ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂತ್ರ ವಿಸರ್ಜನೆ ಮಾಡಲು ಚಾಲಕನೊಬ್ಬ ರೈಲನ್ನೇ ನಿಲ್ಲಿಸಿದ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. ಚಾಲಕ ಲೋಕಲ್ ರೈಲನ್ನು ನಿಲ್ಲಿಸಿ ಎಂಜಿನ್ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಜನರು ತಮ್ಮ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.
ರೈಲು ಚಾಲಕ ಮುಂಬಯಿಗೆ ಪ್ರಯಾಣಿಸುತ್ತಿದ್ದ ರೈಲನ್ನು ಉಲ್ಲಾಸನಗರದಿಂದ ವಿತಲ್ವಾಡಿಗೆ ಸಂಚರಿಸುವ ದಾರಿ ಮಧ್ಯೆ ನಿಲ್ಲಿಸಿ, ರೈಲಿನಿಂದ ಕೆಳಗಿಳಿದು ಮೂತ್ರ ವಿಸರ್ಜಿಸಿದ್ದಾನೆ. ಸ್ಥಳೀಯ ಮಾಧ್ಯಮವೊಂದರಲ್ಲಿ ಕೆಲಸ ಮಾಡುತ್ತಿದ್ದ ಸೋನು ಶಿಂಧೆ ಎಂಬವರು ಕೆಲಸಕ್ಕಾಗಿ ತೆರಳುವಾಗ ರೈಲು ನಿಂತಿದ್ದನ್ನು ಗಮನಿಸಿದ್ದಾರೆ. ರೈಲಿನ ಚಾಲಕ ಕೆಳಗಿಳಿದು ಬಂದು ಮೂತ್ರ ವಿಸರ್ಜನೆ ಮಾಡುತ್ತಿರುವುದನ್ನು ಸೋನು ಶಿಂಧೇ ವಿಡಿಯೋ ಮಾಡಿದ್ದು, ಇದೀಗ ವೈರಲ್ ಆಗುತ್ತಿದೆ.
ಯಾವುದೇ ತಾಂತ್ರಿಕ ವೈಫಲ್ಯ ಅಥವಾ ಕೆಂಪು ಸಿಗ್ನಲ್ ನೋಡಿ ರೈಲನ್ನು ನಿಲ್ಲಿಸಲಿಲ್ಲ. ನಾನು ಕೆಲಸಕ್ಕೆ ಹೋಗುವಾಗ ರೈಲು ಎರಡು ನಿಲ್ದಾಣದ ನಡುವೆ ನಿಂತಿತ್ತು. ಆಗ ಚಾಲಕ ರೈಲಿನಿಂದ ಇಳಿದು ಮೂತ್ರ ವಿಸರ್ಜನೆ ಮಾಡುತ್ತಿದ್ದರು. ಹಾಗಾಗಿ ನಾನು ಅವರ ವಿಡಿಯೋವನ್ನು ತನ್ನ ಮೊಬೈಲಿನಲ್ಲಿ ಸೆರೆ ಹಿಡಿದಿದ್ದೇನೆ ಎಂದು ಸೋನು ಶಿಂಧೇ ಹೇಳಿದ್ದಾರೆ.
