ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ ತನ್ನ ತಂದೆಯನ್ನು ಕಳೆದುಕೊಂಡಿದ್ದಳು.
ಅಂದಿನಿಂದಲೂ ಇಂದಿನವರೆಗೆ ಸತತವಾಗಿ ತನ್ನ ತಂದೆಯ ಹಳೆಯ ಮೊಬೈಲ್ ನಂಬರ್ಗೆ ಮೆಸೇಜ್ ಮಾಡುತ್ತಲೇ ಇದ್ದಳು. ತನ್ನ ದೈನಂದಿನ ಬದುಕಿನ ಬಗ್ಗೆ, ತಾನು ಪದವಿ ಗಳಿಸಿದ ಬಗ್ಗೆ, ಹಾಗೆಯೇ ಕ್ಯಾನ್ಸರ್ ಗೆದ್ದು ಬದುಕು ನೂಕುತ್ತಿರುವ ಬಗ್ಗೆ ಮೆಸೇಜ್ನಲ್ಲಿ ಹೇಳುತ್ತಾ ಅತ್ಯಂತ ಭಾವುಕ ಪತ್ರವೆನ್ನುವಂತೆ ತನ್ನ ತಂದೆಯೊಂದಿಗೆ ಏಕಮುಖಿ ಸಂವಹನ ನಡೆಸುತ್ತಿದ್ದಳು. ಆಕೆಯ ತಂದೆ ತೀರಿ ಹೋಗಿ ನಾಲ್ಕು ವರ್ಷ ಸಂದಿದ್ದವು. ಈ ಬಗ್ಗೆ ತೀವ್ರ ಭಾವುಕಳಾಗಿ ಒಂದು ಸಂದೇಶವನ್ನು ಕಳುಹಿಸಿದ್ದಳು.
‘ಹಲೋ ಡ್ಯಾಡ್, ಇದು ನಾನು, ನಾಳೆ ಮತ್ತೊಂದು ಭೀಕರ ದಿನದ ನೆನಪನ್ನು ನೆನಪಿಸಿಕೊಳ್ಳುವ ದಿನ, ನೀನು ನಮ್ಮನ್ನು ಅಗಲಿ ನಾಳೆಗೆ ನಾಲ್ಕು ವರ್ಷವಾಯ್ತು, ಈ ನಾಲ್ಕು ವರ್ಷ ಅನ್ನೋ ಪುಟ್ಟ ಸಮಯದಲ್ಲಿ ಬದುಕಿನಲ್ಲಿ ದೊಡ್ಡ ದೊಡ್ಡ ಘಟನೆಗಳು ನಡೆದಿವೆ. ಈಗಾಗಲೇ ನಾನು ಹಲವು ಬಾರಿ ಹೇಳಿದಂತೆ ಗ್ರಾಜುಯೇಷನ್ ಮುಗಿಸಿದ್ದೇನೆ, ಕ್ಯಾನ್ಸರ್ ಎಂಬ ಮಹಾಮಾರಿಯನ್ನು ಗೆದ್ದು ಬಂದಿದ್ದೇನೆ. ಪ್ರೀತಿಯಲ್ಲಿ ಬಿದ್ದು ಹೃದಯವನ್ನು ಘಾಸಿ ಮಾಡಿಕೊಂಡಿದ್ದೇನೆ. ಆದ್ರೆ ಎಲ್ಲದಕ್ಕೂ ಎದೆಗೊಟ್ಟು ನಿಂತು ಗಟ್ಟಿ ಮಹಿಳೆಯಾಗಿ ಪರಿವರ್ತಿತಗೊಂಡಿದ್ದೇನೆ. ಕ್ಷಮಿಸು ನಿನಗೆ ನನ್ನ ಅತ್ಯವಶ್ಯಕತೆಯಿದ್ದಾಗ ನಾನು ನಿನ್ನ ಜೊತೆ ಇರಲಿಲ್ಲ. ಒಂದು ದಿನ ನಾವು ಜೊತೆಗೆ ಇರಲಿದ್ದೇವೆ ನನ್ನ ಸರದಿ ಬರೋವರೆಗೂ ಈ ಬದುಕಿನ ಆಟವನ್ನು ನೋಡಬೇಕಿದೆ ’
