ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಪ್ರಜೆಗಳಲ್ಲಿ ಬಹು ಸಂಖ್ಯಾತರು ಎನಿಸಿಕೊಂಡ ಹಿಂದೂ ಧರ್ಮೀಯರು ಪ್ರತೀ ಮಾಸದಲ್ಲಿ ಯಾವುದಾದರು ಎಳೆಯಲ್ಲಿ ಧಾರ್ಮಿಕ ಹಬ್ಬವನ್ನು ಆಚರಣೆ ಮಾಡುವುದು ಸಂಪ್ರದಾಯ ಮತ್ತು ಇದನ್ನು ಮೈಗೂಡಿಸಿಕೊಂಡು ಬಂದಿದ್ದಾರೆ ಕೂಡ.
ಸಾಮಾನ್ಯವಾಗಿ ಎಲ್ಲಾ ಜನಾಂಗದವರು ಆಚರಿಸುವ ಪಿತೃಪಕ್ಷ ಮಹಾಲಯ ಅಮಾವಾಸ್ಯೆ ಮುಗಿದ ತಕ್ಷಣ ನವರಾತ್ರಿ ಆರಂಭವಾಗಿ ಹತ್ತನೇಯ ದಿನ ದಸರಾ ಆಚರಣೆ ಮಾಡುವುದು ನಿಯಮವಾಗಿದೆ.
ಆದರೆ ಈ ವರ್ಷ ಅಶ್ವಿಜ ಮಾಸ ಅಧಿಕ ಬಂದಿರುವುದರಿಂದ ಅಂದರೆ ನಿಜ ಅಶ್ವಿಜ, ಅಧಿಕ ಅಶ್ವಿಜ ಎಂದು ಎರಡು ಮಾಸಗಳು ಬಂದಿರುವುದರಿಂದ ದಸರಾ ಹಬ್ಬ ಮಹಾಲಯ ಅಮಾವಾಸ್ಯೆ ಕಳೆದ ಒಂದು ತಿಂಗಳ ನಂತರ ಬರುತ್ತದೆ. ಈ ಬಗ್ಗೆ ಹಲವರಲ್ಲಿ ಗೊಂದಲವಿದೆ.

ನಾವು ಹಬ್ಬ ಆಚರಣೆ ಮಾಡುವುದು ಹಾಗೂ ರಾಶಿ ನಕ್ಷತ್ರಗಳನ್ನು ನೋಡುವುದು ಕೇವಲ ಪರಂಪರೆ ಎಂದು ತಿಳಿದು ಆಚರಣೆ ಮಾಡುವುದಕ್ಕಿಂತ ವೈಜ್ಞಾನಿಕವಾಗಿಯು ತಿಳಿದುಕೊಳ್ಳಬೇಕಾಗುತ್ತದೆ. ನಕ್ಷತ್ರ ರಾಶಿ ಹಾಗೂ ಪಂಚಾಂಗಗಳು ಏನು ಎನ್ನುವುದನ್ನು ವಿಚಾರಿಸಿ ತಿಳಿದುಕೊಂಡು ನಮ್ಮ ಗೊಂದಲವನ್ನು ನಾವೇ ನಿವಾರಣೆ ಮಾಡಿಕೊಳ್ಳಬಹುದು. ಸಂವತ್ಸರಗಳನ್ನು ಸೂರ್ಯ, ಚಂದ್ರರ ಚಲನ ವಲನದಿಂದ ಲೆಕ್ಕ ಹಾಕಿ ಸೌರಮಾನ ಹಾಗೂ ಚಂದ್ರಮಾನ ಎನ್ನುವ ಮಾನದಂಡದಿಂದ ನಿರ್ಣಯಿಸಲಾಗುತ್ತದೆ.

