ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಪ್ರಜೆಗಳಲ್ಲಿ ಬಹು ಸಂಖ್ಯಾತರು ಎನಿಸಿಕೊಂಡ ಹಿಂದೂ ಧರ್ಮೀಯರು ಪ್ರತೀ ಮಾಸದಲ್ಲಿ ಯಾವುದಾದರು ಎಳೆಯಲ್ಲಿ ಧಾರ್ಮಿಕ ಹಬ್ಬವನ್ನು ಆಚರಣೆ ಮಾಡುವುದು ಸಂಪ್ರದಾಯ ಮತ್ತು ಇದನ್ನು ಮೈಗೂಡಿಸಿಕೊಂಡು ಬಂದಿದ್ದಾರೆ ಕೂಡ.
ಸಾಮಾನ್ಯವಾಗಿ ಎಲ್ಲಾ ಜನಾಂಗದವರು ಆಚರಿಸುವ ಪಿತೃಪಕ್ಷ ಮಹಾಲಯ ಅಮಾವಾಸ್ಯೆ ಮುಗಿದ ತಕ್ಷಣ ನವರಾತ್ರಿ ಆರಂಭವಾಗಿ ಹತ್ತನೇಯ ದಿನ ದಸರಾ ಆಚರಣೆ ಮಾಡುವುದು ನಿಯಮವಾಗಿದೆ.
ಆದರೆ ಈ ವರ್ಷ ಅಶ್ವಿಜ ಮಾಸ ಅಧಿಕ ಬಂದಿರುವುದರಿಂದ ಅಂದರೆ ನಿಜ ಅಶ್ವಿಜ, ಅಧಿಕ ಅಶ್ವಿಜ ಎಂದು ಎರಡು ಮಾಸಗಳು ಬಂದಿರುವುದರಿಂದ ದಸರಾ ಹಬ್ಬ ಮಹಾಲಯ ಅಮಾವಾಸ್ಯೆ ಕಳೆದ ಒಂದು ತಿಂಗಳ ನಂತರ ಬರುತ್ತದೆ. ಈ ಬಗ್ಗೆ ಹಲವರಲ್ಲಿ ಗೊಂದಲವಿದೆ.

ನಾವು ಹಬ್ಬ ಆಚರಣೆ ಮಾಡುವುದು ಹಾಗೂ ರಾಶಿ ನಕ್ಷತ್ರಗಳನ್ನು ನೋಡುವುದು ಕೇವಲ ಪರಂಪರೆ ಎಂದು ತಿಳಿದು ಆಚರಣೆ ಮಾಡುವುದಕ್ಕಿಂತ ವೈಜ್ಞಾನಿಕವಾಗಿಯು ತಿಳಿದುಕೊಳ್ಳಬೇಕಾಗುತ್ತದೆ. ನಕ್ಷತ್ರ ರಾಶಿ ಹಾಗೂ ಪಂಚಾಂಗಗಳು ಏನು ಎನ್ನುವುದನ್ನು ವಿಚಾರಿಸಿ ತಿಳಿದುಕೊಂಡು ನಮ್ಮ ಗೊಂದಲವನ್ನು ನಾವೇ ನಿವಾರಣೆ ಮಾಡಿಕೊಳ್ಳಬಹುದು. ಸಂವತ್ಸರಗಳನ್ನು ಸೂರ್ಯ, ಚಂದ್ರರ ಚಲನ ವಲನದಿಂದ ಲೆಕ್ಕ ಹಾಕಿ ಸೌರಮಾನ ಹಾಗೂ ಚಂದ್ರಮಾನ ಎನ್ನುವ ಮಾನದಂಡದಿಂದ ನಿರ್ಣಯಿಸಲಾಗುತ್ತದೆ.

ಸೂರ್ಯನಿಗೆ ಮೇಷ, ವೃಷಭ ಎಂಬ ರಾಶಿ ಚಕ್ರವನ್ನು ಒಂದು ಸುತ್ತು ಸುತ್ತಲು 30 ತಿಂಗಳು 14 ದಿವಸ ಬೇಕು. ಅದೇ ಸೂರ್ಯನಿಗೆ ಒಂದು ವರ್ಷ ಅಂದರೆ ಚೈತ್ರ, ವೈಶಾಖ ದಿಂದ ಮೀನ ಮಾಸ ಎಂಬ ಋತು ಚಕ್ರವನ್ನು ಸುತ್ತಲು 365.25 ಘಳಿಗೆ ಬೇಕಾಗುತ್ತದೆ. ಇದಕ್ಕೆ ಸೌರಮಾನ ಎಂದು ಕರೆಯುತ್ತಾರೆ. ಅದೇ ಚಂದ್ರನಿಗೆ 354 ದಿನಗಳು ಬೇಕಾಗುತ್ತದೆ. ಇದಕ್ಕೆ ಚಂದ್ರಮಾನ ಎಂದು ಕರೆಯುತ್ತಾರೆ.
