ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ ತನ್ನ ತಂದೆಯನ್ನು ಕಳೆದುಕೊಂಡಿದ್ದಳು.
ಅಂದಿನಿಂದಲೂ ಇಂದಿನವರೆಗೆ ಸತತವಾಗಿ ತನ್ನ ತಂದೆಯ ಹಳೆಯ ಮೊಬೈಲ್ ನಂಬರ್ಗೆ ಮೆಸೇಜ್ ಮಾಡುತ್ತಲೇ ಇದ್ದಳು. ತನ್ನ ದೈನಂದಿನ ಬದುಕಿನ ಬಗ್ಗೆ, ತಾನು ಪದವಿ ಗಳಿಸಿದ ಬಗ್ಗೆ, ಹಾಗೆಯೇ ಕ್ಯಾನ್ಸರ್ ಗೆದ್ದು ಬದುಕು ನೂಕುತ್ತಿರುವ ಬಗ್ಗೆ ಮೆಸೇಜ್ನಲ್ಲಿ ಹೇಳುತ್ತಾ ಅತ್ಯಂತ ಭಾವುಕ ಪತ್ರವೆನ್ನುವಂತೆ ತನ್ನ ತಂದೆಯೊಂದಿಗೆ ಏಕಮುಖಿ ಸಂವಹನ ನಡೆಸುತ್ತಿದ್ದಳು. ಆಕೆಯ ತಂದೆ ತೀರಿ ಹೋಗಿ ನಾಲ್ಕು ವರ್ಷ ಸಂದಿದ್ದವು. ಈ ಬಗ್ಗೆ ತೀವ್ರ ಭಾವುಕಳಾಗಿ ಒಂದು ಸಂದೇಶವನ್ನು ಕಳುಹಿಸಿದ್ದಳು.
‘ಹಲೋ ಡ್ಯಾಡ್, ಇದು ನಾನು, ನಾಳೆ ಮತ್ತೊಂದು ಭೀಕರ ದಿನದ ನೆನಪನ್ನು ನೆನಪಿಸಿಕೊಳ್ಳುವ ದಿನ, ನೀನು ನಮ್ಮನ್ನು ಅಗಲಿ ನಾಳೆಗೆ ನಾಲ್ಕು ವರ್ಷವಾಯ್ತು, ಈ ನಾಲ್ಕು ವರ್ಷ ಅನ್ನೋ ಪುಟ್ಟ ಸಮಯದಲ್ಲಿ ಬದುಕಿನಲ್ಲಿ ದೊಡ್ಡ ದೊಡ್ಡ ಘಟನೆಗಳು ನಡೆದಿವೆ. ಈಗಾಗಲೇ ನಾನು ಹಲವು ಬಾರಿ ಹೇಳಿದಂತೆ ಗ್ರಾಜುಯೇಷನ್ ಮುಗಿಸಿದ್ದೇನೆ, ಕ್ಯಾನ್ಸರ್ ಎಂಬ ಮಹಾಮಾರಿಯನ್ನು ಗೆದ್ದು ಬಂದಿದ್ದೇನೆ. ಪ್ರೀತಿಯಲ್ಲಿ ಬಿದ್ದು ಹೃದಯವನ್ನು ಘಾಸಿ ಮಾಡಿಕೊಂಡಿದ್ದೇನೆ. ಆದ್ರೆ ಎಲ್ಲದಕ್ಕೂ ಎದೆಗೊಟ್ಟು ನಿಂತು ಗಟ್ಟಿ ಮಹಿಳೆಯಾಗಿ ಪರಿವರ್ತಿತಗೊಂಡಿದ್ದೇನೆ. ಕ್ಷಮಿಸು ನಿನಗೆ ನನ್ನ ಅತ್ಯವಶ್ಯಕತೆಯಿದ್ದಾಗ ನಾನು ನಿನ್ನ ಜೊತೆ ಇರಲಿಲ್ಲ. ಒಂದು ದಿನ ನಾವು ಜೊತೆಗೆ ಇರಲಿದ್ದೇವೆ ನನ್ನ ಸರದಿ ಬರೋವರೆಗೂ ಈ ಬದುಕಿನ ಆಟವನ್ನು ನೋಡಬೇಕಿದೆ ’
