ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾರುಬೇಕಾದ್ರು ಈ ಸಾಲ ಪಡೆಯಬಹುದು ಆದರೆ ಈ ನಿಯಮ ಪಾಲಿಸಬೇಕು.
ಪ್ರಧಾನಿಮಂತ್ರಿಯವರು `ಮುದ್ರಾ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ ಇದ್ದೀವಿ..ಪ್ರತಿಯೊಬ್ಬರಿಗೂ ಈ ಮಾಹಿತಿ ಮುಟ್ಟಿಸುವ ಕೆಲಸವನ್ನು ನೀವು ಮಾಡೇ ಮಾಡ್ತೀರ ಅನ್ನೋ ನಂಬಿಕೆ ನಮಗಿದೆ.
ಏನಿದು `ಮುದ್ರಾ ಯೋಜನೆ’..?
ಸ್ವ ಉದ್ಯೋಗ ಮಾಡ್ಬೇಕು ಅಂತ ಆಸಕ್ತಿ ಹೊಂದಿರೋರಿಗೆ ಈ ಯೋಜನೆ ಅಡಿಯಲ್ಲಿ ಸಾಲ ನೀಡಲಾಗುತ್ತೆ. ಈ ಯೋಜನೆಯ ಫಲಾನುಭವಿಗಳು ಕೃಷಿ ಮತ್ತು ಕೃಷಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದ ಆರ್ಥಿಕ ಚಟುವಟಿಕೆಗಳಿಗೆ ಅಥವಾ ಕಿರು ಉದ್ಯಮಕ್ಕೆ ಸಾಲ ನೀಡಲಾಗುತ್ತೆ. ಇದಕ್ಕಾಗಿಯೇ ಕೇಂದ್ರ ಸರ್ಕಾರ “ಮುದ್ರಾ” ಬ್ಯಾಂಕ್ ಸ್ಥಾಪಿಸಿ, ದೇಶದ ಪ್ರತಿಯೊಂದು ವಾಣಿಜ್ಯ ಬ್ಯಾಂಕ್ ಮತ್ತು ಗ್ರಾಮೀಣ ಬ್ಯಾಂಕ್ ಗಳ ಮೂಲಕ ಸಣ್ಣ ಉದ್ಯಮದಾರರಿಗೆ ಸಾಲವನ್ನು ನೀಡುತ್ತಿದೆ. ಈ ಸಾಲ ನೀಡೋ ಯೋಜನೆಯನ್ನು ಮೊತ್ತದ ಆಧಾರದ ಮೇಲೆ ಮೂರು ವಿಧಗಳಾಗಿ ವಿಂಗಡಿಸಿದ್ದಾರೆ.
1. ಶಿಶು ಸಾಲ : 50,000 ರೂವರೆಗಿನ ಸಾಲವನ್ನು ಶಿಶು ಸಾಲ ಅಂತಾರೆ.
2. ಕಿಶೋರ ಸಾಲ : 50,000 ರೂಪಾಯಿಗಳಿಗಿಂತ ಮೇಲ್ಪಟ್ಟು 5ಲಕ್ಷ ರೂಪಾಯಿಗಳ ತನಕದ ಸಾಲವನ್ನು `ಕಿಶೋರ’ ಸಾಲವೆಂದು ಕರೀತಾರೆ.
3. ತುರುಣ್ ಸಾಲ : 5ಲಕ್ಷ ದಿಂದ 10 ಲಕ್ಷದವರೆಗಿನ ಸಾಲವನ್ನು ತರುಣ್ ಸಾಲ ಅಂತಾರೆ.
