ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಪ್ರಜೆಗಳಲ್ಲಿ ಬಹು ಸಂಖ್ಯಾತರು ಎನಿಸಿಕೊಂಡ ಹಿಂದೂ ಧರ್ಮೀಯರು ಪ್ರತೀ ಮಾಸದಲ್ಲಿ ಯಾವುದಾದರು ಎಳೆಯಲ್ಲಿ ಧಾರ್ಮಿಕ ಹಬ್ಬವನ್ನು ಆಚರಣೆ ಮಾಡುವುದು ಸಂಪ್ರದಾಯ ಮತ್ತು ಇದನ್ನು ಮೈಗೂಡಿಸಿಕೊಂಡು ಬಂದಿದ್ದಾರೆ ಕೂಡ.
ಸಾಮಾನ್ಯವಾಗಿ ಎಲ್ಲಾ ಜನಾಂಗದವರು ಆಚರಿಸುವ ಪಿತೃಪಕ್ಷ ಮಹಾಲಯ ಅಮಾವಾಸ್ಯೆ ಮುಗಿದ ತಕ್ಷಣ ನವರಾತ್ರಿ ಆರಂಭವಾಗಿ ಹತ್ತನೇಯ ದಿನ ದಸರಾ ಆಚರಣೆ ಮಾಡುವುದು ನಿಯಮವಾಗಿದೆ.
ಆದರೆ ಈ ವರ್ಷ ಅಶ್ವಿಜ ಮಾಸ ಅಧಿಕ ಬಂದಿರುವುದರಿಂದ ಅಂದರೆ ನಿಜ ಅಶ್ವಿಜ, ಅಧಿಕ ಅಶ್ವಿಜ ಎಂದು ಎರಡು ಮಾಸಗಳು ಬಂದಿರುವುದರಿಂದ ದಸರಾ ಹಬ್ಬ ಮಹಾಲಯ ಅಮಾವಾಸ್ಯೆ ಕಳೆದ ಒಂದು ತಿಂಗಳ ನಂತರ ಬರುತ್ತದೆ. ಈ ಬಗ್ಗೆ ಹಲವರಲ್ಲಿ ಗೊಂದಲವಿದೆ.

ನಾವು ಹಬ್ಬ ಆಚರಣೆ ಮಾಡುವುದು ಹಾಗೂ ರಾಶಿ ನಕ್ಷತ್ರಗಳನ್ನು ನೋಡುವುದು ಕೇವಲ ಪರಂಪರೆ ಎಂದು ತಿಳಿದು ಆಚರಣೆ ಮಾಡುವುದಕ್ಕಿಂತ ವೈಜ್ಞಾನಿಕವಾಗಿಯು ತಿಳಿದುಕೊಳ್ಳಬೇಕಾಗುತ್ತದೆ. ನಕ್ಷತ್ರ ರಾಶಿ ಹಾಗೂ ಪಂಚಾಂಗಗಳು ಏನು ಎನ್ನುವುದನ್ನು ವಿಚಾರಿಸಿ ತಿಳಿದುಕೊಂಡು ನಮ್ಮ ಗೊಂದಲವನ್ನು ನಾವೇ ನಿವಾರಣೆ ಮಾಡಿಕೊಳ್ಳಬಹುದು. ಸಂವತ್ಸರಗಳನ್ನು ಸೂರ್ಯ, ಚಂದ್ರರ ಚಲನ ವಲನದಿಂದ ಲೆಕ್ಕ ಹಾಕಿ ಸೌರಮಾನ ಹಾಗೂ ಚಂದ್ರಮಾನ ಎನ್ನುವ ಮಾನದಂಡದಿಂದ ನಿರ್ಣಯಿಸಲಾಗುತ್ತದೆ.

ಸೂರ್ಯನಿಗೆ ಮೇಷ, ವೃಷಭ ಎಂಬ ರಾಶಿ ಚಕ್ರವನ್ನು ಒಂದು ಸುತ್ತು ಸುತ್ತಲು 30 ತಿಂಗಳು 14 ದಿವಸ ಬೇಕು. ಅದೇ ಸೂರ್ಯನಿಗೆ ಒಂದು ವರ್ಷ ಅಂದರೆ ಚೈತ್ರ, ವೈಶಾಖ ದಿಂದ ಮೀನ ಮಾಸ ಎಂಬ ಋತು ಚಕ್ರವನ್ನು ಸುತ್ತಲು 365.25 ಘಳಿಗೆ ಬೇಕಾಗುತ್ತದೆ. ಇದಕ್ಕೆ ಸೌರಮಾನ ಎಂದು ಕರೆಯುತ್ತಾರೆ. ಅದೇ ಚಂದ್ರನಿಗೆ 354 ದಿನಗಳು ಬೇಕಾಗುತ್ತದೆ. ಇದಕ್ಕೆ ಚಂದ್ರಮಾನ ಎಂದು ಕರೆಯುತ್ತಾರೆ.
