ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಾಗಲೇ ಮಳೆಗಾಲ ಪ್ರಾರಂಭವಾಗಿದೆ. ಮಳೆಗಾಲದಲ್ಲಿ ಹಲವು ರೋಗಾಣುಗಳ ಚಟುವಟಿಕೆ ಹೆಚ್ಚು. ಇದರೊಂದಿಗೆ ನಮ್ಮ ದೇಹದಲ್ಲಿ ಜೀರ್ಣಕ್ರಿಯೆಯ ಶಕ್ತಿಯೂ ಕಡಿಮೆಯಾಗಿ ರೋಗಗಳಿಗೆ, ವೈರಾಣು ಜ್ವರಗಳಿಗೆ ಕಾರಣವಾಗುತ್ತದೆ.
ಈ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಕಾಡುವ ರೋಗಗಳು, ಅವುಗಳ ಮುನ್ನೆಚ್ಚರಿಕಾ ಕ್ರಮಗಳೇನು ಎಂಬ ಬಗ್ಗೆ ವಿವರಗಳು ಇಲ್ಲಿವೆ :-
ಮಲೇರಿಯಾ :-
ಮುಂಗಾರು ಸಂದರ್ಭದಲ್ಲಿ ಅತೀ ಸಾಮಾನ್ಯವಾಗಿ ಕಾಣಿಸುವ ಜ್ವರ, ಅಂದರೆ ಮಲೇರಿಯಾ ರೋಗ. ಹೆಣ್ಣು ಅನಾಫಿಲಿಸ್ ಸೊಳ್ಳೆ ಕಡಿತದಿಂದಾಗಿ ಈ ಜ್ವರ ಹಬ್ಬುತ್ತದೆ. ಹೆಚ್ಚಾಗಿ ನೀರು ನಿಂತಿರುವ ಸ್ಥಳಗಳು ಸೊಳ್ಳೆಗಳ ಆವಾಸ ಸ್ಥಾನವಾಗಿರುತ್ತದೆ.
ಪ್ಲಾಸ್ಮೋಡಿಯಂ ಜಾತಿಗೆ ಸೇರಿದ ಪ್ರೊಟೊಸೋವನ್ ಪರಾವಲಂಬಿಯ ಮೂಲಕ ಈ ರೋಗಕ್ಕೆ ಕಾರಣ. ಮಲೇರಿಯಾ ಜ್ವರ ಸಾಮಾನ್ಯ ಜ್ವರದಂತೆಯೇ ಕಾಣಿಸಿಕೊಳ್ಳಬಹುದು. ಆದರೆ ಬಳಿಕ ತೀವ್ರ ರೀತಿಯ ಜ್ವರ ಇರುತ್ತದೆ. ಮೈಕೈ ನೋವು, ತಲೆನೋವು, ತೀವ್ರ ಸುಸ್ತು ಇತ್ಯಾದಿ ಸಾಮಾನ್ಯ. ಇದಕ್ಕಾಗಿ ಸೂಕ್ತ ರಕ್ತ ಪರೀಕ್ಷೆಯೊಂದಿಗೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು.
ಮುನ್ನೆಚ್ಚರಿಕೆ ಏನು:-
ಮಲೇರಿಯಾ ರೋಗಾಣು ಕೇವಲ ಅನಾಫಿಲಿಸ್ ಹೆಣ್ಣು ಸೊಳ್ಳೆಗಳ ಮೂಲಕ ಮಾತ್ರ ಹರಡುತ್ತದೆ. ಆದ್ದರಿಂದ ಸೊಳ್ಳೆ ಕಡಿತವಾಗದಂತೆ ನೆಟ್ ಹಾಕುವುದು, ಮೈ ಪೂರ್ತಿ ಬಟ್ಟೆ ತೊಟ್ಟುಕೊಳ್ಳುವುದು ಮಾಡಬೇಕು, ಮನೆ ಸುತ್ತ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಅಗತ್ಯವಿದ್ದೆಡೆ ಔಷದ ಸಿಂಪಡಣೆ ಮಾಡಬೇಕು. ಒಂದು ವೇಳೆ ಜ್ವರ ತೀವ್ರವಾದಲ್ಲಿ ಕೂಡಲೇ ವೈದ್ಯರನ್ನು ಕಾಣಬೇಕು. ರೋಗಿಗೆ ಸಂಪೂರ್ಣ ವಿಶ್ರಾಂತಿಯೂ ಅಗತ್ಯ.
