ ಬಹುದು. ಚರ್ಮದ ಸುಕ್ಕು, ಕಪ್ಪು ಕಲೆ, ಕಣ್ಣಿನ ಸುತ್ತ ಕಪ್ಪು ಬಣ್ಣ , ಮೊಡವೆ ಎಲ್ಲಕ್ಕೂ ಬಳಸಬಹುದು. ಹಾಗಾಗೀನೆ ಕ್ಲೆನ್ಸಿಂಗ್ ಲೋಷನ್ಗಳಲ್ಲಿ ಇದನ್ನ ಬಳಸ್ತಾರೆ. ಇದರಿಂದ ಹಲ್ಲುಜ್ಜಿದರೆ ಹಲ್ಲು ಬಿಳಿಯೂ ಆಗುತ್ತೆ, ಬಾಯ್ವಾಸನೆನೂ ದೂರ ಆಗುತ್ತೆ. ಹಲ್ಲು ಹಾಳಾಗದ ಹಾಗೆ ನೋಡಿಕೊಂಡು, ನಾಲಿಗೇನ ಸ್ವಚ್ಚಗೊಳಿಸುತ್ತೆ. ಬಾಯಲ್ಲಿ ಬ್ಯಾಕ್ಟೀರಿಯಾ ಬೆಳೆಯದ ಹಾಗೆ ನೋಡಿಕೊಳ್ಳುತ್ತೆ. ಅದಕ್ಕೇ ಟೂತ್ ಪೇಸ್ಟ್, ಚ್ಯುಯಿಂಗ್ ಗಮ್ ಗಳಲ್ಲಿ ಇದನ್ನ ಬಳಸ್ತಾರೆ.
ಅಡಿಗೆ ಉಪಯೋಗದಲ್ಲಿ :-
ಇದರಲ್ಲಿ ಪುದೀನ ಚಟ್ನಿ, ಪುದೀನ ಮೊಸರು ಬಜ್ಜಿ, ಪುದೀನ ರೈಸ್, ಜಲ್ ಜೀರಾ, ಪುದೀನ ಮಜ್ಜಿಗೆ ಮತ್ತಿನ್ನೂ ಏನೇನೋ ರುಚಿರುಚಿಯಾಗಿ ಮಾಡ್ಕೊಂಡು ತಿನ್ಬೋದು.
ನಮಗೆ ಗೊತ್ತಿಲ್ಲದ ಇನ್ನೂ ಕೆಲುವು ಉಪಯೋಗಗಳು ಎಲ್ಲಿವೆ ನೋಡಿ !
*ಶೀತ ಆಗಿ ಗಂಟಲು ನೋವು ಬಂದಿದ್ದರೆ, ಅದಕ್ಕೆ ಪುದೀನ ರಸದ ಜೊತೆ ಉಪ್ಪು ಬೆರೆಸಿ ಗಾರ್ಗಲ್ ಮಾಡಿ.
*ದಿನಕ್ಕೆ ಎರಡರಿಂದ ಮೂರು ಸರ್ತಿ ಪುದೀನ ಟೀ ಕುಡಿದರೆ ಅಜೀರ್ಣ ಮತ್ತು ಶೀತ ಕಡಿಮೆ ಆಗುತ್ತೆ.
*ಪುದೀನ ಜ್ಯೂಸ್ ಜೊತೆ ಅಷ್ಟೇಪ್ರಮಾಣ ಜೇನು ಹಾಕಿ ಕುಡಿಯೋದ್ರಿಂದ ಅಸಿಡಿಟಿ ಹಾಗು ವಾಂತಿ ಗುಣ ಆಗುತ್ತೆ.
*ಊಟಕ್ಕೆಮುಂಚೆ ಮತ್ತು ಊಟ ಆದ್ಮೇಲೆ ಪುದೀನ ಎಲೆ ತಿನ್ನೋದ್ರಿಂದ ಬಾಯಿ ವಾಸನೆ ಬರಲ್ಲ.
*ಪುದೀನ ಪೇಸ್ಟ್ ಗೆ ಅರಿಶಿಣ ಹಾಕಿ ಮುಖಕ್ಕೆ ಹಚ್ಚೋದ್ರಿಂದಮೊಡವೆ ಕಡಿಮೆ ಆಗುತ್ತೆ.
*ಪುದೀನ ಜ್ಯೂಸ್ ಗೆ ಅರ್ಧ ಚಮಚ ಶುಂಠಿ, ಸ್ವಲ್ಪ ನಿಂಬೆರಸ ಮತ್ತುಜೇನು ಸೇರಿಸಿ 3 ದಿನ ಕುಡಿದರೆ, ವಾಂತಿ ಪೂರ್ತಿ ವಾಸಿ ಆಗುತ್ತೆ.
