ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾರುಬೇಕಾದ್ರು ಈ ಸಾಲ ಪಡೆಯಬಹುದು ಆದರೆ ಈ ನಿಯಮ ಪಾಲಿಸಬೇಕು.

ಪ್ರಧಾನಿಮಂತ್ರಿಯವರು `ಮುದ್ರಾ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ ಇದ್ದೀವಿ..ಪ್ರತಿಯೊಬ್ಬರಿಗೂ ಈ ಮಾಹಿತಿ ಮುಟ್ಟಿಸುವ ಕೆಲಸವನ್ನು ನೀವು ಮಾಡೇ ಮಾಡ್ತೀರ ಅನ್ನೋ ನಂಬಿಕೆ ನಮಗಿದೆ.
ಏನಿದು `ಮುದ್ರಾ ಯೋಜನೆ’..?

ಸ್ವ ಉದ್ಯೋಗ ಮಾಡ್ಬೇಕು ಅಂತ ಆಸಕ್ತಿ ಹೊಂದಿರೋರಿಗೆ ಈ ಯೋಜನೆ ಅಡಿಯಲ್ಲಿ ಸಾಲ ನೀಡಲಾಗುತ್ತೆ. ಈ ಯೋಜನೆಯ ಫಲಾನುಭವಿಗಳು ಕೃಷಿ ಮತ್ತು ಕೃಷಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದ ಆರ್ಥಿಕ ಚಟುವಟಿಕೆಗಳಿಗೆ ಅಥವಾ ಕಿರು ಉದ್ಯಮಕ್ಕೆ ಸಾಲ ನೀಡಲಾಗುತ್ತೆ. ಇದಕ್ಕಾಗಿಯೇ ಕೇಂದ್ರ ಸರ್ಕಾರ “ಮುದ್ರಾ” ಬ್ಯಾಂಕ್ ಸ್ಥಾಪಿಸಿ, ದೇಶದ ಪ್ರತಿಯೊಂದು ವಾಣಿಜ್ಯ ಬ್ಯಾಂಕ್ ಮತ್ತು ಗ್ರಾಮೀಣ ಬ್ಯಾಂಕ್ ಗಳ ಮೂಲಕ ಸಣ್ಣ ಉದ್ಯಮದಾರರಿಗೆ ಸಾಲವನ್ನು ನೀಡುತ್ತಿದೆ. ಈ ಸಾಲ ನೀಡೋ ಯೋಜನೆಯನ್ನು ಮೊತ್ತದ ಆಧಾರದ ಮೇಲೆ ಮೂರು ವಿಧಗಳಾಗಿ ವಿಂಗಡಿಸಿದ್ದಾರೆ.
1. ಶಿಶು ಸಾಲ : 50,000 ರೂವರೆಗಿನ ಸಾಲವನ್ನು ಶಿಶು ಸಾಲ ಅಂತಾರೆ.
2. ಕಿಶೋರ ಸಾಲ : 50,000 ರೂಪಾಯಿಗಳಿಗಿಂತ ಮೇಲ್ಪಟ್ಟು 5ಲಕ್ಷ ರೂಪಾಯಿಗಳ ತನಕದ ಸಾಲವನ್ನು `ಕಿಶೋರ’ ಸಾಲವೆಂದು ಕರೀತಾರೆ.
3. ತುರುಣ್ ಸಾಲ : 5ಲಕ್ಷ ದಿಂದ 10 ಲಕ್ಷದವರೆಗಿನ ಸಾಲವನ್ನು ತರುಣ್ ಸಾಲ ಅಂತಾರೆ.
ಫಲಾನುಭವಿಯ ಅರ್ಹತೆ
ಪ್ರಧಾನಮಂತ್ರಿ ಮುದ್ರಾಯೋಜನೆಯಡಿ ಉತ್ಪಾದನೆ, ವ್ಯಾಪಾರ, ಸೇವಾ ವಲಯ, ಕೃಷಿಯೇತರ ವಾಣಿಜ್ಯ ಚಟುವಟಿಕೆ ಕೈಗೊಳ್ಳುವವರಿಗೆ ಕನಿಷ್ಟ 50 ಸಾವಿರದಿಂದ 10 ಲಕ್ಷ ರೂ ವರೆಗೆ ಸಾಲ ನೀಡಲಾಗುತ್ತಿದೆ. ಮೊದಲೇ ಹೇಳಿದಂತೆ ದೇಶದ ಪ್ರತಿಯೊಂದು ವಾಣಿಜ್ಯ ಬ್ಯಾಂಕ್ ಮತ್ತು ಗ್ರಾಮೀಣ ಬ್ಯಾಂಕ್ ಗಳ ಮೂಲಕ ಸಾಲ ನೀಡಲಾಗುತ್ತಿದೆ. ಎಲ್ಲಾ ಸಾರ್ವಜನಿಕವಲಯದ ಬ್ಯಾಂಕ್ಗಳೂ, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಗಳು, ರಾಜ್ಯ ಸಹಕಾರಿ ಬ್ಯಾಂಕ್ ಗಳು, ನಗರ ಸಹಕಾರಿ ಬ್ಯಾಂಕ್ ಗಳೂ ಕೂಡ ಮುದ್ರಾದ ಅಡಿಯಲ್ಲಿ ಬರುತ್ತವೆ.
