News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಮಳೆಗಾಲದಲ್ಲಿ ಬರುವ ರೋಗಗಳು, ಅವುಗಳ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ತಿಳಿಯಲು ಈ ಲೇಖನ ಓದಿ…

1730

ಈಗಾಗಲೇ ಮಳೆಗಾಲ ಪ್ರಾರಂಭವಾಗಿದೆ. ಮಳೆಗಾಲದಲ್ಲಿ ಹಲವು ರೋಗಾಣುಗಳ ಚಟುವಟಿಕೆ ಹೆಚ್ಚು. ಇದರೊಂದಿಗೆ ನಮ್ಮ ದೇಹದಲ್ಲಿ ಜೀರ್ಣಕ್ರಿಯೆಯ ಶಕ್ತಿಯೂ ಕಡಿಮೆಯಾಗಿ ರೋಗಗಳಿಗೆ, ವೈರಾಣು ಜ್ವರಗಳಿಗೆ ಕಾರಣವಾಗುತ್ತದೆ.

ಈ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಕಾಡುವ ರೋಗಗಳು, ಅವುಗಳ ಮುನ್ನೆಚ್ಚರಿಕಾ ಕ್ರಮಗಳೇನು ಎಂಬ ಬಗ್ಗೆ ವಿವರಗಳು ಇಲ್ಲಿವೆ :-

ಮಲೇರಿಯಾ :-

ಮುಂಗಾರು ಸಂದರ್ಭದಲ್ಲಿ ಅತೀ ಸಾಮಾನ್ಯವಾಗಿ ಕಾಣಿಸುವ ಜ್ವರ, ಅಂದರೆ ಮಲೇರಿಯಾ ರೋಗ. ಹೆಣ್ಣು ಅನಾಫಿಲಿಸ್ ಸೊಳ್ಳೆ ಕಡಿತದಿಂದಾಗಿ ಈ ಜ್ವರ ಹಬ್ಬುತ್ತದೆ. ಹೆಚ್ಚಾಗಿ ನೀರು ನಿಂತಿರುವ ಸ್ಥಳಗಳು ಸೊಳ್ಳೆಗಳ ಆವಾಸ ಸ್ಥಾನವಾಗಿರುತ್ತದೆ.

ಪ್ಲಾಸ್ಮೋಡಿಯಂ ಜಾತಿಗೆ ಸೇರಿದ ಪ್ರೊಟೊಸೋವನ್ ಪರಾವಲಂಬಿಯ ಮೂಲಕ ಈ ರೋಗಕ್ಕೆ ಕಾರಣ. ಮಲೇರಿಯಾ ಜ್ವರ ಸಾಮಾನ್ಯ ಜ್ವರದಂತೆಯೇ ಕಾಣಿಸಿಕೊಳ್ಳಬಹುದು. ಆದರೆ ಬಳಿಕ ತೀವ್ರ ರೀತಿಯ ಜ್ವರ ಇರುತ್ತದೆ. ಮೈಕೈ ನೋವು, ತಲೆನೋವು, ತೀವ್ರ ಸುಸ್ತು ಇತ್ಯಾದಿ ಸಾಮಾನ್ಯ. ಇದಕ್ಕಾಗಿ ಸೂಕ್ತ ರಕ್ತ ಪರೀಕ್ಷೆಯೊಂದಿಗೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು.

ಮುನ್ನೆಚ್ಚರಿಕೆ ಏನು:-

ಮಲೇರಿಯಾ ರೋಗಾಣು ಕೇವಲ ಅನಾಫಿಲಿಸ್ ಹೆಣ್ಣು ಸೊಳ್ಳೆಗಳ ಮೂಲಕ ಮಾತ್ರ ಹರಡುತ್ತದೆ. ಆದ್ದರಿಂದ ಸೊಳ್ಳೆ ಕಡಿತವಾಗದಂತೆ ನೆಟ್ ಹಾಕುವುದು, ಮೈ ಪೂರ್ತಿ ಬಟ್ಟೆ ತೊಟ್ಟುಕೊಳ್ಳುವುದು ಮಾಡಬೇಕು, ಮನೆ ಸುತ್ತ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಅಗತ್ಯವಿದ್ದೆಡೆ ಔಷದ ಸಿಂಪಡಣೆ ಮಾಡಬೇಕು. ಒಂದು ವೇಳೆ ಜ್ವರ ತೀವ್ರವಾದಲ್ಲಿ ಕೂಡಲೇ ವೈದ್ಯರನ್ನು ಕಾಣಬೇಕು. ರೋಗಿಗೆ ಸಂಪೂರ್ಣ ವಿಶ್ರಾಂತಿಯೂ ಅಗತ್ಯ.

