News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಮೃತ ಅಪ್ಪನಿಗೆ ಮಸೇಜ್ ಮಾಡುತ್ತಿದ್ದಳು, 4 ವರ್ಷದ ನಂತರ ಬಂತು ರಿಪ್ಲೈ..! ತಂದೆ ಮಗಳ ಕರುಣಾಜನಕ ಕಥೆ….

62

ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್​ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರ​​​ನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್​ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್​ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ ತನ್ನ ತಂದೆಯನ್ನು ಕಳೆದುಕೊಂಡಿದ್ದಳು.

ಅಂದಿನಿಂದಲೂ ಇಂದಿನವರೆಗೆ ಸತತವಾಗಿ ತನ್ನ ತಂದೆಯ ಹಳೆಯ ಮೊಬೈಲ್​ ನಂಬರ್​ಗೆ ಮೆಸೇಜ್ ಮಾಡುತ್ತಲೇ ಇದ್ದಳು. ತನ್ನ ದೈನಂದಿನ ಬದುಕಿನ ಬಗ್ಗೆ, ತಾನು ಪದವಿ ಗಳಿಸಿದ ಬಗ್ಗೆ, ಹಾಗೆಯೇ ಕ್ಯಾನ್ಸರ್​ ಗೆದ್ದು ಬದುಕು ನೂಕುತ್ತಿರುವ ಬಗ್ಗೆ ಮೆಸೇಜ್​ನಲ್ಲಿ ಹೇಳುತ್ತಾ ಅತ್ಯಂತ ಭಾವುಕ ಪತ್ರವೆನ್ನುವಂತೆ ತನ್ನ ತಂದೆಯೊಂದಿಗೆ ಏಕಮುಖಿ ಸಂವಹನ ನಡೆಸುತ್ತಿದ್ದಳು. ಆಕೆಯ ತಂದೆ ತೀರಿ ಹೋಗಿ ನಾಲ್ಕು ವರ್ಷ ಸಂದಿದ್ದವು. ಈ ಬಗ್ಗೆ ತೀವ್ರ ಭಾವುಕಳಾಗಿ ಒಂದು ಸಂದೇಶವನ್ನು ಕಳುಹಿಸಿದ್ದಳು.

‘ಹಲೋ ಡ್ಯಾಡ್, ಇದು ನಾನು, ನಾಳೆ ಮತ್ತೊಂದು ಭೀಕರ ದಿನದ ನೆನಪನ್ನು ನೆನಪಿಸಿಕೊಳ್ಳುವ ದಿನ, ನೀನು ನಮ್ಮನ್ನು ಅಗಲಿ ನಾಳೆಗೆ ನಾಲ್ಕು ವರ್ಷವಾಯ್ತು, ಈ ನಾಲ್ಕು ವರ್ಷ ಅನ್ನೋ ಪುಟ್ಟ ಸಮಯದಲ್ಲಿ ಬದುಕಿನಲ್ಲಿ ದೊಡ್ಡ ದೊಡ್ಡ ಘಟನೆಗಳು ನಡೆದಿವೆ. ಈಗಾಗಲೇ ನಾನು ಹಲವು ಬಾರಿ ಹೇಳಿದಂತೆ ಗ್ರಾಜುಯೇಷನ್ ಮುಗಿಸಿದ್ದೇನೆ, ಕ್ಯಾನ್ಸರ್ ಎಂಬ ಮಹಾಮಾರಿಯನ್ನು ಗೆದ್ದು ಬಂದಿದ್ದೇನೆ. ಪ್ರೀತಿಯಲ್ಲಿ ಬಿದ್ದು ಹೃದಯವನ್ನು ಘಾಸಿ ಮಾಡಿಕೊಂಡಿದ್ದೇನೆ. ಆದ್ರೆ ಎಲ್ಲದಕ್ಕೂ ಎದೆಗೊಟ್ಟು ನಿಂತು ಗಟ್ಟಿ ಮಹಿಳೆಯಾಗಿ ಪರಿವರ್ತಿತಗೊಂಡಿದ್ದೇನೆ. ಕ್ಷಮಿಸು ನಿನಗೆ ನನ್ನ ಅತ್ಯವಶ್ಯಕತೆಯಿದ್ದಾಗ ನಾನು ನಿನ್ನ ಜೊತೆ ಇರಲಿಲ್ಲ. ಒಂದು ದಿನ ನಾವು ಜೊತೆಗೆ ಇರಲಿದ್ದೇವೆ ನನ್ನ ಸರದಿ ಬರೋವರೆಗೂ ಈ ಬದುಕಿನ ಆಟವನ್ನು ನೋಡಬೇಕಿದೆ ’

