ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ ತನ್ನ ತಂದೆಯನ್ನು ಕಳೆದುಕೊಂಡಿದ್ದಳು.

ಅಂದಿನಿಂದಲೂ ಇಂದಿನವರೆಗೆ ಸತತವಾಗಿ ತನ್ನ ತಂದೆಯ ಹಳೆಯ ಮೊಬೈಲ್ ನಂಬರ್ಗೆ ಮೆಸೇಜ್ ಮಾಡುತ್ತಲೇ ಇದ್ದಳು. ತನ್ನ ದೈನಂದಿನ ಬದುಕಿನ ಬಗ್ಗೆ, ತಾನು ಪದವಿ ಗಳಿಸಿದ ಬಗ್ಗೆ, ಹಾಗೆಯೇ ಕ್ಯಾನ್ಸರ್ ಗೆದ್ದು ಬದುಕು ನೂಕುತ್ತಿರುವ ಬಗ್ಗೆ ಮೆಸೇಜ್ನಲ್ಲಿ ಹೇಳುತ್ತಾ ಅತ್ಯಂತ ಭಾವುಕ ಪತ್ರವೆನ್ನುವಂತೆ ತನ್ನ ತಂದೆಯೊಂದಿಗೆ ಏಕಮುಖಿ ಸಂವಹನ ನಡೆಸುತ್ತಿದ್ದಳು. ಆಕೆಯ ತಂದೆ ತೀರಿ ಹೋಗಿ ನಾಲ್ಕು ವರ್ಷ ಸಂದಿದ್ದವು. ಈ ಬಗ್ಗೆ ತೀವ್ರ ಭಾವುಕಳಾಗಿ ಒಂದು ಸಂದೇಶವನ್ನು ಕಳುಹಿಸಿದ್ದಳು.

‘ಹಲೋ ಡ್ಯಾಡ್, ಇದು ನಾನು, ನಾಳೆ ಮತ್ತೊಂದು ಭೀಕರ ದಿನದ ನೆನಪನ್ನು ನೆನಪಿಸಿಕೊಳ್ಳುವ ದಿನ, ನೀನು ನಮ್ಮನ್ನು ಅಗಲಿ ನಾಳೆಗೆ ನಾಲ್ಕು ವರ್ಷವಾಯ್ತು, ಈ ನಾಲ್ಕು ವರ್ಷ ಅನ್ನೋ ಪುಟ್ಟ ಸಮಯದಲ್ಲಿ ಬದುಕಿನಲ್ಲಿ ದೊಡ್ಡ ದೊಡ್ಡ ಘಟನೆಗಳು ನಡೆದಿವೆ. ಈಗಾಗಲೇ ನಾನು ಹಲವು ಬಾರಿ ಹೇಳಿದಂತೆ ಗ್ರಾಜುಯೇಷನ್ ಮುಗಿಸಿದ್ದೇನೆ, ಕ್ಯಾನ್ಸರ್ ಎಂಬ ಮಹಾಮಾರಿಯನ್ನು ಗೆದ್ದು ಬಂದಿದ್ದೇನೆ. ಪ್ರೀತಿಯಲ್ಲಿ ಬಿದ್ದು ಹೃದಯವನ್ನು ಘಾಸಿ ಮಾಡಿಕೊಂಡಿದ್ದೇನೆ. ಆದ್ರೆ ಎಲ್ಲದಕ್ಕೂ ಎದೆಗೊಟ್ಟು ನಿಂತು ಗಟ್ಟಿ ಮಹಿಳೆಯಾಗಿ ಪರಿವರ್ತಿತಗೊಂಡಿದ್ದೇನೆ. ಕ್ಷಮಿಸು ನಿನಗೆ ನನ್ನ ಅತ್ಯವಶ್ಯಕತೆಯಿದ್ದಾಗ ನಾನು ನಿನ್ನ ಜೊತೆ ಇರಲಿಲ್ಲ. ಒಂದು ದಿನ ನಾವು ಜೊತೆಗೆ ಇರಲಿದ್ದೇವೆ ನನ್ನ ಸರದಿ ಬರೋವರೆಗೂ ಈ ಬದುಕಿನ ಆಟವನ್ನು ನೋಡಬೇಕಿದೆ ’