ಸೂರ್ಯನಿಗೂ, ಚಂದ್ರನಿಗೂ ಒಂದು ವರ್ಷ ಮುಗಿಸಬೇಕಾದರೆ ಪ್ರತಿ ವರ್ಷವು 11 ದಿನ ವ್ಯತ್ಯಾಸಗಳು ಬಂದು ಆ ದಿನಗಳು ಪ್ರತಿ ವರ್ಷವು ಬಾಕಿಯಾಗಿ 3 ವರ್ಷಕ್ಕೊಮ್ಮೆ ಆ 11 ದಿನಗಳನ್ನು ಸೇರಿಸಿ ಒಂದು ಆಧಿಕ ಮಾಸ ಎಂದು ಮಾಡುತ್ತಾರೆ. ಹೀಗೆ ಬೇರೆ ಬೇರೆ ಧರ್ಮದವರು ಹಾಗೂ ಬೇರೆ ಬೇರೆ ದಿನ ಮಾಸಗಳನ್ನು ನಿರ್ಣಯಿಸುವವರು ಇಂಗ್ಲಿಷ್ ಕ್ಯಾಲೆಂಡರ್ಗಳನ್ನು 30-31 ಹಾಗೂ ಫೆಬ್ರವರಿ 28-29 ದಿನಾಂಕಗಳನ್ನು ಹೆಚ್ಚುವರಿ ಹಾಕಿ ಸಮದೂಗಿಸುತ್ತಾರೆ. ಹಾಗೆಯೇ ಬೇರೆ ಬೇರೆ ಧರ್ಮದ ಕ್ಯಾಲೆಂಡರ್ಗಳಲ್ಲಿ ಕೂಡ ಹೀಗೆ ಸರಿದೂಗಿಸಲಾಗುತ್ತದೆ.
ಅದೇ ಪ್ರಕಾರ ಪ್ರತಿ ಮೂರು ವರ್ಷಕೊಮ್ಮೆ ಬೇರೆ ಬೇರೆ ತಿಂಗಳುಗಳು ಅಧಿಕ ಮಾಸ ಎಂದು ಬರುತ್ತದೆ. ಆದ್ದರಿಂದ ಯಾರೂ ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ.
ಪ್ರತಿವರ್ಷ ಮಹಾಲಯ ಅಮಾವಾಸ್ಯೆ ಆಚರಣೆ ಮಾಡುವವರು ಸೆ.17 ರಂದು ಆಚರಿಸಬಹುದು. ನವರಾತ್ರಿ ಹಾಗೂ ದಸರಾ ಆಚರಣೆ ಮಾಡುವವರು ಮುಂದಿನ ಅಮವಾಸ್ಯೆ ಕಳೆದ ಮೇಲೆ ಆಚರಣೆ ಮಾಡಬೇಕು. ಈ ಮಧ್ಯದ ಅಧಿಕ ಮಾಸದಲ್ಲಿ ಶುಭಕಾರ್ಯಗಳನ್ನು ಅಂದರೆ ಮದುವೆ, ಗೃಹ ಪ್ರವೇಶ, ಮಂಗಳ ಕಾರ್ಯಗಳನ್ನು ಆಚರಿಸುವಂತಿಲ್ಲ.

ದೇವತಾ ಆರಾಧನೆ, ವ್ರತÀ, ದಾನ, ಧರ್ಮ ಮತ್ತು ಪೂರ್ವ ನಿಯೋಜಿತ ಅಂದರೆ ಸೀಮಂತಾದಿಗಳನ್ನು ನಡೆಸಬಹುದು. ಹೀಗೆ ಎಲ್ಲವು ಕೂಡ ಹಿಂದಿನ ಋಷಿ ಮುನಿಗಳು ತಮ್ಮ ಸ್ವಯಂ ಆಚರಣೆಯಿಂದ ಸಂತುಷ್ಟಿ ಜೀವನವನ್ನು ಕಂಡಿರುವುದರಿಂದ ಮುಂದಿನ ಪೀಳಿಗೆಗೆ ಮಾರ್ಗದರ್ಶನವಾಗಿ ಇಂತಹ ಧರ್ಮ ವಿಚಾರವನ್ನು ಗ್ರಂಥವಾಗಿ ಬರೆದಿಟ್ಟಿದ್ದಾರೆ.