ಒಂದು ದೀರ್ಘವಾದ ಪತ್ರವನ್ನ ಚಾಸ್ತಿತ್ಯ ಬರೆದು ಒಂದು ನಿಟ್ಟುಸಿರು ಬಿಟ್ಟು, ಸಣ್ಣದಾಗಿ ಬಿಕ್ಕಳಿಸಿದ್ದಳೇನೋ..ಕೆಲವೇ ಗಂಟೆಗಳಲ್ಲಿ ಅದೇ ನಂಬರ್ನಿಂದ ಒಂದು ರಿಪ್ಲೈ ಬಂದದ್ದು ಚಾಸ್ತಿತ್ಯಳನ್ನ ಅಚ್ಚರಿಗೆ ನೂಕಿತ್ತು. ಈ ಕಡೆ ತಂದೆಯನ್ನು ಕಳೆದುಕೊಂಡ ಹತಭಾಗ್ಯಳಾದ ಚಾಸ್ತಿತ್ಯ ಮೆಸೇಜ್ ಮಾಡಿದ್ದರೇ. ಆ ಕಡೆಯಿಂದ ಮಗಳನ್ನು ಕಳೆದುಕೊಂಡ ತಂದೆಯ ಹೃದಯವೊಂದು ಚಾಸ್ತಿತ್ಯಳ ದೀರ್ಘ ಸಂದೇಶಕ್ಕೆ ಅಷ್ಟೇ ಭಾವುಕವಾಗಿ ಪ್ರತಿಕ್ರಿಯೆ ನೀಡಿದ್ರು.
‘ಹಲೋ ಸ್ವೀಟ್ ಹಾರ್ಟ್, ನಾನುನಿನ್ನ ತಂದೆಯಲ್ಲ, ಆದ್ರೆ ಕಳೆದ ನಾಲ್ಕುವರ್ಷಗಳಿಂದ ನಿನ್ನಿಂದ ನಾನು ಸಂದೇಶಗಳನ್ನು ಸ್ವೀಕರಿಸುತ್ತಿದ್ದೇನೆ.ನನ್ನ ಹೆಸರು ಬ್ರಾಡ್, ಆಗಸ್ಟ್2014ರಲ್ಲಿ ಕಾರ್ ಅಪಘಾತದಲ್ಲಿ ನಾನುನನ್ನ ಮಗಳನ್ನು ಕಳೆದುಕೊಂಡಿದ್ದೇನೆ. ಹತಾಶಗೊಂಡಿದ್ದನನ್ನನ್ನು ನಿನ್ನ ಸಂದೇಶಗಳು ಜೀವಂತವಾಗಿಟ್ಟಿವೆ.ಈ ನಾಲ್ಕು ವರ್ಷಗಳಲ್ಲಿನಿನ್ನೆಲ್ಲ ಏಳುಬೀಳುಗಳನ್ನು ನಾನು ನೋಡಿದ್ದೇನೆ. ಅನೇಕಬಾರಿ ನಿನಗೆ ಪ್ರತಿಕ್ರಿಯೆ ನೀಡಬೇಕುಅಂದುಕೊಂಡಿದ್ದೆ. ಆದ್ರೆ ನಿನ್ನ ಹೃದಯಚೂರಾದೀತು ಅಂತ ಆ ಧೈರ್ಯಮಾಡಲಿಲ್ಲ. ನೀನು ಅಸಾಮಾನ್ಯ ಯುವತಿಮಗು.