ಒಂದು ದೀರ್ಘವಾದ ಪತ್ರವನ್ನ ಚಾಸ್ತಿತ್ಯ ಬರೆದು ಒಂದು ನಿಟ್ಟುಸಿರು ಬಿಟ್ಟು, ಸಣ್ಣದಾಗಿ ಬಿಕ್ಕಳಿಸಿದ್ದಳೇನೋ..ಕೆಲವೇ ಗಂಟೆಗಳಲ್ಲಿ ಅದೇ ನಂಬರ್​ನಿಂದ ಒಂದು ರಿಪ್ಲೈ ಬಂದದ್ದು ಚಾಸ್ತಿತ್ಯಳನ್ನ ಅಚ್ಚರಿಗೆ ನೂಕಿತ್ತು. ಈ ಕಡೆ ತಂದೆಯನ್ನು ಕಳೆದುಕೊಂಡ ಹತಭಾಗ್ಯಳಾದ ಚಾಸ್ತಿತ್ಯ​ ಮೆಸೇಜ್ ಮಾಡಿದ್ದರೇ. ಆ ಕಡೆಯಿಂದ ಮಗಳನ್ನು ಕಳೆದುಕೊಂಡ ತಂದೆಯ ಹೃದಯವೊಂದು ಚಾಸ್ತಿತ್ಯ​ಳ ದೀರ್ಘ ಸಂದೇಶಕ್ಕೆ ಅಷ್ಟೇ ಭಾವುಕವಾಗಿ ಪ್ರತಿಕ್ರಿಯೆ ನೀಡಿದ್ರು.

‘ಹಲೋ ಸ್ವೀಟ್ ಹಾರ್ಟ್​, ನಾನುನಿನ್ನ ತಂದೆಯಲ್ಲ, ಆದ್ರೆ ಕಳೆದ ನಾಲ್ಕುವರ್ಷಗಳಿಂದ ನಿನ್ನಿಂದ ನಾನು ಸಂದೇಶಗಳನ್ನು ಸ್ವೀಕರಿಸುತ್ತಿದ್ದೇನೆ.ನನ್ನ ಹೆಸರು ಬ್ರಾಡ್​, ಆಗಸ್ಟ್​2014ರಲ್ಲಿ ಕಾರ್​ ಅಪಘಾತದಲ್ಲಿ ನಾನುನನ್ನ ಮಗಳನ್ನು ಕಳೆದುಕೊಂಡಿದ್ದೇನೆ. ಹತಾಶಗೊಂಡಿದ್ದನನ್ನನ್ನು ನಿನ್ನ ಸಂದೇಶಗಳು ಜೀವಂತವಾಗಿಟ್ಟಿವೆ.ಈ ನಾಲ್ಕು ವರ್ಷಗಳಲ್ಲಿನಿನ್ನೆಲ್ಲ ಏಳುಬೀಳುಗಳನ್ನು ನಾನು ನೋಡಿದ್ದೇನೆ. ಅನೇಕಬಾರಿ ನಿನಗೆ ಪ್ರತಿಕ್ರಿಯೆ ನೀಡಬೇಕುಅಂದುಕೊಂಡಿದ್ದೆ. ಆದ್ರೆ ನಿನ್ನ ಹೃದಯಚೂರಾದೀತು ಅಂತ ಆ ಧೈರ್ಯಮಾಡಲಿಲ್ಲ. ನೀನು ಅಸಾಮಾನ್ಯ ಯುವತಿಮಗು.

ನನ್ನ ಮಗಳು ಕೂಡನಿನ್ನಂತೆಯೇ ಇರಬೇಕು ಅಂತ ಬಯಸಿದ್ದೆ.ನಿನ್ನ ಪ್ರತಿದಿನದ ಸಮಾಚಾರಗಳಿಗೆ ಧನ್ಯವಾದ. ನನ್ನ ಮಗಳನ್ನು ಕಿತ್ತುಕೊಂಡದೇವರದ್ದು ತಪ್ಪಲ್ಲ ಅನ್ನೋ ಮನವರಿಕೆಮಾಡಿಕೊಟ್ಟಿದ್ದೀಯಾ. ದೇವರು ನಿನ್ನ ರೂಪದಲ್ಲಿನನಗೆ ನನ್ನ ಪುಟ್ಟ ದೇವತೆಯನ್ನುವಾಪಸ್ ನೀಡಿದ್ದಾನೆ. ಎಲ್ಲವೂ ಸರಿಯಾಗಲಿದೆ. ನಿನ್ನಬಗ್ಗೆ ಹೆಮ್ಮೆಯಿದೆ ನನಗೆ, ನಾಳೆಯೂ ನಿನ್ನಸಂದೇಶಗಳಿಗಾಗಿ ಕಾಯುವೇ ಅಂತ ಮೆಸೇಜ್ಮಾಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಿರ್ದೇಶಕ ಮಿಲನ ಪ್ರಕಾಶ್‌ ಮತ್ತೊಮ್ಮೆ ದರ್ಶನ್‌ ಜತೆ ಸಿನಿಮಾ ಮಾಡುವ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ‘ತಾರಕ್‌’ ಚಿತ್ರದ ನಂತರ ಈ ಜೋಡಿ ಜತೆಯಾಗುತ್ತಿದೆ…!

    ಈಗಾಗಲೇ ಮಿಲನ ಪ್ರಕಾಶ್‌ ಅವರು ಕತೆ ಓಕೆ ಮಾಡಿಕೊಂಡಿದ್ದು, ಆ ಬಗ್ಗ ದರ್ಶನ್‌ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ಕೂಡ ಮಾಡಿದ್ದಾರೆ. ಸದ್ಯಕ್ಕೆ ದರ್ಶನ್‌ ಅವರು ‘ಒಡೆಯ’ ಚಿತ್ರದ ಬಾಕಿ ದೃಶ್ಯಗಳು ಹಾಗೂ ‘ರಾಬರ್ಟ್‌’ ಚಿತ್ರದ ಶೂಟಿಂಗ್‌ನಲ್ಲಿದ್ದಾರೆ. ಕುರುಕ್ಷೇತ್ರ ಅಬ್ಬರವೇ ಕಮ್ಮಿಯಾಗಿಲ್ಲ ಆಗಲೇ  ‘ಒಡೆಯಾ’ ರಿಲೀಸ್ ಡೇಟ್ ಫಿಕ್ಸ್,ಇದರ ನಡುವೆ ‘ಗಂಡುಗಲಿ ಮದಕರಿನಾಯಕ’ ಸಿನಿಮಾ. ಈ ಮೂರೂ ಚಿತ್ರಗಳ ನಂತರ ಪ್ರಕಾಶ್‌ ಅವರ ಸಿನಿಮಾ ಸೆಟ್ಟೇರುತ್ತಾ ಅಥವಾ ಇವುಗಳ ನಡುವೆಯೇ ಇವರ ಎರಡನೇ ಸಿನಿಮಾ ಶುರುವಾಗುತ್ತದ ಎಂಬುದು…

  • ಸರ್ಕಾರಿ ಯೋಜನೆಗಳು

    ಅಂತರ್ಜಾತಿ ಮದುವೆ ಆಗಿ, ಕೇಂದ್ರ ಸರ್ಕಾರದಿಂದ ಲಕ್ಷ ಲಕ್ಷ ಹಣ ಪಡೆಯಿರಿ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಜಾತಿ ಆಧಾರಿತ ತಾರತಮ್ಯ ತೊಡೆದುಹಾಕುವ ಪ್ರಯತ್ನವಾಗಿ ಕೇಂದ್ರ ಸರಕಾರವು, ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ದಲಿತ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ 2.5 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

  • ಆರೋಗ್ಯ

    ಕ್ಯಾರೆಟ್ ನಲ್ಲಿದೆ ಅದ್ಬುತ ಅರೋಗ್ಯಕರ ಅಂಶಗಳು.

    ಕ್ಯಾರೆಟ್ಟುಗಳಲ್ಲಿ ಕ್ಯಾಲೋರಿ ಪ್ರೋಟೀನ್ ಹಾಗೂ ಕೊಬ್ಬಿನ ಅಂಶಗಳು ತುಂಬ ಕಡಿಮೆ ಇದ್ದು, ಸುಮಾರು 86-95 ಶೇಖಡಾದಷ್ಟು ನೀರಿನ ಅಂಶವನ್ನು ಒಳಗೊಂಡಿದೆ. ಒಂದು ಮಧ್ಯಮ ಗಾತ್ರದ ಕ್ಯಾರೆಟ್ ಸೇವಿಸುವುದರಿಂದ ಕೇವಲ ಇಪ್ಪತ್ತೈದು ಕ್ಯಾಲೋರಿಗಳು ಹಾಗೂ ಕೇವಲ ನಾಲ್ಕು ಗ್ರಾಂ ನಷ್ಟು ಜೀರ್ಣವಾಗುವ ಕಾರ್ಬೋಹೈಡ್ರೇಟುಗಳು ಲಭ್ಯವಾಗುತ್ತವೆ. ವಿವಿಧ ಪ್ರೋಟಿನ್, ವಿಟಮಿನ್ ಗಳನ್ನು ಹೇರಳವಾಗಿ ಹೊಂದಿರುವ ಕ್ಯಾರೆಟ್ ರೋಗ ನಿರೋಧಕ ಶಕ್ತಿಯನ್ನು ಕೂಡ ಹೊಂದಿದೆ. ಇದು ತ್ವಚೆಗೆ ಸಹಕಾರಿಯಾಗಿದ್ದು, ಹಲವಾರು ರೋಗಗಳನ್ನು ದೂರವಿಡುತ್ತದೆ.ರಕ್ತದ ಶುದ್ಧತೆಗೆ ಹಾಗೂ ಹರಿಯುವಿಕೆಗೆ ನೆರವಾಗುವ ಅಲ್ಕಾಲೈನ್ ಅಂಶಗಳನ್ನು…