ಆದ್ದರಿಂದ ಜೋತಿಷ್ಯ ಶಾಸ್ತ್ರವು ಅಂದರೆ ಈಗಿನ (ಆಷ್ಟ್ರಾಲಜಿ) ಸುಳ್ಳಲ್ಲ. ಅದೇ ಜ್ಯೋತಿಷ್ಯ ಹೇಳುವವನು (ಅಸ್ಟ್ರಾಲಜಿಕ್) ಗೊತ್ತಿಲ್ಲದೆ ಸುಳ್ಳು ಹೇಳಬಹುದು. ಆದರೆ ಜ್ಯೋತಿಷ್ಯವೇ ಸುಳ್ಳು ಎಂದು ಪರಿಗಣಿಸಲು ಸಾಧ್ಯವಿಲ್ಲ. ಈ ಬರುವ ಮಹಾಲಯ ಅಮಾವಾಸ್ಯೆ ಕಳೆದ ಒಂದು ತಿಂಗಳ ನಂತರ ಎಂದು ಅವರವರ ವರ್ಗದ ಹಾಗೂ ಕುಟುಂಬದ ನಿಯಮಾನುಸಾರ ಹಿರಿಯರಿಗೆ (ಮರಣ ಹೊಂದಿದ ಪಿತೃಗಳಿಗೆ) ತೃಪ್ತಿಯಾಗಲೆಂದು ಪಿಂಡ ಪ್ರಧಾನ ತಿಲತರ್ಪಣ ಗೋಗ್ರಾಸ ಅಂದರೆ ಗೋವಿನ ಅನ್ನನೀಡುವುದು, ಗೋವು ಪೂಜೆಯನ್ನು ಮಾಡುವುದು, ಕಾಗೆಗಳಿಗೆ ಭಕ್ಷ ಸಿದ್ಧ ಪಡಿಸಿ ಬಡಿಸುವುದು ಹಾಗೂ ಪಿತೃಗಳ ಸಂತುಷ್ಟಿಗೆಂದು ದಾನ ಧರ್ಮಾಧಿಗಳನ್ನು ಮಾಡಿ ಪುಣ್ಯ ಸಂಪಾದನೆಗೆ ಮಾರ್ಗವಿದೆ.
ಅದರಿಂದ ಸಂತೃಪ್ತಿ ಮತ್ತು ಮನ:ಶಾಂತಿಯನ್ನು ಕಂಡುಕೊಳ್ಳಬಹುದು ಮತ್ತು ದಸರಾ ಹಬ್ಬ ಆಚರಣೆಯಲ್ಲಿ ಯಾವುದೇ ಗೊಂದಲಗಳು ಬೇಡ. ಸರ್ವೇ ಜನೋ ಸುಖಿನೋ ಭವಂತು.
