ಸುದ್ದಿ

ಮೆದುಳು ಜ್ವರಕ್ಕೆ ಬಲಿಯಾದ ಮಕ್ಕಳ ಸಂಖ್ಯೆ 108ಕ್ಕೆ ಏರಿಕೆ- 290 ಮಕ್ಕಳು ಆಸ್ಪತ್ರೆಗೆ ದಾಖಲು…..!

45

ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್​​​ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಮವಾರದಂದು ನಡೆದ ರಾಜ್ಯ ಆರೋಗ್ಯ ಇಲಾಖೆಯ ಸಭೆ ವೇಳೆ ಆರೋಗ್ಯ ಸಚಿವ ಮಂಗಲ್ ಪಾಂಡೆ ಅವರು ಮಕ್ಕಳು ಮೆದುಳು ಜ್ವರದಿಂದ ಸಾವನ್ನಪ್ಪುತ್ತಿರುವುದರ ಬಗ್ಗೆ ಮಾತನಾಡುವ ಬದಲು ಕ್ರಿಕೆಟ್ ಪಂದ್ಯದ ಕುರಿತು ಪ್ರಶ್ನಿಸುತ್ತಿದ್ದು ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿರುದಕ್ಕೆ ಉದಾಹರಣೆಯಾಗಿದೆ. ‘ಕ್ರಿಕೆಟ್ ಪಂದ್ಯದ ಫಲಿತಾಂಶ ಏನಾಯ್ತು?’ ಎಂದು ಸಚಿವರು ಪ್ರಶ್ನಿಸುತ್ತಿರುವುದು ಮತ್ತು ಮತ್ತೊಬ್ಬ ವ್ಯಕ್ತಿ `4ನೇ ವಿಕೆಟ್ ಹೊಗಿದೆ’ ಎಂದು ಸಭೆಯಲ್ಲಿ ಹೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಮಕ್ಕಳ ಸಾವಿನ ಕುರಿತು ರಾಜ್ಯದ ಸಚಿವರು ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಿರುವುದು ಸರ್ಕಾರಕ್ಕೆ ತೀವ್ರ ಮುಜುಗರ ಸೃಷ್ಟಿಸಿದ್ದು, ಸಚಿವರ ಈ ನಡೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

ಈ ಹಿಂದೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ನಡೆಸಿದ್ದ ಪತ್ರಿಕಾಗೋಷ್ಠಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಹಾಯಕ ಸಚಿವ ಅಶ್ವಿನಿ ಕುಮಾರ್ ಚೌಬೆ ತೂಕಡಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿತ್ತು. ಆ ಬಳಿಕ ಈ ಬಗ್ಗೆ ಚೌಬೆ ಅವರು ಸ್ಪಷ್ಟಿಕರಿಸಿ, ‘ನಾನು ನಿದ್ರಿಸುತ್ತಿರಲಿಲ್ಲ, ಪತ್ರಿಕಾಗೋಷ್ಠಿ ಬಗ್ಗೆ ಯೋಚಿಸುತ್ತಿದ್ದೆ’ ಎಂದು ಹೇಳಿದ್ದರು. ಆ ಬಳಿಕ ಸೋಮವಾರ ಸ್ವತಃ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರೇ, ಸಾವಿನ ಬಗ್ಗೆ ಪ್ರತಿದಿನ ಹೇಳಿಕೆಗಳನ್ನು ನೀಡುವುದಿಲ್ಲ ಎಂದಿದ್ದರು.

ಆಸ್ಪತ್ರೆಗೆ ದಾಖಲಾಗಿರುವವರು, ನೀಡಲಾಗುತ್ತಿರುವ ಚಿಕಿತ್ಸೆ, ಮೃತಪಟ್ಟ ಕುಟುಂಬಕ್ಕೆ ನೀಡುವ ಪರಿಹಾರ, ನೆರವುಗಳ ಕುರಿತು ವರದಿ ಸಲ್ಲಿಸುವಂತೆ ಮಾನವ ಹಕ್ಕುಗಳ ಆಯೋಗ ಆರೋಗ್ಯ ಸಚಿವಾಲಯಕ್ಕೆ ಕೇಳಿದೆ. ಹಾಗೆಯೇ ಈ ಬಗ್ಗೆ ನಾಲ್ಕು ವಾರದೊಳಗೆ ಉತ್ತರ ನೀಡುವಂತೆ ತಿಳಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಶುದ್ದೀಕರಿಸಿದ ನೀರನ್ನು ಕುಡಿಯುವುದಕ್ಕೆ ಮುಂಚೆ ಈ ಲೇಖನಿ ಓದಿ….

    ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.

  • ಸುದ್ದಿ

    ವೇಶ್ಯೆಯರನ್ನೂ ಬಿಡದ ಕಾಮುಕರು, ಮೂವರ ಮೇಲೆ 9 ಮಂದಿಯಿಂದ ಸಾಮೂಹಿಕ ಅತ್ಯಾಚಾರ…!

