ಸುದ್ದಿ

14ನೇ ವಯಸ್ಸಿನಲ್ಲಿ ಮುಸುರೆ ತಿಕ್ಕುತ್ತಿದ್ದವ, 24ನೇ ವಯಸ್ಸಿಗೆ ಮರ್ಸಿಡೆಸ್ ಕಾರು ಖರೀದಿಸಿದ, ಮತ್ತೀಗ ಗೋವಾ ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ..!

47

ಮಾರ್ಗೋವಾ: ಆ ಹುಡುಗ ತನ್ನ 14ನೇ ವಯಸ್ಸಿಗೆ ಮುಸುರೆ ತಿಕ್ಕುವ ಕೆಲಸ ಮಾಡಿಕೊಂಡಿದ್ದ. 24ನೇ ವಯಸ್ಸಿಗೆ ಮರ್ಸಿಡೆಸ್ ಕಾರು ಖರೀದಿಸಿ, ಪ್ರವಾಸೋದ್ಯಮದಲ್ಲಿ ಯಶಸ್ವಿ ಬ್ಯುಸಿನೆಸ್‌ಮ್ಯಾನ್ ಆಗಿ ಬೆಳೆದ ಆ ವ್ಯಕ್ತಿ ಈಗ ಗೋವಾ ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ.

ಗುರುವಾರ ಫತೋರ್ಡಾದ ಡಾನ್ ಬಾಸ್ಕೊ ಕಾಲೇಜ್ ಆಫ್ ಎಂಜಿನಿಯರಿಂಗ್‌ನ, ಕಂಪ್ಯೂಟರ್ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಮುಂದೆ, ಚಿಂದಿ ಆಯುವ ಬದುಕಿಂದ ಆರಂಭವಾಗಿ- ಸಿರಿವಂತನಾಗಿ ಬೆಳೆದ ತಮ್ಮ ಬದುಕಿನ ಕಥೆಯನ್ನು ತೆರೆದಿಟ್ಟರು ಸಚಿವ ಮೈಕೆಲ್ ಲೋಬೊ . ಎರಡು ದಿನಗಳ ತಾಂತ್ರಿಕ ಕಾರ್ಯಕ್ರಮ ‘Inspirus 2K19‘ಉದ್ಘಾಟನಾ ಸಮಾರಂಭದಲ್ಲಿ ಮಾಡಿದ ಭಾಷಣದಲ್ಲಿ ಲೋಬೊ ಅವರ ಟೇಕ್ಅವೇ ಸಂದೇಶ ಹೀಗಿತ್ತು -“ನಿಮ್ಮ ಕನಸುಗಳನ್ನು ಅನುಸರಿಸಿ. ಎಷ್ಟು ಸಮಯ ತೆಗೆದುಕೊಂಡರೂ (ಅವುಗಳನ್ನು ಅರಿತುಕೊಳ್ಳಲು), ಅವುಗಳಿಂದ ವಿಮುಖರಾಗಬೇಡಿ”.

ಪುಟ್ಟ ವಯಸ್ಸಿನಲ್ಲಿ ತಾನು ಕಂಡ ದೈತ್ಯ ಕನಸುಗಳು ತನ್ನ ಜೀವನವನ್ನು ಹೇಗೆ ರೂಪಿಸಿದವು ಎಂಬುದರ ಕುರಿತು ಲೋಬೊ ಮಾತನಾಡಿದರು. ಹೊಟೇಲ್‌ನಲ್ಲಿ ಪಾತ್ರೆ ತಿಕ್ಕುವ ಕೆಲಸ ಮಾಡಿದ ದಿನಗಳನ್ನು ನೆನಪಿಸಿಕೊಂಡ ಲೋಬೊ,”ನನಗೆ ಈಗಲೂ ನೆನಪಿದೆ, ಆಗ ನನಗೆ 14 ವರ್ಷ. ಒಬ್ಬ ಉದ್ಯಮಿ ಮರ್ಸಿಡಿಸ್‌ನಲ್ಲಿ ರೆಸ್ಟೋರೆಂಟ್‌ಗೆ ಬರುತ್ತಿದ್ದರು. ಆಗ ನಾನು ನನ್ನಲ್ಲೇ ಹೇಳಿಕೊಂಡೆ, ‘ಒಂದು ದಿನ ನಾನು ಸಹ ಇಂತಹ ಕಾರಿನ ಒಡೆಯನಾಗುತ್ತೇನೆ. ನಾನು ಬಹಳ ಚಿಕ್ಕ ವಯಸ್ಸಿನಲ್ಲೇ ಈ ಕನಸನ್ನು ಸಾಧಿಸಿದೆ.24 ನೇ ವಯಸ್ಸಿನಲ್ಲೇ ಮರ್ಸಿಡಿಸ್ ಖರೀದಿಸಿದೆ”.

