ಸುದ್ದಿ

ಮೃತ ಅಪ್ಪನಿಗೆ ಮಸೇಜ್ ಮಾಡುತ್ತಿದ್ದಳು, 4 ವರ್ಷದ ನಂತರ ಬಂತು ರಿಪ್ಲೈ..! ತಂದೆ ಮಗಳ ಕರುಣಾಜನಕ ಕಥೆ….

58

ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್​ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರ​​​ನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್​ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್​ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ ತನ್ನ ತಂದೆಯನ್ನು ಕಳೆದುಕೊಂಡಿದ್ದಳು.

ಅಂದಿನಿಂದಲೂ ಇಂದಿನವರೆಗೆ ಸತತವಾಗಿ ತನ್ನ ತಂದೆಯ ಹಳೆಯ ಮೊಬೈಲ್​ ನಂಬರ್​ಗೆ ಮೆಸೇಜ್ ಮಾಡುತ್ತಲೇ ಇದ್ದಳು. ತನ್ನ ದೈನಂದಿನ ಬದುಕಿನ ಬಗ್ಗೆ, ತಾನು ಪದವಿ ಗಳಿಸಿದ ಬಗ್ಗೆ, ಹಾಗೆಯೇ ಕ್ಯಾನ್ಸರ್​ ಗೆದ್ದು ಬದುಕು ನೂಕುತ್ತಿರುವ ಬಗ್ಗೆ ಮೆಸೇಜ್​ನಲ್ಲಿ ಹೇಳುತ್ತಾ ಅತ್ಯಂತ ಭಾವುಕ ಪತ್ರವೆನ್ನುವಂತೆ ತನ್ನ ತಂದೆಯೊಂದಿಗೆ ಏಕಮುಖಿ ಸಂವಹನ ನಡೆಸುತ್ತಿದ್ದಳು. ಆಕೆಯ ತಂದೆ ತೀರಿ ಹೋಗಿ ನಾಲ್ಕು ವರ್ಷ ಸಂದಿದ್ದವು. ಈ ಬಗ್ಗೆ ತೀವ್ರ ಭಾವುಕಳಾಗಿ ಒಂದು ಸಂದೇಶವನ್ನು ಕಳುಹಿಸಿದ್ದಳು.

‘ಹಲೋ ಡ್ಯಾಡ್, ಇದು ನಾನು, ನಾಳೆ ಮತ್ತೊಂದು ಭೀಕರ ದಿನದ ನೆನಪನ್ನು ನೆನಪಿಸಿಕೊಳ್ಳುವ ದಿನ, ನೀನು ನಮ್ಮನ್ನು ಅಗಲಿ ನಾಳೆಗೆ ನಾಲ್ಕು ವರ್ಷವಾಯ್ತು, ಈ ನಾಲ್ಕು ವರ್ಷ ಅನ್ನೋ ಪುಟ್ಟ ಸಮಯದಲ್ಲಿ ಬದುಕಿನಲ್ಲಿ ದೊಡ್ಡ ದೊಡ್ಡ ಘಟನೆಗಳು ನಡೆದಿವೆ. ಈಗಾಗಲೇ ನಾನು ಹಲವು ಬಾರಿ ಹೇಳಿದಂತೆ ಗ್ರಾಜುಯೇಷನ್ ಮುಗಿಸಿದ್ದೇನೆ, ಕ್ಯಾನ್ಸರ್ ಎಂಬ ಮಹಾಮಾರಿಯನ್ನು ಗೆದ್ದು ಬಂದಿದ್ದೇನೆ. ಪ್ರೀತಿಯಲ್ಲಿ ಬಿದ್ದು ಹೃದಯವನ್ನು ಘಾಸಿ ಮಾಡಿಕೊಂಡಿದ್ದೇನೆ. ಆದ್ರೆ ಎಲ್ಲದಕ್ಕೂ ಎದೆಗೊಟ್ಟು ನಿಂತು ಗಟ್ಟಿ ಮಹಿಳೆಯಾಗಿ ಪರಿವರ್ತಿತಗೊಂಡಿದ್ದೇನೆ. ಕ್ಷಮಿಸು ನಿನಗೆ ನನ್ನ ಅತ್ಯವಶ್ಯಕತೆಯಿದ್ದಾಗ ನಾನು ನಿನ್ನ ಜೊತೆ ಇರಲಿಲ್ಲ. ಒಂದು ದಿನ ನಾವು ಜೊತೆಗೆ ಇರಲಿದ್ದೇವೆ ನನ್ನ ಸರದಿ ಬರೋವರೆಗೂ ಈ ಬದುಕಿನ ಆಟವನ್ನು ನೋಡಬೇಕಿದೆ ’