ಫಲಾನುಭವಿಯ ಅರ್ಹತೆ
ಪ್ರಧಾನಮಂತ್ರಿ ಮುದ್ರಾಯೋಜನೆಯಡಿ ಉತ್ಪಾದನೆ, ವ್ಯಾಪಾರ, ಸೇವಾ ವಲಯ, ಕೃಷಿಯೇತರ ವಾಣಿಜ್ಯ ಚಟುವಟಿಕೆ ಕೈಗೊಳ್ಳುವವರಿಗೆ ಕನಿಷ್ಟ 50 ಸಾವಿರದಿಂದ 10 ಲಕ್ಷ ರೂ ವರೆಗೆ ಸಾಲ ನೀಡಲಾಗುತ್ತಿದೆ. ಮೊದಲೇ ಹೇಳಿದಂತೆ ದೇಶದ ಪ್ರತಿಯೊಂದು ವಾಣಿಜ್ಯ ಬ್ಯಾಂಕ್ ಮತ್ತು ಗ್ರಾಮೀಣ ಬ್ಯಾಂಕ್ ಗಳ ಮೂಲಕ ಸಾಲ ನೀಡಲಾಗುತ್ತಿದೆ. ಎಲ್ಲಾ ಸಾರ್ವಜನಿಕವಲಯದ ಬ್ಯಾಂಕ್ಗಳೂ, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಗಳು, ರಾಜ್ಯ ಸಹಕಾರಿ ಬ್ಯಾಂಕ್ ಗಳು, ನಗರ ಸಹಕಾರಿ ಬ್ಯಾಂಕ್ ಗಳೂ ಕೂಡ ಮುದ್ರಾದ ಅಡಿಯಲ್ಲಿ ಬರುತ್ತವೆ.
ಪ್ರಕ್ರಿಯೆ ಏನು..?
ಶಿಶು ಸಾಲವೇ., ಕಿಶೋರ್ ಸಾಲವೇ ಅಥವಾ ತರುಣ್ ಸಾಲವೇ ಎಂದು ನೋಡಲಾಗುತ್ತದೆ. ಅಂದರೆ ಫಲಾನುಭವಿಗೆ ಎಷ್ಟು ಸಾಲಬೇಕು..? ಅವನು ಮಾಡಹೊರಟಿರುವ ಉದ್ಯೋಗವೇನು ಅಂತ ತಿಳಿದು ಅದಕ್ಕನುಗುಣವಾಗಿ ಸಾಲವನ್ನು ನೀಡುವ ಪ್ರಕ್ರಿಯೆ ಶುರುವಾಗುತ್ತೆ.
ಫಲಾನಿಭವಿಯು ತನ್ನ ಹತ್ತಿರದ ಬ್ಯಾಂಕ್ ಅನ್ನು ಸಂಪರ್ಕಿಸಿ ಅಲ್ಲಿಂದ ಮುದ್ರಾ ಸಾಲಯೋಜನೆಯ ಅಡಿಯಲ್ಲಿ ಸಾಲ ಪಡೆಯ ತಕ್ಕದ್ದು.
ಪುರಾವೆ ಗುರುತೇನು(ಪ್ರೂಫ್ ಆಫ್ ಐಡೆಂಟಿಟಿ) :
* ಸೆಲ್ಫ್ ಅಟೆಸ್ಟೆಡ್ (ಸ್ವಯಂ ಸಹೀಕೃತ) ಚುನಾವಣ ಗುರುತಿನ ಚೀಟಿ ಅಥವಾ ಡ್ರೈವಿಂಗ್ ಲೈಸೆನ್ಸ್ ಅಥವಾ ಪಾನ್ ಕಾರ್ಡ್ ಅಥವಾ ಆಧಾರ್ ಕಾರ್ಡ್ ಅಥವಾ ಪಾಸ್ ಪೋರ್ಟ್ ಅಥವಾ ಯಾವುದಾದರೂ ಸರ್ಕಾರ ನೀಡಿದ ಗುರುತಿನ ಚೀಟಿ ಆಗಬಹುದು.