ಡೆಂಗ್ಯೂ:-

ಮಳೆಗಾಲದಲ್ಲಿ ಸಾಮಾನ್ಯ ಜ್ವರ. ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುವುದರಿಂದ ನಮ್ಮ ದೇಹ ಬಹುಬೇಗ ಈ ವೈರಾಣು ಜ್ವರಕ್ಕೆ ತುತ್ತಾಗುವ ಸಾಧ್ಯತೆ ಹೆಚ್ಚು. ಈಡಿಸ್ ಈಜಿಪ್ಟಿ ಎಂಬ ಸೊಳ್ಳೆ ಕಚ್ಚುವುದರಿಂದ ಈ ಜ್ವರ ಹಬ್ಬುತ್ತದೆ.
ಈ ಸೊಳ್ಳೆ ಹಗಲಲ್ಲೇ ಕಚ್ಚುತ್ತದೆ. ಜನ ಸಂಚಾರ ಹಗಲು ಹೆಚ್ಚಾಗುವುದರಿಂದ ವೇಗವಾಗಿ ಜ್ವರ ಹಬ್ಬುವುದಕ್ಕೂ ಕಾರಣವಾಗುತ್ತದೆ. ತೀವ್ರ ಮೈ,ಕೈ ನೋವು, ಬೆನ್ನು ನೋವು, ವಾಂತಿ-ಭೇದಿ, ನಿಶ್ಯಕ್ತಿ ಇತ್ಯಾದಿ ಕಾಣಬಹುದು.
ಈ ಜ್ವರದ ಆರಂಭದಲ್ಲಿ ಶೀತ,ಕೆಮ್ಮು ಇರುವುದಿಲ್ಲ. ಕಣ್ಣು ಕೆಂಪಾದ ಲಕ್ಷಣ, ವಾಂತಿ ಇತ್ಯಾದಿ ಆದರೆ ಕೂಡಲೇ ವೈದ್ಯರನ್ನು ಕಾಣಬೇಕು. ಜ್ವರ ತಗುಲಿ ಹೆಚ್ಚಾದರೆ, ರಕ್ತದ ಕಣಗಳು ಕಡಿಮೆಯಾಗುತ್ತದೆ. ಬಿಳಿ ರಕ್ತಕಣ ಕಡಿಮೆಯಾಗಿ ರೋಗ ನಿರೋಧಕ ಶಕ್ತಿ ಕುಂದುತ್ತದೆ. ಇದರೊಂದಿಗೆ ಇತರ ಆರೋಗ್ಯ ಸಮಸ್ಯೆ ಇದ್ದರೆ ಸಾವಿಗೆ ಕಾರಣವಾಗುತ್ತದೆ.
ಮುನ್ನೆಚ್ಚರಿಕೆಯೇನು:-
ನಿಂತ ನೀರಲ್ಲಿ ಈ ಸೊಳ್ಳೆಗಳು ಸಂತಾನೋತ್ಪತ್ತಿ ಮಾಡುತ್ತವೆ. ಆದ್ದರಿಂದ ಔಷದಿ, ಸೀಮೆ ಎಣ್ಣೆ ಸಿಂಪಡಣೆ, ಹೊಗೆ ಹಾಕಿ ಸೊಳ್ಳೆಗಳ ಉಪಟಳ ಕಡಿಮೆ ಮಾಡುವುದು, ಮೈಮುಚ್ಚಿಕೊಳ್ಳುವ ಬಟ್ಟೆ ತೊಡುವುದು, ನೀಲಗಿರಿ ಸಿಟ್ರೊಟೊರ ತೈಲವನ್ನು ಮೈಗೆ ಹಚ್ಚಿಕೊಳ್ಳುವುದರಿಂದ ಸೊಳ್ಳೆ ಕಡಿತದಿಂದ ಪಾರಾಗಬಹುದು.
