ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಪ್ರಜೆಗಳಲ್ಲಿ ಬಹು ಸಂಖ್ಯಾತರು ಎನಿಸಿಕೊಂಡ ಹಿಂದೂ ಧರ್ಮೀಯರು ಪ್ರತೀ ಮಾಸದಲ್ಲಿ ಯಾವುದಾದರು ಎಳೆಯಲ್ಲಿ ಧಾರ್ಮಿಕ ಹಬ್ಬವನ್ನು ಆಚರಣೆ ಮಾಡುವುದು ಸಂಪ್ರದಾಯ ಮತ್ತು ಇದನ್ನು ಮೈಗೂಡಿಸಿಕೊಂಡು ಬಂದಿದ್ದಾರೆ ಕೂಡ.
ಸಾಮಾನ್ಯವಾಗಿ ಎಲ್ಲಾ ಜನಾಂಗದವರು ಆಚರಿಸುವ ಪಿತೃಪಕ್ಷ ಮಹಾಲಯ ಅಮಾವಾಸ್ಯೆ ಮುಗಿದ ತಕ್ಷಣ ನವರಾತ್ರಿ ಆರಂಭವಾಗಿ ಹತ್ತನೇಯ ದಿನ ದಸರಾ ಆಚರಣೆ ಮಾಡುವುದು ನಿಯಮವಾಗಿದೆ.
ಆದರೆ ಈ ವರ್ಷ ಅಶ್ವಿಜ ಮಾಸ ಅಧಿಕ ಬಂದಿರುವುದರಿಂದ ಅಂದರೆ ನಿಜ ಅಶ್ವಿಜ, ಅಧಿಕ ಅಶ್ವಿಜ ಎಂದು ಎರಡು ಮಾಸಗಳು ಬಂದಿರುವುದರಿಂದ ದಸರಾ ಹಬ್ಬ ಮಹಾಲಯ ಅಮಾವಾಸ್ಯೆ ಕಳೆದ ಒಂದು ತಿಂಗಳ ನಂತರ ಬರುತ್ತದೆ. ಈ ಬಗ್ಗೆ ಹಲವರಲ್ಲಿ ಗೊಂದಲವಿದೆ.
ನಾವು ಹಬ್ಬ ಆಚರಣೆ ಮಾಡುವುದು ಹಾಗೂ ರಾಶಿ ನಕ್ಷತ್ರಗಳನ್ನು ನೋಡುವುದು ಕೇವಲ ಪರಂಪರೆ ಎಂದು ತಿಳಿದು ಆಚರಣೆ ಮಾಡುವುದಕ್ಕಿಂತ ವೈಜ್ಞಾನಿಕವಾಗಿಯು ತಿಳಿದುಕೊಳ್ಳಬೇಕಾಗುತ್ತದೆ. ನಕ್ಷತ್ರ ರಾಶಿ ಹಾಗೂ ಪಂಚಾಂಗಗಳು ಏನು ಎನ್ನುವುದನ್ನು ವಿಚಾರಿಸಿ ತಿಳಿದುಕೊಂಡು ನಮ್ಮ ಗೊಂದಲವನ್ನು ನಾವೇ ನಿವಾರಣೆ ಮಾಡಿಕೊಳ್ಳಬಹುದು. ಸಂವತ್ಸರಗಳನ್ನು ಸೂರ್ಯ, ಚಂದ್ರರ ಚಲನ ವಲನದಿಂದ ಲೆಕ್ಕ ಹಾಕಿ ಸೌರಮಾನ ಹಾಗೂ ಚಂದ್ರಮಾನ ಎನ್ನುವ ಮಾನದಂಡದಿಂದ ನಿರ್ಣಯಿಸಲಾಗುತ್ತದೆ.