ಸೂರ್ಯನಿಗೂ, ಚಂದ್ರನಿಗೂ ಒಂದು ವರ್ಷ ಮುಗಿಸಬೇಕಾದರೆ ಪ್ರತಿ ವರ್ಷವು 11 ದಿನ ವ್ಯತ್ಯಾಸಗಳು ಬಂದು ಆ ದಿನಗಳು ಪ್ರತಿ ವರ್ಷವು ಬಾಕಿಯಾಗಿ 3 ವರ್ಷಕ್ಕೊಮ್ಮೆ ಆ 11 ದಿನಗಳನ್ನು ಸೇರಿಸಿ ಒಂದು ಆಧಿಕ ಮಾಸ ಎಂದು ಮಾಡುತ್ತಾರೆ. ಹೀಗೆ ಬೇರೆ ಬೇರೆ ಧರ್ಮದವರು ಹಾಗೂ ಬೇರೆ ಬೇರೆ ದಿನ ಮಾಸಗಳನ್ನು ನಿರ್ಣಯಿಸುವವರು ಇಂಗ್ಲಿಷ್ ಕ್ಯಾಲೆಂಡರ್ಗಳನ್ನು 30-31 ಹಾಗೂ ಫೆಬ್ರವರಿ 28-29 ದಿನಾಂಕಗಳನ್ನು ಹೆಚ್ಚುವರಿ ಹಾಕಿ ಸಮದೂಗಿಸುತ್ತಾರೆ. ಹಾಗೆಯೇ ಬೇರೆ ಬೇರೆ ಧರ್ಮದ ಕ್ಯಾಲೆಂಡರ್ಗಳಲ್ಲಿ ಕೂಡ ಹೀಗೆ ಸರಿದೂಗಿಸಲಾಗುತ್ತದೆ.
ಅದೇ ಪ್ರಕಾರ ಪ್ರತಿ ಮೂರು ವರ್ಷಕೊಮ್ಮೆ ಬೇರೆ ಬೇರೆ ತಿಂಗಳುಗಳು ಅಧಿಕ ಮಾಸ ಎಂದು ಬರುತ್ತದೆ. ಆದ್ದರಿಂದ ಯಾರೂ ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ.
ಪ್ರತಿವರ್ಷ ಮಹಾಲಯ ಅಮಾವಾಸ್ಯೆ ಆಚರಣೆ ಮಾಡುವವರು ಸೆ.17 ರಂದು ಆಚರಿಸಬಹುದು. ನವರಾತ್ರಿ ಹಾಗೂ ದಸರಾ ಆಚರಣೆ ಮಾಡುವವರು ಮುಂದಿನ ಅಮವಾಸ್ಯೆ ಕಳೆದ ಮೇಲೆ ಆಚರಣೆ ಮಾಡಬೇಕು. ಈ ಮಧ್ಯದ ಅಧಿಕ ಮಾಸದಲ್ಲಿ ಶುಭಕಾರ್ಯಗಳನ್ನು ಅಂದರೆ ಮದುವೆ, ಗೃಹ ಪ್ರವೇಶ, ಮಂಗಳ ಕಾರ್ಯಗಳನ್ನು ಆಚರಿಸುವಂತಿಲ್ಲ.

ದೇವತಾ ಆರಾಧನೆ, ವ್ರತÀ, ದಾನ, ಧರ್ಮ ಮತ್ತು ಪೂರ್ವ ನಿಯೋಜಿತ ಅಂದರೆ ಸೀಮಂತಾದಿಗಳನ್ನು ನಡೆಸಬಹುದು. ಹೀಗೆ ಎಲ್ಲವು ಕೂಡ ಹಿಂದಿನ ಋಷಿ ಮುನಿಗಳು ತಮ್ಮ ಸ್ವಯಂ ಆಚರಣೆಯಿಂದ ಸಂತುಷ್ಟಿ ಜೀವನವನ್ನು ಕಂಡಿರುವುದರಿಂದ ಮುಂದಿನ ಪೀಳಿಗೆಗೆ ಮಾರ್ಗದರ್ಶನವಾಗಿ ಇಂತಹ ಧರ್ಮ ವಿಚಾರವನ್ನು ಗ್ರಂಥವಾಗಿ ಬರೆದಿಟ್ಟಿದ್ದಾರೆ.