ಒಂದು ದೀರ್ಘವಾದ ಪತ್ರವನ್ನ ಚಾಸ್ತಿತ್ಯ ಬರೆದು ಒಂದು ನಿಟ್ಟುಸಿರು ಬಿಟ್ಟು, ಸಣ್ಣದಾಗಿ ಬಿಕ್ಕಳಿಸಿದ್ದಳೇನೋ..ಕೆಲವೇ ಗಂಟೆಗಳಲ್ಲಿ ಅದೇ ನಂಬರ್​ನಿಂದ ಒಂದು ರಿಪ್ಲೈ ಬಂದದ್ದು ಚಾಸ್ತಿತ್ಯಳನ್ನ ಅಚ್ಚರಿಗೆ ನೂಕಿತ್ತು. ಈ ಕಡೆ ತಂದೆಯನ್ನು ಕಳೆದುಕೊಂಡ ಹತಭಾಗ್ಯಳಾದ ಚಾಸ್ತಿತ್ಯ​ ಮೆಸೇಜ್ ಮಾಡಿದ್ದರೇ. ಆ ಕಡೆಯಿಂದ ಮಗಳನ್ನು ಕಳೆದುಕೊಂಡ ತಂದೆಯ ಹೃದಯವೊಂದು ಚಾಸ್ತಿತ್ಯ​ಳ ದೀರ್ಘ ಸಂದೇಶಕ್ಕೆ ಅಷ್ಟೇ ಭಾವುಕವಾಗಿ ಪ್ರತಿಕ್ರಿಯೆ ನೀಡಿದ್ರು.

‘ಹಲೋ ಸ್ವೀಟ್ ಹಾರ್ಟ್​, ನಾನುನಿನ್ನ ತಂದೆಯಲ್ಲ, ಆದ್ರೆ ಕಳೆದ ನಾಲ್ಕುವರ್ಷಗಳಿಂದ ನಿನ್ನಿಂದ ನಾನು ಸಂದೇಶಗಳನ್ನು ಸ್ವೀಕರಿಸುತ್ತಿದ್ದೇನೆ.ನನ್ನ ಹೆಸರು ಬ್ರಾಡ್​, ಆಗಸ್ಟ್​2014ರಲ್ಲಿ ಕಾರ್​ ಅಪಘಾತದಲ್ಲಿ ನಾನುನನ್ನ ಮಗಳನ್ನು ಕಳೆದುಕೊಂಡಿದ್ದೇನೆ. ಹತಾಶಗೊಂಡಿದ್ದನನ್ನನ್ನು ನಿನ್ನ ಸಂದೇಶಗಳು ಜೀವಂತವಾಗಿಟ್ಟಿವೆ.ಈ ನಾಲ್ಕು ವರ್ಷಗಳಲ್ಲಿನಿನ್ನೆಲ್ಲ ಏಳುಬೀಳುಗಳನ್ನು ನಾನು ನೋಡಿದ್ದೇನೆ. ಅನೇಕಬಾರಿ ನಿನಗೆ ಪ್ರತಿಕ್ರಿಯೆ ನೀಡಬೇಕುಅಂದುಕೊಂಡಿದ್ದೆ. ಆದ್ರೆ ನಿನ್ನ ಹೃದಯಚೂರಾದೀತು ಅಂತ ಆ ಧೈರ್ಯಮಾಡಲಿಲ್ಲ. ನೀನು ಅಸಾಮಾನ್ಯ ಯುವತಿಮಗು.

