News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಮಹಾಲಯ ಅಮಾವಾಸ್ಯೆ ಕಳೆದು ಒಂದು ತಿಂಗಳ ನಂತರ ದಸರಾ ಯಾಕೆ ಬರುತ್ತಿದೆ !

36

ಭಾರತೀಯ ಪ್ರಜೆಗಳಲ್ಲಿ ಬಹು ಸಂಖ್ಯಾತರು ಎನಿಸಿಕೊಂಡ ಹಿಂದೂ ಧರ್ಮೀಯರು ಪ್ರತೀ ಮಾಸದಲ್ಲಿ ಯಾವುದಾದರು ಎಳೆಯಲ್ಲಿ ಧಾರ್ಮಿಕ ಹಬ್ಬವನ್ನು ಆಚರಣೆ ಮಾಡುವುದು ಸಂಪ್ರದಾಯ ಮತ್ತು ಇದನ್ನು ಮೈಗೂಡಿಸಿಕೊಂಡು ಬಂದಿದ್ದಾರೆ ಕೂಡ.
ಸಾಮಾನ್ಯವಾಗಿ ಎಲ್ಲಾ ಜನಾಂಗದವರು ಆಚರಿಸುವ ಪಿತೃಪಕ್ಷ ಮಹಾಲಯ ಅಮಾವಾಸ್ಯೆ ಮುಗಿದ ತಕ್ಷಣ ನವರಾತ್ರಿ ಆರಂಭವಾಗಿ ಹತ್ತನೇಯ ದಿನ ದಸರಾ ಆಚರಣೆ ಮಾಡುವುದು ನಿಯಮವಾಗಿದೆ.
ಆದರೆ ಈ ವರ್ಷ ಅಶ್ವಿಜ ಮಾಸ ಅಧಿಕ ಬಂದಿರುವುದರಿಂದ ಅಂದರೆ ನಿಜ ಅಶ್ವಿಜ, ಅಧಿಕ ಅಶ್ವಿಜ ಎಂದು ಎರಡು ಮಾಸಗಳು ಬಂದಿರುವುದರಿಂದ ದಸರಾ ಹಬ್ಬ ಮಹಾಲಯ ಅಮಾವಾಸ್ಯೆ ಕಳೆದ ಒಂದು ತಿಂಗಳ ನಂತರ ಬರುತ್ತದೆ. ಈ ಬಗ್ಗೆ ಹಲವರಲ್ಲಿ ಗೊಂದಲವಿದೆ.


ನಾವು ಹಬ್ಬ ಆಚರಣೆ ಮಾಡುವುದು ಹಾಗೂ ರಾಶಿ ನಕ್ಷತ್ರಗಳನ್ನು ನೋಡುವುದು ಕೇವಲ ಪರಂಪರೆ ಎಂದು ತಿಳಿದು ಆಚರಣೆ ಮಾಡುವುದಕ್ಕಿಂತ ವೈಜ್ಞಾನಿಕವಾಗಿಯು ತಿಳಿದುಕೊಳ್ಳಬೇಕಾಗುತ್ತದೆ. ನಕ್ಷತ್ರ ರಾಶಿ ಹಾಗೂ ಪಂಚಾಂಗಗಳು ಏನು ಎನ್ನುವುದನ್ನು ವಿಚಾರಿಸಿ ತಿಳಿದುಕೊಂಡು ನಮ್ಮ ಗೊಂದಲವನ್ನು ನಾವೇ ನಿವಾರಣೆ ಮಾಡಿಕೊಳ್ಳಬಹುದು. ಸಂವತ್ಸರಗಳನ್ನು ಸೂರ್ಯ, ಚಂದ್ರರ ಚಲನ ವಲನದಿಂದ ಲೆಕ್ಕ ಹಾಕಿ ಸೌರಮಾನ ಹಾಗೂ ಚಂದ್ರಮಾನ ಎನ್ನುವ ಮಾನದಂಡದಿಂದ ನಿರ್ಣಯಿಸಲಾಗುತ್ತದೆ.