* ವಾಸಸ್ಥಳ ಪುರಾವೆಗಾಗಿ , ಇತ್ತೀಚಿನ ಟೆಲಿಫೋನ್ ಬಿಲ್ ಅಥವಾ ಎಲೆಕ್ಟ್ರಿಸಿಟಿ ಬಿಲ್, ಕಂದಾಯ ರಶೀದಿ( ಎರಡು ತಿಂಗಳಿಗಿಂತ ಹಳೆಯದಾಗಿರಬಾರದು) ಅಥವಾ ಚುನಾವಣ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್ ಅಥವಾ ಪಾಸ್ ಪೋರ್ಟ್ ಅಥವಾ ವಸತಿ ಪ್ರಮಾಣ ಪತ್ರ ಅಥವಾ ಸ್ಥಳೀಯ ಅಧಿಕಾರಿಯಿಂದ ಕೊಡಲಾದ ಯಾವುದೇ ಗುರುತಿನ ಪತ್ರ
* ಅರ್ಜಿದಾರನ ಇತ್ತೀಚಿಗಿನ ಭಾವಚಿತ್ರ
* ಕೊಂಡುಕೊಳ್ಳುವ ಯಂತ್ರೋಪಕರಣಗಳು ಅಥವಾ ವಸ್ತುವಿನ ಕೊಟೇಷನ್
* ಸರಬರಾಜುದಾರರ ಹೆಸರು ಮತ್ತು ವಿವರ
* ವ್ಯಾಪಾರ ಉದ್ಯಮದ ವಿಳಾಸ ( ಸಂಬಂಧಿಸಿದ ಪರವಾನಿಗೆ ಪತ್ರ)
* ವರ್ಗ ಅಥವಾ ಕೆಟಗರಿ ಪುರಾವೆ (ಪ್ರೂಫ್)
ಮುದ್ರಾ ಒಂದು ಬ್ಯಾಂಕ್ ಅಲ್ಲ :
ಇದನ್ನು ನೆನಪಿನಲ್ಲಿಟ್ಟುಕೊಳ್ಳಿ, ಕರ್ನಾಟಕ ಬ್ಯಾಂಕ್, ಎಸ್.ಬಿ.ಎಮ್. ಇವೇ ಮೊದಲಾದ ಬ್ಯಾಂಕ್ ಗಳ ರೀತಿಯಲ್ಲಿ ಮುದ್ರಾ ಅನ್ನೋದು ಪ್ರತ್ಯೇಕ ಬ್ಯಾಂಕ್ ಅಲ್ಲ. ಈ ಮುದ್ರಾ ಯೋಜನೆಯ ಅಡಿಯಲ್ಲಿ ಫಲಾನುಭವಿಗಳು ಮೊದಲೇ ಹೇಳಿದಂತೆ ಸ್ಥಳೀಯ ಬ್ಯಾಂಕ್ ಗಳಿಂದ ಸಾಲ ಪಡೆಯಬಹುದು.
ಮುದ್ರಾ ಕಾರ್ಡ್ :
ಮುದ್ರಾ ಯೋಜನೆ ಅಡಿಯಲ್ಲಿ ಸಾಲ ಮಂಜೂರಾದ ನಂತರ ಅಭ್ಯರ್ಥಿ `ಮುದ್ರಾ ಕಾರ್ಡ್’ ಅನ್ನು ಪಡೆಯುತ್ತಾರೆ. ಈ ಕಾರ್ಡ್ ಕ್ರೆಡಿಟ್ ಕಾರ್ಡ್ ರೀತಿಯದ್ದಾಗಿದೆ. ಈ ಕಾರ್ಡ್ ಮೂಲಕ ಅಭ್ಯರ್ಥಿ ತನ್ನ ವ್ಯವಹಾರಕ್ಕೆ ಸಂಬಂಧಿಸಿದಂತ ಕಚ್ಚಾ ಸಾಮಗ್ರಿಗಳನ್ನು ಪಡೆಬಹುದು. ಆದರೆ ಇದರ ಮಿತಿ ಸಾಲದ ಶೇಕಡ 10ರಷ್ಟು..! ಅಂದರೆ ಹೆಚ್ಚೆಂದರೆ 10000 ಮಾತ್ರ.