ವಿಷಮಶೀತ ಜ್ವರ

ಸಾಮಾನ್ಯವಾಗಿ ಟೈಫಾಯಿಡ್ ಎಂಬ ಹೆಸರಿನಿಂದ ಕರೆಯುವ ಈ ಜ್ವರ ಸಾಲ್ಮೊನೆಲ್ಲಾ ಎಂಟಾರಿಕಾ ಟೈಪೈ ಎನ್ನುವ ಬ್ಯಾಕ್ಟೀರಿಯಾದಿಂದ ಬರುತ್ತದೆ. ವಿಶ್ವಾದ್ಯಾಂತ ಈ ರೋಗ ಸಾಮಾನ್ಯವಾಗಿ ಕಂಡು ಬರುತ್ತದೆ.
ಮಳೆಗಾಲದಲ್ಲಿ ಈ ರೋಗ ಅತೀ ವೇಗವಾಗಿ ಹರಡುವ ಸಾಧ್ಯತೆ ಹೆಚ್ಚು. ಸೋಂಕಿರುವ ವ್ಯಕ್ತಿಯ ಮಲದಿಂದ ಕಲುಷಿತಗೊಂಡ ಆಹಾರ ಅಥವಾ ನೀರಿನ ಸೇವನೆಯಿಂದ ಈ ರೋಗ ಹಬ್ಬುತ್ತದೆ.
ರೋಗ ಬಾಧಿಸಿದ ವ್ಯಕ್ತಿಗೆ ಜ್ವರ, ಬೇಧಿ,ಗಂಟಲು ನೋವು, ಮೈಕೈ ನೋವು, ಇತ್ಯಾದಿಗಳು ಕಾಣಿಸಿಕೊಳ್ಳಬಹುದು. ಅಲ್ಲದೇ ಜ್ವರ ಶುರುವಾಗಿ ನಾಲ್ಕಾರು ದಿನಗಳಲ್ಲಿ ಮೈ ಮೇಲೆ ಕೆಂಪು ಕಲೆಗಳು ಕಾಣಿಸಿಕೊಳ್ಳುತ್ತದೆ. ರೋಗ ಲಕ್ಷಣ ಕಾಣಿಸಿಕೊಳ್ಳುತ್ತಿದಂತೆಯೇ ವೈದ್ಯರನ್ನು ಕಾಣಬೇಕು.
ಮುನ್ನೆಚ್ಚರಿಕೆ ಕ್ರಮವೇನು:-
ಆಹಾರವನ್ನು ತಯಾರಿಸಿ ಬಳಿಕ ಅದನ್ನು ಮುಚ್ಚಿಡಬೇಕು. ಕುದಿಸಿದ ನೀರನ್ನು ಕುಡಿಯುವುದು ಉತ್ತಮ. ಆಹಾರ ತಯಾರಿಸುವಾಗ ಶುಚಿತ್ವ ಕಾಯ್ದುಕೊಳ್ಳಬೇಕು.
ಚಿಕನ್ಗುನ್ಯಾ:-

ಈಡಿಸ್ ಅಲ್ಪೋಪಿಕ್ಟಸ್ ಸೊಳ್ಳೆಗಳಿಂದ ಈ ರೋಗದ ಚಿಕನ್ಗುನ್ಯಾ ವೈರಸ್ ಹಬ್ಬುತ್ತದೆ. ಇದು ಪ್ರಾಣಿಗಳಿಂದ ಬರುವ ಕಾಯಿಲೆಯಾಗಿದ್ದು, ತೀವ್ರ ತರವಾದ ಗಂಟುನೋವು, ಜ್ವರ ಇತ್ಯಾದಿಗಳು ಕಾಣಿಸಿಕೊಳ್ಳುತ್ತವೆ. ಹಗಲಲ್ಲೇ ಈ ಸೊಳ್ಳೆಗಳು ಕಚ್ಚುತ್ತವೆ. ಜ್ವರ ವಾಸಿಯಾದ ಮೇಲೂ ವಾರಗಳ ತನಕ ಗಂಟು ನೋವುಗಳು ಇರಬಹುದು.