ಆದ್ದರಿಂದ ಜೋತಿಷ್ಯ ಶಾಸ್ತ್ರವು ಅಂದರೆ ಈಗಿನ (ಆಷ್ಟ್ರಾಲಜಿ) ಸುಳ್ಳಲ್ಲ. ಅದೇ ಜ್ಯೋತಿಷ್ಯ ಹೇಳುವವನು (ಅಸ್ಟ್ರಾಲಜಿಕ್) ಗೊತ್ತಿಲ್ಲದೆ ಸುಳ್ಳು ಹೇಳಬಹುದು. ಆದರೆ ಜ್ಯೋತಿಷ್ಯವೇ ಸುಳ್ಳು ಎಂದು ಪರಿಗಣಿಸಲು ಸಾಧ್ಯವಿಲ್ಲ. ಈ ಬರುವ ಮಹಾಲಯ ಅಮಾವಾಸ್ಯೆ ಕಳೆದ ಒಂದು ತಿಂಗಳ ನಂತರ ಎಂದು ಅವರವರ ವರ್ಗದ ಹಾಗೂ ಕುಟುಂಬದ ನಿಯಮಾನುಸಾರ ಹಿರಿಯರಿಗೆ (ಮರಣ ಹೊಂದಿದ ಪಿತೃಗಳಿಗೆ) ತೃಪ್ತಿಯಾಗಲೆಂದು ಪಿಂಡ ಪ್ರಧಾನ ತಿಲತರ್ಪಣ ಗೋಗ್ರಾಸ ಅಂದರೆ ಗೋವಿನ ಅನ್ನನೀಡುವುದು, ಗೋವು ಪೂಜೆಯನ್ನು ಮಾಡುವುದು, ಕಾಗೆಗಳಿಗೆ ಭಕ್ಷ ಸಿದ್ಧ ಪಡಿಸಿ ಬಡಿಸುವುದು ಹಾಗೂ ಪಿತೃಗಳ ಸಂತುಷ್ಟಿಗೆಂದು ದಾನ ಧರ್ಮಾಧಿಗಳನ್ನು ಮಾಡಿ ಪುಣ್ಯ ಸಂಪಾದನೆಗೆ ಮಾರ್ಗವಿದೆ.
ಅದರಿಂದ ಸಂತೃಪ್ತಿ ಮತ್ತು ಮನ:ಶಾಂತಿಯನ್ನು ಕಂಡುಕೊಳ್ಳಬಹುದು ಮತ್ತು ದಸರಾ ಹಬ್ಬ ಆಚರಣೆಯಲ್ಲಿ ಯಾವುದೇ ಗೊಂದಲಗಳು ಬೇಡ. ಸರ್ವೇ ಜನೋ ಸುಖಿನೋ ಭವಂತು.
ಡಾ.ಮಹಾಭಲೇಶ್ವರ ಭಟ್,
source whatsapp
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಓಂ’ ಚಿತ್ರ ಕನ್ನಡ ಚಿತ್ರರಂಗದಲ್ಲಿ ದಾಖಲೆ ಬರೆದ ಚಿತ್ರವಾಗಿದೆ. ಶಿವರಾಜ್ ಕುಮಾರ್ ಅಭಿನಯದ ಉಪೇಂದ್ರ ನಿರ್ದೇಶನದ ಈ ಚಿತ್ರದಲ್ಲಿ ಪ್ರೇಮಾ ಅಭಿನಯಿಸಿದ್ದಾರೆ. ಶಿವಣ್ಣ ಜೊತೆಗೆ ‘ಸವ್ಯಸಾಚಿ’ ಚಿತ್ರದಲ್ಲಿ ಅಭಿನಯಿಸಿದ್ದ ಪ್ರೇಮಾ ‘ಓಂ’ ಚಿತ್ರದಲ್ಲಿ ನಾಯಕಿಯಾಗಿದ್ದಾರೆ. ಆದರೆ, ಈ ಚಿತ್ರದ ಚಿತ್ರೀಕರಣದ ವೇಳೆ ಉಪೇಂದ್ರ ಮೇಲೆ ಅವರು ಕೋಪ ಮಾಡಿಕೊಂಡಿದ್ದರು. ‘ವೀಕೆಂಡ್ ವಿತ್ ರಮೇಶ್’ ಶೋನಲ್ಲಿ ಉಪೇಂದ್ರ ಮೇಲೆ ಮುನಿಸಿಕೊಂಡಿದ್ದ ಕಾರಣವನ್ನು ಪ್ರೇಮಾ ಹೇಳಿದ್ದಾರೆ. ಮೊದಲ ಸಿನಿಮಾ ಮುಗಿದ ಬಳಿಕ ‘ಓಂ’ ಚಿತ್ರಕ್ಕೆ ಆಯ್ಕೆಯಾದೆ. ಉಪೇಂದ್ರ ಅವರಿಗೆ ಹೆಣ್ಣು ಮಕ್ಕಳ…