ನನ್ನ ಮಗಳು ಕೂಡನಿನ್ನಂತೆಯೇ ಇರಬೇಕು ಅಂತ ಬಯಸಿದ್ದೆ.ನಿನ್ನ ಪ್ರತಿದಿನದ ಸಮಾಚಾರಗಳಿಗೆ ಧನ್ಯವಾದ. ನನ್ನ ಮಗಳನ್ನು ಕಿತ್ತುಕೊಂಡದೇವರದ್ದು ತಪ್ಪಲ್ಲ ಅನ್ನೋ ಮನವರಿಕೆಮಾಡಿಕೊಟ್ಟಿದ್ದೀಯಾ. ದೇವರು ನಿನ್ನ ರೂಪದಲ್ಲಿನನಗೆ ನನ್ನ ಪುಟ್ಟ ದೇವತೆಯನ್ನುವಾಪಸ್ ನೀಡಿದ್ದಾನೆ. ಎಲ್ಲವೂ ಸರಿಯಾಗಲಿದೆ. ನಿನ್ನಬಗ್ಗೆ ಹೆಮ್ಮೆಯಿದೆ ನನಗೆ, ನಾಳೆಯೂ ನಿನ್ನಸಂದೇಶಗಳಿಗಾಗಿ ಕಾಯುವೇ ಅಂತ ಮೆಸೇಜ್ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಧೋಳ ಹೌಂಡ್ / ಮುಧೋಲ್ ಹೌಂಡ್, ಇದನ್ನು ಮರಾಠಾ ಹೌಂಡ್, ಪಾಶ್ಮಿ ಹೌಂಡ್ ಮತ್ತು ಕ್ಯಾಥೆವಾರ್ ಡಾಗ್ ಎಂದೂ ಕರೆಯುತ್ತಾರೆ, ಇದು ಭಾರತದಿಂದ ದೃಷ್ಟಿಗೋಚರ ತಳಿಯಾಗಿದೆ. ಕೆನಲ್ ಕ್ಲಬ್ ಆಫ್ ಇಂಡಿಯಾ (ಕೆಸಿಐ) ಮತ್ತು ಇಂಡಿಯನ್ ನ್ಯಾಷನಲ್ ಕೆನಲ್ ಕ್ಲಬ್ (ಐಎನ್ಕೆಸಿ) ಈ ತಳಿಯನ್ನು ವಿವಿಧ ತಳಿಗಳ ಹೆಸರಿನಲ್ಲಿ ಗುರುತಿಸುತ್ತವೆ. ಕೆಸಿಐ ಇದನ್ನು ಕಾರವಾನ್ ಹೌಂಡ್ ಎಂದು ನೋಂದಾಯಿಸಿದರೆ, ಐಎನ್ಕೆಸಿ ಮುಧೋಲ್ ಹೌಂಡ್ ಹೆಸರನ್ನು ಬಳಸುತ್ತದೆ ರಾಜ್ಯದ ಬಾಗಲಕೋಟೆ ಜಿಲ್ಲೆಯ ಸಣ್ಣ ಪಟ್ಟಣ ಮುಧೋಳ ಎಂಬ ಊರಿನ ಹೆಸರನ್ನು…
ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮಕ್ಕೆ ಕಾಲಿಟ್ಟ ಕ್ಷಣದಿಂದಲೇ, ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಆಗಿರುವ ಸ್ಪರ್ಧಿ ಅಂದ್ರೆ ಅದು ನಿವೇದಿತಾ ಗೌಡ. ಕನ್ನಡವನ್ನ ಇಂಗ್ಲೀಷ್ ಸ್ಟೈಲ್ ನಲ್ಲಿ ಮಾತನಾಡುವ ‘ಬಾರ್ಬಿ ಡಾಲ್’ ನಿವೇದಿತಾ ಮನೆಯ ಒಳಗೆ ಹಾಗೂ ಹೊರಗೆ ಸಖತ್ ಸುದ್ದಿಯಾಗುತ್ತಿದ್ದು, ಪಡ್ಡೆ ಹುಡುಗರ ಕನಸಿನ ರಾಣಿಯಾಗಿದ್ದಾರೆ.