ಎಸ್‌ಎಸ್‌ಸಿಯಲ್ಲಿದ್ದಾಗ ಕುಟುಂಬದ ಭಾರ ಹೊತ್ತ ನಾನು ಹೊಟೇಲ್‌ನಲ್ಲಿ ದುಡಿಯಲು ಆರಂಭಿಸಿದೆ. ಮೊದಲು ಪಾತ್ರೆ ತೊಳೆಯುವವನಾಗಿ, ಬಳಿಕ ವೇಟರ್, ಸ್ಟೀವಾರ್ಡ್‌,ನಂತರ ಸಹಾಯಕ ವ್ಯವಸ್ಥಾಪಕನಾಗಿ ಬೆಳೆಯುತ್ತ ಹೋದೆ. ಬಳಿಕ ನನ್ನದೇ ಆದ ನನ್ನ ಸ್ವಂತ ರೆಸ್ಟೋರೆಂಟ್ ಅನ್ನು ಪ್ರಾರಂಭಿಸಿದೆ. ಇಂದು ನಾನು4-5 ರೆಸ್ಟೋರೆಂಟ್, ಹೋಟೆಲ್, ರೆಸಾರ್ಟ್‌ಗಳ ಮಾಲೀಕ ಹೊಂದಿದ್ದೇನೆ. ಶಾಸಕನಾಗುವ ಮೊದಲೇ ಇದೆಲ್ಲವನ್ನು ಸಂಪಾದಿಸಿದ್ದು”, ಎಂದು ಲೋಬೊ ಹೇಳಿದರು.

ಯುವ ಟೆಕ್ಕಿಗಳಿಗೆ ಲೋಬೊ ಅವರು ನೀಡಿದ ಉಪನ್ಯಾಸವು ಹಾಸ್ಯ ಮತ್ತು ವ್ಯಂಗ್ಯದ ರಸದೂತಣವಾಗಿತ್ತು. ಯಾವುದೇ ಮೂಲಭೂತ ಶೈಕ್ಷಣಿಕ ಪದವಿಯನ್ನು ಸಹ ಪಡೆಯದೆ ತಾನು ಯಶಸ್ಸನ್ನು ಸಾಧಿಸಿದ್ದೇನೆ ಎಂದು ಒಪ್ಪಿಕೊಂಡ ಲೋಬೊ,X, XI ಮತ್ತು XI ತರಗತಿಯನ್ನು ಎರಡನೇ ದರ್ಜೆಯಲ್ಲಿ ಪಾಸು ಮಾಡಿದೆ. ಅಗತ್ಯ ಹಾಜರಾತಿ ಇಲ್ಲದಿದ್ದುದರಿಂದ ಕೊನೆಯ ವರ್ಷದ ಪರೀಕ್ಷೆ ಬರೆಯಲು ನನ್ನ ಪ್ರಾಂಶುಪಾಲರು ನನಗೆ ಅವಕಾಶ ನೀಡಲಿಲ್ಲ. ಇಲ್ಲದಿದ್ದರೆ ನಾನು ಉತ್ತೀರ್ಣನಾಗಿರುತ್ತಿದ್ದೆ ಮತ್ತದು ಎರಡನೇ ದರ್ಜೆಯಲ್ಲಿಯೇ ಆಗಿರುತ್ತಿತ್ತು. ನಾನು ನಿಜಕ್ಕೂ ಬುದ್ಧಿವಂತ, ಶಿಕ್ಷಕರು ಹೇಳಿಕೊಟ್ಟಿದ್ದೆಲ್ಲ ನೇರವಾಗಿ ನನ್ನ ತಲೆಯೊಳಗೆ ಇಳಿಯುತ್ತಿತ್ತು ಎಂದಾಗ ವಿದ್ಯಾರ್ಥಿ ಸಮೂಹ ನಗೆಗಡಲಲ್ಲಿ ತೇಲಿತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