ಒಂದು ದೀರ್ಘವಾದ ಪತ್ರವನ್ನ ಚಾಸ್ತಿತ್ಯ ಬರೆದು ಒಂದು ನಿಟ್ಟುಸಿರು ಬಿಟ್ಟು, ಸಣ್ಣದಾಗಿ ಬಿಕ್ಕಳಿಸಿದ್ದಳೇನೋ..ಕೆಲವೇ ಗಂಟೆಗಳಲ್ಲಿ ಅದೇ ನಂಬರ್ನಿಂದ ಒಂದು ರಿಪ್ಲೈ ಬಂದದ್ದು ಚಾಸ್ತಿತ್ಯಳನ್ನ ಅಚ್ಚರಿಗೆ ನೂಕಿತ್ತು. ಈ ಕಡೆ ತಂದೆಯನ್ನು ಕಳೆದುಕೊಂಡ ಹತಭಾಗ್ಯಳಾದ ಚಾಸ್ತಿತ್ಯ ಮೆಸೇಜ್ ಮಾಡಿದ್ದರೇ. ಆ ಕಡೆಯಿಂದ ಮಗಳನ್ನು ಕಳೆದುಕೊಂಡ ತಂದೆಯ ಹೃದಯವೊಂದು ಚಾಸ್ತಿತ್ಯಳ ದೀರ್ಘ ಸಂದೇಶಕ್ಕೆ ಅಷ್ಟೇ ಭಾವುಕವಾಗಿ ಪ್ರತಿಕ್ರಿಯೆ ನೀಡಿದ್ರು.

‘ಹಲೋ ಸ್ವೀಟ್ ಹಾರ್ಟ್, ನಾನುನಿನ್ನ ತಂದೆಯಲ್ಲ, ಆದ್ರೆ ಕಳೆದ ನಾಲ್ಕುವರ್ಷಗಳಿಂದ ನಿನ್ನಿಂದ ನಾನು ಸಂದೇಶಗಳನ್ನು ಸ್ವೀಕರಿಸುತ್ತಿದ್ದೇನೆ.ನನ್ನ ಹೆಸರು ಬ್ರಾಡ್, ಆಗಸ್ಟ್2014ರಲ್ಲಿ ಕಾರ್ ಅಪಘಾತದಲ್ಲಿ ನಾನುನನ್ನ ಮಗಳನ್ನು ಕಳೆದುಕೊಂಡಿದ್ದೇನೆ. ಹತಾಶಗೊಂಡಿದ್ದನನ್ನನ್ನು ನಿನ್ನ ಸಂದೇಶಗಳು ಜೀವಂತವಾಗಿಟ್ಟಿವೆ.ಈ ನಾಲ್ಕು ವರ್ಷಗಳಲ್ಲಿನಿನ್ನೆಲ್ಲ ಏಳುಬೀಳುಗಳನ್ನು ನಾನು ನೋಡಿದ್ದೇನೆ. ಅನೇಕಬಾರಿ ನಿನಗೆ ಪ್ರತಿಕ್ರಿಯೆ ನೀಡಬೇಕುಅಂದುಕೊಂಡಿದ್ದೆ. ಆದ್ರೆ ನಿನ್ನ ಹೃದಯಚೂರಾದೀತು ಅಂತ ಆ ಧೈರ್ಯಮಾಡಲಿಲ್ಲ. ನೀನು ಅಸಾಮಾನ್ಯ ಯುವತಿಮಗು.