ಪ್ರಕ್ರಿಯೆ ಏನು..?
ಶಿಶು ಸಾಲವೇ., ಕಿಶೋರ್ ಸಾಲವೇ ಅಥವಾ ತರುಣ್ ಸಾಲವೇ ಎಂದು ನೋಡಲಾಗುತ್ತದೆ. ಅಂದರೆ ಫಲಾನುಭವಿಗೆ ಎಷ್ಟು ಸಾಲಬೇಕು..? ಅವನು ಮಾಡಹೊರಟಿರುವ ಉದ್ಯೋಗವೇನು ಅಂತ ತಿಳಿದು ಅದಕ್ಕನುಗುಣವಾಗಿ ಸಾಲವನ್ನು ನೀಡುವ ಪ್ರಕ್ರಿಯೆ ಶುರುವಾಗುತ್ತೆ.
ಫಲಾನಿಭವಿಯು ತನ್ನ ಹತ್ತಿರದ ಬ್ಯಾಂಕ್ ಅನ್ನು ಸಂಪರ್ಕಿಸಿ ಅಲ್ಲಿಂದ ಮುದ್ರಾ ಸಾಲಯೋಜನೆಯ ಅಡಿಯಲ್ಲಿ ಸಾಲ ಪಡೆಯ ತಕ್ಕದ್ದು.
ಪುರಾವೆ ಗುರುತೇನು(ಪ್ರೂಫ್ ಆಫ್ ಐಡೆಂಟಿಟಿ) :
* ಸೆಲ್ಫ್ ಅಟೆಸ್ಟೆಡ್ (ಸ್ವಯಂ ಸಹೀಕೃತ) ಚುನಾವಣ ಗುರುತಿನ ಚೀಟಿ ಅಥವಾ ಡ್ರೈವಿಂಗ್ ಲೈಸೆನ್ಸ್ ಅಥವಾ ಪಾನ್ ಕಾರ್ಡ್ ಅಥವಾ ಆಧಾರ್ ಕಾರ್ಡ್ ಅಥವಾ ಪಾಸ್ ಪೋರ್ಟ್ ಅಥವಾ ಯಾವುದಾದರೂ ಸರ್ಕಾರ ನೀಡಿದ ಗುರುತಿನ ಚೀಟಿ ಆಗಬಹುದು.
* ವಾಸಸ್ಥಳ ಪುರಾವೆಗಾಗಿ , ಇತ್ತೀಚಿನ ಟೆಲಿಫೋನ್ ಬಿಲ್ ಅಥವಾ ಎಲೆಕ್ಟ್ರಿಸಿಟಿ ಬಿಲ್, ಕಂದಾಯ ರಶೀದಿ( ಎರಡು ತಿಂಗಳಿಗಿಂತ ಹಳೆಯದಾಗಿರಬಾರದು) ಅಥವಾ ಚುನಾವಣ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್ ಅಥವಾ ಪಾಸ್ ಪೋರ್ಟ್ ಅಥವಾ ವಸತಿ ಪ್ರಮಾಣ ಪತ್ರ ಅಥವಾ ಸ್ಥಳೀಯ ಅಧಿಕಾರಿಯಿಂದ ಕೊಡಲಾದ ಯಾವುದೇ ಗುರುತಿನ ಪತ್ರ
* ಅರ್ಜಿದಾರನ ಇತ್ತೀಚಿಗಿನ ಭಾವಚಿತ್ರ
* ಕೊಂಡುಕೊಳ್ಳುವ ಯಂತ್ರೋಪಕರಣಗಳು ಅಥವಾ ವಸ್ತುವಿನ ಕೊಟೇಷನ್
* ಸರಬರಾಜುದಾರರ ಹೆಸರು ಮತ್ತು ವಿವರ
* ವ್ಯಾಪಾರ ಉದ್ಯಮದ ವಿಳಾಸ ( ಸಂಬಂಧಿಸಿದ ಪರವಾನಿಗೆ ಪತ್ರ)
* ವರ್ಗ ಅಥವಾ ಕೆಟಗರಿ ಪುರಾವೆ (ಪ್ರೂಫ್)
ಮುದ್ರಾ ಒಂದು ಬ್ಯಾಂಕ್ ಅಲ್ಲ :
ಇದನ್ನು ನೆನಪಿನಲ್ಲಿಟ್ಟುಕೊಳ್ಳಿ, ಕರ್ನಾಟಕ ಬ್ಯಾಂಕ್, ಎಸ್.ಬಿ.ಎಮ್. ಇವೇ ಮೊದಲಾದ ಬ್ಯಾಂಕ್ ಗಳ ರೀತಿಯಲ್ಲಿ ಮುದ್ರಾ ಅನ್ನೋದು ಪ್ರತ್ಯೇಕ ಬ್ಯಾಂಕ್ ಅಲ್ಲ. ಈ ಮುದ್ರಾ ಯೋಜನೆಯ ಅಡಿಯಲ್ಲಿ ಫಲಾನುಭವಿಗಳು ಮೊದಲೇ ಹೇಳಿದಂತೆ ಸ್ಥಳೀಯ ಬ್ಯಾಂಕ್ ಗಳಿಂದ ಸಾಲ ಪಡೆಯಬಹುದು.
ಮುದ್ರಾ ಕಾರ್ಡ್ :

