ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಪ್ರಜೆಗಳಲ್ಲಿ ಬಹು ಸಂಖ್ಯಾತರು ಎನಿಸಿಕೊಂಡ ಹಿಂದೂ ಧರ್ಮೀಯರು ಪ್ರತೀ ಮಾಸದಲ್ಲಿ ಯಾವುದಾದರು ಎಳೆಯಲ್ಲಿ ಧಾರ್ಮಿಕ ಹಬ್ಬವನ್ನು ಆಚರಣೆ ಮಾಡುವುದು ಸಂಪ್ರದಾಯ ಮತ್ತು ಇದನ್ನು ಮೈಗೂಡಿಸಿಕೊಂಡು ಬಂದಿದ್ದಾರೆ ಕೂಡ.
ಸಾಮಾನ್ಯವಾಗಿ ಎಲ್ಲಾ ಜನಾಂಗದವರು ಆಚರಿಸುವ ಪಿತೃಪಕ್ಷ ಮಹಾಲಯ ಅಮಾವಾಸ್ಯೆ ಮುಗಿದ ತಕ್ಷಣ ನವರಾತ್ರಿ ಆರಂಭವಾಗಿ ಹತ್ತನೇಯ ದಿನ ದಸರಾ ಆಚರಣೆ ಮಾಡುವುದು ನಿಯಮವಾಗಿದೆ.
ಆದರೆ ಈ ವರ್ಷ ಅಶ್ವಿಜ ಮಾಸ ಅಧಿಕ ಬಂದಿರುವುದರಿಂದ ಅಂದರೆ ನಿಜ ಅಶ್ವಿಜ, ಅಧಿಕ ಅಶ್ವಿಜ ಎಂದು ಎರಡು ಮಾಸಗಳು ಬಂದಿರುವುದರಿಂದ ದಸರಾ ಹಬ್ಬ ಮಹಾಲಯ ಅಮಾವಾಸ್ಯೆ ಕಳೆದ ಒಂದು ತಿಂಗಳ ನಂತರ ಬರುತ್ತದೆ. ಈ ಬಗ್ಗೆ ಹಲವರಲ್ಲಿ ಗೊಂದಲವಿದೆ.
ನಾವು ಹಬ್ಬ ಆಚರಣೆ ಮಾಡುವುದು ಹಾಗೂ ರಾಶಿ ನಕ್ಷತ್ರಗಳನ್ನು ನೋಡುವುದು ಕೇವಲ ಪರಂಪರೆ ಎಂದು ತಿಳಿದು ಆಚರಣೆ ಮಾಡುವುದಕ್ಕಿಂತ ವೈಜ್ಞಾನಿಕವಾಗಿಯು ತಿಳಿದುಕೊಳ್ಳಬೇಕಾಗುತ್ತದೆ. ನಕ್ಷತ್ರ ರಾಶಿ ಹಾಗೂ ಪಂಚಾಂಗಗಳು ಏನು ಎನ್ನುವುದನ್ನು ವಿಚಾರಿಸಿ ತಿಳಿದುಕೊಂಡು ನಮ್ಮ ಗೊಂದಲವನ್ನು ನಾವೇ ನಿವಾರಣೆ ಮಾಡಿಕೊಳ್ಳಬಹುದು. ಸಂವತ್ಸರಗಳನ್ನು ಸೂರ್ಯ, ಚಂದ್ರರ ಚಲನ ವಲನದಿಂದ ಲೆಕ್ಕ ಹಾಕಿ ಸೌರಮಾನ ಹಾಗೂ ಚಂದ್ರಮಾನ ಎನ್ನುವ ಮಾನದಂಡದಿಂದ ನಿರ್ಣಯಿಸಲಾಗುತ್ತದೆ.