ಸೂರ್ಯನಿಗೆ ಮೇಷ, ವೃಷಭ ಎಂಬ ರಾಶಿ ಚಕ್ರವನ್ನು ಒಂದು ಸುತ್ತು ಸುತ್ತಲು 30 ತಿಂಗಳು 14 ದಿವಸ ಬೇಕು. ಅದೇ ಸೂರ್ಯನಿಗೆ ಒಂದು ವರ್ಷ ಅಂದರೆ ಚೈತ್ರ, ವೈಶಾಖ ದಿಂದ ಮೀನ ಮಾಸ ಎಂಬ ಋತು ಚಕ್ರವನ್ನು ಸುತ್ತಲು 365.25 ಘಳಿಗೆ ಬೇಕಾಗುತ್ತದೆ. ಇದಕ್ಕೆ ಸೌರಮಾನ ಎಂದು ಕರೆಯುತ್ತಾರೆ. ಅದೇ ಚಂದ್ರನಿಗೆ 354 ದಿನಗಳು ಬೇಕಾಗುತ್ತದೆ. ಇದಕ್ಕೆ ಚಂದ್ರಮಾನ ಎಂದು ಕರೆಯುತ್ತಾರೆ.
ಸೂರ್ಯನಿಗೂ, ಚಂದ್ರನಿಗೂ ಒಂದು ವರ್ಷ ಮುಗಿಸಬೇಕಾದರೆ ಪ್ರತಿ ವರ್ಷವು 11 ದಿನ ವ್ಯತ್ಯಾಸಗಳು ಬಂದು ಆ ದಿನಗಳು ಪ್ರತಿ ವರ್ಷವು ಬಾಕಿಯಾಗಿ 3 ವರ್ಷಕ್ಕೊಮ್ಮೆ ಆ 11 ದಿನಗಳನ್ನು ಸೇರಿಸಿ ಒಂದು ಆಧಿಕ ಮಾಸ ಎಂದು ಮಾಡುತ್ತಾರೆ. ಹೀಗೆ ಬೇರೆ ಬೇರೆ ಧರ್ಮದವರು ಹಾಗೂ ಬೇರೆ ಬೇರೆ ದಿನ ಮಾಸಗಳನ್ನು ನಿರ್ಣಯಿಸುವವರು ಇಂಗ್ಲಿಷ್ ಕ್ಯಾಲೆಂಡರ್ಗಳನ್ನು 30-31 ಹಾಗೂ ಫೆಬ್ರವರಿ 28-29 ದಿನಾಂಕಗಳನ್ನು ಹೆಚ್ಚುವರಿ ಹಾಕಿ ಸಮದೂಗಿಸುತ್ತಾರೆ. ಹಾಗೆಯೇ ಬೇರೆ ಬೇರೆ ಧರ್ಮದ ಕ್ಯಾಲೆಂಡರ್ಗಳಲ್ಲಿ ಕೂಡ ಹೀಗೆ ಸರಿದೂಗಿಸಲಾಗುತ್ತದೆ.
ಅದೇ ಪ್ರಕಾರ ಪ್ರತಿ ಮೂರು ವರ್ಷಕೊಮ್ಮೆ ಬೇರೆ ಬೇರೆ ತಿಂಗಳುಗಳು ಅಧಿಕ ಮಾಸ ಎಂದು ಬರುತ್ತದೆ. ಆದ್ದರಿಂದ ಯಾರೂ ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ.
ಪ್ರತಿವರ್ಷ ಮಹಾಲಯ ಅಮಾವಾಸ್ಯೆ ಆಚರಣೆ ಮಾಡುವವರು ಸೆ.17 ರಂದು ಆಚರಿಸಬಹುದು. ನವರಾತ್ರಿ ಹಾಗೂ ದಸರಾ ಆಚರಣೆ ಮಾಡುವವರು ಮುಂದಿನ ಅಮವಾಸ್ಯೆ ಕಳೆದ ಮೇಲೆ ಆಚರಣೆ ಮಾಡಬೇಕು. ಈ ಮಧ್ಯದ ಅಧಿಕ ಮಾಸದಲ್ಲಿ ಶುಭಕಾರ್ಯಗಳನ್ನು ಅಂದರೆ ಮದುವೆ, ಗೃಹ ಪ್ರವೇಶ, ಮಂಗಳ ಕಾರ್ಯಗಳನ್ನು ಆಚರಿಸುವಂತಿಲ್ಲ.