ಸೂರ್ಯನಿಗೆ ಮೇಷ, ವೃಷಭ ಎಂಬ ರಾಶಿ ಚಕ್ರವನ್ನು ಒಂದು ಸುತ್ತು ಸುತ್ತಲು 30 ತಿಂಗಳು 14 ದಿವಸ ಬೇಕು. ಅದೇ ಸೂರ್ಯನಿಗೆ ಒಂದು ವರ್ಷ ಅಂದರೆ ಚೈತ್ರ, ವೈಶಾಖ ದಿಂದ ಮೀನ ಮಾಸ ಎಂಬ ಋತು ಚಕ್ರವನ್ನು ಸುತ್ತಲು 365.25 ಘಳಿಗೆ ಬೇಕಾಗುತ್ತದೆ. ಇದಕ್ಕೆ ಸೌರಮಾನ ಎಂದು ಕರೆಯುತ್ತಾರೆ. ಅದೇ ಚಂದ್ರನಿಗೆ 354 ದಿನಗಳು ಬೇಕಾಗುತ್ತದೆ. ಇದಕ್ಕೆ ಚಂದ್ರಮಾನ ಎಂದು ಕರೆಯುತ್ತಾರೆ.
ಸೂರ್ಯನಿಗೂ, ಚಂದ್ರನಿಗೂ ಒಂದು ವರ್ಷ ಮುಗಿಸಬೇಕಾದರೆ ಪ್ರತಿ ವರ್ಷವು 11 ದಿನ ವ್ಯತ್ಯಾಸಗಳು ಬಂದು ಆ ದಿನಗಳು ಪ್ರತಿ ವರ್ಷವು ಬಾಕಿಯಾಗಿ 3 ವರ್ಷಕ್ಕೊಮ್ಮೆ ಆ 11 ದಿನಗಳನ್ನು ಸೇರಿಸಿ ಒಂದು ಆಧಿಕ ಮಾಸ ಎಂದು ಮಾಡುತ್ತಾರೆ. ಹೀಗೆ ಬೇರೆ ಬೇರೆ ಧರ್ಮದವರು ಹಾಗೂ ಬೇರೆ ಬೇರೆ ದಿನ ಮಾಸಗಳನ್ನು ನಿರ್ಣಯಿಸುವವರು ಇಂಗ್ಲಿಷ್ ಕ್ಯಾಲೆಂಡರ್ಗಳನ್ನು 30-31 ಹಾಗೂ ಫೆಬ್ರವರಿ 28-29 ದಿನಾಂಕಗಳನ್ನು ಹೆಚ್ಚುವರಿ ಹಾಕಿ ಸಮದೂಗಿಸುತ್ತಾರೆ. ಹಾಗೆಯೇ ಬೇರೆ ಬೇರೆ ಧರ್ಮದ ಕ್ಯಾಲೆಂಡರ್ಗಳಲ್ಲಿ ಕೂಡ ಹೀಗೆ ಸರಿದೂಗಿಸಲಾಗುತ್ತದೆ.
ಅದೇ ಪ್ರಕಾರ ಪ್ರತಿ ಮೂರು ವರ್ಷಕೊಮ್ಮೆ ಬೇರೆ ಬೇರೆ ತಿಂಗಳುಗಳು ಅಧಿಕ ಮಾಸ ಎಂದು ಬರುತ್ತದೆ. ಆದ್ದರಿಂದ ಯಾರೂ ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ.
ಪ್ರತಿವರ್ಷ ಮಹಾಲಯ ಅಮಾವಾಸ್ಯೆ ಆಚರಣೆ ಮಾಡುವವರು ಸೆ.17 ರಂದು ಆಚರಿಸಬಹುದು. ನವರಾತ್ರಿ ಹಾಗೂ ದಸರಾ ಆಚರಣೆ ಮಾಡುವವರು ಮುಂದಿನ ಅಮವಾಸ್ಯೆ ಕಳೆದ ಮೇಲೆ ಆಚರಣೆ ಮಾಡಬೇಕು. ಈ ಮಧ್ಯದ ಅಧಿಕ ಮಾಸದಲ್ಲಿ ಶುಭಕಾರ್ಯಗಳನ್ನು ಅಂದರೆ ಮದುವೆ, ಗೃಹ ಪ್ರವೇಶ, ಮಂಗಳ ಕಾರ್ಯಗಳನ್ನು ಆಚರಿಸುವಂತಿಲ್ಲ.