  • ಸುದ್ದಿ

    ಕಳ್ಳನಿಂದ ಬಾಯಿ ಬಿಡಿಸಲು ಈ ಪೊಲೀಸರು ಮಾಡಿದ್ದೇನು ಗೊತ್ತಾ..?ಮೈ ಜುಮ್ಮೆನುಸುವ ಈ ವಿಡಿಯೋ ನೋಡಿ…

    ಪೊಲೀಸರು ಕಳ್ಳರ ಬಾಯಿ ಬಿಡಿಸಲು ಲಾಠಿಯಲ್ಲಿ ಹೊಡೆಯುತ್ತಾರೆ, ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ (ಅಮಾನವೀಯ ಚಿತ್ರಹಿಂಸೆ) ಅನ್ನು ಪ್ರಯೋಗಿಸುತ್ತಾರೆ. ಅಥವಾ ಬೇರೆ ಬೇರೆ ರೀತಿಯಲ್ಲಿ ಪ್ರಯತ್ನ ಮಾಡುತ್ತಾರೆ.ಆದರೆ ಇಂಡೋನೇಷ್ಯಾ ಪೊಲೀಸರು ದೇಹದ ಮೇಲೆ ಹಾವನ್ನು ಬಿಟ್ಟು ಬಾಯಿ ಬಿಡಿಸಿದ್ದಾರೆ. ಇಂಡೋನೇಷ್ಯಾದ ಪಪುವಾ ಪ್ರಾಂತ್ಯದಲ್ಲಿ ಮೊಬೈಲ್ ಕದ್ದ ಆರೋಪದ ಮೇಲೆ ಒಬ್ಬನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಾರೆ. ಆಗ ಆತ ಯಾವುದೇ ಮಾಹಿತಿಯನ್ನು ನೀಡಿರಲಿಲ್ಲ. ಕೊನೆಗೆ ಪೊಲೀಸರು ಆತನ ಕೈಗಳನ್ನು ಕಟ್ಟಿ ಹಾಕಿ ಕುತ್ತಿಗೆಯ ಸುತ್ತ ಹಾವನ್ನು ಬಿಟ್ಟಿದ್ದಾರೆ….

  • Health

    ಸ್ಮಾರ್ಟ್‌ಫೋನ್‌ನಿಂದ ನಿಮ್ಮ ಸುಖ ನಿದ್ದೆಗೆ ತೊಂದರೆಯಾಗದಂತೆ ತಡೆಯುವುದು ಹೇಗೆ? ಇದನ್ನೊಮ್ಮೆ ಓದಿ..

    ಹಗಲಿಡಿ ಸ್ಮಾರ್ಟ್‌ ಫೋನ್‌ ಬಳಸಿ ಮತ್ತು ರಾತ್ರಿ ಹೊತ್ತು ಮಲಗುವ ಮುಂಚೆಯೂ ಸ್ಮಾರ್ಟ್‌ ಫೋನ್‌ ಬಳಸುವುದರಿಂದ ನಿಮ್ಮ ಸುಖ ನಿದ್ದೆಗೆ ಭಂಗ ಖಂಡಿತ ಬರುತ್ತದೆ. ನಮ್ಮ ಜೀವನ ಶೈಲಿಯೇ ಹಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೆ ಅತ್ಯುತ್ತಮವಾದ ನಿದ್ದೆ ಬೇಕು. ಆದರೆ,ಹೆಚ್ಚುತ್ತಿರುವ ಸ್ಮಾರ್ಟ್‌ಫೋನ್‌ ಬಳಕೆಯಿಂದ ನಮ್ಮ ನಿದ್ರೆಯ ಪ್ಯಾಟರ್ನ್‌ ಕೂಡ ಬದಲಾಗುತ್ತದೆ. ಉತ್ತಮ ಆರೋಗ್ಯಕ್ಕಾಗಿ ಕನಿಷ್ಠ 9 ಗಂಟೆಯಾದರೂ ನಿದ್ರೆ ಮಾಡಬೇಕು.  ಕೆಲಸ ಮಾಡುವಾಗ ನಾವು ಬಹುತೇಕ ಸಮಯವನ್ನು ಕಂಪ್ಯೂಟರ್‌ ಸ್ಕ್ರೀನ್‌ ನೋಡಿಕೊಂಡೇ ಇರುತ್ತೇವೆ ಮತ್ತು ಕೆಲಸ ಇಲ್ಲದಿದ್ದಾಗ…

  • ಜ್ಯೋತಿಷ್ಯ

    ದುರ್ಗಾ ಮಾತೆಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…