ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಪ್ರಜೆಗಳಲ್ಲಿ ಬಹು ಸಂಖ್ಯಾತರು ಎನಿಸಿಕೊಂಡ ಹಿಂದೂ ಧರ್ಮೀಯರು ಪ್ರತೀ ಮಾಸದಲ್ಲಿ ಯಾವುದಾದರು ಎಳೆಯಲ್ಲಿ ಧಾರ್ಮಿಕ ಹಬ್ಬವನ್ನು ಆಚರಣೆ ಮಾಡುವುದು ಸಂಪ್ರದಾಯ ಮತ್ತು ಇದನ್ನು ಮೈಗೂಡಿಸಿಕೊಂಡು ಬಂದಿದ್ದಾರೆ ಕೂಡ.
ಸಾಮಾನ್ಯವಾಗಿ ಎಲ್ಲಾ ಜನಾಂಗದವರು ಆಚರಿಸುವ ಪಿತೃಪಕ್ಷ ಮಹಾಲಯ ಅಮಾವಾಸ್ಯೆ ಮುಗಿದ ತಕ್ಷಣ ನವರಾತ್ರಿ ಆರಂಭವಾಗಿ ಹತ್ತನೇಯ ದಿನ ದಸರಾ ಆಚರಣೆ ಮಾಡುವುದು ನಿಯಮವಾಗಿದೆ.
ಆದರೆ ಈ ವರ್ಷ ಅಶ್ವಿಜ ಮಾಸ ಅಧಿಕ ಬಂದಿರುವುದರಿಂದ ಅಂದರೆ ನಿಜ ಅಶ್ವಿಜ, ಅಧಿಕ ಅಶ್ವಿಜ ಎಂದು ಎರಡು ಮಾಸಗಳು ಬಂದಿರುವುದರಿಂದ ದಸರಾ ಹಬ್ಬ ಮಹಾಲಯ ಅಮಾವಾಸ್ಯೆ ಕಳೆದ ಒಂದು ತಿಂಗಳ ನಂತರ ಬರುತ್ತದೆ. ಈ ಬಗ್ಗೆ ಹಲವರಲ್ಲಿ ಗೊಂದಲವಿದೆ.

ನಾವು ಹಬ್ಬ ಆಚರಣೆ ಮಾಡುವುದು ಹಾಗೂ ರಾಶಿ ನಕ್ಷತ್ರಗಳನ್ನು ನೋಡುವುದು ಕೇವಲ ಪರಂಪರೆ ಎಂದು ತಿಳಿದು ಆಚರಣೆ ಮಾಡುವುದಕ್ಕಿಂತ ವೈಜ್ಞಾನಿಕವಾಗಿಯು ತಿಳಿದುಕೊಳ್ಳಬೇಕಾಗುತ್ತದೆ. ನಕ್ಷತ್ರ ರಾಶಿ ಹಾಗೂ ಪಂಚಾಂಗಗಳು ಏನು ಎನ್ನುವುದನ್ನು ವಿಚಾರಿಸಿ ತಿಳಿದುಕೊಂಡು ನಮ್ಮ ಗೊಂದಲವನ್ನು ನಾವೇ ನಿವಾರಣೆ ಮಾಡಿಕೊಳ್ಳಬಹುದು. ಸಂವತ್ಸರಗಳನ್ನು ಸೂರ್ಯ, ಚಂದ್ರರ ಚಲನ ವಲನದಿಂದ ಲೆಕ್ಕ ಹಾಕಿ ಸೌರಮಾನ ಹಾಗೂ ಚಂದ್ರಮಾನ ಎನ್ನುವ ಮಾನದಂಡದಿಂದ ನಿರ್ಣಯಿಸಲಾಗುತ್ತದೆ.

ಸೂರ್ಯನಿಗೆ ಮೇಷ, ವೃಷಭ ಎಂಬ ರಾಶಿ ಚಕ್ರವನ್ನು ಒಂದು ಸುತ್ತು ಸುತ್ತಲು 30 ತಿಂಗಳು 14 ದಿವಸ ಬೇಕು. ಅದೇ ಸೂರ್ಯನಿಗೆ ಒಂದು ವರ್ಷ ಅಂದರೆ ಚೈತ್ರ, ವೈಶಾಖ ದಿಂದ ಮೀನ ಮಾಸ ಎಂಬ ಋತು ಚಕ್ರವನ್ನು ಸುತ್ತಲು 365.25 ಘಳಿಗೆ ಬೇಕಾಗುತ್ತದೆ. ಇದಕ್ಕೆ ಸೌರಮಾನ ಎಂದು ಕರೆಯುತ್ತಾರೆ. ಅದೇ ಚಂದ್ರನಿಗೆ 354 ದಿನಗಳು ಬೇಕಾಗುತ್ತದೆ. ಇದಕ್ಕೆ ಚಂದ್ರಮಾನ ಎಂದು ಕರೆಯುತ್ತಾರೆ.
ಸೂರ್ಯನಿಗೂ, ಚಂದ್ರನಿಗೂ ಒಂದು ವರ್ಷ ಮುಗಿಸಬೇಕಾದರೆ ಪ್ರತಿ ವರ್ಷವು 11 ದಿನ ವ್ಯತ್ಯಾಸಗಳು ಬಂದು ಆ ದಿನಗಳು ಪ್ರತಿ ವರ್ಷವು ಬಾಕಿಯಾಗಿ 3 ವರ್ಷಕ್ಕೊಮ್ಮೆ ಆ 11 ದಿನಗಳನ್ನು ಸೇರಿಸಿ ಒಂದು ಆಧಿಕ ಮಾಸ ಎಂದು ಮಾಡುತ್ತಾರೆ. ಹೀಗೆ ಬೇರೆ ಬೇರೆ ಧರ್ಮದವರು ಹಾಗೂ ಬೇರೆ ಬೇರೆ ದಿನ ಮಾಸಗಳನ್ನು ನಿರ್ಣಯಿಸುವವರು ಇಂಗ್ಲಿಷ್ ಕ್ಯಾಲೆಂಡರ್ಗಳನ್ನು 30-31 ಹಾಗೂ ಫೆಬ್ರವರಿ 28-29 ದಿನಾಂಕಗಳನ್ನು ಹೆಚ್ಚುವರಿ ಹಾಕಿ ಸಮದೂಗಿಸುತ್ತಾರೆ. ಹಾಗೆಯೇ ಬೇರೆ ಬೇರೆ ಧರ್ಮದ ಕ್ಯಾಲೆಂಡರ್ಗಳಲ್ಲಿ ಕೂಡ ಹೀಗೆ ಸರಿದೂಗಿಸಲಾಗುತ್ತದೆ.
ಅದೇ ಪ್ರಕಾರ ಪ್ರತಿ ಮೂರು ವರ್ಷಕೊಮ್ಮೆ ಬೇರೆ ಬೇರೆ ತಿಂಗಳುಗಳು ಅಧಿಕ ಮಾಸ ಎಂದು ಬರುತ್ತದೆ. ಆದ್ದರಿಂದ ಯಾರೂ ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ.
ಪ್ರತಿವರ್ಷ ಮಹಾಲಯ ಅಮಾವಾಸ್ಯೆ ಆಚರಣೆ ಮಾಡುವವರು ಸೆ.17 ರಂದು ಆಚರಿಸಬಹುದು. ನವರಾತ್ರಿ ಹಾಗೂ ದಸರಾ ಆಚರಣೆ ಮಾಡುವವರು ಮುಂದಿನ ಅಮವಾಸ್ಯೆ ಕಳೆದ ಮೇಲೆ ಆಚರಣೆ ಮಾಡಬೇಕು. ಈ ಮಧ್ಯದ ಅಧಿಕ ಮಾಸದಲ್ಲಿ ಶುಭಕಾರ್ಯಗಳನ್ನು ಅಂದರೆ ಮದುವೆ, ಗೃಹ ಪ್ರವೇಶ, ಮಂಗಳ ಕಾರ್ಯಗಳನ್ನು ಆಚರಿಸುವಂತಿಲ್ಲ.

ದೇವತಾ ಆರಾಧನೆ, ವ್ರತÀ, ದಾನ, ಧರ್ಮ ಮತ್ತು ಪೂರ್ವ ನಿಯೋಜಿತ ಅಂದರೆ ಸೀಮಂತಾದಿಗಳನ್ನು ನಡೆಸಬಹುದು. ಹೀಗೆ ಎಲ್ಲವು ಕೂಡ ಹಿಂದಿನ ಋಷಿ ಮುನಿಗಳು ತಮ್ಮ ಸ್ವಯಂ ಆಚರಣೆಯಿಂದ ಸಂತುಷ್ಟಿ ಜೀವನವನ್ನು ಕಂಡಿರುವುದರಿಂದ ಮುಂದಿನ ಪೀಳಿಗೆಗೆ ಮಾರ್ಗದರ್ಶನವಾಗಿ ಇಂತಹ ಧರ್ಮ ವಿಚಾರವನ್ನು ಗ್ರಂಥವಾಗಿ ಬರೆದಿಟ್ಟಿದ್ದಾರೆ.
ಆದ್ದರಿಂದ ಜೋತಿಷ್ಯ ಶಾಸ್ತ್ರವು ಅಂದರೆ ಈಗಿನ (ಆಷ್ಟ್ರಾಲಜಿ) ಸುಳ್ಳಲ್ಲ. ಅದೇ ಜ್ಯೋತಿಷ್ಯ ಹೇಳುವವನು (ಅಸ್ಟ್ರಾಲಜಿಕ್) ಗೊತ್ತಿಲ್ಲದೆ ಸುಳ್ಳು ಹೇಳಬಹುದು. ಆದರೆ ಜ್ಯೋತಿಷ್ಯವೇ ಸುಳ್ಳು ಎಂದು ಪರಿಗಣಿಸಲು ಸಾಧ್ಯವಿಲ್ಲ. ಈ ಬರುವ ಮಹಾಲಯ ಅಮಾವಾಸ್ಯೆ ಕಳೆದ ಒಂದು ತಿಂಗಳ ನಂತರ ಎಂದು ಅವರವರ ವರ್ಗದ ಹಾಗೂ ಕುಟುಂಬದ ನಿಯಮಾನುಸಾರ ಹಿರಿಯರಿಗೆ (ಮರಣ ಹೊಂದಿದ ಪಿತೃಗಳಿಗೆ) ತೃಪ್ತಿಯಾಗಲೆಂದು ಪಿಂಡ ಪ್ರಧಾನ ತಿಲತರ್ಪಣ ಗೋಗ್ರಾಸ ಅಂದರೆ ಗೋವಿನ ಅನ್ನನೀಡುವುದು, ಗೋವು ಪೂಜೆಯನ್ನು ಮಾಡುವುದು, ಕಾಗೆಗಳಿಗೆ ಭಕ್ಷ ಸಿದ್ಧ ಪಡಿಸಿ ಬಡಿಸುವುದು ಹಾಗೂ ಪಿತೃಗಳ ಸಂತುಷ್ಟಿಗೆಂದು ದಾನ ಧರ್ಮಾಧಿಗಳನ್ನು ಮಾಡಿ ಪುಣ್ಯ ಸಂಪಾದನೆಗೆ ಮಾರ್ಗವಿದೆ.
ಅದರಿಂದ ಸಂತೃಪ್ತಿ ಮತ್ತು ಮನ:ಶಾಂತಿಯನ್ನು ಕಂಡುಕೊಳ್ಳಬಹುದು ಮತ್ತು ದಸರಾ ಹಬ್ಬ ಆಚರಣೆಯಲ್ಲಿ ಯಾವುದೇ ಗೊಂದಲಗಳು ಬೇಡ. ಸರ್ವೇ ಜನೋ ಸುಖಿನೋ ಭವಂತು.
ಡಾ.ಮಹಾಭಲೇಶ್ವರ ಭಟ್,
source whatsapp
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಧುಮೇಹ ರೋಗಿಗಳು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಮಧುಮೇಹಿಗಳಿಗೆ ಹೆಚ್ಚು ಹಸಿವು ಕಾಡುತ್ತದೆ. ಹಾಗಾಗಿ ಬೇಗ ಹಸಿವಾಗದ ಹೊಟ್ಟೆ ತುಂಬಿರುವ ಅನುಭವ ನೀಡುವ ಆಹಾರವನ್ನು ಸೇವಿಸಬೇಕು. ಇದಕ್ಕೆ ಕಡಲೆ ಹಿಟ್ಟಿನ ರೊಟ್ಟಿ ಬೆಸ್ಟ್. ಮಧುಮೇಹಿಗಳಿಗೆ ಮಾತ್ರವಲ್ಲ ರಕ್ತದೊತ್ತಡ, ದೈಹಿಕ ದೌರ್ಬಲ್ಯ ಮತ್ತು ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಬೆಸ್ಟ್. ಕಡಲೆ ಹಿಟ್ಟಿನಲ್ಲಿ ಪ್ರೋಟೀನ್ ಹೆಚ್ಚಿರುತ್ತದೆ.ಕಡಿಮೆ ಗ್ಲೈಸೆಮಿಕ್ ಹೊಂದಿರುತ್ತದೆ.ಇದಕ್ಕಾಗಿಯೇ ಇದು ತೂಕ ನಷ್ಟ ಮಾಡುವ ಜೊತೆಗೆ ಮಧುಮೇಹ ನಿಯಂತ್ರಿಸುತ್ತದೆ. ಮಸಲ್ಸ್ ಬೆಳೆಸಲು ಆಸಕ್ತಿ ಹೊಂದಿರುವವರು ಕೂಡ ಕಡಲೆ…