ಒಂದು ದೀರ್ಘವಾದ ಪತ್ರವನ್ನ ಚಾಸ್ತಿತ್ಯ ಬರೆದು ಒಂದು ನಿಟ್ಟುಸಿರು ಬಿಟ್ಟು, ಸಣ್ಣದಾಗಿ ಬಿಕ್ಕಳಿಸಿದ್ದಳೇನೋ..ಕೆಲವೇ ಗಂಟೆಗಳಲ್ಲಿ ಅದೇ ನಂಬರ್ನಿಂದ ಒಂದು ರಿಪ್ಲೈ ಬಂದದ್ದು ಚಾಸ್ತಿತ್ಯಳನ್ನ ಅಚ್ಚರಿಗೆ ನೂಕಿತ್ತು. ಈ ಕಡೆ ತಂದೆಯನ್ನು ಕಳೆದುಕೊಂಡ ಹತಭಾಗ್ಯಳಾದ ಚಾಸ್ತಿತ್ಯ ಮೆಸೇಜ್ ಮಾಡಿದ್ದರೇ. ಆ ಕಡೆಯಿಂದ ಮಗಳನ್ನು ಕಳೆದುಕೊಂಡ ತಂದೆಯ ಹೃದಯವೊಂದು ಚಾಸ್ತಿತ್ಯಳ ದೀರ್ಘ ಸಂದೇಶಕ್ಕೆ ಅಷ್ಟೇ ಭಾವುಕವಾಗಿ ಪ್ರತಿಕ್ರಿಯೆ ನೀಡಿದ್ರು.
‘ಹಲೋ ಸ್ವೀಟ್ ಹಾರ್ಟ್, ನಾನುನಿನ್ನ ತಂದೆಯಲ್ಲ, ಆದ್ರೆ ಕಳೆದ ನಾಲ್ಕುವರ್ಷಗಳಿಂದ ನಿನ್ನಿಂದ ನಾನು ಸಂದೇಶಗಳನ್ನು ಸ್ವೀಕರಿಸುತ್ತಿದ್ದೇನೆ.ನನ್ನ ಹೆಸರು ಬ್ರಾಡ್, ಆಗಸ್ಟ್2014ರಲ್ಲಿ ಕಾರ್ ಅಪಘಾತದಲ್ಲಿ ನಾನುನನ್ನ ಮಗಳನ್ನು ಕಳೆದುಕೊಂಡಿದ್ದೇನೆ. ಹತಾಶಗೊಂಡಿದ್ದನನ್ನನ್ನು ನಿನ್ನ ಸಂದೇಶಗಳು ಜೀವಂತವಾಗಿಟ್ಟಿವೆ.ಈ ನಾಲ್ಕು ವರ್ಷಗಳಲ್ಲಿನಿನ್ನೆಲ್ಲ ಏಳುಬೀಳುಗಳನ್ನು ನಾನು ನೋಡಿದ್ದೇನೆ. ಅನೇಕಬಾರಿ ನಿನಗೆ ಪ್ರತಿಕ್ರಿಯೆ ನೀಡಬೇಕುಅಂದುಕೊಂಡಿದ್ದೆ. ಆದ್ರೆ ನಿನ್ನ ಹೃದಯಚೂರಾದೀತು ಅಂತ ಆ ಧೈರ್ಯಮಾಡಲಿಲ್ಲ. ನೀನು ಅಸಾಮಾನ್ಯ ಯುವತಿಮಗು.