ದೇವತಾ ಆರಾಧನೆ, ವ್ರತÀ, ದಾನ, ಧರ್ಮ ಮತ್ತು ಪೂರ್ವ ನಿಯೋಜಿತ ಅಂದರೆ ಸೀಮಂತಾದಿಗಳನ್ನು ನಡೆಸಬಹುದು. ಹೀಗೆ ಎಲ್ಲವು ಕೂಡ ಹಿಂದಿನ ಋಷಿ ಮುನಿಗಳು ತಮ್ಮ ಸ್ವಯಂ ಆಚರಣೆಯಿಂದ ಸಂತುಷ್ಟಿ ಜೀವನವನ್ನು ಕಂಡಿರುವುದರಿಂದ ಮುಂದಿನ ಪೀಳಿಗೆಗೆ ಮಾರ್ಗದರ್ಶನವಾಗಿ ಇಂತಹ ಧರ್ಮ ವಿಚಾರವನ್ನು ಗ್ರಂಥವಾಗಿ ಬರೆದಿಟ್ಟಿದ್ದಾರೆ.
ಆದ್ದರಿಂದ ಜೋತಿಷ್ಯ ಶಾಸ್ತ್ರವು ಅಂದರೆ ಈಗಿನ (ಆಷ್ಟ್ರಾಲಜಿ) ಸುಳ್ಳಲ್ಲ. ಅದೇ ಜ್ಯೋತಿಷ್ಯ ಹೇಳುವವನು (ಅಸ್ಟ್ರಾಲಜಿಕ್) ಗೊತ್ತಿಲ್ಲದೆ ಸುಳ್ಳು ಹೇಳಬಹುದು. ಆದರೆ ಜ್ಯೋತಿಷ್ಯವೇ ಸುಳ್ಳು ಎಂದು ಪರಿಗಣಿಸಲು ಸಾಧ್ಯವಿಲ್ಲ. ಈ ಬರುವ ಮಹಾಲಯ ಅಮಾವಾಸ್ಯೆ ಕಳೆದ ಒಂದು ತಿಂಗಳ ನಂತರ ಎಂದು ಅವರವರ ವರ್ಗದ ಹಾಗೂ ಕುಟುಂಬದ ನಿಯಮಾನುಸಾರ ಹಿರಿಯರಿಗೆ (ಮರಣ ಹೊಂದಿದ ಪಿತೃಗಳಿಗೆ) ತೃಪ್ತಿಯಾಗಲೆಂದು ಪಿಂಡ ಪ್ರಧಾನ ತಿಲತರ್ಪಣ ಗೋಗ್ರಾಸ ಅಂದರೆ ಗೋವಿನ ಅನ್ನನೀಡುವುದು, ಗೋವು ಪೂಜೆಯನ್ನು ಮಾಡುವುದು, ಕಾಗೆಗಳಿಗೆ ಭಕ್ಷ ಸಿದ್ಧ ಪಡಿಸಿ ಬಡಿಸುವುದು ಹಾಗೂ ಪಿತೃಗಳ ಸಂತುಷ್ಟಿಗೆಂದು ದಾನ ಧರ್ಮಾಧಿಗಳನ್ನು ಮಾಡಿ ಪುಣ್ಯ ಸಂಪಾದನೆಗೆ ಮಾರ್ಗವಿದೆ.
ಅದರಿಂದ ಸಂತೃಪ್ತಿ ಮತ್ತು ಮನ:ಶಾಂತಿಯನ್ನು ಕಂಡುಕೊಳ್ಳಬಹುದು ಮತ್ತು ದಸರಾ ಹಬ್ಬ ಆಚರಣೆಯಲ್ಲಿ ಯಾವುದೇ ಗೊಂದಲಗಳು ಬೇಡ. ಸರ್ವೇ ಜನೋ ಸುಖಿನೋ ಭವಂತು.