ನೋಡಿದರಲ್ಲ ಮನೆ ಮುಂದೆ ಸಿಗೋ ಪುದೀನಾ ಸೊಪ್ಪಿಂದ ಎಷ್ಟೆಲ್ಲಾ ಉಪಯೋಗ ಇದೆ ಅಂತಾ? ನೀವಿದನ್ನ ಹೆಂಗೆ ಉಪಯೋಗಿಸ್ತೀರ ಅಂತ ಯೋಚ್ನೆ ಮಾಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜರ್ಮನ್ ಶೆಫರ್ಡ್: ಜರ್ಮನಿಯಲ್ಲಿ ಹುಟ್ಟಿದ ಮಧ್ಯಮದಿಂದ ದೊಡ್ಡ ಗಾತ್ರದ ಕೆಲಸ ಮಾಡುವ ನಾಯಿಯ ತಳಿಯಾಗಿದೆ. ಇಂಗ್ಲಿಷ್ ಭಾಷೆಯಲ್ಲಿ, ತಳಿಯ ಅಧಿಕೃತವಾಗಿ ಗುರುತಿಸಲ್ಪಟ್ಟ ಹೆಸರು ಜರ್ಮನ್ ಶೆಫರ್ಡ್ ಡಾಗ್ (ಜಿಎಸ್ಡಿ). ಈ ತಳಿಯನ್ನು ಅಧಿಕೃತವಾಗಿ ಯುಕೆ ನಲ್ಲಿ ಅಲ್ಸಟಿಯನ್ ಎಂದು ಕರೆಯಲಾಗುತ್ತಿತ್ತು, ಮೊದಲ ವಿಶ್ವಯುದ್ಧದ ನಂತರ 1977 ರವರೆಗೆ ಅದರ ಹೆಸರನ್ನು ಜರ್ಮನ್ ಶೆಫರ್ಡ್ ಎಂದು ಬದಲಾಯಿಸಲಾಯಿತು. ಅದರ ಪ್ರಾಚೀನ, ತೋಳದ ತರಹದ ನೋಟದ ಹೊರತಾಗಿಯೂ, ಜರ್ಮನ್ ಶೆಫರ್ಡ್ ತುಲನಾತ್ಮಕವಾಗಿ ಆಧುನಿಕ ತಳಿಯ ನಾಯಿಯಾಗಿದ್ದು, ಅವುಗಳ ಮೂಲವು 1899…
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದೆ.
ಮಂಡ್ಯ, ಮೇ 22: ತೀವ್ರ ಜಿದ್ದಾಜಿದ್ದಿನ ಕದನ ನಡೆಯುತ್ತಿರುವ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಮತ್ತು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಡುವಿನ ಪೈಪೋಟಿ ಕುತೂಹಲ ಕೆರಳಿಸಿದೆ. ಒಂದು ಸುತ್ತಿನ ಎಣಿಕೆಯಲ್ಲಿ ನಿಖಿಲ್ ಮುನ್ನಡೆ ಪಡೆದುಕೊಂಡರೆ ಸುಮಲತಾ ಮತ್ತೊಂದು ಸುತ್ತಿನಲ್ಲಿ ಬಲ ಪ್ರದರ್ಶನ ಮಾಡುತ್ತಿದ್ದಾರೆ. ಪ್ರಸ್ತುತ ಸುಮಲತಾ 40 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಇನ್ನೂ 12 ಸುತ್ತಿನ ಮತ ಎಣಿಕೆ ಬಾಕಿ ಇರುವುದರಿಂದ, ಸಂಪೂರ್ಣ ಚಿತ್ರಣವೇ ಬದಲಾಗುವ…
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಾಸನಕ್ಕೆ ಮೊದಲ ಸ್ಥಾನ ಬಂದಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾರಣ ಯಾರೆಂಬುವುದಕ್ಕೆ ಸಚಿವ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರು ಪ್ರತಿಕ್ರಿಯಿಸಿದ್ದಾರೆ. ಇತ್ತಿಚೆಗಷ್ಟೇ ಬಂದ sslc ಫಲಿತಾಂಶದಲ್ಲಿ ಹಾಸನ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿತ್ತು. ಇದಕ್ಕೆ ಸರ್ಕಾರದ ನೀತಿಗಳೇ ಕಾರಣವಾಗಿದ್ದು, ನನ್ನ ಪತ್ನಿ ಜಿಲ್ಲಾ ಪಂಚಾಯಿತಿ ಶಿಕ್ಷಣಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಪ್ರಯತ್ನ ಕೂಡ ಸಫಲವಾಗಿದೆ. ಇದರಲ್ಲಿ ಜಿಲಾಧಿಕಾರಿಯಾಗಿದ್ದ ರೋಹಿಣಿ ಸಿಂಧುರಿಯವರ ಪಾತ್ರ ಏನಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಇತ್ತೀಚೆಗೆ ಹೇಳಿದ್ದರು….
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಎಷ್ಟು ಹೊಗಳಿದರೂ ಕಡಿಮೆಯೇ. ಅವರು ನಟ ಎನ್ನುವುದಕ್ಕಿಂತ ಒಂದೊಳ್ಳೆ ಮನಸ್ಸಿರುವ ವ್ಯಕ್ತಿ ಎಂದರೂ ತಪ್ಪಿಲ್ಲ. ಆದ್ದರಿಂದ ಅಭಿಮಾನಿಗಳ ಬಳಿ ಪ್ರೀತಿಯಿಂದ ಯಜಮಾನ, ಡಿ ಬಾಸ್, ಗಜ, ಯೋಧ, ದಚ್ಚು ಎಂದೆಲ್ಲಾ ಕರೆಸಿಕೊಳ್ಳುತ್ತಾರೆ.ಪ್ರಾಣಿ ಪಕ್ಷಿಗಳ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ದರ್ಶನ್, ಮೈಸೂರು ರಸ್ತೆಯಲ್ಲಿ ದೊಡ್ಡ ಫಾರಂ ಹೌಸ್ ಹೊಂದಿದ್ದಾರೆ. ಸ್ವಲ್ಪ ಬಿಡುವು ದೊರೆತರೆ ಸಾಕು ಫಾರಂ ಹೌಸ್ಗೆ ತೆರಳುವ ಅವರು, ಪ್ರೀತಿಯ ಪ್ರಾಣಿಗಳೊಂದಿಗೆ ಕಾಲ ಕಳೆಯುತ್ತಾರೆ. ಫಾರಂಹೌಸ್ನಲ್ಲಿ ಪ್ರಾಣಿಗಳಿಗಾಗಿ ಹುಲ್ಲು ಕತ್ತರಿಸುತ್ತಾರೆ,…
ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