ಡೆಂಗ್ಯೂ:-


ಮಳೆಗಾಲದಲ್ಲಿ ಸಾಮಾನ್ಯ ಜ್ವರ. ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುವುದರಿಂದ ನಮ್ಮ ದೇಹ ಬಹುಬೇಗ ಈ ವೈರಾಣು ಜ್ವರಕ್ಕೆ ತುತ್ತಾಗುವ ಸಾಧ್ಯತೆ ಹೆಚ್ಚು. ಈಡಿಸ್ ಈಜಿಪ್ಟಿ ಎಂಬ ಸೊಳ್ಳೆ ಕಚ್ಚುವುದರಿಂದ ಈ ಜ್ವರ ಹಬ್ಬುತ್ತದೆ.

ಈ ಸೊಳ್ಳೆ ಹಗಲಲ್ಲೇ ಕಚ್ಚುತ್ತದೆ. ಜನ ಸಂಚಾರ ಹಗಲು ಹೆಚ್ಚಾಗುವುದರಿಂದ ವೇಗವಾಗಿ ಜ್ವರ ಹಬ್ಬುವುದಕ್ಕೂ ಕಾರಣವಾಗುತ್ತದೆ. ತೀವ್ರ ಮೈ,ಕೈ ನೋವು, ಬೆನ್ನು ನೋವು, ವಾಂತಿ-ಭೇದಿ, ನಿಶ್ಯಕ್ತಿ ಇತ್ಯಾದಿ ಕಾಣಬಹುದು.

ಈ ಜ್ವರದ ಆರಂಭದಲ್ಲಿ ಶೀತ,ಕೆಮ್ಮು ಇರುವುದಿಲ್ಲ. ಕಣ್ಣು ಕೆಂಪಾದ ಲಕ್ಷಣ, ವಾಂತಿ ಇತ್ಯಾದಿ ಆದರೆ ಕೂಡಲೇ ವೈದ್ಯರನ್ನು ಕಾಣಬೇಕು. ಜ್ವರ ತಗುಲಿ ಹೆಚ್ಚಾದರೆ, ರಕ್ತದ ಕಣಗಳು ಕಡಿಮೆಯಾಗುತ್ತದೆ. ಬಿಳಿ ರಕ್ತಕಣ ಕಡಿಮೆಯಾಗಿ ರೋಗ ನಿರೋಧಕ ಶಕ್ತಿ ಕುಂದುತ್ತದೆ. ಇದರೊಂದಿಗೆ ಇತರ ಆರೋಗ್ಯ ಸಮಸ್ಯೆ ಇದ್ದರೆ ಸಾವಿಗೆ ಕಾರಣವಾಗುತ್ತದೆ.

ಮುನ್ನೆಚ್ಚರಿಕೆಯೇನು:-

ನಿಂತ ನೀರಲ್ಲಿ ಈ ಸೊಳ್ಳೆಗಳು ಸಂತಾನೋತ್ಪತ್ತಿ ಮಾಡುತ್ತವೆ. ಆದ್ದರಿಂದ ಔಷದಿ, ಸೀಮೆ ಎಣ್ಣೆ ಸಿಂಪಡಣೆ, ಹೊಗೆ ಹಾಕಿ ಸೊಳ್ಳೆಗಳ ಉಪಟಳ ಕಡಿಮೆ ಮಾಡುವುದು, ಮೈಮುಚ್ಚಿಕೊಳ್ಳುವ ಬಟ್ಟೆ ತೊಡುವುದು, ನೀಲಗಿರಿ ಸಿಟ್ರೊಟೊರ ತೈಲವನ್ನು ಮೈಗೆ ಹಚ್ಚಿಕೊಳ್ಳುವುದರಿಂದ ಸೊಳ್ಳೆ ಕಡಿತದಿಂದ ಪಾರಾಗಬಹುದು.