ಏಪ್ರಿಲ್ 1ರಿಂದ ವಾಹನ ಚಲಾಯಿಸಲು ನೈಸರ್ಗಿಕ ಅನಿಲ ಬಳಸುತ್ತಿರುವವರು ಹಾಗೂ ಅಡುಗೆ ಅನಿಲ ಬಳಕೆದಾರರ ಜೇಬಿಗೆ ಕತ್ತರಿ ಬೀಳಲಿದೆ. ಏಪ್ರಿಲ್ 1ರಂದು ಸ್ಥಳೀಯವಾಗಿ ಉತ್ಪಾದನೆಯಾಗುವ ನೈಸರ್ಗಿಕ ಅನಿಲದ ದರ ಪರಿಷ್ಕರಣೆಯಾಗಲಿದೆ. 2 ವರ್ಷಗಳಲ್ಲೇ ಅತಿ ಹೆಚ್ಚಿನ ಪ್ರಮಾಣದ ಏರಿಕೆ ಮಾಡುವ ಸಾಧ್ಯತೆ ಇದೆ. ಬೆಲೆ ಏರಿಕೆ ಕಾರಣ:- ಬೆಲೆ ಏರಿಕೆಯಿಂದ ಗ್ರಾಹಕರಿಗೆ ಹೊಡೆತ ಬೀಳಲಿದೆ. ಆದ್ರೆ ಅನಿಲ ಕ್ಷೇತ್ರಗಳಲ್ಲಿ 10 ಬಿಲಿಯನ್ ಡಾಲರ್ ನಷ್ಟು ಭಾರೀ ಮೊತ್ತ ಹೂಡಿಕೆ ಮಾಡಲು ಮುಂದಾಗಿರುವ ಖಾಸಗಿ ಕಂಪನಿ ರಿಲಯೆನ್ಸ್ ಇಂಡಸ್ಟ್ರೀಸ್…
ಪೂರ್ವ ಮತ್ತು ಪಶ್ಚಿಮ ಘಟ್ಟಗಳಬೆಸೆಯುವ ಸೇತುವೆ ಎಂದೇ ಕರೆಸಿಕೊಳ್ಳುವಹಾಗೂ ಬಿಳಿ ಬಣ್ಣವನ್ನು ಹೊದ್ದುಕೊಂಡಿರುವಸ್ವಚ್ಛಂದ ಶ್ವೇತ ವರ್ಣದ ಬೆಟ್ಟದಹೆಸರೇ ಶ್ವೇತಾದ್ರಿ.ಇಂತಹದೊಂದು ಅಪರೂಪವಾದ ಪ್ರಕೃತಿ ರಮಣೀಯವಾದ ಪ್ರೇಕ್ಷಣೀಯಸ್ಥಳ ಇರುವುದು ಚಾಮರಾಜನಗರ ಜಿಲ್ಲೆಹಾಗೂ ತಾಲೂಕಿನಲ್ಲಿ. ಹಸಿರು ಸೀರೆಯುಟ್ಟ ನಾರಿಯಂತೆಕಾಣುವ ಆ ಹಚ್ಚಹಸಿರಾದ ಬೆಟ್ಟನೋಡಲು ಕಣ್ಣೆರಡು ಸಾಲದು. ಅಂದ ಚೆಂದದ ಬೆಟ್ಟದ ಸಾಲುಗಳ ಮಧ್ಯೆ ನುಸುಳುವಗಾಳಿಗೆ ಮೈ ಒಡ್ಡಿದರೆ ಆಹಾಸ್ವರ್ಗದ ಸುಖ.ತೇಲುವ ಮೋಡಗಳ ಮಧ್ಯೆ ಬೆಟ್ಟದ ಸೊಬಗನ್ನು ಕಣ್ತುಂಬಿಕೊಳ್ಳುವುದೇ ಒಂದು ರೀತಿಯ ಆಹ್ಲಾದಕರ. ಪ್ರಕೃತಿ ಸೊಬಗನ್ನು ಹೊದ್ದು ಮಲಗಿದಂತೆ ಕಾಣುವ ಈ ಶ್ವೇತಾದ್ರಿ…