ದೇವತಾ ಆರಾಧನೆ, ವ್ರತÀ, ದಾನ, ಧರ್ಮ ಮತ್ತು ಪೂರ್ವ ನಿಯೋಜಿತ ಅಂದರೆ ಸೀಮಂತಾದಿಗಳನ್ನು ನಡೆಸಬಹುದು. ಹೀಗೆ ಎಲ್ಲವು ಕೂಡ ಹಿಂದಿನ ಋಷಿ ಮುನಿಗಳು ತಮ್ಮ ಸ್ವಯಂ ಆಚರಣೆಯಿಂದ ಸಂತುಷ್ಟಿ ಜೀವನವನ್ನು ಕಂಡಿರುವುದರಿಂದ ಮುಂದಿನ ಪೀಳಿಗೆಗೆ ಮಾರ್ಗದರ್ಶನವಾಗಿ ಇಂತಹ ಧರ್ಮ ವಿಚಾರವನ್ನು ಗ್ರಂಥವಾಗಿ ಬರೆದಿಟ್ಟಿದ್ದಾರೆ.
ಆದ್ದರಿಂದ ಜೋತಿಷ್ಯ ಶಾಸ್ತ್ರವು ಅಂದರೆ ಈಗಿನ (ಆಷ್ಟ್ರಾಲಜಿ) ಸುಳ್ಳಲ್ಲ. ಅದೇ ಜ್ಯೋತಿಷ್ಯ ಹೇಳುವವನು (ಅಸ್ಟ್ರಾಲಜಿಕ್) ಗೊತ್ತಿಲ್ಲದೆ ಸುಳ್ಳು ಹೇಳಬಹುದು. ಆದರೆ ಜ್ಯೋತಿಷ್ಯವೇ ಸುಳ್ಳು ಎಂದು ಪರಿಗಣಿಸಲು ಸಾಧ್ಯವಿಲ್ಲ. ಈ ಬರುವ ಮಹಾಲಯ ಅಮಾವಾಸ್ಯೆ ಕಳೆದ ಒಂದು ತಿಂಗಳ ನಂತರ ಎಂದು ಅವರವರ ವರ್ಗದ ಹಾಗೂ ಕುಟುಂಬದ ನಿಯಮಾನುಸಾರ ಹಿರಿಯರಿಗೆ (ಮರಣ ಹೊಂದಿದ ಪಿತೃಗಳಿಗೆ) ತೃಪ್ತಿಯಾಗಲೆಂದು ಪಿಂಡ ಪ್ರಧಾನ ತಿಲತರ್ಪಣ ಗೋಗ್ರಾಸ ಅಂದರೆ ಗೋವಿನ ಅನ್ನನೀಡುವುದು, ಗೋವು ಪೂಜೆಯನ್ನು ಮಾಡುವುದು, ಕಾಗೆಗಳಿಗೆ ಭಕ್ಷ ಸಿದ್ಧ ಪಡಿಸಿ ಬಡಿಸುವುದು ಹಾಗೂ ಪಿತೃಗಳ ಸಂತುಷ್ಟಿಗೆಂದು ದಾನ ಧರ್ಮಾಧಿಗಳನ್ನು ಮಾಡಿ ಪುಣ್ಯ ಸಂಪಾದನೆಗೆ ಮಾರ್ಗವಿದೆ.
ಅದರಿಂದ ಸಂತೃಪ್ತಿ ಮತ್ತು ಮನ:ಶಾಂತಿಯನ್ನು ಕಂಡುಕೊಳ್ಳಬಹುದು ಮತ್ತು ದಸರಾ ಹಬ್ಬ ಆಚರಣೆಯಲ್ಲಿ ಯಾವುದೇ ಗೊಂದಲಗಳು ಬೇಡ. ಸರ್ವೇ ಜನೋ ಸುಖಿನೋ ಭವಂತು.