ವಿಷಮಶೀತ ಜ್ವರ


ಸಾಮಾನ್ಯವಾಗಿ ಟೈಫಾಯಿಡ್ ಎಂಬ ಹೆಸರಿನಿಂದ ಕರೆಯುವ ಈ ಜ್ವರ ಸಾಲ್ಮೊನೆಲ್ಲಾ ಎಂಟಾರಿಕಾ ಟೈಪೈ ಎನ್ನುವ ಬ್ಯಾಕ್ಟೀರಿಯಾದಿಂದ ಬರುತ್ತದೆ. ವಿಶ್ವಾದ್ಯಾಂತ ಈ ರೋಗ ಸಾಮಾನ್ಯವಾಗಿ ಕಂಡು ಬರುತ್ತದೆ.

ಮಳೆಗಾಲದಲ್ಲಿ ಈ ರೋಗ ಅತೀ ವೇಗವಾಗಿ ಹರಡುವ ಸಾಧ್ಯತೆ ಹೆಚ್ಚು. ಸೋಂಕಿರುವ ವ್ಯಕ್ತಿಯ ಮಲದಿಂದ ಕಲುಷಿತಗೊಂಡ ಆಹಾರ ಅಥವಾ ನೀರಿನ ಸೇವನೆಯಿಂದ ಈ ರೋಗ ಹಬ್ಬುತ್ತದೆ.

ರೋಗ ಬಾಧಿಸಿದ ವ್ಯಕ್ತಿಗೆ ಜ್ವರ, ಬೇಧಿ,ಗಂಟಲು ನೋವು, ಮೈಕೈ ನೋವು, ಇತ್ಯಾದಿಗಳು ಕಾಣಿಸಿಕೊಳ್ಳಬಹುದು. ಅಲ್ಲದೇ ಜ್ವರ ಶುರುವಾಗಿ ನಾಲ್ಕಾರು ದಿನಗಳಲ್ಲಿ ಮೈ ಮೇಲೆ ಕೆಂಪು ಕಲೆಗಳು ಕಾಣಿಸಿಕೊಳ್ಳುತ್ತದೆ. ರೋಗ ಲಕ್ಷಣ ಕಾಣಿಸಿಕೊಳ್ಳುತ್ತಿದಂತೆಯೇ ವೈದ್ಯರನ್ನು ಕಾಣಬೇಕು.

ಮುನ್ನೆಚ್ಚರಿಕೆ ಕ್ರಮವೇನು:-

ಆಹಾರವನ್ನು ತಯಾರಿಸಿ ಬಳಿಕ ಅದನ್ನು ಮುಚ್ಚಿಡಬೇಕು. ಕುದಿಸಿದ ನೀರನ್ನು ಕುಡಿಯುವುದು ಉತ್ತಮ. ಆಹಾರ ತಯಾರಿಸುವಾಗ ಶುಚಿತ್ವ ಕಾಯ್ದುಕೊಳ್ಳಬೇಕು.

ಚಿಕನ್‌ಗುನ್ಯಾ:-


ಈಡಿಸ್ ಅಲ್ಪೋಪಿಕ್ಟಸ್ ಸೊಳ್ಳೆಗಳಿಂದ ಈ ರೋಗದ ಚಿಕನ್‌ಗುನ್ಯಾ ವೈರಸ್ ಹಬ್ಬುತ್ತದೆ. ಇದು ಪ್ರಾಣಿಗಳಿಂದ ಬರುವ ಕಾಯಿಲೆಯಾಗಿದ್ದು, ತೀವ್ರ ತರವಾದ ಗಂಟುನೋವು, ಜ್ವರ ಇತ್ಯಾದಿಗಳು ಕಾಣಿಸಿಕೊಳ್ಳುತ್ತವೆ. ಹಗಲಲ್ಲೇ ಈ ಸೊಳ್ಳೆಗಳು ಕಚ್ಚುತ್ತವೆ. ಜ್ವರ ವಾಸಿಯಾದ ಮೇಲೂ ವಾರಗಳ ತನಕ ಗಂಟು ನೋವುಗಳು ಇರಬಹುದು.

ಮುನ್ನೆಚ್ಚರಿಕೆ ಏನು:-

ಮನೆ ಸುತ್ತ ಸೊಳ್ಳೆಗಳ ಆವಾಸ ಸ್ಥಾನ ಸೃಷ್ಟಿಯಾಗಲು ಬಿಡಲೇಬಾರದು. ಕೊಳಚೆ ಪ್ರದೇಶದಿಂದ ದೂರವಿರಬೇಕು. ಮೈತುಂಬ ಬಟ್ಟೆ, ನಿಲಗಿರಿ ಎಣ್ಣೆ ಮೈಗೆ ಹಚ್ಚುವುದರಿಂದ ಸೊಳ್ಳೆ ಕಡಿತ ತಪ್ಪಿಸಿಕೊಳ್ಳಬಹುದು.

ಕಾಲರಾ:-


ಮಳೆಗಾಲದ ಮಾರಣಾಂತಿಕ ಕಾಯಲೆಯಾಗಿದ್ದು. ಕಲುಷಿತ ನೀರು, ಆಹಾರ ಸೇವನೆಯಿಂದ ಈ ರೋಗ ಕಾಣಿಸಿಕೊಳ್ಳುತ್ತದೆ. ತೀವ್ರ ಭೇದಿ ಇದರ ಸಾಮಾನ್ಯ ಲಕ್ಷಣ. ತೀವ್ರ ಜ್ವರವೂ ಕಾಣಿಸಿಕೊಳ್ಳಬಹುದು.

ಸೂಕ್ತ ಶೌಚಾಲಯ ಇಲ್ಲದಿರುವ ಸ್ಥಳಗಳಲ್ಲಿ ಈ ರೋಗ ಬಹುಬೇಗನೆ ಹಬ್ಬುತ್ತದೆ. ರೋಗಿಯಲ್ಲಿ ಸಾಮಾನ್ಯ ಜ್ವರ ಕಾಣಿಸಿಕೊಂಡು ಬಳಿಕ ಇದು ಪ್ರಾಣಾಂತಿಕವೇ ಆಗಬಹುದು. ಆದ್ದರಿಂದ ವೈದ್ಯರ ಭೇಟಿ ಅಗತ್ಯ.

ಮುನ್ನೆಚ್ಚರಿಕೆಯೇನು:-

ಕಾಲರಾ ಕಂಡುಬಂದಲ್ಲಿ 6 ತಿಂಗಳು ವೈದ್ಯಕೀಯ ನೆರವು ಬೇಕು. ಆಹಾರ, ನೀರಿನ ಬಗ್ಗೆ ಮುನ್ನೆಚ್ಚರಿಕೆ ಅಗತ್ಯ. ಬಯಲು ಶೌಚಾಲಯದಿಂದ ದೂರವಿರುವುದು ಒಳ್ಳೆಯದು.

ಕಾಮಾಲೆ:-
ಅರಸಿನ ಕಾಮಾಲೆ, ಅರಸಿನ ಮುಂಡಿಗೆ,ಕಾಮಾಲೆ ರೋಗ ಎಂಬ ಹೆಸರು ಜಾಂಡಿಸ್‌ಗಿದೆ. ದೇಹದಲ್ಲಿ ಬೈಲ್‌ರೂಬಿನ್ ಎಂಬ ಕಿತ್ತಳೆ ಬಣ್ಣದ ವಿಸರ್ಜನೆಯಾಗಬೇಕಾದ ವಸ್ತು ಅಗತ್ಯಕ್ಕಿಂತ ಹೆಚ್ಚು ಶೇಖರವಾಗಿ ದೇಹ ಹಳದಿ ಬಣ್ಣಕ್ಕೆ ತಿರುಗುತ್ತದೆ. ಪಿತ್ತಕೋಶಕ್ಕೆ ವೈರಾಣು ಸೊಂಕು ತಗಲುವುದರಿಂದ ಕಾಮಾಲೆ ಕಾಣಿಸಿಕೊಳ್ಳುತ್ತದೆ.