ಸೂರ್ಯನಿಗೆ ಮೇಷ, ವೃಷಭ ಎಂಬ ರಾಶಿ ಚಕ್ರವನ್ನು ಒಂದು ಸುತ್ತು ಸುತ್ತಲು 30 ತಿಂಗಳು 14 ದಿವಸ ಬೇಕು. ಅದೇ ಸೂರ್ಯನಿಗೆ ಒಂದು ವರ್ಷ ಅಂದರೆ ಚೈತ್ರ, ವೈಶಾಖ ದಿಂದ ಮೀನ ಮಾಸ ಎಂಬ ಋತು ಚಕ್ರವನ್ನು ಸುತ್ತಲು 365.25 ಘಳಿಗೆ ಬೇಕಾಗುತ್ತದೆ. ಇದಕ್ಕೆ ಸೌರಮಾನ ಎಂದು ಕರೆಯುತ್ತಾರೆ. ಅದೇ ಚಂದ್ರನಿಗೆ 354 ದಿನಗಳು ಬೇಕಾಗುತ್ತದೆ. ಇದಕ್ಕೆ ಚಂದ್ರಮಾನ ಎಂದು ಕರೆಯುತ್ತಾರೆ.
ಸೂರ್ಯನಿಗೂ, ಚಂದ್ರನಿಗೂ ಒಂದು ವರ್ಷ ಮುಗಿಸಬೇಕಾದರೆ ಪ್ರತಿ ವರ್ಷವು 11 ದಿನ ವ್ಯತ್ಯಾಸಗಳು ಬಂದು ಆ ದಿನಗಳು ಪ್ರತಿ ವರ್ಷವು ಬಾಕಿಯಾಗಿ 3 ವರ್ಷಕ್ಕೊಮ್ಮೆ ಆ 11 ದಿನಗಳನ್ನು ಸೇರಿಸಿ ಒಂದು ಆಧಿಕ ಮಾಸ ಎಂದು ಮಾಡುತ್ತಾರೆ. ಹೀಗೆ ಬೇರೆ ಬೇರೆ ಧರ್ಮದವರು ಹಾಗೂ ಬೇರೆ ಬೇರೆ ದಿನ ಮಾಸಗಳನ್ನು ನಿರ್ಣಯಿಸುವವರು ಇಂಗ್ಲಿಷ್ ಕ್ಯಾಲೆಂಡರ್ಗಳನ್ನು 30-31 ಹಾಗೂ ಫೆಬ್ರವರಿ 28-29 ದಿನಾಂಕಗಳನ್ನು ಹೆಚ್ಚುವರಿ ಹಾಕಿ ಸಮದೂಗಿಸುತ್ತಾರೆ. ಹಾಗೆಯೇ ಬೇರೆ ಬೇರೆ ಧರ್ಮದ ಕ್ಯಾಲೆಂಡರ್ಗಳಲ್ಲಿ ಕೂಡ ಹೀಗೆ ಸರಿದೂಗಿಸಲಾಗುತ್ತದೆ.
ಅದೇ ಪ್ರಕಾರ ಪ್ರತಿ ಮೂರು ವರ್ಷಕೊಮ್ಮೆ ಬೇರೆ ಬೇರೆ ತಿಂಗಳುಗಳು ಅಧಿಕ ಮಾಸ ಎಂದು ಬರುತ್ತದೆ. ಆದ್ದರಿಂದ ಯಾರೂ ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ.
ಪ್ರತಿವರ್ಷ ಮಹಾಲಯ ಅಮಾವಾಸ್ಯೆ ಆಚರಣೆ ಮಾಡುವವರು ಸೆ.17 ರಂದು ಆಚರಿಸಬಹುದು. ನವರಾತ್ರಿ ಹಾಗೂ ದಸರಾ ಆಚರಣೆ ಮಾಡುವವರು ಮುಂದಿನ ಅಮವಾಸ್ಯೆ ಕಳೆದ ಮೇಲೆ ಆಚರಣೆ ಮಾಡಬೇಕು. ಈ ಮಧ್ಯದ ಅಧಿಕ ಮಾಸದಲ್ಲಿ ಶುಭಕಾರ್ಯಗಳನ್ನು ಅಂದರೆ ಮದುವೆ, ಗೃಹ ಪ್ರವೇಶ, ಮಂಗಳ ಕಾರ್ಯಗಳನ್ನು ಆಚರಿಸುವಂತಿಲ್ಲ.