    ಉತ್ತರ ಪ್ರದೇಶದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಮೂವರು ವೇಶ್ಯರನ್ನು 9 ಮಂದಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಗೈದಿರುವ ವಿದ್ರಾವಕ ಘಟನೆ ನಡೆದಿದೆ. ದೆಹಲಿಯ ಲಜಪತ್ ನಗರದ ಮೆಟ್ರೋ ನಿಲ್ದಾಣದ ಬಳಿ ಗಿರಾಕಿಗಳಿಗಾಗಿ ಕಾಯುತ್ತಿದ್ದಾಗ ಓಲಾ ಕ್ಯಾಬ್ ನ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಬಂದ ಇಬ್ಬರು ಗಿರಾಕಿಗಳ ಸೋಗಿನಲ್ಲಿ ಮಹಿಳೆಯರನ್ನು ಸಂಪರ್ಕಿಸಿದ್ದಾರೆ. 3000 ಸಾವಿರ ರೂಗಳಿಗೆ ಡೀಲ್ ಮಾಡಿಕೊಂಡ ದುಷ್ಕರ್ಮಿಗಳು ಮಹಿಳೆಯರನ್ನು ನೊಯ್ಡಾದ ಸೆಕ್ಟರ್ 18ಗೆ ಬರುವಂತೆ ಹೇಳಿ 3600 ರೂ ಮುಂಗಡ ಹಣವನ್ನೂ ನೀಡಿದ್ದಾರೆ. ಬಳಿಕ ಮಹಿಳೆಯರನ್ನು…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…

  • ಮನಮಿಡಿಯುವ ಕಥೆ

    ತಾಯಿ ಮೇಲೆ ಪ್ರೀತಿ ಇದ್ದರೆ, ಈ ಮನಮುಟ್ಟುವ ಕಥೆಯನ್ನು ಒಮ್ಮೆ ಓದಿ.!

    ಒಬ್ಬ ಯುವಕನು ಮಾತೃ ಋಣವನ್ನು ತೀರಿಸಲೆಂದು ಒಂದು ಲಕ್ಷ ಬಂಗಾರದ ನಾಣ್ಯಗಳನ್ನು ಸೇರಿಸಿ ತಾಯಿಗೆ ಕೊಟ್ಟು ಅಮ್ಮ ಈ ಬಂಗಾರದ ನಾಣ್ಯಗಳಿಂದ ನಿನಗೆ ಇಷ್ಟವಾದದನ್ನು ಮಾಡಿಸೋಕೋ. ಇದರಿಂದ ನನಗೆ ತಾಯಿ ಋಣದಿಂದ ಮುಕ್ತಿ ಸಿಗುತ್ತದೆ ಅನ್ನುತ್ತಾನೆ. ತಾಯಿ ಮುಗುಳು ನಗುತ್ತ ತಾಯಿ ಹೀಗೆ ಹೇಳಿದಳು…ಮಗು, ನನ್ನ ಋಣ ತೀರಿಸಲು ಈ ಹಣ ನನಗೆ ಬೇಡ, ನೀನು ಒಂದು ದಿನ ರಾತ್ರಿ ನನ್ನ ಬಳಿ ಮಲಗಿಕೊ ಸಾಕು ಅಂತ ಹೇಳಿದರು. ತಾಯಿ ಹೇಳಿದಂತೆ ಮಗನು ಸರಿ ಎಂದು ತಾಯಿಯ…

  • Health

    ಬೆಳಗ್ಗೆ ಎದ್ದ ತಕ್ಷಣ ಮೊಬೈಲ್ ಬಳಸುತ್ತೀರಾ?ಹಾಗಾದರೆ ಈ ಅಭ್ಯಾಸದಿಂದ ಅಪಾಯ ತಪ್ಪಿದ್ದಲ್ಲ ಎಚ್ಚರ!

    ಮೊಬೈಲ್‌ ಪರಿಚಯವಾದ ಮೇಲೆ ಜಗತ್ತಿನ ಜನರ ದಿನಚರಿಯೇ ಬದಲಾಗಿದೆ. ಕೆಲವರಿಗಂತೂ ಒಂದು ಅರ್ಧ ತಾಸು ಮೊಬೈಲ್ ಬಿಟ್ಟಿರು ಎಂದರೆ ಬಿಟ್ಟಿರಲು ಸಾಧ್ಯವಾಗುವುದಿಲ್ಲ.  ಯಾರು ಮೆಸೇಜ್‌ ಮಾಡಿರಬಹುದು,ಯಾರು ಕಾಲ್‌ ಮಾಡಿರಬಹುದು ಎಂದು ಮನಸ್ಸು ಆ ಕಡೆ ಸೆಳೆಯುತ್ತಿರುತ್ತದೆ, ಮೊಬೈಲ್‌ ಬಳಸುವುದು ಎಲ್ಲರಲ್ಲಿ ಒಂದು ಚಟವಾಗಿ ಬಿಟ್ಟಿದೆ ಎಂದು ತಪ್ಪಾಗಲಾರದು. ಇನ್ನು ನಮ್ಮ ದಿನನಿತ್ಯದ ಎಷ್ಟೋ ಕೆಲಸ ಕಾರ್ಯಗಳಿಗೆ ಮೊಬೈಲ್‌ ಅನ್ನೇ ಅವಲಂಬಿಸಿದ್ದೇವೆ. ಬ್ಯಾಂಕ್‌ ವ್ಯವಹಾರದಿಂದ ಹಿಡಿದು ಮನೆಗೆ ದಿನಸಿ ತರುವುದಕ್ಕೂ ಮೊಬೈಲ್‌ ಬೇಕೇಬೇಕು. ನಮ್ಮ ಬಹುತೇಕ ವ್ಯವಹಾರಗಳು ಆನ್‌ಲೈನ್‌…