ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ ತನ್ನ ತಂದೆಯನ್ನು ಕಳೆದುಕೊಂಡಿದ್ದಳು.

ಅಂದಿನಿಂದಲೂ ಇಂದಿನವರೆಗೆ ಸತತವಾಗಿ ತನ್ನ ತಂದೆಯ ಹಳೆಯ ಮೊಬೈಲ್ ನಂಬರ್ಗೆ ಮೆಸೇಜ್ ಮಾಡುತ್ತಲೇ ಇದ್ದಳು. ತನ್ನ ದೈನಂದಿನ ಬದುಕಿನ ಬಗ್ಗೆ, ತಾನು ಪದವಿ ಗಳಿಸಿದ ಬಗ್ಗೆ, ಹಾಗೆಯೇ ಕ್ಯಾನ್ಸರ್ ಗೆದ್ದು ಬದುಕು ನೂಕುತ್ತಿರುವ ಬಗ್ಗೆ ಮೆಸೇಜ್ನಲ್ಲಿ ಹೇಳುತ್ತಾ ಅತ್ಯಂತ ಭಾವುಕ ಪತ್ರವೆನ್ನುವಂತೆ ತನ್ನ ತಂದೆಯೊಂದಿಗೆ ಏಕಮುಖಿ ಸಂವಹನ ನಡೆಸುತ್ತಿದ್ದಳು. ಆಕೆಯ ತಂದೆ ತೀರಿ ಹೋಗಿ ನಾಲ್ಕು ವರ್ಷ ಸಂದಿದ್ದವು. ಈ ಬಗ್ಗೆ ತೀವ್ರ ಭಾವುಕಳಾಗಿ ಒಂದು ಸಂದೇಶವನ್ನು ಕಳುಹಿಸಿದ್ದಳು.

‘ಹಲೋ ಡ್ಯಾಡ್, ಇದು ನಾನು, ನಾಳೆ ಮತ್ತೊಂದು ಭೀಕರ ದಿನದ ನೆನಪನ್ನು ನೆನಪಿಸಿಕೊಳ್ಳುವ ದಿನ, ನೀನು ನಮ್ಮನ್ನು ಅಗಲಿ ನಾಳೆಗೆ ನಾಲ್ಕು ವರ್ಷವಾಯ್ತು, ಈ ನಾಲ್ಕು ವರ್ಷ ಅನ್ನೋ ಪುಟ್ಟ ಸಮಯದಲ್ಲಿ ಬದುಕಿನಲ್ಲಿ ದೊಡ್ಡ ದೊಡ್ಡ ಘಟನೆಗಳು ನಡೆದಿವೆ. ಈಗಾಗಲೇ ನಾನು ಹಲವು ಬಾರಿ ಹೇಳಿದಂತೆ ಗ್ರಾಜುಯೇಷನ್ ಮುಗಿಸಿದ್ದೇನೆ, ಕ್ಯಾನ್ಸರ್ ಎಂಬ ಮಹಾಮಾರಿಯನ್ನು ಗೆದ್ದು ಬಂದಿದ್ದೇನೆ. ಪ್ರೀತಿಯಲ್ಲಿ ಬಿದ್ದು ಹೃದಯವನ್ನು ಘಾಸಿ ಮಾಡಿಕೊಂಡಿದ್ದೇನೆ. ಆದ್ರೆ ಎಲ್ಲದಕ್ಕೂ ಎದೆಗೊಟ್ಟು ನಿಂತು ಗಟ್ಟಿ ಮಹಿಳೆಯಾಗಿ ಪರಿವರ್ತಿತಗೊಂಡಿದ್ದೇನೆ. ಕ್ಷಮಿಸು ನಿನಗೆ ನನ್ನ ಅತ್ಯವಶ್ಯಕತೆಯಿದ್ದಾಗ ನಾನು ನಿನ್ನ ಜೊತೆ ಇರಲಿಲ್ಲ. ಒಂದು ದಿನ ನಾವು ಜೊತೆಗೆ ಇರಲಿದ್ದೇವೆ ನನ್ನ ಸರದಿ ಬರೋವರೆಗೂ ಈ ಬದುಕಿನ ಆಟವನ್ನು ನೋಡಬೇಕಿದೆ ’

ಒಂದು ದೀರ್ಘವಾದ ಪತ್ರವನ್ನ ಚಾಸ್ತಿತ್ಯ ಬರೆದು ಒಂದು ನಿಟ್ಟುಸಿರು ಬಿಟ್ಟು, ಸಣ್ಣದಾಗಿ ಬಿಕ್ಕಳಿಸಿದ್ದಳೇನೋ..ಕೆಲವೇ ಗಂಟೆಗಳಲ್ಲಿ ಅದೇ ನಂಬರ್ನಿಂದ ಒಂದು ರಿಪ್ಲೈ ಬಂದದ್ದು ಚಾಸ್ತಿತ್ಯಳನ್ನ ಅಚ್ಚರಿಗೆ ನೂಕಿತ್ತು. ಈ ಕಡೆ ತಂದೆಯನ್ನು ಕಳೆದುಕೊಂಡ ಹತಭಾಗ್ಯಳಾದ ಚಾಸ್ತಿತ್ಯ ಮೆಸೇಜ್ ಮಾಡಿದ್ದರೇ. ಆ ಕಡೆಯಿಂದ ಮಗಳನ್ನು ಕಳೆದುಕೊಂಡ ತಂದೆಯ ಹೃದಯವೊಂದು ಚಾಸ್ತಿತ್ಯಳ ದೀರ್ಘ ಸಂದೇಶಕ್ಕೆ ಅಷ್ಟೇ ಭಾವುಕವಾಗಿ ಪ್ರತಿಕ್ರಿಯೆ ನೀಡಿದ್ರು.

‘ಹಲೋ ಸ್ವೀಟ್ ಹಾರ್ಟ್, ನಾನುನಿನ್ನ ತಂದೆಯಲ್ಲ, ಆದ್ರೆ ಕಳೆದ ನಾಲ್ಕುವರ್ಷಗಳಿಂದ ನಿನ್ನಿಂದ ನಾನು ಸಂದೇಶಗಳನ್ನು ಸ್ವೀಕರಿಸುತ್ತಿದ್ದೇನೆ.ನನ್ನ ಹೆಸರು ಬ್ರಾಡ್, ಆಗಸ್ಟ್2014ರಲ್ಲಿ ಕಾರ್ ಅಪಘಾತದಲ್ಲಿ ನಾನುನನ್ನ ಮಗಳನ್ನು ಕಳೆದುಕೊಂಡಿದ್ದೇನೆ. ಹತಾಶಗೊಂಡಿದ್ದನನ್ನನ್ನು ನಿನ್ನ ಸಂದೇಶಗಳು ಜೀವಂತವಾಗಿಟ್ಟಿವೆ.ಈ ನಾಲ್ಕು ವರ್ಷಗಳಲ್ಲಿನಿನ್ನೆಲ್ಲ ಏಳುಬೀಳುಗಳನ್ನು ನಾನು ನೋಡಿದ್ದೇನೆ. ಅನೇಕಬಾರಿ ನಿನಗೆ ಪ್ರತಿಕ್ರಿಯೆ ನೀಡಬೇಕುಅಂದುಕೊಂಡಿದ್ದೆ. ಆದ್ರೆ ನಿನ್ನ ಹೃದಯಚೂರಾದೀತು ಅಂತ ಆ ಧೈರ್ಯಮಾಡಲಿಲ್ಲ. ನೀನು ಅಸಾಮಾನ್ಯ ಯುವತಿಮಗು.