ಡಾ.ಮಹಾಭಲೇಶ್ವರ ಭಟ್,
source whatsapp
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲರ ಜೀವನ ಅವರು ಅಂದುಕೊಂಡಷ್ಟು ಸುಲಭವೂ ಸುಗಮವೂ ಆಗಿರಲ್ಲ. ಇಂದು ನೀವು ಯಾರನ್ನು ಯಶಸ್ವಿ ವ್ಯಕ್ತಿಗಳು ಎಂದು ಗುರುತಿಸುತ್ತೀರೋ ಅವರು ಹುಟ್ಟಿದಾಗಿನಿಂದ ಯಶಸ್ಸು ಪಡೆದು ಬಂದವರಲ್ಲ ಬದಲಿಗೆ ಅವಮಾನ ಸನ್ಮಾನ ಎಲ್ಲವನ್ನು ಮೆಟ್ಟಿ ನಿಂತು ಸಮಾಜದಲ್ಲಿ ತಲೆ ಎತ್ತಿ ಬದುಕಿದವರು. ನೆನಪಿರಲಿ ಬದುಕಿನ ದಾರಿಯಲ್ಲಿ ನಮ್ಮವರಿಂದಲೇ ನಮಗೆ ವಾಮನ ನಮ್ಮವರಿಂದಲೇ ಸನ್ಮಾನ. ಅದೇನೇ ಇರಲಿ ಇಲೊಬ್ಬಳು ಹೆಣ್ಣುಮಗಳಿದ್ದಾಳೆ ಆಕೆ ಹೇಗೆ ಐಪಿಎಸ್ ಅಧಿಕಾರಿ ಆದಳು ಎನ್ನುವ ಸ್ಟೋರಿಯನ್ನು ನಿಮ್ಮ ಮುಂದೆ ಬಿಚ್ಚಿಡುತ್ತಿದ್ದೇವೆ. ಈ ಸ್ಟೋರಿ ಕೇಳಿದ ನೀವು…
ಸಿರಿಯಾ’ ಇದು ನೈರುತ್ಯ ಏಷ್ಯಾದಲ್ಲಿರುವ ಒಂದು ಅರಬ್ ದೇಶ.ಪಶ್ಚಿಮ ಏಷ್ಯಾದ ಸಿರಿಯಾ ಕಳೆದ ಏಳು ವರ್ಷಗಳಿಂದ ಆಂತರಿಕ ಕ್ಷೋಭೆಯಿಂದ ತತ್ತರಿಸುತ್ತಿದೆ. ಕಳೆದ 22 ತಿಂಗಳಿನಿಂದ ನಿರಂತರವಾಗಿ ಸಿರಿಯಾದಲ್ಲಿ ನಡೆಯುತ್ತಿರುವ ಜನಾಂಗೀಯ ಕಲಹದಿಂದಾಗಿ 60 ಸಾವಿರಕ್ಕೂ ಹೆಚ್ಚು ಅಮಾಯಕ ಪ್ರಜೆಗಳು ಬಲಿಯಾಗಿದ್ದಾರೆ. ಏಕೆ ಈ ಯುದ್ದ..? ಕಳೆದ 18 ವರ್ಷಗಳಿಂದ ಬಷರ್ ಅಲ್ ಅಸ್ಸಾದ್ ಅವರು ಸಿರಿಯಾ ಅಧ್ಯಕ್ಷರಾಗಿದ್ದಾರೆ. ಇವರು ಅಲ್ಪ ಸಂಖ್ಯಾತರಾಗಿರುವ ಶಿಯಾ ಉಪಪಂಗಡ ಅಲಾವಿ ಸಮುದಾಯಕ್ಕೆ ಸೇರಿದವರು. ಶಿಯಾ ಪ್ರತಿನಿಧಿಯೊಬ್ಬರು ತಮ್ಮ ದೇಶ ಆಳುವುದನ್ನು…