ಮುದ್ರಾ ಯೋಜನೆ ಅಡಿಯಲ್ಲಿ ಸಾಲ ಮಂಜೂರಾದ ನಂತರ ಅಭ್ಯರ್ಥಿ `ಮುದ್ರಾ ಕಾರ್ಡ್’ ಅನ್ನು ಪಡೆಯುತ್ತಾರೆ. ಈ ಕಾರ್ಡ್ ಕ್ರೆಡಿಟ್ ಕಾರ್ಡ್ ರೀತಿಯದ್ದಾಗಿದೆ. ಈ ಕಾರ್ಡ್ ಮೂಲಕ ಅಭ್ಯರ್ಥಿ ತನ್ನ ವ್ಯವಹಾರಕ್ಕೆ ಸಂಬಂಧಿಸಿದಂತ ಕಚ್ಚಾ ಸಾಮಗ್ರಿಗಳನ್ನು ಪಡೆಬಹುದು. ಆದರೆ ಇದರ ಮಿತಿ ಸಾಲದ ಶೇಕಡ 10ರಷ್ಟು..! ಅಂದರೆ ಹೆಚ್ಚೆಂದರೆ 10000 ಮಾತ್ರ.

ಮುದ್ರಾಯೋಜನೆ ಲಾಭವನ್ನು ಪಡೆಯಿರಿ.. ಸಾಧ್ಯವಾದಷ್ಟು ಸ್ವಯಂ ಉದ್ಯೋಗಿಗಳಾಗಿ..ಇನ್ನೂ ಮಾಹಿತಿ ಬೇಕು ಅಂತಾದ್ರೆ ನಿಮ್ಮ ಸ್ಥಳೀಯ ಬ್ಯಾಂಕ್ ಗಳಿಗೆ ಭೇಟಿ ಕೊಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ಕಂಪನಿ; ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದ್ದ ರಿಲಯನ್ಸ್ ಜಿಯೋ ಇದೀಗ ಇತರೆ ನೆಟ್ವರ್ಕ್ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ಚಾರ್ಜ್ ಮಾಡಲಿದೆ ಎಂದು ತಿಳಿಸಿದ್ದಾರೆ . ಈ ಹೊಸ ನಿಯಮವು ಇವತ್ತಿನಿಂದಲೇ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ. ಅಂದರೆ ಇನ್ಮುಂದೆ ಜಿಯೋ ಟು ಏರ್ಟೆಲ್ ಅಥವಾ ವೊಡಾಫೋನ್ ಸೇರಿದಂತೆ ಇನ್ನಿತರ ನೆಟ್ವರ್ಕ್ಗಳಿಗೆ ಕರೆ ಮಾಡಿದರೆ ಶುಲ್ಕ ಅನ್ವಯವಾಗಲಿದೆ. ಇದರ ಹೊರತಾಗಿ ಡೇಟಾ ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಜಿಯೋ ಕಂಪೆನಿ ಹೇಳಿಕೊಂಡಿದೆ. ಇತರೆ ಜಿಯೋ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 10 ಜನವರಿ, 2019 ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮನ್ನು ಪ್ರೀತಿಸುವ ಹಾಗೂ ನಿಮ್ಮಬಗ್ಗೆ ಕಾಳಜಿಯಿರುವವರ…
ಚುನಾವಣೆ ಹತ್ತಿರವಾದಂತೆ ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಗಳು ಬಿರುಸುಗೊಂಡಿವೆ. ನಟ ಹಾಗೂ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಸಾರಥ್ಯದ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷವು ಮೊದಲ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಸಂಪೂರ್ಣ ಪಾರರ್ದಶಕ ಹಾಗೂ ಸರಳ ಆಡಳಿತ ನಡೆಸುವ ಭರವಸೆಯನ್ನು ನೀಡಿದ್ದಾರೆ.