ಇದಕ್ಕೆ ಕಲುಷಿತ ನೀರು, ಆಹಾರ ಕಾರಣ, ಕಾಮಾಲೆ ರೋಗದಿಂದ ತೀವ್ರ ಬಳಲಿಕೆ, ವಾಂತಿ, ಪಿತ್ತಕೋಶದ ಸಮಸ್ಯೆ ಕಾಣಿಸಬಹುದು. ಅಲ್ಲದೇ ಇದು ಇತರ ದೈಹಿಕ ಸಮಸ್ಯೆಗಳಿಗೂ ಕಾರಣವಾಗಬಹುದು. ಆದ್ದರಿಂದ ರೋಗ ಲಕ್ಷಣ ಕಾಣಿಸುತ್ತಿದಂತೆ ವೈದ್ಯರನ್ನು ಕಂಡು ಸೂಕ್ತ ಚಿಕಿತ್ಸೆ ಅಗತ್ಯ. ಕಾಯಿಲೆ ನಿರ್ಲಕ್ಷಿಸಿ ತೀವ್ರವಾದರೆ ಪ್ರಾಣಕ್ಕೆ ಎರವಾಗಬಹುದು.

ಮುನ್ನೆಚ್ಚರಿಕೆ ಏನು:- ಕಲುಷಿತ ಆಹಾರ ಸೇವಿಸದೇ ಇರುವುದು, ಬಿಸಿ ನೀರನ್ನೇ ಸೇವಿಸುವುದು ಮಾಡಬೇಕು.

ಮೂಲ:

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಮತ್ತೆ ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ. ಮೋದಿಗೆ ಪತ್ರ ಬರೆದ ಸೋನಿಯಾ ಗಾಂಧಿ.

    ಇಂದು ಪೆಟ್ರೋಲ್ ಬೆಲೆ 55 ಪೈಸೆ ಹಾಗೂ ಡೀಸೆಲ್ 69 ಪೈಸೆ ಹೆಚ್ಚಳವಾಗಿದೆ. ಈ ಮೂಲಕ ಕೇವಲ 11 ದಿನಗಳಲ್ಲಿ ಪೆಟ್ರೋಲ್ ಬೆಲೆ 6 ರೂ. ಹಾಗೂ ಡೀಸೆಲ್ 6.49 ರೂ.ಗಳಷ್ಟು ಹೆಚ್ಚಳವಾಗಿದೆ. ಕಳೆದ 11 ದಿನಗಳಲ್ಲಿ ಪ್ರತಿ ದಿನ 20 ಪೈಸೆಯಿಂದ 80 ಪೈಸೆ ವರೆಗೂ ಪೆಟ್ರೋಲ್, ಡೀಸೆಲ್ ದರವನ್ನು ಹೆಚ್ಚಳ ಮಾಡಲಾಗಿದೆ. ಬೆಲೆ ಹೆಚ್ಚಳದಿಂದಾಗಿ ಜನ ಕಂಗಾಲಾಗಿದ್ದಾರೆ. ಮೊದಲೆ ಕೆಲಸ ಸರಿಯಾಗಿ ಸಿಗುತ್ತಿಲ್ಲ. ಕೆಲಸವಿದ್ದರೂ ಸಂಬಳ ಸರಿಯಾಗಿ ಬರುತ್ತಿಲ್ಲ. ಅಲ್ಲದೆ ಇನ್ನೊಂದೆಡೆ ಸಾರ್ವಜನಿಕ ಸಾರಿಗೆ…

  • ಸುದ್ದಿ

    ಇದು ಮೂಢನಂಬಿಕೆಯಲ್ಲ ಸತ್ಯ ಈ ಹಿಂದೂ ಆಚರಣೆಗಳ ಬೆನ್ನಿಗಿದೆ ವಿಜ್ಞಾನ ನೀವು ತಿಳಿಯಲೇಬೇಕು,.!