ಗಿರೀಶ್ ಕಾರ್ನಾಡ್ ಅವರ ಆಸೆಯಂತೆ ಅವರ ಅಂತ್ಯಸಂಸ್ಕಾರ ನಡೆಸಲು ಕುಟುಂಬದವರು ಸಿದ್ಧತೆ ನಡೆಸುತ್ತಿದ್ದಾರೆ. ನನ್ನ ಅಂತ್ಯ ಸಂಸ್ಕಾರಕ್ಕೆ ಯಾವುದೇ ರಾಜಕಾರಣಿ, ಸಾರ್ವಜನಿಕರು ಬರಬಾರದು. ಸರ್ಕಾರಿ ಗೌರವ, ಸರ್ಕಾರಿ ಜಾಗದ ಅಗತ್ಯವಿಲ್ಲ. ಕುಟುಂಬದ ಸದಸ್ಯರು ಮಾತ್ರ ಬರಬೇಕು. ಯಾವುದೇ ವಿಧಿವಿಧಾನವನ್ನು ಅನುಸರಿಸಬಾರದು. ಅಂತಿಮ ನಮನವನ್ನು ಸಲ್ಲಿಸಬಾರದು ಎಂದು ಗಿರೀಶ್ ಕಾರ್ನಾಡ್ ತಮ್ಮ ಪತ್ನಿ ಸರಸ್ವತಿ ಜೊತೆ ಹೇಳಿದ್ದರು. ಮನೆ ಬಳಿ ಯಾರೂ ಬಂದು ನಮನ ಸಲ್ಲಿಸಬಾರದು. ಯಾವುದೇ ಸಂಪ್ರದಾಯ, ವಿಧಿ ವಿಧಾನ ಇಲ್ಲದೇ ಸಂಸ್ಕಾರ ಮಾಡಬೇಕು ಎಂದು ಕೊನೆಯ…
ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್ನಲ್ಲಿ ವೇದಿಕೆ ಸಿದ್ಧವಾಗಿದೆ.ಈಗಾಗಲೆ ಚಿತ್ರಕ್ಕೆ ‘ಮೂರ್ತಿ’ ಎಂದು ಟೈಟಲ್ ಇಡಲಾಗಿದೆ. ಆದರೆ ಈಗ ಪ್ರೇಕ್ಷಕರಲ್ಲಿ ಸುಧಾ ಮೂರ್ತಿ ಪಾತ್ರದಲ್ಲಿಯಾರು ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಸುಧಾಮೂರ್ತಿ ಜೀವನವನ್ನು ತೆರೆಮೇಲೆ ತರುವ ಸಾಹಸಕ್ಕೆ ಕೈ ಹಾಕಿರುವುದು ಬಾಲಿವುಡ್ ನ ಖ್ಯಾತನಿರ್ದೇಶಕಿ ಅಶ್ವಿನಿ ಅಯ್ಯರ್ ತಿವಾರಿ. ಈಗಾಗಲೆ ಸ್ಕ್ರಿಪ್ಟ್ ಫೈನಲ್ ಮಾಡಿಕೊಂಡಿರುವ ಅಶ್ವಿನಿ ಪಾತ್ರಗಳ ಆಯ್ಕೆಯಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಅವರ…
ರೇಶನ್ ಕಾರ್ಡ್ ಗಾಗಿ ಹೊಸದಾಗಿ ಅರ್ಜಿ ಸಲ್ಲಿಸಿದವರು ಹಾಗೂ ಈಗಾಗಲೇ ರೇಶನ್ ಕಾರ್ಡ್ ಹೊಂದಿದವರು ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರ ಹಾಗೂ ಪಡಿತರ ಚೀಟಿ ಹೊಂದಿದವರ ಹೆಸರು ತೆಗೆಯಲಾಗಿದೆಯೇ ಎಂಬುದನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ರೇಶನ್ ಕಾರ್ಡ್ ಹೊಂದಿದವರು ಈಗ ಬೇರೆ ಬೇರೆ ನಗರಗಳಿಗೆ ವಲಸೆ ಹೊಗಿರುತ್ತಾರೆ. ಹಾಗೂ ಕೆಲಸ ಅರಸಿ ಬೇರೆ ನಗರ,…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಶ್ರೀ ಕೃಷ್ಣನ…