ಸೂರ್ಯನಿಗೆ ಮೇಷ, ವೃಷಭ ಎಂಬ ರಾಶಿ ಚಕ್ರವನ್ನು ಒಂದು ಸುತ್ತು ಸುತ್ತಲು 30 ತಿಂಗಳು 14 ದಿವಸ ಬೇಕು. ಅದೇ ಸೂರ್ಯನಿಗೆ ಒಂದು ವರ್ಷ ಅಂದರೆ ಚೈತ್ರ, ವೈಶಾಖ ದಿಂದ ಮೀನ ಮಾಸ ಎಂಬ ಋತು ಚಕ್ರವನ್ನು ಸುತ್ತಲು 365.25 ಘಳಿಗೆ ಬೇಕಾಗುತ್ತದೆ. ಇದಕ್ಕೆ ಸೌರಮಾನ ಎಂದು ಕರೆಯುತ್ತಾರೆ. ಅದೇ ಚಂದ್ರನಿಗೆ 354 ದಿನಗಳು ಬೇಕಾಗುತ್ತದೆ. ಇದಕ್ಕೆ ಚಂದ್ರಮಾನ ಎಂದು ಕರೆಯುತ್ತಾರೆ.
ಸೂರ್ಯನಿಗೂ, ಚಂದ್ರನಿಗೂ ಒಂದು ವರ್ಷ ಮುಗಿಸಬೇಕಾದರೆ ಪ್ರತಿ ವರ್ಷವು 11 ದಿನ ವ್ಯತ್ಯಾಸಗಳು ಬಂದು ಆ ದಿನಗಳು ಪ್ರತಿ ವರ್ಷವು ಬಾಕಿಯಾಗಿ 3 ವರ್ಷಕ್ಕೊಮ್ಮೆ ಆ 11 ದಿನಗಳನ್ನು ಸೇರಿಸಿ ಒಂದು ಆಧಿಕ ಮಾಸ ಎಂದು ಮಾಡುತ್ತಾರೆ. ಹೀಗೆ ಬೇರೆ ಬೇರೆ ಧರ್ಮದವರು ಹಾಗೂ ಬೇರೆ ಬೇರೆ ದಿನ ಮಾಸಗಳನ್ನು ನಿರ್ಣಯಿಸುವವರು ಇಂಗ್ಲಿಷ್ ಕ್ಯಾಲೆಂಡರ್‍ಗಳನ್ನು 30-31 ಹಾಗೂ ಫೆಬ್ರವರಿ 28-29 ದಿನಾಂಕಗಳನ್ನು ಹೆಚ್ಚುವರಿ ಹಾಕಿ ಸಮದೂಗಿಸುತ್ತಾರೆ. ಹಾಗೆಯೇ ಬೇರೆ ಬೇರೆ ಧರ್ಮದ ಕ್ಯಾಲೆಂಡರ್‍ಗಳಲ್ಲಿ ಕೂಡ ಹೀಗೆ ಸರಿದೂಗಿಸಲಾಗುತ್ತದೆ.
ಅದೇ ಪ್ರಕಾರ ಪ್ರತಿ ಮೂರು ವರ್ಷಕೊಮ್ಮೆ ಬೇರೆ ಬೇರೆ ತಿಂಗಳುಗಳು ಅಧಿಕ ಮಾಸ ಎಂದು ಬರುತ್ತದೆ. ಆದ್ದರಿಂದ ಯಾರೂ ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ.
ಪ್ರತಿವರ್ಷ ಮಹಾಲಯ ಅಮಾವಾಸ್ಯೆ ಆಚರಣೆ ಮಾಡುವವರು ಸೆ.17 ರಂದು ಆಚರಿಸಬಹುದು. ನವರಾತ್ರಿ ಹಾಗೂ ದಸರಾ ಆಚರಣೆ ಮಾಡುವವರು ಮುಂದಿನ ಅಮವಾಸ್ಯೆ ಕಳೆದ ಮೇಲೆ ಆಚರಣೆ ಮಾಡಬೇಕು. ಈ ಮಧ್ಯದ ಅಧಿಕ ಮಾಸದಲ್ಲಿ ಶುಭಕಾರ್ಯಗಳನ್ನು ಅಂದರೆ ಮದುವೆ, ಗೃಹ ಪ್ರವೇಶ, ಮಂಗಳ ಕಾರ್ಯಗಳನ್ನು ಆಚರಿಸುವಂತಿಲ್ಲ.