ನನ್ನ ಮಗಳು ಕೂಡನಿನ್ನಂತೆಯೇ ಇರಬೇಕು ಅಂತ ಬಯಸಿದ್ದೆ.ನಿನ್ನ ಪ್ರತಿದಿನದ ಸಮಾಚಾರಗಳಿಗೆ ಧನ್ಯವಾದ. ನನ್ನ ಮಗಳನ್ನು ಕಿತ್ತುಕೊಂಡದೇವರದ್ದು ತಪ್ಪಲ್ಲ ಅನ್ನೋ ಮನವರಿಕೆಮಾಡಿಕೊಟ್ಟಿದ್ದೀಯಾ. ದೇವರು ನಿನ್ನ ರೂಪದಲ್ಲಿನನಗೆ ನನ್ನ ಪುಟ್ಟ ದೇವತೆಯನ್ನುವಾಪಸ್ ನೀಡಿದ್ದಾನೆ. ಎಲ್ಲವೂ ಸರಿಯಾಗಲಿದೆ. ನಿನ್ನಬಗ್ಗೆ ಹೆಮ್ಮೆಯಿದೆ ನನಗೆ, ನಾಳೆಯೂ ನಿನ್ನಸಂದೇಶಗಳಿಗಾಗಿ ಕಾಯುವೇ ಅಂತ ಮೆಸೇಜ್ಮಾಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಇಂದು ಭಾನುವಾರ, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಭಾನುವಾರ , 18/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಆಗಾಗ ಸಂಚಾರದಿಂದ ಕಾರ್ಯಸಿದ್ಧಿಯಾದರೂ ದೇಹಾಯಾಸ ತಂದೀತು. ಹೊಸ ಆದಾಯದ ಮೂಲಗಳು ಗೋಚರಕ್ಕೆ ಬಂದಾವು. ಸೂಕ್ತ ಸಲಹೆಗಾಗಿ ಹಿತೈಷಿಗಳು ನಿಮ್ಮ ಮಾರ್ಗದರ್ಶನಕ್ಕೆ ಬಂದಾರು. ವೃಷಭ:- ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉದಾಸೀನತೆ ತೋರಿಸಿಯಾರು. ವೃತ್ತಿರಂಗದಲ್ಲಿ ಮುನ್ನಡೆ ಸಮಾಧಾನ ತರುತ್ತದೆ. ಯಾವುದೇ ಸಮಸ್ಯೆಗಳನ್ನು…

  • ಸುದ್ದಿ

    ಒಂದೇ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ 7 ಟೀಚರ್ ಗಳು ಏಕಕಾಲದಲ್ಲಿ ಗರ್ಭಿಣಿಯರು.!

    ಅಮೆರಿಕದ ಗೊಡಾರ್ಡ್ ನಗರದ ಪ್ರಾಥಮಿಕ ಶಾಲೆಯ ಏಳು ಶಿಕ್ಷಕಿಯರು ಏಕಕಾಲದಲ್ಲಿ ಗರ್ಭಿಣಿಯರಾಗಿದ್ದಾರೆ. ಏಳು ಶಿಕ್ಷಕಿಯರು 15 ರಿಂದ 1 ತಿಂಗಳ ಆಸುಪಾಸಿನಲ್ಲಿ ಏಕಕಾಲದಲ್ಲಿ ಹೆರಿಗೆ ರಜೆಗೆ ಅರ್ಜಿ ಸಲ್ಲಿಸಿದ್ದಾರೆ. ಎಲ್ಲಾ ಮಹಿಳಾ ಸಹದ್ಯೋಗಿಗಳು ಏಕಕಾಲದಲ್ಲಿ ತಾಯಿ ಆಗುತ್ತಿದ್ದೇವೆ. ಏಳು ಶಿಕ್ಷಕಿಯರು ಒಂದೇ ಬಾರಿ ಗರ್ಭಿಣಿ ಆಗಬೇಕೆಂಬುವುದು ದೇವರ ಇಚ್ಛೆ. ಶಿಕ್ಷಕಿ ಟಿಫನಿ ಎಂಬವರು ಮೂರನೇ ಬಾರಿ ಗರ್ಭಿಣಿಯಾಗಿದ್ದು, ಅವರಿಗೆ 9 ಮತ್ತು 7 ವರ್ಷದ ಮಕ್ಕಳಿವೆ ಎಂದು ಶಿಕ್ಷಕಿ ಕೈಟಿ ಸಂತಸ ವ್ಯಕ್ತಪಡಿಸುತ್ತಾರೆ. ನನ್ನ 20 ವರ್ಷದ…