ನಮ್ಮ ಇಂದಿನ ಕ್ಷೇತ್ರ ಮಾಲೂರು (ಕೋಲಾರದ ಮಾಲೂರು). ಬರದನಾಡು ಒಂದು ಕಾಲದ ಕೃಷಿ ಪ್ರಧಾನ ನಾಡು, ಅತಿ ಹೆಚ್ಚು ಕೃಷಿ ಪ್ರಧಾನ ಜಾತಿ ಒಕ್ಕಲಿಗರನ್ನು ಒಂದಿರುವ ಕ್ಷೇತ್ರ. ಆದರೆ ಇಂದು ರಾಜಕೀಯ ಗಾಳಕ್ಕೆ ಸಿಲುಕಿ ತಾಲೂಕಿನ ಚಿತ್ರಣವೇ ಬದಲು
ಚೆನ್ನೈನಲ್ಲಿ ಎದುರಾಗಿರುವ ನೀರಿನ ತೀವ್ರ ಕೊರತೆಯನ್ನು ನಿರ್ವಹಿಸಲು ನಿತ್ಯ 1 ಕೋಟಿ ಲೀಟರ್ ನೀರು ಪೂರೈಸುವುದಾಗಿ ಈ ಹಿಂದೆ ತಮಿಳುನಾಡು ಸರ್ಕಾರ ಘೋಷಿಸಿತ್ತು. ಇದಕ್ಕಾಗಿ 68 ಕೋಟಿ ರೂ. ಅನುದಾನ ಮೀಸಲಿರಿಸಿತ್ತು. ಇದೀಗ ಈ ಯೋಜನೆಯ ಭಾಗವಾಗಿ ಚೆನ್ನೈಗೆ ಮೊದಲ ನೀರಿನ ರೈಲು ಆಗಮಿಸಿದೆ. ಕುಡಿಯುವ ನೀರಿನ ತೀವ್ರ ಕೊರತೆ ಎದುರಿಸುತ್ತಿರುವ ತಮಿಳನಾಡು ರಾಜಧಾನಿ ಚೆನ್ನೈಗೆ ಶುಕ್ರವಾರ 25 ಲಕ್ಷ ಲೀಟರ್ ಕಾವೇರಿ ನೀರು ಹೊತ್ತ ಮೊದಲ ರೈಲು ಆಗಮಿಸಿದೆ.ವೆಲ್ಲೂರು ಜಿಲ್ಲೆಯ ಜೋಲಾರ್ ಪೇಟೆಯಿಂದ ಬರೊಬ್ಬರಿ 25…
ಸದ್ಯಕ್ಕೆ ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೋನಾ ವೈರಸ್ ಜಾಗತಿಕ ಮಟ್ಟದಲ್ಲಿ ಎಲ್ಲ ದೇಶದ ಜನರ ನಿದ್ದೆಗೆಡಿಸಿದೆ, ಹೌದು ಕೊರೋನಾ ತಂದಿರುವ ಸ್ಥಿತಿ ಆ ರೀತಿಯದ್ದಾಗಿದೆ. ಇನ್ನು ಕೊರೊನ ಬಗ್ಗೆ ಜನರು ನಾನಾ ರೀತಿಯ ತಪ್ಪು ತಿಳುವಳಿಕೆ ಹೊಂದಿದ್ದಾರೆ ಮತ್ತು ಈ ತಪ್ಪುಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡುವುದು ನಮ್ಮ ಕರ್ತವ್ಯ ಆಗಿದೆ. ಹೆಚ್ಚಿನ ಜನರು ತಾಪಮಾನ ಹೆಚ್ಚಿದರೆ ವೈರಸ್ ನಾಶವಾಗುತ್ತೆ ಎನ್ನುವ ಸುದ್ದಿಯೊಂದನ್ನು ಬಲವಾಗಿ ನಂಬಿದ್ದಾರೆ, ಆದರೆ ಈ ಸುದ್ದಿಯ ಬಗ್ಗೆ ವಿಶ್ವ ಅರೋಗ್ಯ ಸಂಸ್ಥೆ ಏನು…
ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜಕೀಯ ನಾಯಕರಿಂದ ಭರವಸೆ ಮಹಾಪೂರವೇ ಹರಿದು ಬರ್ತಿದೆ. ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿಗಳನ್ನು ಸೆಳೆಯುವ ಪ್ರಯತ್ನವನ್ನು ರಾಹುಲ್ ಗಾಂಧಿ ಮಾಡಿದ್ದಾರೆ. 2019ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಪರೀಕ್ಷೆ ಹಾಗೂ ಸರ್ಕಾರಿ ಹುದ್ದೆಗಳ ಪರೀಕ್ಷೆಗೆ ವಿಧಿಸುವ ಅರ್ಜಿ ಶುಲ್ಕವನ್ನು ರದ್ದು ಮಾಡುವುದಾಗಿ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಯಾವುದೇ ಅಭ್ಯರ್ಥಿಯಿಂದ ಸರ್ಕಾರಿ ಪರೀಕ್ಷೆಗೆ ಅರ್ಜಿ…