ದೇವತಾ ಆರಾಧನೆ, ವ್ರತÀ, ದಾನ, ಧರ್ಮ ಮತ್ತು ಪೂರ್ವ ನಿಯೋಜಿತ ಅಂದರೆ ಸೀಮಂತಾದಿಗಳನ್ನು ನಡೆಸಬಹುದು. ಹೀಗೆ ಎಲ್ಲವು ಕೂಡ ಹಿಂದಿನ ಋಷಿ ಮುನಿಗಳು ತಮ್ಮ ಸ್ವಯಂ ಆಚರಣೆಯಿಂದ ಸಂತುಷ್ಟಿ ಜೀವನವನ್ನು ಕಂಡಿರುವುದರಿಂದ ಮುಂದಿನ ಪೀಳಿಗೆಗೆ ಮಾರ್ಗದರ್ಶನವಾಗಿ ಇಂತಹ ಧರ್ಮ ವಿಚಾರವನ್ನು ಗ್ರಂಥವಾಗಿ ಬರೆದಿಟ್ಟಿದ್ದಾರೆ.
ಆದ್ದರಿಂದ ಜೋತಿಷ್ಯ ಶಾಸ್ತ್ರವು ಅಂದರೆ ಈಗಿನ (ಆಷ್ಟ್ರಾಲಜಿ) ಸುಳ್ಳಲ್ಲ. ಅದೇ ಜ್ಯೋತಿಷ್ಯ ಹೇಳುವವನು (ಅಸ್ಟ್ರಾಲಜಿಕ್) ಗೊತ್ತಿಲ್ಲದೆ ಸುಳ್ಳು ಹೇಳಬಹುದು. ಆದರೆ ಜ್ಯೋತಿಷ್ಯವೇ ಸುಳ್ಳು ಎಂದು ಪರಿಗಣಿಸಲು ಸಾಧ್ಯವಿಲ್ಲ. ಈ ಬರುವ ಮಹಾಲಯ ಅಮಾವಾಸ್ಯೆ ಕಳೆದ ಒಂದು ತಿಂಗಳ ನಂತರ ಎಂದು ಅವರವರ ವರ್ಗದ ಹಾಗೂ ಕುಟುಂಬದ ನಿಯಮಾನುಸಾರ ಹಿರಿಯರಿಗೆ (ಮರಣ ಹೊಂದಿದ ಪಿತೃಗಳಿಗೆ) ತೃಪ್ತಿಯಾಗಲೆಂದು ಪಿಂಡ ಪ್ರಧಾನ ತಿಲತರ್ಪಣ ಗೋಗ್ರಾಸ ಅಂದರೆ ಗೋವಿನ ಅನ್ನನೀಡುವುದು, ಗೋವು ಪೂಜೆಯನ್ನು ಮಾಡುವುದು, ಕಾಗೆಗಳಿಗೆ ಭಕ್ಷ ಸಿದ್ಧ ಪಡಿಸಿ ಬಡಿಸುವುದು ಹಾಗೂ ಪಿತೃಗಳ ಸಂತುಷ್ಟಿಗೆಂದು ದಾನ ಧರ್ಮಾಧಿಗಳನ್ನು ಮಾಡಿ ಪುಣ್ಯ ಸಂಪಾದನೆಗೆ ಮಾರ್ಗವಿದೆ.
ಅದರಿಂದ ಸಂತೃಪ್ತಿ ಮತ್ತು ಮನ:ಶಾಂತಿಯನ್ನು ಕಂಡುಕೊಳ್ಳಬಹುದು ಮತ್ತು ದಸರಾ ಹಬ್ಬ ಆಚರಣೆಯಲ್ಲಿ ಯಾವುದೇ ಗೊಂದಲಗಳು ಬೇಡ. ಸರ್ವೇ ಜನೋ ಸುಖಿನೋ ಭವಂತು.