ನನ್ನ ಮಗಳು ಕೂಡನಿನ್ನಂತೆಯೇ ಇರಬೇಕು ಅಂತ ಬಯಸಿದ್ದೆ.ನಿನ್ನ ಪ್ರತಿದಿನದ ಸಮಾಚಾರಗಳಿಗೆ ಧನ್ಯವಾದ. ನನ್ನ ಮಗಳನ್ನು ಕಿತ್ತುಕೊಂಡದೇವರದ್ದು ತಪ್ಪಲ್ಲ ಅನ್ನೋ ಮನವರಿಕೆಮಾಡಿಕೊಟ್ಟಿದ್ದೀಯಾ. ದೇವರು ನಿನ್ನ ರೂಪದಲ್ಲಿನನಗೆ ನನ್ನ ಪುಟ್ಟ ದೇವತೆಯನ್ನುವಾಪಸ್ ನೀಡಿದ್ದಾನೆ. ಎಲ್ಲವೂ ಸರಿಯಾಗಲಿದೆ. ನಿನ್ನಬಗ್ಗೆ ಹೆಮ್ಮೆಯಿದೆ ನನಗೆ, ನಾಳೆಯೂ ನಿನ್ನಸಂದೇಶಗಳಿಗಾಗಿ ಕಾಯುವೇ ಅಂತ ಮೆಸೇಜ್ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ…
ಸೂಪರ್ಸ್ಟಾರ್ ರಜನೀಕಾಂತ್ ಆಗಾಗ ಹಿಮಾಲಯಕ್ಕೆ ಹೋಗಿ ಧ್ಯಾನ ಮಾಡಿ ಬರುತ್ತಾರೆ. ವಿಶೇಷವಾಗಿ ತಮ್ಮ ಸಿನಿಮಾಗಳು ಬಿಡುಗಡೆ ಆಗುವ ಮುಂಚೆ ಹಾಗೂ ತಮ್ಮ ಜೀವನದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ ರಜನಿ ಹಿಮಾಲಯಕ್ಕೆ ಭೇಟಿ ಕೊಡುತ್ತಾರೆ. ಕೆಲ ದಿನಗಳ ಹಿಂದೆ ಸ್ವತಃ ರಜನಿ ಅವರೇ ಹಿಮಾಲಯಕ್ಕೆ ಹೋಗುವುದಾಗಿ ತಿಳಿಸಿದ್ದರು.
ಅಚಾನಕ್ಕಾಗಿ ಯಾರಾದರೂ ದುಡ್ ಸಿಕ್ರೆ ಏನ್ ಮಾಡ್ತಾರೆ? ಕಿಸೆಗೆ ಹಾಕಿಕೊಂಡು ನಡೆದೇ ಬಿಡ್ತಾರೆ. ಆದರೆ ಇಲ್ಲೊಬ್ಬ ಕಂಡಕ್ಟರ್ ತನ್ನ ಬಸ್ ನಲ್ಲಿ ಸಿಕ್ಕ ಒಂದು ಲಕ್ಷ ರೂ. ಹಣವನ್ನು ಸಂಬಂಧಪಟ್ಟವರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಸುಭದ್ರ ಎಂಬ ಪ್ರಯಾಣಿಕರು ಎಸ್ಟೀಂ ಮಾಲ್ ಬಳಿ ಬಸ್ ಇಳಿಯುವಾಗ ಹಣದ ಬ್ಯಾಗ್ ಮರೆತು ಬಸ್ ನಲ್ಲಿ ಬಿಟ್ಟು ಇಳಿದಿದ್ದರು.ಅನಾಥವಾಗಿ ಬಿದ್ದಿದ್ದ ಬ್ಯಾಗನ್ನು ಪರಿಶೀಲಿಸಿದ ಕಂಡಕ್ಟರ್ ಯಲ್ಲಪ್ಪ ಬೆಟಗೇರಿ, ಪರಿಶೀಲನೆ ನಡೆಸಿದಾಗ ಅದರಲ್ಲಿ ಹಣ ಇರುವುದು ಕಂಡುಬಂದಿದೆ. ಅಷ್ಟರಲ್ಲಾಗಲೇ ಆತಂಕಗೊಂಡಿದ್ದ ಸುಭದ್ರ…
ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ…
1. ಬಳಸಿದ ನಂತರ ಬಿಸಾಡುವ ಮೊಟ್ಟೆಯ ಕವಚ ಮಣ್ಣಲ್ಲಿ ಬೆರೆತರೆ ಗಿಡದ ಬೆಳವಣಿಗೆಯನ್ನು ಪ್ರಚೋದಿಸುವ ಹಾಗೂ ತರಕಾರಿ ಬೆಳೆಗಳಿಗೆ ತಗುಲುವ ಕೊಳೆರೋಗಗಳನ್ನು ತಡೆಗಟ್ಟುವ ಕ್ಯಾಲ್ಸಿಯಂ ಆಂಶ ಸಿಗುತ್ತದೆ. 2. ಕಾಫೀ ಗಸಿಯನ್ನು ಮಣ್ಣಿಗೆ ಸೇರಿಸಿ ಮಣ್ಣಲ್ಲಿ ಖನಿಜಾಂಶ – ಸಾರಜನಕ – ವಿಟಮಿನ್ನುಗಳನ್ನು ಹೆಚ್ಚಿಸಬಹುದು 3. ಟೀ ಗಸಿಯನ್ನೂ ಸಹ ಕಾಂಪೋಸ್ಟ್ ಮೂಲಕ ಮಣ್ಣಿಗೆ ಸೇರಿಸಿ ಮಣ್ಣಿನ ಗುಣಮಟ್ಟ ಹೆಚ್ಚಿಸಬಹುದು 4. ಬಾಳೇಹಣ್ಣಿನ ಸಿಪ್ಪೆಯನ್ನು ನೇರವಾಗಿ ಮಣ್ಣ ಮೇಲೆ ಹಾಕಿ, ಮಣ್ಣಿಗೆ ಕ್ಯಾಲ್ಸಿಯಂ, ಮೆಗ್ನೇಷಿಯಂ ಮತ್ತು ಪೊಟ್ಯಾಷ್…
ನಾವು ಮೆಕ್ಕೆಜೋಳದ ರೇಷ್ಮೆಯನ್ನು ಹಾಗೇ ತಿನ್ನಬಹುದು ಅಥವಾ ನೀರಿನೊಂದಿಗೆ ಬೆರೆಸಿ ದ್ರಾವಣ ರೂಪದಲ್ಲಿ ಕುಡಿಯಬಹುದು ಅಥವಾ ನಿಂಬೇ ಪಾನೀಯವಾಗಿ ಸೇವಿಸಬಹುದು ನೀವು ಮೆಕ್ಕೆಜೋಳದ ರೇಷ್ಮೆಯನ್ನು ಒಂದು ದಿನ ನೀರಿನಲ್ಲಿ ನೆನೆಸಿ ಸೂರ್ಯನ ಬಿಸಿಲಿನಲ್ಲಿ ಇಟ್ಟು ಅಂದೇ ರಾತ್ರಿ ಜೇನುತುಪ್ಪದೊಂದಿಗೆ ಸೇರಿಸಿ ಬೇಕಾದಾಗ ಕುಡಿಯಬಹುದು.