ಬಂಗಾಳ ಕ್ರಿಕೆಟ್ ಆಟಗಾರರಿಗೆ ಕೋರೋನ ಪಶ್ಚಿಮ ಬಂಗಾಳ ಕ್ರಿಕೆಟ್ 6 ಆಟಗಾರರಿಗೆ ಒಬ್ಬ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. 6 ಬಂಗಾಳ ಕ್ರಿಕೆಟ್ ಆಟಗಾರರಿಗೆ ಮತ್ತು ಒಬ್ಬ ಸಹಾಯಕ ಸಿಬ್ಬಂದಿ ಕೋವಿಡ್-19 ಪತ್ತೆಯಾಗಿದೆ.ರಣಜಿ ಪಂದ್ಯಗಳ ತಯಾರಿಯಲ್ಲಿ ತೊಡಗಿದ್ದ ಬಂಗಾಳ ಆಟಗಾರರು ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಬಂದು ತರಬೇತಿ ಯನ್ನು ರದ್ದುಗೊಳಿಸಲಾಯಿತು.ರಣಜಿ ಪಂದ್ಯಗಳನ್ನು ಆಡಲು ಬೆಂಗಳೂರು ಪ್ರವಾಸವನ್ನು ಜ.8 ಕೈಗೊಳ್ಳಬೇಕಾಗಿತ್ತು ಅದನ್ನು ಮುಂದೂಡಲಾಗಿದೆ. ಕೋವಿಡ್-19 ದೃಢಪಟ್ಟ ಆಟಗಾರರು ಸುದೀಪ್ ಚಟರ್ಜಿ ಅನುಸ್ಟಪ್ ಮಜುಂದಾರ್ ಕಾಜಿ ಜುನೈದ್ ಸೈಫಿ ಗೀತ್…
![]()
ದೀಪಾವಳಿ, ದೀಪಗಳ ಹಬ್ಬ; ಇದನ್ನು ವಿಕ್ರಮಶಕೆಯ ವರ್ಷದ ಕೊನೆಯಲ್ಲಿ ಆಚರಿಸಲಾಗುತ್ತದೆ. ವಿಕ್ರಮಶಕೆ ಉತ್ತರ ಭಾರತದಲ್ಲಿ ಉಪಯೋಗಿಸಲ್ಪಡುವುದರಿಂದ ಅಲ್ಲಿ ದೀಪಾವಳಿ ಹೊಸ ವರ್ಷದ ಹಬ್ಬವೂ ಹೌದು. ದೀಪಗಳು ಮನೆಯನ್ನು ಬೆಳಗೋದರ ಜೊತೆಗೆ ಮನಸ್ಸಿಗೆ ಮುದವನ್ನಾ ನೀಡುತ್ತವೆ. ಮನೆ ಮನಗಳನ್ನು ಬೆಳಗೋ ದೀಪಾವಳಿಗೆ ಇನ್ನೇನು ಒಂದು ವಾರವಷ್ಟೇ ಬಾಕಿ ಇದ್ದು ಸಿಲಿಕಾನ್ ಸಿಟಿಯ ಮಾರುಕಟ್ಟೆಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಒಂದ್ಕಡೆ ಟೆರಾಕೋಟಾ ಇಂದ ತಯಾರಾಗಿರೋ ಪುಟ್ಟ ಪುಟ್ಟ ದೀಪಗಳು. ಅವುಗಳ ಅಂದವನ್ನು ಮತ್ತಷ್ಟು ಹೆಚ್ಚಸ್ತಿರೋ ಬಣ್ಣ ಬಣ್ಣದ ದೀಪಗಳು….
ಕೆ.ಎ.ಎಸ್. ಅಧಿಕಾರಿಯಾಬೇಕೆಂಬ ಬಲವಾದ ಆಸಕ್ತಿ ಇರಬೇಕು. ಏನೋ ಒಂದು ಕೈ ನೋಡುತ್ತೇನೆಂಬ ಭಾವನೆ ಇರಬಾರದು. ನೂರಕ್ಕೆ ನೂರರಷ್ಟು ಉತ್ಸಾಹ ಹಾಗೂ ಛಲ ಇರಬೇಕು