ನನ್ನ ಮಗಳು ಕೂಡನಿನ್ನಂತೆಯೇ ಇರಬೇಕು ಅಂತ ಬಯಸಿದ್ದೆ.ನಿನ್ನ ಪ್ರತಿದಿನದ ಸಮಾಚಾರಗಳಿಗೆ ಧನ್ಯವಾದ. ನನ್ನ ಮಗಳನ್ನು ಕಿತ್ತುಕೊಂಡದೇವರದ್ದು ತಪ್ಪಲ್ಲ ಅನ್ನೋ ಮನವರಿಕೆಮಾಡಿಕೊಟ್ಟಿದ್ದೀಯಾ. ದೇವರು ನಿನ್ನ ರೂಪದಲ್ಲಿನನಗೆ ನನ್ನ ಪುಟ್ಟ ದೇವತೆಯನ್ನುವಾಪಸ್ ನೀಡಿದ್ದಾನೆ. ಎಲ್ಲವೂ ಸರಿಯಾಗಲಿದೆ. ನಿನ್ನಬಗ್ಗೆ ಹೆಮ್ಮೆಯಿದೆ ನನಗೆ, ನಾಳೆಯೂ ನಿನ್ನಸಂದೇಶಗಳಿಗಾಗಿ ಕಾಯುವೇ ಅಂತ ಮೆಸೇಜ್ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನಿಗೂ ರೋಮಾಂಚನ ಹುಟ್ಟಿಸುವ ಭಾರತದ ಈ 6 ದೆವ್ವದ ನಗರಗಳ ಬಗ್ಗೆ.
ನಮ್ಮ ಕರ್ನಾಟಕದವರಾದ ಮಾಲತಿ ಹೊಳ್ಳ ಇದಕ್ಕೊಂದು ಜ್ವಲಂತ ಉದಾಹರಣೆ. ನಮ್ಮ ನೆರೆಯ ಮಹಾರಾಷ್ಟ್ರದ ನಾಗ್ಪುರದಲ್ಲಿ ಜನಿಸಿದ ಜ್ಯೋತಿ ಆಮ್ಗೆ ಎಂಬ ಮಹಿಳೆಗೆ ಈಗ ಜ್ಯೋತಿ (ಜನನ: ಡಿಸೆಂಬರ್ 16, 1993). ಆದರೆ ಇವರನ್ನು ನೋಡಿದ ಯಾರೂ ಇವರಿಗೆ ಇಪ್ಪತ್ತೈದು ವರ್ಷ ವಯಸ್ಸು ಎಂದು ಹೇಳುವಿದಿಲ್ಲ ಬದಲಿಗೆ ಪುಟ್ಟ ಮಗುವಿರಬಹುದು ಎಂದೇ ತಿಳಿದುಕೊಳ್ಳುತ್ತಾರೆ.
ಹಣ್ಣು ತರಕಾರಿಗಳನ್ನು ತಿನ್ನುವುದು ಒಂದು ಅತ್ಯುತ್ತಮ ಅಭ್ಯಾಸವಾಗಿದೆ.ನಿರಂತರವಾಗಿ ತಿನ್ನುವ ಹವ್ಯಾಸ ಉಳ್ಳವರಾಗಿದ್ದರೆ ನೀವು ಸಿಪ್ಪೆಗಳನ್ನು ಎಸೆಯುತ್ತಿರಾ… ನಿಲ್ಲಿ ನಿಲ್ಲಿ ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ ನಿಮ್ಮ ಸೌಂದರ್ಯ ಕಾಂತಿ ಹೆಚ್ಚಿಸೋಕೆ ಈ ಸಿಪ್ಪೆಗಳು ಹೇಗೆ ಸಹಾಯ ಮಾಡುತ್ತವೆ ಎಂಬುದನ್ನು ತಿಳಿಯಿರಿ…..