ಡಾ.ಮಹಾಭಲೇಶ್ವರ ಭಟ್,
source whatsapp
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದಲ್ಲಿ ಏನೇ ತೊಂದರೆ ಆದರೂ ಕೂಡ ನಾವು ಮೊದಲು ಹೋಗುವುದು ವೈದ್ಯರ ಬಳಿ ಆಗಿದೆ, ಹೌದು ವೈದ್ಯರನ್ನ ದೇವರು ಎಂದು ನಂಬಲಾಗಿದೆ, ಒಬ್ಬ ವೈದ್ಯ ಮನಸ್ಸು ಮಾಡಿದರೆ ಸಾಯುವ ಅಂಚಿನಲ್ಲಿ ಇರುವ ಮನುಷ್ಯನನ್ನ ಬದುಕಿಸುತ್ತಾನೆ. ಇನ್ನು ಮನುಷ್ಯನಿಗೆ ಬರುವ ಹಲವು ಖಾಯಿಲೆಗಳು ಯಾರಿಗೂ ಗೊತ್ತಾಗುವುದಿಲ್ಲ, ಆದರೆ ನಮ್ಮ ದೇಹದಲ್ಲಿ ಆಗುವ ಕೆಲವು ಬದಲಾವಣೆಗಳನ್ನ ನೋಡಿ ನಮಗೆ ಇಂತಹುದ್ದೇ ತೊಂದರೆ ಆಗಿದೆ ಎಂದು ಗುರುತಿಸುವುದು ಒಬ್ಬ ಡಾಕ್ಟರ್ ಮಾತ್ರ. ಮುಂದುವರೆದ ಈ ವೈದ್ಯ ಲೋಕದಲ್ಲಿ ನಾವು ಹೊಟ್ಟೆಯಲ್ಲಿ…
ಜೀವನದಲ್ಲಿ ಮುಂದೆ ಏಳಿಗೆ ಹೊಂದಬೇಕಾದರೆ ಪಾಲಿಸ ಬೇಕಾದ ನಿಯಮಗಳು,ಇತರರೊಡನೆ ವ್ಯವಹರಿಸ ಬೇಕಾದ ರೀತಿ,ಸಮಾಜದಲ್ಲಿ ನಮ್ಮ ನಡೆ ಹೇಗಿರಬೇಕು.ಮುಂತಾದ ಅನೇಕ ಅಂಶಗಳ ಬಗ್ಗೆ ಚಾಣಕ್ಯನು ನಮಗೆ ಅನೇಕ ನೀತಿಗಳನ್ನು ಬೋಧಿಸಿದ್ದಾನೆ. ನಮ್ಮ ಪ್ರಗತಿಗೆ ಅನೇಕ ಸಂದರ್ಭಗಳಲ್ಲಿ ಇವೆಲ್ಲವೂ ಉಪಯೋಗಕ್ಕೆ ಬರುತ್ತವೆ. ಚಾಣಕ್ಯ ಇವಷ್ಟನ್ನೇ ಅಲ್ಲದೆ,ಸ್ತ್ರೀಯರ ಬಗ್ಗೆಯೂ ಹಲವು ವಿಷಯಗಳನ್ನು ತಿಳಿಸಿದ್ದಾನೆ. 1.ಯಾವುದೇ ವಿಷಯವಾಗಲೀ,ಸ್ತ್ರೀಯು ತನ್ನ ಗಂಡನ ಅನುಮತಿ ಪಡೆದುಕೊಳ್ಳ ಬೇಕಂತೆ.ಇಲ್ಲವಾದಲ್ಲಿ ಗಂಡನ ಆಯುಷ್ಯ ಕಡಿಮೆಯಾಗುತ್ತದಂತೆ. 2.ಸುಳ್ಳುಹೇಳುವುದು, ಸ್ವಾರ್ಥ,ಅಸೂಯೆ,ಕಠಿಣವಾಗಿ ವರ್ತಿಸುವುದು,ಮೂರ್ಖತ್ವ,ಪರಿಶುಭ್ರತೆಯನ್ನು ಪಾಲಿಸದಿರುವುದು,ಕ್ರೂರತ್ವ ಮುಂತಾದ ಆಂಶಗಳು ಸ್ತ್ರೀಯರಲ್ಲಿ ಪ್ರಧಾನವಾಗಿರುತ್ತವೆ. ಇವುಗಳಿಂದಾಗಿ ಅನೇಕ…
ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಮುಚ್ಚಲಾಗುತ್ತದೆ ಎಂದು ಹೇಳಲಾಗಿದ್ದು, ಈ ಕುರಿತಾಗಿ ಸಂಸ್ಥೆಯ ಕರ್ನಾಟಕ ವಲಯದ ಮುಖ್ಯ ಪ್ರಧಾನ ವ್ಯವಸ್ಥಾಪಕ ಸುಶೀಲ್ ಕುಮಾರ್ ಮಿಶ್ರಾ ಸ್ಪಷ್ಟನೆ ನೀಡಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆಯನ್ನು ಮುಚ್ಚಲಾಗುತ್ತದೆ ಎಂಬ ವದಂತಿಗಳು ಕೇಳಿಬಂದ ಹಿನ್ನೆಲೆಯಲ್ಲಿ ಅವರು ಸ್ಪಷ್ಟನೆ ನೀಡಿದ್ದು, ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವ ವದಂತಿ ನಿಜವಲ್ಲ. ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ. ಕೆಲವರು ಬಿಎಸ್ಎನ್ಎಲ್ ಮುಚ್ಚುವ ಕುರಿತು ವದಂತಿ ಹರಡುತ್ತಿದ್ದಾರೆ. ಸಂಸ್ಥೆಯ ಸೇವೆ…
ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.