ವೈರಲ್ ಫೋಟೋ ಹಾಗೂ ವಿಡಿಯೋಗಳು ಕೇಂದ್ರ ರೈಲ್ವೆ ಗಮನಕ್ಕೆ ಬಂದಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮಕೈಗೊಳ್ಳುತ್ತೇವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೌತ್ ವೆಸ್ಟ್ರನ್ ರೈಲ್ವೆ ವಲಯದಲ್ಲಿ ರೈಲು ಹಳಿಗಳ ವಿದ್ಯುತೀಕರಣ ಭರದಿಂದ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ಇಂಜಿನ್ ಗಳನ್ನು ನಿರ್ವಹಣೆ ಮಾಡುವ ವ್ಯವಸ್ಥೆ ಪ್ರಾಮುಖ್ಯತೆ ಪಡೆಯಲಿದೆ. ಪ್ರಸ್ತುತ ಕೆ.ಆರ್ ಪುರಂ ನಲ್ಲಿರುವ ಡೀಸೆಲ್ ಲೋಕೋ ಶೆಡ್ ನ್ನು ಎಲೆಕ್ಟ್ರಿಕ್ ಲೋಕೋ ಶೆಡ್ ನ್ನಾಗಿ ಮಾರ್ಪಾಡು ಮಾಡಲಾಗುತ್ತಿದ್ದು, ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಎಲೆಕ್ಟ್ರಿಕ್ ಲೋಕೋ ಶೆಡ್ ಸ್ಥಾಪನೆಯಾಗಲಿದೆ. ಬೆಂಗಳೂರು ಮೂಲದ ಬಾಲಾಜಿ ಬಿಲ್ಡರ್ಸ್ ಗೆ ಈ ಗುತ್ತಿಗೆ ಲಭ್ಯವಾಗಿದ್ದು, ವರ್ಷಾಂತ್ಯ ಅಥವಾ 2020 ರ ಜನವರಿಗೆ ಕಾಮಗಾರಿ…
ನೀವು ಟೀ ಕುಡಿಯುತ್ತೀರಾ…? ಹಾಗಿದ್ದರೆ ನಿಮ್ಮ ಬುದ್ಧಿಮತ್ತೆ ಭಾರಿ ಚುರುಕಾಗಿರುತ್ತೆ. ನಾವು ಇದನ್ನು ಹೇಳುತ್ತಿಲ್ಲ. ಅಧ್ಯಯನ ಒಂದು ಹೇಳುತ್ತಿದೆ. ಚಹಾ ಕುಡಿಯುವವರು ಮತ್ತು ಕುಡಿಯದವರನ್ನು ಅಧ್ಯಯನಕ್ಕೆ ಒಳಪಡಿಸಿದಾಗ, ಚಹಾ ಕುಡಿಯುವವರ ಮೆದುಳಿನ ಬೆಳವಣಿಗೆ ಚೆನ್ನಾಗಿರುವುದಲ್ಲದೆ, ಅವರ ಬುದ್ಧಿ ಮತ್ತೆ ಸಹ ಚುರುಕಾಗಿರುತ್ತದೆ ಎನ್ನುವ ಅಂಶ ತಿಳಿದು ಬಂದಿದೆ. ‘ನಮ್ಮ ಸಂಶೋಧನೆಯಲ್ಲಿ ತಿಳಿದು ಬಂದ ಮೊದಲ ಸಕಾರಾತ್ಮಕ ಅಂಶವೆಂದರೆ ನಿತ್ಯವೂ ಚಹಾ ಸೇವಿಸುವವರ ಮೆದುಳು ಚುರುಕಾಗಿರುವುದಲ್ಲದೆ, ವಯಸ್ಸಾದ ಬಳಿಕ ಕುಂಠಿತವಾಗುವ ಸಾಮರ್ಥ್ಯವನ್ನು ರಕ್ಷಣೆ ಮಾಡುವಲ್ಲಿ ಸಹಕರಿಸುತ್ತದೆ’ ಎಂದು ಸಿಂಗಾಪುರದ…