ಮುದ್ರಾಯೋಜನೆ ಲಾಭವನ್ನು ಪಡೆಯಿರಿ.. ಸಾಧ್ಯವಾದಷ್ಟು ಸ್ವಯಂ ಉದ್ಯೋಗಿಗಳಾಗಿ..ಇನ್ನೂ ಮಾಹಿತಿ ಬೇಕು ಅಂತಾದ್ರೆ ನಿಮ್ಮ ಸ್ಥಳೀಯ ಬ್ಯಾಂಕ್ ಗಳಿಗೆ ಭೇಟಿ ಕೊಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಭೂಮಿಮೇಲೆ ಹುಟ್ಟಿರುವ ಎಲ್ಲ ಜೀವಿಗಳಿಗೂ ನಿದ್ರೆ ಅತೀ ಅವಶ್ಯಕ. ನಿದ್ದೆ ಮಾಡುವುದರಿಂದ ಶರೀರ ಉತ್ತೇಜನಗೊಂಡು ,ಮಾರನೇ ದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಿರುವ ಶಕ್ತಿ ಲಭಿಸುತ್ತದೆ. ನಿದ್ರಿಸುವುದರಿಂದ ಶರೀರಕ್ಕೆ ಇನ್ನೂ ಅನೇಕ ರೀತಿಯ ಪ್ರಯೋಜನಗಳು ಆಗುತ್ತವೆ.
ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ…
ನೆನಪಿನಲ್ಲಿಟ್ಟುಕೊಳ್ಳಬೇಕಾದ ಪ್ರಮುಖ ವಿಷಯಗಳು: ನಮ್ಮ ಆರೋಗ್ಯ ಉತ್ತಮ ವಾಗಿರಲು ಇವು ಮುಖ್ಯ 1. ಬಿಪಿ: 120/80 2. ನಾಡಿ: 70 – 100 3. ತಾಪಮಾನ: 36.8 – 37 4. ಉಸಿರು: 12-16 5. ಹಿಮೋಗ್ಲೋಬಿನ್: ಪುರುಷ -13.50-18 ಹೆಣ್ಣು – 11.50 – 16 6. ಕೊಲೆಸ್ಟ್ರಾಲ್: 130 – 200 7. ಪೊಟ್ಯಾಸಿಯಮ್: 3.50 – 5 8. ಸೋಡಿಯಂ: 135 – 145 9. ಟ್ರೈಗ್ಲಿಸರೈಡ್ಗಳು: 220 10. ದೇಹದಲ್ಲಿನ ರಕ್ತದ…
ಒಂಬತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಕ್ಲಾಸ್ ರೂಂನಲ್ಲಿ ಮದ್ಯ ಸೇವನೆ ಮಾಡಿ ಸಿಕ್ಕಿಬಿದ್ದಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದ ವಿಜಯವಾಡ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. 9ನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಈ ರೀತಿ ಮಾಡಿದ್ದು, ತರಗತಿಯಲ್ಲಿ ಶಿಕ್ಷಕರು ಪಾಠ ಮಾಡುತ್ತಿದ್ದರು. ಈ ವೇಳೆ ವಿದ್ಯಾರ್ಥಿನಿಯರು ತಂಪು ಪಾನೀಯಾದ ಬಾಟಲಿಗೆ ಮದ್ಯ ಸೇವನೆ ಮಾಡಿ ಕುಡಿದಿದ್ದಾರೆ. ತಂಪು ಪಾನೀಯದ ಬಾಟಲಿಯಲ್ಲಿ ಲಿಕ್ಕರ್ ಬೆರೆಸಿಕೊಂಡು ತಂದಿದ್ದ ವಿದ್ಯಾರ್ಥಿನಿಯರು, ಶಿಕ್ಷಕರು ಪಾಠ ಮಾಡುವಾಗಲೇ ಸೇವಿಸಿದ್ದಾರೆ. ಮದ್ಯ ಸೇವನೆ ಬಳಿಕ ತರಗತಿಯಲ್ಲಿ ತೂರಾಡುತ್ತಾ ಏನೇನೋ ಮಾತನಾಡಲು…
ಹಣಗಳಿಸುವುದಕ್ಕೆ ಶಕ್ತಿಯೊಂದಿದ್ದರೆ ಸಾಕಾಗುವುದಿಲ್ಲ, ಯುಕ್ತಿಯೂ ಇರಬೇಕು. ತಮ್ಮ ಕಠಿಣ ಪರಿಶ್ರಮದೊಂದಿಗೆ ಚಾಣುಕ್ಯ ತನವಿದ್ದರೆ, ಹಣಗಳಿಸುವುದರ ಜೊತೆ ಹೆಸರನ್ನು ಕೂಡ ಸಂಪಾದಿಸಬಹುದು! ಹೀಗೆ ಒಬ್ಬ ವ್ಯಕ್ತಿ ಹಳ್ಳಿಯ ಜನರ ಮನಸ್ಥಿತಿಯನ್ನು ಅರಿತು ಅವರಿಂದ ಹೇಗೆ ಹಣವನ್ನು ಸಂಪಾದಿಸುತ್ತಾನೆ ಎಂಬುದನ್ನು ತಿಳಿದುಕೊಳ್ಳಲು ಮುಂದೇ ಓದಿ.. ಇದನ್ನು ಮೋಸ ಎನ್ನಬೇಕಾ? ಅಥವಾ ಅವನ ಚಾಣಕ್ಷತನ ಎನ್ನಬೇಕಾ? ನೀವೇ ನಿರ್ಧರಿಸಿ ! ಚಿಕ್ಕದೊಂದು ಹಳ್ಳಿ, ಅಲ್ಲಿಯ ಜನತೆಗೆ ಕೃಷಿಯೆ ಬಂಡವಾಳ, ಬಾಳೆ, ತೆಂಗು, ಮಾವು ಸೇರಿದಂತೆ ಅನೇಕ ಬೆಳೆಗಳನ್ನು ಬೆಳೆದು ಜೀವನ ಸಾಗಿಸುತ್ತಿರುತ್ತಾರೆ,…
ಬಿಗ್ ಬಾಸ್ ಶಾಕಿಂಗ್ ಸುದ್ದಿ ಮನೆಯಿಂದ ಹೊರಬಂದಿದೆ. ಅನಾರೋಗ್ಯದ ಕಾರಣಕ್ಕೆ ಮೊದಲ ದಿನವೇ ಮನೆಯಿಂದ ಹೊರಬಂದಿದ್ದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಕುರಿತಂತೆ ಬಿಗ್ ಬಾಸ್ ಸುದ್ದಿಯನ್ನು ನೀಡಿದೆ. ರವಿ ಬೆಳಗರೆ ಆರೋಗ್ಯದ ಪರಿಶೀಲನೆ ಮಾಡಲಾಗಿದ್ದು ಟಾಸ್ಕ್ ಗಳಲ್ಲಿ ಅವರು ಭಾಗವಹಿಸಲು ಸಾಧ್ಯವಿಲ್ಲ. ಹಾಗಾಗಿ ರವಿ ಬೆಳಗೆರೆ ಈ ಶನಿವಾರದವರೆಗೆ ಮನೆಯಲ್ಲಿ ಅತಿಥಿಯಾಗಿ ಮುಂದುವರಿಯಲಿದ್ದಾರೆ ಎಂದು ಬಿಗ್ ಬಾಸ್ ಹೇಳಿದ್ದಾರೆ. ಅಲ್ಲಿಗೆ ರವಿ ಬೆಳಗೆರೆ ಅವರ ವೋಟಿಂಗ್ ಸಹ ಬಂದ್ ಆಗಲಿದೆ. ಸ್ಪರ್ಧಿಯಾಗಿ ಮನೆ ಒಳ ಪ್ರವೇಶ ಮಾಡಿದ್ದ…