ದಿನ ನಿತ್ಯದ ಜೀವನದಲ್ಲಿ ನಾವು ಬೆಳಿಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೂ ಅನೇಕ ವಸ್ತುಗಳನ್ನು ನಾವು ಬಳಸುತ್ತಿರುತ್ತೇವೆ.ನಾವು ಹೀಗೆ ಬಳಸುವ ವಸ್ತುಗಳು ನಮ್ಮ ಜೀವನದ ಮೇಲೆ ಒಳ್ಳೆಯ ಮತ್ತು ಕೆಟ್ಟ ಪ್ರಭಾವವನ್ನು ಬೀರುತ್ತವೆ. ನಾವು ಸಾಮಾನ್ಯವಾಗಿ ನಮ್ಮ ಸ್ನೇಹಿತರ,ಸಂಭಂದಿಕರ ವಸ್ತುಗಳನ್ನು ಅದಲು ಬದಲು ಮಾಡಿಕೊಂಡು ಉಪಯೋಗಿಸುತ್ತಿರುತ್ತೇವೆ.ಆದರೆ ಜ್ಯೋತಿಷ್ಯದಲ್ಲಿ ಹೇಳಿರುವ ಪ್ರಖಾರ ಬೇರೆಯವರ ಕೆಲವೊಂದು ವಸ್ತುಗಳನ್ನು ಉಪಯೋಗಿಸುವುದರಿಂದ ಅವರ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತೆ ಅಂತ ಹೇಳಲಾಗಿದೆ. ಹಾಗಾದ್ರೆ ಬೇರೆಯವರ ಯಾವ ವಸ್ತುಗಳನ್ನು ಉಪಯೋಗಿಸುವುದರಿಂದ ನಮ್ಮ ಮೇಲೆ ಕೆಟ್ಟ…
: ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಿಗೆ ಪರಿಹಾರ ಧನ ನೀಡಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ಅವರು 1 ಕೋಟಿ ರೂಪಾಯಿ ಚೆಕ್ ನೀಡುವ ಮೂಲಕ ಪರಿಹಾರವನ್ನು ನೀಡಿದ್ದಾರೆ. ಪ್ರವಾಹದಿಂದಾಗಿ ರಾಜ್ಯದಲ್ಲಿ ರೈತರ ಬೆಳೆ ನಾಶ, ಜಾನುವಾರುಗಳು, ಮನೆ, ಸಾವು-ನೋವು ಮತ್ತಿತರ ಸಮಸ್ಯೆಯನ್ನು ಎದುರಿಸುತ್ತಿರುವವರಿಗೆ ನೆರವಾಗಲಿ ಎಂಬ ಕಾರಣಕ್ಕೆ ಪರಿಹಾರವನ್ನು ಕೊಟ್ಟಿದ್ದಾರೆ. ಕಳೆದ ವಾರಗಳಿಂದ ಉತ್ತರ ಕರ್ನಾಟಕ ಭಾಗ, ಮಲೆನಾಡು ಪ್ರದೇಶ ಹಾಗೂ ಕರಾವಳಿ…
ನಟ ಚಿರಂಜೀವಿ ಸರ್ಜಾ ಅವರು ದು ಎಲ್ಲರನ್ನು ಅಗಲಿದ್ದಾರೆ. ಯಾವಾಗಲೂ ನಗುತ್ತಲೇ ಇರುತ್ತಿದ್ದ ನಟ ಚಿರಂಜೀವಿ ಅವರು ಇಂದು ಇನ್ನಿಲ್ಲ ಎಂಬ ಸುದ್ದಿ ಕೇಳಿ ಕರ್ನಾಟಕದ ಜನತೆಗೆ ನಿಜಕ್ಕೂ ಶಾಕ್ ಆಗಿದೆ. ಎರಡು ವರ್ಷಗಳ ಹಿಂದೆ ಚಿರಂಜೀವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿರಂಜೀವಿ ಅವರು ನಿಧನರಾಗಿದ್ದಾರೆ. 2018ರಂದು ಅವರು ನಟಿ ಮೇಘನಾ ರಾಜ್ ಜೊತೆ ಹಿಂದು ಮತ್ತು ಕ್ರಿಶ್ಚಿಯನ್ ಸಂಪ್ರದಾಯದ ಮೂಲಕ ಮದುವೆಯಾಗಿದ್ದರು. ಇವರಿಬ್ಬರು ಹಲವು ವರ್ಷಗಳಿಂದ ಸ್ನೇಹಿತರಾಗಿದ್ದರು. 10 ವರ್ಷಗಳಿಂದ ಇವರು ಪ್ರೀತಿ ಮಾಡುತ್ತಿದ್ದರು. ಇವೆರಡೂ ಕುಟುಂಬದವರು…