ನಮ್ಮ ಸಮಾಜದಲ್ಲಿ ಹೈಷಾರಾಮಿ ಜೀವನ ನಡೆಸುವ ಜನರಿಗಿಂತ ಒಪ್ಪತ್ತಿನ ಊಟಕ್ಕಾಗಿ ದಿನಗೂಲಿ ಮಾಡುವ ಮಂದಿ ಜಾಸ್ತಿ. ಅಲ್ಲದೇ ಪೋಷಕರ ಜೊತೆ ತಮ್ಮ ಮಕ್ಕಳು ಕೂಡ ಕೆಲಸ ಮಾಡಿ ಜೀವನ ಸಾಗಿಸುತ್ತಿರುತ್ತಾರೆ. ಹೀಗೆ ಆಂಧ್ರಪ್ರದೇಶದ ರೈಲಿನಲ್ಲಿ ಒಬ್ಬ ಹುಡುಗ ಬಹಳ ಆಯಾಸದಿಂದ ಕುಳಿತ್ತಿದ್ದ. ಇದನ್ನು ಕಂಡ ಸಾಫ್ಟವೇರ್ ಉದ್ಯಮಿ ಏನ್ ತಮ್ಮ ಬಹಳ ಆಯಾಸದಿಂದ ಕುಳಿತ್ತಿದ್ದೀಯಾ? ಸಮೋಸ ಎಲ್ಲಾ ಮಾರಿಬಿಟ್ಟೆಯಾ? ಎಂದು ಕೇಳಿದ. ಇದಕ್ಕೆ ಉತ್ತರಿಸಿದ ಸಮೋಸ ಮಾರುವ ಹುಡುಗ, ಹೌದು ಸಾರ್ ಎಲ್ಲಾ ಮಾರಿಬಿಟ್ಟೆ, ಇನ್ನೇನ್ ಮಾಡುವುದು…
ವೀಳ್ಯದೆಲೆ ಸೇವಸುವುದು ಹಳೆ ಕಾಲದವರು ಎಂದು ಬಹಳ ಮಂದಿ ಮೂಗು ಮುರಿಯಬಹುದು. ಆದರೆ ಅಂತಹವರು ವೀಳ್ಯದೆಲೆಯಲ್ಲಿ ಇಷ್ಟೊಂದು ಆರೋಗ್ಯ ವೃದ್ಧಿಸುವು ಅಂಶಗಳು ಇವೆ ಎಂದು ತಿಳಿದರೆ ಆಶ್ಚರ್ಯ ಮಾಡುತ್ತಾರೆ.
ಕೋನೆಗೂ ಕಪ್ಪು ಗೆದ್ದ ಬೆಂಗಳೂರು ಹೌದು VIVO Pro Kabaddi Season 6 ರಲ್ಲಿ ಕೋನೆಗೂ ಕಪ್ಪು ನಮ್ದೇ, ಇಂದು ನಡೆದ prokabaddi ಗುಜರಾತ್ ವಿರುದ್ಧ 5 ಅಂಕ 38-33 ರಲ್ಲಿ ಗೆದ್ದಿದೆ. ಪವನ್ ಕುಮಾರ್ ರವರಿಂದ ವಿರೋಚಿತ ಆಟ Man of the match ಅವರಿಗೆ ಸಿಕ್ಕಿದೆ. ಮ್ಯಾನ್ of the series 24match 282pts, 11.8 avarege ನಲ್ಲಿ 15 ಲಕ್ಷ ರೂ ಗೆದ್ದರು. ಕಪ್ಪು ಗೆದ್ದ ಬೆಂಗಳೂರು bulls ಇಂದ ಎಲ್ಲ ಜನ…