ದೇವತಾ ಆರಾಧನೆ, ವ್ರತÀ, ದಾನ, ಧರ್ಮ ಮತ್ತು ಪೂರ್ವ ನಿಯೋಜಿತ ಅಂದರೆ ಸೀಮಂತಾದಿಗಳನ್ನು ನಡೆಸಬಹುದು. ಹೀಗೆ ಎಲ್ಲವು ಕೂಡ ಹಿಂದಿನ ಋಷಿ ಮುನಿಗಳು ತಮ್ಮ ಸ್ವಯಂ ಆಚರಣೆಯಿಂದ ಸಂತುಷ್ಟಿ ಜೀವನವನ್ನು ಕಂಡಿರುವುದರಿಂದ ಮುಂದಿನ ಪೀಳಿಗೆಗೆ ಮಾರ್ಗದರ್ಶನವಾಗಿ ಇಂತಹ ಧರ್ಮ ವಿಚಾರವನ್ನು ಗ್ರಂಥವಾಗಿ ಬರೆದಿಟ್ಟಿದ್ದಾರೆ.
ಆದ್ದರಿಂದ ಜೋತಿಷ್ಯ ಶಾಸ್ತ್ರವು ಅಂದರೆ ಈಗಿನ (ಆಷ್ಟ್ರಾಲಜಿ) ಸುಳ್ಳಲ್ಲ. ಅದೇ ಜ್ಯೋತಿಷ್ಯ ಹೇಳುವವನು (ಅಸ್ಟ್ರಾಲಜಿಕ್) ಗೊತ್ತಿಲ್ಲದೆ ಸುಳ್ಳು ಹೇಳಬಹುದು. ಆದರೆ ಜ್ಯೋತಿಷ್ಯವೇ ಸುಳ್ಳು ಎಂದು ಪರಿಗಣಿಸಲು ಸಾಧ್ಯವಿಲ್ಲ. ಈ ಬರುವ ಮಹಾಲಯ ಅಮಾವಾಸ್ಯೆ ಕಳೆದ ಒಂದು ತಿಂಗಳ ನಂತರ ಎಂದು ಅವರವರ ವರ್ಗದ ಹಾಗೂ ಕುಟುಂಬದ ನಿಯಮಾನುಸಾರ ಹಿರಿಯರಿಗೆ (ಮರಣ ಹೊಂದಿದ ಪಿತೃಗಳಿಗೆ) ತೃಪ್ತಿಯಾಗಲೆಂದು ಪಿಂಡ ಪ್ರಧಾನ ತಿಲತರ್ಪಣ ಗೋಗ್ರಾಸ ಅಂದರೆ ಗೋವಿನ ಅನ್ನನೀಡುವುದು, ಗೋವು ಪೂಜೆಯನ್ನು ಮಾಡುವುದು, ಕಾಗೆಗಳಿಗೆ ಭಕ್ಷ ಸಿದ್ಧ ಪಡಿಸಿ ಬಡಿಸುವುದು ಹಾಗೂ ಪಿತೃಗಳ ಸಂತುಷ್ಟಿಗೆಂದು ದಾನ ಧರ್ಮಾಧಿಗಳನ್ನು ಮಾಡಿ ಪುಣ್ಯ ಸಂಪಾದನೆಗೆ ಮಾರ್ಗವಿದೆ.
ಅದರಿಂದ ಸಂತೃಪ್ತಿ ಮತ್ತು ಮನ:ಶಾಂತಿಯನ್ನು ಕಂಡುಕೊಳ್ಳಬಹುದು ಮತ್ತು ದಸರಾ ಹಬ್ಬ ಆಚರಣೆಯಲ್ಲಿ ಯಾವುದೇ ಗೊಂದಲಗಳು ಬೇಡ. ಸರ್ವೇ ಜನೋ ಸುಖಿನೋ ಭವಂತು.