ಡಾ.ಮಹಾಭಲೇಶ್ವರ ಭಟ್,

source whatsapp

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇದೊಂದು ಭಯಾನಕ ಸುದ್ದಿ ; ನೀವು ಶೌಚಾಲಯಕ್ಕೆ ಹೋಗುವ ಮುನ್ನ ಇದನ್ನೊಮ್ಮೆ ಓದಿ…!

    ಇದೊಂದು ಭಯಾನಕ ಸುದ್ದಿ.  ಎಲ್ಲರೂ ಭಹಯಬೀಳುವಂತಹ  ಸುದ್ದಿಯೇ. ಹೆಬ್ಬಾವೊಂದು ಮನೆಯೊಳಗಿನ ಶೌಚಾಲಯದಲ್ಲಿ ಇಲಿ ಬೇಟೆಯಾಡಿದಂತಹ ದಿಗಿಲುಗೊಳ್ಳುವಂತಹ ಸಂಗತಿ. ಇದು ನಡೆದಿರುವುದು ಆಸ್ಟ್ರೇಲಿಯಾದ ಕೈನ್ಸ್‌ನಲ್ಲಿ. ಇಲ್ಲಿನ ಜನ್ನಾ ಎಂಗ್ಲರ್ ಬೆಳಗ್ಗೆ ಸುಮಾರು 4 ಗಂಟೆಗೆ ಎದ್ದು ಮನೆಯ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ, ಇವರಿಗೆ ಶೌಚಾಲಯದೊಳಗೆ ಏನೋ ಶಬ್ದ ಆದಂತೆ  ಕಂಡಿತು. ತಕ್ಷಣ ಏನದು ಎಂದು ನೋಡಿದಾಗ ಅಲ್ಲಿನ  ದೃಶ್ಯವನ್ನು ಕಂಡು ಇವರು ಒಂದು ಕ್ಷಣ ಭಯಬೀತರಾಗಿದ್ದರು. ಯಾಕೆಂದರೆ, ಶೌಚಾಲಯದೊಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಇಲಿ ಬೇಟೆಯಲ್ಲಿ ತೊಡಗಿತ್ತು….

  • ವಿಚಿತ್ರ ಆದರೂ ಸತ್ಯ

    ಈ ಮಹಿಳೆಯ ಕಾಲಿನಿಂದ ಸೂಜಿ, ಸಿರಿಂಜಿನ ಮುಳ್ಳು, ಪಿನ್ನುಗಳು ಹೊರಬರುತ್ತಿವೆ..!ತಿಳಿಯಲು ಈ ಲೇಖನ ಓದಿ…

    ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ.

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 7 ಜನವರಿ, 2019 ಸಂಗಾತಿ ಧೂಮಪಾನ ಬಿಡುವಂತೆ ನಿಮ್ಮನ್ನು ಉತ್ತೇಜಿಸುತ್ತಾರೆ. ಇತರ ಕೆಟ್ಟಪರಿಣಾಮಗಳನ್ನು ತೊಡೆದುಹಾಕಲೂ ಇದು…

  • ಸುದ್ದಿ

    ಮೃತ ಅಪ್ಪನಿಗೆ ಮಸೇಜ್ ಮಾಡುತ್ತಿದ್ದಳು, 4 ವರ್ಷದ ನಂತರ ಬಂತು ರಿಪ್ಲೈ..! ತಂದೆ ಮಗಳ ಕರುಣಾಜನಕ ಕಥೆ….

    ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್​ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರ​​​ನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್​ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್​ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ ತನ್ನ…

  • ಸುದ್ದಿ

    ಒಂದೇ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ 7 ಟೀಚರ್ ಗಳು ಏಕಕಾಲದಲ್ಲಿ ಗರ್ಭಿಣಿಯರು.!