    ಹಿಂದೂ ಧರ್ಮದ ಹಲವಾರು ಆಚರಣೆಗಳು, ಸಂಪ್ರದಾಯಗಳನ್ನು ಮೂಢನಂಬಿಕೆಯೆಂದು ಜರಿಯುವವರು ಹಲವು. ಆದರೆ, ವಿಜ್ಞಾನ ಮುಂದುವರಿದಂತೆಲ್ಲ ಈ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆ ದೊರೆಯುತ್ತ ಹೋಗುತ್ತಿದೆ.ಈ ವೈಜ್ಞಾನಿಕ ಜ್ಞಾನವನ್ನೇ ಸಂಪ್ರದಾಯದ ಹೆಸರಿನಲ್ಲಿ ತಲೆಮಾರಿನಿಂದ ತಲೆಮಾರಿಗೆ ಹರಿಯಬಿಡಲಾಗಿದೆ ಸಾಮಾನ್ಯ ಜನರಿಗೆ ಈ ಆಚರಣೆಗಳ ಹಿಂದಿನ ವಿಜ್ಞಾನದ ಅರಿವು ಇಲ್ಲವಾದರೂ, ಅವರಿದನ್ನು ನಂಬಿಕೆಯ ತಳಹದಿ  ಮೇಲೆ ಸಾವಿರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅಂಥ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆಗಳನ್ನಿಲ್ಲಿ ಕೊಡಲಾಗಿದೆ. ನಾಣ್ಯಗಳನ್ನು ನದಿಗೆಸೆಯುವುದು : ನಾಣ್ಯಗಳನ್ನುದೇವಸ್ಥಾನದ ಸಮೀಪದ…

  • ಗ್ಯಾಜೆಟ್

    ಹುಷಾರ್!ನೀವು ಚೀನಾ ಮೊಬೈಲ್ ಬಳುಸುತ್ತಿದ್ದರೆ ತಪ್ಪದೆ ಈ ಲೇಖನಿ ಓದಿ…

    ಭಾರತವು ಚೀನಾದ ಒಪ್ಪೋ, ಷಿಯಾಮಿ, ಜಿಯೋನಿ, ಕಂಪನಿಗಳಿಗೆ ನೋಟಿಸ್ ನೀಡಿದೆ. ಮತ್ತು ಕೇಂದ್ರ ಸರ್ಕಾರವು , ಹ್ಯಾಕಿಂಗ್ ಭದ್ರತಾ ಫೀಚರ್`ಗಳ ಬಗ್ಗೆ ಕಂಪನಿಗಳಲ್ಲಿ ವಿವರಣೆ ಕೇಳಿದೆ.

  • inspirational

    ‘ಇಂದಿರಾ ಕ್ಯಾಂಟೀನ್​​ ಬದಲು ಅನ್ನಪೂರ್ಣ ಕ್ಯಾಂಟೀನ್​​ ಎಂದು ಹೆಸರಿಡಲು ಬಿಜೆಪಿ ಚಿಂತನೆ’…!

    ಬೆಂಗಳೂರು : ಸ್ಪೀಕರ್ ನಿರ್ಧಾರ ಅನುಮಾನಾಸ್ಪದ, ಪೂರ್ವಾಗ್ರಹ ಪೀಡಿತ ಯಾವುದೋ ಒತ್ತಡಕ್ಕೆ ಮಣಿದು ಸ್ಪೀಕರ್ ತೀರ್ಪು ಕೊಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ ರವಿ ಅವರು ಹೇಳಿದರು. ನಗರದ ಚಾನ್ಸರಿ ಪೆವಿಲಿಯನ್ ಹೊಟೇಲ್ ಬಳಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಹಳೇ ಋಣ ತೀರಿಸಲೇನೋ ಈ ತೀರ್ಪನ್ನು ರಮೇಶ್ ಕುಮಾರ್ ಅವರು ಕೊಟ್ಟಿದ್ದಾರೆ. ಸುಪ್ರೀಂಕೋರ್ಟ್​​ಗೆ ಈ ಪ್ರಕರಣ ಹೋಗಬಹುದು ಕೋರ್ಟ್​​ನಲ್ಲಿ ಅಂತಿಮ ತೀರ್ಮಾನ ಬರಲಿದೆ ಎಂದು ಅವರು ತಿಳಿಸಿದರು. ಇನ್ನು ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ…

  • ಸುದ್ದಿ

    ದೇಶದ ಎಲ್ಲಾ ವಾಹನ ಸವಾರರಿಗೊಂದು ಸಂತೋಷದ ಸುದ್ದಿ..! ಇವತ್ತಿನಿಂದಲೇ ಜಾರಿಗೆ ತರಲಿದ್ದಾರೆ,.!!