ಡಾ.ಮಹಾಭಲೇಶ್ವರ ಭಟ್,
source whatsapp
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಮಾರ್ಚ್, 2019) ನಿಮ್ಮ ಪತ್ನಿಯೊಂದಿಗಿನ ಸಂಬಂಧಗಳನ್ನು ಉತ್ತಮಗೊಳಿಸುವ ಒಂದು ದಿನ. ಕುಟುಂಬದಲ್ಲಿರುವ ಇಬ್ಬರೂ ಅವರ ಸಂಬಂಧದಲ್ಲಿ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ. whatsapp ಮಾತ್ರ ಮಾಡಿ…9141788533 whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್…
ಬಳ್ಳಾರಿ ಜಿಲ್ಲೆಯ ಎಸ್ಬಿಐ ಬ್ಯಾಂಕ್ ಎಟಿಎಂನಲ್ಲಿ ಹಣದ ಬದಲು ಪೇಪರ್ ಬಂದ ಪ್ರಕರಣಕ್ಕೆ ಸಂಭಂದಿಸಿದಂತೆ ಬ್ಯಾಂಕ್ ಅಧಿಕಾರಿಗಳು ತಪ್ಪೊಪ್ಪಿಕೊಂಡಿದ್ದಾರೆ. ಇಲ್ಲಿನ ಟ್ಯಾಂಕ್ 1 ರಸ್ತೆಯಲ್ಲಿರುವ ಎಸ್ಬಿಐ ಎಟಿಎಂನಲ್ಲಿ ನೋಟಿನ ಬದಲು ಪೇಪರ್ ಬಂದ ಘಟನೆ ನಡೆದಿದೆ. ರಮೇಶ್ ಎನ್ನುವವರು 8000 ರೂಪಾಯಿ ಡ್ರಾ ಮಾಡಿದ್ದು 500 ರೂಪಾಯಿ ಮುಖಬೆಲೆಯ 15 ನೋಟುಗಳ ನಡುವೆ ಅದೇ ಗಾತ್ರದ ಚಲನ್ ಮಾದರಿಯ ಪೇಪರ್ವೊಂದು ಬಂದಿದೆ. ಹಣವನ್ನು ಎಣಿಸಿ ನೋಡುವಾಗ ಪೇಪರ್ ಕಂಡಿದ್ದು ಬ್ಯಾಂಕ್ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಒಂದೋ ಹಣದ…
ಅಂತಿಮ ಸಂಸ್ಕಾರದ ವೇಳೆ ಸ್ಮಶಾನಕ್ಕೆ ಮಹಿಳೆಯರು ಹೋಗುವುದಿಲ್ಲ. ಹಿಂದೂ ಧರ್ಮದಲ್ಲಿ ಸ್ಮಶಾನಕ್ಕೆ ಮಹಿಳೆಯರು ಹೋಗೋದು ನಿಷಿದ್ಧ. ಇದಕ್ಕೆ ಅನೇಕ ಕಾರಣಗಳಿವೆ. ಮನೆಯಲ್ಲಿ ಸಾವಾದ್ರೆ ಶವವನ್ನು ಮನೆಯಿಂದ ತೆಗೆದುಕೊಂಡು ಹೋದ ನಂತ್ರ ಮನೆಯನ್ನು ಸ್ವಚ್ಛಗೊಳಿಸಲಾಗುತ್ತದೆ. ಮನೆ ಕ್ಲೀನ್ ಮಾಡಿದ ನಂತ್ರ ಅಡುಗೆ ಮಾಡಲಾಗುತ್ತದೆ. ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೋಗ್ಲಿ ಎನ್ನುವ ಕಾರಣಕ್ಕೆ ಹೀಗೆ ಮಾಡಲಾಗುತ್ತದೆ. ಈ ಎಲ್ಲ ಕೆಲಸ ಮಾಡಲು ಮಹಿಳೆಯರು ಮನೆಯಲ್ಲಿರುವುದು ಅವಶ್ಯಕ. ಆದ್ರೆ ಇದೊಂದೇ ಕಾರಣವಲ್ಲ. ಸ್ಮಶಾನದಲ್ಲಿ ಆತ್ಮಗಳು ವಾಸವಾಗಿರುತ್ತವೆ. ಕೆಟ್ಟ ಆತ್ಮಗಳು ನೆಲೆ ನಿಲ್ಲಲು ಮನುಷ್ಯನ…
ನಿಮ್ಮ ದೇಹ ತೂಕವನ್ನು ಬೇಗನೆ ಇಳಿಸಬೇಕೆಂದಿದ್ದರೆ ಬೆಳಗಿನ ಉಪಹಾರವನ್ನು ಬಿಟ್ಟುಬಿಡಿ. ಮಧ್ಯಾಹ್ನ ಊಟದ ವರೆಗೆ ಏನೂ ತಿನ್ನದೆ ಉಪವಾಸ ವಿದ್ದರೆ ಪ್ರತಿನಿತ್ಯ ಸುಮಾರು 350 ರಷ್ಟು ಕಡಿಮೆ ಕ್ಯಾಲೊರಿ ಆಹಾರ ಸೇವಿಸಬಹುದು ಮತ್ತು ಇದರಿಂದ ದೇಹದ ತೂಕವನ್ನು ಇಳಿಸಬಹುದು ಎಂದು ಅಧ್ಯಯನವೊಂದು ಹೇಳುತ್ತದೆ.
ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟನೆ ನಡೆದಿದೆ. 27 ವರ್ಷದ ಮಂಜುನಾಥ್ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು…