News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಮಹಾಲಯ ಅಮಾವಾಸ್ಯೆ ಕಳೆದು ಒಂದು ತಿಂಗಳ ನಂತರ ದಸರಾ ಯಾಕೆ ಬರುತ್ತಿದೆ !

41

ಭಾರತೀಯ ಪ್ರಜೆಗಳಲ್ಲಿ ಬಹು ಸಂಖ್ಯಾತರು ಎನಿಸಿಕೊಂಡ ಹಿಂದೂ ಧರ್ಮೀಯರು ಪ್ರತೀ ಮಾಸದಲ್ಲಿ ಯಾವುದಾದರು ಎಳೆಯಲ್ಲಿ ಧಾರ್ಮಿಕ ಹಬ್ಬವನ್ನು ಆಚರಣೆ ಮಾಡುವುದು ಸಂಪ್ರದಾಯ ಮತ್ತು ಇದನ್ನು ಮೈಗೂಡಿಸಿಕೊಂಡು ಬಂದಿದ್ದಾರೆ ಕೂಡ.
ಸಾಮಾನ್ಯವಾಗಿ ಎಲ್ಲಾ ಜನಾಂಗದವರು ಆಚರಿಸುವ ಪಿತೃಪಕ್ಷ ಮಹಾಲಯ ಅಮಾವಾಸ್ಯೆ ಮುಗಿದ ತಕ್ಷಣ ನವರಾತ್ರಿ ಆರಂಭವಾಗಿ ಹತ್ತನೇಯ ದಿನ ದಸರಾ ಆಚರಣೆ ಮಾಡುವುದು ನಿಯಮವಾಗಿದೆ.
ಆದರೆ ಈ ವರ್ಷ ಅಶ್ವಿಜ ಮಾಸ ಅಧಿಕ ಬಂದಿರುವುದರಿಂದ ಅಂದರೆ ನಿಜ ಅಶ್ವಿಜ, ಅಧಿಕ ಅಶ್ವಿಜ ಎಂದು ಎರಡು ಮಾಸಗಳು ಬಂದಿರುವುದರಿಂದ ದಸರಾ ಹಬ್ಬ ಮಹಾಲಯ ಅಮಾವಾಸ್ಯೆ ಕಳೆದ ಒಂದು ತಿಂಗಳ ನಂತರ ಬರುತ್ತದೆ. ಈ ಬಗ್ಗೆ ಹಲವರಲ್ಲಿ ಗೊಂದಲವಿದೆ.


ನಾವು ಹಬ್ಬ ಆಚರಣೆ ಮಾಡುವುದು ಹಾಗೂ ರಾಶಿ ನಕ್ಷತ್ರಗಳನ್ನು ನೋಡುವುದು ಕೇವಲ ಪರಂಪರೆ ಎಂದು ತಿಳಿದು ಆಚರಣೆ ಮಾಡುವುದಕ್ಕಿಂತ ವೈಜ್ಞಾನಿಕವಾಗಿಯು ತಿಳಿದುಕೊಳ್ಳಬೇಕಾಗುತ್ತದೆ. ನಕ್ಷತ್ರ ರಾಶಿ ಹಾಗೂ ಪಂಚಾಂಗಗಳು ಏನು ಎನ್ನುವುದನ್ನು ವಿಚಾರಿಸಿ ತಿಳಿದುಕೊಂಡು ನಮ್ಮ ಗೊಂದಲವನ್ನು ನಾವೇ ನಿವಾರಣೆ ಮಾಡಿಕೊಳ್ಳಬಹುದು. ಸಂವತ್ಸರಗಳನ್ನು ಸೂರ್ಯ, ಚಂದ್ರರ ಚಲನ ವಲನದಿಂದ ಲೆಕ್ಕ ಹಾಕಿ ಸೌರಮಾನ ಹಾಗೂ ಚಂದ್ರಮಾನ ಎನ್ನುವ ಮಾನದಂಡದಿಂದ ನಿರ್ಣಯಿಸಲಾಗುತ್ತದೆ.


ಸೂರ್ಯನಿಗೆ ಮೇಷ, ವೃಷಭ ಎಂಬ ರಾಶಿ ಚಕ್ರವನ್ನು ಒಂದು ಸುತ್ತು ಸುತ್ತಲು 30 ತಿಂಗಳು 14 ದಿವಸ ಬೇಕು. ಅದೇ ಸೂರ್ಯನಿಗೆ ಒಂದು ವರ್ಷ ಅಂದರೆ ಚೈತ್ರ, ವೈಶಾಖ ದಿಂದ ಮೀನ ಮಾಸ ಎಂಬ ಋತು ಚಕ್ರವನ್ನು ಸುತ್ತಲು 365.25 ಘಳಿಗೆ ಬೇಕಾಗುತ್ತದೆ. ಇದಕ್ಕೆ ಸೌರಮಾನ ಎಂದು ಕರೆಯುತ್ತಾರೆ. ಅದೇ ಚಂದ್ರನಿಗೆ 354 ದಿನಗಳು ಬೇಕಾಗುತ್ತದೆ. ಇದಕ್ಕೆ ಚಂದ್ರಮಾನ ಎಂದು ಕರೆಯುತ್ತಾರೆ.
ಸೂರ್ಯನಿಗೂ, ಚಂದ್ರನಿಗೂ ಒಂದು ವರ್ಷ ಮುಗಿಸಬೇಕಾದರೆ ಪ್ರತಿ ವರ್ಷವು 11 ದಿನ ವ್ಯತ್ಯಾಸಗಳು ಬಂದು ಆ ದಿನಗಳು ಪ್ರತಿ ವರ್ಷವು ಬಾಕಿಯಾಗಿ 3 ವರ್ಷಕ್ಕೊಮ್ಮೆ ಆ 11 ದಿನಗಳನ್ನು ಸೇರಿಸಿ ಒಂದು ಆಧಿಕ ಮಾಸ ಎಂದು ಮಾಡುತ್ತಾರೆ. ಹೀಗೆ ಬೇರೆ ಬೇರೆ ಧರ್ಮದವರು ಹಾಗೂ ಬೇರೆ ಬೇರೆ ದಿನ ಮಾಸಗಳನ್ನು ನಿರ್ಣಯಿಸುವವರು ಇಂಗ್ಲಿಷ್ ಕ್ಯಾಲೆಂಡರ್‍ಗಳನ್ನು 30-31 ಹಾಗೂ ಫೆಬ್ರವರಿ 28-29 ದಿನಾಂಕಗಳನ್ನು ಹೆಚ್ಚುವರಿ ಹಾಕಿ ಸಮದೂಗಿಸುತ್ತಾರೆ. ಹಾಗೆಯೇ ಬೇರೆ ಬೇರೆ ಧರ್ಮದ ಕ್ಯಾಲೆಂಡರ್‍ಗಳಲ್ಲಿ ಕೂಡ ಹೀಗೆ ಸರಿದೂಗಿಸಲಾಗುತ್ತದೆ.
ಅದೇ ಪ್ರಕಾರ ಪ್ರತಿ ಮೂರು ವರ್ಷಕೊಮ್ಮೆ ಬೇರೆ ಬೇರೆ ತಿಂಗಳುಗಳು ಅಧಿಕ ಮಾಸ ಎಂದು ಬರುತ್ತದೆ. ಆದ್ದರಿಂದ ಯಾರೂ ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ.
ಪ್ರತಿವರ್ಷ ಮಹಾಲಯ ಅಮಾವಾಸ್ಯೆ ಆಚರಣೆ ಮಾಡುವವರು ಸೆ.17 ರಂದು ಆಚರಿಸಬಹುದು. ನವರಾತ್ರಿ ಹಾಗೂ ದಸರಾ ಆಚರಣೆ ಮಾಡುವವರು ಮುಂದಿನ ಅಮವಾಸ್ಯೆ ಕಳೆದ ಮೇಲೆ ಆಚರಣೆ ಮಾಡಬೇಕು. ಈ ಮಧ್ಯದ ಅಧಿಕ ಮಾಸದಲ್ಲಿ ಶುಭಕಾರ್ಯಗಳನ್ನು ಅಂದರೆ ಮದುವೆ, ಗೃಹ ಪ್ರವೇಶ, ಮಂಗಳ ಕಾರ್ಯಗಳನ್ನು ಆಚರಿಸುವಂತಿಲ್ಲ.


ದೇವತಾ ಆರಾಧನೆ, ವ್ರತÀ, ದಾನ, ಧರ್ಮ ಮತ್ತು ಪೂರ್ವ ನಿಯೋಜಿತ ಅಂದರೆ ಸೀಮಂತಾದಿಗಳನ್ನು ನಡೆಸಬಹುದು. ಹೀಗೆ ಎಲ್ಲವು ಕೂಡ ಹಿಂದಿನ ಋಷಿ ಮುನಿಗಳು ತಮ್ಮ ಸ್ವಯಂ ಆಚರಣೆಯಿಂದ ಸಂತುಷ್ಟಿ ಜೀವನವನ್ನು ಕಂಡಿರುವುದರಿಂದ ಮುಂದಿನ ಪೀಳಿಗೆಗೆ ಮಾರ್ಗದರ್ಶನವಾಗಿ ಇಂತಹ ಧರ್ಮ ವಿಚಾರವನ್ನು ಗ್ರಂಥವಾಗಿ ಬರೆದಿಟ್ಟಿದ್ದಾರೆ.
ಆದ್ದರಿಂದ ಜೋತಿಷ್ಯ ಶಾಸ್ತ್ರವು ಅಂದರೆ ಈಗಿನ (ಆಷ್ಟ್ರಾಲಜಿ) ಸುಳ್ಳಲ್ಲ. ಅದೇ ಜ್ಯೋತಿಷ್ಯ ಹೇಳುವವನು (ಅಸ್ಟ್ರಾಲಜಿಕ್) ಗೊತ್ತಿಲ್ಲದೆ ಸುಳ್ಳು ಹೇಳಬಹುದು. ಆದರೆ ಜ್ಯೋತಿಷ್ಯವೇ ಸುಳ್ಳು ಎಂದು ಪರಿಗಣಿಸಲು ಸಾಧ್ಯವಿಲ್ಲ. ಈ ಬರುವ ಮಹಾಲಯ ಅಮಾವಾಸ್ಯೆ ಕಳೆದ ಒಂದು ತಿಂಗಳ ನಂತರ ಎಂದು ಅವರವರ ವರ್ಗದ ಹಾಗೂ ಕುಟುಂಬದ ನಿಯಮಾನುಸಾರ ಹಿರಿಯರಿಗೆ (ಮರಣ ಹೊಂದಿದ ಪಿತೃಗಳಿಗೆ) ತೃಪ್ತಿಯಾಗಲೆಂದು ಪಿಂಡ ಪ್ರಧಾನ ತಿಲತರ್ಪಣ ಗೋಗ್ರಾಸ ಅಂದರೆ ಗೋವಿನ ಅನ್ನನೀಡುವುದು, ಗೋವು ಪೂಜೆಯನ್ನು ಮಾಡುವುದು, ಕಾಗೆಗಳಿಗೆ ಭಕ್ಷ ಸಿದ್ಧ ಪಡಿಸಿ ಬಡಿಸುವುದು ಹಾಗೂ ಪಿತೃಗಳ ಸಂತುಷ್ಟಿಗೆಂದು ದಾನ ಧರ್ಮಾಧಿಗಳನ್ನು ಮಾಡಿ ಪುಣ್ಯ ಸಂಪಾದನೆಗೆ ಮಾರ್ಗವಿದೆ.
ಅದರಿಂದ ಸಂತೃಪ್ತಿ ಮತ್ತು ಮನ:ಶಾಂತಿಯನ್ನು ಕಂಡುಕೊಳ್ಳಬಹುದು ಮತ್ತು ದಸರಾ ಹಬ್ಬ ಆಚರಣೆಯಲ್ಲಿ ಯಾವುದೇ ಗೊಂದಲಗಳು ಬೇಡ. ಸರ್ವೇ ಜನೋ ಸುಖಿನೋ ಭವಂತು.

ಡಾ.ಮಹಾಭಲೇಶ್ವರ ಭಟ್,

source whatsapp

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅವನ್ಯಾವನೋ ಯಶ್ ಅಂತೆ.. ಕಾರ್ಯಕರ್ತರು ನನಗೋಸ್ಕರ ಸುಮ್ಮನಿದ್ದಾರೆ ಇಲ್ಲದಿದ್ದರೆ ಯಶ್ ಗತಿ? ಎಂದು HDKಯಿಂದ ಧಮಕಿ..!

    ಮಂಡ್ಯ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಹಂತಕ್ಕೆ ಬಂದಿದ್ದು, ಕೊನೆ ಕ್ಷಣದಲ್ಲಿ ಮಾತಿನ ಸಮರ ಜೋರಾಗಿದೆ. ಇಷ್ಟು ದಿನ ಜೋಡೆತ್ತುಗಳೆಂದು ದರ್ಶನ್ ಮೇಲೆ ಮುಗಿಬಿದ್ದಿದ್ದ ಸಿಎಂ ಕುಮಾರಸ್ವಾಮಿ, ಡಿ ಬಾಸ್ ಅಂತೆ ಎಂದೆಲ್ಲಾ ಟೀಕಿಸಿದ್ದರು. ಇಂದು ನಟ ಯಶ್ ವಿರುದ್ಧ ಕೆಂಡಕಾರಿದ್ದಾರೆ. ನಾನು ಕಲಾವಿದರೆಂದು ಗೌರವ ಕೊಟ್ಟಿದ್ದೆ. ಅವನ್ಯಾವನೋ ನನ್ನ ಪಕ್ಷವನ್ನೇ ಟೀಕಿಸುತ್ತಾನೆ ಎಂದಿದ್ದಾರೆ. ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಸಿಎಂ, ನನ್ನ ಪಕ್ಷವನ್ನು ಕಳ್ಳರ ಪಕ್ಷ ಅಂತಾನೆ. ಹಳ್ಳಿ ಕಡೆ ಬಂದು ನಮ್ಮ…

  • ಆಧ್ಯಾತ್ಮ

    ಮಹಿಳೆಯರು ತೆಂಗಿನ ಕಾಯಿ ಒಡೆಯಬಾರದು ಏಕೆ ಗೊತ್ತಾ?ಇಲ್ಲಿದೆ ನೋಡಿ ಕಾರಣ…

    ಹಿಂದೂ ಸಂಸ್ಕೃತಿಯಲ್ಲಿ ಕೆಲವೊಂದು ಕೆಲಸಗಳನ್ನು ಮಹಿಳೆಯರು ಮಾಡುವಂತಿಲ್ಲ. ಇದಕ್ಕೆ ಸಾಕಷ್ಟು ಬಾರಿ ವಿರೋಧವೂ ವ್ಯಕ್ತವಾಗುತ್ತದೆ. ತಲೆ-ಬುಡವಿಲ್ಲದೆ ಶಾಸ್ತ್ರಗಳನ್ನು ಮಾಡ್ತಾರೆಂದು ಕೆಲವರು ಆರೋಪ ಮಾಡ್ತಾರೆ. ಆದ್ರೆ ಹಿಂದೂ ಸಂಸ್ಕೃತಿಯಲ್ಲಿ ಅದಕ್ಕೆ ಸೂಕ್ತ ಕಾರಣಗಳನ್ನೂ ಹೇಳಲಾಗಿದೆ. ಮಹಿಳೆಯರು ಮಾಡಬಾರದ ಕೆಲಸಗಳಲ್ಲಿ ತೆಂಗಿನಕಾಯಿ ಒಡೆಯುವುದು ಒಂದು. ಹೌದು, ಹಿಂದೂ ಸಂಸ್ಕೃತಿ ಪ್ರಕಾರ ತೆಂಗಿನ ಕಾಯಿಯನ್ನು ಮಹಿಳೆಯರು ಒಡೆಯಬಾರದು. ಹಿಂದೂ ಧರ್ಮದ ಪ್ರಕಾರ ತೆಂಗಿನ ಕಾಯಿ ಪವಿತ್ರವೆಂದು ಪರಿಗಣಿಸಲಾಗಿದೆ. ಶುಭ ಸಮಾರಂಭಗಳಲ್ಲಿ ತೆಂಗಿನ ಕಾಯಿಯನ್ನು ಬಳಸಲಾಗುತ್ತದೆ. ಯಾವುದೇ ಹೊಸ ಕೆಲಸ ಆರಂಭಿಸುವಾಗ ತೆಂಗಿನ…

  • ಸುದ್ದಿ

    ರಾತ್ರಿ ಉಳಿದ ಅನ್ನ ಸೇವಿಸಿ ‘ಆರೋಗ್ಯ’ ಕಾಪಾಡಿಕೊಳ್ಳಿ..!

    ಅನೇಕ ಬಾರಿ ರಾತ್ರಿ ಮಾಡಿದ ಅನ್ನ ಹಾಗೆ ಉಳಿದು ಬಿಡುತ್ತದೆ. ಈ ಅನ್ನವನ್ನು ಮರು ದಿನ ತಿನ್ನಲು ಸಾಮಾನ್ಯವಾಗಿ ಯಾರೂ ಇಷ್ಟ ಪಡುವುದಿಲ್ಲ. ಕೆಲವರು ಅದನ್ನು ಕಸಕ್ಕೆ ಹಾಕಿದ್ರೆ ಮತ್ತೆ ಕೆಲವರು ಪ್ರಾಣಿಗಳಿಗೆ ನೀಡುತ್ತಾರೆ. ಆದ್ರೆ ಇನ್ನು ಮುಂದೆ ಮಿಕ್ಕ ಅನ್ನವನ್ನು ಕಸಕ್ಕೆ ಹಾಕಬೇಡಿ. ಅದು ಆರೋಗ್ಯದ ಸಂಪತ್ತು ಎಂಬುದನ್ನು ನೆನಪಿಡಿ. ರಾತ್ರಿ ಅನ್ನ ಮಿಕ್ಕಿದ್ದರೆ, ಅದನ್ನು ಒಂದು ಮಡಿಕೆಯಲ್ಲಿ ಹಾಗೆ ಇಡಿ. ಬೆಳಿಗ್ಗೆ ಅದಕ್ಕೆ ಈರುಳ್ಳಿ ಸೇರಿಸಿ ತಿನ್ನಿರಿ. ಇದು ನಿಮ್ಮ ನೆಚ್ಚಿನ ಉಪಹಾರವಾಗದಿರಬಹುದು. ಆದ್ರೆ…

  • ರಾಜಕೀಯ

    ಮುಂದಿನ ಬಾರಿಯ ಎಲೆಕ್ಷನ್ ನಲ್ಲೂ ಮೋದಿದೆ ಹವಾ…..! ಹೇಗಂತ ತಿಳಿಯಲು ಈ ಲೇಖನ ಓದಿ…

    ಟೈಮ್ಸ್ ನೌ ಮತ್ತು ವಿಎಂಆರ್ ನಡೆಸಿದ ಮತದಾರರ ಅಭಿಪ್ರಾಯ ಸಮೀಕ್ಷೆಯಲ್ಲಿ ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿಯೂ ಭಾರತೀಯ ಜನತಾ ಪಕ್ಷ ಜಯಭೇರಿ ಬಾರಿಸುವ ಮೂಲಕ 6ನೇ ಬಾರಿಗೆ ಅಧಿಕಾರದ ಗದ್ದುಗೆ ಏರಿ ದಾಖಲೆ ನಿರ್ಮಿಸಲಿದೆ ಎಂದು ತಿಳಿಸಿದೆ.

  • inspirational

    “ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು”

    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸೇರಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮತ್ತೆ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.ಇದೀಗ ಅವರು ಪದಯಾತ್ರೆ + ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದಾರೆ. ಪ್ರತಿಭಟನೆ ಹೇಗೆ ನಡೆಯುತ್ತಿದೆ? ಏಪ್ರಿಲ್ 8ರಿಂದ ಚಿತ್ತದುರ್ಗದಿಂದ ಬೆಂಗಳೂರಿಗೆ ಪದಯಾತ್ರೆ ಆರಂಭ ಏಪ್ರಿಲ್ 21ಕ್ಕೆ ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶ ನಂತರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಯೋಜನೆ ನೌಕರರ ಪ್ರಮುಖ ಬೇಡಿಕೆಗಳು ಸಾರಿಗೆ ನೌಕರರು ಸರ್ಕಾರದ ಮುಂದೆ ಇಟ್ಟಿರುವ ಪ್ರಮುಖ ಬೇಡಿಕೆಗಳು: 38 ತಿಂಗಳ…

  • ಸಿನಿಮಾ, ಸುದ್ದಿ

    ನೀವೇನು ಹರಿಶ್ಚಂದ್ರನ ತುಂಡುಗಳಾ?ಕೆಟ್ಟ ದಾಗಿ ಮಾತನಾಡಿದ್ರೆ ಸುಮ್ಮ ನಿರುವುದಿಲ್ಲ ಎಂದು ಟೀಕೆ ಮಾಡಿದವರಿಗೆ ಖಡಕ್ ಎಚ್ಚರಿಕೆ ಕೊಟ್ಟ ರಾಕಿ ಭಾಯ್…

    ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಸ್ಪರ್ಧೆಯಿಂದಾಗಿ ಇಡೀ ದೇಶದ ಗಮನ ಸೆಳೆದಿದೆಮಂಡ್ಯ ಲೋಕಸಭಾ ಕ್ಷೇತ್ರ. ಅದರಲ್ಲೂ ಸುಮಲತಾ ಪರವಾಗಿ ಸ್ಟಾರ್ ನಟರಾದ ದರ್ಶನ್ ಮತ್ತು ಯಶ್ ಪ್ರಚಾರ ನಡೆಸುತ್ತಿದ್ದು ಸಿಎಂ ಸೇರಿದಂತೆ ಜೆಡಿಎಸ್ ನಾಯಕರು ಸುಮಲತಾ ಬೆಂಬಲಿಗರಾದ ಸ್ಟಾರ್ ನಟರ ಮೇಲೆ ವಾಗ್ದಾಳಿಯನ್ನೇ ನಡೆಸಿದ್ದಾರೆ.  ಸ್ಟಾರ್ ನಟರನ್ನು ಕಳ್ಳೆತ್ತು ಎಂದು ಸಿಎಂ ಟೀಕಿಸಿದ್ದಕ್ಕೆ ಯಶ್ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಚಾರದ ವೇಳೆ ಮಾತನಾಡಿದ ಯಶ್, ಯಾರ…