    ದೇಶಾದ್ಯಂತಒಂದೇ ಮಾದರಿಯ ಡಿಎಲ್ ಹಾಗೂಆರ್‍ಸಿ ಕಾರ್ಡ್‍ಗಳನ್ನುವಿತರಿಸಲು ಕೇಂದ್ರ ರಸ್ತೆ ಸಾರಿಗೆಸಚಿವಾಲಯ ಮುಂದಾಗಿದೆ. ನೂತನ ಡಿಎಲ್ ಹಾಗೂಆರ್‍ಸಿ ಕಾರ್ಡ್‍ಗಳುಸ್ಮಾರ್ಟ್ ತಂತ್ರಜ್ಞಾನವನ್ನು ಹೊಂದಿದ್ದು, ಇವುಗಳು ಎಟಿಎಂ ಕಾರ್ಡ್‍ಗಳು ಕೆಲಸ ನಿರ್ವಹಿಸುವರೀತಿಯಲ್ಲೇ ಕಾರ್ಯ ನಿರ್ವಹಿಸಲಿವೆ. ಈಸಂಬಂಧ ಸಾರಿಗೆ ಆಯುಕ್ತ ಎನ್.ಶಿವಕುಮಾರ್ ಪ್ರತಿಕ್ರಿಯಿಸಿ,  ಆಗಸ್ಟ್ 1 ರಿಂದ  ನೋಂದಣಿಯಾಗುವ ಎಲ್ಲಾ ವಾಹನ ಸವಾರರಿಗೆ ಅನ್ವಯವಾಗಲಿದೆ.ಹಳೆಯ ವಾಹನಗಳ ಮಾಲೀಕರು ನವೀಕರಣಸಮಯದಲ್ಲಿ ಹೊಸ ಕಾರ್ಡ್ ಪಡೆದುಕೊಳ್ಳಬಹುದು. ಈ ಹೊಸ ಮಾದರಿ ಸ್ಮಾರ್ಟ್ಕಾರ್ಡ್ ಕ್ಯೂಆರ್ ಕೋಡ್ ಹಾಗೂಮೈಕ್ರೋಚಿಪ್ ಹೊಂದಿರಲಿದೆ. ಇದರಿಂದ ಟ್ರಾಫಿಕ್  ಪೊಲೀಸರು  ಸಂಬಂಧಿಸಿದ ವಿವರಗಳನ್ನು,ಸುಲಭವಾಗಿ ಮತ್ತು…

  • ಸಿನಿಮಾ

    ಇಲ್ಲಿದೆ ನೋಡಿ ಯಶ್ ರಾಧಿಕಾ ಪಂಡಿತ್ ರವರ ಮುದ್ದು ಮಗಳ ಫೋಟೋ…

    ನಟ ರಾಕಿಂಗ್ ಸ್ಟಾರ್ ಯಶ್ ರವರಿಗೆ ಅವರು ಅಂದುಕೊಂಡಂತೆ ಪತ್ನಿ ರಾಧಿಕಾ ಪಂಡಿತ್ ರವರಿಗೆ ಮುದ್ದಾದ ಹೆಣ್ಣು ಮಗು ಜನಿಸಿದೆ.ತಮ್ಮ ಮುದ್ದಿನ ಮಗಳು ಕೈ ಬೆರಳನ್ನು ಬಿಗಿದಪ್ಪಿದ್ದ ವೇಳೆ ಪುಳಗೊಂಡಿರುವ ನಟ ಯಶ್, ತಮ್ಮ ಮನದಾಳದ ಮಾತನ್ನು ಬಿಚ್ಚಿಟ್ಟಿದ್ದಾರೆ. ತಮ್ಮ ಆಸೆಯಂತೆ ಹೆಣ್ಣು ಮಗುವಿಗೆ ತಂದೆಯಾದ ಯಶ್ ಮಗಳ ಬಗ್ಗೆ, “ನನ್ನ ಬೆರಳುಗಳನ್ನು ಬಿಗಿಹಿಡಿದು ತಂದೆತನದೆಡೆಗೆ ದಾರಿ ತೋರಿಸಿದ ನನ್ನ ದೇವತೆಯ ಪುಟ್ಟಹಸ್ತ! ಯಾರನ್ನಾದರೂ ಕನಿಷ್ಠ ನೋಡದೆಯೇ ಪ್ರೀತಿಸುವುದು ಒಂದು ಅದ್ಭುತ ಭಾವ. ಇನ್ನು ಅವಳನ್ನು ಕಣ್ತುಂಬಿಕೊಂಡ…