ಒಬ್ಬೊಬ್ಬ ನಿರ್ದೇಶಕನಿಗೂ ಒಂದೊಂದು ಶೈಲಿ ಇದ್ದರೂ, ಸಿನಿಮಾ ನಿರ್ದೇಶಕರನ್ನು ಎರಡು ವರ್ಗವಾಗಿ ವಿಂಗಡಿಸಬಹುದು. ಮೊದಲನೆಯ ವರ್ಗದ ನಿರ್ದೇಶಕರು ಸಿನಿರಸಿಕರನ್ನು ರಂಜಿಸಲೆಂದೇ ಸಿದ್ದಸೂತ್ರದ ಅಂಶಗಳನ್ನು ಇಟ್ಟುಕೊಂಡು, ಜನ ಬಯಸುವ ಅಂಶಗಳನ್ನೇ ಗ್ರಹಿಸಿ, ಅಳೆದು ತೂಗಿ ಅಂಥದ್ದೇ ಸಿನಿಮಾ ಮೂಲಕ ಜನರನ್ನು ರಂಜಿಸಬಯಸುವವರು. ಹೊಸ ಪ್ರಯೋಗಗಳಿಗೆ ಹಾತೊರೆಯುವ ಮನಸು ಮಾಡದವರು. ಎರಡನೆಯ ವರ್ಗದ ನಿರ್ದೇಶಕರು ತಮ್ಮೊಳಗಿನ ಕಥೆಯನ್ನು ಚೌಕಟ್ಟಿನ ಹಂಗಿಲ್ಲದೆ, ಸಿದ್ಧ ಸೂತ್ರಗಳಿಗೆ ಮೊರೆ ಹೋಗದೇ, ತಮ್ಮದೇ ರೀತಿಯಲ್ಲಿ, ರೂಪಿಸಿ, ನಿರೂಪಿಸಿ ತೆರೆಗೆ ತರುವವರು. ಸದಾ ಹೊಸ ಪ್ರಯೋಗಗಳಿಗೆ ಮಿಡಿಯುವವರು,…
ಮೈಸೂರು ಅರಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಮಹಾರಾಣಿ ತ್ರಿಶಿಕಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಯದುವಂಶಕ್ಕೆ ವಾರಸುದಾರನನ್ನು ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಮೈಸೂರಿನ ಅರಮನೆಯಲ್ಲಿ ಸಂಭ್ರಮ-ಸಡಗರ ಮನೆಮಾಡಿದೆ.
ಹೆಚ್ಚಿನ ಜನರು ಫೋನ್ ಹ್ಯಾಂಗ್ಗಳ ಸಮಸ್ಯೆಯಿಂದ ಅಥವಾ ನಿಧಾನವಾಗಿರುವುದರಿಂದ ತೊಂದರೆಗೀಡಾಗುತ್ತಾರೆ. ನಿಮ್ಮ ಸ್ಮಾರ್ಟ್ಫೋನ್ನಲ್ಲಿ ನೀವು ಸಹ ಈ ರೀತಿಯ ತೊಂದರೆಯಿಂದ ಬಳಲುತ್ತಿದ್ದರೆ, ಈ ಸಮಸ್ಯೆಯಿಂದ ನಿಮಗೆ ಮುಕ್ತಿ ನೀಡಲು ಐದು ಕ್ರಮಗಳನ್ನು ಅನುಸರಿಸಿ. ಈ ಕ್ರಮಗಳೊಂದಿಗೆ ನಿಮ್ಮ ಫೋನ್ ಸ್ಥಗಿತಗೊಳ್ಳುವುದನ್ನು ಅಥವಾ ನಿಧಾನಗೊಳಿಸುವುದನ್ನು ಸಹ ನೀವು ನಿಲ್ಲಿಸಬಹುದು. ಕೆಲವೊಮ್ಮೆ ಫೋನ್ನ ಮೆಮೊರಿ ತುಂಬಿರುತ್ತದೆ. ಆದ್ದರಿಂದ ಫೋನ್ ನಿಧಾನವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ. ಫೋನ್ನ ಆಂತರಿಕ ಸ್ಥಳದ ಹೊರತಾಗಿ, ಫೋನ್ ನಿಧಾನವಾಗಲು ಫೋನ್ನ RAM ಸಹ ಕಾರಣವಾಗಿದೆ. ನಿಮ್ಮ ಫೋನ್…
ಇಂದು ಭಾನುವಾರ, 18/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…