ಮುನ್ನೆಚ್ಚರಿಕೆ ಏನು:-
ಮನೆ ಸುತ್ತ ಸೊಳ್ಳೆಗಳ ಆವಾಸ ಸ್ಥಾನ ಸೃಷ್ಟಿಯಾಗಲು ಬಿಡಲೇಬಾರದು. ಕೊಳಚೆ ಪ್ರದೇಶದಿಂದ ದೂರವಿರಬೇಕು. ಮೈತುಂಬ ಬಟ್ಟೆ, ನಿಲಗಿರಿ ಎಣ್ಣೆ ಮೈಗೆ ಹಚ್ಚುವುದರಿಂದ ಸೊಳ್ಳೆ ಕಡಿತ ತಪ್ಪಿಸಿಕೊಳ್ಳಬಹುದು.
ಕಾಲರಾ:-

ಮಳೆಗಾಲದ ಮಾರಣಾಂತಿಕ ಕಾಯಲೆಯಾಗಿದ್ದು. ಕಲುಷಿತ ನೀರು, ಆಹಾರ ಸೇವನೆಯಿಂದ ಈ ರೋಗ ಕಾಣಿಸಿಕೊಳ್ಳುತ್ತದೆ. ತೀವ್ರ ಭೇದಿ ಇದರ ಸಾಮಾನ್ಯ ಲಕ್ಷಣ. ತೀವ್ರ ಜ್ವರವೂ ಕಾಣಿಸಿಕೊಳ್ಳಬಹುದು.
ಸೂಕ್ತ ಶೌಚಾಲಯ ಇಲ್ಲದಿರುವ ಸ್ಥಳಗಳಲ್ಲಿ ಈ ರೋಗ ಬಹುಬೇಗನೆ ಹಬ್ಬುತ್ತದೆ. ರೋಗಿಯಲ್ಲಿ ಸಾಮಾನ್ಯ ಜ್ವರ ಕಾಣಿಸಿಕೊಂಡು ಬಳಿಕ ಇದು ಪ್ರಾಣಾಂತಿಕವೇ ಆಗಬಹುದು. ಆದ್ದರಿಂದ ವೈದ್ಯರ ಭೇಟಿ ಅಗತ್ಯ.
ಮುನ್ನೆಚ್ಚರಿಕೆಯೇನು:-
ಕಾಲರಾ ಕಂಡುಬಂದಲ್ಲಿ 6 ತಿಂಗಳು ವೈದ್ಯಕೀಯ ನೆರವು ಬೇಕು. ಆಹಾರ, ನೀರಿನ ಬಗ್ಗೆ ಮುನ್ನೆಚ್ಚರಿಕೆ ಅಗತ್ಯ. ಬಯಲು ಶೌಚಾಲಯದಿಂದ ದೂರವಿರುವುದು ಒಳ್ಳೆಯದು.
ಕಾಮಾಲೆ:-
ಅರಸಿನ ಕಾಮಾಲೆ, ಅರಸಿನ ಮುಂಡಿಗೆ,ಕಾಮಾಲೆ ರೋಗ ಎಂಬ ಹೆಸರು ಜಾಂಡಿಸ್ಗಿದೆ. ದೇಹದಲ್ಲಿ ಬೈಲ್ರೂಬಿನ್ ಎಂಬ ಕಿತ್ತಳೆ ಬಣ್ಣದ ವಿಸರ್ಜನೆಯಾಗಬೇಕಾದ ವಸ್ತು ಅಗತ್ಯಕ್ಕಿಂತ ಹೆಚ್ಚು ಶೇಖರವಾಗಿ ದೇಹ ಹಳದಿ ಬಣ್ಣಕ್ಕೆ ತಿರುಗುತ್ತದೆ. ಪಿತ್ತಕೋಶಕ್ಕೆ ವೈರಾಣು ಸೊಂಕು ತಗಲುವುದರಿಂದ ಕಾಮಾಲೆ ಕಾಣಿಸಿಕೊಳ್ಳುತ್ತದೆ.
ಇದಕ್ಕೆ ಕಲುಷಿತ ನೀರು, ಆಹಾರ ಕಾರಣ, ಕಾಮಾಲೆ ರೋಗದಿಂದ ತೀವ್ರ ಬಳಲಿಕೆ, ವಾಂತಿ, ಪಿತ್ತಕೋಶದ ಸಮಸ್ಯೆ ಕಾಣಿಸಬಹುದು. ಅಲ್ಲದೇ ಇದು ಇತರ ದೈಹಿಕ ಸಮಸ್ಯೆಗಳಿಗೂ ಕಾರಣವಾಗಬಹುದು. ಆದ್ದರಿಂದ ರೋಗ ಲಕ್ಷಣ ಕಾಣಿಸುತ್ತಿದಂತೆ ವೈದ್ಯರನ್ನು ಕಂಡು ಸೂಕ್ತ ಚಿಕಿತ್ಸೆ ಅಗತ್ಯ. ಕಾಯಿಲೆ ನಿರ್ಲಕ್ಷಿಸಿ ತೀವ್ರವಾದರೆ ಪ್ರಾಣಕ್ಕೆ ಎರವಾಗಬಹುದು.
ಮುನ್ನೆಚ್ಚರಿಕೆ ಏನು:- ಕಲುಷಿತ ಆಹಾರ ಸೇವಿಸದೇ ಇರುವುದು, ಬಿಸಿ ನೀರನ್ನೇ ಸೇವಿಸುವುದು ಮಾಡಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ…
ಮೆಂತ್ಯ ಸೊಪ್ಪಿನ ದೋಸೆ.ಈ ದೋಸೆ ಮಾಡಲು ಮೊದಲು ಮಾಮೂಲಿ ದೋಸೆ ಹಿಟ್ಟು ತಯಾರಿಸ ಬೇಕು.ನಂತರ ಈ ಹಿಟ್ಟಿಗೆ ಮೆಂತೆ ಸೊಪ್ಪಿನ ರುಬ್ಬಿದ ಮಸಾಲೆ ಮಿಶ್ರಣ ವನ್ನು ಎಷ್ಟು ಬೇಕೋ ಅಷ್ಟು ಸೇರಿಸಿ ದೋಸೆ ಮಾಡಬೇಕು. ದೋಸೆ ಹಿಟ್ಟು ಮಾಡಲು ಬೇಕಗುವ ಪದಾರ್ಥಗಳು. ದೋಸೆ ಅಕ್ಕಿ ಒಂದು ಬಟ್ಟಲು, ಉದ್ದಿನ ಬೇಳೆ ಕಾಲು ಬಟ್ಟಲು, ಮೆಂತ್ಯ ಕಾಳು ಕಾಲು ಟೀ ಚಮಚ, ಉಪ್ಪು ರುಚಿಗೆ ತಕ್ಕಷ್ಟು, ಎಣ್ಣೆ ದೋಸೆ ಕಾಯಿಸಲು ಬೇಕಾಗುವಷ್ಟು.ಮಾಡುವ ವಿಧಾನ. ದೋಸೆ ಅಕ್ಕಿ . ಉದ್ದಿನ…
ಕರ್ನಾಟಕದ ಮಾಜಿ ಮುಖ್ಯಮಂತ್ರಿ, 80 ವರ್ಷದ ಧರಂಸಿಂಗ್’ರವರು ಉಸಿರಾಟದ ತೊಂದರೆ, ಅಸ್ತಮಾ, ಮಧುಮೇಹ, ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು, ಇಂದು ಬೆಳಗ್ಗೆ ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ
ಬೆಕ್ಕು ಮತ್ತು ನಾಯಿ ಪರಮ ಶತ್ರುಗಳು ಎಂದು ಹೇಳುತ್ತಾರೆ. ಆದರೆ ಇಲ್ಲೊಂದು ನಾಯಿ ಬೆಕ್ಕಿನ ಮರಿಗೆ ಹಾಲುಣಿಸಿ ತಾಯಿಯ ಪ್ರೀತಿಯನ್ನು ತೋರಿಸುತ್ತಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನೆಮ್ಮಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಚೆಟ್ಟಂಗಡ ಗಿಣಿ ತಿಮ್ಮಯ್ಯ ಅವರ ಮನೆಯಲ್ಲಿ ಈ ಅಪರೂಪದ ದೃಶ ಕಂಡು ಬಂದಿದೆ. ಈ ನಾಯಿ ಪ್ರತಿನಿತ್ಯ ಬೆಕ್ಕಿನಮರಿಗೆ ಹಾಲು ನೀಡುತ್ತಿದೆ. ಈ ನಾಯಿ ಬೆಕ್ಕಿನ ಮರಿಗಳಿಗೆ ಪ್ರತಿದಿನ ಹಾಲನ್ನು ಕುಡಿಸುತ್ತದೆ. ತಾಯಿಯ ಮಮತೆಯನ್ನು ಬಯಸಿ ಬರುವ ಬೆಕ್ಕಿನ ಮರಿಗೆ…
ದೇಶ ಮತ್ತು ಸಮಾಜದ ಪ್ರಗತಿಯ ಬಗ್ಗೆ ಕಳಕಳಿಯಿರುವ ಸ್ವಾಮೀಜಿಯವರು ಮುಂದಿನ ಪೀಳಿಗೆಯ ಬೆಳವಣಿಗೆಗಾಗಿ ಪಣತೊಟ್ಟಿರುವರು. ಇವರು ಸಮಾಜದ ಎಷ್ಟೋ ಗಣ್ಯರ ಬಾಲ್ಯ ಜೀವನಗಳ ಪರಿವರ್ತನೆಗೆ ಕಾರಣವಾಗಿದ್ದಾರೆ. ತಮ್ಮ ಮಠದಲ್ಲಿ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಆಶ್ರಯವನಿತ್ತು ತ್ರಿವಿಧ ದಾಸೋಹವನ್ನು ಸತತವಾಗಿ ನಡೆಸುತ್ತಾ ಬಂದಿದ್ದಾರೆ.
ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷೆಯ ಅವನೇ ಶ್ರೀಮನ್ನಾರಾಯಣ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅವನೇ ಶ್ರೀಮನ್ನಾರಾಯಣ ಐದು ಭಾಷೆಯಲ್ಲಿ ರಿಲೀಸ್ ಆಗಿದ್ದು ಎಲ್ಲಾ ಭಾಷೆಯ ಚಿತ್ರಾಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ರಕ್ಷಿತ್ ಮತ್ತು ತಂಡ ಸುಮಾರು ಮೂರು ವರ್ಷಗಳಿಂದ ಪಟ್ಟ ಶ್ರಮ ಈ ಟ್ರೈಲರ್ ನಲ್ಲಿ ಎದ್ದು ಕಾಣುತ್ತಿದೆ. ಒಂದು ವಿಭಿನ್ನ ರೀತಿಯ ಸಿನಿಮಾ ಇದಾಗಿದ್ದು ಚಿತ್ರಾಭಿಮಾನಿಗಳ ಜೊತೆಗೆ ಸ್ಯಾಂಡಲ್ ವುಡ್ ಸ್ಟಾರ್ಸ್ ಕೂಡ ಮೆಚ್ಚಿಕೊಂಡಿದ್ದಾರೆ….