ನೆಲ್ಲಿತೀರ್ಥ ಗುಹಾಲಯ ಮಂದಿರಾ ಇರುವುದು ಮಂಗಳೂರು ಕಟೀಲ್ ದುರ್ಗಾ ಪರಮೇಶವರೀ ದೇವಸ್ಥಾನ ಮೂಡಬಿದ್ರಿ. ಸುಮಾರು ೫ ಕೆ.ಮ್ ಅಷ್ಟು ದೂರದಲೇ ಇರುವುಧು ಈ ಮಂದಿರ. ಇತೀಹಾಸ : ಸುಮಾರು ೧೪೮೭ ಇತೀಹಾಸವೀರುವ ಗುಹಾಲಯದಲೇ ಶಿವನ ಲಿಂಗ ಇರುವುಧು. ೬೬೦ ಅಡೀ ಉದ್ದಾ ಹಾಗೂ ೨ ಅಡೀ ಯಥರ ಇರುವ ಗುಹೆಯ್ಯ್ಯ ಲೀ ಭಕತದೀಗಳು ಮಂಡೀ ಉರೀ ದರ್ಶನವನ್ನು ಪಡಯ ಬೇಕು . ಗುಹೆಯ್ಯ್ಯ ಲೀ ನೀರುಹರಿಯುತದೆ.ಇಲೆಯೇ ನೆಲ್ಲಿಯಾ ಗಾತ್ರಧಲೀ ಹನೀ ಹನೀಯಾಗೀ ನೀರು ಬೀಳುತದೆ. ಹಾಗಾಗೀ ಈ …
ಹಿಂದೂ ಧರ್ಮ ಹಾಗೂ ಹಿಂದೂ ಪೂಜಾ ವಿಧಾನದ ಪ್ರಕಾರ ಬಾಳೆ ಎಲೆಗೆ ಮಹತ್ವದ ಸ್ಥಾನವಿದೆ. ಬಾಳೆ ಎಲೆ ಇಲ್ಲದೆ ಸತ್ಯನಾರಾಯಣನ ಪೂಜೆ ನಡೆಯೋದಿಲ್ಲ. ಹಾಗೂ ಹಲವು ಪೂಜೆ ವಿಧಾನಗಳಲ್ಲಿ ಬಾಳೆ ಎಳೆಯನ್ನೇ ಬಳಸುತ್ತಾರೆ. ಬಾಳೆ ಎಲೆಗೆ ಎಷ್ಟು ಧಾರ್ಮಿಕ ಮಹತ್ವವಿದೆಯೋ ಅಷ್ಟೇ ಆಯುರ್ವೇದದಲ್ಲಿಯೂ ಮಹತ್ವ ಪಡೆದಿದೆ. ಸರ್ವ ರೋಗಗಳನ್ನ ಗುಣಪಡಿಸುವ ಶಕ್ತಿ ಬಾಳೆ ಎಲೆಗಿದೆ.