ಡಾ.ಮಹಾಭಲೇಶ್ವರ ಭಟ್,
source whatsapp
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯಗಳಲ್ಲಿ ಎಂ.ಎಸ್.ಧೋನಿ ಸ್ಲೋ ಬ್ಯಾಟಿಂಗ್ ಟೀಕೆಗೆ ಗುರಿಯಾಗಿತ್ತು. ಇಷ್ಟೇ ಅಲ್ಲ ಧೋನಿ ನಿವೃತ್ತಿಗೂ ಒತ್ತಡ ಕೇಳಿ ಬಂದಿತ್ತು. ಆದರೆ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಧೋನಿ ಎಲ್ಲಾ ಟೀಕಿಗೆ ಉತ್ತರಿಸಿದ್ದಾರೆ. 50 ರನ್ ಸಿಡಿಸೋ ಮೂಲಕ ಭಾರತದ ದಿಟ್ಟ ಹೋರಾಟದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಆದರೆ ಪಂದ್ಯ ಗೆಲ್ಲಲಿಲ್ಲ ಅನ್ನೋ ಕೊರಗು ಇನ್ನು ಮಾಸಿಲ್ಲ. ಇದರ ನಡುವೆ ಮತ್ತೆ ಧೋನಿ ನಿವೃತ್ತಿ ಪಶ್ನೆ ಎದ್ದಿದೆ. ಇದಕ್ಕೆ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ….
ಇಸ್ರೇಲ್ ಮಾದರಿ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿ ಪರಿಚಯಿಸುತ್ತೇನೆ ಎಂದು ಮುಖ್ಯಮಂತ್ರಿಗಳು ಕಳೆದ ಬಜೆಟ್ನಲ್ಲಿ ಘೋಷಿಸಿದ್ದಾರೆ. ಇದು ಎಷ್ಟರ ಮಟ್ಟಿಗೆ ಕಾರ್ಯಗತವಾಗಿದ್ಯೋ ಗೊತ್ತಿಲ್ಲ. ಆದರೆ ಸಿಎಂಗೂ ಮೊದಲೇ ಬಳ್ಳಾರಿಯ ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಗಿರೀಶ್ ಅವರು ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ಯಶಸ್ವಿಯಾಗುವ ಮೂಲಕ ಪಬ್ಲಿಕ್ ಹೀರೋ ಆಗಿದ್ದಾರೆ. ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ತಾಂಡಾದ ನಿವಾಸಿ ಗಿರೀಶ್ ಅವರು ಬಿಇ, ಬಿಟೆಕ್ ಮಾಡಿ ಜರ್ಮನಿಯಲ್ಲಿ ತಿಂಗಳಿಗೆ 4 ಲಕ್ಷದ ನೌಕರಿ ಮಾಡುತ್ತಿದ್ದರು. ಅದ್ಯಾಕೋ ಹುಟ್ಟೂರಿನಲ್ಲಿ ಕೃಷಿಯ ಅದಮ್ಯ ಆಸೆಯಿಂದ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ. whatsapp ಮಾತ್ರ ಮಾಡಿ…9141788533 whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್…
KOLAR NEWS PAPER 25-12-2022
ಗುರುವಾರ, 29/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ತೆರಿಗೆ ಅಧಿಕಾರಿಗಳ ಬಗ್ಗೆ ಜಾಗ್ರತೆ ವಹಿಸಬೇಕು. ಕೆಲಸದಲ್ಲಿ ಶ್ರದ್ಧೆ, ಪ್ರಾಮಾಣಿಕತೆಯಿಂದ ಮುನ್ನಡೆ ಇರುತ್ತದೆ. ಮನೆಯಲ್ಲಿ ಪಕ್ಕದವರ ಕಿರಿಕಿರಿಗಳಿಗೆ ತಲೆ ಕೆಟ್ಟು ಹೋಗುತ್ತದೆ. ಸಮಾಧಾನವಿರಲಿ. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ವೃಷಭ:- ಮನೆ ಮಾರಾಟ, ಫ್ಲಾಟ್ ಖರೀದಿಗಳಿಗೆ ಅವಸರಿಸದಿರಿ. ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ…
ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ ಸರ್ಕಾರಿ ಕಚೇರಿಗಳು ಮಾಲ್ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…