  • ಸ್ಪೂರ್ತಿ

    ದೇಶ ಕಾಯೋ ಈ ಸೈನಿಕ ತನ್ನ ಊರಿಗಾಗಿ ಮಾಡಿದ ಕೆಲಸ ಕೇಳಿದ್ರೆ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ನೀವು ಈ ರೀತಿಯ ಸ್ಟೋರಿಯನ್ನು ಸಿನಿಮಾದಲ್ಲಿ ಅಥವಾ ಕಥೆ ಬರಹಗಳಲ್ಲಿ ನೋಡಿರುತ್ತೀರಿ ಆದರೆ ನಿಜ ಜೀವನದಲ್ಲಿ ಇವರು ಮಾಡಿರುವಂತ ಕೆಲಸಕ್ಕೆ ನೀವು ಹೆಮ್ಮೆ ಪಡುತ್ತೀರ. ಪ್ರಸ್ತುತ ದಿನಗಳಲ್ಲಿ ಜನರು ತಮ್ಮ ಬಗ್ಗೆ ಹಾಗು ತಮ್ಮ ಕುಟುಂಬದ ಬಗ್ಗೆ ಮಾತ್ರ ಯೋಚಿಸುತ್ತಾರೆ ವಿನಃ ತಾವು ವಾಸಿಸುವಂತ ಅಕ್ಕ ಪಕ್ಕದ ವಾತಾವರಣದ ಬಗ್ಗೆ ತಲೆ ಕೆಡಿಸಿ ಕೊಳ್ಳುವುದಿಲ್ಲ ಅಂತಹದರಲ್ಲಿ ಇವರು ಮಾಡಿರುವಂತ ಕೆಲಸ ನಿಜಕ್ಕೂ ಅದ್ಭುತವಾದದ್ದು ಅನ್ನಬಹುದು. 4 ಲಕ್ಷ ರೂಗಳ ದಾನ… ಹೆಸರು ಭಗೂರಾಮ್ ಮೌರ್ಯ ವಾರಣಾಸಿಯಿಂದ 20…

  • ಸಿನಿಮಾ

    ಸೆಂಚುರಿ ಸ್ಟಾರ್ ಶಿವಣ್ಣನ ವಿರುದ್ದ, ಹುಚ್ಚ ವೆಂಕಟ್ ತಿರುಗಿ ಬಿದ್ದಿದೇಕೆ.!

    ‘ನನ್ ಎಕ್ಕಡ’ ಡೈಲಾಗ್’ನಿಂದ್ಲೇ ಫೇಮಸ್ ಆಗಿರುವ ಹುಚ್ಚ ವೆಂಕಟ್ ಹ್ಯಾಟ್ರಿಕ್ ಹಿರೋ, ಸೆಂಚುರಿ ಸ್ಟಾರ್ ಶಿವಣ್ಣ ವಿರುದ್ದ ವೀಡಿಯೋ ಮೂಲಕ ತಿರುಗಿ ಬಿದ್ದಿದ್ದಾರೆ.

  • ಸ್ಪೂರ್ತಿ

    ಈ ಮಹಾನುಭಾವ ಏನ್ ಮಾಡ್ತಾ ಇದ್ದಾರೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನೀವು ಹಲವು ರೀತಿಯ ಸಾಮಾಜಿಕ ಕಾರ್ಯ ಮಾಡುವವರನ್ನು ನೋಡಿರುತ್ತೀರ ಹಾಗು ಅವರ ಬಗ್ಗೆ ಕೇಳಿರುತ್ತೀರ. ಅದೇ ರೀತಿಯಲ್ಲಿ ನಾವು ನಿಮ್ಮನ್ನು ಒಬ್ಬ ಉದ್ಯಮಿ ಬಡ ಹೆಣ್ಣು ಮಕ್ಕಳಿಗಾಗಿ ತಾನು ಮಾಡಿರುವಂತ ಸಾಮಾಜಿಕ ಕಾರ್ಯದ ಬಗ್ಗೆ ತಿಳಿಸಿ ಕೊಡುತ್ತೇವೆ ನೋಡಿ. ಹೆಸರು ಮಹೇಶ್ ಸಾವನಿ ಇವರು ಮೂಲತಃ ಗುಜರಾತ್ ನವರು ಇವರು ಒಬ್ಬ ವಜ್ರದ ವ್ಯಾಪಾರೀ ಕೂಡ. ಸಾವನಿ ಅವರ ತ೦ದೆ ವಲ್ಲಭಭಾಯಿ ಅವರು ಸುಮಾರು 40 ವಷ೯ಗಳ ಹಿ೦ದೆ…

  • ಕರ್ನಾಟಕ

    ಅಮರಶಿಲ್ಪಿ ಜಕಣಾಚಾರಿ ಬಗ್ಗೆ ನಿಮ್ಗೆ ಗೊತ್ತಿಲ್ಲದ ಕೆಲವು ನಿಗೂಡ ಸತ್ಯಗಳು..!

    ಅಮರಶಿಲ್ಪಿ ರವರು ಅತ್ಯಂತ ನಾಜೂಕಾದ ಹಲವಾರು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿ,ಇವರು ಕಲ್ಯಾಣಿ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ.