ಸುದ್ದಿ

ಮೃತ ಅಪ್ಪನಿಗೆ ಮಸೇಜ್ ಮಾಡುತ್ತಿದ್ದಳು, 4 ವರ್ಷದ ನಂತರ ಬಂತು ರಿಪ್ಲೈ..! ತಂದೆ ಮಗಳ ಕರುಣಾಜನಕ ಕಥೆ….

62

ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್​ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರ​​​ನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್​ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್​ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ ತನ್ನ ತಂದೆಯನ್ನು ಕಳೆದುಕೊಂಡಿದ್ದಳು.

ಅಂದಿನಿಂದಲೂ ಇಂದಿನವರೆಗೆ ಸತತವಾಗಿ ತನ್ನ ತಂದೆಯ ಹಳೆಯ ಮೊಬೈಲ್​ ನಂಬರ್​ಗೆ ಮೆಸೇಜ್ ಮಾಡುತ್ತಲೇ ಇದ್ದಳು. ತನ್ನ ದೈನಂದಿನ ಬದುಕಿನ ಬಗ್ಗೆ, ತಾನು ಪದವಿ ಗಳಿಸಿದ ಬಗ್ಗೆ, ಹಾಗೆಯೇ ಕ್ಯಾನ್ಸರ್​ ಗೆದ್ದು ಬದುಕು ನೂಕುತ್ತಿರುವ ಬಗ್ಗೆ ಮೆಸೇಜ್​ನಲ್ಲಿ ಹೇಳುತ್ತಾ ಅತ್ಯಂತ ಭಾವುಕ ಪತ್ರವೆನ್ನುವಂತೆ ತನ್ನ ತಂದೆಯೊಂದಿಗೆ ಏಕಮುಖಿ ಸಂವಹನ ನಡೆಸುತ್ತಿದ್ದಳು. ಆಕೆಯ ತಂದೆ ತೀರಿ ಹೋಗಿ ನಾಲ್ಕು ವರ್ಷ ಸಂದಿದ್ದವು. ಈ ಬಗ್ಗೆ ತೀವ್ರ ಭಾವುಕಳಾಗಿ ಒಂದು ಸಂದೇಶವನ್ನು ಕಳುಹಿಸಿದ್ದಳು.

‘ಹಲೋ ಡ್ಯಾಡ್, ಇದು ನಾನು, ನಾಳೆ ಮತ್ತೊಂದು ಭೀಕರ ದಿನದ ನೆನಪನ್ನು ನೆನಪಿಸಿಕೊಳ್ಳುವ ದಿನ, ನೀನು ನಮ್ಮನ್ನು ಅಗಲಿ ನಾಳೆಗೆ ನಾಲ್ಕು ವರ್ಷವಾಯ್ತು, ಈ ನಾಲ್ಕು ವರ್ಷ ಅನ್ನೋ ಪುಟ್ಟ ಸಮಯದಲ್ಲಿ ಬದುಕಿನಲ್ಲಿ ದೊಡ್ಡ ದೊಡ್ಡ ಘಟನೆಗಳು ನಡೆದಿವೆ. ಈಗಾಗಲೇ ನಾನು ಹಲವು ಬಾರಿ ಹೇಳಿದಂತೆ ಗ್ರಾಜುಯೇಷನ್ ಮುಗಿಸಿದ್ದೇನೆ, ಕ್ಯಾನ್ಸರ್ ಎಂಬ ಮಹಾಮಾರಿಯನ್ನು ಗೆದ್ದು ಬಂದಿದ್ದೇನೆ. ಪ್ರೀತಿಯಲ್ಲಿ ಬಿದ್ದು ಹೃದಯವನ್ನು ಘಾಸಿ ಮಾಡಿಕೊಂಡಿದ್ದೇನೆ. ಆದ್ರೆ ಎಲ್ಲದಕ್ಕೂ ಎದೆಗೊಟ್ಟು ನಿಂತು ಗಟ್ಟಿ ಮಹಿಳೆಯಾಗಿ ಪರಿವರ್ತಿತಗೊಂಡಿದ್ದೇನೆ. ಕ್ಷಮಿಸು ನಿನಗೆ ನನ್ನ ಅತ್ಯವಶ್ಯಕತೆಯಿದ್ದಾಗ ನಾನು ನಿನ್ನ ಜೊತೆ ಇರಲಿಲ್ಲ. ಒಂದು ದಿನ ನಾವು ಜೊತೆಗೆ ಇರಲಿದ್ದೇವೆ ನನ್ನ ಸರದಿ ಬರೋವರೆಗೂ ಈ ಬದುಕಿನ ಆಟವನ್ನು ನೋಡಬೇಕಿದೆ ’

ಒಂದು ದೀರ್ಘವಾದ ಪತ್ರವನ್ನ ಚಾಸ್ತಿತ್ಯ ಬರೆದು ಒಂದು ನಿಟ್ಟುಸಿರು ಬಿಟ್ಟು, ಸಣ್ಣದಾಗಿ ಬಿಕ್ಕಳಿಸಿದ್ದಳೇನೋ..ಕೆಲವೇ ಗಂಟೆಗಳಲ್ಲಿ ಅದೇ ನಂಬರ್​ನಿಂದ ಒಂದು ರಿಪ್ಲೈ ಬಂದದ್ದು ಚಾಸ್ತಿತ್ಯಳನ್ನ ಅಚ್ಚರಿಗೆ ನೂಕಿತ್ತು. ಈ ಕಡೆ ತಂದೆಯನ್ನು ಕಳೆದುಕೊಂಡ ಹತಭಾಗ್ಯಳಾದ ಚಾಸ್ತಿತ್ಯ​ ಮೆಸೇಜ್ ಮಾಡಿದ್ದರೇ. ಆ ಕಡೆಯಿಂದ ಮಗಳನ್ನು ಕಳೆದುಕೊಂಡ ತಂದೆಯ ಹೃದಯವೊಂದು ಚಾಸ್ತಿತ್ಯ​ಳ ದೀರ್ಘ ಸಂದೇಶಕ್ಕೆ ಅಷ್ಟೇ ಭಾವುಕವಾಗಿ ಪ್ರತಿಕ್ರಿಯೆ ನೀಡಿದ್ರು.

‘ಹಲೋ ಸ್ವೀಟ್ ಹಾರ್ಟ್​, ನಾನುನಿನ್ನ ತಂದೆಯಲ್ಲ, ಆದ್ರೆ ಕಳೆದ ನಾಲ್ಕುವರ್ಷಗಳಿಂದ ನಿನ್ನಿಂದ ನಾನು ಸಂದೇಶಗಳನ್ನು ಸ್ವೀಕರಿಸುತ್ತಿದ್ದೇನೆ.ನನ್ನ ಹೆಸರು ಬ್ರಾಡ್​, ಆಗಸ್ಟ್​2014ರಲ್ಲಿ ಕಾರ್​ ಅಪಘಾತದಲ್ಲಿ ನಾನುನನ್ನ ಮಗಳನ್ನು ಕಳೆದುಕೊಂಡಿದ್ದೇನೆ. ಹತಾಶಗೊಂಡಿದ್ದನನ್ನನ್ನು ನಿನ್ನ ಸಂದೇಶಗಳು ಜೀವಂತವಾಗಿಟ್ಟಿವೆ.ಈ ನಾಲ್ಕು ವರ್ಷಗಳಲ್ಲಿನಿನ್ನೆಲ್ಲ ಏಳುಬೀಳುಗಳನ್ನು ನಾನು ನೋಡಿದ್ದೇನೆ. ಅನೇಕಬಾರಿ ನಿನಗೆ ಪ್ರತಿಕ್ರಿಯೆ ನೀಡಬೇಕುಅಂದುಕೊಂಡಿದ್ದೆ. ಆದ್ರೆ ನಿನ್ನ ಹೃದಯಚೂರಾದೀತು ಅಂತ ಆ ಧೈರ್ಯಮಾಡಲಿಲ್ಲ. ನೀನು ಅಸಾಮಾನ್ಯ ಯುವತಿಮಗು.

ನನ್ನ ಮಗಳು ಕೂಡನಿನ್ನಂತೆಯೇ ಇರಬೇಕು ಅಂತ ಬಯಸಿದ್ದೆ.ನಿನ್ನ ಪ್ರತಿದಿನದ ಸಮಾಚಾರಗಳಿಗೆ ಧನ್ಯವಾದ. ನನ್ನ ಮಗಳನ್ನು ಕಿತ್ತುಕೊಂಡದೇವರದ್ದು ತಪ್ಪಲ್ಲ ಅನ್ನೋ ಮನವರಿಕೆಮಾಡಿಕೊಟ್ಟಿದ್ದೀಯಾ. ದೇವರು ನಿನ್ನ ರೂಪದಲ್ಲಿನನಗೆ ನನ್ನ ಪುಟ್ಟ ದೇವತೆಯನ್ನುವಾಪಸ್ ನೀಡಿದ್ದಾನೆ. ಎಲ್ಲವೂ ಸರಿಯಾಗಲಿದೆ. ನಿನ್ನಬಗ್ಗೆ ಹೆಮ್ಮೆಯಿದೆ ನನಗೆ, ನಾಳೆಯೂ ನಿನ್ನಸಂದೇಶಗಳಿಗಾಗಿ ಕಾಯುವೇ ಅಂತ ಮೆಸೇಜ್ಮಾಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಜಾನ್ಸನ್ ಬೇಬಿ ಪೌಡರ್ ನಿಂದಾಗಿ ಮಹಿಳೆಗೆ ಸಿಕ್ತು 286 ಕೋಟಿ ರೂ. ಹೇಗೆ ಗೊತ್ತಾ,.!!

    ಲಾಸ್ ಏಂಜಲೀಸ್ ನ ನ್ಯಾಯಾಲಯವೊಂದರಲ್ಲಿ 71 ವರ್ಷದ ಮಹಿಳೆ, ನ್ಯಾನ್ಸಿ ಕ್ಯಾಬಿಬಿ ಎಂಬಾಕೆಗೆ ಬಹುದೊಡ್ಡ ಜಯ ಲಭಿಸಿದೆ. ಕಳೆದೆರಡು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದನ್ಯಾನ್ಸಿ ವಿರುದ್ಧ ಪ್ರಸಿದ್ಧ ಫಾರ್ಮಾಸ್ಯುಟಿಕಲ್ ಹಾಗೂ ಗ್ರಾಹಕರ ಫೇವರಿಟ್ ಪ್ರಾಡಕ್ಸ್ ಜಾನ್ಸನ್ ಆ್ಯಂಡ್ ಜಾನ್ಸನ್. ಕಂಪೆನಿಗೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ 40.3 ಮಿಲಿಯನ್ ಡಾಲರ್ ಅಂದರೆ ಸುಮಾರು . 2,86,00,00,000[286 ಕೋಟಿ]ರೂಪಾಯಿ ಮೊತ್ತವನ್ನು ನ್ಯಾನ್ಸಿಗೆ ಪರಿಹಾರವಾಗಿ ನೀಡಬೇಕೆಂದು ಕಂಪೆನಿಗೆ ಅದೇಶಿಸಿದೆ…. 2017ರಲ್ಲಿ ಕಂಪೆನಿ ವಿರುದ್ಧ ಕೇಸ್ ದಾಖಲು… ನ್ಯಾನ್ಸಿ ಕಂಪೆನಿ ವಿರುದ್ಧ…

  • ವಿಚಿತ್ರ ಆದರೂ ಸತ್ಯ

    ಮೊಬೈಲ್‌ನಲ್ಲಿ ಮಾತನಾಡಿದ್ರೆ ಬೀಳುತ್ತೆ ಭಾರಿ ದಂಡ..!ತಿಳಿಯಲು ಈ ಲೇಖನ ಓದಿ ..

    ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಮದೋರಾ ಗ್ರಾಮದ ಪಂಚಾಯಿತಿ ವಿವಾದಾತ್ಮಕ ತೀರ್ಮಾನ ಕೈಗೊಂಡಿದೆ. ಗ್ರಾಮದ ಹುಡುಗಿಯರು ಮೊಬೈಲ್ ನಲ್ಲಿ ಮಾತನಾಡುವುದು ಕಂಡು ಬಂದರೆ ಅವರಿಗೆ ೨೧ ಸಾವಿರ ರೂ. ದಂಡ ವಿಧಿಸಲಾಗುವುದೆಂದು ಎಚ್ಚರಿಸಿದೆ.

  • ನೀತಿ ಕಥೆ

    ಸ್ವರ್ಗ..ನರಕಗಳ ನಡುವೆ ಇರುವ ವ್ಯತ್ಯಾಸವೇನೆಂದು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ಅದೊಂದು ಶಾಲೆ…ಅದರಲ್ಲಿ ಒಬ್ಬ ವಿದ್ಯಾರ್ಥಿಗೆ ಯಾವುದಾದರೂ ಹೊಸ ವಿಷಯವನ್ನು ತಿಳಿದುಕೊಳ್ಳುವು ದೆಂದರೆ ಬಹಳ ಇಷ್ಟ. ಈ ನಿಟ್ಟಿನಲ್ಲಿ ಒಂದು ದಿನ ಆ ಹುಡುಗ ತನ್ನ ಟೀಚರ್ ಬಳಿ ಸ್ವರ್ಗ ಹಾಗೂ ನರಕ ಎಂದರೇನು. ಇವೆರಡರ ನಡುವೆ ಇರುವ ವ್ಯತ್ಯಾಸವೇನು? ಎಂದು ಪ್ರಶ್ನಿಸುತ್ತಾನೆ.

  • ರಾಜಕೀಯ

    ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ

    ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ  ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದ್ದ ಬಿಜೆಪಿ ಇದೀಗ ಎರಡನೇ ಪಟ್ಟಿಯನ್ನು 24 ಗಂಟೆಗಳಲ್ಲಿಯೇ ಎರಡನೇ ಪಟ್ಬಿ ಬಿಡುಗಡೆ ಮಾಡಿದೆ. ದೇವರ ಹಿಪ್ಪರಗಿ- ಸೋಮನಗೌಡ ಪಾಟೀಲ್‌, ಬಸವನ ಬಾಗೇವಾಡಿ- ಎಸ್‌.ಕೆ ಬೆಳ್ಳುಬ್ಬಿ, ಇಂಡಿ- ಕಾಸಾಗೌಡ ಬಿರಾದಾರ್‌, ಗುರಮಿಠಕಲ್-‌ ಲಲಿತಾ ಅನಾಪುರ್‌, ಬೀದರ್-‌ ಈಶ್ವರ್‌ ಸಿಂಗ್‌ ಠಾಕೂರ್‌, ಭಾಲ್ಕಿ- ಪ್ರಕಾಶ್‌ ಖಂಡ್ರೆ, ಗಂಗಾವತಿ- ಪರಣ್ಣ ಮುನವಳ್ಳಿ, ಕಲಘಟಗಿ-…

  • ಸಾಧನೆ, ಸುದ್ದಿ

    ಸೆಮಿಫೈನಲ್‍ನಲ್ಲಿ ಪಾಕ್ ವಿರುದ್ಧ ಶತಕ ಸಿಡಿಸಿದ ಪಾನಿಪುರಿ ಮಾರುತ್ತಿದ್ದ 18ರ ಪೋರ ಜೈಸ್ವಾಲ್

    ಅಂಟರ್ 19 ವಿಶ್ವಕಪ್‍ನ ಸೆಮಿಫೈನಲ್‍ನಲ್ಲಿ ಭಾರತದ ಯುವ ಪಡೆ ಪಾಕಿಸ್ತಾನದ ವಿರುದ್ಧ 88 ಎಸೆತಗಳು ಬಾಕಿ ಇರುವಂತೆ 10 ವಿಕೆಟ್‍ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್ ಹಾಗೂ ಬೌಲಿಂಗ್‍ನಲ್ಲಿ ಮಿಂಚಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು. ಭಾರತದ ಆರಂಭಿಕ ಬ್ಯಾಟ್ಸ್‌ಮನ್‌ 18 ವರ್ಷದ ಯಶಸ್ವಿ ಜೈಸ್ವಾಲ್ 105 ರನ್ (113 ಎಸೆತ, 8 ಬೌಂಡರಿ, 4 ಸಿಕ್ಸರ್) ಹಾಗೂ ದಿವ್ಯಾಂಶ್ ಸಕ್ಸೇನಾ 59 ರನ್ (99 ಎಸೆತ, 6 ಬೌಂಡರಿ) ಗಳಿಸಿ ತಂಡಕ್ಕೆ ಗೆಲುವು…

  • ಸುದ್ದಿ

    ಸದ್ಯದಲ್ಲೇ ಜೆಡಿಎಸ್‍ಗೆ ಮತ್ತೊಂದು ಬಿಗ್ ಶಾಕ್ ಕೊಡಲು ಬಿಜೆಪಿ ತಯಾರಿ…!

    ಬೆಂಗಳೂರು, ಆ.4- ಈಗಾಗಲೇ ಮೂವರು ಜೆಡಿಎಸ್ ಶಾಸಕರನ್ನು ತನ್ನತ್ತ ಸೆಳೆದಿರುವ ಬಿಜೆಪಿ ಜೆಡಿಎಸ್‍ಗೆ ಮತ್ತೊಂದು ಭಾರೀ ಶಾಕ್ ಕೊಡಲು ಸಜ್ಜಾಗಿದೆ. ಜೆಡಿಎಸ್‍ನ ಎಲ್ಲ 23 ಶಾಸಕರನ್ನು ಒಂದೇ ಬಂಚ್‍ನಲ್ಲಿ ಸೆಳೆಯಲು ಮಹತ್ವದ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಸಮ್ಮಿಶ್ರ ಸರ್ಕಾರ ಪತನದ ನಂತರ ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ತನ್ನತ್ತ ಸೆಳೆಯಲು ಬಿಜೆಪಿ ರಣತಂತ್ರ ರೂಪಿಸಿದೆ ಎಂದು ತಿಳಿದುಬಂದಿದೆ. ದೇವೇಗೌಡರ ಕುಟುಂಬವನ್ನು ಹೊರತುಪಡಿಸಿ ಎಲ್ಲ 23 ಶಾಸಕರನ್ನು ಬಿಜೆಪಿಗೆ ಕರೆದೊಯ್ಯಲು ಇಬ್ಬರು ಮಾಜಿ ಸಚಿವರೇ ಮುಂದಾಳತ್ವ ವಹಿಸಿದ್ದಾರೆ. ಕುತೂಹಲಕಾರಿ ಅಂಶವೆಂದರೆ…