    ಅಮೆರಿಕದ ಗೊಡಾರ್ಡ್ ನಗರದ ಪ್ರಾಥಮಿಕ ಶಾಲೆಯ ಏಳು ಶಿಕ್ಷಕಿಯರು ಏಕಕಾಲದಲ್ಲಿ ಗರ್ಭಿಣಿಯರಾಗಿದ್ದಾರೆ. ಏಳು ಶಿಕ್ಷಕಿಯರು 15 ರಿಂದ 1 ತಿಂಗಳ ಆಸುಪಾಸಿನಲ್ಲಿ ಏಕಕಾಲದಲ್ಲಿ ಹೆರಿಗೆ ರಜೆಗೆ ಅರ್ಜಿ ಸಲ್ಲಿಸಿದ್ದಾರೆ. ಎಲ್ಲಾ ಮಹಿಳಾ ಸಹದ್ಯೋಗಿಗಳು ಏಕಕಾಲದಲ್ಲಿ ತಾಯಿ ಆಗುತ್ತಿದ್ದೇವೆ. ಏಳು ಶಿಕ್ಷಕಿಯರು ಒಂದೇ ಬಾರಿ ಗರ್ಭಿಣಿ ಆಗಬೇಕೆಂಬುವುದು ದೇವರ ಇಚ್ಛೆ. ಶಿಕ್ಷಕಿ ಟಿಫನಿ ಎಂಬವರು ಮೂರನೇ ಬಾರಿ ಗರ್ಭಿಣಿಯಾಗಿದ್ದು, ಅವರಿಗೆ 9 ಮತ್ತು 7 ವರ್ಷದ ಮಕ್ಕಳಿವೆ ಎಂದು ಶಿಕ್ಷಕಿ ಕೈಟಿ ಸಂತಸ ವ್ಯಕ್ತಪಡಿಸುತ್ತಾರೆ. ನನ್ನ 20 ವರ್ಷದ…

  • ಜೀವನಶೈಲಿ, ವಿಸ್ಮಯ ಜಗತ್ತು

    ಮಾನವನ ಅಂಗಾಂಗಳನ್ನು ಇಲ್ಲಿ ಹೀಗೆ ತಿಂತಾರೆ..!ಶಾಕ್ ಆಗ್ಬೇಡಿ ಮುಂದೆ ನೋಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ ತಿನ್ನೋ ಆಹಾರವನ್ನು, ತಯಾರಿಸಬೇಕಾದ್ರೂ ಕೂಡ ಶುಚಿ ರುಚಿಯಲ್ಲದೇ, ಸಾಕಷ್ಟು ಮಡಿವಂತಿಕೆ ಪಾಲಿಸುವ ಜನರು ನಮ್ಮ ಭಾರತದಲ್ಲಿ ಇದ್ದಾರೆ.ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಅಪ್ಪಿ ತಪ್ಪಿ ಒಂದು ಕೂದಲು ಕಾಣಿಸಿದರೂ ಸಹ ದೊಡ್ಡ ಜಗಳವನ್ನೇ ಮಾಡಿಬಿಡುತ್ತೇವೆ. ಮನುಷ್ಯರಾದ ನಮ್ಮ ಅಂಗಾಂಗಗಳನ್ನ  ನಾವೇ ನೋಡಿದಾಗ ನಮಗೆ ಸಹಜವಾಗಿಯೇ ಭಯವಾಗುತ್ತದೆ.ಆದ್ರೆ ಈ ದೇಶದ ಜನರು ವಿಚಿತ್ರ. ಮನುಷ್ಯನ ಅಂಗಾಂಗಗಳನ್ನಷ್ಟೇ ಅಲ್ಲದೇ ವಿವಿಧ ಹಾವು ಜಿರಳೆ ಮುಂತಾದ ಪ್ರಾಣಿ ಪಕ್ಷಿಗಳನ್ನೂ ಕೂಡ ಕೇಕ್ ರೂಪದಲ್ಲಿ ಮಾಡಿ…