ನನ್ನ ಮಗಳು ಕೂಡನಿನ್ನಂತೆಯೇ ಇರಬೇಕು ಅಂತ ಬಯಸಿದ್ದೆ.ನಿನ್ನ ಪ್ರತಿದಿನದ ಸಮಾಚಾರಗಳಿಗೆ ಧನ್ಯವಾದ. ನನ್ನ ಮಗಳನ್ನು ಕಿತ್ತುಕೊಂಡದೇವರದ್ದು ತಪ್ಪಲ್ಲ ಅನ್ನೋ ಮನವರಿಕೆಮಾಡಿಕೊಟ್ಟಿದ್ದೀಯಾ. ದೇವರು ನಿನ್ನ ರೂಪದಲ್ಲಿನನಗೆ ನನ್ನ ಪುಟ್ಟ ದೇವತೆಯನ್ನುವಾಪಸ್ ನೀಡಿದ್ದಾನೆ. ಎಲ್ಲವೂ ಸರಿಯಾಗಲಿದೆ. ನಿನ್ನಬಗ್ಗೆ ಹೆಮ್ಮೆಯಿದೆ ನನಗೆ, ನಾಳೆಯೂ ನಿನ್ನಸಂದೇಶಗಳಿಗಾಗಿ ಕಾಯುವೇ ಅಂತ ಮೆಸೇಜ್ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾಜಿಕ ಜಾಲತಾಣಗಳಲ್ಲಿ ಹೊಸತೊಂದು ಚಾಲೆಂಜ್ ಬಂದಿದೆ; ಅದೇ ಬಾಟಲ್ ಕ್ಯಾಪ್ ಚ್ಯಾಲೆಂಜ್. ಇದರಲ್ಲಿ ಚಾಲೆಂಜ್ ತಗೊಂಡವರು ರೌಂಡ್ ಹೌಸ್ ಕಿಕ್ ಹೊಡೆದು ಬಾಟಲ್ಗೆ ಹಾಕಿದ ಮುಚ್ಚಳವನ್ನು ತೆಗೆಯಬೇಕು. ಜೇಸನ್ ಸ್ಟ್ಯಾಥಮ್, ಅಕ್ಷಯ್ ಕುಮಾರ್, ಟೈಗರ್ ಶ್ರಾಫ್ರಂತಹ ನಟರು ಹಾಗೂ ಹಲವು ಫೈಟರ್ಗಳು ಇದರಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಇಲ್ಲೊಬ್ಬ ಗಾಯಕಿ ಕೇವಲ ತನ್ನ ಧ್ವನಿಯಿಂದಲೇ ಬಾಟಲ್ ಕ್ಯಾಪ್ ಎಗರಿಸಿರುವಂತೆ ಕಾಣುತ್ತದೆ. ಮರಿಯಾ ಕ್ಯಾರಿ ಎನ್ನುವ ಅಮೆರಿಕಾದ ಗಾಯಕಿ ಟ್ವೀಟರ್ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಅವರು ಹೈ ಪಿಚ್ನಲ್ಲಿ ರಾಗ ಎಳೆಯುತ್ತಿದ್ದಂತೆ…
ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ.. ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ.ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ನಿಮ್ಮ ಹತ್ತಿರದ ಆಧಾರ್ ದಾಖಲಾತಿ ಕೇಂದ್ರಕ್ಕೆ ಭೇಟಿಕೊಡಿ. ಅಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಆಧಾರ್ ಅಪ್ ಡೇಟ್ ಪಾರಂ ಅಥವಾ ತಿದ್ದುಪಡಿ…
ನವದೆಹಲಿ, ನವೆಂಬರ್ 18 : ಮೂಡೀಸ್ ರೇಟಿಂಗ್ ಕೇಂದ್ರಕ್ಕೆ ಹೊಸ ಚೈತನ್ಯ ತುಂಬಿದಂತಿದೆ. ನೋಟ್ ಬ್ಯಾನ್, ಜಿ.ಎಸ್.ಟಿ ಅನ್ನು ವಿಷಯವಾಗಿರಿಸಿಕೊಂಡು ಕೇಂದ್ರವನ್ನು ಟೀಕೆ ಮಾಡುತ್ತಿದ್ದವರ ಬಾಯಿ ಮುಚ್ಚುವಂತೆ ಮಾಡಿದೆ ಮೂಡೀಸ್ ರೇಟಿಂಗ್.
ಫಿಟ್ನೆಸ್ ಕಾಯ್ದುಕೊಳ್ಳಲು ಜನರು ಇನ್ನಿಲ್ಲದ ಕಸರತ್ತು ಮಾಡ್ತಾರೆ. ಉತ್ತಮ ಆಹಾರದಿಂದ ಹಿಡಿದು ವ್ಯಾಯಾಮದವರೆಗೆ ಎಲ್ಲವೂ ಫಿಟ್ನೆಸ್ ಗೆ ಸಹಕಾರಿ. ಬೆಳಿಗ್ಗಿನ ವಾಕ್ ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಜಿಮ್, ಯೋಗಕ್ಕಿಂತ ವಾಕಿಂಗ್ ಬೆಸ್ಟ್ ಎನ್ನುವವರಿದ್ದಾರೆ. ಆದ್ರೆ ಈ ವಾಕ್ ವೇಳೆ ನಾವು ಮಾಡುವ ಸಣ್ಣಪುಟ್ಟ ತಪ್ಪುಗಳು ನಮ್ಮ ಆರೋಗ್ಯವನ್ನು ಸುಧಾರಿಸುವ ಬದಲು ಹಾಳು ಮಾಡುತ್ತವೆ. ವಾಕಿಂಗ್ ಮಾಡಲು ವಾಹನ ಓಡಾಡದ ಹಾಗೂ ಹಸಿರು ಪ್ರದೇಶವನ್ನು ಆಯ್ಕೆ ಮಾಡಿಕೊಳ್ಳಬೇಕು. ಅನೇಕರು ತಡವಾಗಿ ಏಳ್ತಾರೆ. ಪಾರ್ಕ್ ಗೆ ಹೋಗಲು ಸಮಯವಿರುವುದಿಲ್ಲ….
ನವೆಂಬರ್ 1ರವರೆಗೆ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ಪಟಾಕಿಗಳ ಮಾರಾಟಕ್ಕೆ ಸುಪ್ರೀಂ ಕೋರ್ಟ್ ನಿಷೇಧ ಹೇರಿದೆ. ರಾಜಧಾನಿ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ದೀಪಾವಳಿ ಆಚರಣೆ ವೇಳೆ ಸಿಡಿಮದ್ದು ಮಾರಾಟವನ್ನು ಸುಪ್ರೀಂಕೋರ್ಟ್ ನಿಷೇಧಿಸಿರುವುದನ್ನು ಯೋಗಗುರು ಬಾಬಾ ರಾಮ್ ದೇವ್ ಮತ್ತು ಶಿವಸೇನೆ ತೀವ್ರವಾಗಿ ಖಂಡಿಸಿದ್ದಾರೆ.
ಆಲೂಗಡ್ಡೆ ಮತ್ತು ಈರುಳ್ಳಿಯನ್ನು ನೀವು ಏತಕ್ಕಾಗಿ ಬಳಸುತ್ತೀರಿ..? ಇಂಥದ್ದೊಂದು ಪ್ರಶ್ನೆ ಕೇಳಿದರೆ ಯಾರೇ ಆದರೂ ಅಡುಗೆ ತಯಾರಿಸಲು ಬಳಸುತ್ತೇವೆ ಎಂದು ಹೇಳುತ್ತಾರೆ. ಆದರೆ, ಆಲೂಗಡ್ಡೆ ಮತ್ತು ಈರುಳ್ಳಿಯಿಂದ ವಿದ್ಯುತ್ ಉತ್ಪಾದನೆಯಾಗುತ್ತದೆ.