ಸ್ನೇಹಿತರೆ ಇಂಗ್ಲೆಂಡ್ ದೇಶದಕ್ಕೆ ಸೇರಿದ ಈತನ ಹೆಸರು ಸ್ಟಿವನ್, ಜೀವನದಲ್ಲಿ ತುಂಬಾ ಕಷ್ಟವನ್ನ ಅನುಭವಿಸಿದ ಈತನಿಗೆ 60 ವರ್ಷ ವಯಸ್ಸು, ತನ್ನ 60 ವರ್ಷ ಜೀವನದಲ್ಲಿ ಯಾವತ್ತೂ ಸುಖಕರ ಜೀವನವನ್ನ ಈತ ಅನುಭವಿಸಿರಲಿಲ್ಲ. ಈತ ದಿನದ ಖರ್ಚಿಗಾಗಿ ತುಂಬಾ ಕಷ್ಟಪಡುತ್ತಿದ್ದ ಮತ್ತು ಲಾರಿ ಡ್ರೈವರ್ ಆಗಿ ಕೆಲಸವನ್ನ ಕೂಡ ಮಾಡುತ್ತಿದ್ದ, ಕೆಲವು ಸಮಯದ ನಂತರ ಈತನಿಗೆ ವಯಸ್ಸಾಗಿದೆ ಅನ್ನುವ ಕಾರಣಕ್ಕೆ ಈತನನ್ನ ಡ್ರೈವರ್ ಕೆಲಸದಿಂದ ತಗೆದು ಹಾಕಲಾಯಿತು. ಡ್ರೈವರ್ ಕೆಲಸವನ್ನ ಬಿಟ್ಟ ನಂತರ ಓಕ್ ಮರದ ತೋಟದಲ್ಲಿ…
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.
ಗುಜರಾತ್ ನ ಸೂರತ್ ನಲ್ಲಿ ನಡೆದ ಭೀಕರ ಕಟ್ಟಡ ಅಗ್ನಿ ಅಘಡದಲ್ಲಿ ಸಾವಿಗೀಡಾದವರ ಸಂಖ್ಯೆ 20ಕ್ಕೆ ಏರಿಕೆಯಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.ಸೂರತ್ ಸಾರ್ತನ ಪ್ರದೇಶದ ತಕ್ಷಶಿಲಾ ಆರ್ಕೇಡ್ ಕಟ್ಟಡದ ಮೂರನೇ ಮಹಡಿಯಲ್ಲಿದ್ದ ಕೋಚಿಂಗ್ ಸೆಂಟರ್ ನಲ್ಲಿ ಇಂದು ಮಧ್ಯಾಹ್ನ 3.30ರ ಸುಮಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಈ ಅಗ್ನಿ ಅವಘಡ ಸಂಭವಿಸಿದೆ. ಮೂಲಗಳ ಪ್ರಕಾರ ಘಟನೆಯಲ್ಲಿ ಈ ವರೆಗೂ ಸುಮಾರು 20 ಮಂದಿ ಸಾವಿಗೀಡಾಗಿದ್ದು, ಮೃತರಲ್ಲಿ ಬಹುತೇಕರು ವಿದ್ಯಾರ್ಥಿಗಳು ಎಂದು…
ನಿಮಗೆ ನೀವು ಬೇರೆಯವರಿಗಿಂತ ವಿಭಿನ್ನ ಅಂತ ಅನಿಸುತ್ತೀರಾ? ನಿಮ್ಮನ್ನ ಅರ್ಥ ಮಾಡಿಕೊಳ್ಳೋರು ಯಾರು ಇಲ್ಲ ಅನ್ನಿಸುತ್ತಾ?
ಕಾರ್ಲ್ ಜಂಕ್ ಸೈಕೋ ಅನಾಲಿಸಿಸ್ ಥಿಯರೀ ಅನುದಾರ ಮೇಯರ್ಸ್ ಅಂಡ್ ಬ್ರಿಗ್ಗರ್ಸ್ ಸಿಸ್ಟೆಮ್ ಪ್ರತಿ ಮನುಷ್ಯನನ್ನ ಬೇರೆ ಬೇರೆ ವ್ಯಕ್ತಿತ್ವದವರಾಗಿ ವಿಂಗಡಿಸಲಾಗಿದ್ಯಂತೆ.
ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ. ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ. ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನುತಿಳಿದುಕೊಳ್ಳಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ ಎಂದು ನೋಡಿ….